logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಡಿಕ್ಕಿ; 16ಕ್ಕೂ ಹೆಚ್ಚು ಮಂದಿಗೆ ಗಾಯ ಯಲ್ಲಾಪುರ: ತಾಲೂಕಿನ ಶಿಡ್ಲಗುಂಡಿ ಹಾಗೂ ಮುಂಡಗೋಡ ತಾಲೂಕಿನ ಮೈನಳ್ಳಿ ನಡುವಿನ ಸಣ್ಣ ಸೇತುವೆ ಬಳಿ ಬುಧವಾರ ರಾತ್ರಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ 16ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಮುಂಡಗೋಡ ಮಾರ್ಗವಾಗಿ ಯಲ್ಲಾಪುರದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಯಲ್ಲಾಪುರದಿಂದ ಮುಂಡಗೋಡ ಕಡೆಗೆ ತೆರಳುತ್ತಿದ್ದ ಮತ್ತೊಂದು ಸಾರಿಗೆ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದ ವೇಳೆ ಯಲ್ಲಾಪುರದತ್ತ ತೆರಳುತ್ತಿದ್ದ ಬಸ್‌ನ ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದರು. ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಮುಂದಾದರೂ ಚಾಲಕನನ್ನು ಹೊರತೆಗೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜೆಸಿಬಿ ಯಂತ್ರದ ನೆರವಿನಿಂದ ಅವರನ್ನು ಹೊರಕ್ಕೆ ಕರೆತರಲಾಯಿತು ಎನ್ನಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಐದು ಆಂಬ್ಯುಲೆನ್ಸ್‌ಗಳ ಮೂಲಕ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಗಂಭೀರವಾಗಿ ಗಾಯಗೊಂಡ ಆರು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದಿಂದ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಾಹಿತಿ ಪಡೆದ ಯಲ್ಲಾಪುರ ಹಾಗೂ ಮುಂಡಗೋಡ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

3 hrs ago
user_YSRmedia vijayanagaraupsates
YSRmedia vijayanagaraupsates
Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
3 hrs ago
2e004bcd-9fa6-4a3f-8e6c-b4c991b96062

ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಡಿಕ್ಕಿ; 16ಕ್ಕೂ ಹೆಚ್ಚು ಮಂದಿಗೆ ಗಾಯ ಯಲ್ಲಾಪುರ: ತಾಲೂಕಿನ ಶಿಡ್ಲಗುಂಡಿ ಹಾಗೂ ಮುಂಡಗೋಡ ತಾಲೂಕಿನ ಮೈನಳ್ಳಿ ನಡುವಿನ ಸಣ್ಣ ಸೇತುವೆ ಬಳಿ ಬುಧವಾರ ರಾತ್ರಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ 16ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಮುಂಡಗೋಡ ಮಾರ್ಗವಾಗಿ ಯಲ್ಲಾಪುರದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಯಲ್ಲಾಪುರದಿಂದ ಮುಂಡಗೋಡ ಕಡೆಗೆ ತೆರಳುತ್ತಿದ್ದ ಮತ್ತೊಂದು ಸಾರಿಗೆ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದ ವೇಳೆ ಯಲ್ಲಾಪುರದತ್ತ ತೆರಳುತ್ತಿದ್ದ ಬಸ್‌ನ ಚಾಲಕ

aa5bc49e-7139-43d8-bdd1-5c310a935c80

ವಾಹನದೊಳಗೆ ಸಿಲುಕಿಕೊಂಡಿದ್ದರು. ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಮುಂದಾದರೂ ಚಾಲಕನನ್ನು ಹೊರತೆಗೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜೆಸಿಬಿ ಯಂತ್ರದ ನೆರವಿನಿಂದ ಅವರನ್ನು ಹೊರಕ್ಕೆ ಕರೆತರಲಾಯಿತು ಎನ್ನಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಐದು ಆಂಬ್ಯುಲೆನ್ಸ್‌ಗಳ ಮೂಲಕ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಗಂಭೀರವಾಗಿ ಗಾಯಗೊಂಡ ಆರು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದಿಂದ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಾಹಿತಿ ಪಡೆದ ಯಲ್ಲಾಪುರ ಹಾಗೂ ಮುಂಡಗೋಡ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

More news from ಕರ್ನಾಟಕ and nearby areas
  • ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…
    1
    ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    3 hrs ago
  • ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
    1
    ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ
ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    19 hrs ago
  • ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ
    1
    ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ 
ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    19 hrs ago
  • ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ "ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!" ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ. 550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ. 📍ಸ್ಥಳ: ಬಳ್ಳಾರಿ 🎥 ASN News24 Kannada #Hashtags #FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    1
    ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ
"ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!"
ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ.
550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ.
📍ಸ್ಥಳ: ಬಳ್ಳಾರಿ
🎥 ASN News24 Kannada
#Hashtags
#FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    user_Aslam Basha
    Aslam Basha
    Local News Reporter Ballari, Karnataka•
    19 hrs ago
  • ಅದಾನಿ-ಅಂಬಾನಿ ಮದುವೆಗೆ ಸಮಯ ಇದೆ, ರೈತರ ಸಾವಿಗೆ ಸಮಯ ಇಲ್ಲ!ಸರ್ಕಾರದ ವಿರುದ್ಧ ರೈತ ಮುಖಂಡರು ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ‘ರೈತ ಸಂತೆ’ ಕಾರ್ಯಕ್ರಮದಲ್ಲಿ ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆಗಳ ಬಗ್ಗೆ ಚರ್ಚಿಸಲು ಸಮಯವಿಲ್ಲ" ಎಂದು ಆರೋಪಿಸಿದರು. ರೈತರ ಆತ್ಮಹತ್ಯೆಗೆ ಸಾಮಾಜಿಕ ಭದ್ರತೆಯ ಕೊರತೆಯೇ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ಬೆಳೆದ ಬೆಳೆಗೆ ಬೆಲೆ ಇಲ್ಲ, ಕೀಟಬಾಧೆ ಹೆಚ್ಚಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ ಅವರು, ರೈತ ಸಂತೆಯ ಮೂಲಕ ಅನೇಕ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ. 📍ಸ್ಥಳ: ಬಳ್ಳಾರಿ 📺 ASN News24 Kannada #Hashtags #Farmers #Ballari #RaitaSante #KarnatakaFarmers #FarmerSuicide #Adani #Ambani #BreakingNews #ASNNews24Kannada #KarnatakaNews #RaitaSangha #KannadaNews #TrendingNews #ViralNews #Agriculture #FarmersProtest
    1
    ಅದಾನಿ-ಅಂಬಾನಿ ಮದುವೆಗೆ ಸಮಯ ಇದೆ, ರೈತರ ಸಾವಿಗೆ ಸಮಯ ಇಲ್ಲ!ಸರ್ಕಾರದ ವಿರುದ್ಧ ರೈತ ಮುಖಂಡರು
ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ‘ರೈತ ಸಂತೆ’ ಕಾರ್ಯಕ್ರಮದಲ್ಲಿ ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆಗಳ ಬಗ್ಗೆ ಚರ್ಚಿಸಲು ಸಮಯವಿಲ್ಲ" ಎಂದು ಆರೋಪಿಸಿದರು.
ರೈತರ ಆತ್ಮಹತ್ಯೆಗೆ ಸಾಮಾಜಿಕ ಭದ್ರತೆಯ ಕೊರತೆಯೇ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ಬೆಳೆದ ಬೆಳೆಗೆ ಬೆಲೆ ಇಲ್ಲ, ಕೀಟಬಾಧೆ ಹೆಚ್ಚಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ ಅವರು, ರೈತ ಸಂತೆಯ ಮೂಲಕ ಅನೇಕ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ.
📍ಸ್ಥಳ: ಬಳ್ಳಾರಿ
📺 ASN News24 Kannada
#Hashtags
#Farmers #Ballari #RaitaSante #KarnatakaFarmers #FarmerSuicide #Adani #Ambani #BreakingNews #ASNNews24Kannada #KarnatakaNews #RaitaSangha #KannadaNews #TrendingNews #ViralNews #Agriculture #FarmersProtest
    user_AsnNews24Kannada
    AsnNews24Kannada
    Local News Reporter Ballari, Karnataka•
    19 hrs ago
  • ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ
    1
    ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ 
ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    22 hrs ago
  • ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು  ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು. ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು. ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು. ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು
    1
    ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು
ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ  ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ  ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು 
ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ
ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು.
ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು.
ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು.
ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು
ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು
    user_Basavaraj
    Basavaraj
    Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    3 hrs ago
  • ಈ ದೃಶ್ಯಗಳು ನೇಪಾಳದ ರಸುವಾ ಜಿಲ್ಲೆಯವು, ಆದರೆ ಈ ನೋವು ಇಡೀ ನೆರೆಹೊರೆಯವರದ್ದು. ​ಹೆಲಿಕಾಪ್ಟರ್‌ನಿಂದ ತೆಗೆದ ಈ ದೃಶ್ಯವನ್ನು ನೋಡಿ — ಎಲ್ಲಿ ಒಮ್ಮೆ ಮನೆಗಳು, ಹೊಲಗಳು, ರಸ್ತೆಗಳಿದ್ದವೋ, ಅಲ್ಲಿ ಇಂದು ಕೇವಲ ಕೆಸರು ಮತ್ತು ಸಾವು-ನೋವಿನ ಮೌನ ಮಾತ್ರವಿದೆ. ಭೋಟೇಕೋಶಿ ನದಿ ಕ್ಷಣಾರ್ಧದಲ್ಲಿ ಎಲ್ಲವನ್ನೂ ನುಂಗಿಹಾಕಿದೆ. ​ಈ ಅವಶೇಷಗಳ ನಡುವೆ ಒಂದು ಚಿತ್ರ ಹೃದಯವನ್ನು ತಟ್ಟುತ್ತ್ತದೆ — ಒಬ್ಬ ಅಜ್ಜಿ ಹೆಲಿಕಾಪ್ಟರ್‌ನಲ್ಲಿ ಕುಳಿತು, ಕೈ ಮುಗಿಯುತ್ತಿರುವ ದೃಶ್ಯ. ಆ ಕೈಗಳು ಕೇವಲ ಧನ್ಯವಾದಕ್ಕೆ ಮಾತ್ರವಲ್ಲ, ಅದು ಇಂದು ತಮ್ಮವರನ್ನು ಕಳೆದುಕೊಂಡ ಪ್ರತಿಯೊಬ್ಬ ತಾಯಿಯ ಪ್ರಾರ್ಥನೆಯಾಗಿದೆ. ​ ನಾವು ಈ ಆಪತ್ತಿನಲ್ಲಿರುವ ತಮ್ಮವರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಸಂತಾಪ ಸೂಚಿಸುವ ಅಗತ್ಯವಿದೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲಿ. ​ ಗಾಯಗೊಂಡಿರುವ, ಮನೆ ಕಳೆದುಕೊಂಡಿರುವ ಮತ್ತು ನಾಪತ್ತೆ ಆಗಿರುವವರಿಗಾಗಿ ನಾವು ದೇವರಲ್ಲಿ ಧೈರ್ಯ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇವೆ. ​ಒಬ್ಬ ನಿಜವಾದ ಸ್ನೇಹಿತನ ಕರ್ತವ್ಯದಂತೆ — ಈ ಕಷ್ಟದ ಸಮಯದಲ್ಲಿ ಭಾರತವು ನೇಪಾಳದ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ. ಗಡಿಯಲ್ಲಿ ನಮ್ಮ NDRF ತಂಡಗಳು ಸಂಪೂರ್ಣ ಸಜ್ಜಾಗಿವೆ, ಇದರಿಂದ ನಮ್ಮ ನೆರೆಯವರಿಗೆ ಯಾವುದೇ ತೊಂದರೆ ಆಗದಿರಲಿ. ​ಏಕೆಂದರೆ ನೆರೆಹೊರೆಯವರು ಕೇವಲ ನಕ್ಷೆಯಲ್ಲಿ ಮಾತ್ರವಲ್ಲ, ಹೃದಯದಲ್ಲೂ ಇರುತ್ತಾರೆ.
    1
    ಈ ದೃಶ್ಯಗಳು ನೇಪಾಳದ ರಸುವಾ ಜಿಲ್ಲೆಯವು, ಆದರೆ ಈ ನೋವು ಇಡೀ ನೆರೆಹೊರೆಯವರದ್ದು.
​ಹೆಲಿಕಾಪ್ಟರ್‌ನಿಂದ ತೆಗೆದ ಈ ದೃಶ್ಯವನ್ನು ನೋಡಿ — ಎಲ್ಲಿ ಒಮ್ಮೆ ಮನೆಗಳು, ಹೊಲಗಳು, ರಸ್ತೆಗಳಿದ್ದವೋ, ಅಲ್ಲಿ ಇಂದು ಕೇವಲ ಕೆಸರು ಮತ್ತು ಸಾವು-ನೋವಿನ ಮೌನ ಮಾತ್ರವಿದೆ. ಭೋಟೇಕೋಶಿ ನದಿ ಕ್ಷಣಾರ್ಧದಲ್ಲಿ ಎಲ್ಲವನ್ನೂ ನುಂಗಿಹಾಕಿದೆ.
​ಈ ಅವಶೇಷಗಳ ನಡುವೆ ಒಂದು ಚಿತ್ರ ಹೃದಯವನ್ನು ತಟ್ಟುತ್ತ್ತದೆ — ಒಬ್ಬ ಅಜ್ಜಿ ಹೆಲಿಕಾಪ್ಟರ್‌ನಲ್ಲಿ ಕುಳಿತು, ಕೈ ಮುಗಿಯುತ್ತಿರುವ ದೃಶ್ಯ. ಆ ಕೈಗಳು ಕೇವಲ ಧನ್ಯವಾದಕ್ಕೆ ಮಾತ್ರವಲ್ಲ, ಅದು ಇಂದು ತಮ್ಮವರನ್ನು ಕಳೆದುಕೊಂಡ ಪ್ರತಿಯೊಬ್ಬ ತಾಯಿಯ ಪ್ರಾರ್ಥನೆಯಾಗಿದೆ.

​ ನಾವು ಈ ಆಪತ್ತಿನಲ್ಲಿರುವ ತಮ್ಮವರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಸಂತಾಪ ಸೂಚಿಸುವ ಅಗತ್ಯವಿದೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲಿ.

​ ಗಾಯಗೊಂಡಿರುವ, ಮನೆ ಕಳೆದುಕೊಂಡಿರುವ ಮತ್ತು  ನಾಪತ್ತೆ ಆಗಿರುವವರಿಗಾಗಿ ನಾವು ದೇವರಲ್ಲಿ ಧೈರ್ಯ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇವೆ.

​ಒಬ್ಬ ನಿಜವಾದ ಸ್ನೇಹಿತನ ಕರ್ತವ್ಯದಂತೆ — ಈ ಕಷ್ಟದ ಸಮಯದಲ್ಲಿ ಭಾರತವು ನೇಪಾಳದ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ. ಗಡಿಯಲ್ಲಿ ನಮ್ಮ NDRF ತಂಡಗಳು ಸಂಪೂರ್ಣ ಸಜ್ಜಾಗಿವೆ, ಇದರಿಂದ ನಮ್ಮ ನೆರೆಯವರಿಗೆ ಯಾವುದೇ ತೊಂದರೆ ಆಗದಿರಲಿ.
​ಏಕೆಂದರೆ ನೆರೆಹೊರೆಯವರು ಕೇವಲ ನಕ್ಷೆಯಲ್ಲಿ ಮಾತ್ರವಲ್ಲ, ಹೃದಯದಲ್ಲೂ ಇರುತ್ತಾರೆ.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.