ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ಹಾಗೂ ಈದ್ ಮಿಲಾದ್ ಸಮಿತಿ ಪುತ್ತೂರು ತಾಲೂಕು ಜಂಟಿ ಆಶ್ರಯದಲ್ಲಿ 34ನೇ ವರ್ಷದ ಬೃಹತ್ ಮಿಲಾದ್ ಸಮಾವೇಶ ಮಂಗಳೂರು: ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ಹಾಗೂ ಈದ್ ಮಿಲಾದ್ ಸಮಿತಿ ಪುತ್ತೂರು ತಾಲೂಕು ಇದರ ಜಂಟಿ ಆಶ್ರಯದಲ್ಲಿ 34ನೇ ವರ್ಷದ ಬೃಹತ್ ಮಿಲಾದ್ ಸಮಾವೇಶದ ಪ್ರಯುಕ್ತ ದರ್ಬೆ ಬೈಪಾನ್ ಬಳಿಯಿಂದ ಪುತ್ತೂರು ಕಿಲ್ಲೆ ಮೈದಾನದವರೆಗೆ ಇಸ್ಲಾಮಿಕ್ ಸಾಂಸ್ಕೃತಿಕ ಕಲೆಗಳನ್ನು ಬಿಂಬಿಸುವ ಅತ್ಯಾಕರ್ಷಕ ಕಾಲ್ನಡಿಗೆ ಜಾಥಾ ಆ.25ರಂದು ನಡೆಯಿತು. ದರ್ಬೆ ಬೈಪಾಸ್ ಜಂಕ್ಷನ್ ಬಳಿಯಿಂದ ಹೊರಟು ಪ್ರಮುಖ ರಸ್ತೆಯಾಗಿ ಸಾಗಿದ ಈ ಕಾಲ್ನಡಿಗೆ ಜಾಥಾದಲ್ಲಿ ವಿವಿಧ ತಂಡಗಳಿಂದ ದಫ್ ಪ್ರದರ್ಶನ, ತಾಲೀಮು ಪ್ರದರ್ಶನ, ಅಲ್ಲದೆ ಇನ್ನಿತರ ವಿವಿಧ ಸಾಂಸ್ಕೃತಿಕ ಪ್ರದರ್ಶನ ಮೇಲೈಸಿತ್ತು. ಕಿಲ್ಲೆ ಮೈದಾನದವರೆಗೆ ನಡೆದ ಆಕರ್ಷಣೀಯ ಕಾಲ್ನಡಿಗೆ ಜಾಥಾದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ದರ್ಬೆಯಲ್ಲಿ ಕಾಲ್ನಡಿಗೆ ಜಾಥಾವನ್ನು ರಾಜ್ಯ ಎನ್ ಎಸ್ ಯು ಐ ಉಪಾಧ್ಯಕ್ಷ ಫಾರೂಕ್ ಬಯಬೆರವರು ಉದ್ಘಾಟಿಸಿದರು. ಬೆಂಗಳೂರು ರಾಯಲ್ ಗ್ರೂಪ್ಸ್ ನ ಹಾಜಿ ರಫೀಕ್ ಮತ್ತು ಸೌದಿ ಅರೇಬಿಯಾ ಪಿ.ಕೆ. ಗ್ರೂಪ್ಸ್ನ ಫೈರೋಝ್ ಪರ್ಲಡ್ಕ ರವರು ಧ್ವಜಾರೋಹಣಗೈದರು. ದುಬೈ ಉದ್ಯಮಿ ಶಾಕೀರ್ ಕೂರ್ನಡ್ಕ ರವರು ಧ್ವಜ ಸ್ವೀಕರಿಸಿದರು. ದರ್ಬೆಯಿಂದ ಪುತ್ತೂರು ಮುಖ್ಯರಸ್ತೆಯಾಗಿ ಸಾಗಿದ ಜಾಥಾದಲ್ಲಿ ವಿವಿಧ ತಂಡಗಳ ದಫ್ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ವಿವಿಧ ದಫ್ ತಂಡಗಳು ಹಾಗೂ ಸೈಟ್ ತಂಡಗಳು, -ವರ್ ಶೋ ತಂಡ ವಿವಿಧ ಬಣ್ಣಗಳ ಸಮವಸಗಳ ಮೂಲಕ ಕಂಗೊಳಿಸುತ್ತಿತ್ತು. ದಫ್ ತಂಡ ಜಾಥಾದುದ್ದಕ್ಕೂ ನಿರಂತರವಾಗಿ ದಫ್ ಪ್ರದರ್ಶನ ನೀಡುತ್ತಲೇ ಸಾಗಿ ಬಂದದ್ದು ವಿಶೇಷವಾಗಿತ್ತು. ಪೊಲೀಸರ ಜೊತೆ ಮುಸ್ಲಿಂ ಯುವಜನ ಪರಿಷತ್ ಪದಾಧಿಕಾರಿಗಳು ಹಾಗೂ ವಿಲಾದ್ ಸಮಿತಿಯ ಪದಾಧಿಕಾರಿಗಳು ಜಾಥಾ ಸುಸೂತ್ರವಾಗಿ ಸಾಗುವಂತೆ ಮಾಡುವಲ್ಲಿ ಯಶಸ್ವಿಯಾದರು. ವಿವಿಧ ತಂಡಗಳ ದಫ್ ಪ್ರದರ್ಶನದೊಂದಿಗೆ ಪುತ್ತೂರು ಮುಖ್ಯ ರಸ್ತೆಯಾಗಿ ಕಿಲ್ಲೆ ಮೈದಾನದವರೆಗೆ ನಡೆದ ಜಾಥಾದಲ್ಲಿ ವಿವಿಧ ಕಡೆಗಳಿಂದ ಬಂದಿದ್ದ ಸಾವಿರಾರು ಮಂದಿ ಭಾಗಿಯಾಗಿದ್ದರು. ಪ್ರವಾದಿ ಮುಹಮ್ಮದ್ ಪೈಗಂಬರ್ರವರ ಕೀರ್ತನೆ, ಮದ್ಜ್ಗಾನ, ಸ್ವಲಾತ್, ಜಾಥಾದುದಕ್ಕೂ ಮೊಳಗಿತು. ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಮಂದಿ ಜಾಥಾವನ್ನು ವೀಕ್ಷಿಸಿದರು. ಜಾಥಾದ ಬಳಿಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಬೃಹತ್ ಮಿಲಾದ್ ಸಮಾವೇಶ ನಡೆಯಿತು. 34ನೇ ವರ್ಷದ ಬೃಹತ್ ಮಿಲಾದ್ ಸಮಾವೇಶ ಹಾಗೂ ದರ್ಬೆ ಪ್ರವಾಸಿ ಮಂದಿರದ ಬಳಿಯಿಂದ ನಡೆದ ಕಾಲ್ನಡಿಗೆ ಜಾಥಾ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ ವಿವಿಧ ಕಡೆಗಳಿಂದ ಸಾವಿರಾರು ಮಂದಿ ಭಾಗವಹಿಸಿ ಜಾಥಾ ಸುಸೂತ್ರವಾಗಿ ಮತ್ತು ಶಾಂತಿಯುತವಾಗಿ ನಡೆಯುವಂತೆ ಮಾಡಿದ್ದು ಭಾರೀ ಖುಷಿ ತಂದಿದೆ ಇದಕ್ಕಾಗಿ ಮುಸ್ಲಿಂ ಯುವಜನ ಪರಿಷತ್ಹಾಗೂ ಈದ್ ವಿಲಾದ್ ಸಮಿತಿಯವರಿಗೆ ಹಾಗೂ ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸುವುದಾಗಿ ದ.ಕ. ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ತಿನ ಅಧ್ಯಕ್ಷ ಅಶ್ರಫ್ ಕಲ್ಲೇಗರವರು ತಿಳಿಸಿದರು. ಇದೆ ಸಂದರ್ಭದಲ್ಲಿ ವಿವಿಧ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಡಿವೈಎಸ್ಪಿ ಪ್ರಮೋದ್ ಕುಮಾರ್, ನಗರ ಪೊಲೀಸ್ ಠಾಣೆ ವೃತ ನಿರೀಕ್ಷಕ ಜಾನ್ಸನ್ ಡಿ'ಸೋಜರವರ ನೇತೃತ್ವದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ರಾಜ್ಯ ಸಂಚಾಲಕ ನ್ಯಾಯವಾದಿ ಎಂ.ಪಿ ಅಬೂಬಕ್ಕರ್, ಅಧ್ಯಕ್ಷ ಹಾಜಿ ಅಶ್ರಫ್ ಕಲ್ಲೇಗ, ಪ್ರಧಾನ ಕಾರ್ಯದರ್ಶಿ ಬಶೀರ್ ಪರ್ಲಡ್ಕ, ಪುತ್ತೂರು ಈದ್ ಮಿಲಾದ್ ಸಮಿತಿಯ ಅಧ್ಯಕ್ಷ ಹನೀಫ್ ಬಗ್ಗು ಮೂಲೆ, ಪ್ರಧಾನ ಕಾರ್ಯದರ್ಶಿ ನೌಶಾದ್ ಹಾಜಿ ಬೊಳ್ವಾರ್, ಪುತ್ತೂರು ತಾಲೂಕು ಸಂಯುಕ್ತ ಖಾಝಿ ಸಮಿತಿಯ ಅಧ್ಯಕ್ಷ ಎಲ್. ಟಿ. ಅಬ್ದುಲ್ ರಝಾಕ್ ಹಾಜಿ, ದ.ಕ. ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ತಿನ ಕೋಶಾಧಿಕಾರಿ ಸಾಲ್ಮರ ಮುಹಮ್ಮದ್ ಶರೀಫ್ ಸಂಚಾಲಕ ನ್ಯಾಯವಾದಿ ನೋಟರಿ ನೂರುದ್ದೀನ್ ಸಾಲ್ಮರ, ಮತ್ತು ಖಾಸಿಮ್ ಹಾಜಿ ಮಿತ್ತೂರು, ಉಪಾಧ್ಯಕ್ಷ ಅಬೂಬಕ್ಕರ್ ಮುಲಾರ್, ಅಶ್ರಫ್ ಬಾವು ಪಡೀಲ್, ಮೂಸ ಕರೀಂ ಮಾಣಿ, ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಅಬ್ದುಲ್ ರಹೀಮಾನ್ ಅಜಾದ್, ಎಸ್ಬಿ. ದಾರಿಮಿ ಹಾಗೂ ದ.ಕ. ಮುಸ್ಲಿಂ ಯುವಜನ ಪರಿಷತ್ತಿನ ಸದಸ್ಯರು ಹಾಗೂ ಈದ್ ಮಿಲಾದ್ ಸಮಿತಿಯ ಸದಸ್ಯರು ಸಾರ್ವಜನಿಕರು ವಿವಿಧ ಸಂಘ ಸಂಸ್ಥೆಗಳ ಪದಾಽಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ಹಾಗೂ ಈದ್ ಮಿಲಾದ್ ಸಮಿತಿ ಪುತ್ತೂರು ತಾಲೂಕು ಜಂಟಿ ಆಶ್ರಯದಲ್ಲಿ 34ನೇ ವರ್ಷದ ಬೃಹತ್ ಮಿಲಾದ್ ಸಮಾವೇಶ ಮಂಗಳೂರು: ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ಹಾಗೂ ಈದ್ ಮಿಲಾದ್ ಸಮಿತಿ ಪುತ್ತೂರು ತಾಲೂಕು ಇದರ ಜಂಟಿ ಆಶ್ರಯದಲ್ಲಿ 34ನೇ ವರ್ಷದ ಬೃಹತ್ ಮಿಲಾದ್ ಸಮಾವೇಶದ ಪ್ರಯುಕ್ತ ದರ್ಬೆ ಬೈಪಾನ್ ಬಳಿಯಿಂದ ಪುತ್ತೂರು ಕಿಲ್ಲೆ ಮೈದಾನದವರೆಗೆ ಇಸ್ಲಾಮಿಕ್ ಸಾಂಸ್ಕೃತಿಕ ಕಲೆಗಳನ್ನು ಬಿಂಬಿಸುವ ಅತ್ಯಾಕರ್ಷಕ ಕಾಲ್ನಡಿಗೆ ಜಾಥಾ ಆ.25ರಂದು ನಡೆಯಿತು. ದರ್ಬೆ ಬೈಪಾಸ್ ಜಂಕ್ಷನ್ ಬಳಿಯಿಂದ ಹೊರಟು ಪ್ರಮುಖ ರಸ್ತೆಯಾಗಿ ಸಾಗಿದ ಈ ಕಾಲ್ನಡಿಗೆ ಜಾಥಾದಲ್ಲಿ ವಿವಿಧ ತಂಡಗಳಿಂದ ದಫ್ ಪ್ರದರ್ಶನ, ತಾಲೀಮು ಪ್ರದರ್ಶನ, ಅಲ್ಲದೆ ಇನ್ನಿತರ ವಿವಿಧ ಸಾಂಸ್ಕೃತಿಕ ಪ್ರದರ್ಶನ ಮೇಲೈಸಿತ್ತು. ಕಿಲ್ಲೆ ಮೈದಾನದವರೆಗೆ ನಡೆದ ಆಕರ್ಷಣೀಯ ಕಾಲ್ನಡಿಗೆ ಜಾಥಾದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ದರ್ಬೆಯಲ್ಲಿ ಕಾಲ್ನಡಿಗೆ ಜಾಥಾವನ್ನು ರಾಜ್ಯ ಎನ್ ಎಸ್ ಯು ಐ ಉಪಾಧ್ಯಕ್ಷ ಫಾರೂಕ್ ಬಯಬೆರವರು ಉದ್ಘಾಟಿಸಿದರು. ಬೆಂಗಳೂರು ರಾಯಲ್ ಗ್ರೂಪ್ಸ್ ನ ಹಾಜಿ ರಫೀಕ್ ಮತ್ತು ಸೌದಿ ಅರೇಬಿಯಾ ಪಿ.ಕೆ. ಗ್ರೂಪ್ಸ್ನ ಫೈರೋಝ್ ಪರ್ಲಡ್ಕ ರವರು ಧ್ವಜಾರೋಹಣಗೈದರು. ದುಬೈ ಉದ್ಯಮಿ ಶಾಕೀರ್ ಕೂರ್ನಡ್ಕ ರವರು ಧ್ವಜ ಸ್ವೀಕರಿಸಿದರು. ದರ್ಬೆಯಿಂದ ಪುತ್ತೂರು ಮುಖ್ಯರಸ್ತೆಯಾಗಿ ಸಾಗಿದ ಜಾಥಾದಲ್ಲಿ ವಿವಿಧ ತಂಡಗಳ ದಫ್ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ವಿವಿಧ ದಫ್ ತಂಡಗಳು ಹಾಗೂ ಸೈಟ್ ತಂಡಗಳು, -ವರ್ ಶೋ ತಂಡ ವಿವಿಧ ಬಣ್ಣಗಳ ಸಮವಸಗಳ ಮೂಲಕ ಕಂಗೊಳಿಸುತ್ತಿತ್ತು. ದಫ್ ತಂಡ ಜಾಥಾದುದ್ದಕ್ಕೂ ನಿರಂತರವಾಗಿ ದಫ್ ಪ್ರದರ್ಶನ ನೀಡುತ್ತಲೇ ಸಾಗಿ ಬಂದದ್ದು ವಿಶೇಷವಾಗಿತ್ತು. ಪೊಲೀಸರ ಜೊತೆ ಮುಸ್ಲಿಂ ಯುವಜನ ಪರಿಷತ್ ಪದಾಧಿಕಾರಿಗಳು ಹಾಗೂ ವಿಲಾದ್ ಸಮಿತಿಯ ಪದಾಧಿಕಾರಿಗಳು ಜಾಥಾ ಸುಸೂತ್ರವಾಗಿ ಸಾಗುವಂತೆ ಮಾಡುವಲ್ಲಿ ಯಶಸ್ವಿಯಾದರು. ವಿವಿಧ ತಂಡಗಳ ದಫ್ ಪ್ರದರ್ಶನದೊಂದಿಗೆ ಪುತ್ತೂರು ಮುಖ್ಯ ರಸ್ತೆಯಾಗಿ ಕಿಲ್ಲೆ ಮೈದಾನದವರೆಗೆ ನಡೆದ ಜಾಥಾದಲ್ಲಿ ವಿವಿಧ ಕಡೆಗಳಿಂದ ಬಂದಿದ್ದ ಸಾವಿರಾರು ಮಂದಿ ಭಾಗಿಯಾಗಿದ್ದರು. ಪ್ರವಾದಿ ಮುಹಮ್ಮದ್ ಪೈಗಂಬರ್ರವರ ಕೀರ್ತನೆ, ಮದ್ಜ್ಗಾನ, ಸ್ವಲಾತ್, ಜಾಥಾದುದಕ್ಕೂ ಮೊಳಗಿತು. ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಮಂದಿ ಜಾಥಾವನ್ನು ವೀಕ್ಷಿಸಿದರು. ಜಾಥಾದ ಬಳಿಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಬೃಹತ್ ಮಿಲಾದ್ ಸಮಾವೇಶ ನಡೆಯಿತು. 34ನೇ ವರ್ಷದ ಬೃಹತ್ ಮಿಲಾದ್ ಸಮಾವೇಶ ಹಾಗೂ ದರ್ಬೆ ಪ್ರವಾಸಿ ಮಂದಿರದ ಬಳಿಯಿಂದ ನಡೆದ ಕಾಲ್ನಡಿಗೆ ಜಾಥಾ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ ವಿವಿಧ ಕಡೆಗಳಿಂದ ಸಾವಿರಾರು ಮಂದಿ ಭಾಗವಹಿಸಿ ಜಾಥಾ ಸುಸೂತ್ರವಾಗಿ ಮತ್ತು ಶಾಂತಿಯುತವಾಗಿ ನಡೆಯುವಂತೆ ಮಾಡಿದ್ದು ಭಾರೀ ಖುಷಿ ತಂದಿದೆ ಇದಕ್ಕಾಗಿ ಮುಸ್ಲಿಂ ಯುವಜನ ಪರಿಷತ್ಹಾಗೂ ಈದ್ ವಿಲಾದ್ ಸಮಿತಿಯವರಿಗೆ ಹಾಗೂ ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸುವುದಾಗಿ ದ.ಕ. ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ತಿನ ಅಧ್ಯಕ್ಷ ಅಶ್ರಫ್ ಕಲ್ಲೇಗರವರು ತಿಳಿಸಿದರು. ಇದೆ ಸಂದರ್ಭದಲ್ಲಿ ವಿವಿಧ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಡಿವೈಎಸ್ಪಿ ಪ್ರಮೋದ್ ಕುಮಾರ್, ನಗರ ಪೊಲೀಸ್ ಠಾಣೆ ವೃತ ನಿರೀಕ್ಷಕ ಜಾನ್ಸನ್ ಡಿ'ಸೋಜರವರ ನೇತೃತ್ವದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ರಾಜ್ಯ ಸಂಚಾಲಕ ನ್ಯಾಯವಾದಿ ಎಂ.ಪಿ ಅಬೂಬಕ್ಕರ್, ಅಧ್ಯಕ್ಷ ಹಾಜಿ ಅಶ್ರಫ್ ಕಲ್ಲೇಗ, ಪ್ರಧಾನ ಕಾರ್ಯದರ್ಶಿ ಬಶೀರ್ ಪರ್ಲಡ್ಕ, ಪುತ್ತೂರು ಈದ್ ಮಿಲಾದ್ ಸಮಿತಿಯ ಅಧ್ಯಕ್ಷ ಹನೀಫ್ ಬಗ್ಗು ಮೂಲೆ, ಪ್ರಧಾನ ಕಾರ್ಯದರ್ಶಿ ನೌಶಾದ್ ಹಾಜಿ ಬೊಳ್ವಾರ್, ಪುತ್ತೂರು ತಾಲೂಕು ಸಂಯುಕ್ತ ಖಾಝಿ ಸಮಿತಿಯ ಅಧ್ಯಕ್ಷ ಎಲ್. ಟಿ. ಅಬ್ದುಲ್ ರಝಾಕ್ ಹಾಜಿ, ದ.ಕ. ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ತಿನ ಕೋಶಾಧಿಕಾರಿ ಸಾಲ್ಮರ ಮುಹಮ್ಮದ್ ಶರೀಫ್ ಸಂಚಾಲಕ ನ್ಯಾಯವಾದಿ ನೋಟರಿ ನೂರುದ್ದೀನ್ ಸಾಲ್ಮರ, ಮತ್ತು ಖಾಸಿಮ್ ಹಾಜಿ ಮಿತ್ತೂರು, ಉಪಾಧ್ಯಕ್ಷ ಅಬೂಬಕ್ಕರ್ ಮುಲಾರ್, ಅಶ್ರಫ್ ಬಾವು ಪಡೀಲ್, ಮೂಸ ಕರೀಂ ಮಾಣಿ, ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಅಬ್ದುಲ್ ರಹೀಮಾನ್ ಅಜಾದ್, ಎಸ್ಬಿ. ದಾರಿಮಿ ಹಾಗೂ ದ.ಕ. ಮುಸ್ಲಿಂ ಯುವಜನ ಪರಿಷತ್ತಿನ ಸದಸ್ಯರು ಹಾಗೂ ಈದ್ ಮಿಲಾದ್ ಸಮಿತಿಯ ಸದಸ್ಯರು ಸಾರ್ವಜನಿಕರು ವಿವಿಧ ಸಂಘ ಸಂಸ್ಥೆಗಳ ಪದಾಽಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
- ಪುತ್ತೂರಿನ ದರ್ಬೆಯಲ್ಲಿ ಇತ್ತೀಚೆಗೆ ನಡೆದ ಘಟನೆ ಅನಿರೀಕ್ಷಿತವಲ್ಲ. ಇದು ಮತಾಂಧತೆಯ ಮನಸ್ಥಿತಿಯ ಪ್ರದರ್ಶನ ಮಂಗಳೂರು: ಪುತ್ತೂರಿನ ದರ್ಬೆಯಲ್ಲಿ ಇತ್ತೀಚೆಗೆ ನಡೆದ ಘಟನೆ ಅನಿರೀಕ್ಷಿತವಲ್ಲ. ಇದು ಮತಾಂಧತೆಯ ಮನಸ್ಥಿತಿಯ ಪ್ರದರ್ಶನವಾಗಿದ್ದು, ಪುತ್ತೂರಿನಲ್ಲಿ ಆರಂಭವಾಗಿರುವ ವಾಣಿಜ್ಯ ಭಯೋತ್ಪಾದನೆ'ಯ ಮೊದಲ ಘಟನೆ ಎಂದು ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ಜಗದೀಶ್ ಕಾರಂತ್ ಆರೋಪಿಸಿದರು. ದರ್ಬೆ ಘಟನೆಯಲ್ಲಿ ಗಾಯಗೊಂಡು ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಜನಾ ಪೈ ಅವರನ್ನು ಆ.26ರಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ, ಅವರ ಪತಿ ಸದಾಶಿವ ಪೈ ಅವರೊಂದಿಗೆ ಮಾತುಕತೆ ನಡೆಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಹಿಂದೂಗಳು ಪುತ್ತೂರಿನ ವ್ಯಾಪಾರ ಕ್ಷೇತ್ರದಿಂದ ಹಿಂದೆ ಸರಿಯಬೇಕು ಎಂಬ ಮನೋಭಾವದ ಹಿನ್ನೆಲೆಯಲ್ಲಿ ನಡೆದಿರುವ ವಾಣಿಜ್ಯ ಭಯೋತ್ಪಾದನೆಯ ಮೊದಲ ಘಟನೆ ಇದಾಗಿದೆ ಎಂದು ಆರೋಪಿಸಿದ ಅವರು, ಜೆರಾಕ್ಸ್ ಅಂಗಡಿಯಲ್ಲಿ ಸಣ್ಣ ಚೀಟಿ ಸುಟ್ಟುಹೋದ ವಿಚಾರಕ್ಕೆ ಕ್ಷಣಾರ್ಧದಲ್ಲಿ ನೂರಾರು ಮಂದಿ ಆಗಮಿಸಿ ದಾಳಿ ನಡೆಸಿರುವುದರ ಹಿಂದಿನ ದುರುದ್ದೇಶ ಮೊದಲು ಬಹಿರಂಗವಾಗಬೇಕು ಎಂದರು. ಎಲ್ಲ ಅಂಗಡಿಗಳಲ್ಲಿಯೂ ಕೆಲವೊಮ್ಮೆ ತಪ್ಪುಗಳು ಸಂಭವಿಸುತ್ತವೆ. ಅದಕ್ಕೆ ಪ್ರತಿಯಾಗಿ ಗುಂಡಾಗಿರಿ ಅಥವಾ ಹಲ್ಲೆ ನಡೆಸುವುದೇ ಉತ್ತರವಾದರೆ ಮುಂದಿನ ದಿನಗಳಲ್ಲಿ ರಸ್ತೆ-ರಸ್ತೆಗಳಲ್ಲಿ ಕಾದಾಟಗಳು ನಡೆಯುವ ಪರಿಸ್ಥಿತಿ ನಿರ್ಮಾಣವಾಗಬಹುದು. ಸಾಮಾಜಿಕ ಶಾಂತಿ ಕಾಪಾಡಲು ಸಾಮಾಜಿಕ ಪ್ರಜ್ಞೆ ಇರುವವರು ಈ ವಿಚಾರವನ್ನು ಗಂಭೀರವಾಗಿ ಗಮನಿಸಬೇಕು ಎಂದು ಹೇಳಿದರು. ಹಿಂದೂ ಸಮಾಜಕ್ಕೆ ಪ್ರಾಮಾಣಿಕವಾಗಿ ನ್ಯಾಯ ಮತ್ತು ರಕ್ಷಣೆ ದೊರೆಯದಿದ್ದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯವನ್ನು ಹುಡುಕುವ ಹಾಗೂ ಅದನ್ನು ಪಡೆಯುವ ಹಕ್ಕು ಮತ್ತು ಶಕ್ತಿ ಹಿಂದೂ ಸಮಾಜಕ್ಕಿದೆ. ಅದನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ನ್ಯಾಯಕ್ಕಾಗಿ ಮೂರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆ.31ರಂದು ಪುತ್ತೂರು ಚಲೋ' ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಹತ್ತಿಕ್ಕುವ ರೀತಿಯಲ್ಲಿ ರಾಜಕೀಯ ಮುಂದುವರಿದರೆ ಹಿಂದೂ ಸಮಾಜದ ತಾಳ್ಮೆ ಯಾವ ಹಂತದಲ್ಲಾದರೂ ತಪ್ಪಬಹುದು ಎಂದು ಎಚ್ಚರಿಸಿದರು. ಹಲ್ಲೆಗೊಳಗಾದ ಮಹಿಳೆಯ ಮೇಲೆ ಕೊಲೆಯತ್ನದಂತಹ ಗಂಭೀರ ಪ್ರಕರಣ ದಾಖಲಿಸಲಾಗಿದೆ. ಮೂಳೆ ಮುರಿದು ಆಸ್ಪತ್ರೆ ಸೇರಿರುವವರ ಪ್ರಕರಣಗಳಿವೆ. ಆದರೆ ಕೃತ್ಯ ಎಸಗಿದವರ ವಿರುದ್ಧ ಪ್ರಕರಣ ದಾಖಲಿಸುವುದು ಅಥವಾ ಬಂಧಿಸುವುದು ಕಂಡುಬರುತ್ತಿಲ್ಲ. ಅಧಿಕಾರಿಗಳು ಯಾರನ್ನು ತೃಪ್ತಿಪಡಿಸಲು ಮುಂದಾಗಿದ್ದಾರೆ ಎಂದು ಜಗದೀಶ್ ಕಾರಂತ್ ಪ್ರಶ್ನಿಸಿದರು. ಸಿಂಗಂ ವೇಷ ಹಾಕಿಕೊಂಡು ಒಂದು ಸಮಾಜದ ಭಾವನೆಗಳನ್ನು ಹತ್ತಿಕ್ಕುವುದು, ಬಲಪ್ರಯೋಗದ ಮೂಲಕ ಸಮಾಜವನ್ನು ತುಳಿಯುವ ಪ್ರಯತ್ನ ನಡೆಸುವುದನ್ನು ಹಿಂದೂ ಸಮಾಜ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಎಲ್ಲರ ಮೇಲೂ ಒಂದೇ ರೀತಿಯ ಕಾನೂನು ಕ್ರಮ ಜರುಗಿಸಬೇಕಿತ್ತು. ಆದರೆ ಬೇರೆ ಬೇರೆ ಸಬೂಬುಗಳನ್ನು ನೀಡಿ ಪತ್ರಿಕಾಗೋಷ್ಠಿಗಳಲ್ಲಿ ಸಮರ್ಥನೆ ನೀಡುವ ಪ್ರಯತ್ನ ಮಾಡಬಾರದು ಎಂದರು. ರಾಜಕೀಯ ಬಕೆಟ್ಗಿರಿಯನ್ನು ಜಾಗೃತ ಸಮಾಜ ಸಹಿಸುವುದಿಲ್ಲ. ಮೊದಲು ಭಯೋತ್ಪಾದನಾ ಮನೋಭಾವವನ್ನು ನಿಲ್ಲಿಸಬೇಕು. ನಿಮ್ಮ ದಕ್ಷತೆಗೆ ಹಾಗೂ `ಸಿಂಗಂ'ಗಿರಿಗೆ ಇದೊಂದು ಸವಾಲಾಗಿದೆ ಎಂದು ಜಗದೀಶ್ ಕಾರಂತ್ ಹೇಳಿದರು. ಹಿಂದು ಜಾಗರಣ ವೇದಿಕೆಯ ಪ್ರಾಂತ ಸಂಘಟನಾ ಕಾರ್ಯದರ್ಶಿ ಪ್ರಶಾಂತ್, ರವಿರಾಜ್ ಶೆಟ್ಟಿ ಕಡಬ, ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು, ಸುಪ್ರಿತ್, ಪ್ರಶಾಂತ್ ಕೆಂಪುಗುಡ್ಡೆ, ಅಜಿತ್ ರೈ ಹೊಸಮನೆ ಸಹಿತ ಹಲವಾರು ಮಂದಿ ಜೊತೆಗಿದ್ದರು.1
- ಕುಂಜತ್ಬೈಲ್ನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಂಗಳೂರು: ಸುರತ್ಕಲ್ ಹೋಬಳಿಯ ಕುಂಜತ್ತಬೈಲ್ನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ನಿಯೋಗವು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಆ.21ರಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ನೇತೃತ್ವದಲ್ಲಿ ನಿಯೋಗವು ಸಚಿವರನ್ನು ಭೇಟಿ ಮಾಡಿ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮನವಿ ಮಾಡಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಂಜೀವ ಕೋಟ್ಯಾನ್, ಗೌರವಾಧ್ಯಕ್ಷ ರಘುನಾಥ ಅತ್ತಾವರ, ಉಪಾಧ್ಯಕ್ಷ ಅಣ್ಣು ಕುಂಜತ್ತ್ ಬೈಲ್, ಚೈತನ್ಯ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೃಷ್ಣ ಸೂಟರ್ ಪೇಟೆ, ಜಿಲ್ಲಾ ವಕ್ತಾರ ರಾಮ್ ಕುಮಾರ್ ಹಾಗೂ ಸದಸ್ಯ ಅಕ್ಷಯ್ ಗೇರುಕಟ್ಟೆ ಉಪಸ್ಥಿತರಿದ್ದರು.1
- ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತ: ಯುವಕ ಸಾವು ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಎಂಬವರು ದುರಂತವಾಗಿ ನಿಧನರಾಗಿದ್ದಾರೆ. ಮೃತ ಯುವಕ ಹರ್ಷದ್ ಅವರು ಕಲ್ಲೇಗ ಜುಮಾ ಮಸೀದಿ ಜಮಾಅತ್ಗೆ ಒಳಪಟ್ಟ ಮುರ ನಿವಾಸಿ, ಮರ್ಹೂಮ್ ರಝಾಕ್ ಸಾಹೇಬ್ ಅವರ ಪುತ್ರ ಹಾಗೂ ಇರ್ಷಾದ್ ಅವರ ಸಹೋದರ. ಇವರು ನೆಹರು ನಗರದ ‘ರೆಕ್ಸಾ ಶಾಪ್’ನಲ್ಲಿ ಉದ್ಯೋಗಿಯಾಗಿದ್ದರು. ಇಂದು ಪರ್ಲೋಟು ಸಮೀಪ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಹರ್ಷದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಯುವಕನ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಕಲ್ಲೇಗ ಜಮಾಅತ್ ಬಂಧುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.1
- ಮಡಿಕೇರಿ ನಗರದ ಮಂಗಳಾದೇವಿ ನಗರ ಮತ್ತು ಕ್ರಸ್ಟಲ್ ಕೋರ್ಟ್ ಹಿಂಬಾಗ ರಸ್ತೆಯಲ್ಲೆ ಹರಿಯುತ್ತಿರುವ ನೀರು ಜಿಲ್ಲೆಯಲ್ಲಿ ಮಾಘ ಮಳೆ ಚುರುಕುಗೊಂಡಿದ್ದು ಎಲ್ಲೆಡೆ ನೀರು ತುಂಬಿ ಹರಿಯುತ್ತಿದೆ. ಮಡಿಕೇರಿ ನಗರದ ಮಂಗಳಾದೇವಿ ನಗರ, ಕ್ರಿಸ್ಟಲ್ ಕೋರ್ಟ್ ಹಿಂಬಾಗದ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದೆ ಮಳೆ ನೀರು ರಸ್ತೆಯ ಮೇಲೆಯೇ ಉಕ್ಕಿ ಹರಿಯುತ್ತಿದೆ. ಇದರಿಂದ ಸಂಚಾರಕ್ಕೆ ತೊಡಕುಂಟಾಗಿದೆ.1
- ಈದ್ ಮಿಲಾದ್ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ1
- ಶಿಕಾರಿಪುರ. 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)' ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್ ಶಿರಾಳಕೊಪ್ಪ. ಶಿಕಾರಿಪುರ. ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026ರಿಂದ 06-09-20265 ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ಶಿಕಾರಿಪುರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಹುಸೇನ್ ಅಧ್ಯಕ್ಷ ಶಿರಾಳಕೊಪ್ಪ ಮಾತನಾಡಿ, ಪ್ರವಾದಿಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನದ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು. ಪ್ರವಾದಿಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಶ್ರೀ ಯೋಗೇಶ್ ಮಾಸ್ಟರ್ ಅವರು ಬರೆದ 'ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)' ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ 'ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)' ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಎಂಬ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ. ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ. ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಕ್ಯಾಲಿಗಳು ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು ಎಂದರು. ಜಕೀ ಅಹ್ಮದ್ ಆಫ್ರಿದಿ ಕಾರ್ಯದರ್ಶಿ ಶಿರಾಳಕೊಪ್ಪ ಮಾತನಾಡಿ, ರೋಗಿಗಳ ಭೇಟಿ ಮತ್ತು ಹಣ್ಣು ವಿತರಣೆ ಬಡ ವಿದ್ಯಾರ್ಥಿಗಳಿಗೆ ನೋಟ್ಬುಕ್, ಪೆನ್ ವಿತರಣೆ ಬಡ ಮತ್ತು ಅಗತ್ಯವಿರುವ ಕುಟುಂಬಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನ ಮನೆ ನಿರ್ಮಾಣಕ್ಕೆ ಸಹಾಯ - ಇತ್ತೀಚೆಗೆ ಮೇಲ್ಚಾವಣಿಯ ಸ್ಲಾಬ್ ಹಾಕಿಸಿದ ಸೇವಾ ಕಾರ್ಯಹಾಗೂ ಮುಸ್ಲಿಮರು ಮತ್ತು ಮುಸ್ಲಿಮೇತರರಿಗಾಗಿ ರಕ್ತದಾನ ಶಿಬಿರ ಮತ್ತು ರೇಷನ್ ಕಿಟ್ ವಿತರಣೆ, ಪರಿಸರ ಮತ್ತು ಸ್ವಚ್ಛತಾ ಕಾರ್ಯ ಶಾಲೆ ಆಸ್ಪತ್ರೆ ಗ್ರಂಥಾಲಯ ಮುಂತಾದ ಸ್ಥಳಗಳಲ್ಲಿ ಸೀರತ್ ಪುಸ್ತಕಗಳ ವಿತರಣೆ, ಉಲಾಮ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಭೇಟಿ,ಮೊಹ್ಸಿನೇ ಇನ್ಸಾನಿಯತ್ ಪುಸ್ತಕವನ್ನು ಕಾರ್ಯಕರ್ತರು ಅಧ್ಯಯನ ಮಾಡುವಂತೆ ಪ್ರೋತ್ಸಾಹಿಸುವುದು, ಕನ್ನಡ ಮತ್ತು ಉರ್ದು ಭಾಷೆಗಳಲ್ಲಿ ಸ್ಪರ್ಧೆಗಳು ಸಂದೇಶಗಳನ್ನು ಸೇವಾ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಿಸುವುದು ಎಂದರು. ಇದೇ ಸಂದರ್ಭದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸಿಬ್ ಗತ್ ಉಲ್ಲಾ ಕಾರ್ಯಕರ್ತರು,ಅಬ್ದುಲ್ ಗಪೂರ್ ಸ್ಥಾನೀಯ ಅಧ್ಯಕ್ಷರು,ಶಿಕಾರಿಪುರ, ಜಾಕಿರ್ ಹುಸೇನ್ ಸ್ಥಾನೀಯ ಅಧ್ಯಕ್ಷರು, ಚಿಕ್ಕ ಜಂಬೂರು ಅಬ್ದುಲ್ ಕಬೀರ್ ಕಾರ್ಯಕರ್ತರು, ಅಬ್ದುಲ್ ರೆಹಮಾನ್ ಸ್ಥಾಯಿ ಕಾರ್ಯದರ್ಶಿ ಎಸ್.ಐ.ಒ. ಸಂಘಟನೆ ಶಿರಾಳಕೊಪ್ಪ ಉಪಸ್ಥಿತರಿದ್ದರು.1
- ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ------------- ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರದ ಯೋಜನೆಯಾದ ‘ಭಾರತ್ ಜೋಡೋ ಸಂಘ’ ರಚನೆಯಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಸ್ಥಳೀಯ ಯುವಕ-ಯುವತಿಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಕರೆ ನೀಡಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಿರಣ್ ಕುಮಾರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ‘ಭಾರತ್ ಜೋಡೋ ಸಂಘ’ ರಚನೆಯ ಕುರಿತಾದ ಅರಿವು ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. 27 ಪಂಚಾಯಿತಿಗಳಲ್ಲೂ ಸಂಘ ರಚನೆ: ಪ್ರತಿ ಗ್ರಾಮದಲ್ಲೂ 16 ರಿಂದ 35 ವರ್ಷ ವಯೋಮಾನದ ಯುವ ಜನತೆಯನ್ನು ಪ್ರೇರೇಪಿಸಿ ಸಂಘಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ 27 ಗ್ರಾಮ ಪಂಚಾಯಿತಿಗಳು, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಸಂಘ ರಚನೆಗೆ ಅವಕಾಶವಿದ್ದು, ಸ್ಥಳೀಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಆಗಮಿಸಿ ಯುವ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಲಾಯಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಿ.ಪುರ ನಿದರ್ಶನ್, ಹುಳಿಯಾರ್ ಯೋಗೀಶ್, ಕೃಷ್ಣೇಗೌಡ, ಅಗಸರಹಳ್ಳಿ ನರಸಿಂಹಮೂರ್ತಿ ಸೇರಿದಂತೆ ಹಲವು ಪ್ರಮುಖ ಯುವ ನಾಯಕರು ಉಪಸ್ಥಿತರಿದ್ದರು.1
- ಓಣಂ ಆಚರಣೆಗಾಗಿ ಕಾಸರಗೋಡು ವ್ಯಾಪಾರಿಗಳ ಸಂಘವು ಹೊಸ ಬಸ್ ನಿಲ್ದಾಣದಲ್ಲಿ ಬೃಹತ್ ಹೂವಿನ ಅಲಂಕಾರವನ್ನು ಸಿದ್ಧಪಡಿಸಿದೆ. ಕಾಸರಗೋಡು. ಓಣಂ ಆಚರಣೆಯ ಅಂಗವಾಗಿ, ಕಾಸರಗೋಡು ವ್ಯಾಪಾರಿಗಳ ಸಂಘವು ಹೊಸ ಬಸ್ ನಿಲ್ದಾಣದ ಫ್ಲೈಓವರ್ ಕೆಳಗೆ ಬೃಹತ್ ಹೂವಿನ ಜೋಡಣೆಯನ್ನು ಸಿದ್ಧಪಡಿಸಿತು. ಹೂವಿನ ಜೋಡಣೆಯನ್ನು ನೋಡಲು ಮತ್ತು ಚಿತ್ರಗಳನ್ನು ತೆಗೆದುಕೊಳ್ಳಲು ಸಾವಿರಾರು ಜನರು ಬಂದರು. ಹೂವಿನ ಅಲಂಕಾರ ಇಂದು ರಾತ್ರಿಯವರೆಗೆ ಇರುತ್ತದೆ. ಅಗತ್ಯವಿರುವ ಹೂವುಗಳನ್ನು ಮಂಗಳೂರಿನಿಂದ ತರಲಾಗಿದೆ. ಒಂದೂವರೆ ಕ್ವಿಂಟಾಲ್ಗೂ ಹೆಚ್ಚು ಹೂವುಗಳನ್ನು ತರಲಾಗಿದೆ. ಹೂವಿನ ಅಲಂಕಾರವನ್ನು ಪೂರ್ಣಗೊಳಿಸಲು ಹೂವುಗಳು ಮತ್ತು ಇತರ ಸಂಬಂಧಿತ ವಸ್ತುಗಳಿಗೆ ಸುಮಾರು 1.60 ಲಕ್ಷ ಖರ್ಚು ಮಾಡಲಾಗಿದೆ. ಹೂವಿನ ಅಲಂಕಾರದ ಜೊತೆಗೆ, ಮಾವೇಲಿಯ ಆಗಮನದೊಂದಿಗೆ ಕಾರ್ಯಕ್ರಮವು ವರ್ಣಮಯವಾಯಿತು. ಹೂವಿನ ಅಲಂಕಾರಕ್ಕೆ 4 ದಿನಗಳ ಮೊದಲೇ ಸಿದ್ಧತೆಗಳು ಪ್ರಾರಂಭವಾದವು. ಕೊಲಿಯಡ್ಡುಕದ ವಿನ್ಯಾಸಕ ಡಿ.ಜಗದೀಸನ್ ನೇತೃತ್ವದ 13 ಜನರ ತಂಡವು ಹೂವಿನ ಅಲಂಕಾರವನ್ನು ಪೂರ್ಣಗೊಳಿಸಿತು. ಓಣಂ ಆಚರಣೆಯ ಭಾಗವಾಗಿ ನಗರದಲ್ಲಿ ವಿಭಿನ್ನ ಪ್ರದರ್ಶನವನ್ನು ಸೃಷ್ಟಿಸುವ ಉದ್ದೇಶದಿಂದ ಈ ಮೆಗಾ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ನಗರದ ವ್ಯಾಪಾರ ಸಮುದಾಯದ ಮುಖಂಡರು ಮತ್ತು ವ್ಯಾಪಾರಿಗಳು ಇದಕ್ಕೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಿದ್ದಾರೆ ಎಂದು ಸಂಘದ ಅಧ್ಯಕ್ಷ ಎ.ಎ. ಅಬ್ದುಲ್ ಅಜೀಜ್ ಹೇಳಿದರು. ಮೆಗಾ ಪೂಕಳಂ ಅನ್ನು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಉದ್ಘಾಟಿಸಿದರು. ಕಲ್ಲತ್ತರ ಮಾಹಿನ್ ಶಾಸಕ, ಪುರಸಭೆ ಅಧ್ಯಕ್ಷೆ ಶಾ ಹಿನಾ ಸಲೀಂ, ಉಪಾಧ್ಯಕ್ಷ ಕೆ.ಎಂ. ಹನೀಫ್, ವ್ಯಾಪಾರಿಗಳು ಮತ್ತು ಕೈಗಾರಿಕಾ ಸಂಘದ ಪ್ರತಿನಿಧಿ ಉಪಸ್ಥಿತರಿದ್ದರು. ಅಧ್ಯಕ್ಷ ಎಎಎ ಸಿಐಇಎಸ್ನ ಪ್ರಧಾನ ಕಾರ್ಯದರ್ಶಿ ಕೆ.ಕೆ.ದಿನೇಶ್, ಖಜಾಂಚಿ ನಹೀಂ ಅಂಗೋಲಾ, ಸಿ.ಕೆ.ಹ್ಯಾರಿಸ್, ಎಂ.ಇಲಾಖೆ ಉಪನಿರ್ದೇಶಕ ಮುನೀರ್, ಕೆ.ಶಶಿಧರನ್, ಸಿ.ಕೆ.ಅಜಿತ್ಕುಮಾರ್, ಮಹೇಶ್, ಮಾಳ ವಿಕ, ಮುಹಮ್ಮದ್ ಶಮೀಮ್, ಪ್ರವಾಸೋದ್ಯಮ ನಸೀಬ್, ಡಿಟಿಪಿಸಿ ಕಾರ್ಯದರ್ಶಿ ಜೆ.ಕೆ.ಜಿಜೇಶ್ಕುಮಾರ್, ವರ್ತಕರು ಮತ್ತು ವರ್ತಕರು ಪುನರಾವರ್ತಿತ ಸಂಘಟನೆಗಳು. ಶರೀಫ್, ಸುರೇಶ್ ಚೆಟ್ಟಿಯಾರ್, ಡಾ.ಅಜಿತೇಶ್, ಕರೀಂ, ಅಶ್ರಫ್, ಶಾನವಾಸ್, ಅಮ್ಜತ್ ರವೂಫ್, ಅಶ್ರಫ್, ಮುನೀರ್, ರಫೀಕ್, ಮಾಹಿನ್ ಕೋಳಿಕಾರ, ಬಶೀರ್ ಕಲ್ಲಂಗಡಿ, ಫೆಡರಲ್ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ರಾಹುಲ್, ಶಾಖಾ ವ್ಯವಸ್ಥಾಪಕ ಸಚಿನ್, ಅಖಿಲಾ, ಜಿಎಎಸ್ಟಿ ಜಂಟಿ ಆಯುಕ್ತ ಪಿ.ಸಿ.ಜಯರಾಜ್ ಇತರರು ಮಾತನಾಡಿದರು.1