ಜಿ ಎಸ್ ಪಾಟೀಲರು ಮಂತ್ರಿ ಆಗೇ ಆಗುತ್ತಾರೆ- ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ವಿಜಯ ಮಹಾಂತ ಸ್ವಾಮಿಗಳು ಅಭಿಪ್ರಾಯ -ಜಿ ಎಸ್ ಪಾಟೀಲರು ಸಚಿವರಾಗಲು ಎಲ್ಲಾ ರೀತಿಯಲ್ಲಿ ಅರ್ಹರಿದ್ದು ಅವರೂ ನಾಲ್ಕು ಭಾರಿ ಶಾಸಕರಿಗಿದ್ದಾರೆ ಈ ಭಾರಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಆದ್ಯತೆ ನೀಡಿ ಮಂತ್ರಿ ಮಾಡಿ ಅವರಿಗೆ ಗೌರವಿಸಬೇಕು ಅವರು ಯಾವಾಗಲು ಸಮಾಜ ಸೇವೆಯಲ್ಲಿ ತೊಡಗಿರುವವರು ಅವ್ರು ನಮ್ಮೆಲ್ಲ ಹಾರೈಕೆಯಂತೆ ಈ ಭಾರಿ ಮಂತ್ರಿ ಆಗೇ ಆಗುತ್ತಾರೆ ಎಂದು ನಂಬಿಕೆ ಇದೆ ಎಂದು ಕುದರಿಮೋತಿ ವಿಜಯಮಹಾಂತ ಸ್ವಾಮಿಗಳು ಹೇಳಿದರು, ಅವರು ರೋಣ ಪಟ್ಟಣದ ರಾಜೀವಗಾಂಧಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶಾಸಕ ಜಿ ಎಸ್ ಪಾಟೀಲರ ತಾಯಿಯವರಾದ ಮಾತೋಶ್ರೀ ಬಸಮ್ಮ ಪಾಟೀಲ ಇವರ 22 ಪುಣ್ಯಸ್ಮರಣೆಯಲ್ಲಿ ಸಾನಿಧ್ಯ ವಹಿಸಿ ಮಾತನಾಡಿದರು, ಬಸಮ್ಮ ಪಾಟೀಲರು ಸಮಾಜ ಸೇವೆ ಮಾಡಿಕೊಂಡು ಬಂದವರು ಮನೆಗೆ ಬಂದವರನ್ನು ಬರೀಗೈಲಿ ಕಳಿಸಿದವರಲ್ಲ, ಅಂದಿನಿ ಕಾಲದಲ್ಲಿಯೇ ಶಿಕ್ಷಣಕ್ಕೆ ಆದ್ಯತೆ ನೀಡಿ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದವರು, ಅವರಿಂದ ಅವರ ಮಕ್ಕಳು ಮೊಮ್ಮಕ್ಕಳು ಅವರೂ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದಾರೆ, ಇಂದಿನ ಕಾಲದಲ್ಲಿ ಬೆಳೆದು ದೊಡ್ಡವರಾಗಿ ತಂದೆ ತಾಯಿಯನ್ನು ಮನೆಬಿಟ್ಟು ಹೊರ ಹಾಕುವುದನ್ನು,, ಅನಾಥ ಆಶ್ರಮಕ್ಕೆ ಬಿಟ್ಟು ಬರುವುದನ್ನು ನಾವೆಲ್ಲ ಕಂಡಿದ್ದೇವೆ ಆದರೆ ಪಾಟೀಲರ ಮನೆತನ ಹೆಮ್ಮೆ ಪಡುವಂತದ್ದವು ತಮ್ಮ ತಾಯಿ ಪುಣ್ಯಸ್ಮರಣೆ ನಿಮಿತ್ಯ ಸತತವಾಗಿ 22 ವರ್ಷಗಳಿಂದ ರಕ್ತದಾನ, ನೇತ್ರ ಶಸ್ತ್ರ ಚಿಕಿತ್ಸೆ,ಪೆನ್ನು ನೋಟ್ ಬುಕ್ ವಿತರಣೆ,ಮಕ್ಕಳಿಗೆ ಬ್ಯಾಗ ವಿತರಣೆ, ಮಹಿಳಾ ಸಬಲೀಕರಣ ಸೇರಿದಂತೆ ಅನೇಕ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ ಮಕ್ಕಳಿದ್ದಾರೆ ಪಾಟೀಲ ಕುಟುಂಬದಂತೆ ಇರಬೇಕು ಪಂಚ ಪಂಡವರಂತೆ ಒಬ್ಬೊಬ್ಬರು ಒಂದೊಂದು ದೊಡ್ಡ ಗುಣ ಹೊಂದಿದ್ದಾರೆ ಜಿ ಎಸ್ ಪಾಟೀಲರು ಬಹಳ ಮುಗ್ದರು ಜನರ ಬಗ್ಗೆ ಕಾಳಜಿ ಇರುವಂತವರು ಅಂತವ್ರು ಮಂತ್ರಿಯಾದರೆ ಸಮಾಜದಲ್ಲಿ ಉತ್ತಮ ಬೆಳವಣಿಗೆ ಕಾಣಬಹುದು ತಾಲೂಕು ಜಿಲ್ಲೆಯ ಇನ್ನೂ ಹೆಚ್ಚು ಅಭಿವೃದ್ಧಿ ಆಗುತ್ತದೆ ನಾನು ಸಹ ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆಯುತ್ತೇನೆ ಈ ಭಾರಿ ಜಿ ಎಸ್ ಪಾಟೀಲರಿಗೆ ಮಂತ್ರಿ ಸ್ಥಾನ ಕೊಡಲೇಬೇಕು ಎಂದರು, ಶಾಸಕ ಜಿ ಎಸ್ ಪಾಟೀಲ ಮಾತನಾಡಿ ನಮ್ಮ ತಾಯಿಯವರ ಪುಣ್ಯಸ್ಮರಣೆ ನಿಮಿತ್ಯ ಪ್ರತಿ ವರ್ಷ ವಿವಿಧ ಸಮಾಜಮುಖಿ ಕಾರ್ಯಕ್ರಮ ಮಾಡಿಕೊಂಡು ಬರಲಾಗುತ್ತಿದ್ದು ಈ ಭಾರಿ ಸಹ ಅನೇಕ ಕಾರ್ಯಕ್ರಮ ಮಾಡಲಾಗಿದ್ದು ಈಗಾಗಲೇ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ಇನ್ನೂ ಅನೇಕ ಕೆಲಸಗಳನ್ನು ಮಾಡಲಾಗುವುದು, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಪಾಲಿಟೆಕೆನಿಕ್ ಪ್ರಾರಂಭವಾಗಿದ್ದು ಮತ್ತು ಜಿಟಿಟಿಸಿ ಶೀಘ್ರದಲ್ಲಿ ಪ್ರಾರಂಭ ಆಗುತ್ತವೆ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಾಣ, ನೂತನ ಶಾಲಾ ಕೊಠಡಿ, ರಸ್ತೆ, ಚರಂಡಿ ನಿರ್ಮಾಣ,ಹೀಗೆ ಸಾಕಷ್ಟು ಕೆಲಸಗಳನ್ನು ಮಾಡಿದ್ದು ಮುಂದೇಸಹ ಇದೆ ರೀತಿ ಕೆಲಸ ಮಾಡಲಾಗುವುದು ಎಂದರು, ಕಾರ್ಯಕ್ರಮದಲ್ಲಿ ಗುಲಗಂಜೀಮಠದ ಗುರುಪಾದಸ್ವಾಮಿಗಳು, ಬಸವರಾಜೇಂದ್ರ ಸ್ವಾಮಿಗಳು, ಶಿವಕುಮಾರ ಸ್ವಾಮಿಗಳು, ಯಾಚ್ಚರಸ್ವಾಮಿಗಳು ಮತ್ತು ಇನ್ನೂ ಅನೇಕ ಸ್ವಾಮೀಜಿಗಳು ಸಾನಿದ್ಯ ವಹಿಸಿದ್ದರು, ಲೋಕಸಭಾ ಮಾಜಿ ಸದಸ್ಯರು ಆರ್ ಎಸ್ ಪಾಟೀಲ್, ಬಿ ಎಸ್ ಪಾಟೀಲ, ಐ ಎಸ್ ಪಾಟೀಲ, ಮಿಥುನ್ ಪಾಟೀಲ,ಮಾಜಿ ಶಾಸಕ ಬಿ ಆರ್ ಯಾವಗಲ್ಲ, ರಾಮಕೃಷ್ಣ ದೊಡ್ಡಮನಿ, ದೊಡ್ಡನಗೌಡ ಪಾಟೀಲ,ಮಲ್ಲಿಕಾರ್ಜುನ್ ಅಕ್ಕಿ, ಹಾಗೂ ಮೋಹನ್ ಲಿಂಬಿಕಾಯಿ, ಅಕ್ಷಯ ಪಾಟೀಲ,ಡಾ ಐ ಬಿ ಕೊಟ್ಟೂರಶೆಟ್ಟರ ಸೇರಿದಂತೆ ಅನೇಕರಿದ್ದರು.
ಜಿ ಎಸ್ ಪಾಟೀಲರು ಮಂತ್ರಿ ಆಗೇ ಆಗುತ್ತಾರೆ- ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ವಿಜಯ ಮಹಾಂತ ಸ್ವಾಮಿಗಳು ಅಭಿಪ್ರಾಯ -ಜಿ ಎಸ್ ಪಾಟೀಲರು ಸಚಿವರಾಗಲು ಎಲ್ಲಾ ರೀತಿಯಲ್ಲಿ ಅರ್ಹರಿದ್ದು ಅವರೂ ನಾಲ್ಕು ಭಾರಿ ಶಾಸಕರಿಗಿದ್ದಾರೆ ಈ ಭಾರಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಆದ್ಯತೆ ನೀಡಿ ಮಂತ್ರಿ ಮಾಡಿ ಅವರಿಗೆ ಗೌರವಿಸಬೇಕು ಅವರು ಯಾವಾಗಲು ಸಮಾಜ ಸೇವೆಯಲ್ಲಿ ತೊಡಗಿರುವವರು ಅವ್ರು ನಮ್ಮೆಲ್ಲ ಹಾರೈಕೆಯಂತೆ ಈ ಭಾರಿ ಮಂತ್ರಿ ಆಗೇ ಆಗುತ್ತಾರೆ ಎಂದು ನಂಬಿಕೆ ಇದೆ ಎಂದು ಕುದರಿಮೋತಿ ವಿಜಯಮಹಾಂತ ಸ್ವಾಮಿಗಳು ಹೇಳಿದರು, ಅವರು ರೋಣ ಪಟ್ಟಣದ ರಾಜೀವಗಾಂಧಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶಾಸಕ ಜಿ ಎಸ್ ಪಾಟೀಲರ ತಾಯಿಯವರಾದ ಮಾತೋಶ್ರೀ ಬಸಮ್ಮ ಪಾಟೀಲ ಇವರ 22 ಪುಣ್ಯಸ್ಮರಣೆಯಲ್ಲಿ ಸಾನಿಧ್ಯ ವಹಿಸಿ ಮಾತನಾಡಿದರು, ಬಸಮ್ಮ ಪಾಟೀಲರು ಸಮಾಜ ಸೇವೆ ಮಾಡಿಕೊಂಡು ಬಂದವರು ಮನೆಗೆ ಬಂದವರನ್ನು ಬರೀಗೈಲಿ ಕಳಿಸಿದವರಲ್ಲ, ಅಂದಿನಿ ಕಾಲದಲ್ಲಿಯೇ ಶಿಕ್ಷಣಕ್ಕೆ ಆದ್ಯತೆ ನೀಡಿ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದವರು, ಅವರಿಂದ ಅವರ ಮಕ್ಕಳು ಮೊಮ್ಮಕ್ಕಳು ಅವರೂ
ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದಾರೆ, ಇಂದಿನ ಕಾಲದಲ್ಲಿ ಬೆಳೆದು ದೊಡ್ಡವರಾಗಿ ತಂದೆ ತಾಯಿಯನ್ನು ಮನೆಬಿಟ್ಟು ಹೊರ ಹಾಕುವುದನ್ನು,, ಅನಾಥ ಆಶ್ರಮಕ್ಕೆ ಬಿಟ್ಟು ಬರುವುದನ್ನು ನಾವೆಲ್ಲ ಕಂಡಿದ್ದೇವೆ ಆದರೆ ಪಾಟೀಲರ ಮನೆತನ ಹೆಮ್ಮೆ ಪಡುವಂತದ್ದವು ತಮ್ಮ ತಾಯಿ ಪುಣ್ಯಸ್ಮರಣೆ ನಿಮಿತ್ಯ ಸತತವಾಗಿ 22 ವರ್ಷಗಳಿಂದ ರಕ್ತದಾನ, ನೇತ್ರ ಶಸ್ತ್ರ ಚಿಕಿತ್ಸೆ,ಪೆನ್ನು ನೋಟ್ ಬುಕ್ ವಿತರಣೆ,ಮಕ್ಕಳಿಗೆ ಬ್ಯಾಗ ವಿತರಣೆ, ಮಹಿಳಾ ಸಬಲೀಕರಣ ಸೇರಿದಂತೆ ಅನೇಕ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ ಮಕ್ಕಳಿದ್ದಾರೆ ಪಾಟೀಲ ಕುಟುಂಬದಂತೆ ಇರಬೇಕು ಪಂಚ ಪಂಡವರಂತೆ ಒಬ್ಬೊಬ್ಬರು ಒಂದೊಂದು ದೊಡ್ಡ ಗುಣ ಹೊಂದಿದ್ದಾರೆ ಜಿ ಎಸ್ ಪಾಟೀಲರು ಬಹಳ ಮುಗ್ದರು ಜನರ ಬಗ್ಗೆ ಕಾಳಜಿ ಇರುವಂತವರು ಅಂತವ್ರು ಮಂತ್ರಿಯಾದರೆ ಸಮಾಜದಲ್ಲಿ ಉತ್ತಮ ಬೆಳವಣಿಗೆ ಕಾಣಬಹುದು ತಾಲೂಕು ಜಿಲ್ಲೆಯ ಇನ್ನೂ ಹೆಚ್ಚು ಅಭಿವೃದ್ಧಿ ಆಗುತ್ತದೆ ನಾನು ಸಹ ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆಯುತ್ತೇನೆ ಈ ಭಾರಿ ಜಿ ಎಸ್ ಪಾಟೀಲರಿಗೆ ಮಂತ್ರಿ ಸ್ಥಾನ ಕೊಡಲೇಬೇಕು ಎಂದರು, ಶಾಸಕ ಜಿ ಎಸ್ ಪಾಟೀಲ ಮಾತನಾಡಿ ನಮ್ಮ ತಾಯಿಯವರ ಪುಣ್ಯಸ್ಮರಣೆ
ನಿಮಿತ್ಯ ಪ್ರತಿ ವರ್ಷ ವಿವಿಧ ಸಮಾಜಮುಖಿ ಕಾರ್ಯಕ್ರಮ ಮಾಡಿಕೊಂಡು ಬರಲಾಗುತ್ತಿದ್ದು ಈ ಭಾರಿ ಸಹ ಅನೇಕ ಕಾರ್ಯಕ್ರಮ ಮಾಡಲಾಗಿದ್ದು ಈಗಾಗಲೇ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ಇನ್ನೂ ಅನೇಕ ಕೆಲಸಗಳನ್ನು ಮಾಡಲಾಗುವುದು, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಪಾಲಿಟೆಕೆನಿಕ್ ಪ್ರಾರಂಭವಾಗಿದ್ದು ಮತ್ತು ಜಿಟಿಟಿಸಿ ಶೀಘ್ರದಲ್ಲಿ ಪ್ರಾರಂಭ ಆಗುತ್ತವೆ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಾಣ, ನೂತನ ಶಾಲಾ ಕೊಠಡಿ, ರಸ್ತೆ, ಚರಂಡಿ ನಿರ್ಮಾಣ,ಹೀಗೆ ಸಾಕಷ್ಟು ಕೆಲಸಗಳನ್ನು ಮಾಡಿದ್ದು ಮುಂದೇಸಹ ಇದೆ ರೀತಿ ಕೆಲಸ ಮಾಡಲಾಗುವುದು ಎಂದರು, ಕಾರ್ಯಕ್ರಮದಲ್ಲಿ ಗುಲಗಂಜೀಮಠದ ಗುರುಪಾದಸ್ವಾಮಿಗಳು, ಬಸವರಾಜೇಂದ್ರ ಸ್ವಾಮಿಗಳು, ಶಿವಕುಮಾರ ಸ್ವಾಮಿಗಳು, ಯಾಚ್ಚರಸ್ವಾಮಿಗಳು ಮತ್ತು ಇನ್ನೂ ಅನೇಕ ಸ್ವಾಮೀಜಿಗಳು ಸಾನಿದ್ಯ ವಹಿಸಿದ್ದರು, ಲೋಕಸಭಾ ಮಾಜಿ ಸದಸ್ಯರು ಆರ್ ಎಸ್ ಪಾಟೀಲ್, ಬಿ ಎಸ್ ಪಾಟೀಲ, ಐ ಎಸ್ ಪಾಟೀಲ, ಮಿಥುನ್ ಪಾಟೀಲ,ಮಾಜಿ ಶಾಸಕ ಬಿ ಆರ್ ಯಾವಗಲ್ಲ, ರಾಮಕೃಷ್ಣ ದೊಡ್ಡಮನಿ, ದೊಡ್ಡನಗೌಡ ಪಾಟೀಲ,ಮಲ್ಲಿಕಾರ್ಜುನ್ ಅಕ್ಕಿ, ಹಾಗೂ ಮೋಹನ್ ಲಿಂಬಿಕಾಯಿ, ಅಕ್ಷಯ ಪಾಟೀಲ,ಡಾ ಐ ಬಿ ಕೊಟ್ಟೂರಶೆಟ್ಟರ ಸೇರಿದಂತೆ ಅನೇಕರಿದ್ದರು.
- ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆದುಕೊಳ್ಳಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ ಗುಳೇದಗುಡ್ಡ: ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆಯಬೇಕು. ಈ ಕಾರ್ಡನಿಂದ ರೈತರು, ಮೀನುಗಾರರಿಗೆ ಅವಶ್ಯವಾದ ಸಾಲ ಸೌಲಭ್ಯ ಸೇರಿದಂತೆ ಅನೇಕ ಸೌಲಭ್ಯಗಳು ದೊರೆಯುತ್ತವೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು. ಅವರು ಗುರುವಾರ ಸಂಜೆ ಪಟ್ಟಣದ ಸಾಲೇಶ್ವರ ಕಲ್ಯಾಣಮಂಟಪದಲ್ಲಿ ಜಿಲ್ಲಾಪಂಚಾಯಿತಿ, ಜಿಲ್ಲಾಡಳಿತ ಹಾಗೂ ಮೀನುಗಾರಿಕಾ ಇಲಾಖೆ ಹಾಗೂ ಮೀನುಗಾರರ ಸಹಕಾರಿ ಸಂಘಗಳ ವತಿಯಿಂದ ಹಮ್ಮಿಕೊಂಡಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಅಲ್ಲದೇ ಮೀನು ಹಿಡಿಯಲು ಹೋದಾಗ ದುರ್ಘಟನೆಗಳು ಸಂಭವಿಸಿ ಮೃತಪಟ್ಟವರಿಗೆ ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗೂ ಕೇಂದ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ದೊರೆಯುತ್ತದೆ ಎಂದರು. ಮೀನುಗಾರಿಕೆ ಉದ್ಯಮ ಅಭಿವೃದ್ಧಿಪಡಿಸಿಕೊಳ್ಳಲು ಸರ್ಕಾದಿಂದ ಸಾಕಷ್ಟು ಯೋಜನೆಗಳು ದೊರೆಯುವ ಯೋಜನೆಗಳು ಬಗ್ಗೆ ನಿಮಗೆ ಅರಿವು ಹೊಂದಿರಬೇಕು. ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಮೀನು ಸಾಗಾಣಿಕೆಯಲ್ಲಿ ಪ್ರಗತಿ ಸಾಧಿಸಬೇಕು. ಜೊತೆಗೆ ಮೀನುಗಾರರು ದುಶ್ಚಟದಿಂದ ದೂರವಿದ್ದು, ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕ ಮಹೇಶ ಪಿ, ಸಹಾಯಕ ನಿರ್ದೇಶಕ ಪ್ರಕಾಶ ಜಮಖಂಡಿ, ಕೃಷಿ ಅಧಿಕಾರಿ ಆನಂದ ಗೌಡರ, ವೈ.ಆರ್. ಹೆಬ್ಬಳ್ಳಿ, ರಜಾಕ ಕುದರಿ, ಶಿವನಯ್ಯ ಮಳ್ಳಿಮಠ, ಚಿದಾನಂದಸಾ ಕಾಟವಾ, ಇಬ್ರಾಹಿಂ ಹಳ್ಳಿ, ಮದ್ದಾನೆಪ್ಪ ಶಿಳ್ಳಿಕ್ಯಾತರ, ಸದಾಶಿವ ಮರಡಿ ಹಾಗೂ ಮೀನುಗಾರರ ಸಂಘದ ಸದಸ್ಯರು ಇದ್ದರು.3
- ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ 27 ಕೋಟಿ ರೂಪಾಯಿಯ ತಾಯಿ-ಮಕ್ಕಳ ಆಸ್ಪತ್ರೆ ಅವ್ಯವಸ್ಥೆ. ವರದಿ:- ಪವಾಡೆಪ್ಪ ಚೌಡ್ಕಿ ಕುಷ್ಟಗಿ:- ಪಟ್ಟಣದಲ್ಲಿ ನೂತನವಾಗಿ ಆರಂಭವಾಗಿರುವ ಸುಮಾರು 27 ಕೋಟಿ ರೂಪಾಯಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ 100 ಹಾಸಿಗೆಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಬೇಕಾದ ಮೂಲಭೂತ ಸೌಕರ್ಯಗಳು ಇದ್ದರು ಸಹ ಎಲ್ಲವು ಇಲ್ಲದಂತೆ ಆಗಿದೆ ಕೆಲವು ಇನ್ನು ಸೌಲಭ್ಯಗಳು ಸರಿಯಾಗಿ ಇಲ್ಲದ ಕಾರಣ ಈ ಆಸ್ಪತ್ರೆಯನ್ನು ತರಾತುರಿಯಲ್ಲಿ ಆರಂಭ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. *ಅವ್ಯವಸ್ಥೆಗಳ ನಡುವೆಯೇ ಹೆರಿಗೆ ಸೇವೆ ಆರಂಭ ಸಾರ್ವಜನಿಕರ ಆಕ್ರೋಶ* ಚಿಕ್ಕಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಹಾಗೂ ಜನತೆಗೆ ಬೇಕಾಗುವ ಗುಣಮಟ್ಟದ ಆರೋಗ್ಯ ಸೇವೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಬಾಣಂತಿರಿಗೆ ಬೇಕಾದ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲದೆ ಆಸ್ಪತ್ರೆಗೆ ಅಳವಡಿಸಿರುವ ಸೋಲಾರ್ ವಾಟರ್ ಇಟರ್ ಟುಬೂಗಳು ಹೊಡೆದು ಹಾಳಾಗಿ ಹೋಗಿವೆ. ಈ ಎಲ್ಲಾ ಸೋಲಾರ್ ಟುಬೂಗಳು ಅವ್ಯವಸ್ಥೆಯಿಂದ ಕೆಲ ವಸ್ತುಗಳು ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ ಹಾಳಾಗಿ ಒಡೆದು ಹೋಗಿವೆ. ಈ ಆಸ್ಪತ್ರೆಯ ಸ್ಥಿತ ಇದೇ ರೀತಿಯಾಗಿ ಮುಂದುವರೆದರೆ ಇದರಿಂದ ಸಾರ್ವಜನಿಕರು ಮತ್ತು ಗರ್ಭಿಣಿಯರು ಹಾಗೂ ಬಾಣಂತಿಯರು ಮತ್ತು ಚಿಕ್ಕ ಮಕ್ಕಳು ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. *ಆಸ್ಪತ್ರೆಯಲ್ಲಿ ಕೆಲ ವಿದ್ಯುತ್ ಲೈಟ್ ಗಳು ಮತ್ತು ಪ್ಯಾನ್ ಗಳು ಬಂದ್.* ಆಸ್ಪತ್ರೆಯಲ್ಲಿ ಸಮರ್ಪಕ ಕುಡಿಯುವ ನೀರು, ಬಿಸಿನೀರಿನ ವ್ಯವಸ್ಥೆ, ನಿರಂತರ ವಿದ್ಯುತ್ ಪೂರೈಕೆ, ಸೇರಿದಂತೆ ಹಲವು ಅಗತ್ಯ ಸೌಲಭ್ಯಗಳು ಪೂರ್ಣ ಪ್ರಮಾಣದಲ್ಲಿ ಲಭ್ಯವಿಲ್ಲದೆ ಎಲ್ಲವು ಅವ್ಯವಸ್ಥೆಯಾಗಿ ಕೂಡಿದ್ದು ಎಲ್ಲವು ಬಂದ್ ಆಗಿರುವಂತದ್ದು ಕಂಡು ಬಂದಿದೆ. *ವೈದ್ಯರ ಕೊರತೆ ಮತ್ತು ಸಿಬ್ಬಂದಿಗಳ ಕೊರತೆ ಎದುರುಸುತ್ತಿರುವ ಆಸ್ಪತ್ರೆ* ಆಸ್ಪತ್ರೆಗೆ ತಕ್ಕಂತೆ ಬೇಕಾಗುವ ವೈದ್ಯಕೀಯ ಸೇವೆಗೆ ಅಗತ್ಯವಿರುವ ಸಿಬ್ಬಂದಿಯ ಕೊರತೆಯೂ ಆಸ್ಪತ್ರೆಯಲ್ಲಿ ಇಲ್ಲದ ಕಾರಣ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಮತ್ತು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು ಪ್ರತಿನಿತ್ಯ ಕಾರ್ಯನಿರ್ವಹಣೆಯ ಮೇಲೆ ಮತ್ತು ರೋಗಿಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದರೆ ತಪ್ಪಾಗಲಾರದು. *ಕೇಂದ್ರ ಬಸ್ ನಿಲ್ದಾಣದಿಂದ 2–3 ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ ಸಾರಿಗೆ ವ್ಯವಸ್ಥೆಗೆ ಆಗ್ರಹ.* ಪಟ್ಟಣದ ಬಸ್ ನಿಲ್ದಾಣದಿಂದ ಸರಿ ಸುಮಾರು ಎರಡು ಮೂರು ಕಿ.ಮಿ. ದೂರವಿದ್ದು ಗರ್ಭಿಣಿಯರಿಗೆ ಮತ್ತು ಸಾರ್ವಜನಿಕರಿಗೆ ನಡೆದುಕೊಂಡು ಹೋಗಲು ಬಹಳ ಕಷ್ಟವಾಗುತ್ತಿದ್ದು ಬಸ್ ನಿಲ್ದಾಣದಿಂದ ಬಸ್ ಸೌಕರ್ಯ ಇಲ್ಲದೆ ಬರಿ ಆಟೋಗಳನ್ನು ನೆಚ್ಚಿಕೊಂಡು ಆಸ್ಪತ್ರೆ ತೆರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಟೋ ಚಾಲಕರು ತಮಗೆ ಮನಬಂದಂತೆ ಆಟೋ ಬಾಡಿಗೆ ಏರಿಗೆ ಮಾಡುತ್ತಿದ್ದಾರೆ. ಆದ್ದರಿಂದ ಕೇಂದ್ರೀಯ ಬಸ್ ನಿಲ್ದಾಣದಿಂದ ಆಸ್ಪತ್ರೆಯ ವರಗೆ ಬಸ್ ಬೀಡಬೇಕು ಎಂದು ಸಾರ್ವಜನಿಕರು ಆಗ್ರಹವಾಗಿದೆ. *ಆಸ್ಪತ್ರೆಯಲ್ಲಿ ಮಾರ್ಗ ಸೂಚಿಸುವ ನಾಮ ಫಲಕಗಳು ಇಲ್ಲ.* ಆಸ್ಪತ್ರೆಯ ಒಳಗಡೆ ಹೆರಿಗೆ ಕೊಠಡಿ ಮತ್ತು ರೋಗಿಗಳ ಹತ್ತಿರ ತರಳಬೇಕು ಎಂದರೆ ಸರಿಯಾದ ಮಾರ್ಗವನ್ನು ಸೂಚಿಸುವ ದಿಕ್ಕು ಸೂಚನಾ ಫಲಕಗಳು ಇಲ್ಲದೆ ಆಸ್ಪತ್ರೆಗೆ ಬರುವ ಸಾರ್ವಜನಿಕರು ಕೊರತೆಯನ್ನು ಎದುರಿಸಬೇಕಾಗಿದೆ. ಮತ್ತು ಗ್ರಾಮೀಣ ಪ್ರದೇಶಗಳಿಂದ ಬರುವ ಗರ್ಭಿಣಿಯರು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ ಎಂದು ಆಸ್ಪತ್ರೆಗೆ ಬಂದ ರೋಗಿಗಳು ಅವಳನ್ನು ತೊಂಡಿಕೊಂಡಿದ್ದಾರೆ. *ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಹದೆಗೆಟ್ಟ ಮಾರ್ಗದ ರಸ್ತೆ.* ತಹಶೀಲ್ದಾರ ಕಚೇರಿಯಿಂದ ವಣಗೇರಾ ಹಳೆ ರಸ್ತೆ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು ಈ ರಸ್ತೆಯು ಹದಗೆಟ್ಟಿದ್ದು, ಸುತ್ತಮುತ್ತಲಿನ ಮೂಲಸೌಕರ್ಯಗಳ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕೆಲವು ಕಡೆ ವಿದ್ಯುತ್ ವ್ಯವಸ್ಥೆಯೂ ಸಮರ್ಪಕವಾಗಿಲ್ಲ ಮತ್ತು ವಿದ್ಯುತ್ ಕಂಬಗಳು ರಸ್ತೆಯ ಪಕ್ಕದಲ್ಲಿ ಇದ್ದು ಯಾವುದೇ ಎರಡು ಗಾಡಿಗಳು ಬಂದರೆ ಸಾಕು ಅದಲು ಬದಲು ಆದಲು ಮತ್ತು ಹೋಗಲು ಮತ್ತು ಬರಲು ಸರಿಯಾದ ರಸ್ತೆ ಇಲ್ಲದೆ ರಸ್ತೆಯ ಅಕ್ಕ ಪಕ್ಕದಲ್ಲಿ ತೆಗ್ಗು ದಿನ್ನೆಗಳು ಇವೆ ಈ ರಸ್ತೆ ಬಹಳ ಇರ್ಕಟ್ಟಾಗಿದ್ದು ಎದ್ದು ಕಾಣುತ್ತಿದೆ ಎಂಬ ಆರೋಪಗಳಿವೆ. ಕೂಡಲೇ ಸರಿ ಪಡಿಸಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಸ್ತ್ರೀರೋಗ ಚಿಕಿತ್ಸಾ ಸೇವೆಗಳು ಆರಂಭಗೊಂಡಿರುವುದು ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ. ರೋಗಿಗಳ ಸುರಕ್ಷತೆ ಹಾಗೂ ಆರೋಗ್ಯ ಸೇವೆಯ ಗುಣಮಟ್ಟದ ದೃಷ್ಟಿಯಿಂದ ಅಗತ್ಯ ಮೂಲಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಜನರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. ಆಸ್ಪತ್ರೆಯಿಂದ ಬಾಡಿಯಲ್ಲಿ ಅಳವಡಿಸಲಾಗಿರುವ ಸೋಲಾರ್ ಟುಬೂಗಳು ಹೊಡೆದು ಆಹಾಳಾಗಿ ನುಚ್ಚುನುರಾಗಿದ್ದು ಕಂಡು ಬಂದಿದೆ ನೀರಿನ ಶುದ್ದ ಕುಡಿಯುವ ನೀರಿನ ಘಟದ ಕೋಣಿಯ ಎರಡು ಘಟಕದ ಬಾಗಿಲು ಸಂಪೂರ್ಣ ಕಿತ್ತು ಹೋಗಿವೆ ಘಟಕದ ಮಿಷನ್ ಗಳು ಸುರಕ್ಷೆತೆ ಇಲ್ಲ. ಅವುಗಳನ್ನು ಸುಸಜ್ಜಿತವಾಗಿ ಇಡಬೇಕಾಗಿದೆ ಆಸ್ಪತ್ರೆ ಕಟ್ಟಿದಕ್ಕೆ ಸರಕಾರದ ಹಣ ನಷ್ಟವಾಗದಂತೆ ಮತ್ತು ಯಾವುದೇ ಕಾರಣಕ್ಕು ಆಸ್ಪತ್ರೆಯನ್ನು ಆಳಾಗಲು ಬೀಡಬಾರದು ಎಂಬುವದೆ ಸಾರ್ವಜನಿಕರ ಆಸೆಯಾಗಿದೆ ಎಂದು ಹೇಳಬಹುದು. ಬೈಟ್:- ಆಸ್ಪತ್ರೆಯನ್ನು ಸಂಪೂರ್ಣ ಆಗುವವರೆಗೂ ಹಸ್ತಾಂತರ ಜವಾಬ್ದಾರಿ ತೆಗೆದುಕೊಳ್ಳಬೇಡಿ ಎಂದು ತಾಲೂಕ ವೈದ್ಯಾಧಿಕಾರಿ ತಿಳಿಸಿದ್ದೆ ಆದರೆ ತರಾತೂರಿಯಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯನವರಿಂದ ಕೊಪ್ಪಳದಲ್ಲಿ ಉದ್ಘಾಟನೆ ಮಾಡಿದರು. ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಸರಿಯಾಗಿ ನಿರ್ವಹಿಸದ ಸಂಬಂಧಪಟ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. *ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ* -------------------------------- ಹೌದು ಆಸ್ಪತ್ರೆಯಲ್ಲಿ ಕೆಲ ಕೊಠಡಿಯಲ್ಲಿ ವಿದ್ಯುತ್ ಲೈಟ್ ಮತ್ತು ಪ್ಯಾನ್ ಇಲ್ಲ ಇದ್ದರು ಸರಿಯಾಗಿ ಕಾರ್ಯನಿರ್ವಸುತ್ತಿಲ್ಲ ಆದರೆ ಈ ಆಸ್ಪತ್ರೆ ಆರಂಭವಾಗಿದ್ದರು ಸಂಬಂಧಿಸಿದ ಏಜೆನ್ಸಿ ಯವರು ಸಹ ನಮಗೆ ಇನ್ನು ಹಸ್ತಾಂತರ ಮಾಡಿಲ್ಲ ಸಂಪೂರ್ಣ ಆಗುವವರೆಗೂ ಜವಾಬ್ದಾರಿ ತೆಗೆದುಕೊಳ್ಳುವದಿಲ್ಲ ಇನ್ನು ಸ್ವಲ್ಪ ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇವೆ ಸರಿ ಮಾಡಬೇಕಾಗಿದೆ. *ಡಾ.ಚಂದ್ರಕಲಾ ತಾಲೂಕು ವೈದ್ಯಾಧಿಕಾರಿ.*2
- ಸ್ಪಂದನ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ವ್ಯಸನ ಮುಕ್ತ ದಿನಾಚರಣೆ ಸ್ಪಂದನ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ವ್ಯಸನ ಮುಕ್ತ ದಿನಾಚರಣೆ ಇಳಕಲ್: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಸ್ಪಂದನ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪರಮಪೂಜ್ಯ ಲಿಂಗೈಕ್ಯ ಡಾಕ್ಟರ್ ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಅಮರೇಶ ಬಿ ಕೌದಿ ಅವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ನಿರ್ದೇಶಕ ಉಪನ್ಯಾಸಕರುಗಳಾದ ರವಿ ಎಲ್ ಅರಸಿದ್ದಿ, ವೀರೇಶ ಡಿ ಬಾಚೇನಹಳ್ಳಿಯವರು ಮತ್ತು ಬಸವರಾಜ ಸಿ ತುಂಬಗಿಯವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿಧ್ಯಾರ್ಥಿಗಳಿಗೆ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಪ್ರಾಚಾರ್ಯರು ಮಾತನಾಡಿ ದುಶ್ಚಟಗಳು ಮಾನವನನ್ನು ತನ್ನ ಗುರಿಯಿಂದ ವಿಮುಕರನ್ನಾಗಿ ಮಾಡಿಸುತ್ತೆ . ತಂದೆ ತಾಯಿ ಬಂಧು ಬಳಗದಿಂದ ದೂರ ಮಾಡುತ್ತೆ, ದುಶ್ಚಟಗಳಿಂದ ವಿಧ್ಯಾರ್ಥಿಜೀವನ ಮಸುಕಾಗುತ್ತದೆ ಎಂದು ಕಿವಿ ಮಾತು ಹೇಳಿದರು.ಜೊತೆಗೆ ತಾವು ಶ್ರೀಮಠದಲ್ಲಿ ಕಳೆದಂತ ಬಾಲ್ಯದ ದಿನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಹೇಳಿದರು.ವೇದಿಕೆಯಲ್ಲಿ ಉಪಸ್ಥಿತರಿರುವ ವೀರೇಶ ಡಿ ಬಾಚೇನಹಳ್ಳಿಯವರು ಮಾತನಾಡಿ ದುಶ್ಚಟಗಳು ಯಾವದೇ ರೀತಿಯದಾದರು ಅದು ಆರೋಗ್ಯಕ್ಕೆ ಹಾನಿಕಾರಕ ಎಂದು ಮನವರಿಕೆ ಮಾಡಿ ಕೊಟ್ಟರು. ಮಲ್ಲಿಕಾರ್ಜುನ ಜಗ್ಗಲ್ ನಿರೂಪಿಸಿದರು ರಾಘವೇಂದ್ರ ಭಜಂತ್ರಿ ಸ್ವಾಗತಿಸಿದರು ಮತ್ತು ಸಮೀರ್ ಸರ್ಕಾವಸ್ ವಂದಿಸಿದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.4
- ಸಚಿವ ಸ್ಥಾನಕ್ಕೆ ₹150 ಕೋಟಿ ಬೇಡಿಕೆ?" | ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ಹೇಳಿಕೆಯಲ್ಲಿ ಕುಷ್ಟಗಿ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ₹150 ಕೋಟಿ ರೂಪಾಯಿಗಳವರೆಗೆ ಹಣ ಬೇಡಿಕೆ ಇಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಚಿವ ಸ್ಥಾನಗಳ ಹಂಚಿಕೆ, ಪ್ರಮುಖ ಖಾತೆಗಳ ನೀಡಿಕೆ ಹಾಗೂ ಅಭಿವೃದ್ಧಿ ಅನುದಾನದ ಕೊರತೆ ಕುರಿತು ಸರ್ಕಾರ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜ್ಯದ ಆಡಳಿತ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. #DKShivakumar #DoddanagoudaPatil #KarnatakaPolitics #Congress #BJP #MinisterPost #PoliticalNews #BreakingNews #KarnatakaNews #ASNNews24Kannada #KannadaNews #LatestNews #ViralNews #karnataka1
- ತುಮಕೂರು-ಶ್ರೀ ನೀಲಕಂಠೇರಶ್ವ ಸ್ವಾಮಿ ಪತ್ತಿನ ಸಹಕಾರ ಸಂಘದ 25ನೇ ರಜತ ಮಹೋತ್ಸವ #onlinetv24x7 #ಸೌಹಾರ್ದಸಂಘಗಳು #tumkur1
- ಕೆಎಸ್ಆರ್ಟಿಸಿ ಸಿಬ್ಬಂದಿಯಿಂದ ಅನುಚಿತವರ್ತನೆ ವಿದ್ಯಾರ್ಥಿಗಳ ಪ್ರತಿಭಟನೆ1
- ಹಮ್ಮಿಗಿ ಗ್ರಾಮದಲ್ಲಿ ಸಣ್ಣದೊಂದು ಜನನ ಪ್ರಮಾಣ ಪತ್ರದ ತಿದ್ದುಪಡಿ ಗಾಗಿ ಅಂಗವಿಕಲ ಮಹಿಳೆಯೊಬ್ಬರು ನಾಲ್ಕು ದಿನಗಳಿಂದ ಅಲೆದಾಡುತ್ತಿರುವ ಘಟನೆ... ಹೌದು, ಹಮ್ಮಿಗಿ ಗ್ರಾಮದ ವೀರಮ್ಮ ಬಾಬುಸಾಬ ಮಡಿವಾಳರ ಎಂಬ ವಿಶೇಷ ಚೇತನ ಮಹಿಳೆ, ನವಿನ ಹಾಲಪ್ಪ ಈಟಿ ಅವರ ಜನನ ಪ್ರಮಾಣ ಪತ್ರಕ್ಕಾಗಿ ನಾಲ್ಕು ದಿನಗಳಿಂದ ನಿರಂತರವಾಗಿ ಅಲೆದಾಡುತ್ತಿದ್ದಾರೆ. ಎರಡು ಕಾಲು ಇಲ್ಲದೆ ನಡೆಯಲು ಶಕ್ತಿಯಿಲ್ಲದಿದ್ದರೂ, ಶ್ರಮಪಟ್ಟು ಕಚೇರಿಗೆ ಬಂದರೆ ತಲಾಠಿ ಮಾತ್ರ ಸ್ಥಳದಲ್ಲೇ ಇರುವುದಿಲ್ಲ! ಸಾರ್ವಜನಿಕರ ಕೆಲಸ ಮಾಡಿಕೊಡಬೇಕಾದ ಅಧಿಕಾರಿ ಹೀಗೆ ನಾಪತ್ತೆಯಾಗುತ್ತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಸಂಬಳ ಪಡೆಯುವ ಅಧಿಕಾರಿಗಳು ಹೀಗೆ ಬಡವರನ್ನು, ಅಂಗವಿಕಲರನ್ನು ಸತಾಹಿಸುವುದು ಎಷ್ಟು ಸರಿ ಎನ್ನುವುದು ಗ್ರಾಮಸ್ಥರ ಖಾರವಾದ ಪ್ರಶ್ನೆ.1
- ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ವಿರೋಧಿಸಿ ಪ್ರತಿಭಟನೆ1