Shuru
Apke Nagar Ki App…
*ಭಾರತ ನಲ್ಲಿ ವೈರಲ್*
Md Aleemulla Shariff
*ಭಾರತ ನಲ್ಲಿ ವೈರಲ್*
More news from ಕರ್ನಾಟಕ and nearby areas
- ಬೆಟ್ಟದರಸಮ್ಮನ ದೊಡ್ಡ ಜಾತ್ರೆ ಸಂಪನ್ನ ದೇವಿಗೆ ಪೂಜೆ ಸಲ್ಲಿಸಿದ ಅಪಾರ ಭಕ್ತರು ಹಲಗೂರು: ಗುಂಡಾಪುರದ ಬೆಟ್ಟ ದರಸಮ್ಮನ ದೊಡ್ಡ ಜಾತ್ರೆ ಮಂಗಳವಾರ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರಿಗೆ ಪೂಜೆ ಸಲ್ಲಿಸಿ ತಮಷ್ಟಾರ್ಥವನ್ನು ನೆರವೇರಿಸುವಂತೆ ಪ್ರಾರ್ಥಿಸಿ ದೇವರಿಗೆ ಪೂಜೆ ಸಲ್ಲಿಸಿದರು. ಮಾ. 4ನೇ ಬುದುವಾರದಿಂದ ಮೊದಲನೇ ಪೂಜೆಯಿಂದ ಪ್ರಾರಂಭಗೊಂಡ ಜಾತ್ರಾ ಮಹೋತ್ಸವ ದಿನನಿತ್ಯ ಪೂಜಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಮಂಗಳವಾರ ದೊಡ್ಡ ಜಾತ್ರೆಗೆ ವಿವಿಧ ಜಿಲ್ಲೆಗಳಿಂದ ಹಾಗೂ ರಾಜ್ಯದ್ಯಂತ ಅಪಾರ ಭಕ್ತಾದಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಮಂಗಳವಾರ ಸಾಯಂಕಾಲ ಗ್ರಾಮದ ಮಧ್ಯಭಾಗದಲ್ಲಿರುವ ಕರಗದ ಮನೆಯಲ್ಲಿ ದೇವರ ಕರಗಕ್ಕೆ ವಿವಿಧ ಪುಷ್ಪಗಳಿಂದ ಅಲಂಕರಿಸಿ ವಿಶೇಷ ಪೂಜೆಗಳು ನಡೆಸಿದ ನಂತರ ದೇವರಗುಡ್ಡರು ಹೆಬ್ಬಾರೆಯನ್ನು ಹೊತ್ತು ಗ್ರಾಮದ ಮನೆಗಳಿಗೆ ಹೋದಾಗ ಗೃಹಿಣಿಯರು ಹೆಬ್ಬಾರೆಗೆ ಪೂಜೆ ಸಲ್ಲಿಸಿ, ಅಚ್ಛಂದ ನೀಡುವುದು ವಾಡಿಕೆ ಅದನ್ನು ಪಡೆದ ದೇವರಗುಡ್ಡರು ಮತ್ತೆ ದೇವಸ್ಥಾನಕ್ಕೆ ಹೆಬ್ಬಾರೆಯನ್ನು ಹೊತ್ತು ಬರುತ್ತಾರೆ. ದೇವಿಗೆ ಪರದೇಶಿ ಕುಣಿತ ಎಂದರೆ ಬಹು ಅಚ್ಚುಮೆಚ್ಚು, ಬಾಳೆವನ್ನಿಗ ಗ್ರಾಮಸ್ಥರು ಅರಿದ ಬಟ್ಟೆಗಳನ್ನು ತೊಟ್ಟು ಗೋಣಿಚೀಲದಿಂದ ಬಟ್ಟೆಗಳನ್ನು ಮಾಡಿಕೊಂಡು ಕರಡಿ, ಹುಲಿ, ಹೆಣ್ಣಿನ ವೇಷಗಳನ್ನು ತೊಟ್ಟು ತೆಂಗಿನ ಗುದ್ದಮಟ್ಟೆಯಿಂದ ತಯಾರಿಸಿದ ಬಂದೂಕವನ್ನು ಹಿಡಿದು ಜೊತೆಯಲ್ಲಿ ಬೇವಿನಸೊಪ್ಪನ್ನು ಹಿಡಿದುಕೊಂಡು ಕುಣಿದು ಕುಪ್ಪಳಿಸಿಕೊಂಡು ದೇವಸ್ಥಾನದ ಹತ್ತಿರ ಬಂದಾಗ ಅರ್ಚಕರು ಅವರಿಗೆ ತೀರ್ಥ ಹಾಕಿ ಬರಮಾಡಿಕೊಳ್ಳುತ್ತಾರೆ ನಂತರ ಬೆಟ್ಟದರಸಮ್ಮನ ದೇವರ ಕರಗವನ್ನು ಹೊತ್ತ ಅರ್ಚಕರಾದ ವೀರಭದ್ರಪ್ಪ ಮಡಿವಾಳ ಹಾಸಿದ ಮಡಿಯ ಮೇಲೆ ನಡೆಯುವಾಗ ಜೊತೆಯಲ್ಲಿ ಕಳಸ ಹೊತ್ತ ಮುತ್ತೈದೆಯರು ಹರಕೆ ಹೊತ್ತುಕೊಂಡಿದ್ದ ಬಾಯಿ ಬೀಗದವರು ಬೇವಿನ ಸೊಪ್ಪು, ಗಂಧದಕಡ್ಡಿ ಹಿಡಿದು ದೇವರ ಜೊತೆಯಲ್ಲಿ ಮೂರು ಬಸಪ್ಪಗಳು ನಡುವೆ ಬೆಟ್ಟದ ತಪ್ಪಲಿನಲ್ಲಿರುವ ಬೆಟ್ಟದರಸಮ್ಮನ ಸನ್ನಿಧಿಗೆ ಕರಗವನ್ನು ಹೊತ್ತು ಮೆರವಣಿಗೆಯಲ್ಲಿ ಅಪಾರ ಭಕ್ತಾದಿಗಳ ನಡುವೆ ಸಂಜೆ ಆರು ಗಂಟೆಯ ನಂತರ ದೇವಸ್ಥಾನ ತಲುಪಿತು. ಅಲ್ಲಿ ಮತ್ತೆ ಪೂಜೆ ಪುನಸ್ಕಾರಗಳು ನಡೆಸಿದ ನಂತರ ಅದೇ ದಿನ ರಾತ್ರಿ ಮತ್ತೆ ಕರಗವನ್ನು ಹೊತ್ತು ಗ್ರಾಮದ ಕರಗದ ಮನೆಗೆ ದೇವರ ಕರಗವನ್ನು ತರುವಾಗ ಮುತ್ತೈದೆಯರು ತಂಬಿಟ್ಟಿನ ಆರತಿ ಎತ್ತಿ ಪೂಜೆ ಸಲ್ಲಿಸಿದ ಮೇಲೆ ದೇವರು ಕರಗದ ಮನೆಗೆ ಕರಗವನ್ನು ಕೊಂಡಯಾಲಾಯಿತು. ಈ ಸಂದರ್ಭದಲ್ಲಿ ಭಕ್ತರು ಪಂಜಿನ ಸೇವೆ ಹಾಗೂ ತಮ್ಮ ದನಕರುಗಳನ್ನು ಹಿಡಿದುಕೊಂಡು ಬಂದು ಊರ್ಜಿ ಆಡಿಸುವ ಕಾರ್ಯಕ್ರಮಗಳು ಬಹು ಸೊಗಸಾಗಿ ನಡೆಯಿತು. ಹಲಗೂರು, ಗುಂಡಾಪುರ, ಕೆಂಪಯ್ಯನ ದೊಡ್ಡಿ, ನಂದಿಪುರ, ಹೆಚ್.ಬಸಾಪುರ, ದಳವಾಯಿ ಕೋಡಿಹಳ್ಳಿ, ದೇವಿರಹಳ್ಳಿ, ಬಾಳೆಹೊನ್ನಿಗ, ಹಗಾದೂರು, ಬಸವನಹಳ್ಳಿ, ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಹೆಚ್ಚು ಭಕ್ತಾದಿಗಳು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಜಾತ್ರೆಯ ದಿವಸ ಭಕ್ತಾದಿಗಳು ಎತ್ತಿನಗಾಡಿಯಲ್ಲಿ ಬೆಲ್ಲದ ಪಾನಕ, ಮಜ್ಜಿಗೆ ಮಾಡಿಕೊಂಡು ಜಾತ್ರೆಗೆ ಬರುವ ಭಕ್ತಾದಿಗಳಿಗೆ ಬಿಸಿಲಿನ ತಾಪವನ್ನು ನೀಗಿಸಲು ಹರಕೆ ಹೊತ್ತುಕೊಂಡ ಭಕ್ತರು ಹಂಚುತ್ತಾರೆ.ಹಾಗೂ ಮುತ್ತೈದೆಯರು ಅರಿಶಿನ ಕುಂಕುಮ ನೀಡಿ ವಿನಿಮಯ ಮಾಡಿಕೊಂಡು ಹೆಸರುಬೇಳೆ, ಪಾನಕ ನೀಡಿದರು. ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಮಂಗಳವಾರ ಗುಂಡಾಪುರದ ಜಾತ್ರೆಯ ದಿನವಾದ ಮಂಗಳವಾರ ದೇವರ ಸನ್ನಿಧಿಗೆ ಬಂದು ಪೂಜೆ ಸಲ್ಲಿಸಿದರು.. ಅರ್ಚಕರಾದ ವೀರತಪ್ಪ ಮಾತನಾಡಿ ನಮ್ಮ ಗ್ರಾಮದ ದೇವತೆಯಾದ ಬೆಟ್ಟದರಸಮ್ಮನ ಜಾತ್ರಾ ಮಹೋತ್ಸವ ಅಂಗವಾಗಿ ಒಂದು ವಾರಗಳ ಕಾಲ ನಡೆದ ಜಾತ್ರೆಯಲ್ಲಿ ಸಹಸ್ರಾರು ಭಕ್ತಾದಿಗಳು ಬಂದು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪುನೀತರಾಗಿದ್ದಾರೆ. ದೊಡ್ಡ ಜಾತ್ರೆಯ ಮಂಗಳವಾರ ಸಾಯಂಕಾಲ ಕರಗದ ಮನೆಯಿಂದ ದೇವರು ಮೂಲ ಸನ್ನಿಧಿಗೆ ದೇವರ ಕರಗವನ್ನು ತರಲಾಯಿತು. ಸುಮಾರು 25 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಬೆಳಿಗ್ಗೆಯಿಂದಲೇ ಪೂಜೆ ಪುನಸ್ಕಾರಗಳನ್ನು ಸಲ್ಲಿಸಿದರೆ. ಗುಂಡಾಪುರ ಸೇರಿದಂತೆ ಒಂಬತ್ತು ಹಳ್ಳಿಗಳ ಗ್ರಾಮಸ್ಥರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಿದ್ದಾರೆ. ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಕಾರದಿಂದ ಯಾವುದೇ ವಿಘ್ನವಿಲ್ಲದೆ ಜಾತ್ರೆ ಮಹೋತ್ಸವ ನಡೆದಿರುತ್ತದೆ ಎಂದು ಅರ್ಚಕರಾದ ವೀರ ತಪ್ಪ ತಿಳಿಸಿದರು. ಈ ಸಂದರ್ಭದಲ್ಲಿ ಅರ್ಚಕರುಗಳಾದ ರಮೇಶ್, ಮಹಾದೇವಪ್ಪ, ಪುಟ್ಟಮಲ್ಲಪ್ಪ, ಚಂದ್ರು ಸೇರಿದಂತೆ ಇತರರು ದೇವರ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಮುಂಜಾಗ್ರತೆಯ ಕ್ರಮವಾಗಿ ಹಿರಿಯ ಪೊಲೀಸ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್ ಮತ್ತು ಸಬ್ ಇನ್ಸ್ಪೆಕ್ಟರ್ ಲೋಕೇಶ್ ಬಿಗಿ ಬಂದೂಬಸ್ತ್ ಏರ್ಪಡಿಸಿದ್ದರು. 10 hgr1 ಬೆಟ್ಟದ ತಪ್ಪಲ್ಲಿನ ದೇವಸ್ಥಾನಕ್ಕೆ ದೇವರು ಬರುತ್ತಿರುವುದು. 10hgr2 ದೇವರಿಗೆ ಪ್ರಿಯವಾದ ಪರದೇಶಿ ಕುಣಿತದಲ್ಲಿ ಬಾಳೆಹೂನ್ನಿಗ ಗ್ರಾಮಸ್ಥರು ತೊಡಗಿರುವುದು. 10hgr3 ದೇವರ ಮೆರವಣಿಗೆ ಬರುವುದನ್ನು ನೋಡಲು ಕಾದು ಕೋಳಿತ ಭಕ್ತರು. 10hgr41
- ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಚಾರಿಸುವ ಮಾರ್ಗ ಆನೆ ತಲೆ ತಿಂಬ ಬಳಿ ಮತ್ತೆ ಚಿರತೆಯೊಂದು ಕಾಣಿಸಿಕೊಂಡಿದ್ದು ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಚರಿಸುವ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಯವಿತರಾಗಿದ್ದು, ಅರಣ್ಯ ಇಲಾಖೆಯವರು ಚಿರತೆಯನ್ನ ಸೆರೆ ಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.1
- ಪೀಣ್ಯದ ಮೆಟ್ರೋ ನಿಲ್ದಾಣದ ಬಳಿ ಆಟೋ ಚಾಲಕರಿಬ್ಬರು ಪರಸ್ಪರ ಪಾರ್ಕಿಂಗ್ ಗೋಸ್ಕರ ಮಾತಿನ ಚಕಮಕಿ ನಡೆಸಿದ್ದಾರೆ, ಒಬ್ಬ ಅಟೋ ಚಾಲಕ ಅವಾಚ್ಯಪದಗಳನ್ನು ಉಪಯೋಗಿಸಿ ನಿಂದಿಸಿದ್ದಾನೆ, RMC ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.1
- ವಾರ್ಡ್ ನೊಂ 22 ರಲ್ಲಿ ಮೂವತ್ತು ಲಕ್ಷ ಕಾಮಗಾರಿ ಗೆ ಚಾಲನೆ ನೀಡಿದ ರಫಿ1
- Post by SUDHUR CHAULANI NEWS1
- *ವಿಪತ್ತು ನಿರ್ವಹಣೆ ಅರಿವು ಅಗತ್ಯ: ಎಡಿಸಿ ಸೈಯಿದಾ ಆಯಿಷಾ* ಆಕಸ್ಮಿಕವಾಗಿ ಸಂಭವಿಸುವ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ಸಮನ್ವಯ ಇಲಾಖೆಗಳು ಸದಾ ಸಿದ್ಧರಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಜಿಂದಾಲ್ ಅಲ್ಯುಮಿನಿಯಂ ಲಿಮಿಟೆಡ್ ಹಾಗೂ ಗ್ಯೇಲ್ ಗ್ಯಾಸ್ ಲಿಮಿಟೆಡ್ ರವರ ಸಹಯೋಗದೊಂದಿಗೆ ನೆಲಮಂಗಲ ತಾಲ್ಲೂಕಿನ ದಾಬಸ್ ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್(JINDAL ALUMINIUM LTD) ಕಾರ್ಖಾನೆಯಲ್ಲಿ ನಡೆದ 'ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನವನ್ನು ಉದ್ದೇಶಿಸಿ ಅವರು ಮಾತನಾಡಿದರು. ನೈಸರ್ಗಿಕ ವಿಕೋಪಗಳ, ಅಪಾಯಕಾರಿ ಕಾರ್ಖಾನೆಗಳಲ್ಲಿ ಆಗುವಂತಹ ದುರಂತ, ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ಸಮನ್ವಯ ಇಲಾಖೆ ಅಧಿಕಾರಿಗಳಿಗೆ ಅರಿವು ಇರಬೇಕು. ಕಾರ್ಖಾನೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಯಾವುದೇ ಸಂದರ್ಭ ಬಂದರೂ ಕೂಡ ಸಮನ್ವಯ ಇಲಾಖೆಗಳು ಸದಾ ಸನ್ನದ್ಧವಾಗಿರಬೇಕು ಎಂದರು. *ನೈಜ ಘಟನೆಯಂತೆ ರಾಸಾಯನಿಕ ಸೋರಿಕೆ ಮಾಕ್ ಡ್ರಿಲ್* ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್(JINDAL ALUMINIUM LTD) ಕಾರ್ಖಾನೆಯಲ್ಲಿ ನೈಜ ಘಟನೆಯಂತೆ 'ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಏರ್ಪಡಿಸಲಾಗಿತ್ತು. ಅದರಂತೆ ಕಾರ್ಖಾನೆ ಆವರಣದಲ್ಲಿ ಅಣಕು ಡ್ರಿಲ್ ಸಂಕೀರ್ಣ ಕೈಗಾರಿಕಾ ತುರ್ತು ಸನ್ನಿವೇಶವನ್ನು ಅನುಕರಿಸಿತು, ಇದರಲ್ಲಿ ಉತ್ಖನನ ಕೆಲಸದ ಸಮಯದಲ್ಲಿ PNG ಪೈಪ್ಲೈನ್ ಆಕಸ್ಮಿಕವಾಗಿ ಹಾನಿಗೊಳಗಾಯಿತು, ಇದರ ಪರಿಣಾಮವಾಗಿ ಅನಿಲ ಸೋರಿಕೆ ಮತ್ತು ಸ್ಥಿರ ದಹನದಿಂದಾಗಿ ನಂತರದ ಬೆಂಕಿ ಉಂಟಾಯಿತು. ಅದೇ ಸಮಯದಲ್ಲಿ, LPG ನಿಲ್ದಾಣದಲ್ಲಿ LPG ಟ್ಯಾಂಕರ್ ಇಳಿಸುವ ಕಾರ್ಯಾಚರಣೆಯಲ್ಲಿ ಮೆದುಗೊಳವೆ ಸೋರಿಕೆ ಉಂಟಾಯಿತು, ಇದು ನಂತರ ಉಗಿ ಮೋಡವನ್ನು ರೂಪಿಸಿತು, ಇದು ಆವಿ ಮೋಡ ಸ್ಫೋಟಕ್ಕೆ (VCE) ಕಾರಣವಾಯಿತು. ಪ್ರಥಮ ಚಿಕಿತ್ಸೆ ಅಗತ್ಯವಿರುವ 05 ಜನರು, ಗಂಭೀರ ಸುಟ್ಟ ಗಾಯಗಳೊಂದಿಗೆ 05 ಜನರು ಮತ್ತು 10 ಜನರು ಸಾವನ್ನಪ್ಪಿದ್ದಾರೆ ಎಂದು ಬಂಬಿಸಲಾಗಿದೆ. ತಕ್ಷಣ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ರವಾನಿಸಲಾಗಿದೆ. ಎನ್.ಡಿ.ಆರ್.ಎಫ್, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ತಕ್ಷಣ ಕಾರ್ಯೋನ್ಮುಖವಾಗಿ ಸುಮಾರು 400 ರಿಂದ 500 ಕಾರ್ಮಿಕರನ್ನು ರಕ್ಷಿಸಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಕಾರ್ಖಾನೆಗಳಲ್ಲಿ ಘಟಿಸುವ ರಾಸಾಯನಿಕ ಸೋರಿಕೆಯಂತಹ ಘಟನೆಯಿಂದ ಕಾರ್ಖಾನೆ ಸಿಬ್ಬಂದಿಗೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಸಾರ್ವಜನಿಕರಿಗೆ ಹಾನಿ ಸಂಭವಿಸುತ್ತದೆ. ಇಂತಹ ಸಂದರ್ಭದಲ್ಲಿ ಮುನ್ನೆಚ್ಚರಿಕೆ, ನಿರ್ವಹಣೆ ಮಾಡುವ ಜ್ಞಾನ ಅಧಿಕಾರಿ, ಸಿಬ್ಬಂದಿಗಳಿಗೆ, ಕಾರ್ಖಾನೆಗಳಿಗೆ ಇರಬೇಕು.ಭೂಪಾಲ್ ಅನಿಲ ದುರಂತ ನಂತರ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕಾರ್ಖಾನೆಗಳಲ್ಲಿ, ಸಾರ್ವಜನಿಕರಿಗೆ ಅರಿವು ಮಾಡಿಸುವ ಸಲುವಾಗಿ ಕಾಲಕಾಲಕ್ಕೆ ಅಣುಕು ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು. ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ. ಕಾರ್ಖಾನೆಗಳ ಜಂಟಿ ನಿರ್ದೇಶಕ ಪಾರ್ಥಸಾರಥಿ, ಉಪನಿರ್ದೇಶಕರಾದ ನರಸಿಂಹ ಮೂರ್ತಿ, ತಿಮ್ಮರಾಜು; ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ನಿಂದ ಮುಖ್ಯಸ್ಥರಾದ ವಿಕ್ರಮ್ ಶರ್ಮಾ, ಎಂ. ಸತೇಶ್ ಕುಮಾರ್, ವಿಪತ್ತು ನಿರ್ವಹಣಾ ಪರಿಣಿತರಾದ ಸ್ಮಿತಾ, ಎನ್.ಡಿ.ಆರ್.ಎಫ್, ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.1
- Post by SUDHUR CHAULANI NEWS1
- ನೆಲಮಂಗಲ ಕೂದಲು ವ್ಯಾಪಾರಕ್ಕೆ ಬಂದು ಮಕ್ಕಳ ಕಳ್ಳತನಕ್ಕೆ ಯತ್ನ ಅರೋಪ ಮಕ್ಕಳು ಕಳ್ಳರೆಂದು ಕೂದಲು ವ್ಯಾಪಾರಿಗಳನ್ನ ಹಿಡಿದು ಬಡಿದ ಜನ! ಕೂದಲು ವ್ಯಾಪಾರ ವೇಳೆ ಮಗುವಿನ ಕೈ ಹಿಡಿದು ಎಳೆದದಾಟ ಆರೋಪ ಮಗು ಕಿರುಚುತ್ತಿದ್ದಂತೆ ಗ್ರಾಮಸ್ಥರು ಸುತ್ತುವರೆದು ಬಡಿದಾಟ ಕೂದಲು ವ್ಯಾಪಾರಿಗಳು ಹಾಗೂ ಗ್ರಾಮದ ಮಹಿಳೆಯರ ನಡುವೆ ಮಾರಾಮಾರಿ ನೆಲಮಂಗಲ ಟೌನ್ ಜಕ್ಕಸಂದ್ರ ಗ್ರಾಮದಲ್ಲಿ ಘಟನೆ ಕೂದಲು ವಿಚಾರಕ್ಕೆ ಜಗಳ ತೆಗೆದು ಸುಳ್ಳುಹೇಳುತ್ತಿದ್ದಾರೆ ಎನ್ನುವ ಕೂದಲು ವ್ಯಾಪಾರಿಗಳು ಕಣ್ಣಾರೆ ನೋಡಿದ್ದೀವಿ ಇವರು ಮಕ್ಕಳು ಕಳ್ಳರು ಎಂದು ಪೋಷಕರ ಆರೋಪ ಸದ್ಯ ಕೂದಲು ವ್ಯಾಪಾರಿಗಳನ್ನ ವಶಕ್ಕೆ ಪಡೆದಿರುವ ನೆಲಮಂಗಲ ಪೊಲೀಸರು ನೆಲಮಂಗಲ ಟೌನ್ ಪೊಲೀಸರಿಂದ ವ್ಯಾಪಾರಿಗಳ ವಿಚಾರಣೆ.1
- ಜಿಲ್ಲಾಧಿಕಾರಿ ಗೌರಿಬಿನಲ್ ನಗರಸಭೆಗೆ ದಿಡೀರ್ ಬೇಟಿ2