logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೈಸೂರಿನಲ್ಲಿ ಕಾಯಕ ಸಮುದಾಯಗಳ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಿಜೆಪಿಗೆ ಕೃತಜ್ಞತಾ ಸಮರ್ಪಣಾ ಸಮಾರಂಭ ಹಾಗೂ ಶ್ರೀ ರಘು ಆರ್‌. ಕೌಟಿಲ್ಯ ಅವರಿಗೆ ಅಭಿನಂದನಾ ಸಮಾರಂಭವನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಶ್ರೀ ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಹಾಗೂ ಹಾಲಿ ಸಂಸದರಾದ ಶ್ರೀ ಗೋವಿಂದ ಕಾರಜೋಳ, ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ಮತ್ತು ಶ್ರೀ ಪಿ.ಸಿ. ಮೋಹನ್ ಅವರು ಭಾಗವಹಿಸಿದ್ದರು. ಇವರೊಂದಿಗೆ ಶಾಸಕ ಶ್ರೀ ಟಿ.ಎಸ್. ಶ್ರೀವತ್ಸ, ಮಾಜಿ ಸಚಿವರುಗಳಾದ ಶ್ರೀ ಬಿ.ಶ್ರೀರಾಮುಲು, ಶ್ರೀ ಎನ್.ಮಹೇಶ್, ಮಾಜಿ ಸಂಸದ ಶ್ರೀ ಪ್ರತಾಪ ಸಿಂಹ, ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀ ಎಲ್. ನಾಗೇಂದ್ರ ಮತ್ತು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀ ಕೆ.ಎನ್. ಸುಬ್ಬಣ್ಣ ಅವರು ಉಪಸ್ಥಿತರಿದ್ದರು. ಅಲ್ಲದೆ ಮಾಜಿ ಶಾಸಕರುಗಳಾದ ಶ್ರೀ ಬಿ. ಹರ್ಷವರ್ಧನ್, ಶ್ರೀ ಬಾಲರಾಜ್ ಸೇರಿದಂತೆ ಹಲವು ಪ್ರಮುಖರು, ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ವಿಶೇಷವಾಗಿ ಕಾಯಕ ಸಮುದಾಯಗಳ ಬಂಧುಗಳು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

3 hrs ago
user_ಸುನೀಲ್ ಲ್ ಬೆಟಗೇರಿ
ಸುನೀಲ್ ಲ್ ಬೆಟಗೇರಿ
Spa ಹಾವೇರಿ, ಹಾವೇರಿ, ಕರ್ನಾಟಕ•
3 hrs ago
d3b3cef1-9892-4dba-9a60-ef523288076b

ಮೈಸೂರಿನಲ್ಲಿ ಕಾಯಕ ಸಮುದಾಯಗಳ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಿಜೆಪಿಗೆ ಕೃತಜ್ಞತಾ ಸಮರ್ಪಣಾ ಸಮಾರಂಭ ಹಾಗೂ ಶ್ರೀ ರಘು ಆರ್‌. ಕೌಟಿಲ್ಯ ಅವರಿಗೆ ಅಭಿನಂದನಾ ಸಮಾರಂಭವನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ

581e7c8b-3e62-4c52-961a-765acf9fb5da

ಶ್ರೀ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಶ್ರೀ ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಹಾಗೂ ಹಾಲಿ ಸಂಸದರಾದ ಶ್ರೀ ಗೋವಿಂದ ಕಾರಜೋಳ, ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ಮತ್ತು ಶ್ರೀ ಪಿ.ಸಿ. ಮೋಹನ್ ಅವರು ಭಾಗವಹಿಸಿದ್ದರು.

8e3aed77-ecd3-46af-b657-bb1e61aa3d6a

ಇವರೊಂದಿಗೆ ಶಾಸಕ ಶ್ರೀ ಟಿ.ಎಸ್. ಶ್ರೀವತ್ಸ, ಮಾಜಿ ಸಚಿವರುಗಳಾದ ಶ್ರೀ ಬಿ.ಶ್ರೀರಾಮುಲು, ಶ್ರೀ ಎನ್.ಮಹೇಶ್, ಮಾಜಿ ಸಂಸದ ಶ್ರೀ ಪ್ರತಾಪ ಸಿಂಹ, ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀ ಎಲ್. ನಾಗೇಂದ್ರ ಮತ್ತು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀ ಕೆ.ಎನ್.

30c140e1-d98f-4cf3-a3f6-72822755fbf8

ಸುಬ್ಬಣ್ಣ ಅವರು ಉಪಸ್ಥಿತರಿದ್ದರು. ಅಲ್ಲದೆ ಮಾಜಿ ಶಾಸಕರುಗಳಾದ ಶ್ರೀ ಬಿ. ಹರ್ಷವರ್ಧನ್, ಶ್ರೀ ಬಾಲರಾಜ್ ಸೇರಿದಂತೆ ಹಲವು ಪ್ರಮುಖರು, ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ವಿಶೇಷವಾಗಿ ಕಾಯಕ ಸಮುದಾಯಗಳ ಬಂಧುಗಳು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

More news from ಕರ್ನಾಟಕ and nearby areas
  • ಹಾವೇರಿಯ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಹಾವೇರಿ ಜಿಲ್ಲಾ ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ ಜರುಗಿತು. ಈ ಸಭೆಯಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಕೇಂದ್ರ ಸಚಿವ ಪ್ರಲ್ಹಾದ‌ ಜೋಶಿ, ಮಾಜಿ ಶಾಸಕರುಗಳಾದ ಶಿವರಾಜ ಸಜ್ಜನ, ಅರುಣಕುಮಾರ ಪೂಜಾರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ವಿ.ಸಂಕನೂರ ಮತ್ತು ಶ್ರೀ ಲಿಂಗರಾಜ ಪಾಟೀಲ್ ಉಪಸ್ಥಿತರಿದ್ದರು. ಇವರೊಂದಿಗೆ ಪಕ್ಷದ ಮುಖಂಡರುಗಳಾದ ದತ್ತಾತ್ರೇಯ, ಭರತ ಬೊಮ್ಮಾಯಿ, ಡಾ. ಬಸವರಾಜ ಕೇಲಗಾರ, ಜಯತೀರ್ಥ ಕಟ್ಟಿ, ಡಿ.ಎಸ್ ಮಾಳಗಿ ಹಾಗೂ ಗವಿಸಿದ್ದಪ್ಪ ದ್ಯಾಮಣ್ಣವರ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಮುಖಂಡರು ಭಾಗವಹಿಸಿದ್ದರು.
    1
    ಹಾವೇರಿಯ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಹಾವೇರಿ ಜಿಲ್ಲಾ ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ ಜರುಗಿತು. ಈ ಸಭೆಯಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಕೇಂದ್ರ ಸಚಿವ ಪ್ರಲ್ಹಾದ‌ ಜೋಶಿ, ಮಾಜಿ ಶಾಸಕರುಗಳಾದ ಶಿವರಾಜ ಸಜ್ಜನ, ಅರುಣಕುಮಾರ ಪೂಜಾರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ವಿ.ಸಂಕನೂರ ಮತ್ತು ಶ್ರೀ ಲಿಂಗರಾಜ ಪಾಟೀಲ್ ಉಪಸ್ಥಿತರಿದ್ದರು. ಇವರೊಂದಿಗೆ ಪಕ್ಷದ ಮುಖಂಡರುಗಳಾದ ದತ್ತಾತ್ರೇಯ, ಭರತ ಬೊಮ್ಮಾಯಿ, ಡಾ. ಬಸವರಾಜ ಕೇಲಗಾರ, ಜಯತೀರ್ಥ ಕಟ್ಟಿ, ಡಿ.ಎಸ್ ಮಾಳಗಿ ಹಾಗೂ ಗವಿಸಿದ್ದಪ್ಪ ದ್ಯಾಮಣ್ಣವರ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಮುಖಂಡರು ಭಾಗವಹಿಸಿದ್ದರು.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    4 hrs ago
  • ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಎಪಿಎಮ್‌ಸಿ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಕುಕನೂರು ತಾಲೂಕು ಘಟಕ, ಯುವ ಘಟಕ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳ ಪದಗ್ರಹಣ, ಆದೇಶ ಪತ್ರ ಹಾಗೂ ಸದಸ್ಯತ್ವ ಕಾರ್ಡ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ ಅವರು, ಬಣಜಿಗ ಸಮಾಜದ ಏಳಿಗೆಗಾಗಿ ಪ್ರತಿಯೊಬ್ಬ ವ್ಯಕ್ತಿಯೂ ಏಕತೆಯಿಂದ ಮುನ್ನಡೆದಾಗ ಮಾತ್ರ ನಮ್ಮ ಸಮಾಜ ಬಲವರ್ಧನೆಗೊಂಡು ಉನ್ನತ ಸ್ಥಿತಿಗೆ ಏರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಸಂಘಟನೆಯಲ್ಲಿ ಯಾರೂ ಮೇಲು-ಕೀಳು ಎಂಬ ಭಿನ್ನಾಭಿಪ್ರಾಯ ಹೊಂದಬಾರದು ಹಾಗೂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿರುವವರು ಅಹಂಕಾರದಿಂದ ನಡೆದುಕೊಳ್ಳದೆ ಸಮಾಜದ ಸೇವಕರಾಗಿ ಕೆಲಸ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಬಂಗಾರ ಶೆಟ್ರು ಮಾತನಾಡಿ, ಒಳಜಗಳ ಮರೆತು ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಬಣಜಿಗ ಸಮಾಜವು ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಬಸವತತ್ವ ಮತ್ತು ಲಿಂಗಾಯತ ಧರ್ಮದ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಈ ಸಮಾಜದ ಧ್ಯೇಯಗಳನ್ನು ಉಳಿಸಿ ಬೆಳೆಸಲು ಸಮಾಜದ ಯುವಕರು ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು. ಇದೇ ವೇಳೆ ರಾಜ್ಯ ಕಾರ್ಯಕಾರಣಿ ಸದಸ್ಯ ಅಂದಾನಪ್ಪ ಅಂಗಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಶ್ವನಾಥ್ ಮಳಗಿ ಹಾಗೂ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಂಗಣ್ಣ ತೆಂಗಿನಕಾಯಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ಬಸವರಾಜ ಜೋಳದ, ವಿಜಯಕುಮಾರ ಕರಡಿ, ಪ್ರಭು ಹೊಸಅಂಗಡಿ, ಶರಣಪ್ಪ ಗದಗಿನ, ಈಶಪ್ಪ ಅಂಗಡಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಶರಣಪ್ಪ ಅಂಗಡಿ, ಜಿಲ್ಲಾ ಮಾಧ್ಯಮ ಪ್ರತಿನಿಧಿ ಮಂಜುನಾಥ ಅಂಗಡಿ, ಮಹಿಳಾ ನಿಯೋಜಿತ ಅಧ್ಯಕ್ಷೆ ಅಕ್ಕಮ್ಮ ಅಂಗಡಿ ಸೇರಿದಂತೆ ಬಣಜಿಗ ಸಮಾಜದ ಹಿರಿಯರು, ಮಹಿಳೆಯರು ಮತ್ತು ಯುವಕರು ಪಾಲ್ಗೊಂಡಿದ್ದರು. ಸಿ.ಎಸ್. ಅಂಗಡಿ ಕಾರ್ಯಕ್ರಮ ನಿರೂಪಿಸಿದರು.
    2
    ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಎಪಿಎಮ್‌ಸಿ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಕುಕನೂರು ತಾಲೂಕು ಘಟಕ, ಯುವ ಘಟಕ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳ ಪದಗ್ರಹಣ, ಆದೇಶ ಪತ್ರ ಹಾಗೂ ಸದಸ್ಯತ್ವ ಕಾರ್ಡ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ ಅವರು, ಬಣಜಿಗ ಸಮಾಜದ ಏಳಿಗೆಗಾಗಿ ಪ್ರತಿಯೊಬ್ಬ ವ್ಯಕ್ತಿಯೂ ಏಕತೆಯಿಂದ ಮುನ್ನಡೆದಾಗ ಮಾತ್ರ ನಮ್ಮ ಸಮಾಜ ಬಲವರ್ಧನೆಗೊಂಡು ಉನ್ನತ ಸ್ಥಿತಿಗೆ ಏರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಸಂಘಟನೆಯಲ್ಲಿ ಯಾರೂ ಮೇಲು-ಕೀಳು ಎಂಬ ಭಿನ್ನಾಭಿಪ್ರಾಯ ಹೊಂದಬಾರದು ಹಾಗೂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿರುವವರು ಅಹಂಕಾರದಿಂದ ನಡೆದುಕೊಳ್ಳದೆ ಸಮಾಜದ ಸೇವಕರಾಗಿ ಕೆಲಸ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಬಂಗಾರ ಶೆಟ್ರು ಮಾತನಾಡಿ, ಒಳಜಗಳ ಮರೆತು ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಬಣಜಿಗ ಸಮಾಜವು ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಬಸವತತ್ವ ಮತ್ತು ಲಿಂಗಾಯತ ಧರ್ಮದ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಈ ಸಮಾಜದ ಧ್ಯೇಯಗಳನ್ನು ಉಳಿಸಿ ಬೆಳೆಸಲು ಸಮಾಜದ ಯುವಕರು ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು.

ಇದೇ ವೇಳೆ ರಾಜ್ಯ ಕಾರ್ಯಕಾರಣಿ ಸದಸ್ಯ ಅಂದಾನಪ್ಪ ಅಂಗಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಶ್ವನಾಥ್ ಮಳಗಿ ಹಾಗೂ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಂಗಣ್ಣ ತೆಂಗಿನಕಾಯಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ಬಸವರಾಜ ಜೋಳದ, ವಿಜಯಕುಮಾರ ಕರಡಿ, ಪ್ರಭು ಹೊಸಅಂಗಡಿ, ಶರಣಪ್ಪ ಗದಗಿನ, ಈಶಪ್ಪ ಅಂಗಡಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಶರಣಪ್ಪ ಅಂಗಡಿ, ಜಿಲ್ಲಾ ಮಾಧ್ಯಮ ಪ್ರತಿನಿಧಿ ಮಂಜುನಾಥ ಅಂಗಡಿ, ಮಹಿಳಾ ನಿಯೋಜಿತ ಅಧ್ಯಕ್ಷೆ ಅಕ್ಕಮ್ಮ ಅಂಗಡಿ ಸೇರಿದಂತೆ ಬಣಜಿಗ ಸಮಾಜದ ಹಿರಿಯರು, ಮಹಿಳೆಯರು ಮತ್ತು ಯುವಕರು ಪಾಲ್ಗೊಂಡಿದ್ದರು. ಸಿ.ಎಸ್. ಅಂಗಡಿ ಕಾರ್ಯಕ್ರಮ ನಿರೂಪಿಸಿದರು.
    user_ಚನ್ನಯ್ಯ ಹಿರೇಮಠ ಕುಕನೂರು
    ಚನ್ನಯ್ಯ ಹಿರೇಮಠ ಕುಕನೂರು
    Koppal, Karnataka•
    1 hr ago
  • ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಸೋಲಾರ್ ಮತ್ತು ವಿಂಡ್ ಪವರ್ ಕಂಪನಿಗಳಿಂದ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಕೋಟಿ ಕೋಟಿ ತೆರಿಗೆ ವಂಚನೆಯಾಗುತ್ತಿದೆ ಮತ್ತು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ. ಈ ಹಗರಣದಲ್ಲಿ ತಾಲೂಕು ಆಡಳಿತ ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗಿದೆ. ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರು, ಕ್ಷೇತ್ರದಲ್ಲಿ ಅನೇಕ ಕಂಪನಿಗಳು ಅನಧಿಕೃತವಾಗಿ ತಲೆ ಎತ್ತಿದ್ದು, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರಿದ್ದಾರೆ. ಈ ಬಗ್ಗೆ ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರೂ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ. ರೈತರಿಗೆ ಅನ್ಯಾಯವಾಗುತ್ತಿದ್ದರೂ ತಾಲೂಕು ಆಡಳಿತ ಮೌನವಾಗಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಈ ಹಗರಣದಲ್ಲಿ ಸ್ಥಳೀಯ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳ ಆದಾಯದ ಕುರಿತು ಮೊದಲು ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ, ಜಾರಿ ನಿರ್ದೇಶನಾಲಯ (ED), ಸಿಬಿಐ (CBI), ಸಿಒಡಿ (COD), ಎಸಿಬಿ (ACB) ಮತ್ತು ಆದಾಯ ತೆರಿಗೆ ಇಲಾಖೆಯ ಉನ್ನತಾಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ. ಒಂದು ವೇಳೆ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಮತ್ತು ಅಗತ್ಯ ಸಾಕ್ಷ್ಯಗಳೊಂದಿಗೆ ಕಾನೂನು ಹೋರಾಟ ಮಾಡುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ದಲಿತ ಮುಖಂಡ ಸಂತೋಷಕುಮಾರ, ವಕೀಲ ಮತ್ತು ಹೋರಾಟಗಾರ ಸೂಲದಳ್ಳಿ ಬಸವರಾಜಪ್ಪ, ರೈತ ಸಂಘದ ಯುವ ಮುಖಂಡ ಬಾಣದ ಮಾರುತಿ ಮತ್ತು ವಿವಿಧ ಗ್ರಾಮಗಳ ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.
    4
    ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಸೋಲಾರ್ ಮತ್ತು ವಿಂಡ್ ಪವರ್ ಕಂಪನಿಗಳಿಂದ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಕೋಟಿ ಕೋಟಿ ತೆರಿಗೆ ವಂಚನೆಯಾಗುತ್ತಿದೆ ಮತ್ತು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ. ಈ ಹಗರಣದಲ್ಲಿ ತಾಲೂಕು ಆಡಳಿತ ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗಿದೆ.

ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರು, ಕ್ಷೇತ್ರದಲ್ಲಿ ಅನೇಕ ಕಂಪನಿಗಳು ಅನಧಿಕೃತವಾಗಿ ತಲೆ ಎತ್ತಿದ್ದು, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರಿದ್ದಾರೆ. ಈ ಬಗ್ಗೆ ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರೂ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ. ರೈತರಿಗೆ ಅನ್ಯಾಯವಾಗುತ್ತಿದ್ದರೂ ತಾಲೂಕು ಆಡಳಿತ ಮೌನವಾಗಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಈ ಹಗರಣದಲ್ಲಿ ಸ್ಥಳೀಯ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳ ಆದಾಯದ ಕುರಿತು ಮೊದಲು ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ, ಜಾರಿ ನಿರ್ದೇಶನಾಲಯ (ED), ಸಿಬಿಐ (CBI), ಸಿಒಡಿ (COD), ಎಸಿಬಿ (ACB) ಮತ್ತು ಆದಾಯ ತೆರಿಗೆ ಇಲಾಖೆಯ ಉನ್ನತಾಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ. ಒಂದು ವೇಳೆ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಮತ್ತು ಅಗತ್ಯ ಸಾಕ್ಷ್ಯಗಳೊಂದಿಗೆ ಕಾನೂನು ಹೋರಾಟ ಮಾಡುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ದಲಿತ ಮುಖಂಡ ಸಂತೋಷಕುಮಾರ, ವಕೀಲ ಮತ್ತು ಹೋರಾಟಗಾರ ಸೂಲದಳ್ಳಿ ಬಸವರಾಜಪ್ಪ, ರೈತ ಸಂಘದ ಯುವ ಮುಖಂಡ ಬಾಣದ ಮಾರುತಿ ಮತ್ತು ವಿವಿಧ ಗ್ರಾಮಗಳ ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    6 hrs ago
  • ಜಗಳೂರು ತಾಲ್ಲೂಕಿನ ಪ್ರಮುಖ ಯೋಜನೆಯಾದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತರಳುಬಾಳು ಹುಣ್ಣಿಮೆಯ ಸಂದರ್ಭದಲ್ಲಿ ಚಾಲನೆ ನೀಡಿದ್ದರು. ನಂತರದ ಅವಧಿಯಲ್ಲಿ ಸರ್ಕಾರ ಬದಲಾದಾಗ ಅನುದಾನದ ಕೊರತೆಯಿಂದ ಈ ಯೋಜನೆ ಕುಂಟುತ್ತಾ ಸಾಗಿತ್ತು. ಆದರೂ, ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ದಿಟೂರಿನಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಹಸಿರು ನಿಶಾನೆ ತೋರಿದ ಪರಿಣಾಮವಾಗಿ, ಇಂದು ತಾಲ್ಲೂಕಿನಾದ್ಯಂತ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ. ಈ ಯೋಜನೆಯ ಯಶಸ್ಸಿನ ಹಿಂದೆ ಹಲವು ಶಾಸಕರ ಅವಿರತ ಶ್ರಮವಿದೆ. ಬಿಜೆಪಿ ಆಡಳಿತದಲ್ಲಿ ಎಸ್.ವಿ. ರಾಮಚಂದ್ರ, ಕಾಂಗ್ರೆಸ್ ಆಡಳಿತದಲ್ಲಿ ಹೆಚ್.ಪಿ. ರಾಜೇಶ್ ಹಾಗೂ ಪ್ರಸ್ತುತ ಆಡಳಿತದಲ್ಲಿ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರು ಈ ಯೋಜನೆಗೆ ವೇಗ ನೀಡಲು ಶ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಜಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತುಂಗಭದ್ರೆಯ ನೀರು ವಿವಿಧ ಗ್ರಾಮಗಳ ಕೆರೆಗಳನ್ನು ತಲುಪುವ ಮೂಲಕ ತಾಲ್ಲೂಕು ಜಲಸಮೃದ್ಧಿಯನ್ನು ಕಾಣುತ್ತಿದೆ.
    2
    ಜಗಳೂರು ತಾಲ್ಲೂಕಿನ ಪ್ರಮುಖ ಯೋಜನೆಯಾದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತರಳುಬಾಳು ಹುಣ್ಣಿಮೆಯ ಸಂದರ್ಭದಲ್ಲಿ ಚಾಲನೆ ನೀಡಿದ್ದರು. ನಂತರದ ಅವಧಿಯಲ್ಲಿ ಸರ್ಕಾರ ಬದಲಾದಾಗ ಅನುದಾನದ ಕೊರತೆಯಿಂದ ಈ ಯೋಜನೆ ಕುಂಟುತ್ತಾ ಸಾಗಿತ್ತು. ಆದರೂ, ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ದಿಟೂರಿನಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಹಸಿರು ನಿಶಾನೆ ತೋರಿದ ಪರಿಣಾಮವಾಗಿ, ಇಂದು ತಾಲ್ಲೂಕಿನಾದ್ಯಂತ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ.

ಈ ಯೋಜನೆಯ ಯಶಸ್ಸಿನ ಹಿಂದೆ ಹಲವು ಶಾಸಕರ ಅವಿರತ ಶ್ರಮವಿದೆ. ಬಿಜೆಪಿ ಆಡಳಿತದಲ್ಲಿ ಎಸ್.ವಿ. ರಾಮಚಂದ್ರ, ಕಾಂಗ್ರೆಸ್ ಆಡಳಿತದಲ್ಲಿ ಹೆಚ್.ಪಿ. ರಾಜೇಶ್ ಹಾಗೂ ಪ್ರಸ್ತುತ ಆಡಳಿತದಲ್ಲಿ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರು ಈ ಯೋಜನೆಗೆ ವೇಗ ನೀಡಲು ಶ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಜಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತುಂಗಭದ್ರೆಯ ನೀರು ವಿವಿಧ ಗ್ರಾಮಗಳ ಕೆರೆಗಳನ್ನು ತಲುಪುವ ಮೂಲಕ ತಾಲ್ಲೂಕು ಜಲಸಮೃದ್ಧಿಯನ್ನು ಕಾಣುತ್ತಿದೆ.
    user_Basavaraja B Press Reporter APB
    Basavaraja B Press Reporter APB
    Newspaper publisher ಜಗಳೂರು, ದಾವಣಗೆರೆ, ಕರ್ನಾಟಕ•
    9 hrs ago
  • Available for Sale Item : ಅಕ್ಕಿ Quantity Available : 500 Price : 60 City / Locality : ಹೊಸನಗರ Farming Sector : Crops ಕೆಂಪಕ್ಕಿ ದೊರೆಯುತ್ತದೆ
    1
    Available for Sale
Item : ಅಕ್ಕಿ
Quantity Available : 500
Price : 60
City / Locality : ಹೊಸನಗರ 
Farming Sector : Crops
ಕೆಂಪಕ್ಕಿ ದೊರೆಯುತ್ತದೆ
    user_Krishnamurthy
    Krishnamurthy
    ಹೊಸನಗರ, ಶಿವಮೊಗ್ಗ, ಕರ್ನಾಟಕ•
    10 hrs ago
  • ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮನ್ನು ಬಿಎಲ್‌ಒ (BLO) ಕರ್ತವ್ಯದಿಂದ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಕಾರ್ಯಕರ್ತೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ತಮಗೆ ವಿಧಿಸಲಾಗುತ್ತಿರುವ ಹೆಚ್ಚುವರಿ ಕೆಲಸದ ಒತ್ತಡ, ಡೇಟಾ ಎಂಟ್ರಿ ಮಾಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳು ಹಾಗೂ ಮೇಲಧಿಕಾರಿಗಳಿಂದ ಬರುತ್ತಿರುವ ನೊಟೀಸ್‌ನ ಭೀತಿಯ ಬಗ್ಗೆ ಕಾರ್ಯಕರ್ತೆಯರು ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ಹೆಚ್ಚುವರಿ ಜವಾಬ್ದಾರಿಗಳಿಂದಾಗಿ ತಮ್ಮ ಮೂಲ ಕೆಲಸವಾದ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ಕಣ್ಣೀರಿಟ್ಟರು.
    1
    ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮನ್ನು ಬಿಎಲ್‌ಒ (BLO) ಕರ್ತವ್ಯದಿಂದ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಕಾರ್ಯಕರ್ತೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು.

ತಮಗೆ ವಿಧಿಸಲಾಗುತ್ತಿರುವ ಹೆಚ್ಚುವರಿ ಕೆಲಸದ ಒತ್ತಡ, ಡೇಟಾ ಎಂಟ್ರಿ ಮಾಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳು ಹಾಗೂ ಮೇಲಧಿಕಾರಿಗಳಿಂದ ಬರುತ್ತಿರುವ ನೊಟೀಸ್‌ನ ಭೀತಿಯ ಬಗ್ಗೆ ಕಾರ್ಯಕರ್ತೆಯರು ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ಹೆಚ್ಚುವರಿ ಜವಾಬ್ದಾರಿಗಳಿಂದಾಗಿ ತಮ್ಮ ಮೂಲ ಕೆಲಸವಾದ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ಕಣ್ಣೀರಿಟ್ಟರು.
    user_AsnNews24Kannada
    AsnNews24Kannada
    Local News Reporter Koppal, Karnataka•
    14 hrs ago
  • ಶಿಗ್ಗಾವಿ ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಕಳೆದ 10 ತಿಂಗಳಿಂದ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರು ವಿಶ್ವವಿದ್ಯಾಲಯದ ಆಡಳಿತ ಭವನದ ಮುಂದೆ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ದೀರ್ಘಕಾಲದಿಂದ ಸಂಬಳ ಸಿಗದೆ ಕುಟುಂಬಗಳ ಜೀವನ ನಿರ್ವಹಣೆ ತೀವ್ರ ತೊಂದರೆಗೆ ಸಿಲುಕಿದ್ದು, ಸಂಸಾರಗಳು ಬೀದಿಗೆ ಬರುವಂತಾಗಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನಾ ನಿರತ ಪ್ರಾಧ್ಯಾಪಕರು 2024-25 ಮತ್ತು 2025-26ನೇ ಶೈಕ್ಷಣಿಕ ವರ್ಷಗಳಲ್ಲಿ ವಿಶ್ವವಿದ್ಯಾಲಯದ ನಿಯಮ ಹಾಗೂ ವೇಳಾಪಟ್ಟಿಯಂತೆ ತರಗತಿಗಳನ್ನು ನಡೆಸಿ, ವಿದ್ಯಾರ್ಥಿಗಳಿಗೆ ಬೋಧನೆ ಮಾಡಿ ಪರೀಕ್ಷೆಗಳು ಸುಗಮವಾಗಿ ನಡೆಯಲು ಸಹಕರಿಸಿದ್ದಾರೆ. ಇಷ್ಟಿದ್ದರೂ ಹತ್ತು ತಿಂಗಳ ವೇತನ ಮಾತ್ರ ಇನ್ನೂ ಪಾವತಿಯಾಗಿಲ್ಲ. ಈ ಬಗ್ಗೆ ಕುಲಪತಿಗಳು, ಕುಲಸಚಿವರು ಮತ್ತು ಸಿಂಡಿಕೇಟ್ ಸದಸ್ಯರಿಗೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬರಲಾಗಿದೆ. ಸಿಂಡಿಕೇಟ್ ಸದಸ್ಯರು ವೇತನ ಬಿಡುಗಡೆ ಮಾಡಲು ಸೂಚಿಸಿದ್ದರೂ, ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ವಿಳಂಬ ನೀತಿಯಿಂದಾಗಿ ವೇತನ ನೀಡದೆ ಸತಾಯಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ತಮ್ಮ ನ್ಯಾಯಯುತ ಬೇಡಿಕೆಯಾದ 10 ತಿಂಗಳ ಬಾಕಿ ವೇತನ ಬಿಡುಗಡೆಯಾಗುವವರೆಗೂ ವಿಶ್ವವಿದ್ಯಾಲಯದ ಆಡಳಿತ ಭವನದ ಬಾಗಿಲ ಮುಂದೆ ಹೋರಾಟ ಮುಂದುವರಿಸುವುದಾಗಿ ಪ್ರಾಧ್ಯಾಪಕರು ಸ್ಪಷ್ಟಪಡಿಸಿದ್ದಾರೆ. ಈ ಧರಣಿಯಲ್ಲಿ ಡಾ. ಉತ್ತಮ ಕೆ.ಎಚ್, ಡಾ. ನದಾಫ ಎಚ್, ಡಾ. ಶಂಕರ ಕುಂದಗೋಳ, ಡಾ. ರಾಜಶೇಖರ ಡೊಂಬರಮತ್ತೂರು, ಶ್ರೀಮತಿ ಅಭಿನಯ ಎಚ್, ಡಾ. ಸುವರ್ಣಾ ಶೃಂಗೇರಿ, ಪ್ರೀತಮ್ ಬಾಯರ್, ಲೇಖನ ಎಂ.ಯ, ಡಾ. ಆನಂದಪ್ಪ ಬಿ.ಎಚ್, ಡಾ. ಪೊಲಿನಾ ಕೋಟೆ ಎಸ್, ಡಾ. ರಜೀಯಾ ಬೇಗಂ ನದಾಫ, ಡಾ. ಪ್ರವೀಣ ಕರೆಪ್ಪನವರ, ಡಾ. ಮಂಜುನಾಥ ದೊಡಮನಿ, ಕುಮಾರಿ ಅನ್ನಪೂರ್ಣ ಲಿಂಬಿಕಾಯಿ, ಕುಮಾರಿ ಸೈಯದಾ ಖಾದ್ರಿ, ಶಿವಾನಂದ ದೊಡ್ಡಮನಿ ಹಾಗೂ ಖಾಜಾನವಾಜ ಪಾಲ್ಗೊಂಡಿದ್ದಾರೆ.
    2
    ಶಿಗ್ಗಾವಿ ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಕಳೆದ 10 ತಿಂಗಳಿಂದ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರು ವಿಶ್ವವಿದ್ಯಾಲಯದ ಆಡಳಿತ ಭವನದ ಮುಂದೆ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ದೀರ್ಘಕಾಲದಿಂದ ಸಂಬಳ ಸಿಗದೆ ಕುಟುಂಬಗಳ ಜೀವನ ನಿರ್ವಹಣೆ ತೀವ್ರ ತೊಂದರೆಗೆ ಸಿಲುಕಿದ್ದು, ಸಂಸಾರಗಳು ಬೀದಿಗೆ ಬರುವಂತಾಗಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನಾ ನಿರತ ಪ್ರಾಧ್ಯಾಪಕರು 2024-25 ಮತ್ತು 2025-26ನೇ ಶೈಕ್ಷಣಿಕ ವರ್ಷಗಳಲ್ಲಿ ವಿಶ್ವವಿದ್ಯಾಲಯದ ನಿಯಮ ಹಾಗೂ ವೇಳಾಪಟ್ಟಿಯಂತೆ ತರಗತಿಗಳನ್ನು ನಡೆಸಿ, ವಿದ್ಯಾರ್ಥಿಗಳಿಗೆ ಬೋಧನೆ ಮಾಡಿ ಪರೀಕ್ಷೆಗಳು ಸುಗಮವಾಗಿ ನಡೆಯಲು ಸಹಕರಿಸಿದ್ದಾರೆ. ಇಷ್ಟಿದ್ದರೂ ಹತ್ತು ತಿಂಗಳ ವೇತನ ಮಾತ್ರ ಇನ್ನೂ ಪಾವತಿಯಾಗಿಲ್ಲ. ಈ ಬಗ್ಗೆ ಕುಲಪತಿಗಳು, ಕುಲಸಚಿವರು ಮತ್ತು ಸಿಂಡಿಕೇಟ್ ಸದಸ್ಯರಿಗೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬರಲಾಗಿದೆ. ಸಿಂಡಿಕೇಟ್ ಸದಸ್ಯರು ವೇತನ ಬಿಡುಗಡೆ ಮಾಡಲು ಸೂಚಿಸಿದ್ದರೂ, ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ವಿಳಂಬ ನೀತಿಯಿಂದಾಗಿ ವೇತನ ನೀಡದೆ ಸತಾಯಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ತಮ್ಮ ನ್ಯಾಯಯುತ ಬೇಡಿಕೆಯಾದ 10 ತಿಂಗಳ ಬಾಕಿ ವೇತನ ಬಿಡುಗಡೆಯಾಗುವವರೆಗೂ ವಿಶ್ವವಿದ್ಯಾಲಯದ ಆಡಳಿತ ಭವನದ ಬಾಗಿಲ ಮುಂದೆ ಹೋರಾಟ ಮುಂದುವರಿಸುವುದಾಗಿ ಪ್ರಾಧ್ಯಾಪಕರು ಸ್ಪಷ್ಟಪಡಿಸಿದ್ದಾರೆ. ಈ ಧರಣಿಯಲ್ಲಿ ಡಾ. ಉತ್ತಮ ಕೆ.ಎಚ್, ಡಾ. ನದಾಫ ಎಚ್, ಡಾ. ಶಂಕರ ಕುಂದಗೋಳ, ಡಾ. ರಾಜಶೇಖರ ಡೊಂಬರಮತ್ತೂರು, ಶ್ರೀಮತಿ ಅಭಿನಯ ಎಚ್, ಡಾ. ಸುವರ್ಣಾ ಶೃಂಗೇರಿ, ಪ್ರೀತಮ್ ಬಾಯರ್, ಲೇಖನ ಎಂ.ಯ, ಡಾ. ಆನಂದಪ್ಪ ಬಿ.ಎಚ್, ಡಾ. ಪೊಲಿನಾ ಕೋಟೆ ಎಸ್, ಡಾ. ರಜೀಯಾ ಬೇಗಂ ನದಾಫ, ಡಾ. ಪ್ರವೀಣ ಕರೆಪ್ಪನವರ, ಡಾ. ಮಂಜುನಾಥ ದೊಡಮನಿ, ಕುಮಾರಿ ಅನ್ನಪೂರ್ಣ ಲಿಂಬಿಕಾಯಿ, ಕುಮಾರಿ ಸೈಯದಾ ಖಾದ್ರಿ, ಶಿವಾನಂದ ದೊಡ್ಡಮನಿ ಹಾಗೂ ಖಾಜಾನವಾಜ ಪಾಲ್ಗೊಂಡಿದ್ದಾರೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    4 hrs ago
  • ಅಮೆರಿಕದಲ್ಲಿ ಭಾರತೀಯ ಮಹಿಳೆಯರ ಮೇಲೆ ಮತ್ತೊಮ್ಮೆ ಜನಾಂಗೀಯ ದ್ವೇಷದ ಘಟನೆ ನಡೆದಿದೆ. ಭಾರತೀಯ ಮಹಿಳೆಯರ ತಂಡದ ಮೇಲೆ ಶ್ವೇತವರ್ಣೀಯ ಮಹಿಳೆಯೊಬ್ಬರು ದರ್ಪ ತೋರುವ ಮೂಲಕ ತಮ್ಮ ದ್ವೇಷವನ್ನು ಪ್ರದರ್ಶಿಸಿದ್ದಾರೆ.
    1
    ಅಮೆರಿಕದಲ್ಲಿ ಭಾರತೀಯ ಮಹಿಳೆಯರ ಮೇಲೆ ಮತ್ತೊಮ್ಮೆ ಜನಾಂಗೀಯ ದ್ವೇಷದ ಘಟನೆ ನಡೆದಿದೆ. ಭಾರತೀಯ ಮಹಿಳೆಯರ ತಂಡದ ಮೇಲೆ ಶ್ವೇತವರ್ಣೀಯ ಮಹಿಳೆಯೊಬ್ಬರು ದರ್ಪ ತೋರುವ ಮೂಲಕ ತಮ್ಮ ದ್ವೇಷವನ್ನು ಪ್ರದರ್ಶಿಸಿದ್ದಾರೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.