logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಿಜೆಪಿ ಕಾರ್ಯಾಗದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ

6 hrs ago
user_ಟಿ.ಉಮೇಶ ಮರ್ಲಾನಹಳ್ಳಿ
ಟಿ.ಉಮೇಶ ಮರ್ಲಾನಹಳ್ಳಿ
Local News Reporter ಕಾರಟಗಿ, ಕೊಪ್ಪಳ, ಕರ್ನಾಟಕ•
6 hrs ago

ಬಿಜೆಪಿ ಕಾರ್ಯಾಗದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ

More news from ಕರ್ನಾಟಕ and nearby areas
  • ನವ ಯುವಶಕ್ತಿ ಸಂಘ ಮತ್ತು ಯೂತ್ ಎಸ್ಕಾರ್ಟ್ ಕಮಿಟಿ ವತಿಯಿಂದ ಅನ್ನ ಸಂತರ್ಪಣ ಕಾರ್ಯಕ್ರಮ
    4
    ನವ ಯುವಶಕ್ತಿ ಸಂಘ ಮತ್ತು  ಯೂತ್ ಎಸ್ಕಾರ್ಟ್ ಕಮಿಟಿ ವತಿಯಿಂದ ಅನ್ನ ಸಂತರ್ಪಣ ಕಾರ್ಯಕ್ರಮ
    user_ಟಿ.ಉಮೇಶ ಮರ್ಲಾನಹಳ್ಳಿ
    ಟಿ.ಉಮೇಶ ಮರ್ಲಾನಹಳ್ಳಿ
    Local News Reporter ಕಾರಟಗಿ, ಕೊಪ್ಪಳ, ಕರ್ನಾಟಕ•
    4 hrs ago
  • ಪೌರ ಕಾರ್ಮಿಕರ ಅವಮಾನ ಖಂಡಿಸಿ ಸಚಿವ ಕೃಷ್ಣ ಬೈರೇಗೌಡ ಕ್ಷಮೆ ಕೇಳಬೇಕು: ಎಐಸಿಸಿಟಿಯು ಪ್ರತಿಭಟನೆ. ಪೌರ ಕಾರ್ಮಿಕರ ಅವಮಾನ ಖಂಡಿಸಿ ಸಚಿವ ಕೃಷ್ಣ ಬೈರೇಗೌಡ ಕ್ಷಮೆ ಕೇಳಬೇಕು: ಎಐಸಿಸಿಟಿಯು ಪ್ರತಿಭಟನೆ. ಸಿಂಧನೂರು,ಸೆ. 11- ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಸೆಪ್ಟೆಂಬರ್ 5ರಂದು ಸಾರ್ವಜನಿಕವಾಗಿ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಕ್ಷಣವೇ ಯಾವುದೇ ಷರತ್ತಿಲ್ಲದೆ ಭೇಷರತ್ ಕ್ಷಮೆಯಾಚಿಸಬೇಕು ಎಂದು ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಆಗ್ರಹಿಸಿ ಪ್ರತಿಭಟನೆ ಮೂಲಕ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಎಐಸಿಸಿಟಿಯು ರಾಜ್ಯ ಸಹ ಕಾರ್ಯದರ್ಶಿ ನಾಗರಾಜ ಪೂಜಾರ್ ಇವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಎಐಸಿಸಿಟಿಯು ರಾಜ್ಯ ಸಹ ಕಾರ್ಯದರ್ಶಿ ನಾಗರಾಜ ಪೂಜಾರ್ ಮಾತನಾಡಿ, ಪೌರ ಕಾರ್ಮಿಕರು ನಗರದ ಕಸವನ್ನು ಮಾತ್ರ ತೆರವುಗೊಳಿಸುವವರಲ್ಲ. ನಗರವನ್ನು ಸ್ವಚ್ಛವಾಗಿ, ಆರೋಗ್ಯಕರವಾಗಿ ಮತ್ತು ನಾಗರಿಕ ಜೀವನಕ್ಕೆ ಯೋಗ್ಯವಾಗಿ ಇರಿಸುವ ಮುಂಚೂಣಿ ಶ್ರಮಿಕರು.ಆದರೆ ಸರ್ಕಾರ ಅವರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವ ಬದಲು, ನಗರದ ಸಮಸ್ಯೆಗಳಿಗೆ ಕಾರ್ಮಿಕರನ್ನೇ ಹೊಣೆಗಾರರನ್ನಾಗಿ ಮಾಡುತ್ತಿರುವುದು ಸರಿಯಲ್ಲ,ಕಾರ್ಮಿಕರ ಕೊರತೆ, ಖಾಲಿ ಹುದ್ದೆಗಳು, ಗುತ್ತಿಗೆ ಮತ್ತು ಹೊರಗುತ್ತಿಗೆ ಪದ್ಧತಿ, ಕೆಲಸದ ಒತ್ತಡ, ವೇತನ ಪಾವತಿಯಲ್ಲಿ ವಿಳಂಬ ಹಾಗೂ ಸುರಕ್ಷತಾ ಸೌಲಭ್ಯಗಳ ಕೊರತೆಯಂತಹ ಸಮಸ್ಯೆಗಳನ್ನು ಸರ್ಕಾರ ಮೊದಲು ಪರಿಹರಿಸಬೇಕು. ಕಾರ್ಮಿಕರ ಮೇಲೆ ಆರೋಪ ಹೊರಿಸುವ ಮೂಲಕ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ ಎಂದು ಹೇಳಿದರು. ಈ ಸಂಧರ್ಭದಲ್ಲಿ ಆರ್ ಎಚ್ ಕಲಮಂಗಿ, ಮೌನೇಶ್ ಕವಿತಾಳ, ವಿರೇಶ ಕೇಸರಿ, ರಮೇಶ್, ಅಲ್ಲಾಸಾಬ, ಸುಗರಡ್ಡಿ, ಅಯ್ಯಣ್ಣ,ಸಿದ್ದು, ಯಂಕೋಬ ಹನುಮಂತ ವಿರೇಶ, ದಾನಪ್ಪ, ಮಹಾದೇವಮ್ಮ, ಲಕ್ಷ್ಮಿ ಮಕಾಳಮ್ಮ, ವಿಜಯಲಕ್ಷ್ಮಿ ಇತರರು ಇದ್ದರು.
    1
    ಪೌರ ಕಾರ್ಮಿಕರ ಅವಮಾನ ಖಂಡಿಸಿ ಸಚಿವ ಕೃಷ್ಣ ಬೈರೇಗೌಡ ಕ್ಷಮೆ ಕೇಳಬೇಕು: ಎಐಸಿಸಿಟಿಯು ಪ್ರತಿಭಟನೆ.
ಪೌರ ಕಾರ್ಮಿಕರ ಅವಮಾನ ಖಂಡಿಸಿ ಸಚಿವ ಕೃಷ್ಣ ಬೈರೇಗೌಡ ಕ್ಷಮೆ ಕೇಳಬೇಕು: ಎಐಸಿಸಿಟಿಯು ಪ್ರತಿಭಟನೆ.
ಸಿಂಧನೂರು,ಸೆ. 11-
ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಸೆಪ್ಟೆಂಬರ್ 5ರಂದು ಸಾರ್ವಜನಿಕವಾಗಿ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಕ್ಷಣವೇ ಯಾವುದೇ ಷರತ್ತಿಲ್ಲದೆ ಭೇಷರತ್ ಕ್ಷಮೆಯಾಚಿಸಬೇಕು ಎಂದು ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಆಗ್ರಹಿಸಿ ಪ್ರತಿಭಟನೆ ಮೂಲಕ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಎಐಸಿಸಿಟಿಯು ರಾಜ್ಯ ಸಹ ಕಾರ್ಯದರ್ಶಿ ನಾಗರಾಜ ಪೂಜಾರ್  ಇವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಸಿಸಿಟಿಯು ರಾಜ್ಯ ಸಹ ಕಾರ್ಯದರ್ಶಿ ನಾಗರಾಜ ಪೂಜಾರ್ ಮಾತನಾಡಿ, ಪೌರ ಕಾರ್ಮಿಕರು ನಗರದ ಕಸವನ್ನು ಮಾತ್ರ ತೆರವುಗೊಳಿಸುವವರಲ್ಲ. ನಗರವನ್ನು ಸ್ವಚ್ಛವಾಗಿ, ಆರೋಗ್ಯಕರವಾಗಿ ಮತ್ತು ನಾಗರಿಕ ಜೀವನಕ್ಕೆ ಯೋಗ್ಯವಾಗಿ ಇರಿಸುವ ಮುಂಚೂಣಿ ಶ್ರಮಿಕರು.ಆದರೆ ಸರ್ಕಾರ ಅವರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವ ಬದಲು, ನಗರದ ಸಮಸ್ಯೆಗಳಿಗೆ ಕಾರ್ಮಿಕರನ್ನೇ ಹೊಣೆಗಾರರನ್ನಾಗಿ ಮಾಡುತ್ತಿರುವುದು ಸರಿಯಲ್ಲ,ಕಾರ್ಮಿಕರ ಕೊರತೆ, ಖಾಲಿ ಹುದ್ದೆಗಳು, ಗುತ್ತಿಗೆ ಮತ್ತು ಹೊರಗುತ್ತಿಗೆ ಪದ್ಧತಿ, ಕೆಲಸದ ಒತ್ತಡ, ವೇತನ ಪಾವತಿಯಲ್ಲಿ ವಿಳಂಬ ಹಾಗೂ ಸುರಕ್ಷತಾ ಸೌಲಭ್ಯಗಳ ಕೊರತೆಯಂತಹ ಸಮಸ್ಯೆಗಳನ್ನು ಸರ್ಕಾರ ಮೊದಲು ಪರಿಹರಿಸಬೇಕು. ಕಾರ್ಮಿಕರ ಮೇಲೆ ಆರೋಪ ಹೊರಿಸುವ ಮೂಲಕ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಆರ್ ಎಚ್ ಕಲಮಂಗಿ, ಮೌನೇಶ್ ಕವಿತಾಳ, ವಿರೇಶ ಕೇಸರಿ, ರಮೇಶ್, ಅಲ್ಲಾಸಾಬ, ಸುಗರಡ್ಡಿ, ಅಯ್ಯಣ್ಣ,ಸಿದ್ದು, ಯಂಕೋಬ  ಹನುಮಂತ ವಿರೇಶ, ದಾನಪ್ಪ, ಮಹಾದೇವಮ್ಮ, ಲಕ್ಷ್ಮಿ ಮಕಾಳಮ್ಮ, ವಿಜಯಲಕ್ಷ್ಮಿ ಇತರರು ಇದ್ದರು.
    user_ಶಿವರಾಜ.ಕೆ
    ಶಿವರಾಜ.ಕೆ
    ಸಿಂಧನೂರು, ರಾಯಚೂರು, ಕರ್ನಾಟಕ•
    1 hr ago
  • ಕುಷ್ಟಗಿಯಲ್ಲಿ ಪ್ರಧಾನಿ ಮೋದಿ ಜನ್ಮದಿನಾಚರಣೆ: ಮನೆ ಮನೆಯಲ್ಲಿ ಆಶೀರ್ವಾದ ದೀಪ ಬೆಳಗಲು ಕರೆ - ಶಾಸಕ ದೊಡ್ಡನಗೌಡ ಪಾಟೀಲ* *ಕುಷ್ಟಗಿ:* ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನಾಚರಣೆ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿ, ಅವರ ದೀರ್ಘಾಯುಷ್ಯಕ್ಕೆ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಹಾಗೂ ಬಿಜೆಪಿ ಕಾರ್ಯಕರ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಮಾತನಾಡಿದ ಅವರು, ದೇಶ ಕಂಡ ಪ್ರಬುದ್ಧ ನಾಯಕ, ಜಗತ್ತು ಮೆಚ್ಚಿದ ನಾಯಕ ನರೇಂದ್ರ ಮೋದಿಜಿ ಅವರಿಗೆ ಭಾರತವನ್ನು ಬಲಿಷ್ಠ ಮಾಡುವ ಶಕ್ತಿಯನ್ನು ದೇವರು ನೀಡಲಿ. ಇಂದು 75ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮೋದಿಜಿ ಅವರಿಗೆ ನಿಮ್ಮೆಲ್ಲರ ಪರವಾಗಿ ಶುಭಾಶಯಗಳನ್ನು ಕೋರುತ್ತೇನೆ. ಅವರ ಹೆಸರಿನಲ್ಲಿ ಒಂದು ತಿಂಗಳ ಕಾಲ ಶಿವಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇಂದು ಸಂಜೆ ಮನೆ ಮನೆಯಲ್ಲಿ ದೀಪ ಹಚ್ಚುವ ಮೂಲಕ ಆಶೀರ್ವಾದ ದೀಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಾರತೀಯ ಜನತಾ ಪಕ್ಷದ ಹಿರಿಯರು, ಎಲ್ಲ ನಾಗರಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ ಅವರು, ಜನ್ಮದಿನದ ಈ ಸಂದರ್ಭದಲ್ಲಿ ಅವರಿಗೆ ಶುಭವಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಮಹಾಂತೇಶ ಬಾದಾಮಿ, ಜಯ ತೀರ್ಥ ಸೌದಿ, ಈರಣ್ಣ ಗಜೇಂದ್ರಗಡ,. ತಾಲೂಕು ಯುವ ಮೋರ್ಚಾ ಅಧ್ಯಕ್ಷ ಉಮೇಶ ಯಾದವ್, ಮಾಜಿ ಪುರಸಭೆ ಸದಸ್ಯ ಜಯತೀರ್ಥ ಆಚಾರಿ, ಅಶೋಕ ಬಳೂಟಗಿ, ಸುಖಮುನಿ ಗುರುವಿನ್, ವೆಂಕಟೇಶ ಇಂಗಳಗಿ, ಶಿವಪ್ಪ ಗೆಜ್ಜಲಗಟ್ಟಿ, ಸುರೇಶ ಕೌದಿ, ಶೈಲಜಾ ಬಾಗಲಿ, ಶರಣಮ್ಮ ಸೇರಿದಂತೆ ನಗರದ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
    4
    ಕುಷ್ಟಗಿಯಲ್ಲಿ ಪ್ರಧಾನಿ ಮೋದಿ ಜನ್ಮದಿನಾಚರಣೆ: ಮನೆ ಮನೆಯಲ್ಲಿ ಆಶೀರ್ವಾದ ದೀಪ ಬೆಳಗಲು ಕರೆ - ಶಾಸಕ ದೊಡ್ಡನಗೌಡ ಪಾಟೀಲ*
*ಕುಷ್ಟಗಿ:* ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನಾಚರಣೆ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿ, ಅವರ ದೀರ್ಘಾಯುಷ್ಯಕ್ಕೆ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಹಾಗೂ ಬಿಜೆಪಿ ಕಾರ್ಯಕರ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ  ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಮಾತನಾಡಿದ ಅವರು, ದೇಶ ಕಂಡ ಪ್ರಬುದ್ಧ ನಾಯಕ, ಜಗತ್ತು ಮೆಚ್ಚಿದ ನಾಯಕ ನರೇಂದ್ರ ಮೋದಿಜಿ ಅವರಿಗೆ ಭಾರತವನ್ನು ಬಲಿಷ್ಠ ಮಾಡುವ ಶಕ್ತಿಯನ್ನು ದೇವರು ನೀಡಲಿ. ಇಂದು 75ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮೋದಿಜಿ ಅವರಿಗೆ ನಿಮ್ಮೆಲ್ಲರ ಪರವಾಗಿ ಶುಭಾಶಯಗಳನ್ನು ಕೋರುತ್ತೇನೆ.
ಅವರ ಹೆಸರಿನಲ್ಲಿ ಒಂದು ತಿಂಗಳ ಕಾಲ ಶಿವಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇಂದು ಸಂಜೆ ಮನೆ ಮನೆಯಲ್ಲಿ ದೀಪ ಹಚ್ಚುವ ಮೂಲಕ ಆಶೀರ್ವಾದ ದೀಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಾರತೀಯ ಜನತಾ ಪಕ್ಷದ ಹಿರಿಯರು, ಎಲ್ಲ ನಾಗರಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ ಅವರು, ಜನ್ಮದಿನದ ಈ ಸಂದರ್ಭದಲ್ಲಿ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಮಹಾಂತೇಶ ಬಾದಾಮಿ, ಜಯ ತೀರ್ಥ ಸೌದಿ, ಈರಣ್ಣ ಗಜೇಂದ್ರಗಡ,. ತಾಲೂಕು ಯುವ ಮೋರ್ಚಾ ಅಧ್ಯಕ್ಷ ಉಮೇಶ ಯಾದವ್, ಮಾಜಿ ಪುರಸಭೆ ಸದಸ್ಯ ಜಯತೀರ್ಥ ಆಚಾರಿ, ಅಶೋಕ ಬಳೂಟಗಿ, ಸುಖಮುನಿ ಗುರುವಿನ್, ವೆಂಕಟೇಶ ಇಂಗಳಗಿ, ಶಿವಪ್ಪ ಗೆಜ್ಜಲಗಟ್ಟಿ, ಸುರೇಶ ಕೌದಿ, ಶೈಲಜಾ ಬಾಗಲಿ, ಶರಣಮ್ಮ ಸೇರಿದಂತೆ ನಗರದ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    2 hrs ago
  • ನಾಳೆ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರ ಜನ್ಮದಿನ. ಕುಷ್ಟಗಿ : ದೇಶದ ಅಭಿವೃದ್ಧಿ, ಜನಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ನಾಳೆ ಜನ್ಮದಿನವಾಗಿರುವುದರಿಂದ ಅವರಿಗೆ ಇಂದು ಮುಂಚಿತವಾಗಿ ಹೃತ್ಪೂರ್ವಕವಾದ ಹುಟ್ಟುಹಬ್ಬದ ಶುಭಾಶಯಗಳನ್ನು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ತಿಳಿಸಿದ್ದಾರೆ. ನಾಳೆ ಸೆಪ್ಟೆಂಬರ್ 17ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ, ಮೋದಿಜಿ ಅವರಿಗೆ ಇನ್ನಷ್ಟು ಹೆಚ್ಚು ದೇಶ ಸೇವೆ ಮಾಡುವ ಶಕ್ತಿ, ಆರೋಗ್ಯ, ಆಯುಷ್ಯ ಹಾಗೂ ಯಶಸ್ಸನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸೋಣ ಹಾಗೂ ಸೇವೆಯ ಸಂಕಲ್ಪದೊಂದಿಗೆ, ರಾಷ್ಟ್ರ ನಿರ್ಮಾಣದ ಪಯಣಕ್ಕೆ ನಮ್ಮ ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಶಾಸಕರು ಹೇಳಿದ್ದಾರೆ.
    2
    ನಾಳೆ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರ ಜನ್ಮದಿನ.
ಕುಷ್ಟಗಿ : ದೇಶದ ಅಭಿವೃದ್ಧಿ, ಜನಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ನಾಳೆ ಜನ್ಮದಿನವಾಗಿರುವುದರಿಂದ ಅವರಿಗೆ ಇಂದು ಮುಂಚಿತವಾಗಿ ಹೃತ್ಪೂರ್ವಕವಾದ ಹುಟ್ಟುಹಬ್ಬದ ಶುಭಾಶಯಗಳನ್ನು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ತಿಳಿಸಿದ್ದಾರೆ.
ನಾಳೆ ಸೆಪ್ಟೆಂಬರ್ 17ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ, ಮೋದಿಜಿ ಅವರಿಗೆ ಇನ್ನಷ್ಟು ಹೆಚ್ಚು ದೇಶ ಸೇವೆ ಮಾಡುವ ಶಕ್ತಿ, ಆರೋಗ್ಯ, ಆಯುಷ್ಯ ಹಾಗೂ ಯಶಸ್ಸನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸೋಣ ಹಾಗೂ ಸೇವೆಯ ಸಂಕಲ್ಪದೊಂದಿಗೆ, ರಾಷ್ಟ್ರ ನಿರ್ಮಾಣದ ಪಯಣಕ್ಕೆ ನಮ್ಮ ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಶಾಸಕರು ಹೇಳಿದ್ದಾರೆ.
    user_Bhimasenrao Kulkarni Kushtagi
    Bhimasenrao Kulkarni Kushtagi
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    19 hrs ago
  • ಕೊಪ್ಪಳ: ನಮ್ಮ ಒತ್ತಡದಿಂದಲೇ ತಾಲೂಕಿನ ಬರ ಗುರುತಿಸಿದ ಸರಕಾರ' : ಸಿವಿಸಿ 'ಕೊಪ್ಪಳ: ಕೊಪ್ಪಳ ತಾಲೂಕ ಬರಪೀಡಿತ ಎಂದು ಸರಕಾರ ಒಪ್ಪಿಕೊಂಡಿರುವುದು ನಮ್ಮ ಹೋರಾಟಕ್ಕೆ ಸಂದ ಜಯ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. "ಕೊಪ್ಪಳವೂ ಸೇರಿದಂತೆ 53 ತಾಲೂಕುಗಳು ಬರಪೀಡಿತ ಸರಕಾರ ಆದೇಶ ಹೊರಡಿಸಿದೆ. ತಾಂತ್ರಿಕ ಪ್ರಕ್ರಿಯೆಗಳ ನಂತರ ಒಂದು ವಾರದಲ್ಲಿ ಈ ತಾಲೂಕು ಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುತ್ತದೆ. ಈ ವಿಷಯದಲ್ಲಿ ಈ ಹಿಂದೆ ಮಾಡಿದಂತಹ ವಿಳಂಬವನ್ನು ಮಾಡದೆ ಎಲ್ಲಾ ಪ್ರಕ್ರಿಯೆಗಳನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಬೇಕು," ಎಂದು ಒತ್ತಾಯಿಸಿದ್ದಾರೆ. ತಾಲೂಕಿನ ಪರಸ್ಥಿತಿಯ ಆಧಾರದ ಮೇಲೆ ನಾವು ಮಂಡಿಸಿದ್ದ ಬೇಡಿಕೆಯನ್ನು ಈಡೇರಿಸಲು ಎರಡೂವರೆ ತಿಂಗಳುಗಳಷ್ಟು ಕಾಲಹರಣ ಮಾಡುವ ಅಗತ್ಯ ಇರಲಿಲ್ಲ. ನಾವು ಒಂದೂವರೆ ತಿಂಗಳಿನಲ್ಲಿ ಎರಡು ಪಾದಯಾತ್ರೆಗಳನ್ನು ಹಮ್ಮಿಕೊಂಡು ತೀವ್ರ ಒತ್ತಡ ಹೇರದಿದ್ದರೆ ಕೊಪ್ಪಳದಲ್ಲಿ ಬರ ಇರುವುದನ್ನು ಸರಕಾರ ಒಪ್ಪುತ್ತಿರಲಿಲ್ಲ. ಶಾಸಕರು ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರೆ ನಾವು ಹೋರಾಡುವ ಪರಿಸ್ಥಿತಿಯೇ ಇರುತ್ತಿರಲಿಲ್ಲ. ಸರಕಾರದ ನಿರ್ಧಾರ ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ. "ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ, ಬಾಕಿ ಇರುವ ಬೆಳೆ ವಿಮೆಗೆ ಹಾಗೂ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಹಣ ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ಈ ಕೂಡಲೇ ಆರಂಭಿಸಬೇಕು. ಈ ಪ್ರಕ್ರಿಯೆಯಲ್ಲಿ ವಿಳಂಬವಾದರೆ ಪರಿಹಾರ ಸಕಾಲದಲ್ಲಿ ದೊರೆಯದೆ ರೈತರು ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ. ಈ ವಿಷಯದಲ್ಲಿ ಕಾಲಹರಣ ಮಾಡಿದರೇ ನಮ್ಮ ಪಕ್ಷ ಮತ್ತೊಮ್ಮೆ ಉಗ್ರ ಹೋರಾಟ ಮಾಡುವುದು ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ.
    2
    ಕೊಪ್ಪಳ: ನಮ್ಮ ಒತ್ತಡದಿಂದಲೇ
ತಾಲೂಕಿನ ಬರ ಗುರುತಿಸಿದ ಸರಕಾರ' : ಸಿವಿಸಿ 
'ಕೊಪ್ಪಳ: ಕೊಪ್ಪಳ ತಾಲೂಕ
ಬರಪೀಡಿತ ಎಂದು ಸರಕಾರ ಒಪ್ಪಿಕೊಂಡಿರುವುದು ನಮ್ಮ ಹೋರಾಟಕ್ಕೆ ಸಂದ ಜಯ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ಕೊಪ್ಪಳವೂ ಸೇರಿದಂತೆ 53 ತಾಲೂಕುಗಳು ಬರಪೀಡಿತ ಸರಕಾರ ಆದೇಶ ಹೊರಡಿಸಿದೆ. ತಾಂತ್ರಿಕ ಪ್ರಕ್ರಿಯೆಗಳ ನಂತರ ಒಂದು ವಾರದಲ್ಲಿ ಈ ತಾಲೂಕು ಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುತ್ತದೆ. ಈ ವಿಷಯದಲ್ಲಿ ಈ ಹಿಂದೆ ಮಾಡಿದಂತಹ ವಿಳಂಬವನ್ನು ಮಾಡದೆ ಎಲ್ಲಾ ಪ್ರಕ್ರಿಯೆಗಳನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಬೇಕು," ಎಂದು ಒತ್ತಾಯಿಸಿದ್ದಾರೆ.
ತಾಲೂಕಿನ ಪರಸ್ಥಿತಿಯ ಆಧಾರದ ಮೇಲೆ ನಾವು ಮಂಡಿಸಿದ್ದ ಬೇಡಿಕೆಯನ್ನು 
ಈಡೇರಿಸಲು ಎರಡೂವರೆ ತಿಂಗಳುಗಳಷ್ಟು ಕಾಲಹರಣ ಮಾಡುವ ಅಗತ್ಯ ಇರಲಿಲ್ಲ. ನಾವು ಒಂದೂವರೆ ತಿಂಗಳಿನಲ್ಲಿ ಎರಡು ಪಾದಯಾತ್ರೆಗಳನ್ನು
ಹಮ್ಮಿಕೊಂಡು ತೀವ್ರ ಒತ್ತಡ ಹೇರದಿದ್ದರೆ ಕೊಪ್ಪಳದಲ್ಲಿ ಬರ ಇರುವುದನ್ನು ಸರಕಾರ ಒಪ್ಪುತ್ತಿರಲಿಲ್ಲ. ಶಾಸಕರು ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರೆ ನಾವು ಹೋರಾಡುವ ಪರಿಸ್ಥಿತಿಯೇ ಇರುತ್ತಿರಲಿಲ್ಲ. ಸರಕಾರದ ನಿರ್ಧಾರ ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.
"ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ, ಬಾಕಿ ಇರುವ ಬೆಳೆ ವಿಮೆಗೆ ಹಾಗೂ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಹಣ ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ಈ ಕೂಡಲೇ ಆರಂಭಿಸಬೇಕು. ಈ ಪ್ರಕ್ರಿಯೆಯಲ್ಲಿ ವಿಳಂಬವಾದರೆ ಪರಿಹಾರ ಸಕಾಲದಲ್ಲಿ ದೊರೆಯದೆ ರೈತರು ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ. ಈ ವಿಷಯದಲ್ಲಿ ಕಾಲಹರಣ ಮಾಡಿದರೇ ನಮ್ಮ ಪಕ್ಷ ಮತ್ತೊಮ್ಮೆ ಉಗ್ರ ಹೋರಾಟ ಮಾಡುವುದು ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ.
    user_STAR OF KOPPAL
    STAR OF KOPPAL
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    3 hrs ago
  • ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಗೆ ಆದ್ಯತೆಗೆ ಯುವ ಕಾಂಗ್ರೆಸ್ ಒತ್ತಾಯ ಲಿಂಗಸುಗೂರು, ಸೆ.17: ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡಬೇಕು ಎಂದು ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ ಸೊಪ್ಪಿಮಠ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಕರೆಯ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ‘ನಿರುದ್ಯೋಗ ದಿನ’ವಾಗಿ ಆಚರಿಸಿ, ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಆಡಳಿತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರಿಗೆ ಅಗತ್ಯ ಪ್ರಮಾಣದಲ್ಲಿ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಯುವಕರ ಭವಿಷ್ಯದ ದೃಷ್ಟಿಯಿಂದ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಲಿಂಗಸುಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೌನೇಶ ಪೂಜಾರಿ, ಮುದಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಖದೀರ ಪಾನವಾಲೆ, ಮಾಜಿ ಅಧ್ಯಕ್ಷರಾದ ಕುಪ್ಪಣ್ಣ ಕೌತಾಳ, ವಾಸಿಮ್ ಪಾಶಾ ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
    2
    ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಗೆ ಆದ್ಯತೆಗೆ ಯುವ ಕಾಂಗ್ರೆಸ್ ಒತ್ತಾಯ
ಲಿಂಗಸುಗೂರು, ಸೆ.17: ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡಬೇಕು ಎಂದು ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ ಸೊಪ್ಪಿಮಠ ಒತ್ತಾಯಿಸಿದರು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಕರೆಯ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ‘ನಿರುದ್ಯೋಗ ದಿನ’ವಾಗಿ ಆಚರಿಸಿ, ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಆಡಳಿತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರಿಗೆ ಅಗತ್ಯ ಪ್ರಮಾಣದಲ್ಲಿ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಯುವಕರ ಭವಿಷ್ಯದ ದೃಷ್ಟಿಯಿಂದ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಲಿಂಗಸುಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೌನೇಶ ಪೂಜಾರಿ, ಮುದಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಖದೀರ ಪಾನವಾಲೆ, ಮಾಜಿ ಅಧ್ಯಕ್ಷರಾದ ಕುಪ್ಪಣ್ಣ ಕೌತಾಳ, ವಾಸಿಮ್ ಪಾಶಾ ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
    user_Amarayya Ghanti
    Amarayya Ghanti
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    6 hrs ago
  • ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಮಹೋತ್ಸವ: ಅದ್ಧೂರಿ ಗಣೇಶೋತ್ಸವಕ್ಕೆ ಚಾಲನೆ ಲಿಂಗಸುಗೂರು: ಪಟ್ಟಣದ ವಾಡಿ–7ರ ಏಕದಂತ ಗಣೇಶನ ಮಂಟಪದಲ್ಲಿ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಲಿಂಗಸುಗೂರು ಪಟ್ಟಣದ ವಾಡಿ–7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಭ್ರಮದಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಗಳು ಹಾಗೂ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು ನಡೆಸಲಾಯಿತು. ನಂತರ ವಿಜೇತರಾದ ಕ್ರೀಡಾಪಟುಗಳಿಗೆ ಏಕದಂತ ಗಜಾನನ ಮಂಡಳಿ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು. ಹಾಗೂ ಮೂರನೆ ದಿನ ಸಂಜೆ ಬಾಜಾ ಬಜಂತ್ರಿ ಯೊಂದಿಗೆ ನೃತ್ಯದೊಂದಿಗೆ ಅದ್ದೂರಿಯಾಗಿ ವಿಸರ್ಜನೆ ಕೈಗೊಳ್ಳಲಾಯಿತು.
    4
    ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7ರ ಏಕದಂತ ಗಜಾನನ ಮಂಡಳಿ ವತಿಯಿಂದ  8ನೇ ವರ್ಷದ ಮಹೋತ್ಸವ: ಅದ್ಧೂರಿ ಗಣೇಶೋತ್ಸವಕ್ಕೆ ಚಾಲನೆ
ಲಿಂಗಸುಗೂರು: ಪಟ್ಟಣದ ವಾಡಿ–7ರ ಏಕದಂತ ಗಣೇಶನ ಮಂಟಪದಲ್ಲಿ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. 

ಲಿಂಗಸುಗೂರು ಪಟ್ಟಣದ ವಾಡಿ–7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಭ್ರಮದಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಗಳು ಹಾಗೂ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು  ನಡೆಸಲಾಯಿತು. ನಂತರ ವಿಜೇತರಾದ ಕ್ರೀಡಾಪಟುಗಳಿಗೆ ಏಕದಂತ ಗಜಾನನ ಮಂಡಳಿ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು. ಹಾಗೂ ಮೂರನೆ ದಿನ ಸಂಜೆ ಬಾಜಾ ಬಜಂತ್ರಿ ಯೊಂದಿಗೆ ನೃತ್ಯದೊಂದಿಗೆ ಅದ್ದೂರಿಯಾಗಿ ವಿಸರ್ಜನೆ ಕೈಗೊಳ್ಳಲಾಯಿತು.
    user_ಸಿದ್ದನಗೌಡ ಪಾಟೀಲ್
    ಸಿದ್ದನಗೌಡ ಪಾಟೀಲ್
    Lingsugur, Raichur•
    21 hrs ago
  • ಬಿಜೆಪಿ ಕಾರ್ಯಾಗದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ
    3
    ಬಿಜೆಪಿ ಕಾರ್ಯಾಗದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ
    user_ಟಿ.ಉಮೇಶ ಮರ್ಲಾನಹಳ್ಳಿ
    ಟಿ.ಉಮೇಶ ಮರ್ಲಾನಹಳ್ಳಿ
    Local News Reporter ಕಾರಟಗಿ, ಕೊಪ್ಪಳ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.