Shuru
Apke Nagar Ki App…
*ಪ್ರೊ ವಿಫೈ ಸಕ್ರಿಯಗೊಳಿಸಿದ ಸಿರಿಧಾನ್ಯ ಉತ್ಪನ್ನಗಳ ಬಿಡುಗಡೆ:* ಕಲಬುರಗಿ ಗ್ರಾಹಕರಿಗೆ ಸುಲಭವಾಗಿ ಮತ್ತು ಅನುಕೂಲಕರವಾಗಿ ತಲುಪಿಸುವ ನಿಟ್ಟಿನಲ್ಲಿ ಮೂವರು ಯುವ ಉದ್ಯಮಿಗಳ ಸೇರಿ ತಯಾರಿಸಿರುವ ಪ್ರೋವಿಫೈ ಸಂಸ್ಥೆಯ ಸಕ್ರಿಯಗೊಳಿಸಿದ ಸಿರಿಧಾನ್ಯಗಳು ಪೌಷ್ಠಿಕಾಂಶದ ಉತ್ಪನ್ನಗಳಾಗಿವೆ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಹೇಳಿದರು.ನಗರದ ಗಾಜೀಪುರ ಪ್ರದೇಶದ ಕೃಷಿ ಕಲ್ಪ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರೋವಿಫೈ ಫುಡ್ಸ್ ಪ್ರೈ. ಲಿ. ಸಂಸ್ಥೆಯಿಂದ ವೈಜ್ಞಾನಿಕವಾಗಿ ತಯಾರಿಸಿರುವ foxtail (ನವಣೆ), Barnyard (ಊದಲು), Little (ಸಾಮೆ), Kodo(ಹಾರಕಾ) ಹಾಗೂ BrownTop(ಕೊರಲೆ) ಸಿರಿಧಾನ್ಯಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಬದಲಾಗುತ್ತಿರುವ ಜೀವನಶೈಲಿ ಮತ್ತು ಆರೋಗ್ಯಕರ ಆಹಾರದ ಕುರಿತು ಹೆಚ್ಚುತ್ತಿರುವ ಅರಿವಿನ ಹಿನ್ನೆಲೆಯಲ್ಲಿ ಪೌಷ್ಟಿಕಾಂಶಭರಿತ ಸಾಂಪ್ರದಾಯಿಕ ಆಹಾರಗಳನ್ನು ಒದಗಿಸುವ ಉದ್ದೇಶ ಈ ಉತ್ಪನ್ನಗಳು ಹೊಂದಿದ್ದು, ಯುವ ಉದ್ಯಮಿಗಳ ಈ ಪಯಣ ಯಶಸ್ಸಿನಿಂದ ಕೂಡಲಿ ಎಂದು ಹಾರೈಸಿದರು.
MAHESH
*ಪ್ರೊ ವಿಫೈ ಸಕ್ರಿಯಗೊಳಿಸಿದ ಸಿರಿಧಾನ್ಯ ಉತ್ಪನ್ನಗಳ ಬಿಡುಗಡೆ:* ಕಲಬುರಗಿ ಗ್ರಾಹಕರಿಗೆ ಸುಲಭವಾಗಿ ಮತ್ತು ಅನುಕೂಲಕರವಾಗಿ ತಲುಪಿಸುವ ನಿಟ್ಟಿನಲ್ಲಿ ಮೂವರು ಯುವ ಉದ್ಯಮಿಗಳ ಸೇರಿ ತಯಾರಿಸಿರುವ ಪ್ರೋವಿಫೈ ಸಂಸ್ಥೆಯ ಸಕ್ರಿಯಗೊಳಿಸಿದ ಸಿರಿಧಾನ್ಯಗಳು ಪೌಷ್ಠಿಕಾಂಶದ ಉತ್ಪನ್ನಗಳಾಗಿವೆ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಹೇಳಿದರು.ನಗರದ ಗಾಜೀಪುರ ಪ್ರದೇಶದ ಕೃಷಿ ಕಲ್ಪ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರೋವಿಫೈ ಫುಡ್ಸ್ ಪ್ರೈ. ಲಿ. ಸಂಸ್ಥೆಯಿಂದ ವೈಜ್ಞಾನಿಕವಾಗಿ ತಯಾರಿಸಿರುವ foxtail (ನವಣೆ), Barnyard (ಊದಲು), Little (ಸಾಮೆ), Kodo(ಹಾರಕಾ) ಹಾಗೂ BrownTop(ಕೊರಲೆ) ಸಿರಿಧಾನ್ಯಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಬದಲಾಗುತ್ತಿರುವ ಜೀವನಶೈಲಿ ಮತ್ತು ಆರೋಗ್ಯಕರ ಆಹಾರದ ಕುರಿತು ಹೆಚ್ಚುತ್ತಿರುವ ಅರಿವಿನ ಹಿನ್ನೆಲೆಯಲ್ಲಿ ಪೌಷ್ಟಿಕಾಂಶಭರಿತ ಸಾಂಪ್ರದಾಯಿಕ ಆಹಾರಗಳನ್ನು ಒದಗಿಸುವ ಉದ್ದೇಶ ಈ ಉತ್ಪನ್ನಗಳು ಹೊಂದಿದ್ದು, ಯುವ ಉದ್ಯಮಿಗಳ ಈ ಪಯಣ ಯಶಸ್ಸಿನಿಂದ ಕೂಡಲಿ ಎಂದು ಹಾರೈಸಿದರು.
More news from ಕರ್ನಾಟಕ and nearby areas
- ಕಾಳಗಿಯಲ್ಲಿ ಕ್ರಾಪ್ ಕಟಿಂಗ್ನಲ್ಲಿ ಲೋಪ ದೋಷ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಹುಲಸಗುಡ್ ಗ್ರಾಮದಲ್ಲಿ ರೈತರ ಹಾಗೂ ರೈತನ ಮುಖಂಡರು ಗೆರಾವ್–ಪ್ರತಿಭಟನೆ. ಕ್ರಾಪ್ ಕಟಿಂಗ್ನಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಹಾರ್ಟಿಕಲ್ಚರ್ ಅಧಿಕಾರಿಗಳು, ಬೆಳೆ ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳ ವಿರುದ್ಧ ಹುಲಸಗುಡ್ ಗ್ರಾಮದ ರೈತರು ಹಾಗೂ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸುಮಾರು ನಾಲ್ಕೈದು ಗಂಟೆಗಳ ಕಾಲ ಗೆರಾವ್ ಹಾಕಿ ಪ್ರತಿಭಟನೆ ನಡೆಸಿದರು. ರೈತರ ಬೆಳೆಗಳಿಗೆ ಸಂಬಂಧಿಸಿದಂತೆ ಸರಿಯಾದ ಕ್ರಾಪ್ ಕಟಿಂಗ್ ಮಾಡದೆ ಇರುವುದರಿಂದ ಬೆಳೆ ವಿಮೆ ಹಾಗೂ ಪರಿಹಾರ ಪಡೆಯುವಲ್ಲಿ ರೈತರಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಹೋದ ವರ್ಷ ಅತಿವೃಷ್ಟಿಯಾಗಿ ಹಾಳಾಗಿರ್ತಕ್ಕಂತ ಬೆಳೆ ಇನ್ಸೂರೆನ್ಸ್ ಸರಿಯಾಗಿ ಬರದೇ ರೈತ ಸಂಕಷ್ಟದಲ್ಲಿದ್ದಾನೆ. ಈ ವರ್ಷ ಮಳೆ ಇಲ್ಲದೆ ಬೆಳೆದೆ ಬೆಳೆ ಇಲ್ಲದೆ ರೈತ ಕಷ್ಟದಲ್ಲಿದ್ದಾನೆ ಬರದ ಛಾಯ ಮೂಡಿದೆ. ಹೀಗಿರುವಾಗ ಮತ್ತೆ ಇನ್ಸೂರೆನ್ಸ್ ಕಂಪನಿ ದವರು ಅದೇ ರಾಗ ಅದೇ ಹಾಡು ಹಾಡುತ್ತಿದ್ದಾರೆ. ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ತಾಲೂಕು ತಹಸೀಲ್ದಾರ್ ಆಗಮಿಸಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದರು. ಸರಿಯಾದ ರೀತಿಯಲ್ಲಿ ಕ್ರಾಪ್ ಕಟಿಂಗ್ ಮಾಡದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ತಹಸೀಲ್ದಾರ್ ಅವರ ಭರವಸೆ ಹಾಗೂ ಅಧಿಕಾರಿಗಳಿಂದ ಸಮಸ್ಯೆ ಪರಿಶೀಲಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ತಿಳಿಗೊಳಿಸಿದರು. ರೈತರ ಬೆಳೆ ವಿಮೆ ಮತ್ತು ಬೆಳೆ ಪರಿಹಾರದಲ್ಲಿ ಯಾವುದೇ ರೀತಿಯ ತಾರತಮ್ಯವಾಗಬಾರದು. ಸರಿಯಾದ ಕ್ರಾಪ್ ಕಟಿಂಗ್ ನಡೆಸಿ ಅರ್ಹ ಪ್ರತಿಯೊಬ್ಬ ರೈತನಿಗೂ ನ್ಯಾಯ ಒದಗಿಸಬೇಕು ಎಂದು ಹುಲಸಗುಡ್ ಗ್ರಾಮದ ರೈತರು ಹಾಗೂ ಸುಂಟಾಣ್ಣ ಗ್ರಾಮದ ರೈತರು, ರೈತ ಸೇನೆ ಮುಖಂಡರು ಆಗ್ರಹಿಸಿದ್ದಾರೆ. “ರೈತರ ಬೆವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ರೈತ ನಾಯಕ ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದ್ದಾರೆ. ತಾಲೂಕ ದಂಡಾಧಿಕಾರಿಗಳಾದ ಪೃಥ್ವಿರಾಜ್ ಪಾಟೀಲ್ ರವರು ಎರಡು ಮೂರು ದಿವಸಗಳಲ್ಲಿ ಮುಖಂಡರನ್ನು ಕರೆದು ಸಭೆ ಮಾಡಿ ನಂತರ ಖುದ್ದಾಗಿ ನಾವೇ ಬಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹೊಲಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಟಿಕಲ್ಚರ್ ಅಧಿಕಾರಿ ನಸ್ಸೀರ್ ಹೊಸಳ್ಳಿ, ಇನ್ಸೂರೆನ್ಸ್ ಕಂಪನಿ ಅಧಿಕಾರಿ ಯುವರಾಜ್, ರೈತರದ ಸಂತೋಷ್ ನಾಯ್ಕೋಡಿ,ಶಿವಶರಣಪ್ಪ ನಿಗದಳಿ, ವಿಠಲ ಸನದಿ, ಪಾಂಡುರಂಗ ರುಮ್ಮನಗೂಡ. ಸೈದಪ್ಪ ಕೊಡಡೂರ, ಸಜೀದಾಪಟೇಲ್ ಬಿರಾದಾರ್, ಸಿದಪ್ಪ ಕಂದಗುಳ, ಶಿವಪ್ಪ ಸನದಿ, ನಾಮದೇವ ರಾಠೋಡ್, ಉದಯ ಸನದಿ, ನಾಗೇಶ್ ಸನದಿ, ವಿಠ್ಠಲ್ ರೂಮನಗುಡ, ಸಂತೋಷ ಮಠಪತಿ, ಪೀರಪ್ಪ ಯಾದವ, ನಾಗಪ್ಪ ಜಡಗಿ, ಅನೇಕ ರೈತರು ಉಪಸ್ಥಿತರಿದ್ದರು1
- ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.! ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.!1
- ಹುಮನಾಬಾದ ಪಟ್ಟಣದಲ್ಲಿ ಈದ್ ಮಿಲಾದ್ ಸಡಗರ ಸಂಭ್ರಮದಿಂದ ಆಚರಣೆ ನಸೀಮುದ್ದಿನ್ ಪಟೇಲ್ ಸೇರಿ ಮುಸ್ಲಿಂ ಮುಖಂಡರು ಭಾಗಿ1
- ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ. ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.1
- ಭಾಲ್ಕಿ ಪಟ್ಟಣದಲ್ಲಿ ಸಂಸದರಿಂದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಭಾಲ್ಕಿ: ಪಟ್ಟಣದಲ್ಲಿ ಸಂಸದರಿಂದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ1
- ಚಿಂಚೋಳಿ ತಾಲೂಕಿನ ಕೆಲವೆಡೆ ಉತ್ತಮ ಮಳೆ : ಮಿರಿಯಾಣದಲ್ಲಿ ಧಾರಾಕಾರ ಮಳೆ – ಜನರಲ್ಲಿ ಸಂತಸ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇಂದು ಉತ್ತಮ ಮಳೆಯಾಗಿದೆ. ಮಳೆಯ ಪರಿಣಾಮ ರೈತರಲ್ಲಿ ಸಂತಸ ಮೂಡಿದ್ದು, ಬಿತ್ತನೆ ಹಾಗೂ ಬೆಳೆಗಳ ಬೆಳವಣಿಗೆಗೆ ಅನುಕೂಲವಾಗಿದೆ. ಕೆಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ಹರಿದಿದ್ದು, ವಾತಾವರಣ ತಂಪಾಗಿದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆಯ ನಿರೀಕ್ಷೆ ಇದೆ.2
- ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.1
- ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು. ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು.1