Shuru
Apke Nagar Ki App…
ಬೊಗಳೇರಹಟ್ಟಿ ಬಳಿ ಕಾರು ಲಾರಿ ಭೀಕರ ಅಪಘಾತ ನಡೆದು ಕಾರು ಚಾಲಕ ಸಾವು ಬೊಗಳೇರಹಟ್ಟಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದು ಓರ್ವ ಮೃತಪಟ್ಟ ಘಟನೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ಬೊಗಳೇರಹಟ್ಟಿ ಬಳಿ ಘಟನೆ ನಡೆದಿದ್ದು ಕಾರಿನ ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಇನ್ನೂ ಹೊಸಪೇಟೆ ಕಡೆಯಿಂದ ಚಿತ್ರದುರ್ಗದ ಕಡೆ ಬರುತ್ತಿದ್ದು ನಿಲ್ಲಿಸಿದ್ದ ಎಥೆನಾಲ್ ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕಾರು ಸಂಪೂರ್ಣ ಜಖಂ ಗೊಂಡಿದ್ದು ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಇನ್ನೂ ಇಳಕಲ್ ನಿಂದ ಚಿತ್ರದುರ್ಗಕ್ಕೆ ಕಾರು ಬರುತ್ತಿದ್ದು ಈ ವೇಳೆ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಎಥೆನಾಲ್ ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಘಟನೆ ನಡೆದಿದೆ.
Vinay P palekar
ಬೊಗಳೇರಹಟ್ಟಿ ಬಳಿ ಕಾರು ಲಾರಿ ಭೀಕರ ಅಪಘಾತ ನಡೆದು ಕಾರು ಚಾಲಕ ಸಾವು ಬೊಗಳೇರಹಟ್ಟಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದು ಓರ್ವ ಮೃತಪಟ್ಟ ಘಟನೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ಬೊಗಳೇರಹಟ್ಟಿ ಬಳಿ ಘಟನೆ ನಡೆದಿದ್ದು ಕಾರಿನ ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಇನ್ನೂ ಹೊಸಪೇಟೆ ಕಡೆಯಿಂದ ಚಿತ್ರದುರ್ಗದ ಕಡೆ ಬರುತ್ತಿದ್ದು ನಿಲ್ಲಿಸಿದ್ದ ಎಥೆನಾಲ್ ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕಾರು ಸಂಪೂರ್ಣ ಜಖಂ ಗೊಂಡಿದ್ದು ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಇನ್ನೂ ಇಳಕಲ್ ನಿಂದ ಚಿತ್ರದುರ್ಗಕ್ಕೆ ಕಾರು ಬರುತ್ತಿದ್ದು ಈ ವೇಳೆ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಎಥೆನಾಲ್ ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಘಟನೆ ನಡೆದಿದೆ.
More news from ಕರ್ನಾಟಕ and nearby areas
- Post by Karibasava Balal1
- ವಿಧ್ಯಾರ್ಥಿಗಳ ಸನಸ್ಯೆ ಗಳನ್ನು ಬಗೆಹರಿಸುವಂತೆ ವಿಶ್ವವಿದ್ಯಾಲಯದ ಗಮನಕ್ಕೆ ಸಕಾಷ್ಟುಬಾರಿ ತಂದರು ಸ್ಪಂದಿಸದೇ ವಿದ್ಯಾರ್ಥಿ ವಿರೋದಿ ನೀತಿ ತೋರುತ್ತಿರುವ ಕುಲಪತಿಗಳ ವಿರುದ್ದ ಹೋರಾಟ ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಿರಂತರವಾಗಿ ವಿದ್ಯಾರ್ಥಿ ವಿರೋಧಿ ನಡೆ ಅನುಸರಿಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ವಿಶ್ವವಿದ್ಯಾಲಯದ ನಡೆಯನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಖಂಡಿಸಿ ತೀವ್ರ ಪ್ರತಿಭಟನೆ ನಡೆಸಿತು.2
- ಶಿವಮೊಗ್ಗ: ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳ ವಿರುದ್ದ ಎನ್ಎಸ್ಯುಐ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದು ಕೊಂಡಿತು. ಕುಲಪತಿಗಳ ಕಚೇರಿ ಆವರಣದಲ್ಲಿದ್ದ ಕುರ್ಚಿ, ಪ್ಲಾಟ್,ನಾಮಫಲಕ ಎಲ್ಲವನ್ನು ಪ್ರತಿಭಟನಾ ನಿರತ ವಿದ್ಯಾರ್ಥಿ ಗಳು ಪುಡಿ ಪುಡಿ ಮಾಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ನಿರಂತರವಾಗಿ ನಡೆಯುತ್ತಿರುವ ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ಆಡಳಿತಾತ್ಮಕ ವೈಫಲ್ಯ ಗಳನ್ನು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಖಂಡಿಸಿದರು. ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸದ ವಿಸಿಗೆ ಧಿಕ್ಕಾರ ಕೂಗಿ, ಕಚೇರಿಯ ಬೋರ್ಡ್ಗೆ ಕಪ್ಪು ಮಸಿ ಬಳಿದರು.ಅಷ್ಟಕ್ಕೆ ಸುಮ್ಮನಾಗದ ವಿದ್ಯಾರ್ಥಿಗಳು ಕುಲಪತಿಗಳ ಕಚೇರಿಯನ್ನು ವಿದ್ಯಾರ್ಥಿಗಳು ಅಕ್ಷರಶಃ ಧ್ವಂಸಗೊಳಿಸಿದರು.ವಿಶ್ವವಿದ್ಯಾಲಯದ ಆಂತರಿಕ ಕಲಹದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಕಳೆದ ಐದು ತಿಂಗಳ ಹಿಂದೆ ನಡೆದ 1-3 ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿಲ್ಲ ಮತ್ತು ಕಳೆದ ಮೂರು ವರ್ಷಗಳಿಂದ ಪದವಿ ಅಂಕಪಟ್ಟಿ ಗಳನ್ನು ವಿತರಿಸದಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. ಅಂಕಪಟ್ಟಿ ಇಲ್ಲದೆ ಪದವೀಧರರು ಉನ್ನತ ವ್ಯಾಸಂಗಕ್ಕೆ ಹಾಗೂ ಉದ್ಯೋಗಕ್ಕೆ ಸೇರಲು ಪರದಾಡುವಂತಾ ಗಿದೆ. ಈ ಬಗ್ಗೆ ಹಲವು ಬಾರಿ ಕುಲಪತಿಗಳಿಗೆ ಮನವಿ ಮಾಡಿದರೂ ಸ್ಪಂದಿಸದೆ, ಕೇವಲ ಅಧಿಕಾರಿಗಳ ಆಂತರಿಕ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿಗಳಷ್ಟು ಹೆಚ್ಚಿಸಿರು ವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣ ಶಾಸನ ವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪ ಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು, ಪಾಸ್ ಆದವರು ಫೇಲ್ ಎಂದು ತೋರಿಸುತ್ತಿರುವುದು ವಿದ್ಯಾರ್ಥಿಗಳ ನಿದ್ದೆಗೆಡಿಸಿದೆ. ಈ ಅವ್ಯವಸ್ಥೆ ಸರಿಪಡಿಸಲು ವಿಫಲರಾಗಿರುವ ಕುಲಪತಿಗಳನ್ನು ಕೂಡಲೇ ವಜಾಗೊಳಿಸ ಬೇಕೆಂದು ಆಗ್ರಹಿಸಿದರು. ಕುಲಪತಿ ಹಾಗೂ ರಿಜಿಸ್ಟ್ರಾರ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಸಮಸ್ಯೆ ಬಗೆಹರಿಸದೇ ಇದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಎನ್ಎಸ್ಯುಐ ನ ಜಿಲ್ಲಾಧ್ಯಕ್ಷ ವಿಜಯ್ ಕಾರ್ಯಾಧ್ಯಕ್ಷ ರವಿ ಕಟಿಕೆರೆ ನಗರಾಧ್ಯಕ್ಷ ರವಿ, ನಗರ ಉಪಾಧ್ಯಕ್ಷ ಆದಿತ್ಯ, ಸುಭಾನ್, ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್, ವರುಣ್ ವಿ ಪಂಡಿತ್ ಮೊದಲಾದವರಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಸಿಇಓ-ಎಎಸ್ಪಿ: ಕುವೆಂಪು ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಕುವೆಂಪು ವಿವಿಯ ಕುಲಸಚಿವರು ಆಗಿರುವ ಶಿವಮೊಗ್ಗ ಜಿ.ಪಂ ಸಿಇಓ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಎನ್.ಹೇಮಂತ್ ಹಾಗೂ ಹೆಚ್ಚುವರಿಗೆ ಜಿಲ್ಲಾ ರಕ್ಷಣಾಧಿಕಾರಿ ಕಾರ್ಯಪ್ಪನವರು ಭೇಟಿ ನೀಡಿದರು. ಪೀಠೋಪಕರಣ ಧ್ವಂಸಗೊಂಡಿದ್ದನ್ನು ವೀಕ್ಷಿಸಿದ ಎನ್.ಹೇಮಂತ್ ಅವರು, ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ಚರ್ಚೆ ನಡೆಸಿದರು.ಘಟನೆ ಸಂಬಂಧ ಕುಲಪತಿ, ರಿಜಿಸ್ಟ್ರಾರ್ ಅವರಿಂದ ಮಾಹಿತಿ ಪಡೆದುಕೊಂಡರು. ಘಟನಾ ಸ್ಥಳಕ್ಕೆ ಶಿವಮೊಗ್ಗ ಎಎಸ್ಪಿ ಕಾರ್ಯಪ್ಪ ಭೇಟಿ ನೀಡಿ ಘಟನೆ ಸಂಬಂಧ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಪ್ರತಿಭಟನಾಕಾರರ ಜೊತೆ ಮಾತನಾಡಿದ ಭದ್ರಾವತಿ ಡಿವೈಎಸ್ಪಿ ಪ್ರಕಾಶ್ ರಾಥೋಡ್, ಪ್ರತಿಭಟನಾನಿರತ ವಿದ್ಯಾರ್ಥಿ ಗಳ ಮನವೊಲಿಸುವಲ್ಲಿ ಯಶಸ್ವಿಯಾದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ವಿದ್ಯಾರ್ಥಿಗಳ ಬೇಡಿಕೆಗಳೇನು: 1.ಕಳೆದ 5 ತಿಂಗಳ ಹಿಂದೆ ನಡೆದಿದ್ದ 1-3 ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕು. ಪದವಿ ಪ್ರಮಾಣ ಪತ್ರ, ಅಂಕಪಟ್ಟಿ, ಜೆನ್ಯೂಯೆನ್ ಸರ್ಟಿಫಿಕೇಟ್ ವಿತರಣೆ ಮಾಡಬೇಕು. 2.ಏಕಾ ಏಕಿ ಏರಿಸಿರುವ ಸಾವಿರಾರು ರುಪಾಯಿ ಪರೀಕ್ಷಾ ಶುಲ್ಕ ಹಾಗು ಪ್ರವೇಶ ಶುಲ್ಕವನ್ನು ಇಳಿಸಬೇಕು. 3.ಡಿಜಿಟೆಲ್ ಮೌಲ್ಯಮಾಪನದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು ಕೂಡಲೇ ಡಿಜಿಟೆಲ್ ಮೌಲ್ಯಮಾಪನವನ್ನು ಕೈಬಿಡಬೇಕು. 4. ಭ್ರಷ್ಟಾಚಾರದ ಆರೋಪ ಹಾಗು ವಿಶ್ವ ವಿದ್ಯಾಲಯದಲ್ಲಿ ಕಳಂಕ ಹೊತ್ತಿರುವ ಎಲ್ಲಾ ಅಧಿಕಾರಿಗಳನ್ನೂ ತಕ್ಷಣ ವಜಾ ಮಾಡಬೇಕು 5. ಯು.ಯು.ಸಿ.ಎಮ್.ಎಸ್ ನಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. 6. ವಿವಿ ಯಲ್ಲಿನ ತಾಂತ್ರಿಕ ತೊಂದರೆಗಳಿಗೆ ಸರ್ಕಾರವನ್ನು ದೂರದೆ ಸರಿಪಡಿಸುವ ವ್ಯವಸ್ಥೆ ಮಾಡಬೇಕು. 7.2021-22 ರ ದೂರಶಿಕ್ಷಣ ವಿದ್ಯಾರ್ಥಿಗಳ ಪರೀಕ್ಷೆ ಮತ್ತು ಅಂಕಪಟ್ಟಿ ಹಾಗು ಪಲಿತಾಂಶದ ಬಗ್ಗೆ ಕೂಡಲೆ ಗಮನಹರಿಸಬೇಕು. 8.ವಿವಿ ವ್ಯಾಪ್ತಿಗೊಳಪಡುವ ಎಲ್ಲಾ ಕಾಲೇಜುಗಳಲ್ಲಿ ಹಾಗು ಹಾಸ್ಟೆಲ್ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಸರಿಪಡಿಸಬೇಕು. 9. ವಿವಿಯ ಎಲ್ಲಾ ಕಾಲೇಜುಗಳಿಗೆ ಕಂಪ್ಯೂಟರ್ ಹಾಗೂ ಲ್ಯಾಬ್ ವ್ಯವಸ್ಥೆ ಮಾಡಬೇಕು. 10. ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ ವ್ಯವಸ್ಥೆ ಮಾಡಬೇಕು ಎಂದು ಎಚ್ಚರಿಸಿದರು.1
- ಬಳ್ಳಾರಿ, ಏ.30: ನಗರದ ಶ್ರೇಷ್ಠ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಮೇ 9ರಂದು “ಆರೋಗ್ಯಕ್ಕಾಗಿ ಸಿಹಿ” ಎಂಬ ವಿಶೇಷ ಮಧುಮೇಹ ಜಾಗೃತಿ ಕಾರ್ಯಕ್ರಮ ಹಾಗೂ ಸಿರಿಧಾನ್ಯಗಳ ಅಡುಗೆ ಸ್ಪರ್ಧೆ ಆಯೋಜಿಸಲಾಗಿದೆ. ನಗರದ ಸಂಗನಕಲ್ಲು ರಸ್ತೆಯಲ್ಲಿರುವ ಶಂಕರ್ ಮಠದ ಭಾರತಿ ತೀರ್ಥ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಶಾಲೆಯ ಸಂಸ್ಥಾಪಕ ಬ್ರಹ್ಮಯ್ಯ ನಾಯ್ಡು ಈ ಕುರಿತು ಮಾಹಿತಿ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಖ್ಯಾತ ಆರೋಗ್ಯ ತಜ್ಞರಾದ ಡಾ. ಪರಿಮಳಾ ಜಗೇಶ್, ಸಾಧನಾ ಯೋಗ ಕೇಂದ್ರದ ಸಂಸ್ಥಾಪಕಿ ಶ್ರೀಮತಿ ರೂಪಾ ಹಾಗೂ ಡಾ. ಪ್ರವೀಣ್ ಕುಮಾರ್ ಭಾಗವಹಿಸಿ ಮಧುಮೇಹ ನಿಯಂತ್ರಣ, ಆಹಾರ ಪದ್ಧತಿ ಹಾಗೂ ಆರೋಗ್ಯಕರ ಜೀವನಶೈಲಿಯ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಮಹಿಳೆಯರಿಗಾಗಿ ಸಿರಿಧಾನ್ಯಗಳ ಅಡುಗೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸಿಹಿ ಮತ್ತು ಖಾರ ಎಂಬ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಕೃತಕ ಬಣ್ಣಗಳು ಮತ್ತು ಮೈದಾ ಬಳಕೆ ನಿಷೇಧಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. ವಿಜೇತರಿಗೆ ಒಟ್ಟು 8,500 ರೂ. ನಗದು ಬಹುಮಾನ ನೀಡಲಾಗುತ್ತದೆ. ಪ್ರಥಮ ಬಹುಮಾನವಾಗಿ 5,000 ರೂ., ದ್ವಿತೀಯ ಬಹುಮಾನವಾಗಿ 2,500 ರೂ. ಮತ್ತು ತೃತೀಯ ಬಹುಮಾನವಾಗಿ 1,000 ರೂ. ನಿಗದಿಪಡಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಹಿಳೆಯರು 9686 9686 99 ಸಂಖ್ಯೆಗೆ ಕರೆ ಮಾಡುವ ಮೂಲಕ ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ www.sisballari.com� ವೆಬ್ಸೈಟ್ಗೆ ಭೇಟಿ ನೀಡುವಂತೆ ಸಂಘಟಕರು ಮನವಿ ಮಾಡಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿ ಇರುವವರು ಹಾಗೂ ಅಡುಗೆಯಲ್ಲಿ ಆಸಕ್ತಿ ಹೊಂದಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಸ್ಥೆ ಕೋರಿದೆ.2
- “‘Shikhandi - The Warrior’ ಸಿನಿಮಾ ಬಿಡುಗಡೆಯ ಸನ್ನಿಹಿತದಲ್ಲಿ ಸಿನಿರಸಿಕರಲ್ಲಿ ಭಾರಿ ಕುತೂಹಲ ಮೂಡಿಸಿದೆ! 🎬🔥 🎥 Pola Movies ಬ್ಯಾನರ್ ಅಡಿಯಲ್ಲಿ ನಿರ್ಮಾಣ 🎬 ನಿರ್ದೇಶನ: ಗುರುಮೂರ್ತಿ 🎞️ ಸಹ ನಿರ್ದೇಶನ: ದಯಾಶಂಕರ್ 📷 DOP: ಸ್ವಾಮಿ 🎵 ಸಂಗೀತ: ಕಿನ್ನಲ್ ರಾಜ್ 🌍 5 ಭಾಷೆಗಳಲ್ಲಿ ರಿಲೀಸ್: ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ 🧠 ಮಂಗಳಮುಖಿಯರ ಜೀವನ ಮತ್ತು ಹೋರಾಟದ ಮೇಲೆ ಆಧಾರಿತ ಕಥೆ 💬 ಸಮಾಜಕ್ಕೆ ಬಲವಾದ ಸಂದೇಶ ನೀಡುವ ಪ್ರಯತ್ನ 👥 ತಾರಾಗಣ: Yuvaraj Gowda (ನಾಯಕ) Khyathi (ನಾಯಕಿ) Chandini (ಪ್ರಮುಖ ಪಾತ್ರ) 📅 ಬಿಡುಗಡೆ: ಮೇ 15, 2026 🎞️ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಪ್ರದರ್ಶನ 👉 ವಿಭಿನ್ನ ಕಥಾಹಂದರದೊಂದಿಗೆ ಬರುತ್ತಿರುವ ಈ ಸಿನಿಮಾ ತಪ್ಪದೇ ನೋಡಿರಿ!”1
- ಕಡೂರು (ಬೀರೂರು): ಬೇಸಿಗೆ ರಜೆ ಹಿನ್ನೆಲೆಯಲ್ಲಿ ಊರಿಗೆ ಕಳಿಸಲಿಲ್ಲ ಎಂಬ ಸಣ್ಣದೊಂದು ಗಲಾಟೆಯ ನಡುವೆ ಪೊಲೀಸ್ ಅಧಿಕಾರಿಯ ಪತ್ನಿ ಮನನೊಂದು ನೇಣಿಗೆ ಶರಣಾದ ಘಟನೆ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಬೀರೂರು ಪಟ್ಟಣದ ಪೊಲೀಸ್ ಠಾಣೆಯ ಪಿಎಸೈ ಡಿ.ವಿ. ತಿಪ್ಪೇಶ್ ಅವರ ಪತ್ನಿ ಪದ್ಮ(35) ಮೃತ ದುರ್ದೈವಿಯಾಗಿದ್ದು. ಬೀರೂರು ಪಟ್ಟಣದ ರಾಜಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೂಲತಃ ತುಮಕೂರು ಜಿಲ್ಲೆಯವರಾದ ಪದ್ಮ ಮತ್ತು ದಾವಣಗೆರೆ ಮೂಲದ ತಿಪ್ಪೇಶ್ 12 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು, ಇಬ್ಬರು ಮಕ್ಕಳಿದ್ದಾರೆ. ಮಕ್ಕಳಿಗೆ ಶಾಲೆ ರಜೆಯಿದ್ದು ಊರಿಗೆ ಕಳಿಸುವಂತೆ ಪತಿ ಪಿಎಸ್ಐ ತಿಪ್ಪೇಶ್ ಗೆ ಹೇಳಿದ್ದರು. ಮಕ್ಕಳಿಗೆ ಬೇಸಿಗೆ ರಜೆ ಇರೋದ್ರಿಂದ ಊರಿಗೆ ಹೋಗ್ತೀನಿ ಎಂದಿದ್ದರು. ಆದರೆ, ಪತಿ ತಿಪ್ಪೇಶ್ ನೈಟ್ ಡ್ಯೂಟಿ ಇದೆ. ನಾಳೆ ಹೋಗುವಂತೆ ಎಂದು ತಿಳಿ ಹೇಳಿದ್ದರು. ಅಷ್ಟಕ್ಕೆ ಮಾತಿಗೆ ಮಾತು ಬೆಳೆದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇದೇ ವಿಚಾರ ದಂಪತಿಗಳ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪತಿ ಮಕ್ಕಳನ್ನ ಊರಿಗೆ ಕಳಿಸಲಿಲ್ಲವೆಂದು ಆಕ್ರೋಶಗೊಂಡ ಪದ್ಮ ಕಳೆದ ರಾತ್ರಿ 12 ಗಂಟೆಗೆ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮನೆಯ ರೋಮಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಕೌಟುಂಬಿಕವಾಗಿ ಸಣ್ಣದೊಂದು ವಿಚಾರದ ಮಾತಿನ ಚಕಮಕಿಯಿಂದಾಗಿ ತನ್ನ ಜೀವವನ್ನೇ ಬಲಿಕೊಟ್ಟಿರುವ ಪದ್ಮಾ ಅವರ ಆತ್ಮಹತ್ಯೆಯ ನಿರ್ಧಾರದ ಧಾರುಣ ಘಟನೆಯ ಬಗ್ಗೆ ಪೊಲೀಸ್ ಸಿಬ್ಬಂದಿಗಳು ಮತ್ತು ನಾಗರೀಕರು ಮಮ್ಮುಲ ಮರುಗಿದರು. ಈ ಕುರಿತು ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.2
- Post by Karibasava Balal1
- ಬಳ್ಳಾರಿಯ ಪ್ರತಿಭಾವಂತ ಮಂಗಳಮುಖಿ ಕಲಾವಿದೆ ಚಾಂದಿನಿ ಅವರು ‘Shikhandi’ ಸಿನಿಮಾದಲ್ಲಿ ಮಹತ್ವದ ಪಾತ್ರಗಳಲ್ಲಿ ನಟಿಸಿದ್ದಾರೆ. 🎬🔥 ಈ ಚಿತ್ರವು ಮಹಾಭಾರತದ ಶಿಖಂಡಿ ಪಾತ್ರದಿಂದ ಪ್ರೇರಿತವಾಗಿದ್ದು, ಆಧುನಿಕ ಕಥಾಹಂದರದೊಂದಿಗೆ ಸಸ್ಪೆನ್ಸ್, ಥ್ರಿಲ್ಲರ್, ಹಾರರ್ ಮತ್ತು ಕಾಮಿಡಿ ಮಿಶ್ರಣವಾಗಿದೆ. 🎭 ಚಾಂದಿನಿ ಅವರು ‘ಎಲ್ಲಮ್ಮ’ ಮತ್ತು ‘ಜೋಗ್ತಿ’ ಪಾತ್ರಗಳಲ್ಲಿ 🧠 ಸಮಾಜದಲ್ಲಿ ಮಂಗಳಮುಖಿಯರ ಜೀವನ ಹೋರಾಟದ ಮೇಲೆ ಬೆಳಕು 🕉️ ‘ಅರ್ಧನಾರೀಶ್ವರ’ ತತ್ವದ ಸ್ಪರ್ಶ 🎬 ನಿರ್ದೇಶನ: ಗುರುಮೂರ್ತಿ ವಿ. 🎥 ನಿರ್ಮಾಣ: ಪೋಲಾ ಪ್ರವೀಣ್ ಕುಮಾರ್ 👥 ತಾರಾಗಣ: ಯುವರಾಜ್ ಗೌಡ, ಖ್ಯಾತಿ, ನೀತು ವನಜಾಕ್ಷಿ, ದೀಪಕ್ ಶೆಟ್ಟಿ, ವಿಜಯ್ ಚೆಂಡೂರ್ 📅 ರಿಲೀಸ್: ಮೇ 15, 2026 👉 ಮನರಂಜನೆ ಜೊತೆಗೆ ಸಾಮಾಜಿಕ ಸಂದೇಶ ನೀಡುವ ವಿಭಿನ್ನ ಸಿನಿಮಾ!”2
- Post by Onlinetv24x71