logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಜ್ಯ ಸರ್ಕಾರ ಭಾಲ್ಕಿ ತಾಲೂಕಕ್ಕೆ ಅನ್ಯಾಯ ಮಾಡಿದೆ ಪ್ರಕಾಶ್ ಖಂಡ್ರೆ ಆಗ್ರಹ. ರಾಜ್ಯ ಸರ್ಕಾರ ಘೋಷಿಸಿರುವ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಭಾಲ್ಕಿ ತಾಲೂಕನ್ನು ಕೈಬಿಟ್ಟಿರುವುದು ತಾಲೂಕಿನ ರೈತರಿಗೆ ಮಾಡಿರುವ ಘೋರ ಅನ್ಯಾಯ ಎಂದು ನಾನು ತೀವ್ರವಾಗಿ ಖಂಡಿಸುತ್ತೇನೆ. ಪ್ರಸಕ್ತ ವರ್ಷ ಭಾಲ್ಕಿ ತಾಲೂಕಿನಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿದೆ. ಸಕಾಲದಲ್ಲಿ ಮಳೆಯಾಗದ ಕಾರಣ ರೈತರು ಬಿತ್ತನೆ ಮಾಡಿದ ಬೆಳೆಗಳು ಒಣಗಿ ನಾಶವಾಗುತ್ತಿವೆ. ರೈತರು ಬೀಜ, ರಸಗೊಬ್ಬರ, ಔಷಧಿ, ಕಳೆ ತೆಗೆಯುವುದು ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಸಾವಿರಾರು ರೂಪಾಯಿ ಖರ್ಚು ಮಾಡಿ ಈಗಾಗಲೇ ಕೈ ಸುಟ್ಟುಕೊಂಡಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಭಾಲ್ಕಿ ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಗಾಯದ ಮೇಲೆ ಬರೆ ಎಳೆದಂತಾಗಿದೆ. ತಾಲೂಕಿನ ಬ್ಯಾರೇಜ್‌ಗಳು, ಬಾವಿಗಳು, ಕೊಳವೆಬಾವಿಗಳು ಹಾಗೂ ಕೆರೆ-ಕಟ್ಟೆಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ಮುಂದಿನ ದಿನಗಳಲ್ಲಿ ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರು ಮತ್ತು ಮೇವಿನ ತೀವ್ರ ಅಭಾವ ಉಂಟಾಗುವ ಆತಂಕ ಎದುರಾಗಿದೆ. ಕೃಷಿಯನ್ನೇ ನಂಬಿಕೊಂಡಿರುವ ರೈತರು ಮತ್ತು ಕೃಷಿ ಕೂಲಿ ಕಾರ್ಮಿಕರು ಜೀವನೋಪಾಯಕ್ಕಾಗಿ ಬೇರೆ ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಭಾಲ್ಕಿ ಕ್ಷೇತ್ರದ ಶಾಸಕರೇ ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದಾರೆ, ಜಿಲ್ಲಾ ಉಸ್ತುವಾರಿ ಸಚಿವರೂ ಅವರೇ ಆಗಿದ್ದಾರೆ ಹಾಗೂ ಅವರ ಪುತ್ರರು ಸಂಸದರಾಗಿದ್ದಾರೆ. ಇಷ್ಟೆಲ್ಲ ಅಧಿಕಾರ, ಸ್ಥಾನಮಾನ ಮತ್ತು ರಾಜಕೀಯ ಪ್ರಭಾವ ಹೊಂದಿದ್ದರೂ ಭಾಲ್ಕಿ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ, ಸಂಕಷ್ಟದಲ್ಲಿರುವ ರೈತರಿಗೆ ನ್ಯಾಯ ಒದಗಿಸಲು ಸಾಧ್ಯವಾಗದಿರುವುದು ಅವರ ಆಡಳಿತಾತ್ಮಕ ಹಾಗೂ ರಾಜಕೀಯ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ತಾಲೂಕಿನ ರೈತರು ತೀವ್ರ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅವರ ಹಿತವನ್ನು ಕಾಪಾಡಿ ಸರ್ಕಾರದಿಂದ ಅಗತ್ಯ ಪರಿಹಾರ ದೊರಕಿಸಿಕೊಡುವುದು ಜನಪ್ರತಿನಿಧಿಗಳ ಜವಾಬ್ದಾರಿ. ಆದರೆ ಆ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಅಧಿಕಾರದಲ್ಲಿದ್ದುಕೊಂಡೂ ತಮ್ಮದೇ ತಾಲೂಕಿನ ರೈತರಿಗೆ ನ್ಯಾಯ ಕೊಡಿಸಲು ಸಾಧ್ಯವಾಗದಿದ್ದರೆ, ಆ ಅಧಿಕಾರದಿಂದ ತಾಲೂಕಿನ ಜನರಿಗೆ ಏನು ಪ್ರಯೋಜನ? ಎಂಬ ಪ್ರಶ್ನೆಯನ್ನು ಇಂದು ಭಾಲ್ಕಿ ತಾಲೂಕಿನ ರೈತರು ಕೇಳುವಂತಾಗಿದೆ. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಭಾಲ್ಕಿ ತಾಲೂಕಿನ ವಾಸ್ತವ ಪರಿಸ್ಥಿತಿಯನ್ನು ಮರುಪರಿಶೀಲಿಸಬೇಕು. ಭಾಲ್ಕಿ ತಾಲೂಕನ್ನು ತಕ್ಷಣವೇ ಬರಪೀಡಿತ ತಾಲೂಕು ಎಂದು ಘೋಷಿಸಿ, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಕುಡಿಯುವ ನೀರಿನ ಪರ್ಯಾಯ ವ್ಯವಸ್ಥೆ, ಜಾನುವಾರುಗಳಿಗೆ ಮೇವು ಹಾಗೂ ಅಗತ್ಯವಿರುವ ಕಡೆ ಗೋಶಾಲೆಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ಕೇವಲ ಭಾಲ್ಕಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿದರೆ ಸಾಲದು. ಬರದಿಂದ ಬೆಳೆ ಕಳೆದುಕೊಂಡಿರುವ ರೈತರಿಗೆ ಬದುಕು ಕಟ್ಟಿಕೊಳ್ಳಲು ಸರ್ಕಾರ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹50,000 ಬೆಳೆ ನಷ್ಟ ಪರಿಹಾರ ನೀಡಬೇಕು. ಅದೇ ರೀತಿ, ಬರ ಹಾಗೂ ಬೆಳೆ ನಷ್ಟದಿಂದ ರೈತರು ಸಾಲದ ಸುಳಿಯಲ್ಲಿ ಸಿಲುಕಿರುವುದರಿಂದ ಪ್ರತಿ ರೈತನ ₹2 ಲಕ್ಷದವರೆಗಿನ ಕೃಷಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ನಾನು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ. ನೆರೆಯ ಮಹಾರಾಷ್ಟ್ರದಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಸರ್ಕಾರ ಪರಿಹಾರ ಹಾಗೂ ಸಾಲಮನ್ನಾದಂತಹ ಮಹತ್ವದ ಕ್ರಮಗಳನ್ನು ಕೈಗೊಂಡಿರುವಾಗ, ಕರ್ನಾಟಕದ ರೈತರಿಗೂ ಅದೇ ರೀತಿಯ ಆರ್ಥಿಕ ರಕ್ಷಣೆ ನೀಡುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಬರದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಕೇವಲ ಭರವಸೆ ನೀಡದೆ, ₹50,000 ಪ್ರತಿ ಹೆಕ್ಟೇರ್ ಪರಿಹಾರ ಮತ್ತು ₹2 ಲಕ್ಷದವರೆಗೆ ಕೃಷಿ ಸಾಲಮನ್ನಾ ಘೋಷಿಸುವ ಮೂಲಕ ಸರ್ಕಾರ ರೈತರ ನೆರವಿಗೆ ನಿಲ್ಲಬೇಕು. ರಾಜ್ಯ ಸರ್ಕಾರಕ್ಕೆ ಒಂದು ವಾರದ ಗಡುವು ನೀಡುತ್ತಿದ್ದೇನೆ. ಒಂದು ವಾರದೊಳಗೆ ಭಾಲ್ಕಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸದಿದ್ದರೆ, ತಾಲೂಕಿನ ರೈತರ ಹಿತಕ್ಕಾಗಿ ರೈತರೊಂದಿಗೆ ಸೇರಿ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತೇನೆ.

1 hr ago
user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
ಈಶ್ವರ್ ಬೆಳಕು ನ್ಯೂಸ್ ಕನ್ನಡ User
Building society ಭಾಲ್ಕಿ, ಬೀದರ್, ಕರ್ನಾಟಕ•
1 hr ago
727ff01a-779d-4ced-b83e-449207cd836a

ರಾಜ್ಯ ಸರ್ಕಾರ ಭಾಲ್ಕಿ ತಾಲೂಕಕ್ಕೆ ಅನ್ಯಾಯ ಮಾಡಿದೆ ಪ್ರಕಾಶ್ ಖಂಡ್ರೆ ಆಗ್ರಹ. ರಾಜ್ಯ ಸರ್ಕಾರ ಘೋಷಿಸಿರುವ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಭಾಲ್ಕಿ ತಾಲೂಕನ್ನು ಕೈಬಿಟ್ಟಿರುವುದು ತಾಲೂಕಿನ ರೈತರಿಗೆ ಮಾಡಿರುವ ಘೋರ ಅನ್ಯಾಯ ಎಂದು ನಾನು ತೀವ್ರವಾಗಿ ಖಂಡಿಸುತ್ತೇನೆ. ಪ್ರಸಕ್ತ ವರ್ಷ ಭಾಲ್ಕಿ ತಾಲೂಕಿನಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿದೆ. ಸಕಾಲದಲ್ಲಿ ಮಳೆಯಾಗದ ಕಾರಣ ರೈತರು ಬಿತ್ತನೆ ಮಾಡಿದ ಬೆಳೆಗಳು ಒಣಗಿ ನಾಶವಾಗುತ್ತಿವೆ. ರೈತರು ಬೀಜ, ರಸಗೊಬ್ಬರ, ಔಷಧಿ, ಕಳೆ ತೆಗೆಯುವುದು ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಸಾವಿರಾರು ರೂಪಾಯಿ ಖರ್ಚು ಮಾಡಿ ಈಗಾಗಲೇ ಕೈ ಸುಟ್ಟುಕೊಂಡಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಭಾಲ್ಕಿ ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಗಾಯದ ಮೇಲೆ ಬರೆ ಎಳೆದಂತಾಗಿದೆ. ತಾಲೂಕಿನ ಬ್ಯಾರೇಜ್‌ಗಳು, ಬಾವಿಗಳು, ಕೊಳವೆಬಾವಿಗಳು ಹಾಗೂ ಕೆರೆ-ಕಟ್ಟೆಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ಮುಂದಿನ ದಿನಗಳಲ್ಲಿ ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರು ಮತ್ತು ಮೇವಿನ ತೀವ್ರ ಅಭಾವ ಉಂಟಾಗುವ ಆತಂಕ ಎದುರಾಗಿದೆ. ಕೃಷಿಯನ್ನೇ ನಂಬಿಕೊಂಡಿರುವ ರೈತರು ಮತ್ತು ಕೃಷಿ ಕೂಲಿ ಕಾರ್ಮಿಕರು ಜೀವನೋಪಾಯಕ್ಕಾಗಿ ಬೇರೆ ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಭಾಲ್ಕಿ ಕ್ಷೇತ್ರದ ಶಾಸಕರೇ ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದಾರೆ, ಜಿಲ್ಲಾ ಉಸ್ತುವಾರಿ ಸಚಿವರೂ ಅವರೇ ಆಗಿದ್ದಾರೆ ಹಾಗೂ ಅವರ ಪುತ್ರರು ಸಂಸದರಾಗಿದ್ದಾರೆ. ಇಷ್ಟೆಲ್ಲ ಅಧಿಕಾರ, ಸ್ಥಾನಮಾನ ಮತ್ತು ರಾಜಕೀಯ ಪ್ರಭಾವ ಹೊಂದಿದ್ದರೂ ಭಾಲ್ಕಿ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ, ಸಂಕಷ್ಟದಲ್ಲಿರುವ ರೈತರಿಗೆ ನ್ಯಾಯ ಒದಗಿಸಲು ಸಾಧ್ಯವಾಗದಿರುವುದು ಅವರ ಆಡಳಿತಾತ್ಮಕ ಹಾಗೂ ರಾಜಕೀಯ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ತಾಲೂಕಿನ ರೈತರು ತೀವ್ರ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅವರ ಹಿತವನ್ನು ಕಾಪಾಡಿ ಸರ್ಕಾರದಿಂದ ಅಗತ್ಯ ಪರಿಹಾರ ದೊರಕಿಸಿಕೊಡುವುದು ಜನಪ್ರತಿನಿಧಿಗಳ ಜವಾಬ್ದಾರಿ. ಆದರೆ ಆ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಅಧಿಕಾರದಲ್ಲಿದ್ದುಕೊಂಡೂ ತಮ್ಮದೇ ತಾಲೂಕಿನ ರೈತರಿಗೆ ನ್ಯಾಯ ಕೊಡಿಸಲು ಸಾಧ್ಯವಾಗದಿದ್ದರೆ, ಆ ಅಧಿಕಾರದಿಂದ ತಾಲೂಕಿನ ಜನರಿಗೆ ಏನು ಪ್ರಯೋಜನ? ಎಂಬ ಪ್ರಶ್ನೆಯನ್ನು ಇಂದು ಭಾಲ್ಕಿ ತಾಲೂಕಿನ ರೈತರು ಕೇಳುವಂತಾಗಿದೆ. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಭಾಲ್ಕಿ ತಾಲೂಕಿನ ವಾಸ್ತವ ಪರಿಸ್ಥಿತಿಯನ್ನು ಮರುಪರಿಶೀಲಿಸಬೇಕು. ಭಾಲ್ಕಿ ತಾಲೂಕನ್ನು ತಕ್ಷಣವೇ ಬರಪೀಡಿತ ತಾಲೂಕು ಎಂದು ಘೋಷಿಸಿ, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಕುಡಿಯುವ ನೀರಿನ ಪರ್ಯಾಯ ವ್ಯವಸ್ಥೆ, ಜಾನುವಾರುಗಳಿಗೆ ಮೇವು ಹಾಗೂ ಅಗತ್ಯವಿರುವ ಕಡೆ ಗೋಶಾಲೆಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ಕೇವಲ ಭಾಲ್ಕಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿದರೆ ಸಾಲದು. ಬರದಿಂದ ಬೆಳೆ ಕಳೆದುಕೊಂಡಿರುವ ರೈತರಿಗೆ ಬದುಕು ಕಟ್ಟಿಕೊಳ್ಳಲು ಸರ್ಕಾರ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹50,000 ಬೆಳೆ ನಷ್ಟ ಪರಿಹಾರ ನೀಡಬೇಕು. ಅದೇ ರೀತಿ, ಬರ ಹಾಗೂ ಬೆಳೆ ನಷ್ಟದಿಂದ ರೈತರು ಸಾಲದ ಸುಳಿಯಲ್ಲಿ ಸಿಲುಕಿರುವುದರಿಂದ ಪ್ರತಿ ರೈತನ ₹2 ಲಕ್ಷದವರೆಗಿನ ಕೃಷಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ನಾನು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ. ನೆರೆಯ ಮಹಾರಾಷ್ಟ್ರದಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಸರ್ಕಾರ ಪರಿಹಾರ ಹಾಗೂ ಸಾಲಮನ್ನಾದಂತಹ ಮಹತ್ವದ ಕ್ರಮಗಳನ್ನು ಕೈಗೊಂಡಿರುವಾಗ, ಕರ್ನಾಟಕದ ರೈತರಿಗೂ ಅದೇ ರೀತಿಯ ಆರ್ಥಿಕ ರಕ್ಷಣೆ ನೀಡುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಬರದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಕೇವಲ ಭರವಸೆ ನೀಡದೆ, ₹50,000 ಪ್ರತಿ ಹೆಕ್ಟೇರ್ ಪರಿಹಾರ ಮತ್ತು ₹2 ಲಕ್ಷದವರೆಗೆ ಕೃಷಿ ಸಾಲಮನ್ನಾ ಘೋಷಿಸುವ ಮೂಲಕ ಸರ್ಕಾರ ರೈತರ ನೆರವಿಗೆ ನಿಲ್ಲಬೇಕು. ರಾಜ್ಯ ಸರ್ಕಾರಕ್ಕೆ ಒಂದು ವಾರದ ಗಡುವು ನೀಡುತ್ತಿದ್ದೇನೆ. ಒಂದು ವಾರದೊಳಗೆ ಭಾಲ್ಕಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸದಿದ್ದರೆ, ತಾಲೂಕಿನ ರೈತರ ಹಿತಕ್ಕಾಗಿ ರೈತರೊಂದಿಗೆ ಸೇರಿ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತೇನೆ.

More news from Bidar and nearby areas
  • ಸಾರಿಗೆ ಬಸ್'ನಲ್ಲಿ ಚಿನ್ನದ ಸರ ಕದಿಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು ಬಸವಕಲ್ಯಾಣ: ನಗರದ ಬಸ್ ನಿಲ್ದಾಣ ಬಳಿ ಸಾರಿಗೆ ಬಸ್'ನಲ್ಲಿ ಚಿನ್ನದ ಸರ ಕದಿಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು; ನಗರದಲ್ಲಿ ನಡೆದ ಘಟನೆ
    1
    ಸಾರಿಗೆ ಬಸ್'ನಲ್ಲಿ ಚಿನ್ನದ ಸರ ಕದಿಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು
ಬಸವಕಲ್ಯಾಣ: ನಗರದ ಬಸ್ ನಿಲ್ದಾಣ ಬಳಿ ಸಾರಿಗೆ ಬಸ್'ನಲ್ಲಿ ಚಿನ್ನದ ಸರ ಕದಿಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು; ನಗರದಲ್ಲಿ ನಡೆದ ಘಟನೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    1 hr ago
  • ಮುಸ್ಲಿಂ ಯುವಕನಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಕೋರಿದ ಕೇಂದ್ರ ಸಚಿವ ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಆಡಿಯೋ ವೈರಲ್
    1
    ಮುಸ್ಲಿಂ ಯುವಕನಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಕೋರಿದ ಕೇಂದ್ರ ಸಚಿವ ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಆಡಿಯೋ ವೈರಲ್
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    6 hrs ago
  • ಪ್ರವಾದಿಯವರ ಆದರ್ಶಗಳ ಅನುಷ್ಠಾನ: ಈದ್ ಮಿಲಾದ್ ಅಂಗವಾಗಿ ಸೇವಾ ಕಾರ್ಯಗಳು ಚಿಂಚೋಳಿ, ಆ.27: ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರ 1451ನೇ ಈದ್-ಎ-ಮಿಲಾದ್-ಉನ್-ನಬಿ ಪವಿತ್ರ ಹಬ್ಬವನ್ನು ಚಿಂಚೋಳಿಯಲ್ಲಿ ಅತ್ಯಂತ ಭಕ್ತಿ, ಶ್ರದ್ಧೆ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಆಚರಿಸಲಾಯಿತು. ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ, ಜಮಿಯತ್ ಉಲೇಮಾ ಹಾಗೂ ಸ್ಥಳೀಯ ಮುಸ್ಲಿಂ ಬಾಂಧವರ ಸಹಯೋಗದಲ್ಲಿ ವಿವಿಧ ಸಾಮಾಜಿಕ ಹಾಗೂ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರವಾದಿಯವರ ಆದರ್ಶಗಳನ್ನು ಜನರಿಗೆ ಪರಿಚಯಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ ಅಧ್ಯಕ್ಷ ಮಸ್ತಾನ ಅಲಿ ಪಟ್ಟೇದಾರ್, ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರು ಇಡೀ ಮಾನವಕುಲಕ್ಕೆ ಶಾಂತಿ, ಕರುಣೆ, ಸಹೋದರತೆ ಹಾಗೂ ಸಮಾನತೆಯ ಸಂದೇಶ ಸಾರಿದ ಮಹಾನ್ ವ್ಯಕ್ತಿತ್ವವಾಗಿದ್ದು, ಬಡವರು, ಅನಾಥರು ಮತ್ತು ಸಂಕಷ್ಟದಲ್ಲಿರುವವರ ಸೇವೆಯೇ ನಿಜವಾದ ಧರ್ಮ ಎಂಬುದನ್ನು ತಮ್ಮ ಜೀವನದ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು. ಈದ್ ಮಿಲಾದ್ ಹಬ್ಬವು ಕೇವಲ ಸಂಭ್ರಮದ ಆಚರಣೆಯಾಗಿರದೆ, ಪ್ರವಾದಿಯವರ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ದಿನವಾಗಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಂಗವಾಗಿ ಚಿಂಚೋಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು-ಹಂಪಲು ಹಾಗೂ ಉಪಹಾರಗಳನ್ನು ವಿತರಿಸಿ, ಅವರ ಶೀಘ್ರ ಗುಣಮುಖತೆಗಾಗಿ ಶುಭ ಹಾರೈಕೆ ಸಲ್ಲಿಸಲಾಯಿತು. ರೋಗಿಗಳೊಂದಿಗೆ ಆತ್ಮೀಯವಾಗಿ ಮಾತನಾಡಿದ ಮುಖಂಡರು ಮಾನವೀಯ ಕಾಳಜಿಯನ್ನು ಮೆರೆದರು.
    2
    ಪ್ರವಾದಿಯವರ ಆದರ್ಶಗಳ ಅನುಷ್ಠಾನ: ಈದ್ ಮಿಲಾದ್ ಅಂಗವಾಗಿ ಸೇವಾ ಕಾರ್ಯಗಳು
ಚಿಂಚೋಳಿ, ಆ.27: ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರ 1451ನೇ ಈದ್-ಎ-ಮಿಲಾದ್-ಉನ್-ನಬಿ ಪವಿತ್ರ ಹಬ್ಬವನ್ನು ಚಿಂಚೋಳಿಯಲ್ಲಿ ಅತ್ಯಂತ ಭಕ್ತಿ, ಶ್ರದ್ಧೆ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಆಚರಿಸಲಾಯಿತು. ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ, ಜಮಿಯತ್ ಉಲೇಮಾ ಹಾಗೂ ಸ್ಥಳೀಯ ಮುಸ್ಲಿಂ ಬಾಂಧವರ ಸಹಯೋಗದಲ್ಲಿ ವಿವಿಧ ಸಾಮಾಜಿಕ ಹಾಗೂ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರವಾದಿಯವರ ಆದರ್ಶಗಳನ್ನು ಜನರಿಗೆ ಪರಿಚಯಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ ಅಧ್ಯಕ್ಷ ಮಸ್ತಾನ ಅಲಿ ಪಟ್ಟೇದಾರ್, ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರು ಇಡೀ ಮಾನವಕುಲಕ್ಕೆ ಶಾಂತಿ, ಕರುಣೆ, ಸಹೋದರತೆ ಹಾಗೂ ಸಮಾನತೆಯ ಸಂದೇಶ ಸಾರಿದ ಮಹಾನ್ ವ್ಯಕ್ತಿತ್ವವಾಗಿದ್ದು, ಬಡವರು, ಅನಾಥರು ಮತ್ತು ಸಂಕಷ್ಟದಲ್ಲಿರುವವರ ಸೇವೆಯೇ ನಿಜವಾದ ಧರ್ಮ ಎಂಬುದನ್ನು ತಮ್ಮ ಜೀವನದ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು. ಈದ್ ಮಿಲಾದ್ ಹಬ್ಬವು ಕೇವಲ ಸಂಭ್ರಮದ ಆಚರಣೆಯಾಗಿರದೆ, ಪ್ರವಾದಿಯವರ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ದಿನವಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಂಗವಾಗಿ ಚಿಂಚೋಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು-ಹಂಪಲು ಹಾಗೂ ಉಪಹಾರಗಳನ್ನು ವಿತರಿಸಿ, ಅವರ ಶೀಘ್ರ ಗುಣಮುಖತೆಗಾಗಿ ಶುಭ ಹಾರೈಕೆ ಸಲ್ಲಿಸಲಾಯಿತು. ರೋಗಿಗಳೊಂದಿಗೆ ಆತ್ಮೀಯವಾಗಿ ಮಾತನಾಡಿದ ಮುಖಂಡರು ಮಾನವೀಯ ಕಾಳಜಿಯನ್ನು ಮೆರೆದರು.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    13 hrs ago
  • ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.
    1
    ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು
ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ
ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ
ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    5 hrs ago
  • ನೇಪಾಳ ಪ್ರವಾಹದಲ್ಲಿ ಸಾವನಪ್ಪಿದವರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ‌ ನೀಡಲಿ ಕಲಬುರಗಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ‌‌ ನೀಡದ್ದು ನೇಪಾಳ ಪ್ರವಾಹದಲ್ಲಿ ಕರ್ನಾಟಕ ಮಾತ್ರ ಅಲ್ಲ ದೇಶದ ಸಾಕಷ್ಟು ಜನ ಸಿಲುಕಿದ್ದಾರೆ ನೂರಾರು ಜನ‌ ಕೊಚ್ಚಿಕೊಂಡು ಕೆಲ ಜನ ಪ್ರಾಣ ಕೊಟ್ಟಿದ್ದಾರೆ. ಅದಕ್ಕಾಗಿ ನಾನು ಶ್ರದ್ಧಾಂಜಲಿ ಅರ್ಪಿಸುತ್ತೆನೆ. ಜೊತೆಗೆ ಪ್ರಧಾನಿಗೆ ಪತ್ರ ಬರೆಯುತ್ತಿದ್ದೆನೆ ಕರ್ನಾಟಕ ಅಷ್ಟೇ ಅಲ್ಲ ದೇಶದ ಎಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ ಅವರಿಗೆ ಪರಿಹಾರ ಕೊಡಬೇಕು. ಹಾಗೂ ನೇಪಾಳದ ಜೊತೆಗೆ ನಿಲ್ಲುವಂತೆ ಕೂಡ ಪತ್ರ ಬರೆದಿದ್ದನೆ. ಎಂದು‌ ಡಾ- ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು. ಸಂಪುಟದಲ್ಲಿ ಕೆಲ ಸಚಿವರ ಬದಲಾವಣೆಗೆ ಡಿಕೆಶಿ ದೆಹಲಿ ಬೇಟಿ ವಿಚಾರ‌. ನಾನು ಇವಾಗ ಕಲಬುರಗಿಯಲ್ಲಿದ್ದೆನೆ. ನನಗೆ ಯಾವುದೇ ಮಾಹಿತಿ ಇಲ್ಲ ಏನೆ ಬದಲಾವಣೆ ಇದ್ದರು ನನ್ನ ಬಳಿ ಬರಲೇ ಬೇಕು ಅವರು ಏಲ್ಲೆ ಹೋದ್ರು ನನ್ನ ಬಳಿ ಬರಬೇಕು ಬಂದ ಮೇಲೆ ನಿಮಗೆ ಮಾಹಿತಿ ನೀಡುತ್ತೆನೆ ಎಂದು ಹೇಳಿದ್ದಾರೆ
    1
    ನೇಪಾಳ ಪ್ರವಾಹದಲ್ಲಿ ಸಾವನಪ್ಪಿದವರಿಗೆ  ಕೇಂದ್ರ ಸರ್ಕಾರದಿಂದ ಪರಿಹಾರ‌ ನೀಡಲಿ
ಕಲಬುರಗಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ‌‌ ನೀಡದ್ದು ನೇಪಾಳ ಪ್ರವಾಹದಲ್ಲಿ ಕರ್ನಾಟಕ ಮಾತ್ರ ಅಲ್ಲ ದೇಶದ ಸಾಕಷ್ಟು ಜನ ಸಿಲುಕಿದ್ದಾರೆ ನೂರಾರು ಜನ‌ ಕೊಚ್ಚಿಕೊಂಡು ಕೆಲ ಜನ ಪ್ರಾಣ ಕೊಟ್ಟಿದ್ದಾರೆ. ಅದಕ್ಕಾಗಿ ನಾನು ಶ್ರದ್ಧಾಂಜಲಿ ಅರ್ಪಿಸುತ್ತೆನೆ. ಜೊತೆಗೆ ಪ್ರಧಾನಿಗೆ ಪತ್ರ ಬರೆಯುತ್ತಿದ್ದೆನೆ ಕರ್ನಾಟಕ ಅಷ್ಟೇ ಅಲ್ಲ ದೇಶದ ಎಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ ಅವರಿಗೆ ಪರಿಹಾರ ಕೊಡಬೇಕು. ಹಾಗೂ
ನೇಪಾಳದ ಜೊತೆಗೆ ನಿಲ್ಲುವಂತೆ ಕೂಡ ಪತ್ರ ಬರೆದಿದ್ದನೆ. ಎಂದು‌ ಡಾ- ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು. ಸಂಪುಟದಲ್ಲಿ ಕೆಲ ಸಚಿವರ ಬದಲಾವಣೆಗೆ ಡಿಕೆಶಿ ದೆಹಲಿ ಬೇಟಿ ವಿಚಾರ‌. ನಾನು ಇವಾಗ ಕಲಬುರಗಿಯಲ್ಲಿದ್ದೆನೆ.
ನನಗೆ ಯಾವುದೇ ಮಾಹಿತಿ ಇಲ್ಲ
ಏನೆ ಬದಲಾವಣೆ ಇದ್ದರು ನನ್ನ ಬಳಿ ಬರಲೇ ಬೇಕು ಅವರು ಏಲ್ಲೆ ಹೋದ್ರು ನನ್ನ ಬಳಿ ಬರಬೇಕು ಬಂದ ಮೇಲೆ ನಿಮಗೆ ಮಾಹಿತಿ ನೀಡುತ್ತೆನೆ ಎಂದು ಹೇಳಿದ್ದಾರೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    3 hrs ago
  • ಗೌರ (ಬಿ) ಗ್ರಾಮದಲ್ಲಿ ಆ.30 ಮತ್ತು 31ರಂದು ಪವಾಡ ಪುರುಷ ಶ್ರೀ ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಉಡಿ ತುಂಬುವ ಕಾರ್ಯಕ್ರಮ. ಗೌರ ಬಿಯಲ್ಲಿ ಅ.30, 31ರಂದು ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ. ಅಫಜಲಪೂರ: ಶ್ರಾವಣ ಮಾಸದ ಪ್ರಯುಕ್ತ ತಾಲೂಕಿನ ಗೌರ ಬಿ ಗ್ರಾಮದಲ್ಲಿ ಅ.30 ಹಾಗೂ 31ರಂದು ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಹಾಗೂ ನೂತನ ಪಲ್ಲಕ್ಕಿ ಉತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಅ.30ರಂದು ಸಂಜೆ 6 ಗಂಟೆಗೆ 21 ಪಲ್ಲಕ್ಕಿಗಳ ಸಂಗಮ ನಡೆಯಲಿದೆ. ಅ.31ರಂದು ಬೆಳಗ್ಗೆ 8 ಗಂಟೆಗೆ ಗಂಗಸ್ಥಳ ಕಾರ್ಯಕ್ರಮ ನಡೆಯಲಿದ್ದು, ಬಳಿಕ ದೈವೀ ಪುರುಷರಿಂದ ದೈವವಾಣಿ ನುಡಿಯುವ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಗ್ರಾಮದ ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಸರ್ವಧರ್ಮ ಧಾರ್ಮಿಕ ಸಭೆ ಜರುಗಲಿದ್ದು, ಅಭಿನವ ಯಲ್ಲಾಲಿಂಗ ಮಹಾರಾಜರು, ಕೈಲಾಸಲಿಂಗ ಶಿವಾಚಾರ್ಯರು, ಅತನೂರು ಗ್ರಾಮದ ಗುರುಬಸವ ಶಿವಾಚಾರ್ಯರು,ಶ್ರೀ ಕನ್ನಯ್ಯ ಮಹಾರಾಜರು, ಮುಗಳಿ ಗ್ರಾಮದ ಶ್ರೀ ಭೋಗೇಶ್ವರ ಮಹಾಸ್ವಾಮೀಜಿ ಸೇರಿದಂತೆ ಅನೇಕ ಮಠದ ಮಹಾಸ್ವಾಮಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ಎಂ.ವೈ. ಪಾಟೀಲ್, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಅರುಣಕುಮಾರ ಪಾಟೀಲ್, ನಿತಿನ್ ಗುತ್ತೇದಾರ, ಶಿವಕುಮಾರ್ ನಾಟಿಕಾರ, ಜೆ ಎಂ ಕೊರಬು, ಶಂಕು ಮ್ಯಾಕೇರಿ, ಕೆ.ಜಿ. ಪೂಜಾರಿ ಹಾಗೂ ತಹಸೀಲ್ದಾರ್ ಸಂಜೀವ ಕುಮಾರ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿಠ್ಠಲ್ ಮಿರಗಿ, ಜಟ್ಟೆಪ್ಪ ಪೂಜಾರಿ, ಶರಣು ದಿವಾಣಜಿ, ನಿಂಗಣ್ಣ ಪೂಜಾರಿ, ಬಸವರಾಜ ಕುಂಬಾರ, ಸಂಗನಬಸಪ್ಪ ಪೂಜಾರಿ, ಅಪ್ಪಾಪಟೇಲ್ ಪಟೇಲ್, ನಾಗರಾಜ ದಿವಾಣಜಿ, ಗುರುಲಿಂಗಪ್ಪ ಶಿಂಪಿ, ಶ್ರೀಕಾಂತ್ ಪೂಜಾರಿ, ಚೌಡಪ್ಪ ಚೌಡಿಹಾಳ, ಸಿದ್ದಾರ್ಥ ಪೂಜಾರಿ, ಸಿದ್ದರಾಮ ಗಿಲ್ಕಿ, ಶರಣಪ್ಪ ಅಮೋಗಿ, ಪರಮಾನಂದ ಸಭದ, ಕಿರಣ ಚೌಡಿಹಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    1
    ಗೌರ (ಬಿ) ಗ್ರಾಮದಲ್ಲಿ ಆ.30 ಮತ್ತು 31ರಂದು ಪವಾಡ ಪುರುಷ ಶ್ರೀ ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಉಡಿ ತುಂಬುವ ಕಾರ್ಯಕ್ರಮ.
ಗೌರ ಬಿಯಲ್ಲಿ ಅ.30, 31ರಂದು ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ.
ಅಫಜಲಪೂರ: ಶ್ರಾವಣ ಮಾಸದ ಪ್ರಯುಕ್ತ ತಾಲೂಕಿನ ಗೌರ ಬಿ ಗ್ರಾಮದಲ್ಲಿ ಅ.30 ಹಾಗೂ 31ರಂದು ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಹಾಗೂ ನೂತನ ಪಲ್ಲಕ್ಕಿ ಉತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ.
ಅ.30ರಂದು ಸಂಜೆ 6 ಗಂಟೆಗೆ 21 ಪಲ್ಲಕ್ಕಿಗಳ ಸಂಗಮ ನಡೆಯಲಿದೆ. ಅ.31ರಂದು ಬೆಳಗ್ಗೆ 8 ಗಂಟೆಗೆ ಗಂಗಸ್ಥಳ ಕಾರ್ಯಕ್ರಮ ನಡೆಯಲಿದ್ದು, ಬಳಿಕ ದೈವೀ ಪುರುಷರಿಂದ ದೈವವಾಣಿ ನುಡಿಯುವ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಗ್ರಾಮದ ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 1 ಗಂಟೆಗೆ ಸರ್ವಧರ್ಮ ಧಾರ್ಮಿಕ ಸಭೆ ಜರುಗಲಿದ್ದು, ಅಭಿನವ ಯಲ್ಲಾಲಿಂಗ ಮಹಾರಾಜರು, ಕೈಲಾಸಲಿಂಗ ಶಿವಾಚಾರ್ಯರು,  ಅತನೂರು ಗ್ರಾಮದ ಗುರುಬಸವ ಶಿವಾಚಾರ್ಯರು,ಶ್ರೀ ಕನ್ನಯ್ಯ ಮಹಾರಾಜರು, ಮುಗಳಿ ಗ್ರಾಮದ ಶ್ರೀ ಭೋಗೇಶ್ವರ ಮಹಾಸ್ವಾಮೀಜಿ ಸೇರಿದಂತೆ ಅನೇಕ ಮಠದ ಮಹಾಸ್ವಾಮಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಶಾಸಕ ಎಂ.ವೈ. ಪಾಟೀಲ್, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಅರುಣಕುಮಾರ ಪಾಟೀಲ್, ನಿತಿನ್ ಗುತ್ತೇದಾರ, ಶಿವಕುಮಾರ್ ನಾಟಿಕಾರ, ಜೆ ಎಂ ಕೊರಬು, ಶಂಕು ಮ್ಯಾಕೇರಿ, ಕೆ.ಜಿ. ಪೂಜಾರಿ ಹಾಗೂ ತಹಸೀಲ್ದಾರ್ ಸಂಜೀವ ಕುಮಾರ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ವಿಠ್ಠಲ್ ಮಿರಗಿ, ಜಟ್ಟೆಪ್ಪ ಪೂಜಾರಿ, ಶರಣು ದಿವಾಣಜಿ, ನಿಂಗಣ್ಣ ಪೂಜಾರಿ, ಬಸವರಾಜ ಕುಂಬಾರ, ಸಂಗನಬಸಪ್ಪ ಪೂಜಾರಿ, ಅಪ್ಪಾಪಟೇಲ್ ಪಟೇಲ್, ನಾಗರಾಜ ದಿವಾಣಜಿ, ಗುರುಲಿಂಗಪ್ಪ ಶಿಂಪಿ, ಶ್ರೀಕಾಂತ್ ಪೂಜಾರಿ, ಚೌಡಪ್ಪ ಚೌಡಿಹಾಳ, ಸಿದ್ದಾರ್ಥ ಪೂಜಾರಿ, ಸಿದ್ದರಾಮ ಗಿಲ್ಕಿ, ಶರಣಪ್ಪ ಅಮೋಗಿ, ಪರಮಾನಂದ ಸಭದ, ಕಿರಣ ಚೌಡಿಹಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    3 hrs ago
  • ನಗರದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಮಾಜಿ ಎಂಎಲ್ಸಿ ವಿಜಯಸಿಂಗ್ ಬಸವಕಲ್ಯಾಣ: ನಗರದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಮಾಜಿ ಎಂಎಲ್ಸಿ ವಿಜಯಸಿಂಗ್
    1
    ನಗರದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಮಾಜಿ ಎಂಎಲ್ಸಿ ವಿಜಯಸಿಂಗ್
ಬಸವಕಲ್ಯಾಣ: ನಗರದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಮಾಜಿ ಎಂಎಲ್ಸಿ ವಿಜಯಸಿಂಗ್
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    2 hrs ago
  • ಗಂಗಾ ನದಿಯಲ್ಲಿ ಪ್ರವಾಹ ತಡೆಯಲು ಹೋಗಿ ದುರಂತ: 21 ಕಾರ್ಮಿಕರ ಸಾವು, ವೈರಲ್ ಆಯ್ತು ದೋಣಿ ಮುಳುಗಿದ ದೃಶ್ಯಗಂಗಾ ನದಿಯಲ್ಲಿ ದೋಣಿ ಮಗುಚಿ ಭೀಕರ ದುರಂತ: 21 ಕಾರ್ಮಿಕರು ದುರಂತ ಸಾವು, ಒಬ್ಬ ನಾಪತ್ತೆ ಬಿಹಾರದಲ್ಲಿ ಪಲ್ಟಿಯಾದ ದೋಣಿ: ಗಂಗಾ ನದಿಯಲ್ಲಿ ಮುಳುಗಿ 21 ಮಂದಿ ಸಾವು; 20 ಜನರ ರಕ್ಷಣೆ
    1
    ಗಂಗಾ ನದಿಯಲ್ಲಿ ಪ್ರವಾಹ ತಡೆಯಲು ಹೋಗಿ ದುರಂತ: 21 ಕಾರ್ಮಿಕರ ಸಾವು, ವೈರಲ್ ಆಯ್ತು ದೋಣಿ ಮುಳುಗಿದ ದೃಶ್ಯಗಂಗಾ ನದಿಯಲ್ಲಿ ದೋಣಿ ಮಗುಚಿ ಭೀಕರ ದುರಂತ: 21 ಕಾರ್ಮಿಕರು ದುರಂತ ಸಾವು, ಒಬ್ಬ ನಾಪತ್ತೆ
ಬಿಹಾರದಲ್ಲಿ ಪಲ್ಟಿಯಾದ ದೋಣಿ: ಗಂಗಾ ನದಿಯಲ್ಲಿ ಮುಳುಗಿ 21 ಮಂದಿ ಸಾವು; 20 ಜನರ ರಕ್ಷಣೆ
    user_JB NEWS ಕನ್ನಡ
    JB NEWS ಕನ್ನಡ
    Bidar, Karnataka•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.