ಹುಳಿಯಾರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆ ಭಾನುವಾರ *ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆ ಭಾನುವಾರ* ---------------------------- ಹುಳಿಯಾರು: ಹುಳಿಯಾರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ 2025-26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಆವರಣದಲ್ಲಿ ಸೆ.20 ರ ಭಾನುವಾರ ಬೆಳಗ್ಗೆ 11 ಕ್ಕೆ ನಡೆಯಲಿದೆ. ಸಹಕಾರ ಸಂಘದ ಅಧ್ಯಕ್ಷ ಎಸ್.ಪುಟ್ಟರಾಜು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಮಹಾಸಭೆಗೆ ತುಮಕೂರು ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜಕುಮಾರ್, ತಿಪಟೂರಿನ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಎಸ್.ಬಿ.ರಾಮಪ್ರಸಾದ್, ಚಿಕ್ಕನಾಯಕನಹಳ್ಳಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಇಂದ್ರಮ್ಮ, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಎಸ್.ಆರ್.ರಂಗಸ್ವಾಮಿ ಹಾಗೂ ವ್ಯವಸ್ಥಾಪಕ ರಾಮಕೃಷ್ಣ ಅವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸರ್ವ ಸದಸ್ಯರು ಸಮಯಕ್ಕೆ ಸರಿಯಾಗಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಡಿ.ಶಿವಣ್ಣ ಮನವಿ ಮಾಡಿದ್ದಾರೆ.
ಹುಳಿಯಾರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆ ಭಾನುವಾರ *ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆ ಭಾನುವಾರ* ---------------------------- ಹುಳಿಯಾರು: ಹುಳಿಯಾರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ 2025-26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಆವರಣದಲ್ಲಿ ಸೆ.20 ರ ಭಾನುವಾರ ಬೆಳಗ್ಗೆ 11 ಕ್ಕೆ ನಡೆಯಲಿದೆ. ಸಹಕಾರ ಸಂಘದ ಅಧ್ಯಕ್ಷ ಎಸ್.ಪುಟ್ಟರಾಜು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಮಹಾಸಭೆಗೆ ತುಮಕೂರು ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜಕುಮಾರ್, ತಿಪಟೂರಿನ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಎಸ್.ಬಿ.ರಾಮಪ್ರಸಾದ್, ಚಿಕ್ಕನಾಯಕನಹಳ್ಳಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಇಂದ್ರಮ್ಮ, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಎಸ್.ಆರ್.ರಂಗಸ್ವಾಮಿ ಹಾಗೂ ವ್ಯವಸ್ಥಾಪಕ ರಾಮಕೃಷ್ಣ ಅವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸರ್ವ ಸದಸ್ಯರು ಸಮಯಕ್ಕೆ ಸರಿಯಾಗಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಡಿ.ಶಿವಣ್ಣ ಮನವಿ ಮಾಡಿದ್ದಾರೆ.
- ಊರ್ಡಿಗೆರೆಯಲ್ಲಿ ನೂತನ ನಂದಿನಿ ಕ್ಷೀರ ಮಳಿಗೆ: ಭೇಟಿ ನೀಡಿ ಚಹಾ ಸವಿದ ಡಾ. ಜಿ. ಪರಮೇಶ್ವರ್! ಊರ್ಡಿಗೆರೆಯಲ್ಲಿ ನೂತನ ನಂದಿನಿ ಕ್ಷೀರ ಮಳಿಗೆ: ಭೇಟಿ ನೀಡಿ ಚಹಾ ಸವಿದ ಡಾ. ಜಿ. ಪರಮೇಶ್ವರ್! ಸಮಾಜ ಸೇವಕ ದುರ್ಗಪ್ಪ ಸ್ಥಾಪಿಸಿರುವ ನಂದಿನಿ ಕ್ಷೀರ ಮಳಿಗೆಗೆ ಡಿಸಿಎಂ ಭೇಟಿ ನಂದಿನಿ ಕರ್ನಾಟಕದ ಉತ್ತಮ ಬ್ರಾಂಡ್: ಡಾ. ಜಿ. ಪರಮೇಶ್ವರ್ ರೈತರು ಹಾಗೂ ಗ್ರಾಹಕರಿಗೆ ನಂದಿನಿಯಿಂದ ಉತ್ತಮ ಸೇವೆ: ಡಿಸಿಎಂ ಮೆಚ್ಚುಗೆ ತುಮಕೂರು ತಾಲೂಕಿನ ಊರ್ಡಿಗೆರೆಯಲ್ಲಿ ನೂತನವಾಗಿ ಸ್ಥಾಪಿಸಿರುವ ನಂದಿನಿ ಕ್ಷೀರ ಮಳಿಗೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿ ನೀಡಿ ಚಹಾ ಸವಿದರು. ಸಮಾಜ ಸೇವಕ ಹಾಗೂ ಮುಖಂಡ ದುರ್ಗಪ್ಪ ಅವರು ನೂತನವಾಗಿ ಆರಂಭಿಸಿರುವ ಕ್ಷೀರ ಮಳಿಗೆಗೆ ಭೇಟಿ ನೀಡಿದ ಡಿಸಿಎಂ, ನಂದಿನಿ ಸಂಸ್ಥೆಯ ಕಾರ್ಯವೈಖರಿ ಹಾಗೂ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತುಮಕೂರು ತಾಲೂಕಿನ ಊರ್ಡಿಗೆರೆಯಲ್ಲಿ ಸಮಾಜ ಸೇವಕ ಹಾಗೂ ಮುಖಂಡ ದುರ್ಗಪ್ಪ ಅವರು ನೂತನವಾಗಿ ಸ್ಥಾಪಿಸಿರುವ ನಂದಿನಿ ಕ್ಷೀರ ಮಳಿಗೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕ್ಷೀರ ಮಳಿಗೆಯಲ್ಲಿ ಚಹಾ ಸವಿದ ಡಾ. ಜಿ. ಪರಮೇಶ್ವರ್, ನಂದಿನಿ ಕರ್ನಾಟಕ ರಾಜ್ಯದ ಉತ್ತಮ ಬ್ರಾಂಡ್ ಆಗಿ ಗುರುತಿಸಿಕೊಂಡಿದೆ ಎಂದು ಹೇಳಿದರು. ರೈತರು ಹಾಗೂ ಗ್ರಾಹಕರಿಗೆ ನಂದಿನಿ ಸಂಸ್ಥೆ ಉತ್ತಮ ಸೇವೆ ನೀಡುತ್ತಿದ್ದು, ಗುಣಮಟ್ಟವನ್ನು ಕಾಪಾಡಿಕೊಂಡು ಸ್ಥಳೀಯ ಬ್ರಾಂಡ್ ಆಗಿ ಉತ್ತಮ ಹೆಸರು ಗಳಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನೂತನವಾಗಿ ನಂದಿನಿ ಕ್ಷೀರ ಮಳಿಗೆ ಆರಂಭಿಸಿರುವ ದುರ್ಗಪ್ಪ ಅವರಿಗೆ ಶುಭವಾಗಲಿ. ವ್ಯಾಪಾರ ಉತ್ತಮವಾಗಿ ನಡೆಯಲಿ ಹಾಗೂ ಗ್ರಾಹಕರಿಗೆ ಗುಣಮಟ್ಟದ ಸೇವೆ ದೊರೆಯಲಿ ಎಂದು ಡಾ. ಜಿ. ಪರಮೇಶ್ವರ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಜಿಎಂ ಶಿವಾನಂದ್, ನಿರ್ದೇಶಕ ರಾಜಣ್ಣ, ಮುಖಂಡರಾದ ಕಾರ್ ಮಹೇಶ್, ತಿಲಕ್, ಮಲ್ಲಿಕಾರ್ಜುನ್, ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.2
- ಚಿತ್ರದುರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೋದಿ ಹುಟ್ಟುದಿನವನ್ನ ಜಿಲ್ಲಾ ಕಾಂಗ್ರೆಸ್ ವತಿಯಿಂದ ತರಕಾರಿ ಮಾರುವ ಮೂಲಕ ಉಲಕ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡಲಾಯಿತು. ಚಿತ್ರದುರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೋದಿ ಹುಟ್ಟುದಿನವನ್ನ ಜಿಲ್ಲಾ ಕಾಂಗ್ರೆಸ್ ವತಿಯಿಂದ ತರಕಾರಿ ಮಾರುವ ಮೂಲಕ ಉಲಕ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡಲಾಯಿತು. ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನ ಅಧ್ಯಕ್ಷರಾದ ಕಾರೇಹಳ್ಳಿ ಉಲ್ಲಾಸ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಆಚರಿಸಿದ್ದು ವಿಶೇಷವಾಗಿ ತರಕಾರಿ ಮಾರುವ ಮೂಲಕ ವಿನೂತ ಪ್ರತಿಭಟನೆ ನಡೆಸಿದರು. ಕಳೆದ 12 ವರ್ಷಗಳ ಹಿಂದೆ ಪ್ರಧಾನಿ ಮೋದಿ ಘೋಷಿಸಿದಂತೆ 2 ಕೋಟಿ ಉದ್ಯೋಗ ಸೃಷ್ಠಿಸದೆ ಯುವಕರಿಗೆ ಅನ್ಯಾಯ ಮಾಡಿದ್ದು, ಅವರ ಹುಟ್ಟು ಹಬ್ಬವಾದ ಇಂದಿನ ದಿನವನ್ನು, ನಿರುದ್ಯೋಗ ದಿನವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ಡಿಸಿ ಕಚೇರಿ ಬಳಿ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪದವೀಧರ ಯುವಕರ ಮೇಲೆ ನಿರುದ್ಯೋಗ ಎಂಬ ಗಧಾ ಪ್ರಹಾರ ನಡೆಸುತ್ತಿದೆ. ಉದ್ಯೋಗ್ಯವಿಲ್ಲದೆ ಯುವಕರು ಅತಂಕಕ್ಕೀಡಾಗಿದ್ದಾರೆ ಎಂದು ಆರೋಪಿಸಿ, ಸಾರ್ವಜನಿಕರಿಗೆ ತರಕಾರಿಯನ್ನು ಮಾರಾಟ ಮಾಡಿದರು.1
- ಚಿತ್ರದುರ್ಗಮೋದಿ ಹುಟ್ಟುದಿನವನ್ನು ನಿರುದ್ಯೋಗಿ ದಿನ ವನ್ನಾಗಿ ಆಚರಣೆ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಚಿತ್ರದುರ್ಗಮೋದಿ ಹುಟ್ಟುದಿನವನ್ನು ನಿರುದ್ಯೋಗಿ ದಿನ ವನ್ನಾಗಿ ಆಚರಣೆ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ ತರಕಾರಿ ಮಾರುವ ಮೂಲಕ ವಿನೂತ ಪ್ರತಿಭಟನೆ ಕಳೆದ 12 ವರ್ಷಗಳ ಹಿಂದೆ ಪ್ರಧಾನಿ ಮೋದಿ ಘೋಷಿಸಿದಂತೆ 2 ಕೋಟಿ ಉದ್ಯೋಗ ಸೃಷ್ಠಿಸದೆ ಯುವಕರಿಗೆ ಅನ್ಯಾಯ ಮಾಡಿದ್ದು, ಅವರ ಹುಟ್ಟು ಹಬ್ಬವಾದ ಇಂದಿನ ದಿನವನ್ನು, ನಿರುದ್ಯೋಗ ದಿನವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ಡಿಸಿ ಕಚೇರಿ ಬಳಿ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪದವೀಧರ ಯುವಕರ ಮೇಲೆ ನಿರುದ್ಯೋಗ ಎಂಬ ಗಧಾ ಪ್ರಹಾರ ನಡೆಸುತ್ತಿದೆ. ಉದ್ಯೋಗ್ಯವಿಲ್ಲದೆ ಯುವಕರು ಅತಂಕಕ್ಕೀಡಾಗಿದ್ದಾರೆ ಎಂದು ಆರೋಪಿಸಿ, ಸಾರ್ವಜನಿಕರಿಗೆ ತರಕಾರಿಯನ್ನು ಮಾರಾಟ ಮಾಡಿದರು.1
- ಸರ್ವಧರ್ಮ ಸಮಾನತೆ ಸಾರುವ ದೇವನು ಒಬ್ಬನೇ ನಾಮ ಹಲವು ಸರ್ವ ಧರ್ಮ ಸಮಾನತೆ ಸಾರುವ. ಚಳ್ಳಕೆರೆ ನಗರದ ಮಹದೇವಿಯ ರಸ್ತೆಯ ಇಬ್ರಾಹಿಂಪುರ ಓಂ ಗಣಪತಿ ಯುವಕ ಬಳಗದ ವತಿಯಿಂದ ದೇವನು ಒಬ್ಬನೇ ನಾಮವು ಹಲವು ಎನ್ನುವ ವಿನಾಯಕನ ಪ್ರತಿಷ್ಠಾಪನೆ ಮಾಡಲಾಗಿತ್ತು.1
- ಮುಂದಿನ ವಿಧಾನ ಸಭಾ ಚುನಾವಣೆಗೆ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ - ನಿಖಿಲ್ ಕುಮಾರಸ್ವಾಮಿ ರಾಮನಗರ -- ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ ಮಾಡುವುದಾಗಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಮನದ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಗರದ ಜಿಲ್ಲಾ ಜೆಡಿಎಸ್ ಕಛೇರಿಗೆ ಬೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ರಾಮನಗರ ದಿಂದ ಸ್ಪರ್ಧೆ ವಿಚಾರವಾಗಿ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೀನಿ, ಅದರಲ್ಲಿ ಅನುಮಾನ ಇಲ್ಲ. ಇಲ್ಲಿನ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪುಗಳು ಕಾರ್ಯಕರ್ತರ ಮನಸ್ಸಿನಿಂದ ಮಾಸಿಲ್ಲ.ಅದಕ್ಕೆ ಒಂದು ಒಳ್ಳೆ ಫಲಿತಾಂಶದ ಮೂಲಕ ಅವರಿಗೆ ಉತ್ಸಾಹ ತುಂಬುವ ಮೂಲ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ನಮ್ಮ ಶಾಸಕರ ಆಯ್ಕೆಯಾಗಬೇಕು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಸದ್ಯ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕು. ಅವರಿಗೆ ಶಕ್ತಿ ತುಂಬಿದಾಗ ಮಾತ್ರ ವಿಧಾನಾಸಭೆ ಹಾಗೂ ಲೋಕಸಭೆ ಚುನಾವಣೆಗೆ ಅವರು ಪ್ರಾಮಾಣಿಕವಾಗಿ ಕೆಲಸ ಮಾಡ್ತಾರೆ. ಕೆಲವೊಂದು ಕಡೆ ಜೆಡಿಎಸ್ ಗೆ ಹಿನ್ನಲೆ ಆಗಿದೆ.ಆದ್ರೆ ಹಿನ್ನಡೆ-ಮುನ್ನಡೆ ಯಾವುದು ಶಾಶ್ವತ ಅಲ್ಲ. ಅದು ಕೇವಲ ತಾತ್ಕಾಲಿಕ, ಬದಲಾವಣೆ ಜೊತೆ ನಾವು ಮತ್ತೆ ಪ್ರಯತ್ನ ಮಾಡಬೇಕು. ರಾಜ್ಯದಲ್ಲಿ ಜೆಡಿಎಸ್ ಸಂಘಟನೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಮಾಡುವ ತೀರ್ಮಾನ ತೆಗೆದುಕೊಂಡಿದ್ದೆನೆ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಮಾಡ್ತೀನಿ. ಸರ್ಕಾರ ಬಂದು 3 ವರ್ಷ ಆಗಿದೆ. ರೈತರ ಸಮಸ್ಯೆಗಳಿಗೆ ಪರಿಹಾರ ಸಿಗ್ತಿಲ್ಲ. ಸಿಎಂ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆದಿದ್ದಾರೆ.ಅದರಲ್ಲಿ ರೈತರ ಸಮಸ್ಯೆ ಬಗ್ಗೆ ಚರ್ಚೆ ಮಾಡ್ತೀನಿ ಅಂತ ಹೇಳಿದ್ದಾರೆ. ಆದರೆ ರಾಜ್ಯದಲ್ಲಿ ಕೇವಲ 102 ತಾಲೂಕುಗಳನ್ನ ಮಾತ್ರ ಬರಪಿಡಿತ ಅಂತ ಘೋಷಣೆ ಮಾಡಿದ್ದಾರೆ. ಉಳಿದ ತಾಲೂಕುಗಳಲ್ಲಿ ಬರ ಇಲ್ವಾ.? ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಹೆಚ್ಚಾಗಿದೆ. ಹಾಗಾಗಿ ಹಲವು ಜಿಲ್ಲೆಗಳಿಗೆ ಪ್ರವಾಸ ಮಾಡಿ ರೈತರ ಸಮಸ್ಯೆ ಆಲಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು1
- ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ : ನಿಖಿಲ್ ಕುಮಾರಸ್ವಾಮಿ ರಾಮನಗರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದಲೇ ಸ್ಪರ್ದಿಸಲಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪಷ್ಟವಾಗಿ ಹೇಳಿದ್ದೇನೆ, ಅದರಲ್ಲಿ ಯಾವುದೇ ಅನುಮಾನವಿಲ್ಲ. ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪು ಕಾರ್ಯಕರ್ತರ ಮನಸ್ಸಿನಿಂದ ಇನ್ನೂ ಮಾಸಿಲ್ಲ. ಅದನ್ನು ಉತ್ತಮ ಫಲಿತಾಂಶದ ಮೂಲಕ ಹೋಗಲಾಡಿಸಿ ಕಾರ್ಯಕರ್ತರಲ್ಲಿ ನೂತನ ಉತ್ಸಾಹ ತುಂಬಬೇಕಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರನ್ನು ನೋಡುವ ಗುರಿ ನಮ್ಮದಾಗಿದೆ ಎಂದರು. ಕೆಲವು ಕಡೆ ಜೆಡಿಎಸ್ಗೆ ಹಿನ್ನಡೆಯಾಗಿದೆ ನಿಜ, ಆದರೆ ರಾಜಕೀಯದಲ್ಲಿ ಹಿನ್ನಡೆ-ಮುನ್ನಡೆ ಶಾಶ್ವತವಲ್ಲ, ಅದು ತಾತ್ಕಾಲಿಕ. ಬದಲಾವಣೆಯೊಂದಿಗೆ ನಾವು ಮತ್ತೆ ಸಂಘಟಿತ ಪ್ರಯತ್ನ ಮಾಡುತ್ತೇವೆ. ಸದ್ಯ ಸ್ಥಳೀಯ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬುವುದು ಮುಖ್ಯ, ಅವರಿಗೆ ಶಕ್ತಿ ತುಂಬಿದಾಗ ಮಾತ್ರ ಅವರು ಎಂಎಲ್ಎ, ಎಂಪಿ ಚುನಾವಣೆಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ ಎಂದರು.1
- ಹುಳಿಯಾರಿನ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ1
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನೆಲೆ ಚಿತ್ರದುರ್ಗದ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನಲ್ಲಿ ವಿಶೇಷ ಪೂಜೆ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನೆಲೆ ಚಿತ್ರದುರ್ಗದ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿಶೇಷ ಪೂಜೆ ಹಮ್ಮಿಕೊಂಡಿದ್ದು ಈ ಹಿನ್ನೆಲೆ ನೀಲಕಂಠೇಶ್ವರ ಸ್ವಾಮಿ ದೇವರಿಗೆ ವಿಶೇಷವಾಗಿ ರೇಷ್ಮೆ ವಸ್ತ್ರಗಳಿಂದ ಮಹಾರಾಜರ ಅಲಂಕಾರ ಮಾಡಿದ್ದು ವಿವಿಧ ಬಗೆಯ ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಿದ್ದು ಮಹಾ ಮಂಗಳಾರತಿ ಬೆಳಗಿ ಪೂಜೆ ಸಲ್ಲಿಸಿದ್ದು ಸಂಸದ ಗೋವಿಂದ ಕಾರಜೋಳ ಹಾಗೂ ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ ಅವರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡಿದ್ದು ಇದೇ ಸಂದರ್ಭದಲ್ಲಿ ಸಿಹಿಯನ್ನ ಸಹ ವಿತರಣೆ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿಯವರ ಪರ ಘೋಷಣೆಗಳನ್ನ ಕೂಗಿ ಹುಟ್ಟುಹಬ್ಬದ ಶುಭಾಶಯಗಳನ್ನ ಕೋರಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಸಂಸದ ಗೋವಿಂದ ಕಾರಜೋಳ, ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ ಟಿ ಕುಮಾರಸ್ವಾಮಿ ಹಾಗೂ ಜಿಲ್ಲಾ ಬಿಜೆಪಿಯ ಅನೇಕ ಮುಖಂಡರು ಮತ್ತು ಮಹಿಳಾ ಕಾರ್ಯಕರ್ತರು ಹಾಜರಿದ್ದರು1
- ಇ ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಗೌರಸಮುದ್ರ ಮಾರಮ್ಮ ದೊಡ್ಡ ಜಾತ್ರೆಯ ನಂತರ ಎರಡನೇ ದಿನ ಸಿಡಿ ಉತ್ಸವ ನಡೆಸುವ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತದೆ ಇಂದು ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದ ಶ್ರೀ ಮಾರಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆಗೆ ಸಿಡಿ ಉತ್ಸವ ನಡೆಯಬೇಕಿತ್ತು. ಸಿಡಿ ಉತ್ಸವದಲ್ಲಿ ಭಾಗವಹಿಸಲು ಕೋನಸಾಗರ ಗ್ರಾಮದ ಭಕ್ತರು ಬರಿಗಾಲಿನಲ್ಲಿ ನಡೆದುಕೊಂಡು ಗೌರಸಮುದ್ರಕ್ಕೆ ಆಗಮಿಸಿದ್ದರು. ಇನ್ನೇನು ಸಿಡಿ ಉತ್ಸವ ಆರಂಭವಾಗಬೇಕು ಎನ್ನುವಷ್ಟರಲ್ಲೇ… ಸಿಡಿ ಮರದ ತುಂಡೊಂದು ಮುರಿದು ಬಿದ್ದಿದೆ! ಬಹುಶಹ ಸಿಡಿ ಮರ ಹಳೆಯದಾಗಿದ್ದು ಇದರಿಂದ ಮುರಿದು ಬಿದ್ದಿರುವ ಶಂಕೆ ವ್ಯಕ್ತವಾಗಿದೆ ಇದರಿಂದ ಸಿಡಿ ಉತ್ಸವಕ್ಕೆ ವಿಘ್ನ ಎದುರಾಗಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಮತ್ತೊಮ್ಮೆ ಸಿಡಿ ಮರವನ್ನು ಸರಿಪಡಿಸಿ ಕಟ್ಟುವ ಪ್ರಯತ್ನ ನಡೆಸಲಾಗಿದ್ದು, ಮತ್ತೆ ಸಮಸ್ಯೆ ಉಂಟಾಗಿದ್ದು ಹಿನ್ನೆಲೆಯಲ್ಲಿ ಭಕ್ತರು ಆತಂಕಗೊಂಡಿದ್ದಾರೆ. ಗೌರಸಮುದ್ರ ಮಾರಮ್ಮದೇವಿಯ ಜಾತ್ರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಿಡಿ ಮರ ತುಂಡಾಗಿ ಉತ್ಸವಕ್ಕೆ ವಿಘ್ನ ಉಂಟಾಗಿದೆ ಎಂದು ಗ್ರಾಮದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂದರ್ಭದಲ್ಲಿ ಯಾವುದೇ ಅಪಾಯವಾಗಿಲ್ಲ. ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.1