Shuru
Apke Nagar Ki App…
ಹನೂರು ಪಟ್ಟಣದಲ್ಲಿ ಸೋಲಿಗ ಅಭಿವೃದ್ಧಿ ಸಂಘದ ವತಿಯಿಂದ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾಮುಂಡರ 150ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅವರು ಭಾಗವಹಿಸಿ ಬಿರ್ಸಾಮುಂಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು ವೇದಿಕೆ ಕಾರ್ಯಕ್ರಮಕ್ಕೂ ಮುನ್ನು ಪಟ್ಟಣದ ಮುಖ್ಯರಸ್ತೆಯಲ್ಲಿ ಸಾಗಿದ ಮೆರವಣಿಗೆ ಎಲ್ಲರ ಗಮನಸೆಳೆಯಲಾಯಿತು ಈ ಕಾರ್ಯಕ್ರಮದಲ್ಲಿ ಶಾಸಕ ಎಮ್ ಆರ್ ಮಂಜುನಾಥ್ ಮಾಜಿ ಶಾಸಕ ಆರ್ ನರೇಂದ್ರ ಜಿಲ್ಲಾ ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಬಿಂದ್ಯಾ ತಾಲೂಕು ಅಧಿಕಾರಿ ರಾಜೇಶ್ ಹಾಜರಿದ್ದರು
ಹನೂರು ನ್ಯೂಸ್ ಅಡ್ಡ
ಹನೂರು ಪಟ್ಟಣದಲ್ಲಿ ಸೋಲಿಗ ಅಭಿವೃದ್ಧಿ ಸಂಘದ ವತಿಯಿಂದ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾಮುಂಡರ 150ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅವರು ಭಾಗವಹಿಸಿ ಬಿರ್ಸಾಮುಂಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು ವೇದಿಕೆ ಕಾರ್ಯಕ್ರಮಕ್ಕೂ ಮುನ್ನು ಪಟ್ಟಣದ ಮುಖ್ಯರಸ್ತೆಯಲ್ಲಿ ಸಾಗಿದ ಮೆರವಣಿಗೆ ಎಲ್ಲರ ಗಮನಸೆಳೆಯಲಾಯಿತು ಈ ಕಾರ್ಯಕ್ರಮದಲ್ಲಿ ಶಾಸಕ ಎಮ್ ಆರ್ ಮಂಜುನಾಥ್ ಮಾಜಿ ಶಾಸಕ ಆರ್ ನರೇಂದ್ರ ಜಿಲ್ಲಾ ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಬಿಂದ್ಯಾ ತಾಲೂಕು ಅಧಿಕಾರಿ ರಾಜೇಶ್ ಹಾಜರಿದ್ದರು
More news from ಕರ್ನಾಟಕ and nearby areas
- ಯಳಂದೂರು: ತಾಲೂಕಿನ ಗುಂಬಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರಾದ ರವೀಂದ್ರರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನ ಗುಂಬಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರಾದ ರವೀಂದ್ರರವರು ಭೇಟಿ ನೀಡಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಬಿಲ್ ಕಲೆಕ್ಟರ್ , ಕಂಪ್ಯೂಟರ್ ಆಪರೇಟರ್ ಅವರ ಜೊತೆ ಸಮಾಲೋಚನೆ ನಡೆಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಡ್ಡಾಯವಾಗಿ ಮನೆ ಕಂದಾಯ ನೀರಿನ ಕಂದಾಯ ವಸಲಾತಿ ಮಾಡಿಸಬೇಕು ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವುದರ ಜೊತೆಗೆ ಗ್ರಾಮ ಪಂಚಾಯಿತಿಗೆ ಅಗತ್ಯ ಕಂದಾಯ ವಸೂಲಾತಿ ಮಾಡುವ ಮೂಲಕ ನೌಕರಿಗೆ ಸಂಬಳ ನೀಡುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿ ನರೇಗಾ ಯೋಜನೆ ಕಾಮಗಾರಿ ಸಮರ್ಪಕವಾಗಿ ನಿರ್ವಹಣೆ ಮಾಡದಿದ್ದರೆ ಶಿಸ್ತು ಕ್ರಮ ಷ್ಟು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಸವಣ್ಣ, ಬಿಲ್ ಕಲೆಕ್ಟರ್ ಗೋವಿಂದರಾಜ್, ಕಂಪ್ಯೂಟರ್ ಆಪರೇಟರ್ ಉಷಾ, ಸೇರಿದಂತೆ ಸಾರ್ವಜನಿಕರು, ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಹಾಜರಿದ್ದರು. ವರದಿ. ಎಸ್..ಪುಟ್ಟಸ್ವಾಮಿಹೊನ್ನೂರು.3
- *ಭಾರತ ನಲ್ಲಿ ವೈರಲ್*1
- ಶಿಡ್ಲಘಟ್ಟದ ಕನ್ನಪ್ಪನಹಳ್ಳಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ! ಶ್ರೀ ಭೂನೀಳ ಸಮೇತ ತಿರುಮಲ ಸ್ವಾಮಿಗೆ ವಿಶೇಷ ಪೂಜೆ,1500ಕ್ಕೂ ಹೆಚ್ಚು ಭಕ್ತರಿಗೆ ಅನ್ನದಾನ!1
- ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಬಾಗೇಪಲ್ಲಿ:- ಪಟ್ಟಣದ ಹೊರವಲಯದ ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು,ಬೆಳ್ಳಗೆ 4 ಘಂಟೆಯಿಂದಲೇ ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದುಬಂದಿದೆ. ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಮುಂಜಾನೆಯಿಂದಲೇ ಭಕ್ತರು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಪ್ರಧಾನ ಅರ್ಚಕ ಪ್ರಕಾಶ್ ರಾವ್ ಮಾತನಾಡಿ ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಹೀಗಾಗಿಯೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ಕುಟುಂಬ ಸಮೇತವಾಗಿ ಬಂದು ದೇವರ ದರ್ಶನ ಪಡೆದರು ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು, ದೇವಾಲಯದ ಆವರಣವನ್ನು ವಿವಿಧ ಹೂವಿನಿಂದ ಸಿಂಗರಿಸಲಾಗಿದೆ. ಇಂದು ಸಂಜೆಯವರೆಗೆ ಒಂದು ಹದಿನೈದು ಸಾವಿರಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆಯಿದೆ. ಆಂದ್ರಪ್ರದೇಶ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸಿದ್ದು, ದೇವಾಲಯ ಆಡಳಿತ ಮಂಡಳಿ ಹಾಗೂ ದಾನಿಗಳಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ ನೇತೃತ್ವದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.2
- ಕೃಷ್ಣಪುರದಲ್ಲಿ ವೈಕುಂಠ ಏಕಾದಶಿ ಸಡಗರ: ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಕೃಷ್ಣಪುರ: ಇಲ್ಲಿನ ಪ್ರಸಿದ್ಧ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯನ್ನು ಅತ್ಯಂತ ಭಕ್ತಿ ಸಡಗರದಿಂದ ಆಚರಿಸಲಾಯಿತು. ಪಾಂಚರಾತ್ರ ಆಗಮ ರೀತ್ಯಾ ಸ್ವಾಮಿಗೆ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ನೆರವೇರಿಸುವ ಮೂಲಕ ಭಕ್ತರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಧಾರ್ಮಿಕ ವಿಧಿವಿಧಾನಗಳು: ದಿನದ ಆರಂಭದಲ್ಲಿ ಬೆಳಿಗ್ಗೆ 'ಕವಾಟೋದ್ಘಾಟನೆ'ಯೊಂದಿಗೆ ಪೂಜಾ ಕಾರ್ಯಕ್ರಮಗಳು ಚಾಲನೆ ಪಡೆದವು. ನಂತರ ಬೆಳಿಗ್ಗೆ 6:30ಕ್ಕೆ ಸ್ವಾಮಿಗೆ ಸುಪ್ರಭಾತ ಸೇವೆ, ಪ್ರಾಕಾರೋತ್ಸವ, ನೈವೇದ್ಯ ಮತ್ತು ಮಹಾಮಂಗಳಾರತಿಗಳನ್ನು ನೆರವೇರಿಸಲಾಯಿತು. ಬಳಿಕ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ವಿಶೇಷ ಪ್ರಸಾದ ವ್ಯವಸ್ಥೆ: ದೇವಸ್ಥಾನಕ್ಕೆ ಆಗಮಿಸಿದ ಸಹಸ್ರಾರು ಭಕ್ತರಿಗೆ ಬೆಳಿಗ್ಗೆ 6 ರಿಂದ ರಾತ್ರಿ 9 ಗಂಟೆಯವರೆಗೆ ನಿರಂತರವಾಗಿ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಬಂದಂತಹ ಎಲ್ಲಾ ಭಕ್ತಾದಿಗಳಿಗೆ ದೇವಸ್ಥಾನದ ವತಿಯಿಂದ ಉಚಿತವಾಗಿ ಲಾಡು ವಿತರಣೆ ಹಾಗೂ ಅವಲಕ್ಕಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ರಾತ್ರಿ ನಡೆದ ಕಾರ್ಯಕ್ರಮಗಳು: ರಾತ್ರಿ 9 ಗಂಟೆಗೆ ಮಹಾಮಂಗಳಾರತಿ ನೆರವೇರಿಸಿ, ನಂತರ 9:30ಕ್ಕೆ ಉತ್ಸವ ಮೂರ್ತಿಯನ್ನು ಕೆಳಗಿಳಿಸಿ ಸ್ವಾಮಿಗೆ 'ಏಕಾಂತ ಸೇವೆ'ಯನ್ನು ಮಾಡಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮಸ್ಥರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 'ಚಕ್ರ ಭಜನೆ' ಕಾರ್ಯಕ್ರಮವು ಭಕ್ತರ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ದೇವಸ್ಥಾನದ ಅರ್ಚಕರು, "ಪ್ರತಿ ವರ್ಷದಂತೆ ಈ ವರ್ಷವೂ ವೈಕುಂಠ ಏಕಾದಶಿಯನ್ನು ಸಡಗರದಿಂದ ಆಚರಿಸಲಾಗುತ್ತಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ," ಎಂದು ತಿಳಿಸಿದರು1
- ಚಳ್ಳಕೆರೆ :ಕಾಡುಗೊಲ್ಲರ ಆರಾಧ್ಯ (ಕೇತೇದೇವರ ಜಾತ್ರೋತ್ಸವ) ಕ್ಯಾತಪ್ಪನ ದೈವ ಚನ್ನಮ್ಮನಾಗತಿಹಳ್ಳಿಯ ಕ್ಯಾತೇದೇವರ ಜಾತ್ರೆಯು ಡಿ.೧೮ ರಿಂದ ಜ.೯ರ ನಡೆಯುವ (ಕೇತೇದೇವರ ಜಾತ್ರೋತ್ಸವ) ಜಾತ್ರೆಯು ತನ್ನದೇ ಆದ ವಿಶಿಷ್ಟ ಪರಂಪರೆಯಿಂದ ನಡೆಯುವ ಅತಿದೊಡ್ಡ ಜಾತ್ರೆಯಾಗಿದೆ.ಈ ದೇವರ ಪರೀಷೆ ಈ ಭಾಗದ ಬುಡಕಟ್ಟು ಸಮುದಾಯಗಳಿಗೆ ಸಂಸ್ಕೃತಿ ಆಚರಣೆಯನ್ನು ಎತ್ತಿ ತೋರುವ ಜಾತ್ರೆಗಳಲ್ಲಿ ಒಂದಾಗಿದೆ. ಚಿತ್ರದುರ್ಗ ಜಿಲ್ಲೆಯ ತಾಲ್ಲೂಕಿನ ಪುರ್ಲೆಹಳ್ಳಿಯ ವಸಲು ದಿನ್ನೆಬ್ಬದಲ್ಲಿ ನಡೆಯುವ ಜಾತ್ರೆಯಲ್ಲಿ ಸುಮಾರು ಒಂದು ತಿಂಗಳ ಕಾಲ ಪಾರಂಪರಿಕವಾಗಿ ಆಚರಣೆಯಲ್ಲಿರುವ ಸಂಪ್ರದಾಯಗಳನ್ನು ಇಂದಿಗೂ ಚಾಚೂ ತಪ್ಪದೇ ಪಾಲಿಸಿಕೊಂಡು ಆಧುನಿಕತೆಯ ಭರಾಟೆಯಲ್ಲಿ ಬುಡಕಟ್ಟು ಸಂಸ್ಕೃತಿಯನ್ನು ಉಳಿಸುವ ಪ್ರಯತ್ನ ನಡೆಯುತ್ತದೆ... ಒಟ್ಟಾರೆಯಾಗಿ ಸಾಂಪ್ರದಾಯಿಕ ಆಚರಣೆಗಳು ಕಾಲಕ್ಕೆ ತಕ್ಕಂತೆ ಬದಲಾಗುತ್ತಾ ಹೋಗುವ ಸಂದರ್ಭದಲ್ಲಿ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡಕಟ್ಟು ಸಮುದಾಯದ ಕಾಡುಗೊಲ್ಲರು ವಿಶಿಷ್ಟ ಆಚರಣೆಯನ್ನು ನಡೆಸಿಕೊಂಡು ಬರುತ್ತಿರುವುದು ವಿಶೇಷವಾಗಿದೆ ಎನ್ನಬಹುದಾಗಿದೆ... ಯಾವುದೇ ಜಾತಿ, ಧರ್ಮ ಭೇದವಿಲ್ಲದೆ ಇಂದಿಗೂ ಭಾವೈಕ್ಯ ಹಾಗೂ ಸಾಮಾಜಿಕ ಸಾಮರಸ್ಯದಿಂದ ಕೂಡಿದೆ. ಈ ದೇವರ ಜಾತ್ರೆಗೆ ನೆರೆ ಆಂಧ್ರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಜಾತ್ರೆಯಲ್ಲಿ ಭಾಗವಹಿಸುವುದು ಮತ್ತೊಂದು ವಿಶೇಷವಾಗಿದೆ... ಚನ್ನಮ್ಮನಾಗತಿಹಳ್ಳಿಯ ಕೇತೇ ದೇವಸ್ಥಾನದಿಂದ ಕಳಶ ಹೊತ್ತು ತಂದು ಎರದ(ಬಾರೆ),ಬಂದ್ರೆ, ಬ್ಯಾಟೆ,ತುಗ್ಗಲಿ ಇತ್ಯಾದಿ ಕಳ್ಳೆ ಮುಳ್ಳುಗಳಿಂದ ಸಿದ್ದ ಮಾಡಿದ ಕ್ಯಾತಪ್ಪನ ಗುಡಿಯ ಮೇಲೆ ಕೊಣನ ಗೊಲ್ಲ ಮತ್ತು ಬೊಮ್ಮನ ಗೊಲ್ಲರ ಅಣ್ಣತಮ್ಮಂದಿರ ಒಬ್ಬಬ್ಬರನ್ನು ಆಯ್ಕೆ ಮಾಡಿ ಕಳಶ ಇಡಲು ಅವಕಾಶ ನೀಡಲಾಗುತ್ತದೆ.ಇಲ್ಲಿ ದೇವರಿಗೆ ಸಂಬಂದಿಸಿದ ಹಲವಾರು ರೀತಿಯ ಪೂಜಾ ವಿಧಾನಗಳು ವಿಶೇಷವಾಗಿ ನಡೆಯುತ್ತವೆ .. ಇಂದು ಬಾರೆ ಕಳ್ಳೆ ಗುಡಿ ನಿರ್ಮಾಣ ಕಾರ್ಯ ಸಂಭ್ರಮದಿಂದ ಜರುಗಿತು...1
- ಹನೂರು ತಾಲೂಕಿನ ಮಲೆಮಹದೇಶ್ವರವನ್ಯಧಾನವನ್ನು ಹುಲಿ ಯೋಜನೆಗೆ ಸೇರಿಸುವಂತೆ ಮತ್ತೆ ಮುನ್ನಲೆಗೆ ಬರುತ್ತಾ ಇದೆ ಇದ್ದಕ್ಕೆ ಇತಿಶ್ರೀ ಹಾಡಬೇಕು ಎಂದು ಮಾಜಿ ಶಾಸಕ. ಆರ್ ನರೇಂದ್ರ ತಿಳಿಸಿದರು ಬಿರ್ಸಾ ಮುಂಡಾ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ತಾಲೂಕಿನ ಆದಿವಾಸಿ ಸಮುದಾಯದ ಹಾಡಿಗಳಿಗೆ ವಿದ್ಯುತ್ ನೀಡಲು ಮುಂದಾಗಿದ್ದರೂ ಅರಣ್ಯ ಇಲಾಖೆಯ ಕಾನೂನುನಿಂದ ಸಮಸ್ಯೆಯಾಗಿದೆ ನಮ್ಮ ತಾಲೂಕಿನ ಎಲ್ಲಾ ಆದಿವಾಸಿಗಳು ಜನರ ಗ್ರಾಮಗಳಿಗೆ ವಿದ್ಯುತ್ಚ ಸೌಕರ್ಯಕ್ಕಾಗಿ ನಮ್ಮ 20ವರ್ಷಗಳಿಂದಲೂವ ಹೋರಾಟ ವ್ಯರ್ಥವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು ಅವರ ನಮ್ಮ ನಮ್ಮ ದೊಡ್ಡಪ್ಪ ಜೀವಿ ಗೌಡ ತಂದೆ ರಾಜುಗೌಡನಿಮ್ಮ ಸಮುದಾಯದ ಜನರ ಏಳಿಗೆಗಾಗಿ ನಮ್ಮ ಕುಟುಂಬ ಶ್ರಮಿಸಿದ್ದು ನಾನು ಕೂಡ ನಿಮ್ಮ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದವೆ ಮುಂದೆ ಕೂಡ ನಮ್ಮ ಕುಟುಂಬ ನಿಮ್ಮ ಸೇವೆಗಾಗಿ ಬದ್ಧರಾಗಿರುತ್ತದೆ ಎಂದು ತಿಳಿಸಿದರು1
- *ಭಾರತ ನಲ್ಲಿ ವೈರಲ್*1
- ಜಾಮೀನು ಬಳಿಕ ಕೆ ಸಿ ವೀರೇಂದ್ರ ಪಪ್ಪಿ ಹೇಳಿದ್ದೇನು1