50 ದಲಿತರು, 100 ನಾಯಕ ಜಮಾಂಗದ ಕುಟುಂಬಗಳಿವೆ. ಇದುವರೆಗೂ ಮೂರು ಎಕರೆ ಜಮೀನು ಗುರುತಿಸಿ ಫಲಾನುಭವಿಗಳಿಗೆ ನಿವೇಶನ ಕೊಡುವ ಕೆಲಸ ಮಾಡಿಲ್ಲಾ ಸಿಎಲ್ ಕೆ: ಆ.24 ಸುದ್ದಿ.1 ವಿಜಯವಾಣಿ ಸುದ್ದಿಜಾಲ ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ವಲಸೆ ಗ್ರಾಮದ ಪರಿಶಿಷ್ಟ ಜನಾಂಗಕ್ಕೆ ಅಗತ್ಯ ನಿವೇಶನಕ್ಕಾಗಿ 2011 ರಿಂದ ಹೋರಾಟ ನಡೆಸಿದರೂ,ನಿರ್ಲಕ್ಷ್ಯ ಅಧಿಕಾರಿಗಳಿಂದ ನ್ಯಾಯ ಸಿಗುತ್ತಿಲ್ಲ ಎಂದು ಮಾದಿಗ ಮಹಾಸಭಾ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ ಆಕ್ರೋಶ ವ್ಯಕ್ತಪಡಿಸಿದರು. ಚಳ್ಳಕೆರೆ ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಸೋಮವಾರ ವಲಸೆ ಗ್ರಾಮದ ನೂರಾರು ನಿವೇಶನ ರಹಿತ ಕುಟುಂಬಗಳು ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದರು. ಪರಿಶಿಷ್ಟ ಕಾಲನಿಗಳಿಗೆ ಮೂಲ ಸೌಕರ್ಯಗಳು ಸಿಗುತ್ತಿಲ್ಲ. ಅಗತ್ಯ ನಿವೇಶನಗಳ ವ್ಯವಸ್ಥೆ ಇಲ್ಲ. ಈಗಲು ಪರಿಶಿಷ್ಟರ ಮೇಲೆ ಹಲ್ಲೆ,ದೌರ್ಜನ್ಯಗಳು ನಿಲ್ಲುತ್ತಿಲ್ಲ. ಆಡಳಿತ ಅಧಿಕಾರಿಗಳು ಮತ್ತು ಜನಪ್ರತಿಗಳು ಬಲ ಇದ್ದವರ ಕಡೆ ನಡೆದುಕೊಳ್ಳುತ್ತಾರೆ. ಇಂತಹ ಪದ್ದತೊಯಿಂದ ತಲತಲಾಂತರ ಪರಿಶಿಷ್ಟರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ವಲಸೆ ಗ್ರಾಮದ ನಿವೇಶನ ರಹಿತ ಕುಟುಂಬಗಳಿಗೆ ಹತ್ತು ವರ್ಷಗಳಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದೆ. ಗ್ರಾಮದಲ್ಲಿ 50 ದಲಿತರು, 100 ನಾಯಕ ಜಮಾಂಗದ ಕುಟುಂಬಗಳಿವೆ. ಇದುವರೆಗೂ ಮೂರು ಎಕರೆ ಜಮೀನು ಗುರುತಿಸಿ ಫಲಾನುಭವಿಗಳಿಗೆ ನಿವೇಶನ ಕೊಡುವ ಕೆಲಸ ಮಾಡಿಲ್ಕ ಎಂದು ದೂರಿದರು. ಇದರ ಸಂಬಂಧ ಈ ದಿನವೇ ಇತ್ಯರ್ಥ ಆಗಬೇಕು. ಇಲ್ಲದಿದ್ದಲ್ಲಿ ಧರಣಿ ಸ್ಥಳದಿಂದ ಕದಲುವುದಿಲ್ಲ. ಮಳೆ,ಗಾಳಿಗೂ ಎದರುವುದಿಲ್ಲ. ಏನಾದರೂ ಅನಾಹುತ ಆದಲ್ಲಿ ತಾಲೂಕು ಆಡಳಿತವೇ ಹೊಣೆ ಎಂದು ಎಚ್ಚರಿಸಿದರು. ಧರಣಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ತಹಸೀಲ್ದಾರ್ ರೇಹಾನ್ ಪಾಷ, ಕೂಡಲೇ ಫಲಾನುಭವಿಗಳ ಪಟ್ಟಿ ಮಾಡಿಕೊಂಡು ನಿವೇಶ ಹಂಚಿಕಗೆ ವ್ಯವಸ್ಥೆ ಮಾಡಲಾಗುವುದು. ಈಗಾಗಲೇ ಸರ್ವೆ ಮಾಹಿತಿ ಪ್ರಕಾರ ಗ್ರಾಮ ಸಮೀಪ ಭೂಮಿ ಲಭ್ಯವಿದೆ. ಒಂದು ಎಕರೆ ಶಾಲೆಗೆ, ಉಳಿದ ಆರು ಎಕರೆಯಲ್ಲಿ ದಲಿತರು ಮತ್ತು ನಾಯಕ ಜನಾಂಗಕ್ಕೆ ಸಮನವಾಗಿ ನಿವೇಶ ಹಂಚಿಕೆಗೆ ಕ್ರಮ ವಹಿಸುವ ಭರವಸೆ ನೀಡಿದ ಬಳಿಕ, ಪ್ರತಿಭಟನಕಾರರು ಧರಣಿ ಹಿಂಪಡೆದರು.
50 ದಲಿತರು, 100 ನಾಯಕ ಜಮಾಂಗದ ಕುಟುಂಬಗಳಿವೆ. ಇದುವರೆಗೂ ಮೂರು ಎಕರೆ ಜಮೀನು ಗುರುತಿಸಿ ಫಲಾನುಭವಿಗಳಿಗೆ ನಿವೇಶನ ಕೊಡುವ ಕೆಲಸ ಮಾಡಿಲ್ಲಾ ಸಿಎಲ್ ಕೆ: ಆ.24 ಸುದ್ದಿ.1 ವಿಜಯವಾಣಿ ಸುದ್ದಿಜಾಲ ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ವಲಸೆ ಗ್ರಾಮದ ಪರಿಶಿಷ್ಟ ಜನಾಂಗಕ್ಕೆ ಅಗತ್ಯ ನಿವೇಶನಕ್ಕಾಗಿ 2011 ರಿಂದ ಹೋರಾಟ ನಡೆಸಿದರೂ,ನಿರ್ಲಕ್ಷ್ಯ ಅಧಿಕಾರಿಗಳಿಂದ ನ್ಯಾಯ ಸಿಗುತ್ತಿಲ್ಲ ಎಂದು ಮಾದಿಗ ಮಹಾಸಭಾ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ ಆಕ್ರೋಶ ವ್ಯಕ್ತಪಡಿಸಿದರು. ಚಳ್ಳಕೆರೆ ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಸೋಮವಾರ ವಲಸೆ ಗ್ರಾಮದ ನೂರಾರು ನಿವೇಶನ ರಹಿತ ಕುಟುಂಬಗಳು ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದರು. ಪರಿಶಿಷ್ಟ ಕಾಲನಿಗಳಿಗೆ ಮೂಲ ಸೌಕರ್ಯಗಳು ಸಿಗುತ್ತಿಲ್ಲ. ಅಗತ್ಯ ನಿವೇಶನಗಳ ವ್ಯವಸ್ಥೆ ಇಲ್ಲ. ಈಗಲು ಪರಿಶಿಷ್ಟರ ಮೇಲೆ ಹಲ್ಲೆ,ದೌರ್ಜನ್ಯಗಳು ನಿಲ್ಲುತ್ತಿಲ್ಲ. ಆಡಳಿತ ಅಧಿಕಾರಿಗಳು ಮತ್ತು ಜನಪ್ರತಿಗಳು ಬಲ ಇದ್ದವರ ಕಡೆ ನಡೆದುಕೊಳ್ಳುತ್ತಾರೆ. ಇಂತಹ ಪದ್ದತೊಯಿಂದ ತಲತಲಾಂತರ ಪರಿಶಿಷ್ಟರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ವಲಸೆ ಗ್ರಾಮದ ನಿವೇಶನ ರಹಿತ ಕುಟುಂಬಗಳಿಗೆ ಹತ್ತು ವರ್ಷಗಳಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದೆ. ಗ್ರಾಮದಲ್ಲಿ 50 ದಲಿತರು, 100 ನಾಯಕ ಜಮಾಂಗದ ಕುಟುಂಬಗಳಿವೆ. ಇದುವರೆಗೂ ಮೂರು ಎಕರೆ ಜಮೀನು ಗುರುತಿಸಿ ಫಲಾನುಭವಿಗಳಿಗೆ ನಿವೇಶನ ಕೊಡುವ ಕೆಲಸ ಮಾಡಿಲ್ಕ ಎಂದು ದೂರಿದರು. ಇದರ ಸಂಬಂಧ ಈ ದಿನವೇ ಇತ್ಯರ್ಥ ಆಗಬೇಕು. ಇಲ್ಲದಿದ್ದಲ್ಲಿ ಧರಣಿ ಸ್ಥಳದಿಂದ ಕದಲುವುದಿಲ್ಲ. ಮಳೆ,ಗಾಳಿಗೂ ಎದರುವುದಿಲ್ಲ. ಏನಾದರೂ ಅನಾಹುತ ಆದಲ್ಲಿ ತಾಲೂಕು ಆಡಳಿತವೇ ಹೊಣೆ ಎಂದು ಎಚ್ಚರಿಸಿದರು. ಧರಣಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ತಹಸೀಲ್ದಾರ್ ರೇಹಾನ್ ಪಾಷ, ಕೂಡಲೇ ಫಲಾನುಭವಿಗಳ ಪಟ್ಟಿ ಮಾಡಿಕೊಂಡು ನಿವೇಶ ಹಂಚಿಕಗೆ ವ್ಯವಸ್ಥೆ ಮಾಡಲಾಗುವುದು. ಈಗಾಗಲೇ ಸರ್ವೆ ಮಾಹಿತಿ ಪ್ರಕಾರ ಗ್ರಾಮ ಸಮೀಪ ಭೂಮಿ ಲಭ್ಯವಿದೆ. ಒಂದು ಎಕರೆ ಶಾಲೆಗೆ, ಉಳಿದ ಆರು ಎಕರೆಯಲ್ಲಿ ದಲಿತರು ಮತ್ತು ನಾಯಕ ಜನಾಂಗಕ್ಕೆ ಸಮನವಾಗಿ ನಿವೇಶ ಹಂಚಿಕೆಗೆ ಕ್ರಮ ವಹಿಸುವ ಭರವಸೆ ನೀಡಿದ ಬಳಿಕ, ಪ್ರತಿಭಟನಕಾರರು ಧರಣಿ ಹಿಂಪಡೆದರು.
- ಗ್ರಾಮ ಪಂಚಾಯತಿ ಜಾಬ್ ಕಾರ್ಡ್ ಕೂಲಿ ಕಾರ್ಮಿಕರಿಂದ ಬೆಳಗೆರೆ ಕೆರೆ ಹಳ್ಳಗಳ ಪುನರ್ ಚೇತನ ಕಾಮಗಾರಿ. ಚಳ್ಳಕೆರೆ ತಾಲೂಕಿನ ಬೆಳೆಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಏಳು ಹಳ್ಳಿಗಳಲ್ಲಿರುವ 1545 ಉದ್ಯೋಗ ಖಾತ್ರಿ ಕಾರ್ಮಿಕರ ಅನುಕೂಲಕ್ಕಾಗಿ ಬಿವಿ ಜೀ ರಾಮ್ ಜೀ ಯೋಜನೆಯಡಿ ವೈಯಕ್ತಿಕ ಮತ್ತು ಸಮುದಾಯದ ಕಾಮಗಾರಿಗಳನ್ನು ಕೈಗೊಂಡು ಸ್ಥಳೀಯವಾಗಿ ಕೂಲಿ ಕೆಲಸ ನೀಡಲಾಗಿದೆ. ಸಮೀಪದ ಹುಲಿಕುಂಟೆ ಸರ್ಕಾರಿ ಗೋಮಾಳ ಭೂಮಿಯಲ್ಲಿ ಸುಮಾರು 10 ಲಕ್ಷ ವೆಚ್ಚದ ಸಮುದಾಯ ಕಾಮಗಾರಿ ಆರಂಭಿಸಲಾಗಿದೆ. ಪ್ರತಿ ದಿನ 109 ಜನ ಕೂಲಿ ಕಾರ್ಮಿಕರು ದುಡಿಯುತ್ತಿದ್ದಾರೆ. ಪಂಚಾಯತಿ ವ್ಯಾಪ್ತಿಯ ಬೆಳೆಗೆರೆ, ನಾರಾಯಣಪುರ, ರಂಗನಾಥಪುರ, ಕಲಮರಹಳ್ಳಿ, ಹುಲಿಕುಂಟೆ, ಭೋವಿ ಕಾಲನಿ, ಕ್ಯಾತನಮಾಳೆ ಸೇರಿದ ಹಳ್ಳಿಗಳಲ್ಲಿ ಒಟ್ಟು 1,545 ಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡುಗಳನ್ನು ವಿತರಿಸಲಾಗಿದೆ. ಪ್ರಸ್ತುತ ಜಾಬ್ ಕಾರ್ಡುಗಳನ್ನು ನವೀಕರಣ ಮಾಡಿಕೊಂಡು, ವಿಬಿ ರಾಮ್ ಜೀ ಯೋಜನೆಯ 318 ವಿವಿಧ ಕಾಮಗಾರಿಗಳಲ್ಲಿ ದನ,ಕುರಿ,ಮೆಕೆಗಳ ಶೆಡ್ ನಿರ್ಮಾಣ ಸೇರಿ ಕೃಷಿ ಹೊಂಡ ಮತ್ತು ವೈಯಕ್ತಿಕ ರೈತರ ಜಮೀನ ಅಭಿವೃದ್ಧಿ ಕಾಮಗಾರಿ ಹಾಗೂ ಕೆರೆ,ಹಳ್ಳಗಳ ಪುನರ್ ಚೇತನ ಕಾಮಗಾರಿಗಳನ್ನು ಜಾರಿ ಮಾಡಲಾಗಿದೆ. ಪ್ರತಿ ದಿನ 120 ಕೂಲಿ ಕಾರ್ಮಿಕರಿಗೆ 382 ರೂ ದಿನದ ಕೂಲಿಯಂತೆ ಕೆಲಸ ನೀಡಲಾಗಿದೆ. ಈ ವರ್ಷ ಸಕಾಲಕ್ಕೆ ಮುಂಗಾರು ಮಳೆ ಇಲ್ಲ. ರೈತರ ಹೊಲಗಳಲ್ಲಿ ಕೆಲಸ ಇಲ್ಲದಾಗಿದೆ. ಇದರಿಂದ ಇತರೆ ವರ್ಗದ ಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿ ಕೆಲಸ ಇಲ್ಲ. ವಲಸೆ ಹೋಗುವ ಪರಿಸ್ಥಿತಿಯಲ್ಲಿ ಸ್ಥಳೀಯ ಪಂಚಾಯತಿಯಿಂದ ದುಡಿಯುವ ಕೈಗಳಿಗೆ ಕೆಲಸ ಸಿಕ್ಕಿದೆ. ಅಂತರ್ಜಲಕ್ಕೆ ಒತ್ತು: ಕೆರೆಗಳ ಹೂಳು ಎತ್ತುವ ಮತ್ತು ಕೆರೆಗೆ ನೀರು ಹರಿದು ಬರುವ ಹಳ್ಳಗಳ ಪುನರ್ ಚೇತನ ಕಾಮಗಾರಿಗೆ ಮೊದಲ ಆದ್ಯತೆ ನೀಡಲಾಗಿದೆ. ಕೆರೆ,ಗೋಕಟ್ಟೆ ಅಭಿವೃದ್ಧಿಯಿಂದ ಹರಿಯುವ ಮಳೆ ನೀರು ತಡೆದು ನಿಲ್ಲಿಸುವ ಅನುಕೂಲ ಆಗುತ್ತದೆ. ಇದರಿಂದ ಅಡವಿಯಲ್ಲಿ ಜನ,ಜಾನುವಾರು ಸೇರಿ ಪ್ರಾಣಿ,ಪಕ್ಷಿಗಳಿಗೆ ಕುಡಿಯುವ ನೀರಿನ ಅನುಕೂಲ ಮತ್ತು ಅಂತರ್ಜಲ ವೃದ್ದಿಗೆ ಆಧಾರ ಆಗುತ್ತದೆ. ಬರಗಾಲ ಪರಿಸ್ಥಿತಿಗೆ ಕೆಲಸ ಹುಡುಕಿಕೊಂಡು ಬೇರೆ ಕಡೆ ಹೋಗದಂತೆ ಗ್ರಾಮ ಸಮೀಪ ಸಾಮೂಹಿಕವಾಗಿ ಮಾಡುವ ಸಮುದಾಯ ಕಾಮಗಾರಿ ಕೆಲಸ ನೀಡಲಾಗಿದೆ. ಕೆಲ ರೈತರು ವೈಯಕ್ತಿಕವಾಗಿಯೂ ತಮ್ಮ ಹೊಲಗಳಲ್ಲಿ ಅಭಿವೃದ್ಧಿ ಕೆಲಸ ಮಾಡಿಕೊಂಡರೂ ಕೂಲಿ ಸಿಗುತ್ತದೆ ಎನ್ನುತ್ತಾರೆ ಪಿಡಿಒ ಸಿ.ಎಂ. ದೇವೇಂದ್ರಪ್ಪ. ತಾಲೂಕಿನ 40 ಗ್ರಾಮ ಪಂಚಾಯತಿಗಳಲ್ಲಿ ವಿಬಿ ರಾಮ್ ಜೀ ಯೋಜನೆಯಡಿ ಒಟ್ಟು 8,026 ಕಾಮಗಾರಿಗಳ ಅನುಮೋದನೆ ಮಾಡಲಾಗಿದೆ. ಇದರಲ್ಲಿ 1626 ವೈಯಕ್ತಿಕ ಕಾಮಗಾರಿ ಸೇರಿ ಉಳಿದಂತೆ ಸಮೂಹ ಕಾಮಗಾರಿಗಳಿಗೆ ಅವಕಾಶ ಇದೆ. ಪ್ರತಿದಿನ ಸರಾಸರಿ 4 ಸಾವಿರ ಕಾರ್ಮಿಕರು ದುಡಿಯಲು ಅನುಕೂಲ ಮಾಡಲಾಗಿದೆ. ಕೆಲಸಕ್ಕಾಗಿ ಗೂಳೆ ಹೋಗದಂತೆ ಪಂಚಾಯತಿಯಲ್ಲಿ ಕೆಲಸ ಪಡೆಯುವ ಅವಕಾಶ ಇದೆ. ಕೆಲ ಗ್ರಾಮಗಳಲ್ಲಿ ಡಂಗೂರ ಸಾರಿ ಕಾರ್ಮಿಕರಿಗೆ ಸ್ಥಳೀಯ ಕೂಲಿ ಕೆಲಸದ ಬಗ್ಗೆ ಜಾಗೃತಿಗೆ ಕ್ರಮ ವಹಿಸಲಾಗಿದೆ_ ಎಚ್. ಶಶಿಧರ್, ತಾಪಂ, ಇಒ, ಚಳ್ಳಕೆರೆ.1
- ಕೋಟೆನಾಡು ಚಿತ್ರದುರ್ಗದಲ್ಲಿ ಯಶ್ ರ ಬಹೂ ನಿರೀಕ್ಷಿತ ಸಿನಿಮಾ ಟಾಕ್ಸಿಕ್ ಗೆ ಅದ್ದೂರಿ ಸ್ವಾಗತ ಕೋಟೆನಾಡು ಚಿತ್ರದುರ್ಗದಲ್ಲಿ ಯಶ್ ರ ಬಹೂ ನಿರೀಕ್ಷಿತ ಸಿನಿಮಾ ಟಾಕ್ಸಿಕ್ ಅದ್ದೂರಿಯಾಗಿ ತೆರೆಗೆ ಅಪ್ಪಳಿಸಿದೆ. ಇನ್ನೂ ರಾಕಿಂಗ್ ಸ್ಟಾರ್ ಯಶ್ ರ ಬಹೂ ನಿರೀಕ್ಷಿತ ಸಿನಿಮಾ ಟಾಕ್ಸಿ್ಕ ಎಲ್ಲೆಡೆ ಇಂದು ಅಬ್ಬರ ಆರಂಬಿಸಿದೆ. ಅದರಂತೆ ಕೋಟೆನಾಡು ಚಿತ್ರದುರ್ಗದ ಬಸವೇಶ್ವರ ಹಾಗೂ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಟಾಕ್ಸಿಕ್ ಸಿನಿಮಾ ಅದ್ದೂರಿಯಾಗಿ ತೆರೆಗೆ ಅಪ್ಪಳಿಸಿದೆ. ಇನ್ನೂ ಬೆಳಗ್ಗೆ 5.30 ಕ್ಕೆ ಟಾಕ್ಸಿಕ್ ಮೊದಲ ಶೋ ಪ್ರಾರಂಬವಾಗಿದ್ದು ಮೊದಲ ದಿನವೇ ಟಾಕ್ಸಿಕ್ ಕೆ ಬಿಗ್ ರೆಸ್ಪಾನ್ಸ್ ದೊರೆತಿದ್ದು ಥಿಯೇಟರ್ ಗಳು ಹೌಸ್ ಫುಲ್ ಆಗಿವೆ. ಅಷ್ಟೇ ಅಲ್ಲದೆ ಸಿನಿಮಾ ಬಿಡುಗಡೆ ಹಿನ್ನೆಲೆ ಥಿಯೇಟರ್ ಅನ್ನ ಮದುವಣಗಿತ್ತಿಯಂತೆ ಸಿಂಗರಿಸಿದ್ದು ಯಶ್ ಅಭಿಮಾನಿಗಳು ಸಿನಿ ಪ್ರಿಯರು ಬೆಳಗ್ಗೆಯೇ ಆಗಮಿಸಿದ್ದು ದೊಡ್ಡದಾದ ಯಶ್ ತ ಕಟೌಟ್ ಗೆ ದೊಡ್ಡದಾದ ಹೂಮಾಲೆ ಹಾಕಿ ಪುಷ್ಪವೃಷ್ಟಿ ಮಾಡಿದ್ದು ಟಾಕ್ಸಿಕ್ ಸಿನಿಮಾದ ಪರ ಘೋಷಣೆಗಳನ್ನ ಕೂಗಿದ್ದು ಕುಂಬಳಕಾಯಿ ಒಡೆದು ಕರ್ಪೂರ ಬೆಳಗಿ ಟಾಕ್ಸಿಕ್ ಗೆ ಶುಭಹಾರೈಸಿದ್ದು ಶತದಿನೋತ್ಸವ ಆಚರಿಸಲಿ ಎಂದು ಶುಭಕೋರಿದ್ದಾರೆ. ಇನ್ನೂ ಥಿಯೇಟರ್ ನಲ್ಲಿ ಸಿನಿಮಾ ಆರಂಬವಾಗುತ್ತಿದ್ದಂತೆ ಯಶ್ ಪರದೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ ಹೂಮಳೆ ಸುರಿಸಿ ಸ್ಟೆಪ್ ಹಾಕಿದ ಅಭಿಮಾನಿಗಳು ಟಾಕ್ಸಿಕ್ ಸಿನಿಮಾವನ್ನ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ1
- ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಶಿರಸ್ತೆದಾರ್ ಸದಾಶಿವಪ್ಪ ಅವರಿಗೆ ಬೀಳ್ಕೊಡುಗೆ ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿರಸ್ತೆದಾರ್ ಸದಾಶಿವಪ್ಪ ಅವರು ಹೊಳಲ್ಕೆರೆ ತಾಲೂಕು ಕಚೇರಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ, ತಾಲೂಕು ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ತಹಶೀಲ್ದಾರ್ ರೇಹಾನ್ ಪಾಷ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಸದಾಶಿವಪ್ಪ ಅವರನ್ನು ಸನ್ಮಾನಿಸಿ ಗೌರವದಿಂದ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ತಹಶೀಲ್ದಾರ್ ರೇಹಾನ್ ಪಾಷ, ವರ್ಗಾವಣೆಗೊಂಡ ಶಿರಸ್ತೆದಾರ್ ಸದಾಶಿವಪ್ಪ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಮಾತನಾಡಿ, ಸದಾಶಿವಪ್ಪ ಅವರ ಸೇವಾ ಅವಧಿಯ ಕರ್ತವ್ಯನಿಷ್ಠೆ ಹಾಗೂ ಸಹಕಾರವನ್ನು ಸ್ಮರಿಸಿದರು. ಸಹೋದ್ಯೋಗಿಗಳು ಶುಭ ಹಾರೈಸಿ, ಹೊಳಲ್ಕೆರೆ ತಾಲೂಕು ಕಚೇರಿಯಲ್ಲಿಯೂ ಉತ್ತಮ ಸೇವೆ ಸಲ್ಲಿಸುವಂತೆ ಹಾರೈಸಿದರು.4
- ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ ಮೊಬೈಲ್ ಕಳವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಸಂಬಂಧಿಕರ ಮೊಬೈಲ್ ಫೋನನ್ನು ಕಳ್ಳನೊಬ್ಬ ಎಗರಿಸಿ ಪರಾರಿಯಾದ ಘಟನೆ ಹಿರಿಯೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗೆಂದು ರೋಗಿಯೊಬ್ಬರು ದಾಖಲಾಗಿದ್ರು. ರೋಗಿಯ ಸಂಬಂಧಿಗಳು ರಾತ್ರಿ ವೇಳೆ ನಿದ್ರೆಗೆ ಜಾರಿದ್ದ ವೇಳೆ ಖದೀಮ ತನ್ನ ಕೈಚಳಕ ತೋರಿದ್ದು, ಮೆಲ್ಲನೇ ಮೊಬೈಲ್ ಫೋನನ್ನ ಎತ್ತಿಕೊಂಡು ಪರಾರಿಯಾಗಿದ್ದಾನೆ. ಇನ್ನು ಕಳ್ಳನ ಖರಾಮತ್ತು ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಿರಿಯೂರು ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಎಷ್ಟು ಸುರಕ್ಷಿತ ಎನ್ನುವ ಚರ್ಚೆಗಳು ಪ್ರಾರಂಬವಾಗಿದ್ದು, ಸಧ್ಯ ಕಳ್ಳತನ ಘಟನೆಗಳಿಗೆ ಬ್ರೇಕ್ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಫ್ಲೋ......1
- ಈದ್ ಮಿಲಾದ್: ಶಾಂತಿ ಸುವ್ಯವಸ್ಥೆ ಕಾಪಾಡಲು ಚಳ್ಳಕೆರೆಯಲ್ಲಿ ಪೊಲೀಸರಿಂದ ಬೃಹತ್ ಪಥಸಂಚಲನ ಚಳ್ಳಕೆರೆ: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಪಥಸಂಚಲನ ನಡೆಸಲಾಯಿತು. ನಗರದ ಪೊಲೀಸ್ ಠಾಣೆಯ ಮುಂಭಾಗದಿಂದ ಆರಂಭವಾದ ಈ ಶಿಸ್ತುಬದ್ಧ ಪಥಸಂಚಲನವು ಚಿತ್ರದುರ್ಗ ರಸ್ತೆ, ಅಂಬೇಡ್ಕರ್ ವೃತ್ತ, ಎಸ್.ಆರ್. ರಸ್ತೆ, ಬೆಂಗಳೂರು ರಸ್ತೆ, ಬಸವೇಶ್ವರ ವೃತ್ತ, ಹಳೆನಗರದ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಮೂಲಕ ಸಾಗಿ ಬಳ್ಳಾರಿ ರಸ್ತೆಯವರೆಗೆ ಜರುಗಿತು. ನಗರದ ಅಷ್ಟ ದಿಕ್ಕುಗಳಲ್ಲೂ ಸಂಚರಿಸಿದ ಪೊಲೀಸ್ ಪಡೆ, ಸಾರ್ವಜನಿಕರಲ್ಲಿ ಧೈರ್ಯ ಮತ್ತು ಭದ್ರತೆಯ ಭಾವನೆ ಮೂಡಿಸುವಲ್ಲಿ ಯಶಸ್ವಿಯಾಯಿತು. ಚಳ್ಳಕೆರೆ ವಿಭಾಗದ ಡಿವೈಎಸ್ಪಿ ಸತ್ಯನಾರಾಯಣ ರಾವ್ ಅವರ ನೇತೃತ್ವದಲ್ಲಿ ನಡೆದ ಈ ಪಥಸಂಚಲನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಕೆ. ಕುಮಾರ್, ಪಿಎಸ್ಐ ಶಿವರಾಜ್ ಸೇರಿದಂತೆ ಕೆಎಸ್ಆರ್ಪಿ , ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಎಲ್ಲರೂ ಅನ್ಯೋನ್ಯತೆಯಿಂದ, ಶಾಂತಿ ಹಾಗೂ ಸೌಹಾರ್ದತೆಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಬೇಕು,ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.1
- ಚಿತ್ರದುರ್ಗ: ಅಲೆಮಾರಿಗಳು ರಾಜಕಾರಿಗಳಿಗೆ ಮತ ಹಾಕಲು ಬೇಕು ಸೌಲಭ್ಯಗಳಿಗೆ ಬೇಡವಾಗಿದ್ದಾರೆ ಅಲೆಮಾರಿಗಳಿಗೆ ಹೆಸರಿಗಷ್ಟೆ ಶೇಕಡ 1ರಷ್ಟ ಮೀಸಲಾತಿ ನೀಡಿದ್ದು, ಅದು ಯಾರಿಗೂ ಸಿಗದಂತಾಗಿದೆ. ರಾಜಕಾರಣಿಗಳಿಗೆ ಮತ ಹಾಕಲು ಮಾತ್ರ ನಾವು ಬೇಕು, ಸೌಲಭ್ಯಕ್ಕೆ ಬೇಡ ಎನ್ನುವಂತಾಗಿದೆ ಎಂದು ಅಲೆಮಾರಿ ಬುಡಕಟ್ಟು ಮಹಾಸಭಾ ಗೌರವಾಧ್ಯಕ್ಷ ಸಚಿನ್ ಬೇಸರ ವ್ಯಕ್ತಪಡಿಸಿದರು. ಚಿತ್ರದುರ್ಗದಲ್ಲಿಂದು ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿ, ಸಂವಿಧಾನದಲ್ಲಿ ಕೂಡ ನಮ್ಮನ್ನು ಕಡೆಗಣಿಸಲಾಗುತ್ತಿದೆ. ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪಲ್ಲವಿ ಅವರು, ಕೇವಲ ಜಿಲ್ಲಾ ಕೇಂದ್ರದಲ್ಲಿ ಪ್ರಗತಿ ಪರಿಶೀಲನೆ ನಡೆಸುವ ಬದಲು ಅಲೆಮಾರಿಗಳ ನೋವು ಸಂಕಷ್ಟಗಳನ್ನು ಅರಿಯಲು ಸ್ಥಳಗಳಿಗೆ ಬರಬೇಕು. ಸರ್ಕಾರಗಳು ಕೂಡ ಅಲೆ ಮಾರಿಗಳ ಸಮಸ್ಯೆಗಳನ್ನು ಆಲಿಸಬೇಕು. ಅಭಿವೃದ್ದಿ ನಿಗಮದಿಂದ ಸಾಲಪಡೆದು ಸಾಲಗಾರರಾಗುತ್ತಿದ್ದೇವೆಯೇ ಹೊರೆತು, ಶೈಕ್ಷಣಿಕವಾಗಿ ಅರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತಿಲ್ಲವೆಂದರು.1
- ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮನವಿ ಕೂಡ್ಲಿಗಿ: ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಂಗಳವಾರ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಮಕ್ಕಳ ಪೌಷ್ಟಿಕತೆ, ಆರೋಗ್ಯ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಗೌರವಧನ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಆದ್ದರಿಂದ ಸರ್ಕಾರ ಕೂಡಲೇ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ತಂದು, ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನೋಪಾಯಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಬಿ.ಎಲ್.ಓ. ಜವಾಬ್ದಾರಿ ಹೊರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಅಂಗನವಾಡಿ ಉದ್ಯೋಗಿಗಳಿಗೆ ನಿವೃತ್ತಿ ನಂತರದ ಜೀವನಕ್ಕೆ ಅನುಕೂಲವಾಗುವಂತೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿ, ಶೀಘ್ರವೇ ನ್ಯಾಯಯುತವಾಗಿ ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷೆ ಕೆ ಪದ್ಮಾವತಿ, ತಾಲೂಕ್ ಅಧ್ಯಕ್ಷರು ಎನ್ ಸುಮಾ, ಉಪಾಧ್ಯಕ್ಷರಾದ ಕೆಎನ್ ಕವಿತಾ, ಪಾರ್ವತಮ್ಮ, ಪ್ರಧನ ಕಾರ್ಯದರ್ಶಿ ಎಚ್ ಅನ್ನಪೂರ್ಣ, ಸಹ ಕಾರ್ಯದರ್ಶಿ ಬಿ ಪದ್ಮಾವತಿ, ಓ ಕರಿಬಸಮ್ಮ, ಖಜಾಂಚಿ ಜಯಮಾಲ ಜೆ, ಸಂಘಟನಾ ಕಾರ್ಯದರ್ಶಿ ಮೀನಾಕ್ಷಿ, ಸದಸ್ಯರಾದ ಬಿ ಶಿವಲೀಲಾ, ಜಿ ಗಾಯತ್ರಿ, ರೇಣುಕಮ್ಮ, ಎಚ್ಎಸ್ ಚಂದ್ರಮ್ಮ, ಎಬಿ ಬಸಮ್ಮ, ಓ ಸುಜಾತ, ಸುಮಲತಾ, ಬಿ ರೇಖಾ, ದ್ಯಾಮಕ್ಕ, ಸಿ.ಬಿ ಅನುಸೂಯ ಸೇರಿದಂತೆ ತಾಲೂಕಿನ ಅಂಗನವಾಡಿ ಕಾರ್ಯಕರ್ತರು, ಸಹಾಯಕರು ಉಪಸಿದ್ಧರಿದ್ದರು.1
- ಹಿರಿಯೂರು ತಾಲೂಕಿನ ರೈತರೊಂದಿಗೆ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ ಮಾಡಿದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ.1