logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಕಾಯಕ ಮತ್ತು ದಾಸೋಹ ಪರಂಪರೆ ಇಂದಿಗೂ ಜೀವಂತ: ಡಾ. ಕೆ ರವೀಂದ್ರನಾಥ್ ಕೂಡ್ಲಿಗಿ: ಬಸವಾದಿ ಶರಣರು ಪ್ರತಿಪಾದಿಸಿದ "ಕಾಯಕವೇ ಕೈಲಾಸ" ಮತ್ತು "ದಾಸೋಹವೇ ಧರ್ಮ" ಎಂಬ ತತ್ವಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿವೆ ಎಂದು ಹಂಪಿ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ರವಿಂದ್ರನಾಥ್ ಹೇಳಿದರು. ಕಾನಾ ಮಡಗು ಶರಣಬಸವೇಶ್ವರ ದಾಸೋಹ ಮಠದ ಆವರಣದಲ್ಲಿ ಆಯೋಜಿಸಿದ್ದ *ದಾಸೋಹ ಪೌರ್ಣಿಮೆ* ಕಾರ್ಯಕ್ರಮದಲ್ಲಿ ಮಾತನಾಡಿ, ಶರಣರ ಕಾಯಕ ಮತ್ತು ದಾಸೋಹ ಪರಂಪರೆ ಕೇವಲ ಇತಿಹಾಸದ ಪುಟಗಳಿಗೆ ಸೀಮಿತವಾಗಿಲ್ಲ. ಇಂದಿಗೂ ಅನೇಕ ಮಠಗಳು, ಧಾರ್ಮಿಕ ಸಂಸ್ಥೆಗಳು ಹಾಗೂ ಸಮಾಜಸೇವಾ ಸಂಘಟನೆಗಳು ಅನ್ನದಾಸೋಹ, ಶಿಕ್ಷಣ, ಆರೋಗ್ಯ ಸೇವೆ ಮತ್ತು ಮಾನವೀಯ ಕಾರ್ಯಗಳ ಮೂಲಕ ಈ ಪರಂಪರೆಯನ್ನು ಜೀವಂತವಾಗಿರಿಸಿಕೊಂಡಿವೆ ಎಂದು ತಿಳಿಸಿದರು. ಶ್ರಮಕ್ಕೆ ಗೌರವ ನೀಡುವ ಮನೋಭಾವವೇ ಕಾಯಕದ ಸಾರವಾಗಿದ್ದು, ದುಡಿದು ಸಂಪಾದಿಸಿದ ಸಂಪತ್ತನ್ನು ಸಮಾಜದ ಒಳಿತಿಗಾಗಿ ಹಂಚಿಕೊಳ್ಳುವುದೇ ದಾಸೋಹದ ನಿಜವಾದ ಅರ್ಥವಾಗಿದೆ. ಇಂದಿನ ಯುವಜನತೆ ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಂಡು ಪ್ರಾಮಾಣಿಕ ಶ್ರಮ, ಸಾಮಾಜಿಕ ಕಾಳಜಿ ಮತ್ತು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಸಮಾಜದಲ್ಲಿ ಜಾತಿ, ಮತ, ಪಂಥಗಳ ಭೇದವಿಲ್ಲದೆ ಸಮಾನತೆ ಮತ್ತು ಸಹಬಾಳ್ವೆಯನ್ನು ಬೆಳೆಸುವ ಶಕ್ತಿಯು ಬಸವ ತತ್ವಗಳಲ್ಲಿದೆ. ಕಾಯಕ ಮತ್ತು ದಾಸೋಹ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಆರೋಗ್ಯಕರ, ಸಮಾನತೆಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಕಾರ್ಯಕ್ರಮ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎನ್ಎಂ ರವಿಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು ದಾಸೋಹ ಪೌರ್ಣಿಮೆ ಕಾರ್ಯಕ್ರಮವನ್ನು ಷ.ಬ್ರ. ಯೋಗಿರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಪಾದಪೂಜೆ ಮಾಡುವುದರ ಮುಖಾಂತರ ದಾಸೋಹ ಪೂರ್ಣಿಮೆ ಕಾರ್ಯಕ್ರಮಕ್ಕೆ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾ.ಮ ಐಮಡಿ ಶರಣಾರ್ಯರು ಧರ್ಮಾಧಿಕಾರಿಗಳುವಹಿಸಿಕೊಂಡಿದ್ದರು. ಹಗರಿಬೊಮ್ಮನಹಳ್ಳಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಎಂಪಿಎಂ ಮಂಜುನಾಥ್ ಕಾರ್ಯಕ್ರಮದ ಕುರಿತು ಮಾತನಾಡಿದರು ಇದೇ ಸಂದರ್ಭದಲ್ಲಿ ನೀರಗಂಟಿ ಶರಣಪ್ಪ, ಚನ್ನವೀರ ಸ್ವಾಮಿ, ಎಚ್ಎಂಬಿ ಗುರುಮೂರ್ತಿ, ಕೆ ಸುಭಾಷ್ ಚಂದ್ರ, ಆಲೂರು ಮಲ್ಲಿಕಾರ್ಜುನ, ಸುರೇಶ್, ಸೋಮಶೇಖರಪ್ಪ, ತಿಪ್ಪೇಸ್ವಾಮಿ, ಸೇರಿದಂತೆ, ಶರಣ ಸಾಹಿತ್ಯಾಸಕ್ತರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ತಳವಾರ್ ಶರಣಪ್ಪ, ಸ್ವಾಗತಿಸಿದರು. ದಿವಾಕರ್ ನಾರಾಯಣ ಕಾರ್ಯಕ್ರಮದ ನಿರೂಪಿಸಿದರು. ನುಂಕೇಶ್ ಓಬಶೆಟ್ಟಿಹಳ್ಳಿ ತಂಡ ವಚನ ಗಾಯನ ಕಾರ್ಯಕ್ರಮ ನೆರವೇರಿಸಿದರು

19 hrs ago
user_ಹೂಡೇಂ ಮಂಜುನಾಥ
ಹೂಡೇಂ ಮಂಜುನಾಥ
Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
19 hrs ago
ebbb3f78-0ab8-4947-92f8-f5067cdb007c

*ಕಾಯಕ ಮತ್ತು ದಾಸೋಹ ಪರಂಪರೆ ಇಂದಿಗೂ ಜೀವಂತ: ಡಾ. ಕೆ ರವೀಂದ್ರನಾಥ್ ಕೂಡ್ಲಿಗಿ: ಬಸವಾದಿ ಶರಣರು ಪ್ರತಿಪಾದಿಸಿದ "ಕಾಯಕವೇ ಕೈಲಾಸ" ಮತ್ತು "ದಾಸೋಹವೇ ಧರ್ಮ" ಎಂಬ ತತ್ವಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿವೆ ಎಂದು ಹಂಪಿ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ರವಿಂದ್ರನಾಥ್ ಹೇಳಿದರು. ಕಾನಾ ಮಡಗು ಶರಣಬಸವೇಶ್ವರ ದಾಸೋಹ ಮಠದ ಆವರಣದಲ್ಲಿ ಆಯೋಜಿಸಿದ್ದ *ದಾಸೋಹ ಪೌರ್ಣಿಮೆ* ಕಾರ್ಯಕ್ರಮದಲ್ಲಿ ಮಾತನಾಡಿ, ಶರಣರ ಕಾಯಕ ಮತ್ತು ದಾಸೋಹ ಪರಂಪರೆ ಕೇವಲ ಇತಿಹಾಸದ ಪುಟಗಳಿಗೆ ಸೀಮಿತವಾಗಿಲ್ಲ. ಇಂದಿಗೂ ಅನೇಕ ಮಠಗಳು, ಧಾರ್ಮಿಕ ಸಂಸ್ಥೆಗಳು ಹಾಗೂ ಸಮಾಜಸೇವಾ ಸಂಘಟನೆಗಳು ಅನ್ನದಾಸೋಹ, ಶಿಕ್ಷಣ, ಆರೋಗ್ಯ ಸೇವೆ ಮತ್ತು ಮಾನವೀಯ ಕಾರ್ಯಗಳ ಮೂಲಕ ಈ ಪರಂಪರೆಯನ್ನು ಜೀವಂತವಾಗಿರಿಸಿಕೊಂಡಿವೆ ಎಂದು ತಿಳಿಸಿದರು. ಶ್ರಮಕ್ಕೆ ಗೌರವ ನೀಡುವ ಮನೋಭಾವವೇ ಕಾಯಕದ ಸಾರವಾಗಿದ್ದು, ದುಡಿದು ಸಂಪಾದಿಸಿದ ಸಂಪತ್ತನ್ನು ಸಮಾಜದ ಒಳಿತಿಗಾಗಿ ಹಂಚಿಕೊಳ್ಳುವುದೇ ದಾಸೋಹದ ನಿಜವಾದ ಅರ್ಥವಾಗಿದೆ. ಇಂದಿನ ಯುವಜನತೆ ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಂಡು ಪ್ರಾಮಾಣಿಕ ಶ್ರಮ, ಸಾಮಾಜಿಕ ಕಾಳಜಿ ಮತ್ತು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಸಮಾಜದಲ್ಲಿ ಜಾತಿ, ಮತ, ಪಂಥಗಳ ಭೇದವಿಲ್ಲದೆ ಸಮಾನತೆ ಮತ್ತು ಸಹಬಾಳ್ವೆಯನ್ನು ಬೆಳೆಸುವ ಶಕ್ತಿಯು ಬಸವ ತತ್ವಗಳಲ್ಲಿದೆ. ಕಾಯಕ ಮತ್ತು ದಾಸೋಹ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಆರೋಗ್ಯಕರ, ಸಮಾನತೆಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಕಾರ್ಯಕ್ರಮ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎನ್ಎಂ ರವಿಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು ದಾಸೋಹ ಪೌರ್ಣಿಮೆ ಕಾರ್ಯಕ್ರಮವನ್ನು ಷ.ಬ್ರ. ಯೋಗಿರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಪಾದಪೂಜೆ ಮಾಡುವುದರ ಮುಖಾಂತರ ದಾಸೋಹ ಪೂರ್ಣಿಮೆ ಕಾರ್ಯಕ್ರಮಕ್ಕೆ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾ.ಮ ಐಮಡಿ ಶರಣಾರ್ಯರು ಧರ್ಮಾಧಿಕಾರಿಗಳುವಹಿಸಿಕೊಂಡಿದ್ದರು. ಹಗರಿಬೊಮ್ಮನಹಳ್ಳಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಎಂಪಿಎಂ ಮಂಜುನಾಥ್ ಕಾರ್ಯಕ್ರಮದ ಕುರಿತು ಮಾತನಾಡಿದರು ಇದೇ ಸಂದರ್ಭದಲ್ಲಿ ನೀರಗಂಟಿ ಶರಣಪ್ಪ, ಚನ್ನವೀರ ಸ್ವಾಮಿ, ಎಚ್ಎಂಬಿ ಗುರುಮೂರ್ತಿ, ಕೆ ಸುಭಾಷ್ ಚಂದ್ರ, ಆಲೂರು ಮಲ್ಲಿಕಾರ್ಜುನ, ಸುರೇಶ್, ಸೋಮಶೇಖರಪ್ಪ, ತಿಪ್ಪೇಸ್ವಾಮಿ, ಸೇರಿದಂತೆ, ಶರಣ ಸಾಹಿತ್ಯಾಸಕ್ತರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ತಳವಾರ್ ಶರಣಪ್ಪ, ಸ್ವಾಗತಿಸಿದರು. ದಿವಾಕರ್ ನಾರಾಯಣ ಕಾರ್ಯಕ್ರಮದ ನಿರೂಪಿಸಿದರು. ನುಂಕೇಶ್ ಓಬಶೆಟ್ಟಿಹಳ್ಳಿ ತಂಡ ವಚನ ಗಾಯನ ಕಾರ್ಯಕ್ರಮ ನೆರವೇರಿಸಿದರು

More news from ಕರ್ನಾಟಕ and nearby areas
  • ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ_ವಿಜಯನಗರ ಜಿಲ್ಲೆ ಕೂಡ್ಲಿಗಿ *ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ*_ವಿಜಯನಗರ ಜಿಲ್ಲೆ ಕೂಡ್ಲಿಗಿ : ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಜುಲೈ 31ರಂದು , ಉಪ ಆರೋಗ್ಯಕೇಂದ್ರದಲ್ಲಿ ಡಿ ದರ್ಜೆ ನೌಕರರಾದ RNK ನಿಜಲಿಂಗಪ್ಪರವರಿಗೆ. ವಯೋ ನಿವೃತ್ತಿ ಹೊಂದಿದ RNK ನಿಜಲಿಂಗಪ್ಪರವರನ್ನು , ಆರೋಗ್ಯ ಸಿಬ್ಬಂದಿ ಹ‍ಾಗೂ ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು , ಅವರನ್ನು ಸನ್ಮಾನಿಸಿ ಗೌರವ ಪೂರ್ವಕವಾಗಿ ಬಿಳ್ಕೊಟ್ಟರು. ಮೂಲತಃ ಕೊಟ್ಟೂರು ರಾಂಪುರ ಗ್ರಾಮದವರಾದ , ನಿಜಲಿಂಗಪ್ಪರವರು. ಕಳೆದ ಮೂರು ದಶಕಗಳ ಹಿಂದೆಯೇ , ಬಳ್ಳಾರಿಯ ರೇಷ್ಮೆ ಇಲಾಖೆಯಲ್ಲಿ. ಮಾಸಿಕ ಭತ್ಯೆ ಹೊರಗುತ್ತಿಗೆ ಆಧಾರದಂತೆ , ಹತ್ತು ವರ್ಷಗಳ ಕಾಲ ಡಿ ದರ್ಜೆ ನೌಕರರಾಗಿ ಕರ್ಥವ್ಯೆ ನಿರ್ವಹಿಸಿದ್ದರು. ತದನಂತರ ಆರೊಗ್ಯ ಇಲಾಖೆಯಲ್ಲಿ ಕೆಲ ವರ್ಷಗಳ ಕಾಲ , ಹೊರಗುತ್ತಿಗೆ ಡಿ ದರ್ಜೆ ನೌಕರಾಗಿ ಕರ್ಥವ್ಯ ನಿರ್ವಹಿಸಿದರು. ನಂತರ ವಷ್ಠೆ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ , ಖಾಯಂ ನೌಕರರಾಗಿ ಗುರುತಿಸಿಕೊಂಡು ಮೂರುವರೆ ದಶಕಗಳ ಕಾಲ ಡಿ ದರ್ಜೆ ನೌಕರರಾರಿ ಕರ್ಥವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ್ದಾರೆ. ನಿಜಲಿಂಪ್ಪರವರು ಚಿಕ್ಕಜೋಗಳ್ಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ , 1998 ರಿಂದ ಸೇವೆ ಆರಂಭಿಸಿ ಜುಲೈ 31 2026 ರವರೆಗೆ. ಅಂದರೆ ಸತತ 34 ವರ್ಷಗಳ ಕಾಲ , ಚಿಕ್ಕಜೋಗಿಹಳ್ಳಿ ಉಪ ಆರೋಗ್ಯಕೇಂದ್ರದಲ್ಲಿ ಸೇವೆ ಸಲ್ಪಿಸಿದ್ದಾರೆ. 31 7 2026ರಂದು , ಅವರು ವಯೋ ನಿವೃತ್ತಿ ಹೊಂದಿರುತ್ತಾರೆ. ಅವರ ಸಾರ್ಥಕ ಸೇವೆ ಹಾಗೂ ಸನ್ನಡತೆ ಮೆಚ್ಚಿದ , ಆರೋಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು. ಮತ್ತು ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ , ವಿವಿದ ಸಂಘಟನೆಗಳ ಪದಾಧಿಕಾರಿಗಳು. ನಿಜಲಿಂಗಪ್ಪರವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ , ಅಭಿಮಾನದಿಂದ ಹಾರೈಸಿ ಸರಳ ಬೀಳ್ಕೊಡುಗೆ ಸಮಾರಂಭದ ಮೂಲಕ ಬೀಳ್ಕೊಟ್ಟಿದ್ದಾರೆ. ಡಾ ॥ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ಮಹಮದ್ ಸಾಧಿಕ್ ರವರು ಮಾತನಾಡಿ , ನಿಜಲಿಂಗಪ್ಪರವರು ಸಜ್ಜನ ಪ್ರಾಮಾಣಿಕ ನೌಕರರಾಗಿದ್ದರು. ಅವರು ಕಿಂಚಿತ್ತು ಯಾವುದೇ ದೋಷರೋಪಗಳಿಲ್ಲದೆ , ನಿಷ್ಕಳಂಕದಿಂದ ಮೂರುವರೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದು. ನಿಜಲಿಂಗಪ್ಪರವರ ಸಾರ್ಥಕ ಸೇವೆಗಾಗಿ , ಅವರನ್ನು ಅವರ ಮಡದಿಯೊಡಗೂಡಿ ತಾವು ಗೌರವಿಸಿ ಸನ್ಮ‍ಾನಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅವರಿಗೆ ಮುಂದಿನ ಆರೋಗ್ಯ ಆಯಸ್ಸು ಸುಖಮಯವಾಗಿರಲೆಂದು , ತಾವು ದೇವರಲ್ಲಿ ಕೋರುವುದಾಗಿ ಅವರು ತಿಳಿಸಿದ್ದಾರೆ. ವಿಷ್ಣು ಸೇನಾ ಸಮಿತಿ ಮುಖಂಡರಾದ ಜನನಾಯಕ ಕುರಿಹಟ್ಟಿ ಓಬಣ್ಣ , ಮಲಿಯಪ್ಪ , ರಾಜು ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು ಸದಸ್ಯರು. ಮತ್ತು ಆರೊಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು ಉಪಸ್ಥಿತರಿದ್ದು. ನಿಜಲಿಂಗಪ್ಪರವರಿಗೆ ನಿವೃತ್ತಿ ಜೀವನ , ಸುಖಮಯವಾಗಿರಲೆಂದು ಶುಭ ಹಾರೈಸಿದ್ದಾರೆ. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    3
    ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ -  ಬೀಳ್ಕೊಡುಗೆ_ವಿಜಯನಗರ ಜಿಲ್ಲೆ ಕೂಡ್ಲಿಗಿ
*ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ -  ಬೀಳ್ಕೊಡುಗೆ*_ವಿಜಯನಗರ ಜಿಲ್ಲೆ ಕೂಡ್ಲಿಗಿ : ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಜುಲೈ 31ರಂದು , ಉಪ ಆರೋಗ್ಯಕೇಂದ್ರದಲ್ಲಿ ಡಿ ದರ್ಜೆ ನೌಕರರಾದ RNK ನಿಜಲಿಂಗಪ್ಪರವರಿಗೆ. ವಯೋ ನಿವೃತ್ತಿ ಹೊಂದಿದ RNK ನಿಜಲಿಂಗಪ್ಪರವರನ್ನು , ಆರೋಗ್ಯ ಸಿಬ್ಬಂದಿ ಹ‍ಾಗೂ ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು , ಅವರನ್ನು ಸನ್ಮಾನಿಸಿ ಗೌರವ ಪೂರ್ವಕವಾಗಿ  ಬಿಳ್ಕೊಟ್ಟರು. ಮೂಲತಃ ಕೊಟ್ಟೂರು ರಾಂಪುರ ಗ್ರಾಮದವರಾದ , ನಿಜಲಿಂಗಪ್ಪರವರು. ಕಳೆದ ಮೂರು ದಶಕಗಳ ಹಿಂದೆಯೇ , ಬಳ್ಳಾರಿಯ ರೇಷ್ಮೆ ಇಲಾಖೆಯಲ್ಲಿ. ಮಾಸಿಕ ಭತ್ಯೆ ಹೊರಗುತ್ತಿಗೆ  ಆಧಾರದಂತೆ , ಹತ್ತು ವರ್ಷಗಳ ಕಾಲ ಡಿ ದರ್ಜೆ ನೌಕರರಾಗಿ ಕರ್ಥವ್ಯೆ ನಿರ್ವಹಿಸಿದ್ದರು. ತದನಂತರ ಆರೊಗ್ಯ ಇಲಾಖೆಯಲ್ಲಿ ಕೆಲ ವರ್ಷಗಳ ಕಾಲ , ಹೊರಗುತ್ತಿಗೆ ಡಿ ದರ್ಜೆ ನೌಕರಾಗಿ ಕರ್ಥವ್ಯ ನಿರ್ವಹಿಸಿದರು. ನಂತರ ವಷ್ಠೆ  ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ,  ಖಾಯಂ ನೌಕರರಾಗಿ ಗುರುತಿಸಿಕೊಂಡು ಮೂರುವರೆ ದಶಕಗಳ ಕಾಲ ಡಿ ದರ್ಜೆ ನೌಕರರಾರಿ ಕರ್ಥವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ್ದಾರೆ. ನಿಜಲಿಂಪ್ಪರವರು ಚಿಕ್ಕಜೋಗಳ್ಳಿಯ  ಸಮುದಾಯ ಆರೋಗ್ಯ ಕೇಂದ್ರದಲ್ಲಿ , 1998 ರಿಂದ ಸೇವೆ ಆರಂಭಿಸಿ ಜುಲೈ 31 2026 ರವರೆಗೆ. ಅಂದರೆ ಸತತ 34 ವರ್ಷಗಳ ಕಾಲ , ಚಿಕ್ಕಜೋಗಿಹಳ್ಳಿ ಉಪ ಆರೋಗ್ಯಕೇಂದ್ರದಲ್ಲಿ ಸೇವೆ ಸಲ್ಪಿಸಿದ್ದಾರೆ.  31 7 2026ರಂದು ,  ಅವರು ವಯೋ ನಿವೃತ್ತಿ ಹೊಂದಿರುತ್ತಾರೆ. ಅವರ ಸಾರ್ಥಕ ಸೇವೆ ಹಾಗೂ ಸನ್ನಡತೆ ಮೆಚ್ಚಿದ , ಆರೋಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು. ಮತ್ತು ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ , ವಿವಿದ ಸಂಘಟನೆಗಳ ಪದಾಧಿಕಾರಿಗಳು. ನಿಜಲಿಂಗಪ್ಪರವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ , ಅಭಿಮಾನದಿಂದ ಹಾರೈಸಿ ಸರಳ ಬೀಳ್ಕೊಡುಗೆ ಸಮಾರಂಭದ ಮೂಲಕ ಬೀಳ್ಕೊಟ್ಟಿದ್ದಾರೆ.  ಡಾ ॥ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ಮಹಮದ್ ಸಾಧಿಕ್ ರವರು ಮಾತನಾಡಿ , ನಿಜಲಿಂಗಪ್ಪರವರು ಸಜ್ಜನ ಪ್ರಾಮಾಣಿಕ ನೌಕರರಾಗಿದ್ದರು. ಅವರು ಕಿಂಚಿತ್ತು ಯಾವುದೇ ದೋಷರೋಪಗಳಿಲ್ಲದೆ , ನಿಷ್ಕಳಂಕದಿಂದ ಮೂರುವರೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದು. ನಿಜಲಿಂಗಪ್ಪರವರ ಸಾರ್ಥಕ ಸೇವೆಗಾಗಿ , ಅವರನ್ನು ಅವರ ಮಡದಿಯೊಡಗೂಡಿ ತಾವು ಗೌರವಿಸಿ ಸನ್ಮ‍ಾನಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅವರಿಗೆ ಮುಂದಿನ ಆರೋಗ್ಯ ಆಯಸ್ಸು ಸುಖಮಯವಾಗಿರಲೆಂದು , ತಾವು ದೇವರಲ್ಲಿ ಕೋರುವುದಾಗಿ ಅವರು ತಿಳಿಸಿದ್ದಾರೆ. ವಿಷ್ಣು ಸೇನಾ ಸಮಿತಿ ಮುಖಂಡರಾದ ಜನನಾಯಕ ಕುರಿಹಟ್ಟಿ ಓಬಣ್ಣ , ಮಲಿಯಪ್ಪ , ರಾಜು  ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು  ಸದಸ್ಯರು. ಮತ್ತು ಆರೊಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು ಉಪಸ್ಥಿತರಿದ್ದು. ನಿಜಲಿಂಗಪ್ಪರವರಿಗೆ ನಿವೃತ್ತಿ ಜೀವನ , ಸುಖಮಯವಾಗಿರಲೆಂದು ಶುಭ ಹಾರೈಸಿದ್ದಾರೆ. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    8 hrs ago
  • ರೈತರ ಹಕ್ಕಿಗಾಗಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ಬ್ಯಾಲಿಗೆ ಅಭೂತಪೂರ್ವ ಜನಬೆಂಬಲ ಸಾವಿರಾರು ರೈತರು, ವಿವಿಧ ರೈತಪರ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಭಾಗವಹಿಸಿ ರೈತರ ನ್ಯಾಯಸಮ್ಮತ ನೀರಿನ ಹಕ್ಕಿಗಾಗಿ ಧ್ವನಿಯಾಗಿದ್ದಾರೆ.
    1
    ರೈತರ ಹಕ್ಕಿಗಾಗಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ಬ್ಯಾಲಿಗೆ ಅಭೂತಪೂರ್ವ ಜನಬೆಂಬಲ
ಸಾವಿರಾರು ರೈತರು, ವಿವಿಧ ರೈತಪರ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಭಾಗವಹಿಸಿ ರೈತರ ನ್ಯಾಯಸಮ್ಮತ ನೀರಿನ ಹಕ್ಕಿಗಾಗಿ ಧ್ವನಿಯಾಗಿದ್ದಾರೆ.
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    14 hrs ago
  • ಗುರು ಕನಕ ವಿದ್ಯಾ ಕೇಂದ್ರದಲ್ಲಿ ಗುರು ಪೂರ್ಣಿಮೆ: ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಕೂಡ್ಲಿಗಿ: ತಾಲೂಕಿನ ತಾಯಕನಹಳ್ಳಿ ಶ್ರೀ ಗುರು ಕನಕ ವಿದ್ಯಾ ಕೇಂದ್ರದಲ್ಲಿ ಬುಧವಾರ ಗುರು ಪೂರ್ಣಿಮೆ ಪ್ರಯುಕ್ತ ಅಕ್ಷರಭ್ಯಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಎಲ್.ಕೆ ಜಿ ಮಕ್ಕಳಿಗೆ ಸಾಮೂಹಿಕವಾಗಿ ಅಕ್ಷರಭ್ಯಾಸ ಆರಂಭೋತ್ಸವವನ್ನು ಪಾಲಕ ಪೋಷಕರು ಅದ್ದೂರಿಯಾಗಿ ಭಾಗವಹಿಸಿ ತಮ್ಮ ಮಕ್ಕಳಿಗೆ ಗುರುಗಳ ಸಮ್ಮುಖದಲ್ಲಿ ವೇದೋಕ್ತವಾಗಿ ಅಕ್ಷರ ಅಭ್ಯಾಸವನ್ನು ಮಾಡಿಸಿ ಧನ್ಯತಾಭಾವವನ್ನು ತಳಿದರು. 40 ಕ್ಕೂ ಹೆಚ್ಚು ಮಕ್ಕಳು ಪೋಷಕರ ಜೊತೆಗೂಡಿ ಅಕ್ಷರಾಭ್ಯಾಸ ಮಾಡಿದರು. ಪೋಷಕರು ಕೂಡ ಗುರುಕುಲ ಪದ್ಧತಿಯ ಅಕ್ಷರಾಭ್ಯಾಸ ಮಾಡಿಸುವ ಕಾರ್ಯಕ್ರಮದಿಂದ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿಗಳು ಬಿ.ಟಿ. ಮಂಜಣ್ಣ ಮಾತನಾಡಿ, ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಮಕ್ಕಳಿಗೆ ಮನೆಯ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರು ಮಕ್ಕಳಿಗೆ ಮನೆಯಿಂದಲೇ ಉತ್ತಮ ಸಂಸ್ಕಾರ ನೀಡಿ. ಅಮೃತ ಹಸ್ತದಿಂದ ಗುರುಗಳ ಮಾರ್ಗದರ್ಶನದಿಂದ ಗುರುಪೂರ್ಣಿಮೆಯ ದಿನ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದು ಸಂಪ್ರದಾಯವಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲೆಂಬ ಮತ್ತು ಗುಣಮಟ್ಟದ ಶಿಕ್ಷಣ ಪಡೆಯಲೆಂಬ ಸದುದ್ದೇಶದಿಂದ ಸಂಸ್ಥೆ ವತಿಯಿಂದ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆಯಬೇಕು. ಋಷಿಮುನಿಗಳ ಕಾಲದಲ್ಲಿ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡಿಸಿ ಸಮಾಜದ ಸತ್ಪಜೆಗಳನ್ನಾಗಿ ರೂಪಿಸುತ್ತಿದ್ದರು. ಅದೇ ಮಾದರಿಯಲ್ಲಿ ಮಕ್ಕಳಿಗೆ ಸಂಸ್ಕಾರ, ಮೌಲ್ಯಗಳನ್ನು ಕಲಿಸಿ ಸನ್ಮಾರ್ಗದತ್ತ ನಡೆಯುವಂತೆ ಪ್ರೇರೇಪಿಸುವ ಜೊತೆಗೆ ಗುಣಮಟ್ಟದ ಸಂಸ್ಕಾರ ಪೋಷಕರು ಮಹತ್ತರ ಜವಾಬ್ದಾರಿಯಾಗಿದೆ. ಇತ್ತೀಚೆಗಿನ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್ ಬಳಕೆ ಜಾಸ್ತಿಯಾಗಿದ್ದು, ಇದನ್ನು ತಡೆಯಬೇಕು. ಮೊಬೈಲ್ ಸದ್ಬಳಕೆ ಎಷ್ಟು ಉಪಯುಕ್ತವೋ ಅಷ್ಟೇ ದುರ್ಬಳಕೆ ಅವಕಾಶಗಳು ಇದರಲ್ಲಿ ಸಾಕಷ್ಟು ಅಡಗಿದೆ. ಹೀಗಿರುವಾಗ ಮಕ್ಕಳಿಗೆ ತಮ್ಮ ವಿದ್ಯಾಭ್ಯಾಸದ ಸಮಯದಲ್ಲಿ ಪೋಷಕರು ಮೊಬೈಲ್ ಕೊಡಿಸುವುದು ತರವಲ್ಲ. ಮೊಬೈಲನ್ನು ಅಗತ್ಯಕ್ಕಿಂತ ಹೆಚ್ಚು ಬಳಕೆ ಮಾಡುವುದು ಸರಿಯಿಲ್ಲ, ಅದರ ಅತಿಯಾದ ಬಳಕೆಯಿಂದ ತಮ್ಮ ವಿದ್ಯಾರ್ಥಿ ಜೀವನ ಹಾಳಾಗುತ್ತದೆ ಎಂಬ ಪರಿಜ್ಞಾನ ಮಕ್ಕಳಲ್ಲಿ ಬೆಳೆಯುವ ವಯಸ್ಸಿನವರೆಗೂ ಅವರಿಗೆ ಮೊಬೈಲ್ ಕೊಡಿಸುವುದು ಸೂಕ್ತವಲ್ಲ. ಇದರಿಂದ ಅವರ ಬುದ್ಧಿಶಕ್ತಿ ಬೆಳವಣಿಗೆ ಕುಂಠಿತಗೊಳ್ಳಲಿದೆ ಎಂದರು‌. ಈ ವೇಳೆ ಸುನಿತಾ ಗುರುರಾಜ್ ಮುಖ್ಯ ಶಿಕ್ಷಕಿ ಪ್ರಾಸ್ತಾವಿಕವಾಗಿ ಮಾತನಾಡಿ ಗು-ಎಂದರೆ ಅಂಧಕಾರ ರ-ಎಂದರೆ ಕಳೆಯುವ ಅಜ್ಞಾನದಿಂದ ಜ್ಞಾನದ ಕಡೆಗೆ ಕೊಂಡೊಯ್ಯುವ ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಶಕ್ತಿ ಗುರು ತಂದೆ ತಾಯಿ ಹೊರತುಪಡಿಸಿ ಗುರು ವ್ಯಕ್ತಿಯ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ ಅವರಿಗೆ ಗೌರವ ಸಮರ್ಪಣೆ ಮಾಡುವ ದಿನ ಇದಾಗಿದೆ. ಗುರುಪೂರ್ಣಿಮೆ ಮಾಹಿತಿ ತಿಳಿಸಿ ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡಿ ಎಂದು ತಿಳಿಸಿದರು. ಈ ವೇಳೆ ಚಿಕ್ಕೋವನಹಳ್ಳಿ ಶ್ರೀ ವೀರೇಶ ಸ್ವಾಮಿ ಪುರೋಹಿತರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕರಾದ ಹಂಪಮ್ಮ ಪೂಜಾರ್, ಮಂಜುಳಾ, ಸುಮಿತ್ರ, ರುದ್ರಮ್ಮ, ನೇತ್ರಾವತಿ, ಮಮತಾ, ಜಿಪಿ ಬಸವರಾಜ್, ಬೋಧಕೇತರ ಸಿಬ್ಬಂದಿ ವರ್ಗದವರಾದ ಮಲ್ಲಿಕಾರ್ಜುನ ಶಾಂತಕುಮಾರ್ ವನಜಾಕ್ಷಮ್ಮ ಹಾಗೂ ಶಾಲಾ ಮಕ್ಕಳು, ಪೋಷಕರು ಭಾಗವಹಿಸಿದ್ದರು.
    1
    ಗುರು ಕನಕ ವಿದ್ಯಾ ಕೇಂದ್ರದಲ್ಲಿ ಗುರು ಪೂರ್ಣಿಮೆ: ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ
ಕೂಡ್ಲಿಗಿ: ತಾಲೂಕಿನ ತಾಯಕನಹಳ್ಳಿ ಶ್ರೀ ಗುರು ಕನಕ ವಿದ್ಯಾ ಕೇಂದ್ರದಲ್ಲಿ ಬುಧವಾರ ಗುರು ಪೂರ್ಣಿಮೆ ಪ್ರಯುಕ್ತ ಅಕ್ಷರಭ್ಯಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಎಲ್.ಕೆ ಜಿ ಮಕ್ಕಳಿಗೆ ಸಾಮೂಹಿಕವಾಗಿ ಅಕ್ಷರಭ್ಯಾಸ ಆರಂಭೋತ್ಸವವನ್ನು ಪಾಲಕ ಪೋಷಕರು ಅದ್ದೂರಿಯಾಗಿ ಭಾಗವಹಿಸಿ ತಮ್ಮ ಮಕ್ಕಳಿಗೆ ಗುರುಗಳ ಸಮ್ಮುಖದಲ್ಲಿ ವೇದೋಕ್ತವಾಗಿ ಅಕ್ಷರ ಅಭ್ಯಾಸವನ್ನು ಮಾಡಿಸಿ ಧನ್ಯತಾಭಾವವನ್ನು ತಳಿದರು. 40 ಕ್ಕೂ ಹೆಚ್ಚು ಮಕ್ಕಳು ಪೋಷಕರ ಜೊತೆಗೂಡಿ ಅಕ್ಷರಾಭ್ಯಾಸ ಮಾಡಿದರು. ಪೋಷಕರು ಕೂಡ ಗುರುಕುಲ ಪದ್ಧತಿಯ ಅಕ್ಷರಾಭ್ಯಾಸ ಮಾಡಿಸುವ ಕಾರ್ಯಕ್ರಮದಿಂದ ಸಂತಸ ವ್ಯಕ್ತಪಡಿಸಿದರು. 
ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿಗಳು ಬಿ.ಟಿ. ಮಂಜಣ್ಣ ಮಾತನಾಡಿ, ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಮಕ್ಕಳಿಗೆ ಮನೆಯ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರು ಮಕ್ಕಳಿಗೆ ಮನೆಯಿಂದಲೇ ಉತ್ತಮ ಸಂಸ್ಕಾರ ನೀಡಿ. ಅಮೃತ ಹಸ್ತದಿಂದ ಗುರುಗಳ ಮಾರ್ಗದರ್ಶನದಿಂದ ಗುರುಪೂರ್ಣಿಮೆಯ ದಿನ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದು ಸಂಪ್ರದಾಯವಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲೆಂಬ ಮತ್ತು ಗುಣಮಟ್ಟದ ಶಿಕ್ಷಣ ಪಡೆಯಲೆಂಬ ಸದುದ್ದೇಶದಿಂದ ಸಂಸ್ಥೆ ವತಿಯಿಂದ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆಯಬೇಕು. ಋಷಿಮುನಿಗಳ ಕಾಲದಲ್ಲಿ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡಿಸಿ ಸಮಾಜದ ಸತ್ಪಜೆಗಳನ್ನಾಗಿ ರೂಪಿಸುತ್ತಿದ್ದರು. ಅದೇ ಮಾದರಿಯಲ್ಲಿ ಮಕ್ಕಳಿಗೆ ಸಂಸ್ಕಾರ, ಮೌಲ್ಯಗಳನ್ನು ಕಲಿಸಿ ಸನ್ಮಾರ್ಗದತ್ತ ನಡೆಯುವಂತೆ ಪ್ರೇರೇಪಿಸುವ ಜೊತೆಗೆ ಗುಣಮಟ್ಟದ ಸಂಸ್ಕಾರ ಪೋಷಕರು ಮಹತ್ತರ ಜವಾಬ್ದಾರಿಯಾಗಿದೆ. ಇತ್ತೀಚೆಗಿನ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್ ಬಳಕೆ ಜಾಸ್ತಿಯಾಗಿದ್ದು, ಇದನ್ನು ತಡೆಯಬೇಕು. ಮೊಬೈಲ್ ಸದ್ಬಳಕೆ ಎಷ್ಟು ಉಪಯುಕ್ತವೋ ಅಷ್ಟೇ ದುರ್ಬಳಕೆ ಅವಕಾಶಗಳು ಇದರಲ್ಲಿ ಸಾಕಷ್ಟು ಅಡಗಿದೆ. ಹೀಗಿರುವಾಗ ಮಕ್ಕಳಿಗೆ ತಮ್ಮ ವಿದ್ಯಾಭ್ಯಾಸದ ಸಮಯದಲ್ಲಿ ಪೋಷಕರು ಮೊಬೈಲ್ ಕೊಡಿಸುವುದು ತರವಲ್ಲ. ಮೊಬೈಲನ್ನು ಅಗತ್ಯಕ್ಕಿಂತ ಹೆಚ್ಚು ಬಳಕೆ ಮಾಡುವುದು ಸರಿಯಿಲ್ಲ, ಅದರ ಅತಿಯಾದ ಬಳಕೆಯಿಂದ ತಮ್ಮ ವಿದ್ಯಾರ್ಥಿ ಜೀವನ ಹಾಳಾಗುತ್ತದೆ ಎಂಬ ಪರಿಜ್ಞಾನ ಮಕ್ಕಳಲ್ಲಿ ಬೆಳೆಯುವ ವಯಸ್ಸಿನವರೆಗೂ ಅವರಿಗೆ ಮೊಬೈಲ್ ಕೊಡಿಸುವುದು ಸೂಕ್ತವಲ್ಲ. ಇದರಿಂದ ಅವರ ಬುದ್ಧಿಶಕ್ತಿ ಬೆಳವಣಿಗೆ ಕುಂಠಿತಗೊಳ್ಳಲಿದೆ ಎಂದರು‌.
ಈ ವೇಳೆ ಸುನಿತಾ ಗುರುರಾಜ್ ಮುಖ್ಯ ಶಿಕ್ಷಕಿ ಪ್ರಾಸ್ತಾವಿಕವಾಗಿ ಮಾತನಾಡಿ ಗು-ಎಂದರೆ ಅಂಧಕಾರ ರ-ಎಂದರೆ ಕಳೆಯುವ ಅಜ್ಞಾನದಿಂದ ಜ್ಞಾನದ ಕಡೆಗೆ ಕೊಂಡೊಯ್ಯುವ ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಶಕ್ತಿ ಗುರು ತಂದೆ ತಾಯಿ ಹೊರತುಪಡಿಸಿ ಗುರು ವ್ಯಕ್ತಿಯ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ ಅವರಿಗೆ ಗೌರವ ಸಮರ್ಪಣೆ ಮಾಡುವ ದಿನ ಇದಾಗಿದೆ. ಗುರುಪೂರ್ಣಿಮೆ ಮಾಹಿತಿ ತಿಳಿಸಿ ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡಿ ಎಂದು ತಿಳಿಸಿದರು. 
ಈ ವೇಳೆ ಚಿಕ್ಕೋವನಹಳ್ಳಿ ಶ್ರೀ ವೀರೇಶ ಸ್ವಾಮಿ ಪುರೋಹಿತರು ಪೂಜಾ ಕಾರ್ಯಕ್ರಮ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕರಾದ ಹಂಪಮ್ಮ ಪೂಜಾರ್, ಮಂಜುಳಾ, ಸುಮಿತ್ರ, ರುದ್ರಮ್ಮ, ನೇತ್ರಾವತಿ, ಮಮತಾ, ಜಿಪಿ ಬಸವರಾಜ್, ಬೋಧಕೇತರ ಸಿಬ್ಬಂದಿ ವರ್ಗದವರಾದ ಮಲ್ಲಿಕಾರ್ಜುನ ಶಾಂತಕುಮಾರ್ ವನಜಾಕ್ಷಮ್ಮ ಹಾಗೂ ಶಾಲಾ ಮಕ್ಕಳು, ಪೋಷಕರು ಭಾಗವಹಿಸಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    19 hrs ago
  • ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು. ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. ಬೈಟ್: ರಾಜಣ್ಣ
    2
    ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ

ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ  ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ
ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ
ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ  ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು.
ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು.
ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. 
ಬೈಟ್: ರಾಜಣ್ಣ
    user_Nagesh BR Durgavara
    Nagesh BR Durgavara
    Photographer Chitradurga, Karnataka•
    7 hrs ago
  • ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
    1
    ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ
ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು
ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
  • ಕೂಡ್ಲಿಗಿ : ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರು ಸಂಘಟನಾಚತುರರು , ಹಾಗೂ ಬಹು ಜನಪ್ರೀಯ ಮಾದರಿ ಶಾಸಕರಾಗಿದ್ದಾರೆ - ಹರ್ಕರ್ ವೇಣುಗೋಪಾಲ್ ರಾವ್ -ವಿಜಯನಗರ ಜಿಲ್ಲೆ ಕೂಡ್ಲಿಗಿ *ಕೂಡ್ಲಿಗಿ : ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರು ಸಂಘಟನಾಚತುರರು , ಹಾಗೂ ಬಹು ಜನಪ್ರೀಯ ಮಾದರಿ ಶಾಸಕರಾಗಿದ್ದಾರೆ - ಹರ್ಕರ್ ವೇಣುಗೋಪಾಲ್ ರಾವ್* -ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣಕ್ಕೆ , ಜು 30 ರಂದು. ಎಐಸಿಸಿ ಕಾರ್ಯದರ್ಶಿ ಹಾಗೂ ಪಕ್ಷದ ವೀಕ್ಷಕರಾದ , ಹರ್ಕರ್ ವೇಣುಗೋಪಾಲ್ ರವರು ಭೇಟಿ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಪಕ್ಷದ ವಿವಿದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕೇಂದ್ರ ಸರ್ಕಾರ ನೀಟ್ ಪ್ರೆಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮೂಲಕ , ಪ್ರತಿಭಾನ್ವಿತ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದೆ. ಸಂಬಂಧಿಸಿದಂತೆ ರಾಹುಲ್ ಗಾಂದಿಯವರ ನೇತೃತ್ವದಲ್ಲಿ , ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ನಿರಂತರ ಹೋರಾಟ ಮಾಡಲಾಗುತ್ತಿದೆ. ಜನ ಪ್ರಜ್ಞಾವಂತರಿದ್ದು , ಮುಂದಿನ ದಿನಗಳಲ್ಲಿ ಮೋದಿ ಅಮಿತ್ ಷ್ ನೇತೃತ್ವದ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. *ಪಕ್ಷದ ಗಣ್ಯಾತಿ ಗಣ್ಯರು ಭಾಗಿ*- ಸಭೆಯಲ್ಲಿ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ , ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು ಹಾಗು ಮಾಜಿ ಶಾಸಕರಾದ ಶಿರಾಜ್ ಶೇಖ್ , ಶಾಸಕರಾದ ಡ‍ಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ : ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರು  ಸಂಘಟನಾಚತುರರು , ಹಾಗೂ ಬಹು ಜನಪ್ರೀಯ ಮಾದರಿ ಶಾಸಕರಾಗಿದ್ದಾರೆ - ಹರ್ಕರ್ ವೇಣುಗೋಪಾಲ್ ರಾವ್ -ವಿಜಯನಗರ ಜಿಲ್ಲೆ ಕೂಡ್ಲಿಗಿ 
*ಕೂಡ್ಲಿಗಿ : ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರು  ಸಂಘಟನಾಚತುರರು , ಹಾಗೂ ಬಹು ಜನಪ್ರೀಯ ಮಾದರಿ ಶಾಸಕರಾಗಿದ್ದಾರೆ - ಹರ್ಕರ್ ವೇಣುಗೋಪಾಲ್ ರಾವ್* -ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣಕ್ಕೆ , ಜು 30 ರಂದು. ಎಐಸಿಸಿ ಕಾರ್ಯದರ್ಶಿ ಹಾಗೂ ಪಕ್ಷದ ವೀಕ್ಷಕರಾದ , ಹರ್ಕರ್ ವೇಣುಗೋಪಾಲ್ ರವರು ಭೇಟಿ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ ,  ಪಕ್ಷದ ವಿವಿದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕೇಂದ್ರ ಸರ್ಕಾರ ನೀಟ್ ಪ್ರೆಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮೂಲಕ , ಪ್ರತಿಭಾನ್ವಿತ  ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದೆ. ಸಂಬಂಧಿಸಿದಂತೆ ರಾಹುಲ್ ಗಾಂದಿಯವರ ನೇತೃತ್ವದಲ್ಲಿ , ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ನಿರಂತರ ಹೋರಾಟ ಮಾಡಲಾಗುತ್ತಿದೆ. ಜನ ಪ್ರಜ್ಞಾವಂತರಿದ್ದು , ಮುಂದಿನ ದಿನಗಳಲ್ಲಿ ಮೋದಿ ಅಮಿತ್ ಷ್ ನೇತೃತ್ವದ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. *ಪಕ್ಷದ ಗಣ್ಯಾತಿ ಗಣ್ಯರು ಭಾಗಿ*-  ಸಭೆಯಲ್ಲಿ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ ,   ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು ಹಾಗು ಮಾಜಿ ಶಾಸಕರಾದ ಶಿರಾಜ್ ಶೇಖ್ , ಶಾಸಕರಾದ ಡ‍ಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ  ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ  ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ  ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    14 hrs ago
  • Post by YSRmedia vijayanagaraupsates
    1
    Post by YSRmedia vijayanagaraupsates
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.