Shuru
Apke Nagar Ki App…
ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಗ್ರಾಮದಲ್ಲಿ ಗ್ರಾಮ ದೇವತೆ ದೊಡ್ಡಮ್ಮತಾಯಿ ಜಾತ್ರೆ ಭಕ್ತಿ ಮತ್ತು ಸಂಪ್ರದಾಯದ ವೈಭವದ ನಡುವೆ ಅದ್ಧೂರಿಯಾಗಿ ನೆರವೇರಿತು. ಮಿನಿ ಅರಣ್ಯದ ಮಧ್ಯದಲ್ಲಿರುವ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆಗಳಲ್ಲಿ ಭಾಗವಹಿಸಿದರು. ಇದು ಕೇವಲ ಧಾರ್ಮಿಕ ಆಚರಣೆಯಾಗದೆ, ಗ್ರಾಮಸ್ಥರ ಒಗ್ಗಟ್ಟು ಮತ್ತು ಪರಂಪರೆಯನ್ನು ಬಿಂಬಿಸುವ ಮಹೋತ್ಸವವಾಗಿದೆ.
ಹೊಂಗಿರಣ ನ್ಯೂಸ್
ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಗ್ರಾಮದಲ್ಲಿ ಗ್ರಾಮ ದೇವತೆ ದೊಡ್ಡಮ್ಮತಾಯಿ ಜಾತ್ರೆ ಭಕ್ತಿ ಮತ್ತು ಸಂಪ್ರದಾಯದ ವೈಭವದ ನಡುವೆ ಅದ್ಧೂರಿಯಾಗಿ ನೆರವೇರಿತು. ಮಿನಿ ಅರಣ್ಯದ ಮಧ್ಯದಲ್ಲಿರುವ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆಗಳಲ್ಲಿ ಭಾಗವಹಿಸಿದರು. ಇದು ಕೇವಲ ಧಾರ್ಮಿಕ ಆಚರಣೆಯಾಗದೆ, ಗ್ರಾಮಸ್ಥರ ಒಗ್ಗಟ್ಟು ಮತ್ತು ಪರಂಪರೆಯನ್ನು ಬಿಂಬಿಸುವ ಮಹೋತ್ಸವವಾಗಿದೆ.
More news from ಕರ್ನಾಟಕ and nearby areas
- ಮಂಡ್ಯ-ನಾಗಮಂಗಲ ರಸ್ತೆಯ ಪೋದಾರ್ನಲ್ಲಿ ಮಾರುತಿ ಈಕೋ ಕಾರು ಮತ್ತು ಬೈಕ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಗಣಿಗ ರವಿಕುಮಾರ್, ಇನ್ನು ಮುಂದೆ ಹೆಲ್ಮೆಟ್ ಧರಿಸದವರಿಗೆ ಶಿಫಾರಸು ಮಾಡುವುದಿಲ್ಲ ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.1
- ಮಳವಳ್ಳಿ ತಾಲೂಕಿನ ವಿ ಬಸಾಪುರ ಗ್ರಾಮದ ಚೋಳರ ಕಾಲದ ಬಸವೇಶ್ವರ ದೇವಸ್ಥಾನಕ್ಕೆ ಕೆಂಪೇಗೌಡ ಕುಟುಂಬಸ್ಥರು ಹರಕೆ ತೀರಿಸಿ ಬಸಪ್ಪನನ್ನು ಸಮರ್ಪಿಸಿದರು. ಗ್ರಾಮಸ್ಥರ ಸಮ್ಮುಖದಲ್ಲಿ ವಿಶೇಷ ಪೂಜೆ ಪುನಸ್ಕಾರಗಳೊಂದಿಗೆ ಬಸಪ್ಪನಿಗೆ ಮುದ್ರಾ ಧಾರಣೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಮುಂದಿನ ಬುಧವಾರ ಮತ್ತು ಗುರುವಾರ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆಯನ್ನು ಆಯೋಜಿಸಲಾಗಿದ್ದು, ಭಕ್ತರು ಭಾಗವಹಿಸಲು ಮನವಿ ಮಾಡಲಾಗಿದೆ.1
- *ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಕುರಟ್ಟಿ ಹೊಸೂರು - ದಂಟಳ್ಳಿ ರಸ್ತೆ ನಿರ್ಮಾಣಕ್ಕೆ ಶಾಸಕರಿಂದ ಚಾಲನೆ* *ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಕುರಟ್ಟಿ ಹೊಸೂರು - ದಂಟಳ್ಳಿ ರಸ್ತೆ ನಿರ್ಮಾಣಕ್ಕೆ ಶಾಸಕರಿಂದ ಚಾಲನೆ* ಹನೂರು: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿರುವ ಶಾಸಕ ಎಂ.ಆರ್. ಮಂಜುನಾಥ್ ಅವರು ಇಂದು ಸುಮಾರು 9.5 ಕೋಟಿ ರೂಪಾಯಿ ವೆಚ್ಚದ ವಿವಿಧ ರಸ್ತೆ ಮತ್ತು ಸಮುದಾಯ ಭವನ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆ (PWD) ಹಾಗೂ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಅನುದಾನದಡಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಗಳ ವಿವರ: ರಸ್ತೆ ಅಭಿವೃದ್ಧಿ (₹7.5 ಕೋಟಿ): ಕುರಟ್ಟಿ ಹೊಸೂರಿನಿಂದ ದಂಟಳ್ಳಿ ಗ್ರಾಮದವರೆಗೆ ಲೋಕೋಪಯೋಗಿ ಇಲಾಖೆಯ ವತಿಯಿಂದ ಡಾಂಬರು ರಸ್ತೆ ನಿರ್ಮಾಣ. ಸಂಪರ್ಕ ರಸ್ತೆ (₹1.5 ಕೋಟಿ): ಕೆ.ಆರ್.ಐ.ಡಿ.ಎಲ್ ವತಿಯಿಂದ ಅಂಬಿಕಾಪುರ ಗ್ರಾಮದಿಂದ ಪಳನಿಮೇಡು ಗ್ರಾಮದವರೆಗೆ ರಸ್ತೆ ಅಭಿವೃದ್ಧಿ. ಸಮುದಾಯ ಭವನ (₹50 ಲಕ್ಷ): ಭದ್ರಣ್ಣನಳ್ಳಿ ಗ್ರಾಮದ ಬಣಜಿಗ ಸಮುದಾಯ ಭವನದ ಮುಂದುವರೆದ ಕಾಮಗಾರಿಗಾಗಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಚಾಲನೆ. ಗುಣಮಟ್ಟದ ಕೆಲಸಕ್ಕೆ ಶಾಸಕರ ಸೂಚನೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಶಾಸಕರು, "ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಕೆಲಸದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಗ್ರಾಮಸ್ಥರು ಸಹ ಕೆಲಸ ನಡೆಯುವ ಸ್ಥಳದಲ್ಲಿ ಉಪಸ್ಥಿತರಿದ್ದು, ಕಾಮಗಾರಿ ಸಮರ್ಪಕವಾಗಿ ನಡೆಯುವಂತೆ ಗಮನಹರಿಸಬೇಕು" ಎಂದು ತಿಳಿಸಿದರು. ನೀರಾವರಿ ಯೋಜನೆಗೆ ₹490 ಕೋಟಿ ಅನುದಾನ ಬಜೆಟ್ನಲ್ಲಿ ಹನೂರು ಕ್ಷೇತ್ರದ ನೀರಾವರಿ ಯೋಜನೆಗೆ 490 ಕೋಟಿ ರೂಪಾಯಿ ಅನುದಾನ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ಧನ್ಯವಾದ ಸಲ್ಲಿಸಿದರು. "ಶೀಘ್ರದಲ್ಲೇ ಶೆಟ್ಟಳ್ಳಿ, ಕೌದಳ್ಳಿ ಹಾಗೂ ಕುರಟ್ಟಿ ಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಲಾಗುವುದು. ಕೆರೆ-ಕಟ್ಟೆಗಳನ್ನು ತುಂಬಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲಾಗುವುದು. ಇದರಿಂದ ಕೆಲಸ ಹುಡುಕಿ ನಗರಗಳಿಗೆ ವಲಸೆ ಹೋಗಿರುವ ಜನರು ಮರಳಿ ತಮ್ಮ ಊರಿಗೆ ಬರುವಂತಾಗುತ್ತದೆ. ಅವರಿಗೆ ಅಗತ್ಯವಿರುವ ರಸ್ತೆ, ನೀರು, ವಿದ್ಯುತ್ನಂತಹ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಗುರಿ" ಎಂದರು. ಗಣ್ಯರ ಉಪಸ್ಥಿತಿ: ಈ ಸಂದರ್ಭದಲ್ಲಿ ಕೌದಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಸ್ವಾಮಿ, ಮುಖಂಡರಾದ ಸಿದ್ದರಾಜು, ಮಂಜೇಶ್ ಗೌಡ, ಮಹದೇವ, ಜಯರಾಮು, ಚಿನ್ನವೆಂಕಟ್, ವಿಜಯ್ ಕುಮಾರ್, ಕಾಳಪ್ಪ, ಮುನಿಶೆಟ್ಟಿ, ಎಸ್.ಆರ್. ರಂಗಸ್ವಾಮಿ ಹಾಗೂ ಇನ್ನಿತರ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಹಾಜರಿದ್ದರು. ವರದಿ ಉಸ್ಮಾನ್ ಖಾನ್4
- cowdalli Gram Panchayat forest office opposite opposite no cleaning1
- ತಮಿಳುನಾಡಿನ ದ್ರಾವಿಡ ರಾಜಕೀಯ ರಂಗದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿರುವ ಟಿವಿಕೆ ನಾಯಕ ಹಾಗೂ ನಟ ವಿಜಯ್, ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇದರ ನಡುವೆ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ದಳಪತಿ ವಿಜಯ್ ಅವರು, ಇದೀಗ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ತಮಿಳುನಾಡಿನ ದ್ರಾವಿಡ ರಾಜಕೀಯ ರಂಗದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿರುವ ಟಿವಿಕೆ ನಾಯಕ ಹಾಗೂ ನಟ ವಿಜಯ್, ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇದರ ನಡುವೆ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ದಳಪತಿ ವಿಜಯ್ ಅವರು, ಇದೀಗ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ.1
- ನೆಲಮಂಗಲದಲ್ಲಿ ಗೋದಿ ಒಕ್ಕಣೆ ಮಾಡುತ್ತಿದ್ದ ಯುವಕ ಒಕ್ಕಣೆ ಯಂತ್ರಕ್ಕೆ ಸಿಲುಕಿ ದುರಂತ ಸಾವನ್ನಪ್ಪಿದ್ದಾನೆ. ಈ ಅಚಾನಕ್ ಘಟನೆಯು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.1
- ಸಾಮಾಜಿಕ ಮಾಧ್ಯಮದಲ್ಲಿ 'ತೆರಿಗೆ' ಪದದ ಅರ್ಥವನ್ನು ವಿವರಿಸುವ ಕುರಿತ ಚರ್ಚೆಯೊಂದು ದೇಶಾದ್ಯಂತ ವೈರಲ್ ಆಗಿದೆ. ನೆಟ್ಟಿಗರು ಈ ಬಗ್ಗೆ ಕುತೂಹಲ ವ್ಯಕ್ತಪಡಿಸಿ, ತಮ್ಮದೇ ಆದ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.1
- ಮಂಡ್ಯ ಜಿಲ್ಲೆಯ ಹಲಗೂರಿನ ಸಾವಯವ ಕೃಷಿಕ ಜೆ. ಶಿವಕುಮಾರ್, ತಮ್ಮ ಸುವರ್ಣ ಭೂಮಿ ಫಾರಂನಲ್ಲಿ 423ಕ್ಕೂ ಹೆಚ್ಚು ವಿದೇಶಿ ಹಣ್ಣುಗಳನ್ನು ಯಶಸ್ವಿಯಾಗಿ ಬೆಳೆದು ಗಮನ ಸೆಳೆದಿದ್ದಾರೆ. ಸಾವಯವ ಕೃಷಿಯಿಂದ ಉತ್ತಮ ಲಾಭ ಗಳಿಸಿರುವ ಅವರು, ಮಣ್ಣಿನ ಫಲವತ್ತತೆ ಮತ್ತು ಆರೋಗ್ಯಕ್ಕಾಗಿ ರೈತರು ಸಾವಯವ ಕೃಷಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕೂಡ ಇದನ್ನು ಬೆಂಬಲಿಸಿ, ರಾಸಾಯನಿಕ ಬಳಕೆಯಿಂದಾಗುವ ಹಾನಿಗಳ ಬಗ್ಗೆ ಎಚ್ಚರಿಕೆ ನೀಡಿದರು.1
- ಮಂಡ್ಯದಲ್ಲಿ ಅಜಾಗರೂಕ ಲಾರಿ ಚಾಲಕನೊಬ್ಬ ಕಾರು ಮತ್ತು ಆಟೋಗೆ ಗುದ್ದಿ ಪರಾರಿಯಾಗಿದ್ದಾನೆ. ಅಪಘಾತಕ್ಕೆ ಒಳಗಾದ ಕಾರು ಚಾಲಕನ ಅಳಲು ತೋಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.1