ಕಡೂರಿನಲ್ಲಿ ಸಂಭ್ರಮದಿಂದ ನಡೆದ ಆರೋಗ್ಯ ಇಲಾಖೆಯ ಆರೋಗ್ಯ ಉತ್ಸವ-2026 ಕಡೂರು: ಜನತೆಯ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಶ್ರಮ ಮಹತ್ವದ್ದು ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು. ಪಟ್ಟಣದ ಹೊರವಲಯದಲ್ಲಿರುವ ಹೆರಿಟೇಜ್ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ ಪ್ರಯುಕ್ತ ನಡೆದ ಕಡೂರು ಆರೋಗ್ಯ ಉತ್ಸವ- 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕರೋನಾ ಕಾಲಘಟ್ಟ ಒಂದು ಕರಾಳ ನೆನಪು. ಆ ದಿನಗಳಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಜನರನ್ನು ಉಳಿಸಲು ಹಗಲಿರುಳೂ ಶ್ರಮಿಸಿದ್ದು ಆರೋಗ್ಯ ಇಲಾಖೆ. ಆರೋಗ್ಯ ಸಿಬ್ಬಂದಿಗಳ ನಿಸ್ವಾರ್ಥ ಸೇವೆಯನ್ನು ಕೃತಜ್ಞತೆಯಿಂದ ಸ್ಮರಿಸುತ್ತೇನೆ. ಕ್ಷೇತ್ರದ ಎರಡು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಅಗತ್ಯವಾದ ಬಹುತೇಕ ಸೌಲಭ್ಯಗಳು ಈಗ ಲಭ್ಯವಿದೆ. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಮರ್ಪಕವಾಗಿ ದೊರೆಯುತ್ತಿದೆ. ಪಟ್ಟಣ ಬೆಳೆಯುತ್ತಿದ್ದು, ಅದಕ್ಕೆ ತಕ್ಕಂತೆ ಆರೋಗ್ಯ ಸೇವೆಯ ವಿಸ್ತರಣೆ ಅತ್ಯಂತ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸದಾ ಶ್ರಮಿಸುತ್ತೇನೆ. ನಿರಂತರವಾಗಿ ಶ್ರಮಿಸುತ್ತಿರುವ ಆರೋಗ್ಯ ಇಲಾಖೆಯ ನೌಕರರಿಗೆ ಏಕತಾನತೆ ಹೋಗಲಾಡಿಸಲು ಇಂತಹ ಕಾರ್ಯಕ್ರಮ ಆಯೋಜನೆ ಸಕಾಲಿಕವಾದದ್ದು ಎಂದು ಶ್ಲಾಘಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕಿನ ಎಲ್ಲ ಆರೋಗ್ಯ ಇಲಾಖೆಗಳ ನೌಕರರು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಆಟೋಟ ಸ್ಪರ್ದೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಡಾ.ಮಂದಾರ ಮತ್ತು ಡಾ.ಭಾರ್ಗವಿ ನೀಡಿದ ಭರತನಾಟ್ಯ ಪ್ರದರ್ಶನ ಗಮನ ಸೆಳೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಥ್ ಬಾಬು, ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ.ಶ್ರೀನಿವಾಸ್ ದತ್ತಾತ್ರಿ, ಡಾ.ಉಮೇಶ್, ಡಾ.ಚಂದಾ, ಆರೋಗ್ಯ ಶಿಕ್ಷಣಾಧಿಕಾರಿ ಮಮತಾ, ಡಾ. ಶಿವಕುಮಾರ್, ಡಾ.ಶಶಿಕಲಾ, ಡಾ.ಸೀಮಾ, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ತಾಲ್ಲೂಕಿನ ಆರೋಗ್ಯ ಇಲಾಖೆಯ ನೌಕರರು, ಆಶಾ ಕಾರ್ಯಕರ್ತೆಯರು ಇದ್ದರು.
ಕಡೂರಿನಲ್ಲಿ ಸಂಭ್ರಮದಿಂದ ನಡೆದ ಆರೋಗ್ಯ ಇಲಾಖೆಯ ಆರೋಗ್ಯ ಉತ್ಸವ-2026 ಕಡೂರು: ಜನತೆಯ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಶ್ರಮ ಮಹತ್ವದ್ದು ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು. ಪಟ್ಟಣದ ಹೊರವಲಯದಲ್ಲಿರುವ ಹೆರಿಟೇಜ್ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ ಪ್ರಯುಕ್ತ ನಡೆದ ಕಡೂರು ಆರೋಗ್ಯ ಉತ್ಸವ- 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕರೋನಾ ಕಾಲಘಟ್ಟ
ಒಂದು ಕರಾಳ ನೆನಪು. ಆ ದಿನಗಳಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಜನರನ್ನು ಉಳಿಸಲು ಹಗಲಿರುಳೂ ಶ್ರಮಿಸಿದ್ದು ಆರೋಗ್ಯ ಇಲಾಖೆ. ಆರೋಗ್ಯ ಸಿಬ್ಬಂದಿಗಳ ನಿಸ್ವಾರ್ಥ ಸೇವೆಯನ್ನು ಕೃತಜ್ಞತೆಯಿಂದ ಸ್ಮರಿಸುತ್ತೇನೆ. ಕ್ಷೇತ್ರದ ಎರಡು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಅಗತ್ಯವಾದ ಬಹುತೇಕ ಸೌಲಭ್ಯಗಳು ಈಗ ಲಭ್ಯವಿದೆ. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಮರ್ಪಕವಾಗಿ ದೊರೆಯುತ್ತಿದೆ. ಪಟ್ಟಣ ಬೆಳೆಯುತ್ತಿದ್ದು, ಅದಕ್ಕೆ ತಕ್ಕಂತೆ
ಆರೋಗ್ಯ ಸೇವೆಯ ವಿಸ್ತರಣೆ ಅತ್ಯಂತ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸದಾ ಶ್ರಮಿಸುತ್ತೇನೆ. ನಿರಂತರವಾಗಿ ಶ್ರಮಿಸುತ್ತಿರುವ ಆರೋಗ್ಯ ಇಲಾಖೆಯ ನೌಕರರಿಗೆ ಏಕತಾನತೆ ಹೋಗಲಾಡಿಸಲು ಇಂತಹ ಕಾರ್ಯಕ್ರಮ ಆಯೋಜನೆ ಸಕಾಲಿಕವಾದದ್ದು ಎಂದು ಶ್ಲಾಘಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕಿನ ಎಲ್ಲ ಆರೋಗ್ಯ ಇಲಾಖೆಗಳ ನೌಕರರು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಆಟೋಟ ಸ್ಪರ್ದೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಡಾ.ಮಂದಾರ
ಮತ್ತು ಡಾ.ಭಾರ್ಗವಿ ನೀಡಿದ ಭರತನಾಟ್ಯ ಪ್ರದರ್ಶನ ಗಮನ ಸೆಳೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಥ್ ಬಾಬು, ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ.ಶ್ರೀನಿವಾಸ್ ದತ್ತಾತ್ರಿ, ಡಾ.ಉಮೇಶ್, ಡಾ.ಚಂದಾ, ಆರೋಗ್ಯ ಶಿಕ್ಷಣಾಧಿಕಾರಿ ಮಮತಾ, ಡಾ. ಶಿವಕುಮಾರ್, ಡಾ.ಶಶಿಕಲಾ, ಡಾ.ಸೀಮಾ, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ತಾಲ್ಲೂಕಿನ ಆರೋಗ್ಯ ಇಲಾಖೆಯ ನೌಕರರು, ಆಶಾ ಕಾರ್ಯಕರ್ತೆಯರು ಇದ್ದರು.
- ಕಡೂರು : ತಾಲ್ಲೂಕಿನಲ್ಲಿ ಸಮೃದ್ದಿ ಮಳೆಯಾಗಲೆಂದು ಪ್ರಾರ್ಥಿಸಿ ಮಳೆ ದೇವರೇಂದೆ ಖ್ಯಾತಿ ಪಡೆದಿರುವ ಶೃಂಗೇರಿ ತಾಲ್ಲೂಕಿನ ಕಿಗ್ಗಾದ ಋಷ್ಯಶೃಂಗೇಶ್ವರನಿಗೆ ತಾಲ್ಲೂಕಿನ ಚಿಕ್ಕಪಟ್ಟಣಗೆರೆ ಗ್ರಾಮಸ್ಥರು ಶನಿವಾರ ಶತಾರುದ್ರಾಭಿಷೇಕ ಪೂಜೆ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ಈಗಾಗಲೇ ಸುಡುಬಿಸಿಲಿನಿಂದ ತತ್ತರಿಸುತ್ತಿರುವ ಜನತೆಗೆ ಮಳೆಗಾಗಿ ಕಾಯುತ್ತಿದ್ದು, ಕೆರೆಕಟ್ಟೆಗಳಲ್ಲಿನ ಅಂತರ್ಜಲ ಮಟ್ಟ ಕುಸಿಯುತ್ತಿದೆ. ರೈತಾಪಿ ವರ್ಗಕ್ಕೆ ಉತ್ತಮ ಮಳೆ-ಬೆಳೆ ಕರುಣಿಸುವಂತೆ ಪ್ರಾರ್ಥಿಸಲಾಗಿದೆ ಎಂದು ಗ್ರಾಮದ ಮುಖಂಡ ಚಿಕ್ಕಪಟ್ಟಣಗೆರೆ ನಾಗರಾಜ್ ತಿಳಿಸಿದರು. ಈ ಸಂದರ್ಭದಲ್ಲಿ ಶಿವಮೂರ್ತಿ,ಸಿ.ಎಸ್. ರಮೇಶ್, ಶ್ರೀಧರ್, ವಿಜಯ್ಕುಮಾರ್, ಜಗದೀಶ್ ಇದ್ದರು.1
- ಮಂಗಳೂರಿನಲ್ಲಿ ಸದ್ಯ ಅತಿಯಾದ ಬಿಸಿಲು ಮತ್ತು ಹೆಚ್ಚಿನ ಆರ್ದ್ರತೆಯಿಂದ (Humidity) ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದ್ದು, ಮೈ ಸುಡುವ ಬಿಸಿಲು ಇರಲಿದೆ. ಮೇ 6-7ರ ಸುಮಾರಿಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.1
- ಅದ್ದೂರಿಯಾಗಿ ಜರುಗಿದ ಶ್ರೀ ವೀರಭದ್ರ ಸ್ವಾಮಿ ಜಾತ್ರಾ ಮಹೋತ್ಸವ: ಮುಕ್ತಿ ಬಾವುಟ 9 ಲಕ್ಷಕ್ಕೆ ಹರಾಜು ಚಳ್ಳಕೆರೆ: ನಗರದ ಆರಾಧ್ಯ ದೈವವಾದ ಶ್ರೀ ವೀರಭದ್ರ ಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ರಥೋತ್ಸವವು ಶನಿವಾರ ಸಂಜೆ 5.15ರ ವೇಳೆಗೆ ಅಪಾರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಹಾಗೂ ಶ್ರದ್ಧಾಭಕ್ತಿಯಿಂದ ಜರುಗಿತು. ವೀರಭದ್ರಸ್ವಾಮಿಗೆ ಬೃಹತ್ ಹೂವಿನ ಹಾರಗಳು, ಬಣ್ಣ ಬಣ್ಣದ ಬಾವುಟಗಳಿಂದ ಅಲಂಕರಿಸಲ್ಪಟ್ಟ ಭವ್ಯ ರಥದಲ್ಲಿ ದೇವರನ್ನು ಆಸೀನಗೊಳಿಸಿ ಪೂಜೆ ಸಲ್ಲಿಸಿದ ಬಳಿಕ ಜಯಘೋಷಗಳ ಮಧ್ಯೆ ಉತ್ಸವಕ್ಕೆ ಚಾಲನೆ ನೀಡಲಾಯಿತು. ರಥವು ನಗರದ ತೇರು ಬೀದಿಯಲ್ಲಿ ಗಾಂಭೀರ್ಯದಿಂದ ಸಾಗಿತು. ಸಾವಿರಾರು ಭಕ್ತರು ಭಕ್ತಿಭಾವದಿಂದ ಭಾಗವಹಿಸಿದರು. ರಥೋತ್ಸವದ ಮುಂಭಾಗದಲ್ಲಿ ಮಂಗಳವಾದ್ಯಗಳು, ಕರಡಿ ಮಜಲು, ನಂದಿಕೋಲು, ಕೋಲಾಟ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರುಗು ತಂದವು. ಭಕ್ತರು “ಸ್ವಾಮಿಗೆ ಜಯಕಾರ” ಕೂಗುತ್ತಾ ಸೂರುಬೆಲ್ಲ, ಮೆಣಸು, ಬಾಳೆಹಣ್ಣುಗಳನ್ನು ತೇರಿಗೆ ಎಸೆಯುವ ಮೂಲಕ ತಮ್ಮ ಹರಕೆಗಳನ್ನು ಸಲ್ಲಿಸಿ ಭಕ್ತಿ ಭಾವ ವ್ಯಕ್ತಪಡಿಸಿದರು. ಜಾತ್ರೆಯ ವಿಶೇಷ ಆಕರ್ಷಣೆಯಾಗಿರುವ “ಮುಕ್ತಿ ಬಾವುಟ” ಹರಾಜು ಪ್ರಕ್ರಿಯೆಯೂ ಭಾರೀ ಕುತೂಹಲಕ್ಕೆ ಕಾರಣವಾಯಿತು. ಈ ವೇಳೆ ನಗರದ ವಾಣಿಜ್ಯೋದ್ಯಮಿ ಎಸ್. ರುದ್ರಮನಿಯಪ್ಪ 9ಲಕ್ಷ ರೂಪಾಯಿಗೆ ಬಿಡ್ ಮಾಡುವ ಮೂಲಕ ಮುಕ್ತಿ ಬಾವುಟವನ್ನು ತಮ್ಮದಾಗಿಸಿಕೊಂಡರು. ಈ ಸಂದರ್ಭ ಭಕ್ತರು ಜಯಘೋಷಗಳ ಮೂಲಕ ಸಂಭ್ರಮ ವ್ಯಕ್ತಪಡಿಸಿದರು. ಜಾತ್ರಾ ಮಹೋತ್ಸವದ ಅಂಗವಾಗಿ ಮೇ 6ರಿಂದ ಸೂಜಿಮಲ್ಲೇಶ್ವರ ನಗರದಲ್ಲಿ ಒಂದು ವಾರದ ದನಗಳ ಜಾತ್ರೆ ನಡೆಯಲಿದೆ. ದನಗಳಿಗೆ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಮಾಡಲಾಗಿದ್ದು, ರೈತರು ತಮ್ಮ ದನಗಳೊಂದಿಗೆ ಮೇವು ತರಬೇಕೆಂದು ದೇವಸ್ಥಾನ ಸಮಿತಿ ಮನವಿ ಮಾಡಿದೆ. ಈ ಸಂದರ್ಭದಲ್ಲಿ ಶಾಸಕರಾದ ಟಿ ರಘುಮೂರ್ತಿ.ಕೆ.ಸಿ ವಿರೇಂದ್ರ ಪಪ್ಪಿ ವೀರಭದ್ರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.1
- Post by Karibasava Balal1
- ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯ ಶ್ರೀ ರಾಘವೇಂದ್ರ ಸ್ವಾಮೀಜಿ ಕ್ರೀಡಾಂಗಣದಲ್ಲಿಂದು ಶ್ರೀ ರಾಘವೇಂದ್ರ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಘಟಿಕೋತ್ಸವ ಕಾರ್ಯಕ್ರಮವನ್ನು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನಗಳ ಖಾತೆಗಳ ಸಚಿವ ಪ್ರಹ್ಲಾದ್ ಜೋಷಿ ಉದ್ಘಾಟಿಸಿದರು. ಆಯುರ್ವೇದ ವೈದ್ಯಕೀಯ ಪದವಿ ಪೂರ್ಣಗೊಳಿಸಿದ ರ್ಯಾಂಕ್ ವಿಜೇತರು ಸೇರಿದಂತೆ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಶಿವಶರಣ ಮಾದರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಕುಲಪತಿ ಡಾ.ಬಿ.ಸಿ.ಭಗವಾನ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.1
- Post by ALTAF,❤️🙏1
- *ಭಾರತ ನಲ್ಲಿ ವೈರಲ್*1
- ಕಡೂರು: ಜನತೆಯ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಶ್ರಮ ಮಹತ್ವದ್ದು ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು. ಪಟ್ಟಣದ ಹೊರವಲಯದಲ್ಲಿರುವ ಹೆರಿಟೇಜ್ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ ಪ್ರಯುಕ್ತ ನಡೆದ ಕಡೂರು ಆರೋಗ್ಯ ಉತ್ಸವ- 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕರೋನಾ ಕಾಲಘಟ್ಟ ಒಂದು ಕರಾಳ ನೆನಪು. ಆ ದಿನಗಳಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಜನರನ್ನು ಉಳಿಸಲು ಹಗಲಿರುಳೂ ಶ್ರಮಿಸಿದ್ದು ಆರೋಗ್ಯ ಇಲಾಖೆ. ಆರೋಗ್ಯ ಸಿಬ್ಬಂದಿಗಳ ನಿಸ್ವಾರ್ಥ ಸೇವೆಯನ್ನು ಕೃತಜ್ಞತೆಯಿಂದ ಸ್ಮರಿಸುತ್ತೇನೆ. ಕ್ಷೇತ್ರದ ಎರಡು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಅಗತ್ಯವಾದ ಬಹುತೇಕ ಸೌಲಭ್ಯಗಳು ಈಗ ಲಭ್ಯವಿದೆ. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಮರ್ಪಕವಾಗಿ ದೊರೆಯುತ್ತಿದೆ. ಪಟ್ಟಣ ಬೆಳೆಯುತ್ತಿದ್ದು, ಅದಕ್ಕೆ ತಕ್ಕಂತೆ ಆರೋಗ್ಯ ಸೇವೆಯ ವಿಸ್ತರಣೆ ಅತ್ಯಂತ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸದಾ ಶ್ರಮಿಸುತ್ತೇನೆ. ನಿರಂತರವಾಗಿ ಶ್ರಮಿಸುತ್ತಿರುವ ಆರೋಗ್ಯ ಇಲಾಖೆಯ ನೌಕರರಿಗೆ ಏಕತಾನತೆ ಹೋಗಲಾಡಿಸಲು ಇಂತಹ ಕಾರ್ಯಕ್ರಮ ಆಯೋಜನೆ ಸಕಾಲಿಕವಾದದ್ದು ಎಂದು ಶ್ಲಾಘಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕಿನ ಎಲ್ಲ ಆರೋಗ್ಯ ಇಲಾಖೆಗಳ ನೌಕರರು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಆಟೋಟ ಸ್ಪರ್ದೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಡಾ.ಮಂದಾರ ಮತ್ತು ಡಾ.ಭಾರ್ಗವಿ ನೀಡಿದ ಭರತನಾಟ್ಯ ಪ್ರದರ್ಶನ ಗಮನ ಸೆಳೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಥ್ ಬಾಬು, ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ.ಶ್ರೀನಿವಾಸ್ ದತ್ತಾತ್ರಿ, ಡಾ.ಉಮೇಶ್, ಡಾ.ಚಂದಾ, ಆರೋಗ್ಯ ಶಿಕ್ಷಣಾಧಿಕಾರಿ ಮಮತಾ, ಡಾ. ಶಿವಕುಮಾರ್, ಡಾ.ಶಶಿಕಲಾ, ಡಾ.ಸೀಮಾ, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ತಾಲ್ಲೂಕಿನ ಆರೋಗ್ಯ ಇಲಾಖೆಯ ನೌಕರರು, ಆಶಾ ಕಾರ್ಯಕರ್ತೆಯರು ಇದ್ದರು.4