Shuru
Apke Nagar Ki App…
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಿಸರಳ್ಳಿ ಗ್ರಾಮದಲ್ಲಿ ಪಕೀರಮ್ಮ ಅವರ ತಂಡದ ನೇತೃತ್ವದಲ್ಲಿ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಾಮಧೇನು ಕಲ್ಪವೃಕ್ಷ ತಂಡವು ತಮ್ಮ ಕಲಾ ಪ್ರದರ್ಶನವನ್ನು ನೀಡಿತು.
Nitin 9071795156 press reporte
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಿಸರಳ್ಳಿ ಗ್ರಾಮದಲ್ಲಿ ಪಕೀರಮ್ಮ ಅವರ ತಂಡದ ನೇತೃತ್ವದಲ್ಲಿ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಾಮಧೇನು ಕಲ್ಪವೃಕ್ಷ ತಂಡವು ತಮ್ಮ ಕಲಾ ಪ್ರದರ್ಶನವನ್ನು ನೀಡಿತು.
More news from ಕರ್ನಾಟಕ and nearby areas
- ರಾಜ್ಯದ ಧಾರವಾಡ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು, ಕಾಂಗ್ರೆಸ್ ಪಕ್ಷದವರು ಮೂಲತಃ ಆರ್ಎಸ್ಎಸ್ ವಿರೋಧಿಗಳಾಗಿದ್ದು, ಅವರಿಂದ ಒಳ್ಳೆಯದನ್ನು ಅಪೇಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಆರ್ಎಸ್ಎಸ್ ನಿನ್ನೆ ಇತ್ತು, ಇಂದು ಇದೆ ಮತ್ತು ನಾಳೆಯೂ ಇರುತ್ತದೆ ಎಂದು ಹೇಳಿದ ಅವರು, ಇಂತಹ ವಿರೋಧಿಗಳನ್ನು ಎದುರಿಸಿಯೇ ಸಂಘಟನೆಯು ಗಟ್ಟಿಯಾಗಿ ಬೆಳೆದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ, ಹಿಂದೆ ಇಂದಿರಾ ಗಾಂಧಿ ಅವರಿಗೇ ಆರ್ಎಸ್ಎಸ್ ಅನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.1
- ಹಾವೇರಿಯ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಹಾವೇರಿ ಜಿಲ್ಲಾ ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ ಜರುಗಿತು. ಈ ಸಭೆಯಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಶಾಸಕರುಗಳಾದ ಶಿವರಾಜ ಸಜ್ಜನ, ಅರುಣಕುಮಾರ ಪೂಜಾರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ವಿ.ಸಂಕನೂರ ಮತ್ತು ಶ್ರೀ ಲಿಂಗರಾಜ ಪಾಟೀಲ್ ಉಪಸ್ಥಿತರಿದ್ದರು. ಇವರೊಂದಿಗೆ ಪಕ್ಷದ ಮುಖಂಡರುಗಳಾದ ದತ್ತಾತ್ರೇಯ, ಭರತ ಬೊಮ್ಮಾಯಿ, ಡಾ. ಬಸವರಾಜ ಕೇಲಗಾರ, ಜಯತೀರ್ಥ ಕಟ್ಟಿ, ಡಿ.ಎಸ್ ಮಾಳಗಿ ಹಾಗೂ ಗವಿಸಿದ್ದಪ್ಪ ದ್ಯಾಮಣ್ಣವರ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಮುಖಂಡರು ಭಾಗವಹಿಸಿದ್ದರು.1
- ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ರಾಜ್ಯದ ಮಳೆ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಹಾಗೂ ಜನಸಾಮಾನ್ಯರ ನೆರವಿಗೆ ಬರಲು ಶಂಬುಲಿಂಗ್ ಹಿರೇಮಠ್ ಮುಂದಾಗಿದ್ದಾರೆ. ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದ್ದು, ರೈತರು ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ, ಬರಗಾಲದ ಭವಣೆಯನ್ನು ತಪ್ಪಿಸಲು ಮತ್ತು ರೈತರ ಸಂಕಷ್ಟವನ್ನು ಪಾರು ಮಾಡಲು ತಾವೇ ಸ್ವತಃ ತಪಸ್ಸು ಮಾಡಲು ಸಿದ್ಧವಿರುವುದಾಗಿ ಅವರು ಘೋಷಿಸಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಉತ್ತಮ ಮಳೆಯಾಗಲೆಂದು ಸಂಪ್ರದಾಯಬದ್ಧ ಧಾರ್ಮಿಕ ವಿಧಿವಿಧಾನಗಳು, ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ನಡೆಸಲು ಸಿದ್ಧರಾಗಿರುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿ, ಬೆಳೆಗಳು ಸಮೃದ್ಧಿಯಾಗಿ ಬೆಳೆದು ಜನಜೀವನ ಸುಗಮವಾಗಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ಹಿರೇಮಠ್ ಹೇಳಿದ್ದಾರೆ. ಪ್ರಕೃತಿಯ ಅನುಗ್ರಹಕ್ಕಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿರುವ ಅವರು, ಕೇವಲ ಪ್ರಾರ್ಥನೆಯಷ್ಟೇ ಅಲ್ಲದೆ, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ, ಮರ ನೆಡುವಿಕೆ ಹಾಗೂ ನೀರಿನ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.1
- ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಎಪಿಎಮ್ಸಿ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಕುಕನೂರು ತಾಲೂಕು ಘಟಕ, ಯುವ ಘಟಕ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳ ಪದಗ್ರಹಣ, ಆದೇಶ ಪತ್ರ ಹಾಗೂ ಸದಸ್ಯತ್ವ ಕಾರ್ಡ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ ಅವರು, ಬಣಜಿಗ ಸಮಾಜದ ಏಳಿಗೆಗಾಗಿ ಪ್ರತಿಯೊಬ್ಬ ವ್ಯಕ್ತಿಯೂ ಏಕತೆಯಿಂದ ಮುನ್ನಡೆದಾಗ ಮಾತ್ರ ನಮ್ಮ ಸಮಾಜ ಬಲವರ್ಧನೆಗೊಂಡು ಉನ್ನತ ಸ್ಥಿತಿಗೆ ಏರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಸಂಘಟನೆಯಲ್ಲಿ ಯಾರೂ ಮೇಲು-ಕೀಳು ಎಂಬ ಭಿನ್ನಾಭಿಪ್ರಾಯ ಹೊಂದಬಾರದು ಹಾಗೂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿರುವವರು ಅಹಂಕಾರದಿಂದ ನಡೆದುಕೊಳ್ಳದೆ ಸಮಾಜದ ಸೇವಕರಾಗಿ ಕೆಲಸ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಬಂಗಾರ ಶೆಟ್ರು ಮಾತನಾಡಿ, ಒಳಜಗಳ ಮರೆತು ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಬಣಜಿಗ ಸಮಾಜವು ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಬಸವತತ್ವ ಮತ್ತು ಲಿಂಗಾಯತ ಧರ್ಮದ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಈ ಸಮಾಜದ ಧ್ಯೇಯಗಳನ್ನು ಉಳಿಸಿ ಬೆಳೆಸಲು ಸಮಾಜದ ಯುವಕರು ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು. ಇದೇ ವೇಳೆ ರಾಜ್ಯ ಕಾರ್ಯಕಾರಣಿ ಸದಸ್ಯ ಅಂದಾನಪ್ಪ ಅಂಗಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಶ್ವನಾಥ್ ಮಳಗಿ ಹಾಗೂ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಂಗಣ್ಣ ತೆಂಗಿನಕಾಯಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ಬಸವರಾಜ ಜೋಳದ, ವಿಜಯಕುಮಾರ ಕರಡಿ, ಪ್ರಭು ಹೊಸಅಂಗಡಿ, ಶರಣಪ್ಪ ಗದಗಿನ, ಈಶಪ್ಪ ಅಂಗಡಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಶರಣಪ್ಪ ಅಂಗಡಿ, ಜಿಲ್ಲಾ ಮಾಧ್ಯಮ ಪ್ರತಿನಿಧಿ ಮಂಜುನಾಥ ಅಂಗಡಿ, ಮಹಿಳಾ ನಿಯೋಜಿತ ಅಧ್ಯಕ್ಷೆ ಅಕ್ಕಮ್ಮ ಅಂಗಡಿ ಸೇರಿದಂತೆ ಬಣಜಿಗ ಸಮಾಜದ ಹಿರಿಯರು, ಮಹಿಳೆಯರು ಮತ್ತು ಯುವಕರು ಪಾಲ್ಗೊಂಡಿದ್ದರು. ಸಿ.ಎಸ್. ಅಂಗಡಿ ಕಾರ್ಯಕ್ರಮ ನಿರೂಪಿಸಿದರು.2
- ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮನ್ನು ಬಿಎಲ್ಒ (BLO) ಕರ್ತವ್ಯದಿಂದ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಕಾರ್ಯಕರ್ತೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ತಮಗೆ ವಿಧಿಸಲಾಗುತ್ತಿರುವ ಹೆಚ್ಚುವರಿ ಕೆಲಸದ ಒತ್ತಡ, ಡೇಟಾ ಎಂಟ್ರಿ ಮಾಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳು ಹಾಗೂ ಮೇಲಧಿಕಾರಿಗಳಿಂದ ಬರುತ್ತಿರುವ ನೊಟೀಸ್ನ ಭೀತಿಯ ಬಗ್ಗೆ ಕಾರ್ಯಕರ್ತೆಯರು ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ಹೆಚ್ಚುವರಿ ಜವಾಬ್ದಾರಿಗಳಿಂದಾಗಿ ತಮ್ಮ ಮೂಲ ಕೆಲಸವಾದ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ಕಣ್ಣೀರಿಟ್ಟರು.1
- ಬಾಗಲಕೋಟೆಯಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಸಮಿತಿಯು ಶುಕ್ರವಾರ ಕರಾಳ ದಿನಾಚರಣೆ ಆಚರಿಸಿ ಒಂದು ದಿನದ ಮುಷ್ಕರ ನಡೆಸಿದೆ. ಅಕ್ಷರ ದಾಸೋಹ (ಬಿಸಿಯೂಟ) ಯೋಜನೆ ಆರಂಭವಾಗಿ 25 ವರ್ಷಗಳು ಪೂರ್ಣಗೊಂಡಿದ್ದರೂ, ನೌಕರರ ಬದುಕಿನಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ಸಂಘ ಆರೋಪಿಸಿದೆ. ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ನೌಕರರು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರು 2008ರಿಂದ ಕೇಂದ್ರ ಸರ್ಕಾರ ಬಿಸಿಯೂಟ ನೌಕರರಿಗೆ ಸಮರ್ಪಕ ವೇತನ ಹೆಚ್ಚಳ ಮಾಡದೆ ಶೋಷಣೆ ನಡೆಸುತ್ತಿದೆ ಎಂದು ದೂರಿದರು. ಜೊತೆಗೆ ಖಾಸಗಿ ಸಂಸ್ಥೆಗಳಿಗೆ ಬಿಸಿಯೂಟ ಯೋಜನೆಯನ್ನು ಹಸ್ತಾಂತರಿಸುವ ಮೂಲಕ ಯೋಜನೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ರಾಜ್ಯ ಸರ್ಕಾರವು ತನ್ನ ಚುನಾವಣಾ ಭರವಸೆಯಂತೆ ಕಾರ್ಯಕರ್ತೆಯರ ಮಾಸಿಕ ವೇತನವನ್ನು ₹7,000ಕ್ಕೆ ಹೆಚ್ಚಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು. ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದರಲ್ಲಿ 6 ಗಂಟೆಗಳ ಕೆಲಸದ ಅವಧಿಯ ಕುರಿತು ಅಧಿಕೃತ ಆದೇಶ, ಎಲ್ಲರಿಗೂ ಆರೋಗ್ಯ ವಿಮೆ, ಮುಖ್ಯ ಅಡುಗೆ ನೌಕರರಿಂದ ಪಿ.ಡಿ.ಒ.ಗೆ ವರ್ಗಾಯಿಸಿರುವ ಜಂಟಿ ಖಾತೆ ಜವಾಬ್ದಾರಿಯನ್ನು ಹಿಂದಿನಂತೆ ಮರುಸ್ಥಾಪಿಸುವುದು, ಖಾಸಗಿ ಸಂಸ್ಥೆಗಳಿಂದ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿರುವವರಿಗೆ ಉದ್ಯೋಗ ಭದ್ರತೆ ಮತ್ತು ಅಕ್ಷರ ದಾಸೋಹ ಯೋಜನೆಗೆ ಹೆಚ್ಚಿನ ಅನುದಾನ ಒದಗಿಸುವುದು ಸೇರಿವೆ. ಇದರೊಂದಿಗೆ ನಿವೃತ್ತ ನೌಕರರಿಗೆ ಮಾಸಿಕ ₹10,000 ಪಿಂಚಣಿ, ಬಾಕಿ ಹಣ ಬಿಡುಗಡೆ ಹಾಗೂ ಸುಸಜ್ಜಿತ ಮತ್ತು ಸ್ವಚ್ಛ ಅಡುಗೆ ಕೇಂದ್ರಗಳನ್ನು ನಿರ್ಮಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ.1
- ಅಮೆರಿಕದಲ್ಲಿ ಭಾರತೀಯ ಮಹಿಳೆಯರ ಮೇಲೆ ಮತ್ತೊಮ್ಮೆ ಜನಾಂಗೀಯ ದ್ವೇಷದ ಘಟನೆ ನಡೆದಿದೆ. ಭಾರತೀಯ ಮಹಿಳೆಯರ ತಂಡದ ಮೇಲೆ ಶ್ವೇತವರ್ಣೀಯ ಮಹಿಳೆಯೊಬ್ಬರು ದರ್ಪ ತೋರುವ ಮೂಲಕ ತಮ್ಮ ದ್ವೇಷವನ್ನು ಪ್ರದರ್ಶಿಸಿದ್ದಾರೆ.1