logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

🐅 ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿ ದಾಳಿ; 65 ವರ್ಷದ ಬಸವಣ್ಣ ಸಾವು! ಬಡಗಲಪುರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿರುವ ದಾರುಣ ಘಟನೆ ಬಡಗಲಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಬಸವಣ್ಣ (65) ಹುಲಿ ದಾಳಿಗೆ ಬಲಿಯಾಗಿದ್ದಾರೆ. ಎಂದಿನಂತೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಹುಲಿ ದಾಳಿ ನಡೆಸಿದ್ದು, ಬಸವಣ್ಣ ಅವರನ್ನು ಎಳೆದೊಯ್ದಿದೆ ಎನ್ನಲಾಗಿದೆ. ಹುಲಿ ಅವರ ದೇಹದ ಅರ್ಧ ಭಾಗವನ್ನು ತಿಂದು, ಬಳಿಕ ಸಮೀಪದಲ್ಲಿದ್ದ ಕಬ್ಬಿನ ತೋಟದೊಳಗೆ ಎಳೆದೊಯ್ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸಂಜೆಯಾದರೂ ಬಸವಣ್ಣ ಅವರು ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಜಮೀನಿಗೆ ತೆರಳಿ ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ನಡುವೆ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ತಡವಾಗಿ ಸ್ಥಳಕ್ಕೆ ಬಂದಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಡಗಲಪುರ ಗ್ರಾಮದಲ್ಲಿ ಈ ಹಿಂದೆಯೂ ಹುಲಿ ದನ ಹಾಗೂ ಮೇಕೆಗಳನ್ನು ಕೊಂದು ಹಾಕಿತ್ತು. ಹುಲಿ ದಾಳಿ ಆತಂಕದ ಬಗ್ಗೆ ಅರಣ್ಯಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಆದರೆ ಹುಲಿಯನ್ನು ಸೆರೆ ಹಿಡಿಯುವ ಬದಲು ಬೋನು ಅಳವಡಿಸಿ ಅರಣ್ಯ ಇಲಾಖೆ ಅಧಿಕಾರಿಗಳು ನಾಟಕವಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದೀಗ ಹುಲಿ ದಾಳಿಯಿಂದ ರೈತನೊಬ್ಬ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಸವಣ್ಣ ಅವರ ಸಾವಿಗೆ ಅರಣ್ಯ ಇಲಾಖೆಯೇ ಹೊಣೆ ಹೊರಬೇಕು, ಕೂಡಲೇ ಹುಲಿಯನ್ನು ಸೆರೆ ಹಿಡಿಯಬೇಕು ಹಾಗೂ ಸ್ಥಳಕ್ಕೆ ಅರಣ್ಯ ಸಚಿವರು ಭೇಟಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

19 hrs ago
user_ಸುದ್ಧಿ ಕಿರಣ
ಸುದ್ಧಿ ಕಿರಣ
ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
19 hrs ago
fec09714-8794-454d-ac1a-4c4c2b9d2e04

🐅 ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿ ದಾಳಿ; 65 ವರ್ಷದ ಬಸವಣ್ಣ ಸಾವು! ಬಡಗಲಪುರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿರುವ ದಾರುಣ ಘಟನೆ ಬಡಗಲಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಬಸವಣ್ಣ (65) ಹುಲಿ ದಾಳಿಗೆ ಬಲಿಯಾಗಿದ್ದಾರೆ. ಎಂದಿನಂತೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಹುಲಿ ದಾಳಿ ನಡೆಸಿದ್ದು, ಬಸವಣ್ಣ ಅವರನ್ನು ಎಳೆದೊಯ್ದಿದೆ ಎನ್ನಲಾಗಿದೆ. ಹುಲಿ ಅವರ ದೇಹದ ಅರ್ಧ ಭಾಗವನ್ನು ತಿಂದು, ಬಳಿಕ ಸಮೀಪದಲ್ಲಿದ್ದ ಕಬ್ಬಿನ ತೋಟದೊಳಗೆ ಎಳೆದೊಯ್ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸಂಜೆಯಾದರೂ ಬಸವಣ್ಣ ಅವರು ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಜಮೀನಿಗೆ ತೆರಳಿ ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ನಡುವೆ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ತಡವಾಗಿ ಸ್ಥಳಕ್ಕೆ ಬಂದಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಡಗಲಪುರ ಗ್ರಾಮದಲ್ಲಿ ಈ ಹಿಂದೆಯೂ ಹುಲಿ ದನ ಹಾಗೂ ಮೇಕೆಗಳನ್ನು ಕೊಂದು ಹಾಕಿತ್ತು. ಹುಲಿ ದಾಳಿ ಆತಂಕದ ಬಗ್ಗೆ ಅರಣ್ಯಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಆದರೆ ಹುಲಿಯನ್ನು ಸೆರೆ ಹಿಡಿಯುವ ಬದಲು ಬೋನು ಅಳವಡಿಸಿ ಅರಣ್ಯ ಇಲಾಖೆ ಅಧಿಕಾರಿಗಳು ನಾಟಕವಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದೀಗ ಹುಲಿ ದಾಳಿಯಿಂದ ರೈತನೊಬ್ಬ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಸವಣ್ಣ ಅವರ ಸಾವಿಗೆ ಅರಣ್ಯ ಇಲಾಖೆಯೇ ಹೊಣೆ ಹೊರಬೇಕು, ಕೂಡಲೇ ಹುಲಿಯನ್ನು ಸೆರೆ ಹಿಡಿಯಬೇಕು ಹಾಗೂ ಸ್ಥಳಕ್ಕೆ ಅರಣ್ಯ ಸಚಿವರು ಭೇಟಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

More news from ಕರ್ನಾಟಕ and nearby areas
  • ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ. ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.
    1
    ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ 
ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ  ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ  
ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ.
ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು.
ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ  ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    1 hr ago
  • ಶಿವಮೊಗ್ಗದಲ್ಲಿ ಐತಿಹಾಸಿಕ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ಭಕ್ತರ ಸಂಭ್ರಮದ ನಡುವೆ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ
    1
    ಶಿವಮೊಗ್ಗದಲ್ಲಿ ಐತಿಹಾಸಿಕ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ
ಭಕ್ತರ ಸಂಭ್ರಮದ ನಡುವೆ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    21 hrs ago
  • ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕೃತ ವೀರ ಸೈನಿಕ ಶಬ್ಬೀರ್ ನಿಧನ ತರೀಕೆರೆ, ಸೆ.14: ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ ಸೈನಿಕ, ಚಾಲಕ ಹಾಗೂ ಮೆಕಾನಿಕ್ ಆಗಿ ಸೇವೆ ಸಲ್ಲಿಸಿ, ಕಾರ್ಗಿಲ್ ಯುದ್ಧದಲ್ಲಿಯೂ ಭಾಗವಹಿಸಿದ್ದ ವೀರ ಸೈನಿಕ ಶಬ್ಬೀರ್ ಅವರು ನಿಧನರಾದರು. ಶಬ್ಬೀರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಿಲಿಟರಿ ಶ್ರೀನಿವಾಸ್ ಅವರು, ದೇಶ ಸೇವೆ ಸಲ್ಲಿಸಿದ ವೀರ ಯೋಧನ ಅಗಲಿಕೆಯಿಂದ ಅಪಾರ ನೋವುಂಟಾಗಿದೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಹಾಗೂ ಅಲ್ಲಾಹ ಕರುಣಿಸಲಿ ಎಂದು ಹೇಳಿದರು. ಅವರು ಪಟ್ಟಣದಲ್ಲಿರುವ ಶಬ್ಬೀರ್ ಅವರ ಸ್ವಗೃಹಕ್ಕೆ ತೆರಳಿ ಮಾತನಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಶಬ್ಬೀರ್ ಅವರು ಭಾರತೀಯ ಸೇನೆಯಲ್ಲಿ ನಾಯಕ್ ಹುದ್ದೆಯವರೆಗೆ ಸೇವೆ ಸಲ್ಲಿಸಿದ್ದರು. 2026–27ನೇ ಸಾಲಿನ ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕಾರಕ್ಕೂ ಅವರು ಭಾಜನರಾಗಿದ್ದರು ಎಂದು ತಿಳಿಸಿದರು. ದೇಶ ಸೇವೆಯ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದ ಶಬ್ಬೀರ್ ಅವರು, ಖಾಜಿ ಬೀದಿಯಲ್ಲಿರುವ ತಮ್ಮ ಸ್ವಂತ ಮನೆಯನ್ನು ಸರ್ಕಾರದ ‘ನಮ್ಮ ಕ್ಲಿನಿಕ್’ ಆಸ್ಪತ್ರೆ ತೆರೆಯಲು ನೀಡಿದ್ದರು. ನಂತರ ತರೀಕೆರೆ ಅಗ್ನಿಶಾಮಕ ದಳದಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು. ಅವರ ನಿಧನದಿಂದ ದೇಶ ಸೇವೆ ಸಲ್ಲಿಸಿದ ವೀರ ಸೈನಿಕನೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ವಿಷಾದಿಸಿದರು. ಶಬ್ಬೀರ್ ಅವರು ಪತ್ನಿ ಜೈದಾ ಬಾನು, ಪುತ್ರ ಫಿದಾ ಮೊಹಮ್ಮದ್ ಹಾಗೂ ಪುತ್ರಿ ನೌಶಾಧಿಕಾ ಅವರನ್ನು ಅಗಲಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರವೀಣ್ ಕೆ.ವಿ., ಠಾಣಾಧಿಕಾರಿ ತಿಪ್ಪೇಸ್ವಾಮಿ ಆರ್., ಸಹಾಯಕ ಠಾಣಾಧಿಕಾರಿ ಡಿ.ಜಿ. ನಾಗೇಂದ್ರ ಹಾಗೂ ಅಗ್ನಿಶಾಮಕ ಸಿಬ್ಬಂದಿ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿ, ಸಂತಾಪ ಸೂಚಿಸಿದರು. ಮಾಜಿ ಸೈನಿಕರಾದ ಎಸ್.ಎಚ್. ಕುಮಾರ್, ದೇವೇಂದ್ರ, ಗೋವಿಂದಪ್ಪ, ಸೋಮಶೇಖರ್ ಸೇರಿದಂತೆ ಲಿಂಗದಹಳ್ಳಿ ಹಾಗೂ ಕಡೂರು ಭಾಗದ ಮಾಜಿ ಸೈನಿಕರು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು. ವರದಿ: ಪ್ರದೀಪ್ ಹೆಚ್ ಈ. ತರೀಕೆರೆ
    4
    ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕೃತ ವೀರ ಸೈನಿಕ ಶಬ್ಬೀರ್ ನಿಧನ

ತರೀಕೆರೆ, ಸೆ.14:

 ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ ಸೈನಿಕ, ಚಾಲಕ ಹಾಗೂ ಮೆಕಾನಿಕ್ ಆಗಿ ಸೇವೆ ಸಲ್ಲಿಸಿ, ಕಾರ್ಗಿಲ್ ಯುದ್ಧದಲ್ಲಿಯೂ ಭಾಗವಹಿಸಿದ್ದ ವೀರ ಸೈನಿಕ ಶಬ್ಬೀರ್ ಅವರು ನಿಧನರಾದರು.

ಶಬ್ಬೀರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಿಲಿಟರಿ ಶ್ರೀನಿವಾಸ್ ಅವರು, ದೇಶ ಸೇವೆ ಸಲ್ಲಿಸಿದ ವೀರ ಯೋಧನ ಅಗಲಿಕೆಯಿಂದ ಅಪಾರ ನೋವುಂಟಾಗಿದೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಹಾಗೂ ಅಲ್ಲಾಹ ಕರುಣಿಸಲಿ ಎಂದು ಹೇಳಿದರು. ಅವರು ಪಟ್ಟಣದಲ್ಲಿರುವ ಶಬ್ಬೀರ್ ಅವರ ಸ್ವಗೃಹಕ್ಕೆ ತೆರಳಿ ಮಾತನಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಶಬ್ಬೀರ್ ಅವರು ಭಾರತೀಯ ಸೇನೆಯಲ್ಲಿ ನಾಯಕ್ ಹುದ್ದೆಯವರೆಗೆ ಸೇವೆ ಸಲ್ಲಿಸಿದ್ದರು. 2026–27ನೇ ಸಾಲಿನ ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕಾರಕ್ಕೂ ಅವರು ಭಾಜನರಾಗಿದ್ದರು ಎಂದು ತಿಳಿಸಿದರು.

ದೇಶ ಸೇವೆಯ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದ ಶಬ್ಬೀರ್ ಅವರು, ಖಾಜಿ ಬೀದಿಯಲ್ಲಿರುವ ತಮ್ಮ ಸ್ವಂತ ಮನೆಯನ್ನು ಸರ್ಕಾರದ ‘ನಮ್ಮ ಕ್ಲಿನಿಕ್’ ಆಸ್ಪತ್ರೆ ತೆರೆಯಲು ನೀಡಿದ್ದರು. ನಂತರ ತರೀಕೆರೆ ಅಗ್ನಿಶಾಮಕ ದಳದಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು. ಅವರ ನಿಧನದಿಂದ ದೇಶ ಸೇವೆ ಸಲ್ಲಿಸಿದ ವೀರ ಸೈನಿಕನೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ವಿಷಾದಿಸಿದರು.

ಶಬ್ಬೀರ್ ಅವರು ಪತ್ನಿ ಜೈದಾ ಬಾನು, ಪುತ್ರ ಫಿದಾ ಮೊಹಮ್ಮದ್ ಹಾಗೂ ಪುತ್ರಿ ನೌಶಾಧಿಕಾ ಅವರನ್ನು ಅಗಲಿದ್ದಾರೆ.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರವೀಣ್ ಕೆ.ವಿ., ಠಾಣಾಧಿಕಾರಿ ತಿಪ್ಪೇಸ್ವಾಮಿ ಆರ್., ಸಹಾಯಕ ಠಾಣಾಧಿಕಾರಿ ಡಿ.ಜಿ. ನಾಗೇಂದ್ರ ಹಾಗೂ ಅಗ್ನಿಶಾಮಕ ಸಿಬ್ಬಂದಿ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿ, ಸಂತಾಪ ಸೂಚಿಸಿದರು.

ಮಾಜಿ ಸೈನಿಕರಾದ ಎಸ್.ಎಚ್. ಕುಮಾರ್, ದೇವೇಂದ್ರ, ಗೋವಿಂದಪ್ಪ, ಸೋಮಶೇಖರ್ ಸೇರಿದಂತೆ ಲಿಂಗದಹಳ್ಳಿ ಹಾಗೂ ಕಡೂರು ಭಾಗದ ಮಾಜಿ ಸೈನಿಕರು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.

ವರದಿ: ಪ್ರದೀಪ್ ಹೆಚ್ ಈ. ತರೀಕೆರೆ
    user_ಪ್ರದೀಪ್ ಹೆಚ್ ಈ. ತರೀಕೆರೆ
    ಪ್ರದೀಪ್ ಹೆಚ್ ಈ. ತರೀಕೆರೆ
    ತರೀಕೆರೆ, ಚಿಕ್ಕಮಗಳೂರು, ಕರ್ನಾಟಕ•
    21 hrs ago
  • ಗೋನೂರಿನಲ್ಲಿ ಗಂಗಾಪೂಜೆ: ಭದ್ರೆಯನ್ನು ಸ್ವಾಗತಿಸಿದ ಹೋರಾಟಗಾರರು" 🚩 #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಭದ್ರಾಮೇಲ್ದಂಡೆ #ಸಮಗ್ರನೀರಾವರಿ #ಬರಡುನೆಲಹಸಿರು #ಕೋದಂಡರಾಮಯ್ಯ #ಎಂಜಯಣ್ಣ #ಮುರುಘರಾಜೇಂದ್ರಒಡೆಯರ್ #ಚಿತ್ರದುರ್ಗಜಿಲ್ಲೆ #ಮೊಳಕಾಲ್ಮೂರು #ಚಳ್ಳಕೆರೆ #ಈಚಘಟ್ಟ #ಬೇಡರರೆಡ್ಡಿಹಳ್ಳಿ #ಕಬೀರಾನಂದಮಠ #ಗೋನೂರುಭದ್ರಾ #ನೀರಾವರಿ #ರೈತಹೋರಾಟ #ಕೆರೆಕಟ್ಟೆ #ಅಣೆಕಟ್ಟು #ನೀರುಸ್ವಾಗತ #ಎರಡನೇಹಂತದಹೋರಾಟ #ಅರ್ಧಗೆಲುವು #ದಶಕಗಳಕನಸು #ರೋಮಾಂಚನದಕ್ಷ #ಪಿಕೋದಂಡರಾಮಯ್ಯ #ಬೇಡರರೆಡ್ಡಿಹಳ್ಳಿಬಸವರೆಡ್ಡಿ #ಕೆಎಸ್ನವೀನ್ #ಚಳ್ಳಕೆರೆಬಸವರಾಜ್ #ನರೇನಹಳ್ಳಿಅರುಣಕುಮಾರ್ #ಜೋಗಿಮಟ್ಟಿಮಹೇಶ್ಬಾಬು #ಗೌನಹಳ್ಳಿಗೋವಿಂದಪ್ಪ #ಶಿವಾಲಿಂಗಾನಂದಸ್ವಾಮೀಜಿ #ಹೋರಾಟಗಾರರಿಗೆನಮನ #ನೀರಿಗಾಗಿಬದುಕು #ಬರಡುನೆಲಕ್ಕೆಜೀವ #ಹಸಿರುಕ್ರಾಂತಿ #ನ್ಯಾಯಕ್ಕಾಗಿಹೋರಾಟ #ಸಂಕಲ್ಪ #BhadraWater #Chitradurga #IrrigationStruggle #Karnataka #BhadraUpperBank #WaterForAll #FarmersFight #GangaPooja #Gonuru #Molakalmuru #SaveFarmers #WaterRevolution #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಬರಡುನೆಲಹಸಿರು #ಕೋದಂಡರಾಮಯ್ಯ #ಎರಡನೇಹಂತದಹೋರಾಟ #BhadraWater #Chitradurga #Karnataka #IrrigationStruggle
    1
    ಗೋನೂರಿನಲ್ಲಿ ಗಂಗಾಪೂಜೆ: ಭದ್ರೆಯನ್ನು ಸ್ವಾಗತಿಸಿದ ಹೋರಾಟಗಾರರು" 🚩
#ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಭದ್ರಾಮೇಲ್ದಂಡೆ #ಸಮಗ್ರನೀರಾವರಿ #ಬರಡುನೆಲಹಸಿರು #ಕೋದಂಡರಾಮಯ್ಯ #ಎಂಜಯಣ್ಣ #ಮುರುಘರಾಜೇಂದ್ರಒಡೆಯರ್
#ಚಿತ್ರದುರ್ಗಜಿಲ್ಲೆ #ಮೊಳಕಾಲ್ಮೂರು #ಚಳ್ಳಕೆರೆ #ಈಚಘಟ್ಟ #ಬೇಡರರೆಡ್ಡಿಹಳ್ಳಿ #ಕಬೀರಾನಂದಮಠ #ಗೋನೂರುಭದ್ರಾ
#ನೀರಾವರಿ #ರೈತಹೋರಾಟ #ಕೆರೆಕಟ್ಟೆ #ಅಣೆಕಟ್ಟು #ನೀರುಸ್ವಾಗತ #ಎರಡನೇಹಂತದಹೋರಾಟ #ಅರ್ಧಗೆಲುವು #ದಶಕಗಳಕನಸು #ರೋಮಾಂಚನದಕ್ಷ
#ಪಿಕೋದಂಡರಾಮಯ್ಯ #ಬೇಡರರೆಡ್ಡಿಹಳ್ಳಿಬಸವರೆಡ್ಡಿ #ಕೆಎಸ್ನವೀನ್ #ಚಳ್ಳಕೆರೆಬಸವರಾಜ್ #ನರೇನಹಳ್ಳಿಅರುಣಕುಮಾರ್ #ಜೋಗಿಮಟ್ಟಿಮಹೇಶ್ಬಾಬು #ಗೌನಹಳ್ಳಿಗೋವಿಂದಪ್ಪ #ಶಿವಾಲಿಂಗಾನಂದಸ್ವಾಮೀಜಿ
#ಹೋರಾಟಗಾರರಿಗೆನಮನ #ನೀರಿಗಾಗಿಬದುಕು #ಬರಡುನೆಲಕ್ಕೆಜೀವ #ಹಸಿರುಕ್ರಾಂತಿ #ನ್ಯಾಯಕ್ಕಾಗಿಹೋರಾಟ #ಸಂಕಲ್ಪ
#BhadraWater #Chitradurga #IrrigationStruggle #Karnataka #BhadraUpperBank #WaterForAll #FarmersFight #GangaPooja #Gonuru #Molakalmuru #SaveFarmers #WaterRevolution
#ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಬರಡುನೆಲಹಸಿರು #ಕೋದಂಡರಾಮಯ್ಯ #ಎರಡನೇಹಂತದಹೋರಾಟ #BhadraWater #Chitradurga #Karnataka #IrrigationStruggle
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
  • ಲಕ್ಷ್ಮಮ್ಮ ಬಡಾವಣೆಯಲ್ಲಿ ಶ್ರೀ ವಿದ್ಯಾ ಗಣಪತಿ ಯೂತ್ ಟ್ರಸ್ಟ್ ವತಿಯಿಂದ ಭರತ ನಾಟ್ಯ ಕಾರ್ಯಕ್ರಮ... ಹಿರಿಯೂರಿನ ಶ್ರೀ ಲಕ್ಷ್ಮಮ್ಮ ಬಡಾವಣೆಯಲ್ಲಿ ಶ್ರೀ ವಿದ್ಯಾ ಗಣಪತಿ ಯೂತ್ ಸೇವಾ ಟ್ರಸ್ಟ್ (ರಿ ) ವತಿಯಿಂದ ಸಾದ್ವಿ ನೃತ್ಯ ಶಾಲೆಯವರು ಭರತ ನಾಟ್ಯ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.. ಸುಮಾರು 10 ಕ್ಕೂ ಹೆಚ್ಚು ನೃತ್ಯಗಳನ್ನು ವಿದ್ಯಾರ್ಥಿ ಗಳು ನಡೆಸಿಕೊಟ್ಟರು.. ಕಾರ್ಯಕ್ರಮವನ್ನು ರೂಪ ಶಿಕ್ಷಕಿಯವರು ನಡೆಸಿಕೊಟ್ಟರು
    2
    ಲಕ್ಷ್ಮಮ್ಮ ಬಡಾವಣೆಯಲ್ಲಿ ಶ್ರೀ ವಿದ್ಯಾ ಗಣಪತಿ ಯೂತ್ ಟ್ರಸ್ಟ್ ವತಿಯಿಂದ ಭರತ ನಾಟ್ಯ ಕಾರ್ಯಕ್ರಮ...
ಹಿರಿಯೂರಿನ ಶ್ರೀ ಲಕ್ಷ್ಮಮ್ಮ ಬಡಾವಣೆಯಲ್ಲಿ ಶ್ರೀ ವಿದ್ಯಾ ಗಣಪತಿ ಯೂತ್ ಸೇವಾ ಟ್ರಸ್ಟ್ (ರಿ ) ವತಿಯಿಂದ ಸಾದ್ವಿ ನೃತ್ಯ ಶಾಲೆಯವರು ಭರತ ನಾಟ್ಯ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.. ಸುಮಾರು 10 ಕ್ಕೂ ಹೆಚ್ಚು ನೃತ್ಯಗಳನ್ನು ವಿದ್ಯಾರ್ಥಿ ಗಳು ನಡೆಸಿಕೊಟ್ಟರು..
ಕಾರ್ಯಕ್ರಮವನ್ನು ರೂಪ ಶಿಕ್ಷಕಿಯವರು ನಡೆಸಿಕೊಟ್ಟರು
    user_ಅಪ್ಪಾಜಿ ಬಂಡೆ
    ಅಪ್ಪಾಜಿ ಬಂಡೆ
    Yoga instructor ಹಿರಿಯೂರು, ಚಿತ್ರದುರ್ಗ, ಕರ್ನಾಟಕ•
    22 hrs ago
  • ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ. ಶಿಗ್ಗಾಂವಿ. ರೈತಪರ ಒಕ್ಕೂಟ ಹಾಗೂ ಕನ್ನಡ ಪರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಪ್ರಮುಖ ಮೂರು ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆಯನ್ನು ದಿನಾಂಕ್ 16. 9. 2026. ಬುಧವಾರ ರಂದು, ಪೋಸ್ಟ್ ಆಫೀಸ್ ನಿಂದ ಕಿತ್ತೂರು ರಾಣಿ ಚೆನ್ನಮ್ಮರ ಸರ್ಕಲ್ ವರೆಗೂ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಆದ ಕಾರಣ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಮ್ಮ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕ ರೈತ ಸಂಘದ ಅಧ್ಯಕ್ಷರಾದ ಶ್ರೀ ಬಸಲಿಂಗಪ್ಪ ನರಗುಂದ ಮನವಿ ಮಾಡಿದರು.
    2
    ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ.
ಶಿಗ್ಗಾಂವಿ. ರೈತಪರ ಒಕ್ಕೂಟ ಹಾಗೂ ಕನ್ನಡ ಪರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಪ್ರಮುಖ ಮೂರು ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆಯನ್ನು ದಿನಾಂಕ್ 16. 9. 2026. ಬುಧವಾರ ರಂದು, ಪೋಸ್ಟ್ ಆಫೀಸ್ ನಿಂದ ಕಿತ್ತೂರು ರಾಣಿ ಚೆನ್ನಮ್ಮರ ಸರ್ಕಲ್ ವರೆಗೂ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಆದ ಕಾರಣ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಮ್ಮ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕ ರೈತ ಸಂಘದ ಅಧ್ಯಕ್ಷರಾದ ಶ್ರೀ ಬಸಲಿಂಗಪ್ಪ ನರಗುಂದ ಮನವಿ ಮಾಡಿದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    3 hrs ago
  • *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದ‍ಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು  ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದ‍ಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ  ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು  , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    3 hrs ago
  • ಶಿವಮೊಗ್ಗ-ವಂದೇ ಮಾತರಂ ಗೀತೆ ಎರಡೇ ಚರಣ: ಕಾರ್ಯಕ್ರಮ ದಿಂದ ಹೊರನಡೆದ ಶಾಸಕ ಶಿವಮೊಗ್ಗ: ವಂದೇ ಮಾತರಂ ಗೀತೆಯಲ್ಲಿ ಕೇವಲ ಎರಡು ಚರಣವನ್ನು ಹಾಡಿದ್ದಕ್ಕೆ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯ ಕ್ರಮದಿಂದ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೊರ ನಡೆದಿರುವ ಘಟನೆ ನಡೆದಿದೆ. ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳ ವಾರ ಅಂತಾರಾಷ್ಟ್ರೀಯ ಪ್ರಜಾ‌ಪ್ರಭುತ್ವ ದಿನದ ಕಾರ್ಯಕ್ರಮವನ್ನು‌ ಜಿಲ್ಲಾಡಳಿತ ಆಯೋಜಿಸಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಚನ್ನಬಸಪ್ಪ ಕಾರ್ಯಕ್ರಮ ದಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಹಾಡಿದ್ದಕ್ಕೆ ವೇದಿಕೆಯಲ್ಲಿಯೇ ಅಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಅವರು ಇದ್ದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣ ಹಾಡಿ ಅಪಮಾನ ಮಾಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ‌ ಕಾರ್ಯಕ್ರಮದಲ್ಲಿ ಎರಡು ಚರಣ ಹಾಡಬೇಕೆಂದು ಎಲ್ಲಿ ಇದೆ, ಆದೇಶ ತೋರಿಸಿ ಎಂದು ಆಗ್ರಹಿಸಿದರು. ಜಿಲ್ಲಾ‌ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ‌ ಮಲ್ಲೇಶಪ್ಪ ರಾಜ್ಯ ಸರ್ಕಾರದ ಆದೇಶವನ್ನು ತೋರಿಸಿದರು. ಇದಕ್ಕೆ ಗರಂ ಆದ ಶಾಸಕರು ಹಾಗಾದ್ರೆ ಕೇಂದ್ರ ಸರ್ಕಾರದ ಆದೇಶವನ್ನು‌ ಮೊಟಕುಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ವಂದೇ ಮಾತರಂ ಗೀತೆಗೆ ಅಪಮಾನ ಮಾಡಿದ ವೇದಿಕೆಯಲ್ಲಿ ನಾನು ಇರಲ್ಲ ಎಂದು ಭವನದಿಂದ ಹೊರ ನಡೆದರು. ನಂತರ ತಮ್ಮ ಕಚೇರಿಯಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಸೇರಿ ಒಂದು ಕಾನೂನು ಮಾಡುತ್ತದೆ. ಆದರೆ ರಾಜ್ಯ ಸರ್ಕಾರವು ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳು ಇರುವ ಕಾರ್ಯಕ್ರಮ ದಲ್ಲಿ ಮಾತ್ರ ಪೂರ್ಣ ಗೀತೆ ಹಾಡಬೇಕು, ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಕೇವಲ ಎರಡು ಚರಣ ಹಾಡಬೇಕೆಂದು ಆದೇಶ ಮಾಡಿದೆ.‌ ಇದು ಸರಿ ಅಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಣಯ ವನ್ನು ತೆಗೆದುಕೊಂಡು ವಂದೇ ಮಾತರಂ ಗೀತೆಗೆ 150 ವರ್ಷವಾದ ಕಾರಣ ಗೀತೆಯನ್ನು ಗಾಯನ ಮಾಡಬೇಕೆಂದು ಸಂಸತ್ತಿನಲ್ಲಿ ತಿದ್ದುಪಡಿ ಮಾಡಲಾಗಿದೆ‌. ಇದಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ‌. ಆದರೆ ಇದನ್ನು ರಾಜ್ಯ ಸರ್ಕಾರ ತನ್ನ ಕ್ಯಾಬಿನೆಟ್​ನಲ್ಲಿ ತೀರ್ಮಾನ ಮಾಡಲಾಗಿದೆ ಎಂದು ವಂದೇ ಮಾತರಂನ ಎರಡು ಚರಣ ಮಾತ್ರ ಹಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಇಂದು ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆಯಂದು ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣವನ್ನು ಹಾಡಲಾಯಿತು. ಇದನ್ನು ಪ್ರಶ್ನಿಸಿದರೆ, ರಾಜ್ಯ ಸರ್ಕಾರ‌ದ ಆದೇಶ ಎಂದು ಜಿಲ್ಲಾಧಿಕಾರಿ ಗಳು ತಿಳಿಸಿದ್ದಾರೆ‌. ಇದರಿಂದ ನಾನು ಕಾರ್ಯಕ್ರಮದಿಂದ ಹೊರಗೆ ಬಂದಿದ್ದೇನೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದರು. ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗಳು, ಕೇಂದ್ರ ಸಚಿವರು ಇರುವ ಕಾರ್ಯಕ್ರಮ ಹೊರತುಪಡಿಸಿ ಉಳಿದ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡಿನ ಎರಡು ಚರಣ ಮಾತ್ರ ಹಾಡಬೇಕೆಂದು ರಾಜ್ಯ ಸರ್ಕಾರ ಇತ್ತೀಚಿಗೆ ಆದೇಶ ಮಾಡಿದೆ. ಹಾಗಾದ್ರೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪಿಎಂ ಅವರಿಗೆ ಒಂದು ಕಾನೂನು, ಸಾಮಾನ್ಯ ಜನರಿಗೆ ಒಂದು ಕಾನೂನು ಇದೆಯೇ ಎಂದು ಪ್ರಶ್ನಿಸಿದರು‌. ಕಾನೂನು ಅನ್ನು ಗಾಳಿಗೆ ತೂರುವ ಕೆಲಸ ಮಾಡುತ್ತಿದ್ದಿರಾ, ನೀವು ಈ ದೇಶದ ಪ್ರಜೆಗಳು ಅಲ್ವಾ ಎಂದು ಅವರು ಪ್ರಶ್ನಿಸಿದರು‌. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬೇರೆ ಬೇರೆ ಕಾನೂನು ಇದೆಯೇ ಎಂದರು. ಜನಗಣಮನ ಗೀತೆಯಲ್ಲಿ ಎಲ್ಲ ರಾಜ್ಯಗಳ ಹೆಸರು ಇದೆಯೇ ಎಂದು ಪ್ರಶ್ನಿಸಿದರು‌‌‌. ಇದು ಅಕ್ಷಮ್ಯ ಅಪರಾಧವಾಗಿದೆ‌. ನ್ಯಾಯಾಧೀಶರ ಮುಂದೆ ಇಟ್ಟುಕೊಂಡು ನ್ಯಾಯಾಂಗಕ್ಕೆ ಕೊಡಲಿ ಪೆಟ್ಟು ಕೊಡುವ ಕೆಲಸ‌ ಮಾಡಲಾ ಗುತ್ತಿದೆ. ಸಂವಿಧಾನಕ್ಕೆ ಅಪಪ್ರಚಾರ ಮಾಡಲು ಶಾಸಕ ಚನ್ನಿ ಬಿಡಲ್ಲ ಎಂದು ಹೇಳಿದರು. ಸರ್ಕಾರಿ ಕಾರ್ಯಕ್ರಮದಲ್ಲೂ ಗೀತೆಯನ್ನು ಪೂರ್ಣ ಹಾಡಬೇಕಿತ್ತು. ನೀವು ನಿರ್ಣಯ ಮಾಡಿದಂತೆ ನಡೆಯಲ್ಲ.‌ ಕಾಂಗ್ರೆಸ್ ಪಕ್ಷ ವನ್ನು ಅಲ್ಪಸಂಖ್ಯಾಂತರಿಗೆ ಅಡ ಇಡಲಾಗಿದೆ ಎಂದು ಶಾಸಕ ಚನ್ನಬಸಪ್ಪ ಕಿಡಿಕಾರಿದ್ದಾರೆ. ಇದನ್ನು ಗಂಭೀರವಾಗಿ ತೆಗೆದುಕೊಂಡು ಹೋಗಬೇಕಿದೆ.‌ ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. 136 ಜನ ಇದ್ದೇವೆಂದು ಕಾಂಗ್ರೆಸ್ ಏನು ಮಾಡಿದ್ರು ನಡೆಯುತ್ತದೆ ಎಂದು ತಿಳಿದು‌ಕೊಂಡರೆ ತಪ್ಪು‌.‌ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ‌.‌ ಬಂಕಿಮಚಂದ್ರ ಚಟರ್ಜಿ ಆರಾಧ್ಯ ದೈವ ಎಂದರು‌. ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಬೇಕಿತ್ತು‌. ಆದರೆ ಈಗ ಬೇಡವೇ‌ ಎಂದು ಪ್ರಶ್ನಿಸಿದರು. ಸಂವಿಧಾನಕ್ಕೆ ಬಿಕ್ಕಟ್ಟಿನ ಸಂದರ್ಭ ಬಂದಿದೆ. ಇದನ್ನು ರಾಜ್ಯ ಸರ್ಕಾರ ಹುಟ್ಟುಹಾಕಿದೆ. ನಮ್ಮಲ್ಲಿ ಭಾರತೀಯ ನೀತಿ ಸಂಹಿತೆ ಇದೆಯೇ ಹೊರತು ಕರ್ನಾಟಕ ನೀತಿ ಸಂಹಿತೆ ಅಂತ ಇಲ್ಲ‌‌. ಮುಂದಿನ ವಾರ ನಡೆಯುವ ಅಧಿವೇಶನದಲ್ಲಿ ಇದನ್ನು ಪ್ರಶ್ನೆ ಮಾಡಲಾಗುವುದು ಎಂದರು.
    1
    ಶಿವಮೊಗ್ಗ-ವಂದೇ ಮಾತರಂ ಗೀತೆ ಎರಡೇ ಚರಣ: ಕಾರ್ಯಕ್ರಮ ದಿಂದ ಹೊರನಡೆದ ಶಾಸಕ 
ಶಿವಮೊಗ್ಗ: ವಂದೇ ಮಾತರಂ ಗೀತೆಯಲ್ಲಿ ಕೇವಲ ಎರಡು ಚರಣವನ್ನು ಹಾಡಿದ್ದಕ್ಕೆ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯ ಕ್ರಮದಿಂದ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೊರ ನಡೆದಿರುವ ಘಟನೆ ನಡೆದಿದೆ.
ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳ ವಾರ ಅಂತಾರಾಷ್ಟ್ರೀಯ ಪ್ರಜಾ‌ಪ್ರಭುತ್ವ ದಿನದ ಕಾರ್ಯಕ್ರಮವನ್ನು‌ ಜಿಲ್ಲಾಡಳಿತ ಆಯೋಜಿಸಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಚನ್ನಬಸಪ್ಪ ಕಾರ್ಯಕ್ರಮ ದಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಹಾಡಿದ್ದಕ್ಕೆ ವೇದಿಕೆಯಲ್ಲಿಯೇ ಅಕ್ಷೇಪ ವ್ಯಕ್ತಪಡಿಸಿದರು.
ಅಲ್ಲದೆ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಅವರು ಇದ್ದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣ ಹಾಡಿ ಅಪಮಾನ ಮಾಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ‌
ಕಾರ್ಯಕ್ರಮದಲ್ಲಿ ಎರಡು ಚರಣ ಹಾಡಬೇಕೆಂದು ಎಲ್ಲಿ ಇದೆ, ಆದೇಶ ತೋರಿಸಿ ಎಂದು ಆಗ್ರಹಿಸಿದರು. ಜಿಲ್ಲಾ‌ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ‌ ಮಲ್ಲೇಶಪ್ಪ ರಾಜ್ಯ ಸರ್ಕಾರದ ಆದೇಶವನ್ನು ತೋರಿಸಿದರು. ಇದಕ್ಕೆ ಗರಂ ಆದ ಶಾಸಕರು ಹಾಗಾದ್ರೆ ಕೇಂದ್ರ ಸರ್ಕಾರದ ಆದೇಶವನ್ನು‌ ಮೊಟಕುಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ವಂದೇ ಮಾತರಂ ಗೀತೆಗೆ ಅಪಮಾನ ಮಾಡಿದ ವೇದಿಕೆಯಲ್ಲಿ ನಾನು ಇರಲ್ಲ ಎಂದು ಭವನದಿಂದ ಹೊರ ನಡೆದರು.
ನಂತರ ತಮ್ಮ ಕಚೇರಿಯಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಸೇರಿ ಒಂದು ಕಾನೂನು ಮಾಡುತ್ತದೆ. ಆದರೆ ರಾಜ್ಯ ಸರ್ಕಾರವು ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳು ಇರುವ ಕಾರ್ಯಕ್ರಮ ದಲ್ಲಿ ಮಾತ್ರ ಪೂರ್ಣ ಗೀತೆ ಹಾಡಬೇಕು, ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಕೇವಲ ಎರಡು ಚರಣ ಹಾಡಬೇಕೆಂದು ಆದೇಶ ಮಾಡಿದೆ.‌ ಇದು ಸರಿ ಅಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಣಯ ವನ್ನು ತೆಗೆದುಕೊಂಡು ವಂದೇ ಮಾತರಂ ಗೀತೆಗೆ 150 ವರ್ಷವಾದ ಕಾರಣ ಗೀತೆಯನ್ನು ಗಾಯನ ಮಾಡಬೇಕೆಂದು ಸಂಸತ್ತಿನಲ್ಲಿ ತಿದ್ದುಪಡಿ ಮಾಡಲಾಗಿದೆ‌. ಇದಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ‌. ಆದರೆ ಇದನ್ನು ರಾಜ್ಯ ಸರ್ಕಾರ ತನ್ನ ಕ್ಯಾಬಿನೆಟ್​ನಲ್ಲಿ ತೀರ್ಮಾನ ಮಾಡಲಾಗಿದೆ ಎಂದು ವಂದೇ ಮಾತರಂನ ಎರಡು ಚರಣ ಮಾತ್ರ ಹಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಇಂದು ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆಯಂದು ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣವನ್ನು ಹಾಡಲಾಯಿತು. ಇದನ್ನು ಪ್ರಶ್ನಿಸಿದರೆ, ರಾಜ್ಯ ಸರ್ಕಾರ‌ದ ಆದೇಶ ಎಂದು ಜಿಲ್ಲಾಧಿಕಾರಿ ಗಳು ತಿಳಿಸಿದ್ದಾರೆ‌. ಇದರಿಂದ ನಾನು ಕಾರ್ಯಕ್ರಮದಿಂದ ಹೊರಗೆ ಬಂದಿದ್ದೇನೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದರು.
ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗಳು, ಕೇಂದ್ರ ಸಚಿವರು ಇರುವ ಕಾರ್ಯಕ್ರಮ ಹೊರತುಪಡಿಸಿ ಉಳಿದ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡಿನ ಎರಡು ಚರಣ ಮಾತ್ರ ಹಾಡಬೇಕೆಂದು ರಾಜ್ಯ ಸರ್ಕಾರ ಇತ್ತೀಚಿಗೆ ಆದೇಶ ಮಾಡಿದೆ. ಹಾಗಾದ್ರೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪಿಎಂ ಅವರಿಗೆ ಒಂದು ಕಾನೂನು, ಸಾಮಾನ್ಯ ಜನರಿಗೆ ಒಂದು ಕಾನೂನು ಇದೆಯೇ ಎಂದು ಪ್ರಶ್ನಿಸಿದರು‌. ಕಾನೂನು ಅನ್ನು ಗಾಳಿಗೆ ತೂರುವ ಕೆಲಸ ಮಾಡುತ್ತಿದ್ದಿರಾ, ನೀವು ಈ ದೇಶದ ಪ್ರಜೆಗಳು ಅಲ್ವಾ ಎಂದು ಅವರು ಪ್ರಶ್ನಿಸಿದರು‌. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬೇರೆ ಬೇರೆ ಕಾನೂನು ಇದೆಯೇ ಎಂದರು.
ಜನಗಣಮನ ಗೀತೆಯಲ್ಲಿ ಎಲ್ಲ ರಾಜ್ಯಗಳ ಹೆಸರು ಇದೆಯೇ ಎಂದು ಪ್ರಶ್ನಿಸಿದರು‌‌‌. ಇದು ಅಕ್ಷಮ್ಯ ಅಪರಾಧವಾಗಿದೆ‌. ನ್ಯಾಯಾಧೀಶರ ಮುಂದೆ ಇಟ್ಟುಕೊಂಡು ನ್ಯಾಯಾಂಗಕ್ಕೆ ಕೊಡಲಿ ಪೆಟ್ಟು ಕೊಡುವ ಕೆಲಸ‌ ಮಾಡಲಾ ಗುತ್ತಿದೆ. ಸಂವಿಧಾನಕ್ಕೆ ಅಪಪ್ರಚಾರ ಮಾಡಲು ಶಾಸಕ ಚನ್ನಿ ಬಿಡಲ್ಲ ಎಂದು ಹೇಳಿದರು.
ಸರ್ಕಾರಿ ಕಾರ್ಯಕ್ರಮದಲ್ಲೂ ಗೀತೆಯನ್ನು ಪೂರ್ಣ ಹಾಡಬೇಕಿತ್ತು. ನೀವು ನಿರ್ಣಯ ಮಾಡಿದಂತೆ ನಡೆಯಲ್ಲ.‌ ಕಾಂಗ್ರೆಸ್ ಪಕ್ಷ ವನ್ನು ಅಲ್ಪಸಂಖ್ಯಾಂತರಿಗೆ ಅಡ ಇಡಲಾಗಿದೆ ಎಂದು ಶಾಸಕ ಚನ್ನಬಸಪ್ಪ ಕಿಡಿಕಾರಿದ್ದಾರೆ.
ಇದನ್ನು ಗಂಭೀರವಾಗಿ ತೆಗೆದುಕೊಂಡು ಹೋಗಬೇಕಿದೆ.‌ ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. 136 ಜನ ಇದ್ದೇವೆಂದು ಕಾಂಗ್ರೆಸ್ ಏನು ಮಾಡಿದ್ರು ನಡೆಯುತ್ತದೆ ಎಂದು ತಿಳಿದು‌ಕೊಂಡರೆ ತಪ್ಪು‌.‌ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ‌.‌ ಬಂಕಿಮಚಂದ್ರ ಚಟರ್ಜಿ ಆರಾಧ್ಯ ದೈವ ಎಂದರು‌.
ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಬೇಕಿತ್ತು‌. ಆದರೆ ಈಗ ಬೇಡವೇ‌ ಎಂದು ಪ್ರಶ್ನಿಸಿದರು. ಸಂವಿಧಾನಕ್ಕೆ ಬಿಕ್ಕಟ್ಟಿನ ಸಂದರ್ಭ ಬಂದಿದೆ. ಇದನ್ನು ರಾಜ್ಯ ಸರ್ಕಾರ ಹುಟ್ಟುಹಾಕಿದೆ. ನಮ್ಮಲ್ಲಿ ಭಾರತೀಯ ನೀತಿ ಸಂಹಿತೆ ಇದೆಯೇ ಹೊರತು ಕರ್ನಾಟಕ ನೀತಿ ಸಂಹಿತೆ ಅಂತ ಇಲ್ಲ‌‌. ಮುಂದಿನ ವಾರ ನಡೆಯುವ ಅಧಿವೇಶನದಲ್ಲಿ ಇದನ್ನು ಪ್ರಶ್ನೆ ಮಾಡಲಾಗುವುದು ಎಂದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.