ಹಳ್ಳಿಕಾರ್ ಸ್ವಾಭಿಮಾನಿ ವೇದಿಕೆ ವತಿಯಿಂದ ದನಗಳ ಜಾತ್ರೆಯಲ್ಲಿ ರಾಸುಗಳಿಗೆ ಕುಡಿಯುವ ನೀರು ಹಾಗೂ ರೈತರಿಗೆ ಊಟದ ವ್ಯವಸ್ಥೆ. ಮಾಗಡಿ: ತಾಲೂಕು ಹಳ್ಳಿಕಾರ್ ಸ್ವಾಭಿಮಾನಿ ವೇದಿಕೆ ವತಿಯಿಂದ ಶ್ರೀರಂಗನಾಥಸ್ವಾಮಿ ದನಗಳ ಜಾತ್ರೆಯಲ್ಲಿ ರಾಸುಗಳಿಗೆ ಕುಡಿಯುವ ನೀರು ಹಾಗೂ ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಿದರು. ತಾಲೂಕು ಹಳ್ಳಿಕಾರ್ ಸ್ವಾಭಿಮಾನಿ ವೇದಿಕೆ ಅಧ್ಯಕ್ಷ ಹಳ್ಳಿಕಾರ್ ಹನುಮಂತರಾಜ್ ಮಾತನಾಡಿ, ತಾಲೂಕು ಹಳ್ಳಿಕಾರ್ ಸ್ವಾಭಿಮಾನಿ ವೇದಿಕೆ ಆರಂಭಿಸುವ ಮೂಲಕ ಕಳೆದ 5 ವರ್ಷದಿಂದ ಹಳ್ಳಿಕಾರ್ ತಳಿಯ ರಾಸುಗಳಿಗೆ ಉತ್ತೇಜನ ನೀಡುವ ಮೂಲಕ ರಾಸುಗಳ ಪೆÇೀಷಣೆ ಹಾಗೂ ಹಳ್ಳಿಕಾರ್ ತಳಿಯ ಉಳಿವಿಗೆ ಶ್ರಮಿಸಲಾಗುತ್ತಿದೆ. ಹಳ್ಳಿಕಾರ್ ತಳಿಯ ರಾಸುಗಳು ಮಾಗಡಿ ತಾಲೂಕಿನಲ್ಲಿ ನೋಡಲು ಸಾಧ್ಯ ಅಂಥಹ ತಳ್ಳಿಗೆ ಹೆಚ್ಚು ಬೇಡಿಕೆ ಇರುವುದರಿಂದ ಬಹುತೇಕ ರೈತರು ಈ ತಳಿಯನ್ನೆ ಪೂರ್ವಿಕರ ಕಾಲದಿಂದ ತಮ್ಮ ಮಕ್ಕಳಂತೆ ಸಾಕಾಣಿಕೆ ಮಾಡಿಕೊಂಡು ಬಂದಿದ್ದಾರೆ ಆದರೆ ಸರಕಾರ ಈ ತಳಿಯ ಅಭಿವೃದ್ದಿಗೆ ಪೆÇ್ರೀತ್ಸಾಹ ನೀಡದೆ ಇರುವುದು ಬೇಸರ ಮೂಢಿಸಿದೆ ಎಂದರು. ಶ್ರೀರಂಗನಾಥ ಸ್ವಾಮಿ ರಾಸುಗಳ ಜಾತ್ರೆಗೆ ಹಳ್ಳಿಕಾರ್ ತಳಿಗಳೆ ಹೆಚ್ಚು ಸೇರುವುದರಿಂದ ಪೆÇ್ರೀತ್ಸಾಹ ನೀಡುವ ನಿಟ್ಟಿನಲ್ಲಿ ರಾಸುಗಳಿಗೆ 4 ಟ್ಯಾಂಕರ್ ಮೂಲಕ ಕುಡಿಯುವ ನೀರು ಹಾಗೂ 10 ಸಾವಿರ ಮಂದಿ ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ರೈತರಿಗೆ ಬೇಕಾದ ಮೂಲಭೂತ ವ್ಯವಸ್ಥೆ ಕಲ್ಪಿಸಲು ವೇದಿಕೆ ಬದ್ದವಾಗಿದೆ. ಪಶು ಆಹಾರಗಳ ಬೇಡಿಕೆಯಿಂದಾಗಿ ಹಳ್ಳಿಗಳಲ್ಲಿ ರೈತರು ರಾಸುಗಳನ್ನು ಸಾಕಾಣಿಕೆ ಮಾಡುವ ಸಂದರ್ಭದಲ್ಲಿ ಅವರಿಗೆ ಸಹಕಾರ, ಪೆÇ್ರೀತ್ಸಾಹ, ನೆರವು ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಹಳ್ಳಿಕಾರು ತಳಿಯ ರಾಸುಗಳನ್ನು ಮುಂದಿನ ತಲೆಮಾರಿಗೆ ಕೋಡೋಯ್ಯವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಬಮೂಲ್ ನಿರ್ದೆಶಕ ಎಚ್.ಎನ್.ಆಶೋಕ್ ಮಾತನಾಡಿ, ಮಾಗಡಿ ಶ್ರೀರಂಗನಾಥ ಸ್ವಾಮಿ ದನಗಳ ಜಾತ್ರೆ ರಾಜ್ಯದ ಯಾವುದೇ ಭಾಗದಲ್ಲೂ ನಡೆಯುವುದಿಲ್ಲ ಅಂಥಹ ವೈಶಿಷ್ಟತೆ ಮಾಗಡಿ ದನಗಳ ಜಾತ್ರೆ ಪಡೆದಿದೆ. ರಾಜ್ಯ ಅಲ್ಲದೆ ತಮಿಳುನಾಡು, ಕೇರಳ, ಪಾಂಡಿಚೇರಿ, ಒರಿಸ್ಸಾ ಅಲ್ಲದೆ ಈ ಭಾರಿ ದೆಹಲಿಯಿಂದ ರಾಸುಗಳನ್ನು ಖರೀದಿಸಲು ಬಂದಿರುವುದು ವಿಶೇಷವಾಗಿದೆ, ಮಾಗಡಿ ಎಂದರೆ ಕೆಂಪೇಗೌಡ ಈ ಕೆಂಪೇಗೌಡರ ನಾಡಿಗೆ ಯಾರೆ ಬಂದರೂ ಅವರು ಹಸಿವಿನಿಂದ ಹೋಗಬಾರದು ಎಂಬುದು ಕೆಂಪೇಗೌಡರ ಕಾಲದಿಂದ ಬಂದಿದೆ ಆ ಪದ್ದತಿಯನ್ನು ವೇದಿಕೆಯೊಂದಿಗೆ ನಾವೆಲ್ಲರೂ ಸೇರಿ ಮುಂದುವರೆಸಿಕೊಂಡು ಬಂದಿದ್ದೇವೆ ಮುಂದಿನ ದಿನಗಳಲ್ಲಿ ಮತಷ್ಟು ಜಾತ್ರೆ ವಿಸ್ತಾರವಾಗಲಿ ಎಂದರು. ತಾಲೂಕು ಆಡಳಿತವತಿಯಿಂದ ವಿದ್ಯುತ್ ದೀಪ, ಪಶು ಆಸ್ಪತ್ರೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಬಂದಿದೆ. ಜಾತ್ರೆ ಮೈದಾನದಲ್ಲಿ ರೈತರಿಗೆ, ಹಸುಗಳಿಗೆ ಸಮಸ್ಯೆ ಉಂಟಾದರೆ ಬಗೆಹರಿಸುವ ಕೆಲಸ ತಾಲೂಕು ಆಡಳಿತ ಮಾಡುತ್ತಿದೆ ಎಂದರು. ಪುರಸಬೆ ಮಾಜಿ ಸದಸ್ಯ ರಾಮು ಮಾತನಾಡಿ, ದನಗಳ ಜಾತ್ರೆಗೆ ಬೇರೆ,ಬೇರೆ ರಾಜ್ಯಗಳಿಂದ ರಾಸುಗಳನ್ನು ಮಾರಾಟಕ್ಕೆ ತರುತ್ತಾರೆ ಉತ್ತಮ 20 ರಾಸುಗಳಿಗೆ ಹಾಗೂ ರೈತರಿಗೆ ಸನ್ಮಾನಿಸುವಂತೆ ಶಾಸಕರ ಗಮನಕ್ಕೆ ತರಲಾಯಿತು ಆ ಕೆಲಸ ಬಾರಿ ನಡೆಯುತ್ತಿದೆ. ತಾಲೂಕು ಹಳ್ಳಿಕಾರ್ ಸ್ವಾಭಿಮಾನಿ ವೇದಿಕೆ ರಾಸುಗಳಿಗೆ ಕುಡಿಯುವ ನೀರು, ರೈತರಿಗೆ ಅನ್ನದಾನ ಏರ್ಪಡಿಸಿರುವುದು ಶ್ಲಾಘನೀಯ ಇಂಥಹ ಸೇವಾ ಕಾರ್ಯ ಮತಷ್ಟು ಮುಂದುವರೆಯಲಿ ಎಂದರು. ಜಾತ್ರೆಯಲ್ಲಿ ದನಗಳನ್ನು ಕಟ್ಟಲು ಜಾಗ ಇಲ್ಲದೆ ಇರುವ ಜಾಗದಲ್ಲೆ ಹಸು ಕಟ್ಟಿ ತೊಂದರೆ ಅನುಭವಿಸುತ್ತಿದ್ದಾರೆ, ರೈತರು ಹಸುಗಳನ್ನು ಕಟ್ಟಲು ಸೂಕ್ತ ಜಾಗದ ವ್ಯವಸ್ಥೆ ತಾಲೂಕು ಆಡಳಿತ ಮಾಡಬೇಕು ಎಂದರು. ರೈತಸಂಘಟನೆಯ ಯುವ ಜಿಲ್ಲಾಧ್ಯಕ್ಷ ರವಿಕುಮಾರು, ಹಳ್ಳಿಕಾರ್ ಸ್ವಾಭಿಮಾನಿ ವೇದಿಕೆ ಉಪಾಧ್ಯಕ್ಷ ರವಿ ಹಳ್ಳಿಕಾರ್, ಪ್ರಧಾನ ಕಾರ್ಯದರ್ಶಿ ನಾಗರಾಜು, ತಟವಾಳು ರಾಜು, ಗುಮ್ಮಸಂದ್ರ ಸುರೇಶ್, ತಟವಾಳ್ ಗಂಗಣ್ಣ, ಪಿಸಿ ಪಾಳ್ಯ ಶ್ರೀನಿವಾಸ್, ಗುಮ್ಮಸಂದ್ರ ಕುಮಾರು, ದೊಡ್ಡಿ ಲೋಕೇಶ್, ಪಿಎಸ್. ನಾಗರಾಜು, ಸುರೇಶ್, ಕೃಷ್ಣಮೂರ್ತಿ, ಸಾಗರ್, ಇತರರು ಇದ್ದರು.
ಹಳ್ಳಿಕಾರ್ ಸ್ವಾಭಿಮಾನಿ ವೇದಿಕೆ ವತಿಯಿಂದ ದನಗಳ ಜಾತ್ರೆಯಲ್ಲಿ ರಾಸುಗಳಿಗೆ ಕುಡಿಯುವ ನೀರು ಹಾಗೂ ರೈತರಿಗೆ ಊಟದ ವ್ಯವಸ್ಥೆ. ಮಾಗಡಿ: ತಾಲೂಕು ಹಳ್ಳಿಕಾರ್ ಸ್ವಾಭಿಮಾನಿ ವೇದಿಕೆ ವತಿಯಿಂದ ಶ್ರೀರಂಗನಾಥಸ್ವಾಮಿ ದನಗಳ ಜಾತ್ರೆಯಲ್ಲಿ ರಾಸುಗಳಿಗೆ ಕುಡಿಯುವ ನೀರು ಹಾಗೂ ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಿದರು. ತಾಲೂಕು ಹಳ್ಳಿಕಾರ್ ಸ್ವಾಭಿಮಾನಿ ವೇದಿಕೆ ಅಧ್ಯಕ್ಷ ಹಳ್ಳಿಕಾರ್ ಹನುಮಂತರಾಜ್ ಮಾತನಾಡಿ, ತಾಲೂಕು ಹಳ್ಳಿಕಾರ್ ಸ್ವಾಭಿಮಾನಿ ವೇದಿಕೆ ಆರಂಭಿಸುವ ಮೂಲಕ ಕಳೆದ 5 ವರ್ಷದಿಂದ ಹಳ್ಳಿಕಾರ್ ತಳಿಯ ರಾಸುಗಳಿಗೆ ಉತ್ತೇಜನ ನೀಡುವ ಮೂಲಕ ರಾಸುಗಳ ಪೆÇೀಷಣೆ ಹಾಗೂ ಹಳ್ಳಿಕಾರ್ ತಳಿಯ ಉಳಿವಿಗೆ ಶ್ರಮಿಸಲಾಗುತ್ತಿದೆ. ಹಳ್ಳಿಕಾರ್ ತಳಿಯ ರಾಸುಗಳು ಮಾಗಡಿ ತಾಲೂಕಿನಲ್ಲಿ ನೋಡಲು ಸಾಧ್ಯ ಅಂಥಹ ತಳ್ಳಿಗೆ ಹೆಚ್ಚು ಬೇಡಿಕೆ ಇರುವುದರಿಂದ ಬಹುತೇಕ ರೈತರು ಈ ತಳಿಯನ್ನೆ ಪೂರ್ವಿಕರ ಕಾಲದಿಂದ ತಮ್ಮ ಮಕ್ಕಳಂತೆ ಸಾಕಾಣಿಕೆ ಮಾಡಿಕೊಂಡು ಬಂದಿದ್ದಾರೆ ಆದರೆ ಸರಕಾರ ಈ ತಳಿಯ ಅಭಿವೃದ್ದಿಗೆ ಪೆÇ್ರೀತ್ಸಾಹ ನೀಡದೆ ಇರುವುದು ಬೇಸರ ಮೂಢಿಸಿದೆ ಎಂದರು. ಶ್ರೀರಂಗನಾಥ ಸ್ವಾಮಿ ರಾಸುಗಳ ಜಾತ್ರೆಗೆ ಹಳ್ಳಿಕಾರ್ ತಳಿಗಳೆ ಹೆಚ್ಚು ಸೇರುವುದರಿಂದ ಪೆÇ್ರೀತ್ಸಾಹ ನೀಡುವ ನಿಟ್ಟಿನಲ್ಲಿ ರಾಸುಗಳಿಗೆ 4 ಟ್ಯಾಂಕರ್ ಮೂಲಕ ಕುಡಿಯುವ ನೀರು ಹಾಗೂ 10 ಸಾವಿರ ಮಂದಿ ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ರೈತರಿಗೆ ಬೇಕಾದ ಮೂಲಭೂತ ವ್ಯವಸ್ಥೆ ಕಲ್ಪಿಸಲು ವೇದಿಕೆ ಬದ್ದವಾಗಿದೆ. ಪಶು ಆಹಾರಗಳ ಬೇಡಿಕೆಯಿಂದಾಗಿ ಹಳ್ಳಿಗಳಲ್ಲಿ ರೈತರು ರಾಸುಗಳನ್ನು ಸಾಕಾಣಿಕೆ ಮಾಡುವ ಸಂದರ್ಭದಲ್ಲಿ ಅವರಿಗೆ ಸಹಕಾರ, ಪೆÇ್ರೀತ್ಸಾಹ, ನೆರವು ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಹಳ್ಳಿಕಾರು ತಳಿಯ ರಾಸುಗಳನ್ನು ಮುಂದಿನ ತಲೆಮಾರಿಗೆ ಕೋಡೋಯ್ಯವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಬಮೂಲ್ ನಿರ್ದೆಶಕ ಎಚ್.ಎನ್.ಆಶೋಕ್ ಮಾತನಾಡಿ, ಮಾಗಡಿ ಶ್ರೀರಂಗನಾಥ ಸ್ವಾಮಿ ದನಗಳ ಜಾತ್ರೆ ರಾಜ್ಯದ ಯಾವುದೇ ಭಾಗದಲ್ಲೂ ನಡೆಯುವುದಿಲ್ಲ ಅಂಥಹ ವೈಶಿಷ್ಟತೆ ಮಾಗಡಿ ದನಗಳ ಜಾತ್ರೆ ಪಡೆದಿದೆ. ರಾಜ್ಯ ಅಲ್ಲದೆ ತಮಿಳುನಾಡು, ಕೇರಳ, ಪಾಂಡಿಚೇರಿ, ಒರಿಸ್ಸಾ ಅಲ್ಲದೆ ಈ ಭಾರಿ ದೆಹಲಿಯಿಂದ ರಾಸುಗಳನ್ನು ಖರೀದಿಸಲು ಬಂದಿರುವುದು ವಿಶೇಷವಾಗಿದೆ, ಮಾಗಡಿ ಎಂದರೆ ಕೆಂಪೇಗೌಡ ಈ ಕೆಂಪೇಗೌಡರ ನಾಡಿಗೆ ಯಾರೆ ಬಂದರೂ ಅವರು ಹಸಿವಿನಿಂದ ಹೋಗಬಾರದು ಎಂಬುದು ಕೆಂಪೇಗೌಡರ ಕಾಲದಿಂದ ಬಂದಿದೆ ಆ ಪದ್ದತಿಯನ್ನು ವೇದಿಕೆಯೊಂದಿಗೆ ನಾವೆಲ್ಲರೂ ಸೇರಿ ಮುಂದುವರೆಸಿಕೊಂಡು ಬಂದಿದ್ದೇವೆ ಮುಂದಿನ ದಿನಗಳಲ್ಲಿ ಮತಷ್ಟು ಜಾತ್ರೆ ವಿಸ್ತಾರವಾಗಲಿ ಎಂದರು. ತಾಲೂಕು ಆಡಳಿತವತಿಯಿಂದ ವಿದ್ಯುತ್ ದೀಪ, ಪಶು ಆಸ್ಪತ್ರೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಬಂದಿದೆ. ಜಾತ್ರೆ ಮೈದಾನದಲ್ಲಿ ರೈತರಿಗೆ, ಹಸುಗಳಿಗೆ ಸಮಸ್ಯೆ ಉಂಟಾದರೆ ಬಗೆಹರಿಸುವ ಕೆಲಸ ತಾಲೂಕು ಆಡಳಿತ ಮಾಡುತ್ತಿದೆ ಎಂದರು. ಪುರಸಬೆ ಮಾಜಿ ಸದಸ್ಯ ರಾಮು ಮಾತನಾಡಿ, ದನಗಳ ಜಾತ್ರೆಗೆ ಬೇರೆ,ಬೇರೆ ರಾಜ್ಯಗಳಿಂದ ರಾಸುಗಳನ್ನು ಮಾರಾಟಕ್ಕೆ ತರುತ್ತಾರೆ ಉತ್ತಮ 20 ರಾಸುಗಳಿಗೆ ಹಾಗೂ ರೈತರಿಗೆ ಸನ್ಮಾನಿಸುವಂತೆ ಶಾಸಕರ ಗಮನಕ್ಕೆ ತರಲಾಯಿತು ಆ ಕೆಲಸ ಬಾರಿ ನಡೆಯುತ್ತಿದೆ. ತಾಲೂಕು ಹಳ್ಳಿಕಾರ್ ಸ್ವಾಭಿಮಾನಿ ವೇದಿಕೆ ರಾಸುಗಳಿಗೆ ಕುಡಿಯುವ ನೀರು, ರೈತರಿಗೆ ಅನ್ನದಾನ ಏರ್ಪಡಿಸಿರುವುದು ಶ್ಲಾಘನೀಯ ಇಂಥಹ ಸೇವಾ ಕಾರ್ಯ ಮತಷ್ಟು ಮುಂದುವರೆಯಲಿ ಎಂದರು. ಜಾತ್ರೆಯಲ್ಲಿ ದನಗಳನ್ನು ಕಟ್ಟಲು ಜಾಗ ಇಲ್ಲದೆ ಇರುವ ಜಾಗದಲ್ಲೆ ಹಸು ಕಟ್ಟಿ ತೊಂದರೆ ಅನುಭವಿಸುತ್ತಿದ್ದಾರೆ, ರೈತರು ಹಸುಗಳನ್ನು ಕಟ್ಟಲು ಸೂಕ್ತ ಜಾಗದ ವ್ಯವಸ್ಥೆ ತಾಲೂಕು ಆಡಳಿತ ಮಾಡಬೇಕು ಎಂದರು. ರೈತಸಂಘಟನೆಯ ಯುವ ಜಿಲ್ಲಾಧ್ಯಕ್ಷ ರವಿಕುಮಾರು, ಹಳ್ಳಿಕಾರ್ ಸ್ವಾಭಿಮಾನಿ ವೇದಿಕೆ ಉಪಾಧ್ಯಕ್ಷ ರವಿ ಹಳ್ಳಿಕಾರ್, ಪ್ರಧಾನ ಕಾರ್ಯದರ್ಶಿ ನಾಗರಾಜು, ತಟವಾಳು ರಾಜು, ಗುಮ್ಮಸಂದ್ರ ಸುರೇಶ್, ತಟವಾಳ್ ಗಂಗಣ್ಣ, ಪಿಸಿ ಪಾಳ್ಯ ಶ್ರೀನಿವಾಸ್, ಗುಮ್ಮಸಂದ್ರ ಕುಮಾರು, ದೊಡ್ಡಿ ಲೋಕೇಶ್, ಪಿಎಸ್. ನಾಗರಾಜು, ಸುರೇಶ್, ಕೃಷ್ಣಮೂರ್ತಿ, ಸಾಗರ್, ಇತರರು ಇದ್ದರು.
- ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸಿದ್ಧ: ಮಾಜಿ ಶಾಸಕರಿಗೆ ಕೆ. ಕೃಷ್ಣಮೂರ್ತಿ ಸವಾಲು ಮಾಗಡಿ: ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಜಿ ಶಾಸಕರು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅಭಿವೃದ್ಧಿ ವಿಚಾರವಾಗಿ ಅವರು ಎಲ್ಲಿಗಾದರೂ ಬರಲಿ, ನಾವು ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಅವರು ಸವಾಲು ಹಾಕಿದ್ದಾರೆ. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆ.ಕೃಷ್ಣಮೂರ್ತಿ ಅವರ ಆರೋಪಗಳಿಗೆ ನಾನು ಉತ್ತರ ನೀಡುವ ಅಗತ್ಯವಿಲ್ಲ ಅವರು ಯಾರು ಗೊತ್ತಿಲ್ಲ ಎಂದಿದ್ದಾರೆ ಅವರನ್ನು ನಾನು ಗೆಲ್ಲಿಸಬೇಕಾದ ವೇಳೆ ನಾನು ಯಾರು ಎಂದು ಗೊತ್ತಿರಲಿಲ್ಲವೇ ಮಜಿ ಶಾಸಕರ ಆರೋಪಗಳಿಗೆ ನಮ್ಮ ಪಕ್ಷದ ಮುಖಂಡರು ಉತ್ತರ ನೀಡಲು ಸಿದ್ದರಿದ್ದೇವೆ, ಮಾಜಿ ಶಾಸಕರು ಕಾಂಗ್ರೆಸ್ ಮುಖಂಡರ ಮೇಲೆ ಅನಗತ್ಯವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ನಾಯಕರಾದ ಬಾಲಣ್ಣನವರ ವ್ಯಕ್ತಿತ್ವದ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ಆರೋಪಗಳಿಗೆ ದಾಖಲೆ ನೀಡಲಿ: ಮಾಜಿ ಶಾಸಕರು ಮಾಡುತ್ತಿರುವ 600 ಕೋಟಿ ಹಗರಣ ಅಥವಾ ಗೌರಮ್ಮನಕೆರೆಯ ಮಣ್ಣು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಮಣ್ಣು ಮಾರಾಟ ಮಾಡಿ ಜೀವನ ನಡೆಸುವ ಅಗತ್ಯ ಶಾಸಕರಿಗಿಲ್ಲ ಇಂಥಹ ಆರೋಪಗಳು ಸತ್ಯಕ್ಕೆ ದೂರವಾಗಿದೆ. ಅವರ ಬಳಿ ದಾಖಲೆಗಳಿದ್ದರೆ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು ಎಂದು ಕಿಡಿಕಾರಿದರು. ಚರ್ಚೆಗೆ ದಿನಾಂಕ ನಿಗದಿಪಡಿಸಿ: "ಅಭಿವೃದ್ಧಿ ಬಗ್ಗೆ ಚರ್ಚಿಸಲು ನಾವಂತೂ ಸಿದ್ಧ. ಮಾಜಿ ಶಾಸಕರೇ ಅಥವಾ ಮಾಧ್ಯಮದವರೇ ಒಂದು ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಲಿ. ನಾವು ನಮ್ಮ ನಾಯಕರೊಂದಿಗೆ ಬಂದು ಪ್ರತಿಯೊಂದಕ್ಕೂ ದಾಖಲೆ ಸಮೇತ ಉತ್ತರ ನೀಡುತ್ತೇವೆ ಎಂದು ಕೆ. ಕೃಷ್ಣಮೂರ್ತಿ ಹೇಳಿದರು. ಜನರೇ ತೀರ್ಪು ನೀಡುತ್ತಾರೆ: ನಾವು ಮಾಡಿದ ಕೆಲಸಗಳನ್ನು ನಾವೇ ಹೇಳಿಕೊಳ್ಳುವ ಅಗತ್ಯವಿಲ್ಲ, ಜನರು ಅದನ್ನು ಗಮನಿಸುತ್ತಿದ್ದಾರೆ. ಮಾಜಿ ಶಾಸಕರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು. ಕಾಂಗ್ರೆಸ್ ಮುಖಂಡರಾದ ಅಗ್ರೋ ಪುರುಷೋತ್ತಮ್, ಶಿವಕುಮಾರು, ಕಲ್ಕೆರೆ ಶಿವಣ್ಣ, ವೆಂಕಟೇಶ್ ಇತರರು ಇದ್ದರು. 1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ಹೈದರಾಬಾದ್ನ ಹೋಟೆಲ್ ಒಂದರಲ್ಲಿ ಆಹಾರಕ್ಕಾಗಿ ಬಂದ ಭಿಕ್ಷುಕನ ಮೇಲೆ ಸಿಬ್ಬಂದಿ ಬಿಸಿನೀರು ಸುರಿದಿರುವ ಆರೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಇಬ್ರಾಹಿಂ ಖಾನ್ ವಿಡಿಯೋ ಮಾಡಿ ಬಹಿರಂಗಪಡಿಸಿದ ಬಳಿಕ ಅದು ವೈರಲ್ ಆಗಿದೆ. ಗ್ರಾಹಕರಿಗೆ ತೊಂದರೆ ಉಂಟುಮಾಡುತ್ತಿದ್ದಾನೆ ಎಂಬ ಕಾರಣ ಹೇಳಿ ಸಿಬ್ಬಂದಿ ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕೃತ್ಯವನ್ನು ಸಾಮಾಜಿಕ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದ್ದು, ಸಂಬಂಧಪಟ್ಟ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಘಟನೆ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.1
- ಸೂರ್ಯನ ಬಿಸಿಲಿನ ತಾಪಕ್ಕೆ ನೀರನ್ನು ಅರಸಿ ಬಂದ ನಾಯಿಗೆ. ನೀರುಣಿಸಿ ಮಾನವೀಯತೆ ಮೆರೆದ ಮಾನವ ನೀರನ್ನು ಅರಸಿ ಬಂದ ನಾಯಿಗೆ ಬಸ್ಸಿನಲ್ಲಿ ವ್ಯಕ್ತಿಯೊಬ್ಬರು ನಾಯಿ ಯ ಬಾಯಿಗೆ ನೀರುಣಿಸಿ ಮಾನವೀಯತೆ ಮೆರೆದಿದ್ದಾರೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ ಸಾರ್ವಜನಿಕರು ತಮ್ಮ ತಮ್ಮ ಮನೆಯ ಮುಂದೆ ಪ್ರಾಣಿ ಪಕ್ಷಿಗಳಿಗೆ ಕುಡಿಯುವುದಕ್ಕೆ ನೀರಿ ನ ವ್ಯವಸ್ಥೆ ಮಾಡಬೇಕಾಗಿರುವುದು ಮಾನವ ಧರ್ಮ ದಯವಿಟ್ಟು ಪ್ರಾಣಿ ಪಕ್ಷಿಗಳಿಗೆ ನಿಮ್ಮ ಮನೆ ಹಾಗೂ ಊರಿನಲ್ಲಿ ಕುಡಿಯುವುದಕ್ಕೆ ವ್ಯವಸ್ಥೆ ಮಾಡಿ .1
- ಮಳವಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮದ ಶ್ರೀ ಸಿದ್ದ ಮಲ್ಲೇಶ್ವರ ಪಟ್ಟದ ಮಠದ ಪ್ರಾರ್ಥನಾ ಮಂದಿರ ದಾಸೋಹ ಭವನ ಲೋಕಾರ್ಪಣೆಗೆ ಕ್ಷಣಗಣನೆ ಮಳವಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಮಲ್ಲೇಶ್ವರ ಪ್ರಾರ್ಥನ ಮಂದಿರ ದಾಸೋಹ ಭವನ ಲೋಕಾರ್ಪಣೆಗೆ ಕ್ಷಣೆ ಗಣನೆ ಆರಂಭವಾಗಿದ್ದು ಸಂಪ್ರದಾಯ ಬದ್ಧ ಪೂಜಾ ಕಾರ್ಯಕ್ರಮಗಳು ಬರದಿಂದ ಸಾಗಿವೆ. ಏಪ್ರಿಲ್ 5 ರಂದು ಭಾನುವಾರ ಬೆಳಿಗ್ಗೆ 10:30 ಗಂಟೆಗೆ ಸುತ್ತೂರು ಸಿದ್ದಗಂಗಾ ಆದಿಚುಂಚನಗಿರಿ ಮಠಾಧೀಶರುಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ರಾಜ್ಯ ಭಾಜಪ ಅಧ್ಯಕ್ಷ ಬಿವೈ ವಿಜಯೇಂದ್ರ ಪ್ರಾರ್ಥನಾ ಮಂದಿರವನ್ನು ದಾಸೋಹ ಭವನವನ್ನು ಲೋಕಾರ್ಪಣೆ ಮಾಡಲಿದ್ದು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ವಿ ಸೋಮಣ್ಣ ಶಾಸಕರಾದ ಸಿಎಂ ನರೇಂದ್ರಸ್ವಾಮಿ ಮಾಜಿ ಸಚಿವರು ಮಾಜಿ ಶಾಸಕರು ಮಾಜಿ ವಿಧಾನ ಪರಿಷತ್ ಸದಸ್ಯರು ಉದ್ಯಮಿಗಳು ರಾಜ್ಯದ ಹಲವು ಮಠಗಳ ಹರಗುರು ಚರ ಮೂರ್ತಿಗಳು ಭಾಗವಹಿಸಲಿದ್ದಾರೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸುವ ಸಕಲ ಭಕ್ತರಿಗೂ ಪ್ರಸಾದ ವ್ಯವಸ್ಥೆಗೆ ಶನಿವಾರ ರಾತ್ರಿಯಿಂದಲೇ ಸಿದ್ಧತೆಗಳು ಜರುಗಿವೆ ಸಾವಿರಾರು ಜನರು ಭಾನುವಾರದ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದ್ದಾರೆ ಬನ್ನಿ ನಾವು ಹೋಗೋಣ ಹೊಸಹಳ್ಳಿ ಶ್ರೀ ಸಿದ್ದ ಮಲ್ಲೇಶ್ವರ ಪಟ್ಟದ ಮಠದ ಧಾರ್ಮಿಕ ಮಹೋತ್ಸವಕ್ಕೆ ಗುರು ಕೃಪೆಗೆ ಪಾತ್ರರಾಗೋಣ ಶರಣು ಬನ್ನಿ1
- ದೊಡ್ಡಬಳ್ಳಾಪುರ ಬಾಡಿಗೆ ಮನೆಯಲ್ಲಿ ವಾಸವಿರುವ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ ಗೀತಂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಘಟನೆ ಒಂದೇ ತಿಂಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಲ್ಯಾಪ್ ಟಾಪ್ ಗಳ ಕಳ್ಳತನ ಲ್ಯಾಪ್ಟಾಪ್ ಕಳ್ಳತನ ಮಾಡಿಕೊಂಡು ಹೊರ ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ ಲ್ಯಾಪ್ ಟಾಪ್ ಕಳೆದಿರುವುದರಿಂದ ವೃತ್ತಿಪರ ಪ್ರಾಜೆಕ್ಟ್ ತಯಾರಿಸಲು ಮುಂದಾಗಿದ್ದ ವಿದ್ಯಾರ್ಥಿಗಳಿಗೆ ಸಂಕಷ್ಟ ಆಂದ್ರಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಸಂಕಷ್ಟ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ2
- Post by Venu Gopal2
- ಮಾಗಡಿ ; ವಿಶ್ವ ವಿಖ್ಯಾತ ಬೆಂಗಳೂರು ನಿರ್ಮಾತೃ ಧರ್ಮಪ್ರಭು ಕೆಂಪೇಗೌಡರಿಗೆ ನಿಲ್ಲಲು ಮಾಗಡಿಯಲ್ಲಿ ನೆಲೆ ಇಲ್ಲದಂತಾಗಿದೆ. ಧರ್ಮದ ಹಾದಿಯಲ್ಲಿ ನಡೆದ ಕೆಂಪೇಗೌಡರಿಗೆ ಮಾಗಡಿಯಲ್ಲಿ ನೆಲೆ ಇಲ್ಲ ಎಂದರೆ ನಾಡಿಗೆ ಅವಮಾನ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ಬೇಸರ ವ್ಯಕ್ತಪಡಿಸಿದರು. ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ಟಿ.ಎನ್.ಶ್ರೀನಿವಾಸ್ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ ಎಚ್.ಎಂ.ಕೃಷ್ಣಮೂರ್ತಿಯೊಂದಿಗೆ ಸುಧೀರ್ಘವಾಗಿ ಚರ್ಚೆ ನಡೆಯಿತು. ಕೆಂಪೇಗೌಡರ ಪ್ರತಿಮೆಯನ್ನು ಗೌರವಯುತವಾಗಿ ಸ್ಥಳಾಂತರಿಸಲು ಕೋರ್ಟ್ ಆದೇಶ ನೀಡಿದ್ದರಿಂದ ನಾವೂ ಕೂಡ ಕೋರ್ಟ್ ಆದೇಶಕ್ಕೆ ತಲೆಭಾಗಿ ಗೌರವ ಕೊಡುತ್ತೇವೆ. ಆದರೆ ಪುರಸಭೆ ಅಧಿಕಾರಿಗಳು ರಾತ್ರೊರಾತ್ರಿ ಪ್ರತಿಮೆಯ ಬಳಿಯ ಮೆಟ್ಟಿಲ್ಲನ್ನು ತೆರವುಗೊಳಿಸುವ ಅನಿವಾರ್ಯತೆ ಏನಿತ್ತು. ಅದರಲ್ಲೂ ಅಮಾವಾಸ್ಯೆ ದಿನವೇ ಮೆಟ್ಟಿಲು ಕಿತ್ತು ಹಾಕಿದ್ದು ಒಂದೆಡೆಯಾದರೆ ಅಂದಿನಿಂದ ಕೆಂಪೇಗೌಡ ಪ್ರತಿಮೆ ಗೌರವಕ್ಕಾದರೂ ಹೂವಿನ ಹಾರ ಹಾಕದೆ ಅವಮಾನಿಸಲಾಗಿದೆ. ಜತೆಗೆ ದಿಕ್ಕುದೆಸೆ ಇಲ್ಲದ ಸ್ಥಳವನ್ನು ಆಯ್ಕೆ ಮಾಡಿಕೊಂಡು ಪ್ರತಿಮೆ ಸ್ಥಳಾಂತರಕ್ಕೆ ಯೋಜನೆ ರೂಪಿಸಿ ಕಾಮಗಾರಿಯೂ ನಡೆದಿದೆ. ಈಗ ಇದೊಂದು ವಿವಾಧಾತ್ಮಕ ಸ್ಥಳಾವಾಗಿದೆ. ಕೆಂಪೇಗೌಡರು ಸತ್ಯದ ಹಾದಿಯಲ್ಲಿ ನಡೆದಿದ್ದರು. ಅವರನ್ನು ಅವಮಾನಿಸುವವರು ಎಂದಿಗೂ ಉದ್ಧಾರವಾಗುವುದಿಲ್ಲ. ಅದರ ಫಲ ಅವರೇ ಉಣ್ಣಬೇಕಿದೆ. ಕಾದು ನೋಡುತ್ತೇನೆ ಎಂದು ಹೆಸರೇಳದೆ ಶಾಸಕರ ವಿರುದ್ಧ ಹರಿಹಾಯ್ದರು. ಈಗಾಗಲೇ ಅಡಿಗೆ 45 ರೂ ನಂತೆ ನಂತೆ 60/70 ವಿಸ್ತೀರ್ಣದ ಸ್ಥಳವನ್ನು ಕಾಂಗ್ರೆಸ್ ಪಕ್ಷದ ಕಚೇರಿಗೆ ಪುರಸಭೆ ನೀಡಿದೆ. ನಮಗೂ ಕೆಂಪೇಗೌಡರ ಹೆಸರಿನಲ್ಲಿ 1 ಎಕರೆ ಜಮೀನು ಸರ್ಕಾರ ಮಂಜೂರು ಮಾಡಿಕೊಡಲಿ ಸರ್ಕಾರಕ್ಕೆ ಕಟ್ಟಬೇಕಾದ ಹಣವನ್ನು ಜಮಾ ಮಾಡುತ್ತೇನೆ. ಇಲ್ಲೊಂದು ಸುಂದರವಾದ ಪಾರ್ಕ್ ನಿರ್ಮಿಸಿ ಜನರ ಆರೋಗ್ಯಕ್ಕೆ ಮುಂದಾಗುವುದಾಗಿ ಮನವಿ ಮಾಡಿದ ಅವರು. ಈಗಿನ ಕೆಂಪೇಗೌಡರ ಪ್ರತಿಮೆಯ ಮೆಟ್ಟಿಲು ತೆರವುಗೊಳಿಸಿರುವುದರಿಂದ ಪ್ರತಿಮೆಗೆ ಹಾರ ಹಾಕಲಾಗದ ಪರಿಸ್ಥಿತಿ ತಂದೊಡ್ಡಿರುವ ಪುರಸಭೆ ಅಧಿಕಾರಿಗಳು ನಾಡಪ್ರಭು ಕೆಂಪೇಗೌಡ ಅವರಿಗೆ ಅಗೌರವ ತೋರಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು ನನ್ನ ಸ್ವಂತ ದುಡಿಮೆಯ ಹಣದಲ್ಲಿ ಸುಂದರವಾದ ಕಂಚಿನ ಕೆಂಪೇಗೌಡರ ಪ್ರತಿಮೆಯನ್ನು ಪುರಸಭಾ ಆವರಣದಲ್ಲಿ ಕಳೆದ 22 ವರ್ಷಗಳ ಹಿಂದೆ ಅನೇಕ ಮಠಮಾನ್ಯಗಳ ಶ್ರೀಗಳರು, ಸಚಿವರು, ಶಾಸಕರು, ಗಣ್ಯರು, ರೈತರು, ಅಭಿಮಾನಿಗಳ ನೇತೃತ್ವದಲ್ಲಿ ಪ್ರತಿಮೆಯನ್ನು ಪ್ರತಿμÁ್ಠಪಿಸಿ, ಆದ್ದೂರಿಯಾಗಿ ಕಾರ್ಯಕ್ರಮ ರೂಪಿಸುವ ಮೂಲಕ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಾಗಿತ್ತು. ಅನ್ನಸಂತರ್ಪಣೆ ಸಹ ಅವಿರತವಾಗಿ ನಡೆದಿತ್ತು. ಈ ಮೂಲಕ ಕೆಂಪೇಗೌಡರ ಇತಿಹಾಸವನ್ನು ಮರುಕಳಿಸುವಂತ ಕೆಲಸವನ್ನು ಮಾಡಿ ತೋರಿಸಿದ್ದೆ. ಹೀಗಾಗಿ ಆವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ. ಆದರೆ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಸರ್ಕಾರ ಇದೆ ಎಂದು ದೆಹಲಿಯಿಂದ ಕಲ್ಕತ್ತಗೆ ಎಂಬಂತೆ ತೊಗಲಕ್ ದರ್ಬಾರ್ ನಡೆಸುತ್ತಿದ್ದಾರೆ. ಅವರ ತಾಳಕ್ಕೆ ಅಧಿಕಾರಿಗಳು ಕುಣಿಯುತ್ತಿದ್ದಾರೆ. ಹಿಂದೆ ಶಾಸಕರ ತಾಳಕ್ಕೆ ಕುಣಿದ ಕೆಲವು ಅಧಿಕಾರಿಗಳು ನೇಣಿನ ಕುಣಿಕೆಗೆ ತಲೆಯೊಡ್ಡಬೇಕಾಯಿತು. ಈಗ ಅವರ ಕುಟುಂಬಗಳು ಶೋಚನೀಯಸ್ಥಿತಿ ತಲುಪಿವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಅವರ ನಡೆ ವಿರುದ್ಧ ಆಕ್ರೋಶ ಹೊರಹಾಕಿದರು. ಭಾರಿ ವಿವಾಧಕ್ಕೆ ಒಳಗಾದ ಧರ್ಮಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಳಾಂತರ ; 2008 ರಲ್ಲಿ ಪುರಸಭೆ ಆಡಳಿತ ಮಂಡಲಿ ರೆಜ್ಯುಲೇಷನ್ ಮಾಡಿ ಪ್ರತಿಮೆ ಸ್ಥಾಪನೆಗೆ 50/50 ಸ್ಥಳ ಮಂಜೂರು ಮಾಡಿತ್ತು. ಈಗ ಕೆಂಪೇಗೌಡರ ಪ್ರತಿಮೆ ಸ್ಥಳವನ್ನು ಸೇರಿಸಿಕೊಂಡಂತೆ ಸುಮಾರು 2 ಎಕರೆ ಪ್ರದೇಶದಲ್ಲಿ100 ಬೆಡ್ಡಿನ ಹೈಟೆಕ್ ಆಸ್ಪತ್ರೆ ನಿರ್ಮಿಸಲು ಶಾಸಕರು ಮುಂದಾಗಿದ್ದಾರೆ. ಕೆಂಪೇಗೌಡರ ಪ್ರತಿಮೆಯನ್ನು ಉಳಿಸಿಕೊಂಡು ಆಸ್ಪತ್ರೆ ನಿರ್ಮಿಸಬಹುದಿತ್ತು. ಕೆಂಪೇಗೌಡರ ಕೋಟೆ ಕಂದಕ ಮುಚ್ಚದಂತೆ ನಾನು ಕೋರ್ಟ್ ಮೊರೆ ಹೋಗಿದ್ದರಿಂದ ನನ್ನ ವಿರುದ್ಧ ದ್ವೇಷದ ರಾಜಕೀಯ ಮಾಡುತ್ತಿರುವ ಶಾಸಕರು ಅಭಿವೃದ್ಧಿ ಹೆಸರಿನಲ್ಲಿ ಕ್ಷೇತ್ರದಲ್ಲಿ ಲೂಟಿಗೆ ಇಳಿದಿದ್ದಾರೆ. ಕೆಂಪೇಗೌಡರ ಪ್ರತಿಮೆ ಸ್ಥಳಾಂತರಕ್ಕೆ ಅಧಿಕಾರಿಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಎಚ್.ಎಂ.ಕೃಷ್ಣಮೂರ್ತಿ ಆರೋಪಿಸಿದರು. ತಾಪಂ ಮಾಜಿ ಸದಸ್ಯ ಸಿ.ಜಯರಾಮ್ ಮಾತನಾಡಿ, ಧರ್ಮಪ್ರಭು ಕೆಂಪೆಗೌಡರು ಸರ್ವಧರ್ಮಪ್ರಿಯರು, ಎಲ್ಲ ವರ್ಗದ ಜನರಿಗೂ ಒಂದೊಂದು ಪೇಟೆಯನ್ನು ಕಟ್ಟಿಕೊಟ್ಟ ಮಹಾನೀಯರ ಪ್ರತಿಮೆಗೆ ದಕ್ಕೆಯಾಗುತ್ತಿದೆ. ಶಾಸಕರ ಸರ್ವಾಧಿಕಾರ ಇಲ್ಲಿ ನಡೆಯುತ್ತಿದೆ. ನಾವೂ ಅವರ ಪ್ರತಿಮೆಗೆ ಅವಮಾನಿಸಿದರೆ ಅವರ ಹೃದಯಕ್ಕೆ ಅವಮಾನಿಸಿದಂತೆ. ಮುಂದಿನ ದಿನಗಳಲ್ಲಿ ಅದರ ಪರಿಣಾಮವನ್ನು ಅವರೇ ಉಣ್ಣಬೇಕಿದೆ ಎಂದು ಕಿಡಿಕಾರಿದರು. ನಿಸರ್ಗ ಪರಚರಣ ಟ್ರಸ್ಟ್ ಅಧ್ಯಕ್ಷ ಎಚ್.ಎನ್,ಶಿವಲಿಂಗಯ್ಯ ಮಾತನಾಡಿ, ಗೌರವಯುತವಾಗಿ ಕೆಂಪೇಗೌಡರ ಪ್ರತಿಮೆಯನ್ನು ಸ್ಥಳಾಂತರಿಸಲು ಕೋರ್ಟ್ ಆದೇಶ ನೀಡಿದೆ. ಇಲ್ಲಿರುವ ಮರಗಿಡಗಳನ್ನು ತೆರವುಗೊಳಿಸಬಾರದು. ತೆರವುಗೊಳಿಸಬೇಕಾದರೆ ಕಾನೂನಾತ್ಮಕವಾಗಿ ತೆರವುಗೊಳಿಸಬೇಕೆಂದು ತಾಕೀತು ಮಾಡಿದೆ. ಆದರೆ ಈಗಾಗಲೆ ಪುರಸಭೆ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳವನ್ನು ಆರೋಗ್ಯ ಇಲಾಖೆಗೆ ವರ್ಗಾಯಿಸಿದೆ. ಆರೋಗ್ಯ ಇಲಾಖೆಗೆ ವರ್ಗಾಯಿಸಿದ ಮೇಲೆ ಪ್ರತಿಮೆಯ ಮೆಟ್ಟಿಲು ಕಿತ್ತು ಹಾಕಲು ಇವರಿಗೇನು ಹಕ್ಕಿದೆ. ಇದೊಂದು ರಾಹಕೀಯ ಶಡ್ಯಂತರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಾಕ್ಸ್ ; ಸರ್ಕಾರದ ಮತ್ತು ಕೋರ್ಟ್ ಆದೇಶವನ್ನು ಪಾಲಿಸುವುದು ನಮ್ಮ ಕೆಲಸ. ನಾವು ಯಾರ ಒತ್ತಡಕ್ಕೂ ಮಣಿದಿಲ್ಲ, ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆಗೆ ಜಮೀನು ವರ್ಗಾಯಿಸಲು ಅದೇಶ ನೀಡಿದ್ದರಿಂದ ವರ್ಗಾಯಿಸಿದ್ದೇವೆ. ಪ್ರತಿಮೆ ತೆರವುಗೊಳಿಸಲು ಕೋರ್ಟ್ ಆದೇಶವಿರುವುದರಿಂದ ಸಂಬಂಧಪಟ್ಟರು ಸ್ಥಳಾಂತರಿಸಲಿದ್ದಾರೆ. ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ನೀವೇನಿದ್ದರೂ ಕೇಳುವುದಿದ್ದರೆ ನ್ಯಾಯಾಲಯದ ಮೊರೆ ಹೋಗಬಹುದು. ನಮ್ಮದೇನು ಅಭ್ಯಂತರವಿಲ್ಲ. ನಾವು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೆವೆ. ಟಿ.ಎನ್.ಶ್ರೀನಿವಾಸ್ ಮುಖ್ಯಾಧಿಕಾರಿ ಪುರಸಭೆ ಮಾಗಡಿ. ಜೆಡಿಎಸ್ ಮುಖಂಡ ತಮ್ಮಣ್ಣಗೌಡ, ಮಾಡಬಾಳ್ ಕೆಂಪೇಗೌಡ, ಸಾಗರ್, ಎನ್ಇಎಸ್ ಆನಂದ್, ದೊಡ್ಡಿ ಗೋಪಿ, ನಾಗರಾಜು, ಶಿವಶಂಕರ್, ಮೂರ್ತಿ, ಮೋಹನ್, ರಾಜೇಶ್, ಶಿವಣ್ಣ, ಕುಮಾರ್, ಆರ್ಐ ರವಿ, ಎಂಜಿನಿಯರ್ ಪ್ರಶಾಂತ್ ಶೆಟ್ಟಿ ಇತರರು ಇದ್ದರು.1