ಅರಕಲಗೂಡಿನಿಂದ ಸುಬ್ರಹ್ಮಣ್ಯ-ಧರ್ಮಸ್ಥಳಕ್ಕೆ ನೇರ ಬಸ್ ಸಾರಿಗೆ ಸೌಲಭ್ಯ-ಪ್ರಯಾಣಿಕರಲ್ಲಿ ಹರ್ಷ ಅರಕಲಗೂಡು : ಪುಣ್ಯ ಕ್ಷೇತ್ರ ಧರ್ಮಸ್ಥಳ ಹಾಗು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ದರ್ಶನಕ್ಕೆ ಅನುಕೂಲವಾಗುವಂತೆ ಧರ್ಮಸ್ಥಳ ದಿಂದ ಮೈಸೂರಿಗೆ ನೇರ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿರುವುದನ್ನು ಸ್ವಾಗತಿಸಿ ಸಂತೆಮರೂರು ಗ್ರಾಮಸ್ಥರು ನೂತನ ಬಸ್ಗೆ ಪೂಜೆ ಸಲ್ಲಿಸಿ ಸಂಭ್ರಮಿಸಿದರು. ಇಂದು ಬೆಳಿಗ್ಗೆ 5-20ಕ್ಕೆ ಆಗಮಿಸಿದ ಸಾರಿಗೆ ಬಸ್ನ್ನು ಗ್ರಾಮಸ್ಥರು ತಡೆದು ಹೂವಿನ ಅಲಂಕಾರಗೊಳಿಸಿ ಪೂಜೆ ಸಲ್ಲಿಸಿದರು.ಅಲ್ಲದೆ ಕೆಲವರು ಬಸ್ ಏರಿ ಸುಬ್ರಹ್ಮಣ್ಯ,ಧರ್ಮಸ್ಥಳಕ್ಕೆ ಪ್ರಯಾಣ ಕೂಡ ಆರಂಭಿಸಿದರು. ಈ ನೂತ ಬಸ್ ನಿತ್ಯವೂ ಬಿಸಿಲೆ ಘಾಟ್ ಮೂಲಕ ಅರಕಲಗೂಡು ಸಂತೆಮರೂರು,ಜೋಡಿಗುಬ್ಬಿ,ಹಳ್ಳಿಮೈಸೂರು,ಭೇರ್ಯ,ಕೆ.ಆರ್.ಮಾರ್ಗವಾಗಿ ಮೈಸೂರಿಗೆ ತೆರಳಲಿ ತಂಗಲಿದೆ.ಪುನಃ ಬೆಳಗ್ಗೆ 6ಗಂಟೆಗೆ ಮೈಸೂರಿನಿಂದ ಹೊರಟು ಅದೇ ಮಾರ್ಗವಾಗಿ ಸಂಚರಿಸಿ ಕುಕ್ಕೆ ಸುಬ್ರಹ್ಮಣ್ಯ ಮೂಲಕ ಧರ್ಮಸ್ಥಳಕ್ಕೆ ತೆರಳಲಿದೆ. ನಿತ್ಯವೂ ತಾಲೂಕಿನಿಂದ ಕುಕ್ಕೆ ಸುಬ್ರಹ್ಮಣ್ಯ,ಧರ್ಮಸ್ಥಳಕ್ಕೆ ಪ್ರಯಾಣಿಕರು ಹೋಗಿಬರುತ್ತಿದ್ದು,ಈ ನೂತನ ಸಾರಿಗೆ ಬಸ್ ಅತೀ ಸಮೀಪ ಮಾರ್ಗದಲ್ಲಿ ಇರುವ ಕಾರಣ ಹೆಚ್ಚಿನ ಪ್ರಯಾಣಿಕರು ಈ ಬಸ್ ಸೌಲಭ್ಯವನ್ನು ಪಡೆಯಲು ಅವಕಾಶ ದೊರೆತಂತೆ ಆಗಿದೆ ಎಂದು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದರು. ಅರಕಲಗೂಡಿನಿಂದ ಸಂತೆಮರೂರು-ಜೋಡಿಗುಬ್ಬಿ,ಹಳ್ಳಿಮೈಸೂರು ಮಾರ್ಗವಾಗಿ ಮೈಸೂರಿಗೆ ತೆರಳಲು ಸಕಾಲಿಕವಾಗಿ ಸಾರಿಗೆ ಬಸ್ ಸೇವೆಯಿಂದ ತ್ಭಾಗದ ಹತ್ತಾರು ಹಳ್ಳಿಗಳ ಜನರು ವಂಚನೆಗೊಂಡಿದ್ದರು.ಈ ಮಾರ್ಗ ಅರಕಲಗೂಡಿನಿಂದ ಮೈಸೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಅತೀ ಸಮೀಪವಾಗಿತ್ತು.ಅಲ್ಲದೆ ಬೆಳಕಿನ ವೇಳೆ ಬಿಸಿಲೆ ಘಾಟ್ ಸೌಂಧರ್ಯವನ್ನು ಸವಿಯಲು ಮತ್ತೊಂದು ಅವಕಾಶ ದೊರೆತಂತ್ತಾಗಿದೆ.ಈ ಅವಕಾಶ ಮತ್ತು ಪ್ರಯಾಣಿಕರ ಸಮಸ್ಯೆಗೆ ಪರಿಹಾರ ಒದಗಿಸಿರುವ ಸಾರಿಗೆ ಸಂಸ್ಥೆ ಅಧಿಕಾರಿಗಳನ್ನು ಇಡೀ ಪ್ರಯಾಣಿಕರ ಪರವಾಗಿ ಸಂತೆಮರೂರು ಗ್ರಾಮಸ್ಥರು ಅಭಿನಂದಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶಾಂತರಾಜೇ ಅರಸು,ಮಲ್ಲರಾಜೇ ಅರಸು,ಕಾರ್ತಿಕ ಅರಸು,ಬಾಲರಾಜೇ ಅರಸು ಇತರರು ಇದ್ದರು. #dharmasthala #ksrtc
ಅರಕಲಗೂಡಿನಿಂದ ಸುಬ್ರಹ್ಮಣ್ಯ-ಧರ್ಮಸ್ಥಳಕ್ಕೆ ನೇರ ಬಸ್ ಸಾರಿಗೆ ಸೌಲಭ್ಯ-ಪ್ರಯಾಣಿಕರಲ್ಲಿ ಹರ್ಷ ಅರಕಲಗೂಡು : ಪುಣ್ಯ ಕ್ಷೇತ್ರ ಧರ್ಮಸ್ಥಳ ಹಾಗು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ದರ್ಶನಕ್ಕೆ ಅನುಕೂಲವಾಗುವಂತೆ ಧರ್ಮಸ್ಥಳ ದಿಂದ ಮೈಸೂರಿಗೆ ನೇರ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿರುವುದನ್ನು ಸ್ವಾಗತಿಸಿ ಸಂತೆಮರೂರು ಗ್ರಾಮಸ್ಥರು ನೂತನ ಬಸ್ಗೆ ಪೂಜೆ ಸಲ್ಲಿಸಿ ಸಂಭ್ರಮಿಸಿದರು. ಇಂದು ಬೆಳಿಗ್ಗೆ 5-20ಕ್ಕೆ ಆಗಮಿಸಿದ ಸಾರಿಗೆ ಬಸ್ನ್ನು ಗ್ರಾಮಸ್ಥರು ತಡೆದು ಹೂವಿನ ಅಲಂಕಾರಗೊಳಿಸಿ ಪೂಜೆ ಸಲ್ಲಿಸಿದರು.ಅಲ್ಲದೆ ಕೆಲವರು ಬಸ್ ಏರಿ ಸುಬ್ರಹ್ಮಣ್ಯ,ಧರ್ಮಸ್ಥಳಕ್ಕೆ ಪ್ರಯಾಣ ಕೂಡ ಆರಂಭಿಸಿದರು. ಈ ನೂತ ಬಸ್ ನಿತ್ಯವೂ ಬಿಸಿಲೆ ಘಾಟ್ ಮೂಲಕ ಅರಕಲಗೂಡು ಸಂತೆಮರೂರು,ಜೋಡಿಗುಬ್ಬಿ,ಹಳ್ಳಿಮೈಸೂರು,ಭೇರ್ಯ,ಕೆ.ಆರ್.ಮಾರ್ಗವಾಗಿ ಮೈಸೂರಿಗೆ ತೆರಳಲಿ ತಂಗಲಿದೆ.ಪುನಃ ಬೆಳಗ್ಗೆ 6ಗಂಟೆಗೆ ಮೈಸೂರಿನಿಂದ ಹೊರಟು ಅದೇ ಮಾರ್ಗವಾಗಿ ಸಂಚರಿಸಿ ಕುಕ್ಕೆ ಸುಬ್ರಹ್ಮಣ್ಯ ಮೂಲಕ ಧರ್ಮಸ್ಥಳಕ್ಕೆ ತೆರಳಲಿದೆ. ನಿತ್ಯವೂ ತಾಲೂಕಿನಿಂದ ಕುಕ್ಕೆ ಸುಬ್ರಹ್ಮಣ್ಯ,ಧರ್ಮಸ್ಥಳಕ್ಕೆ ಪ್ರಯಾಣಿಕರು ಹೋಗಿಬರುತ್ತಿದ್ದು,ಈ ನೂತನ ಸಾರಿಗೆ ಬಸ್ ಅತೀ ಸಮೀಪ ಮಾರ್ಗದಲ್ಲಿ ಇರುವ ಕಾರಣ ಹೆಚ್ಚಿನ ಪ್ರಯಾಣಿಕರು ಈ ಬಸ್ ಸೌಲಭ್ಯವನ್ನು ಪಡೆಯಲು ಅವಕಾಶ ದೊರೆತಂತೆ ಆಗಿದೆ ಎಂದು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದರು. ಅರಕಲಗೂಡಿನಿಂದ ಸಂತೆಮರೂರು-ಜೋಡಿಗುಬ್ಬಿ,ಹಳ್ಳಿಮೈಸೂರು ಮಾರ್ಗವಾಗಿ ಮೈಸೂರಿಗೆ ತೆರಳಲು ಸಕಾಲಿಕವಾಗಿ ಸಾರಿಗೆ ಬಸ್ ಸೇವೆಯಿಂದ ತ್ಭಾಗದ ಹತ್ತಾರು ಹಳ್ಳಿಗಳ ಜನರು ವಂಚನೆಗೊಂಡಿದ್ದರು.ಈ ಮಾರ್ಗ ಅರಕಲಗೂಡಿನಿಂದ ಮೈಸೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಅತೀ ಸಮೀಪವಾಗಿತ್ತು.ಅಲ್ಲದೆ ಬೆಳಕಿನ ವೇಳೆ ಬಿಸಿಲೆ ಘಾಟ್ ಸೌಂಧರ್ಯವನ್ನು ಸವಿಯಲು ಮತ್ತೊಂದು ಅವಕಾಶ ದೊರೆತಂತ್ತಾಗಿದೆ.ಈ ಅವಕಾಶ ಮತ್ತು ಪ್ರಯಾಣಿಕರ ಸಮಸ್ಯೆಗೆ ಪರಿಹಾರ ಒದಗಿಸಿರುವ ಸಾರಿಗೆ ಸಂಸ್ಥೆ ಅಧಿಕಾರಿಗಳನ್ನು ಇಡೀ ಪ್ರಯಾಣಿಕರ ಪರವಾಗಿ ಸಂತೆಮರೂರು ಗ್ರಾಮಸ್ಥರು ಅಭಿನಂದಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶಾಂತರಾಜೇ ಅರಸು,ಮಲ್ಲರಾಜೇ ಅರಸು,ಕಾರ್ತಿಕ ಅರಸು,ಬಾಲರಾಜೇ ಅರಸು ಇತರರು ಇದ್ದರು. #dharmasthala #ksrtc
- ಅರಕಲಗೂಡು : ಪುಣ್ಯ ಕ್ಷೇತ್ರ ಧರ್ಮಸ್ಥಳ ಹಾಗು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ದರ್ಶನಕ್ಕೆ ಅನುಕೂಲವಾಗುವಂತೆ ಧರ್ಮಸ್ಥಳ ದಿಂದ ಮೈಸೂರಿಗೆ ನೇರ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿರುವುದನ್ನು ಸ್ವಾಗತಿಸಿ ಸಂತೆಮರೂರು ಗ್ರಾಮಸ್ಥರು ನೂತನ ಬಸ್ಗೆ ಪೂಜೆ ಸಲ್ಲಿಸಿ ಸಂಭ್ರಮಿಸಿದರು. ಇಂದು ಬೆಳಿಗ್ಗೆ 5-20ಕ್ಕೆ ಆಗಮಿಸಿದ ಸಾರಿಗೆ ಬಸ್ನ್ನು ಗ್ರಾಮಸ್ಥರು ತಡೆದು ಹೂವಿನ ಅಲಂಕಾರಗೊಳಿಸಿ ಪೂಜೆ ಸಲ್ಲಿಸಿದರು.ಅಲ್ಲದೆ ಕೆಲವರು ಬಸ್ ಏರಿ ಸುಬ್ರಹ್ಮಣ್ಯ,ಧರ್ಮಸ್ಥಳಕ್ಕೆ ಪ್ರಯಾಣ ಕೂಡ ಆರಂಭಿಸಿದರು. ಈ ನೂತ ಬಸ್ ನಿತ್ಯವೂ ಬಿಸಿಲೆ ಘಾಟ್ ಮೂಲಕ ಅರಕಲಗೂಡು ಸಂತೆಮರೂರು,ಜೋಡಿಗುಬ್ಬಿ,ಹಳ್ಳಿಮೈಸೂರು,ಭೇರ್ಯ,ಕೆ.ಆರ್.ಮಾರ್ಗವಾಗಿ ಮೈಸೂರಿಗೆ ತೆರಳಲಿ ತಂಗಲಿದೆ.ಪುನಃ ಬೆಳಗ್ಗೆ 6ಗಂಟೆಗೆ ಮೈಸೂರಿನಿಂದ ಹೊರಟು ಅದೇ ಮಾರ್ಗವಾಗಿ ಸಂಚರಿಸಿ ಕುಕ್ಕೆ ಸುಬ್ರಹ್ಮಣ್ಯ ಮೂಲಕ ಧರ್ಮಸ್ಥಳಕ್ಕೆ ತೆರಳಲಿದೆ. ನಿತ್ಯವೂ ತಾಲೂಕಿನಿಂದ ಕುಕ್ಕೆ ಸುಬ್ರಹ್ಮಣ್ಯ,ಧರ್ಮಸ್ಥಳಕ್ಕೆ ಪ್ರಯಾಣಿಕರು ಹೋಗಿಬರುತ್ತಿದ್ದು,ಈ ನೂತನ ಸಾರಿಗೆ ಬಸ್ ಅತೀ ಸಮೀಪ ಮಾರ್ಗದಲ್ಲಿ ಇರುವ ಕಾರಣ ಹೆಚ್ಚಿನ ಪ್ರಯಾಣಿಕರು ಈ ಬಸ್ ಸೌಲಭ್ಯವನ್ನು ಪಡೆಯಲು ಅವಕಾಶ ದೊರೆತಂತೆ ಆಗಿದೆ ಎಂದು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದರು. ಅರಕಲಗೂಡಿನಿಂದ ಸಂತೆಮರೂರು-ಜೋಡಿಗುಬ್ಬಿ,ಹಳ್ಳಿಮೈಸೂರು ಮಾರ್ಗವಾಗಿ ಮೈಸೂರಿಗೆ ತೆರಳಲು ಸಕಾಲಿಕವಾಗಿ ಸಾರಿಗೆ ಬಸ್ ಸೇವೆಯಿಂದ ತ್ಭಾಗದ ಹತ್ತಾರು ಹಳ್ಳಿಗಳ ಜನರು ವಂಚನೆಗೊಂಡಿದ್ದರು.ಈ ಮಾರ್ಗ ಅರಕಲಗೂಡಿನಿಂದ ಮೈಸೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಅತೀ ಸಮೀಪವಾಗಿತ್ತು.ಅಲ್ಲದೆ ಬೆಳಕಿನ ವೇಳೆ ಬಿಸಿಲೆ ಘಾಟ್ ಸೌಂಧರ್ಯವನ್ನು ಸವಿಯಲು ಮತ್ತೊಂದು ಅವಕಾಶ ದೊರೆತಂತ್ತಾಗಿದೆ.ಈ ಅವಕಾಶ ಮತ್ತು ಪ್ರಯಾಣಿಕರ ಸಮಸ್ಯೆಗೆ ಪರಿಹಾರ ಒದಗಿಸಿರುವ ಸಾರಿಗೆ ಸಂಸ್ಥೆ ಅಧಿಕಾರಿಗಳನ್ನು ಇಡೀ ಪ್ರಯಾಣಿಕರ ಪರವಾಗಿ ಸಂತೆಮರೂರು ಗ್ರಾಮಸ್ಥರು ಅಭಿನಂದಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶಾಂತರಾಜೇ ಅರಸು,ಮಲ್ಲರಾಜೇ ಅರಸು,ಕಾರ್ತಿಕ ಅರಸು,ಬಾಲರಾಜೇ ಅರಸು ಇತರರು ಇದ್ದರು. #dharmasthala #ksrtc1
- ಕಡೂರು : ಸುಮಾರು ಎರಡು ಎಕರೆ ಪ್ರದೇಶದ ತೋಟದಲ್ಲಿ ಫಸಲು ಬಂದಿದ್ದ ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿರುವ ಘಟನೆ ತಾಲ್ಲೂಕಿನ ಅಂಚೇಚೋಮನಹಳ್ಳಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಡಿ.ಕಾರೇಹಳ್ಳಿ ಗ್ರಾಮದ ರೈತ ಚಂದ್ರಪ್ಪ ಎಂಬುವವರಿಗೆ ಸೇರಿದ ಜಮೀನನಲ್ಲಿ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಬಾಳೆಗೊನೆ ಬಿಟ್ಟಿದ್ದ ಸುಮಾರು 1500 ಬಾಳೆಗಿಡಗಳನ್ನು ಕಡಿದು ಹಾಕಿದ್ದಾರೆ. ಬಾಳೆಗಿಡಗಳ ಬೆಳೆಗಾಗಿ ಸಂಘ, ಬ್ಯಾಂಕ್ ಹಾಗೂ ಕೈಗಡ ಸೇರಿ ಸುಮಾರು 5ಲಕ್ಷ ಸಾಲ ಮಾಡಲಾಗಿದೆ. ಬಾಳೆಗಿಡದ ಬೆಳೆಯನ್ನು ನಂಬಿಕೊಂಡು ಜೀವನ ನಡೆಸುತ್ತಾ ಬರಲಾಗಿದೆ. ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಡಿದು ಹಾಕಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚುವಂತೆ ರೈತ ಚಂದ್ರಪ್ಪ ದೂರು ನೀಡಿದ್ದಾರೆ. ಮಂಗಳವಾರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೃತ್ಯ ವೆಸಗಿದ ಕಿಡಿಗೇಡಿಗಳ ಪತ್ತೆಗಾಗಿ ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.3
- Post by Md Aleemulla Shariff1
- ತುಮಕೂರು: ಸಮಾಜಸೇವೆ ಮತ್ತು ದಾನಧರ್ಮದ ಪ್ರತೀಕವಾಗಿದ್ದ ತ್ರಿವಿಧ ದಾಸೋಹಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಭಕ್ತಿಭಾವದ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಮೈಸೂರು ಮೂಲದ ಪುನೀತ್ ಕಲಾವಿದ ತಂಡ ವಿಶೇಷವಾಗಿ 8000 ಚದರ ಅಡಿ ವಿಸ್ತೀರ್ಣದ ಬೃಹತ್ ರಂಗೋಲಿ ರಚಿಸಿ ಗಮನ ಸೆಳೆದಿತು. ಸಿದ್ದಗಂಗಾ ಮಠದ ಆವರಣದಲ್ಲಿ ಮೂಡಿಬಂದ ಈ ಅದ್ಭುತ ರಂಗೋಲಿಯಲ್ಲಿ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರವನ್ನು ಅತ್ಯಂತ ಕಲಾತ್ಮಕವಾಗಿ ರೂಪಿಸಲಾಗಿದ್ದು, ಭಕ್ತರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಬಣ್ಣಗಳ ಸಮನ್ವಯ, ವಿನ್ಯಾಸದ ನಿಖರತೆ ಹಾಗೂ ಆಧ್ಯಾತ್ಮಿಕ ಭಾವನೆಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ರಂಗೋಲಿ ಸಿದ್ಧಗೊಂಡಿತ್ತು. ಈ ಮಹತ್ವದ ಕಲಾಕೃತಿಯನ್ನು ಮೈಸೂರು ನಗರದ ಪುನೀತ್ ಕಲಾವಿದ ತಂಡದ ಕಲಾವಿದರು ಶ್ರಮಪಟ್ಟು ರೂಪಿಸಿದ್ದಾರೆ. ತಂಡದ ಪ್ರಮುಖ ಕಲಾವಿದರಾದ ಪುನೀತ್ ಕಲಾವಿದ, ಲಕ್ಷ್ಮಿ ಸಿ, ಆದಿತ್ಯ ಪಿ, ಹರ್ಷಿತ್ ಆರ್, ಹಾಗೂ ಕುಮಾರಸ್ವಾಮಿ ಕೆ.ಬಿ ಅವರು ಹಲವು ದಿನಗಳ ಪರಿಶ್ರಮದಿಂದ ರಂಗೋಲಿಯನ್ನು ಸಿದ್ಧಗೊಳಿಸಿದರು. ಅವರ ಕಲಾತ್ಮಕ ಪ್ರತಿಭೆಗೆ ಮಠದ ಭಕ್ತರು ಹಾಗೂ ಭೇಟಿ ನೀಡಿದವರು ಶ್ಲಾಘನೆ ವ್ಯಕ್ತಪಡಿಸಿದರು. ಶ್ರೀ ಶಿವಕುಮಾರ ಸ್ವಾಮೀಜಿಯವರು ಶಿಕ್ಷಣ, ಅನ್ನದಾನ ಮತ್ತು ಮಾನವೀಯ ಸೇವೆಗಳ ಮೂಲಕ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ಸ್ಮರಣಾರ್ಥವಾಗಿ ಕಲೆಯ ಮೂಲಕ ಗೌರವ ಸಲ್ಲಿಸುವುದು ವಿಶೇಷವಾಗಿದೆ ಎಂದು ಭಕ್ತರು ಅಭಿಪ್ರಾಯಪಟ್ಟರು. ರಂಗೋಲಿ ವೀಕ್ಷಿಸಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ, ಕಲಾವಿದರ ಕಾರ್ಯವನ್ನು ಪ್ರಶಂಸಿಸಿದರು. ಸಿದ್ದಗಂಗಾ ಮಠದ ಆವರಣವು ಆಧ್ಯಾತ್ಮಿಕ ವಾತಾವರಣದೊಂದಿಗೆ ಕಲಾ ಸಂಭ್ರಮದ ಕೇಂದ್ರವಾಗಿತ್ತು. ಶಿವಕುಮಾರ ಸ್ವಾಮೀಜಿಯವರ ಆದರ್ಶಗಳು ಯುವಜನತೆಗೆ ಸ್ಪೂರ್ತಿಯಾಗಲಿ ಎಂಬ ಸಂದೇಶದೊಂದಿಗೆ ಪುನೀತ್ ಕಲಾವಿದ ತಂಡ ಈ ಬೃಹತ್ ರಂಗೋಲಿ ಮೂಲಕ ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದೆ. ಈ ಕಲಾಕೃತಿ ಮಠದ ಕಾರ್ಯಕ್ರಮಗಳಲ್ಲಿ ಪ್ರಮುಖ ಆಕರ್ಷಣೆಯಾಗಿತ್ತು.1
- ಮಳವಳ್ಳಿ ಸಾರಥಿ ಯೋಜನೆ ಅಡಿಯಲ್ಲಿ 17 ನಿರುದ್ಯೋಗಿ ಯುವಕರಿಗೆ ಕಾರು ವಿತರಣೆ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ 22 ಮಹಿಳೆಯರಿಗೆ ಹೊಲಿಗೆ ಯಂತ್ರ 112 ಮ0ದಿಗೆ ನೇರ ಸಾಲ ಸೌಲಭ್ಯ,58 ಮಂದಿಗೆ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ವಿತರಣೆ ಕಾರ್ಯಕ್ರಮ ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಸೋಮವಾರ ಜರಗಿತು ಕಾರ್ಯಕ್ರಮವನ್ನು ಶಾಸಕರಾದ ನರೇಂದ್ರಸ್ವಾಮಿ ಉದ್ಘಾಟಿಸಿ ಸವಲತ್ತುಗಳು ಗಳನ್ನು ಇತರಿಸಿ ಮಾತನಾಡಿದರು1
- ಖಂಡಿತ, ನೀವು ನೀಡಿದ ಮಾಹಿತಿಯ ಆಧಾರದ ಮೇಲೆ ದಿನಪತ್ರಿಕೆಯ ವರದಿ ಇಲ್ಲಿದೆ: ಮಾಗಡಿ: ಕೆಂಪೇಗೌಡರ ಪ್ರತಿಮೆ ಸ್ಥಳಾಂತರಕ್ಕೆ ಎಚ್.ಎಂ. ಕೃಷ್ಣಮೂರ್ತಿ ತೀವ್ರ ವಿರೋಧ ಮಾಗಡಿ: ಪಟ್ಟಣದ ಅಸ್ಮಿತೆಯಾಗಿರುವ ಕೆಂಪೇಗೌಡರ ಪ್ರತಿಮೆಯನ್ನು ಅಭಿವೃದ್ಧಿಯ ನೆಪದಲ್ಲಿ ಸ್ಥಳಾಂತರಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ ಎಚ್ಚರಿಸಿದ್ದಾರೆ. ಮಂಗಳವಾರ ಪಟ್ಟಣದ ಕೆಂಪೇಗೌಡ ಪ್ರತಿಮೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಭಿವೃದ್ಧಿಯ ಹೆಸರಲ್ಲಿ ವಿನಾಶ ಸರಿಯಲ್ಲ "ಹೈಕೋರ್ಟ್ ಸೂಚನೆಯ ಮೇರೆಗೆ ಪ್ರತಿಮೆ ತೆರವುಗೊಳಿಸುವ ಬಗ್ಗೆ ಏಪ್ರಿಲ್ 4ರಂದು ಪುರಸಭೆಯಲ್ಲಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನಾನು ಭಾಗವಹಿಸಿ ನನ್ನ ಖಡಕ್ ವಿರೋಧ ದಾಖಲಿಸುತ್ತೇನೆ. ಸರ್ಕಾರಿ ಆಸ್ಪತ್ರೆ ನಿರ್ಮಿಸುವ ನೆಪದಲ್ಲಿ ಉದ್ದೇಶಪೂರ್ವಕವಾಗಿ ಪ್ರತಿಮೆ ತೆರವುಗೊಳಿಸಲು ಮುಂದಾಗಿರುವುದು ಸರಿಯಲ್ಲ. ಈ ಪ್ರತಿಮೆಯಿಂದ ಅಥವಾ ಇಲ್ಲಿರುವ ನೂರಾರು ಮರಗಳಿಂದ ಅಭಿವೃದ್ಧಿಗೆ ಯಾವ ತೊಂದರೆಯಾಗಿದೆ?" ಎಂದು ಅವರು ಪ್ರಶ್ನಿಸಿದರು. ತೆರವುಗೊಳಿಸಿದ ಕಟ್ಟಡಗಳು ಎಲ್ಲಿವೆ? ಈಗಾಗಲೇ ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ, ಪಶು ಇಲಾಖೆ, ಗುರುಭವನ ಹಾಗೂ ತರಕಾರಿ ಮಾರುಕಟ್ಟೆಗಳನ್ನು ಅಭಿವೃದ್ಧಿಯ ಹೆಸರಲ್ಲಿ ತೆರವುಗೊಳಿಸಲಾಗಿದೆ. ಆದರೆ, ಇಷ್ಟು ದಿನಗಳಾದರೂ ಅವುಗಳನ್ನು ಮರುನಿರ್ಮಾಣ ಮಾಡಿಲ್ಲ. ಈಗ 40 ಕೋಟಿ ವೆಚ್ಚದಲ್ಲಿ ತಾಲೂಕು ಕಚೇರಿ ಒಡೆದು ಹೊಸ ಆಸ್ಪತ್ರೆ ಕಟ್ಟುವ ಅಗತ್ಯವೇನಿದೆ? ಎಂದು ಪ್ರಶ್ನಿಸಿದ ಅವರು, "ಈಗಿರುವ ಆಸ್ಪತ್ರೆಯಲ್ಲೇ ಸರಿಯಾದ ವೈದ್ಯರಿಲ್ಲ, ಶಸ್ತ್ರಚಿಕಿತ್ಸೆಗಳು ನಡೆಯುತ್ತಿಲ್ಲ. ಮೊದಲು ಅದನ್ನು ಸರಿಪಡಿಸಲಿ," ಎಂದರು. ದ್ವೇಷದ ರಾಜಕಾರಣದ ಆರೋಪ "ಎಚ್.ಎಂ. ಕೃಷ್ಣಮೂರ್ತಿ ಕೆಂಪೇಗೌಡರ ಹೆಸರಿನಲ್ಲಿ ಸಮಾಜಮುಖಿ ಕೆಲಸ ಮಾಡಬಾರದು ಎಂಬ ದ್ವೇಷದಿಂದ ಈ ಪಿತೂರಿ ನಡೆಯುತ್ತಿದೆ. ಪಟ್ಟಣದ ಗಬ್ಬು ನಾರುತ್ತಿರುವ ಶೌಚಾಲಯಗಳನ್ನು ಸರಿಪಡಿಸಲಿ, ಮಹಿಳೆಯರಿಗೆ ಅನುಕೂಲ ಮಾಡಿಕೊಡಲಿ. ಅದನ್ನು ಬಿಟ್ಟು ಇತಿಹಾಸವಿರುವ ಗೌರಮ್ಮನಕೆರೆ ಅಭಿವೃದ್ಧಿಯ ಹೆಸರಲ್ಲಿ ಮಣ್ಣು ಮಾರಿಕೊಳ್ಳುವ ಕೀಳು ಮಟ್ಟಕ್ಕೆ ಇಳಿಯಬಾರದು," ಎಂದು ಶಾಸಕರ ಹೆಸರು ಪ್ರಸ್ತಾಪಿಸದೆ ಲೇವಡಿ ಮಾಡಿದರು. ದಶಕಗಳ ಸೇವೆಗೆ ಕುತ್ತು ದಲಿತ ಮುಖಂಡ ಸಿ. ಜಯರಾಮು ಮಾತನಾಡಿ, "ಕೃಷ್ಣಮೂರ್ತಿಯವರು ಕಳೆದ 23 ವರ್ಷಗಳಿಂದ ಯಾವುದೇ ಸರ್ಕಾರಿ ಸಹಾಯವಿಲ್ಲದೆ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ, ಉಚಿತ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರಗಳಂತಹ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ಅಂತಹ ಪ್ರತಿಮೆಯನ್ನು ತೆರವುಗೊಳಿಸಲು ಮುಂದಾಗಿರುವುದು ದ್ವೇಷದ ರಾಜಕಾರಣದ ಪರಮಾವಧಿ," ಎಂದು ಟೀಕಿಸಿದರು. ಗೋಷ್ಠಿಯಲ್ಲಿ ಮರೂರು ಸಾಗರ್ ಗೌಡ, ಶಂಕ್ರಪ್ಪ, ಕನ್ನಡ ಸಂಘಟನೆಯ ರಂಗೇಶ್, ಮೋಹನ್, ಜೋಡುಗಟ್ಟೆ ರಮೇಶ್, ದೊಡ್ಡಿ ಗೋಪಿ, ಪರಿಸರ ರಕ್ಷಣಾ ಸಮಿತಿ ಅಧ್ಯಕ್ಷ ಶಿವಲಿಂಗಯ್ಯ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.1
- ಅಂದಿನಿಂದ ಇಂದಿ ನವರೆಗೂ ಪ್ರತಿ ವರ್ಷ ಕೂಡ ಯುಗಾದಿ ಹಬ್ಬದ ನಂತರ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ನಡೆದುಕೊಂಡು ಬರುತ್ತಿದೆ. ಬಸವೇಶ್ವರ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪ್ರದಾಯಿಕವಾಗಿ ಅರ್ಚಕರು ಬೆಳಗ್ಗೆಯಿಂದ ಉಪವಾಸ ಇದ್ದು, ಸ್ವಾಮಿಗೆ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ ನೆರವೇರಿಸಿದರು. ದಟ್ಟವಾದ ಅರಣ್ಯ ಪ್ರದೇಶದ ಮಧ್ಯೆ ಇರುವ ಅರಳಿಮರದ ಕೆಳಗೆ ಬಸವೇಶ್ವರ ಸ್ವಾಮಿಯ ಲಿಂಗಕ್ಕೆ ಪೂರ್ವಜರು ಪೂಜೆ ಮಾಡಿಕೊಂಡು ಬರುತ್ತಿದ್ದರು. ಅಲ್ಲಿಂದ ಪಚ್ಚೇದೊಡ್ಡಿ ಗ್ರಾಮದಲ್ಲಿ ಬಸವೇಶ್ವರ ಸ್ವಾಮಿಯ ಲಿಂಗಾವನ್ನ ಪ್ರತಿಷ್ಠಾಪನೆ ಮಾಡಿ. ಪ್ರತಿ ವರ್ಷ ಕೂಡ ವಿಶೇಷ ಪೂಜೆ ನೆರವೇರಿಸಿಕೊಂಡು ಬಂದಿರುತ್ತಾರೆ. ಕಾಂಚಳ್ಳಿ ಗ್ರಾಮದಿಂದ ಜಡೆಸ್ವಾಮಿ (ಶಿವನ ಪ್ರತಿರೂಪ ) ದೇವರನ್ನ ಪಚ್ಚೇದೊಡ್ಡಿಗೆ ತಂದು ವಿಶೇಷ ಪೂಜೆ ಪುನಸ್ಕಾರಗಳನ್ನ ಮಾಡುತ್ತಾರೆ. ತಳಿರು ತೋರಣಗಳಿಂದ ಸಿಂಗರಿಸಿ, ದೇವರಿಗೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗುತ್ತದೆ. ಎಸ್. ಎ. ಸೌಂಡ್ಸ್ ಸಿಸ್ಟಮ್ ವತಿಯಿಂದ ಪಚ್ಚೆದೊಡ್ಡಿ ಗ್ರಾಮದ ದೇವಾಲಯದ ಸುತ್ತಮುತ್ತ ವಿದ್ಯುತ್ ದೀಪ ಅಲಂಕಾರಗಳಿಂದ ಅಲಂಕಾರ ಮಾಡಲಾಗಿತ್ತು. ಭಕ್ತರಿಗೆ ಅನ್ನ ದಾನ ವಿಶೇಷ ಪೂಜೆ ನಡೆದ ನಂತರ ರಾತ್ರಿ 8 ಗಂಟೆಗೆ ನೆರೆದಿರುವ ಭಕ್ತರಿಗೆ ಪಾಯಸ, ಮುದ್ದೆ, ದ್ವಿದಳ ದಾನ್ಯದ ಸಾಂಬಾರು, ಪಲ್ಯ, ಹಪ್ಪಳ,ಅನ್ನಸಾಂಬಾರ್ ಅನ್ನು ನೆರೆದಿರುವ ಭಕ್ತರಿಗೆ ಅನ್ನದಾನದ ವ್ಯವಸ್ಥೆಯನ್ನ ಕಲ್ಪಿಸಿದರು. ನಟರಾಜ್ ಮೈಸೂರು ತಂಡದವರಿಂದ ರಾತ್ರಿ 10 ರಿಂದ ಬೆಳಿಗ್ಗೆ 4 ರವರೆಗೆ ಹರಿಕಥೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಬಸವೇಶ್ವರ ಸ್ವಾಮಿಯ ಅರ್ಚಕ ಬಸವರಾಜು, ಅರ್ಚಕರಾದ ಶಿವು, ಶ್ರೀನಿವಾಸ್, ಗೌಡರದ ಮನ್ನಾರ್ ಕೃಷ್ಣೆಗೌಡ, ಕೃಷ್ಣೆಗೌಡ,ನಾಗರಾಜು, ರಾಜು, ಗಣೇಶ್, ಮಾದೇವ, ಜಡೆಸ್ವಾಮಿ,ಕುಮಾರ್, ಗಾವಳಿ ರಾಜು ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು ಇದ್ದರು.4
- ಅರಕಲಗೂಡು : ತಾಲೂಕಿನ ಮಲ್ಲಿಪಟ್ಟಣ ಗ್ರಾಮದಲ್ಲಿ ಚಿಕ್ಕದಾಗಿ ಕ್ಲಿನಿಕ್ ಇಟ್ಟುಕೊಂಡು ಬಡವರಿಗೆ ಉಚಿತವಾಗಿ ಸೇವೆ ನೀಡುವ ಜತೆಗೆ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾವಂತ ಯುವ ಸಮುದಾಯಕ್ಕೆ ಸಹಕಾರ ನೀಡುತ್ತಿರುವ ಖ್ಯಾತ ವೈದ್ಯ ಡಾ.ವಿಶ್ವನಾಥ್ ಅವರ ಜನಪರ ಸೇವೆ ಇತರೆ ವೈದ್ಯರಿಗೆ ಆದರ್ಶಪ್ರಾಯವಾಗಿದೆ ಎಂದು ಹಿರಿಯ ವಕೀಲ ರೇವಣ್ಣ ಅವರು ತಿಳಿಸಿದರು. ಮಲ್ಲಿಪಟ್ಟಣ ಸೇರಿದಂತೆ ಸುತ್ತಾಮುತ್ತಲ ಯುವಕರು ಮಲ್ಲಿಪಟ್ಟಣ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ವಿಶ್ವನಾಥ್ ಅವರ ಹುಟ್ಟುಹಬ್ಬ ಆಚರಣೆ ಅಭಿಮಾನಿಗಳಿಂದ ಗೌರವ ಸ್ವೀಕರಿಸಿ ಮಾತನಾಡಿದ ಡಾ.ವಿಶ್ವನಾಥ್ ಅವರು,ನಾನು ಹುಟ್ಟಿದ ಊರಿನಲ್ಲಿಯೇ ವೈದ್ಯನಾಗಿ ಕಳೆದ ಮೂರುದಶಕಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ.ಗ್ರಾಮೀಣ ಭಾಗದಲ್ಲಿನ ಕ್ಲಿನಿಕ್ಗೆ ಬರುವ ಬಹುತೇಕ ಮಂದಿ ಬಡವರೇ ಆಗಿರುತ್ತಾರೆ.ಇವರಿಂದ ಹಣವನ್ನು ನಿರೀಕ್ಷೆ ಮಾಡದೇ ಸೇವಾಮನೋಭಾವನೆಯನ್ನು ನಿರ್ವಹಿಸುತ್ತಿದ್ದೇನೆ.ಕೆಲವರು ಚಿಕಿತ್ಸೆಗೆ ತಕ್ಕಂತೆ ಹಣವನ್ನು ನೀಡುತ್ತಾರೆ.ಈ ರೀತಿ ಬಂದಂತಹ ಹಣವನ್ನು ಸಮಾಜದ ಏಳಿಗೆಗೆ ವಿನಿಯೋಗಿಸುತ್ತೇನೆ.ಒಮ್ಮೆ ಗ್ರಾಪಂ ಅಧ್ಯಕ್ಷನಾಗಿಯೂ ಸೇವೆ ಸಲ್ಲಿಸುವ ಅವಕಾಶವನ್ನು ಜನರು ನೀಡಿದ್ದರು.ಇಂತಹ ಕಾರ್ಯವನ್ನು ಶ್ಲಾಘಿಸಿ ಅಭಿಮಾನಿಗಳು ಹುಟ್ಟುಹಬ್ಬವನ್ನು ಸಾರ್ವಜನಿಕವಾಗಿ ಆಚರಣೆ ಮಾಡುತ್ತಿರುವುದು ಅತ್ಯಂತ ಸಂತಸದ ಕ್ಷಣವಾಗಿದೆ.ನನ್ನ ಸೇವೆಯನ್ನು ಹೀಗೆಯೇ ಮುಂದುವರಿಸಿಕೊಂಡು ಹೋಗುವೆ ಎಂದು ಹರ್ಷ ವ್ಯಕ್ತಪಡಿಸಿದರು. ಅಭಿಮಾನಿ ಬಳಗದ ಪ್ರಮುಖರಾದ ಭಾಗದಾಳ ಸುಧಾ ಹಾಗೂ ಮಲ್ಲಿಪಟ್ಟಣದ ಮಂಜು ತುಂಬಾ ಒಡಾಟದಿಂದ ವೈದ್ಯರ ಹುಟ್ಟುಹಬ್ಬವನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ನಾಗರಾಜು ಸೇರಿದಂತೆ ಅನೇಕ ಪ್ರಮುಖರು ,ಸುತ್ತಮುತ್ತಲ್ಲಿನ ಗ್ರಾಮಗಳ ಗ್ರಾಮಸ್ಥರು ಮತ್ತು ಯುವಕರು ಭಾಗವಹಿಸಿದ್ದರು. #news5kannada #Dr_Vishwanath #Mallipattana #happybirthday #birthdaycelebration arkalgudu Hassan Docter political1