Shuru
Apke Nagar Ki App…
ಬಾಗಲಕೋಟೆ: ವಿಧಾನ ಪರಿಷತ್ನಲ್ಲಿ ಇ-ಖಾತಾ ಸಮಸ್ಯೆ ಪ್ರಸ್ತಾಪಿಸಿದ ಪೂಜಾರ ಬೆಂಗಳೂರು: ಸರ್ಕಾರಿ ಸವಲತ್ತುಗಳನ್ನು ಪಡೆಯಲು ಕಚೇರಿಗಳಿಗೆ ಬರುವ ನಾಗರಿಕರನ್ನು ಹಲವೆಡೆ ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಪರಿಷತ್ ಸದಸ್ಯ ಪಿ.ಹೆಚ್. ಪೂಜಾರ್ ಅವರು ವಿಧಾನ ಪರಿಷತ್ನಲ್ಲಿ ಸರ್ಕಾರದ ಗಮನಕ್ಕೆ ತಂದರು. ಒಂದು ಇ-ಖಾತಾ ಪಡೆಯುವುದಕ್ಕೂ ಜನರು ಹಲವಾರು ಬಾರಿ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ಇದೆ. ಜನರು ತಮ್ಮ ಚಪ್ಪಲಿ ಸವೆಸುವವರೆಗೆ ಅಧಿಕಾರಿಗಳ ಹಿಂದೆ ತಿರುಗಬೇಕಾಗುತ್ತಿದೆ ಎಂದು ಅವರು ಆರೋಪಿಸಿದರು. ಸರ್ಕಾರಿ ಸೇವೆಗಳು ಜನರಿಗೆ ಸುಲಭವಾಗಿ ದೊರೆಯುವಂತೆ ವ್ಯವಸ್ಥೆ ಮಾಡಬೇಕು. ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ಸರ್ಕಾರ ಕೂಡಲೇ ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದರು.
PKBagalkot
ಬಾಗಲಕೋಟೆ: ವಿಧಾನ ಪರಿಷತ್ನಲ್ಲಿ ಇ-ಖಾತಾ ಸಮಸ್ಯೆ ಪ್ರಸ್ತಾಪಿಸಿದ ಪೂಜಾರ ಬೆಂಗಳೂರು: ಸರ್ಕಾರಿ ಸವಲತ್ತುಗಳನ್ನು ಪಡೆಯಲು ಕಚೇರಿಗಳಿಗೆ ಬರುವ ನಾಗರಿಕರನ್ನು ಹಲವೆಡೆ ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಪರಿಷತ್ ಸದಸ್ಯ ಪಿ.ಹೆಚ್. ಪೂಜಾರ್ ಅವರು ವಿಧಾನ ಪರಿಷತ್ನಲ್ಲಿ ಸರ್ಕಾರದ ಗಮನಕ್ಕೆ ತಂದರು. ಒಂದು ಇ-ಖಾತಾ ಪಡೆಯುವುದಕ್ಕೂ ಜನರು ಹಲವಾರು ಬಾರಿ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ಇದೆ. ಜನರು ತಮ್ಮ ಚಪ್ಪಲಿ ಸವೆಸುವವರೆಗೆ ಅಧಿಕಾರಿಗಳ ಹಿಂದೆ ತಿರುಗಬೇಕಾಗುತ್ತಿದೆ ಎಂದು ಅವರು ಆರೋಪಿಸಿದರು. ಸರ್ಕಾರಿ ಸೇವೆಗಳು ಜನರಿಗೆ ಸುಲಭವಾಗಿ ದೊರೆಯುವಂತೆ ವ್ಯವಸ್ಥೆ ಮಾಡಬೇಕು. ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ಸರ್ಕಾರ ಕೂಡಲೇ ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದರು.
More news from ಕರ್ನಾಟಕ and nearby areas
- ಮಹಿಳೆಯರ ಸಬಲೀಕರಣದ ಬಗ್ಗೆ ಸರ್ಕಾರ ಹೆಚ್ಚು ಕಾಳಜಿ ವಹಿಸಬೇಕು. ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳು ನಿಜವಾಗಿ ಮಹಿಳೆಯರಿಗೆ ತಲುಪುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಹಿಳೆಯರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ತೇರದಾಳ ಶಾಸಕ ಸಿದ್ದು ಸವದಿ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.1
- ಗುಳೇದಗುಡ್ಡ: ಸಮೀಪದ ಕೆಲವಡಿ ಗ್ರಾಮದ ಶ್ರೀಲಕ್ಷ್ಮೀ ರಂಗನಾಥ ದೇವರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋದ್ಘಾರದ ನಡುವೆ ವಿಜೃಂಭಣೆಯಿಂದ ನಡೆಯಿತು. ವಿವಿಧ ಊರುಗಳಿಂದ ಆಗಮಿಸಿದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಮೆರೆದರು.1
- Post by Raju Bukitagar1
- Post by @april14news1
- ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ರೈತ ಚಂದ್ರಶೇಖರಗೌಡ ಪಾಟೀಲ್ ಇವರು ತಮ್ಮ ಎರಡುವರೆ ಎಕರೆ ಜಮೀನಿನಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದರು, ಸಾವಯವ ಪದ್ಧತಿಯಲ್ಲಿ ಬಾಳೆ ತೋಟವನ್ನು ಬೆಳೆಸಿದ್ದರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹನಿ ನೀರಾವರಿ ಮಾಡಿ ಇನ್ನೇನು ಬೆಳೆ ಕೈಗೆ ಬರುವ ಸಮಯದಲ್ಲಿ ಬಾಳೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮ ಬಾಳೇ ಗಿಡಗಳು ಮತ್ತು ಬಾಳೆ ಗೊಣೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ , ಗುರುವಾರ ನಸುಕಿನ ಜಾವ ಬೆಂಕಿ ತಗುಲಿ ಸಂಪೂರ್ಣ ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ ನೀರು ಹಾಯಿಸಲೆಂದು ಬೆಳಿಗ್ಗೆ 9 ರ ಸುಮಾರಿಗೆ ರೈತ ಚಂದ್ರಶೇಖರಗೌಡ ಪಾಟೀಲ ಜಮೀನಿಗೆ ತೆರಳಿದಾಗ ವಿಷಯ ತಿಳಿದಿದ್ದು ರೈತ ನೆಲಕ್ಕೆ ಕುಸಿದಿದ್ದಾನೆ, ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ ಹಾಗೂ ಕಂದಾಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ತಾಲೂಕಿನಲ್ಲಿ ರೈತರಿಗೆ ಒಂದಿಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇರುತ್ತವೆ , ಬೆಳೆ ಇದ್ದಲ್ಲಿ ಬೆಲೆ ಇರುವುದಿಲ್ಲ ಬೆಲೆ ಇದ್ದಾಗ ಬೆಳೆ ಇರುವುದಿಲ್ಲ ಅತಿವೃಷ್ಟಿ ಅನಾವೃಷ್ಟಿಯಿಂದ ತಾಲೂಕಿನ ರೈತರಿಗೆ ಒಂದು ವರ್ಷವೂ ಸಹ ಉತ್ತಮ ಬೆಲೆ ಸಿಗದೇ ರೈತರು ಕಂಗಾಲಾಗುತ್ತಾ ಬಂದಿದ್ದಾರೆ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈತರು ಏನಾದರೂ ಹೊಸದನ್ನು ಮಾಡಲು ಮುಂದಾದರೆ ಈ ರೀತಿಯ ಅನಾಹುತಗಳು ಸಂಭವಿಸುತ್ತದೆ ಹೀಗಾಗಿ ರೈತರಿಗೆ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಹೊಂದಲು ಅವಕಾಶ ದೊರೆಯದಂತಾಗಿದೆ, ಕಾರಣ ಸರ್ಕಾರ ಇಂತಹ ಸಂಕಷ್ಟದಲ್ಲಿ ಸಿಲುಕಿರುವಂತಹ ರೈತರಿಗೆ ಪರಿಹಾರವನ್ನು ನೀಡಿ ಸ್ವಲ್ಪಮಟ್ಟಿಗಾದರೂ ಸಾಲದ ಹೊರೆಯನ್ನು ಕಡಿಮೆ ಮಾಡುವಲ್ಲಿ ಮುಂದಾಗಬೇಕಿದೆ,1
- ಜಿಲ್ಲಾ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ವಿಜಯಪುರ, ಪ್ರತಿಭಟನೆ ವಿವಿಧ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಮನವಿ ಸಲ್ಲಿಸಿದರು.1
- ಕೊಪ್ಪಳ: ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಹಾಗೂ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಅಂದಾಜು 2.80 ಲಕ್ಷ ಹುದ್ದೆಗಳ ಭರ್ತಿಗೆ ಆಗ್ರಹಿಸಿ Karnataka Rashtra Samithi Party (KRS) ಪಕ್ಷದ ಕೊಪ್ಪಳ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ರಾಜ್ಯದ ಲಕ್ಷಾಂತರ ನಿರುದ್ಯೋಗಿ ಯುವಕರು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಅಭ್ಯರ್ಥಿಗಳು ಎದುರಿಸುತ್ತಿರುವ ಸಂಕಷ್ಟವನ್ನು ಮನಗಂಡು ಈ ಮನವಿಯನ್ನು ಸಲ್ಲಿಸಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ KRS ಪಕ್ಷ ಘೋಷಿಸಿದೆ. ಈ ವೇಳೆ ಸರ್ಕಾರವು ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಆಗ್ರಹಿಸಲಾಯಿತು. ಜೊತೆಗೆ ಪ್ರತಿ ವರ್ಷ ಸರ್ಕಾರಿ ನೇಮಕಾತಿಗೆ ಸ್ಪಷ್ಟವಾದ ವಾರ್ಷಿಕ ನೇಮಕಾತಿ ಕ್ಯಾಲೆಂಡರ್ ಪ್ರಕಟಿಸಿ, ಯಾವ ಇಲಾಖೆಗಳಲ್ಲಿ ಯಾವ ಸಮಯದಲ್ಲಿ ಪರೀಕ್ಷೆಗಳು ನಡೆಯುತ್ತವೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮುಂಚಿತವಾಗಿ ತಿಳಿಸಬೇಕು ಎಂದು ಮನವಿ ಮಾಡಲಾಗಿದೆ. ಇದಲ್ಲದೆ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಜಿ ಸಲ್ಲಿಕೆ, ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ಸೇರಿದಂತೆ ಎಲ್ಲಾ ಹಂತಗಳನ್ನು ನಿಗದಿತ ವೇಳಾಪಟ್ಟಿಯೊಳಗೆ ಪೂರ್ಣಗೊಳಿಸಿ, ಗರಿಷ್ಠ ಆರು ತಿಂಗಳೊಳಗೆ ನೇಮಕಾತಿ ಪತ್ರಗಳನ್ನು ನೀಡಬೇಕು ಎಂದು ಒತ್ತಾಯಿಸಲಾಯಿತು. ನೇಮಕಾತಿ ಪ್ರಕ್ರಿಯೆ ಸಂಪೂರ್ಣವಾಗಿ ಪಾರದರ್ಶಕವಾಗಿ ಮತ್ತು ಕಾನೂನುಬದ್ಧವಾಗಿ ನಡೆಯಬೇಕು. ನೇಮಕಾತಿ ಹಗರಣಗಳಿಂದ ಹತಾಶರಾಗಿರುವ ಅಭ್ಯರ್ಥಿಗಳಿಗೆ ಸರ್ಕಾರ ವಿಶ್ವಾಸ ತುಂಬುವ ಕ್ರಮ ಕೈಗೊಳ್ಳಬೇಕು ಎಂದು KRS ಪಕ್ಷದ ಮುಖಂಡರು ಹೇಳಿದರು. ಇದರ ಜೊತೆಗೆ ಪ್ರಸ್ತುತ 700 ರಿಂದ 800 ರೂಪಾಯಿವರೆಗೆ ಇರುವ ಅರ್ಜಿ ಶುಲ್ಕವನ್ನು ಕೇವಲ 100 ರೂಪಾಯಿಗೆ ಇಳಿಸಬೇಕು, ಇದರಿಂದ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುತ್ತದೆ ಎಂದು ಮನವಿ ಮಾಡಲಾಗಿದೆ. ಅದೇ ವೇಳೆ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ಮೇಲೆ ದಾಖಲಾಗಿರುವ ಪೊಲೀಸ್ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಕೂಡ ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಈ ಕುರಿತು ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ನಿರುದ್ಯೋಗಿ ಯುವಕರ ಸಮಸ್ಯೆಗೆ ತ್ವರಿತ ಪರಿಹಾರ ಒದಗಿಸಬೇಕು ಎಂದು KRS ಪಕ್ಷದ ಕೊಪ್ಪಳ ಜಿಲ್ಲಾ ಘಟಕ ಒತ್ತಾಯಿಸಿದೆ.1
- ಬಾದಾಮಿ : ತಾಲೂಕಿನ ಶಿವಯೋಗಮಂದಿರ ಹತ್ತಿರದ ಮಲಪ್ರಭಾ ನದಿಯಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದಿರುವ ಪೊಲೀಸರು ಚಾಲಕನನ್ನು ಬಾದಾಮಿ ಪೊಲೀಸರು ಬುಧವಾರ ಮಧ್ಯರಾತ್ರಿ 1:30ರ ಸುಮಾರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತ ಟ್ರ್ಯಾಕ್ಟರ್ ಚಾಲಕ ಬಸಯ್ಯ ವಸ್ತ್ರದ ಎಂದು ಗುರುತಿಸಲಾಗಿದ್ದು, ಮರಳು ತುಂಬಿದ ಟ್ರ್ಯಾಕ್ಟರ್ ನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.1