* ಶಾಸಕ ನಂಜೇಗೌಡರಿಗೆ ಬೇರೊಬ್ಬರ ಮೇಲೆ ಆರೋಪ ಮಾಡಲು ಯಾವುದೇ ನೈತಿಕತೆ ಇಲ್ಲ :ಅನಂತಕೀರ್ತಿ * ಕೋಲಾರ : ಮಾಲೂರಿನ ಶಾಸಕ ಕೆ.ವೈ ನಂಜೇಗೌಡರು ಡಿ.ಸಿ.ಸಿ. ಬ್ಯಾಂಕ್ ಬಗ್ಗೆ ನೀಡಿರುವ ಹೇಳಿಕೆಗೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ ಎಂದು ದ್ರಾವಿಡ ವಿಮೋಚನಾ ಸಂಘದ ಅಧ್ಯಕ್ಷ ಕೆ.ಎಂ.ಅನಂತಕೀರ್ತಿ ವ್ಯಂಗ್ಯವಾಡಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬ್ಯಾಂಕಿನ ಅವನತಿಗೆ ಹಿಂದಿನ ಆಡಳಿತ ಮಂಡಳಿಗೆ ಕಾರಣವೆಂದಿದ್ದಾರೆ. ನಂಜೇಗೌಡ್ರೆ ನೀವು ಒಂದು ಸಂಸ್ಥೆಗೆ ಅಧ್ಯಕ್ಷರಾಗಿದ್ದೀರಿ. ನೀವು ಬೇರೊಂದು ಸಂಸ್ಥೆಯ ಮೇಲೆ ಆರೋಪ ಮಾಡುವ ಮುನ್ನ ನೀವೆಷ್ಟು ಶುದ್ಧರಾಗಿದ್ದೀರಿ ಎಂಬುದನ್ನು ಮನನ ಮಾಡಿಕೊಳ್ಳಿ. ಬಂಗಾರಪೇಟೆಯ ಶಾಸಕ ನಾರಾಯಣಸ್ವಾಮಿ ಕೋಚಿಮಲ್ ನೇಮಕಾತಿಯಲ್ಲಿ ಅಕ್ರಮ, ಎಂ.ವಿ.ಕೆ ಗೋಲ್ಡನ್ ಡೇರಿ ನಿರ್ಮಾಣ ಗುತ್ತಿಗೆಯಲ್ಲಿ ಅಕ್ರಮ, ಕೋಟ್ಯಾಂತರ ರೂಪಾಯಿ ಲಂಚದ ವ್ಯವಹಾರ ನಡೆದಿದೆ ಎಂದು ಸಾರ್ವಜನಿಕವಾಗಿ ಆರೋಪಗಳ ಸುರಿಮಳೆಗೈದು ನಿಮ್ಮ ಜನ್ಮ ಜಾಲಾಡಿದ್ದರು.ಈಗ ಅವರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೀರಿ ನಾಚಿಕೆಯಾಗಬೇಕು ನಿಮಗೆ.ನೀವೆಲ್ಲ ಒಟ್ಟಿಗೆ ಇರುವುದು ಮತ್ತು ಡಿಸಿಸಿ ಬ್ಯಾಂಕ್ ಅನ್ನು ಸರಿಪಡಿಸಲು ಹೊರಟಿರುವುದು ಸಂತೋಷವೇ ನಿಮ್ಮ ಮೇಲೆ ಬಂದಿರುವ ಆರೋಪಗಳಿಂದ ಮುಕ್ತಿ ಸಿಗುವವರೆಗೆ ನೀವು ಬೇರೊಬ್ಬರ ಮೇಲೆ ಆರೋಪ ಮಾಡಲು ಯಾವುದೇ ನೈತಿಕತೆ ಇಲ್ಲ ಎಂದು ಕುಟುಕಿದ್ದಾರೆ. ತಮ್ಮದೇ ಪಕ್ಷದ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಆದಿಯಾಗಿ ಮಾಲೂರಿನ ಮಾಜಿ ಶಾಸಕ ಮಂಜುನಾಥಗೌಡ, ಸಾಮಾಜಿಕ ಹೋರಾಟಗಾರರಾದ ಕೆ.ಪಿ ವೆಂಕಟಾಚಲಪತಿ, ಗೂಳಿಗಾನಹಳ್ಳಿ ನಾಗರಾಜ್ ರವರು ಕೋಚಿಮಲ್ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ 20 ರಿಂದ 30 ಲಕ್ಷ ರೂ ವಸೂಲಿ ಮಾಡಿ ಅಕ್ರಮ ನಡೆಸಿರುವುದು, ಐಸ್ ಕ್ರೀಮ್ ಘಟಕ ಕಾಮಗಾರಿ ಪೂರ್ಣಗೊಳ್ಳದೆ ಸಲಕರಣೆ ಖರೀದಿಗೆ ಮುಂಗಡವಾಗಿ ಒಂಬತ್ತು ಕೋಟಿ ರೂ ಮಂಜೂರು ಮಾಡಿರುವುದು, ಸೋಲಾರ್ ಘಟಕದಲ್ಲಿ ಅಳವಡಿಸಿರುವ ಸಲಕರಣೆಗಳಿಗೆ ನಿಗದಿತ ದರಕ್ಕಿಂತ ಹೆಚ್ಚು ದರ ಕೊಟ್ಟು ಖರೀದಿ ಮಾಡಿರುವುದು, ಎಂವಿಕೆ ಗೋಲ್ಡನ್ ಡೈರಿ ಟೆಂಡರ್ನಲ್ಲಿ ಅಕ್ರಮ ನಡೆದಿರುವ ಬಗ್ಗೆ, ಕೋಚಿಮಲ್ನಲ್ಲಿ ನಿಮ್ಮ ಅವಧಿಯಲ್ಲಿ 512 ಕೋಟಿ ಹಗರಣ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಈಗಾಗಲೇ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ಹಣವನ್ನು ಪಡೆದಿರುವುದು ಸಾಬೀತಾಗಿದೆ. ಇದಕ್ಕೆಲ್ಲಾ ನಿಮ್ಮ ನೇತೃತ್ವದ ಆಡಳಿತ ಮಂಡಳಿಯೇ ಕಾರಣ. ನಂಜೇಗೌಡರೇ ಬೇರೋಬ್ಬರ ಮನೆಯನ್ನು ಸರಿಪಡಿಸುವ ಮುನ್ನ ನಿಮ್ಮ ಮನೆಯನ್ನು ಸರಿಪಡಿಸಿ ಹೇಗಿದ್ದರೂ ನಿಮ್ಮದೇ ಸರ್ಕಾರವಿದೆ, ಸರಿಪಡಿಸುವಂತಹವರನ್ನು ನೇಮಕ ಮಾಡಿ ಎಂದು ಸವಾಲು ಹಾಕಿದ್ದಾರೆ.
* ಶಾಸಕ ನಂಜೇಗೌಡರಿಗೆ ಬೇರೊಬ್ಬರ ಮೇಲೆ ಆರೋಪ ಮಾಡಲು ಯಾವುದೇ ನೈತಿಕತೆ ಇಲ್ಲ :ಅನಂತಕೀರ್ತಿ * ಕೋಲಾರ : ಮಾಲೂರಿನ ಶಾಸಕ ಕೆ.ವೈ ನಂಜೇಗೌಡರು ಡಿ.ಸಿ.ಸಿ. ಬ್ಯಾಂಕ್ ಬಗ್ಗೆ ನೀಡಿರುವ ಹೇಳಿಕೆಗೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ ಎಂದು ದ್ರಾವಿಡ ವಿಮೋಚನಾ ಸಂಘದ ಅಧ್ಯಕ್ಷ ಕೆ.ಎಂ.ಅನಂತಕೀರ್ತಿ ವ್ಯಂಗ್ಯವಾಡಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬ್ಯಾಂಕಿನ ಅವನತಿಗೆ ಹಿಂದಿನ ಆಡಳಿತ ಮಂಡಳಿಗೆ ಕಾರಣವೆಂದಿದ್ದಾರೆ. ನಂಜೇಗೌಡ್ರೆ ನೀವು ಒಂದು ಸಂಸ್ಥೆಗೆ ಅಧ್ಯಕ್ಷರಾಗಿದ್ದೀರಿ. ನೀವು ಬೇರೊಂದು ಸಂಸ್ಥೆಯ ಮೇಲೆ ಆರೋಪ ಮಾಡುವ ಮುನ್ನ ನೀವೆಷ್ಟು ಶುದ್ಧರಾಗಿದ್ದೀರಿ ಎಂಬುದನ್ನು ಮನನ ಮಾಡಿಕೊಳ್ಳಿ. ಬಂಗಾರಪೇಟೆಯ ಶಾಸಕ ನಾರಾಯಣಸ್ವಾಮಿ ಕೋಚಿಮಲ್ ನೇಮಕಾತಿಯಲ್ಲಿ ಅಕ್ರಮ, ಎಂ.ವಿ.ಕೆ ಗೋಲ್ಡನ್ ಡೇರಿ ನಿರ್ಮಾಣ ಗುತ್ತಿಗೆಯಲ್ಲಿ ಅಕ್ರಮ, ಕೋಟ್ಯಾಂತರ ರೂಪಾಯಿ ಲಂಚದ ವ್ಯವಹಾರ ನಡೆದಿದೆ ಎಂದು ಸಾರ್ವಜನಿಕವಾಗಿ ಆರೋಪಗಳ ಸುರಿಮಳೆಗೈದು ನಿಮ್ಮ ಜನ್ಮ ಜಾಲಾಡಿದ್ದರು.ಈಗ ಅವರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೀರಿ ನಾಚಿಕೆಯಾಗಬೇಕು ನಿಮಗೆ.ನೀವೆಲ್ಲ ಒಟ್ಟಿಗೆ ಇರುವುದು ಮತ್ತು ಡಿಸಿಸಿ ಬ್ಯಾಂಕ್ ಅನ್ನು ಸರಿಪಡಿಸಲು ಹೊರಟಿರುವುದು ಸಂತೋಷವೇ ನಿಮ್ಮ ಮೇಲೆ ಬಂದಿರುವ ಆರೋಪಗಳಿಂದ ಮುಕ್ತಿ ಸಿಗುವವರೆಗೆ ನೀವು ಬೇರೊಬ್ಬರ ಮೇಲೆ ಆರೋಪ ಮಾಡಲು ಯಾವುದೇ ನೈತಿಕತೆ ಇಲ್ಲ ಎಂದು ಕುಟುಕಿದ್ದಾರೆ. ತಮ್ಮದೇ ಪಕ್ಷದ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಆದಿಯಾಗಿ ಮಾಲೂರಿನ ಮಾಜಿ ಶಾಸಕ ಮಂಜುನಾಥಗೌಡ, ಸಾಮಾಜಿಕ ಹೋರಾಟಗಾರರಾದ ಕೆ.ಪಿ ವೆಂಕಟಾಚಲಪತಿ, ಗೂಳಿಗಾನಹಳ್ಳಿ ನಾಗರಾಜ್ ರವರು ಕೋಚಿಮಲ್ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ 20 ರಿಂದ 30 ಲಕ್ಷ ರೂ ವಸೂಲಿ ಮಾಡಿ ಅಕ್ರಮ ನಡೆಸಿರುವುದು, ಐಸ್ ಕ್ರೀಮ್ ಘಟಕ ಕಾಮಗಾರಿ ಪೂರ್ಣಗೊಳ್ಳದೆ ಸಲಕರಣೆ ಖರೀದಿಗೆ ಮುಂಗಡವಾಗಿ ಒಂಬತ್ತು ಕೋಟಿ ರೂ ಮಂಜೂರು ಮಾಡಿರುವುದು, ಸೋಲಾರ್ ಘಟಕದಲ್ಲಿ ಅಳವಡಿಸಿರುವ ಸಲಕರಣೆಗಳಿಗೆ ನಿಗದಿತ ದರಕ್ಕಿಂತ ಹೆಚ್ಚು ದರ ಕೊಟ್ಟು ಖರೀದಿ ಮಾಡಿರುವುದು, ಎಂವಿಕೆ ಗೋಲ್ಡನ್ ಡೈರಿ ಟೆಂಡರ್ನಲ್ಲಿ ಅಕ್ರಮ ನಡೆದಿರುವ ಬಗ್ಗೆ, ಕೋಚಿಮಲ್ನಲ್ಲಿ ನಿಮ್ಮ ಅವಧಿಯಲ್ಲಿ 512 ಕೋಟಿ ಹಗರಣ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಈಗಾಗಲೇ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ಹಣವನ್ನು ಪಡೆದಿರುವುದು ಸಾಬೀತಾಗಿದೆ. ಇದಕ್ಕೆಲ್ಲಾ ನಿಮ್ಮ ನೇತೃತ್ವದ ಆಡಳಿತ ಮಂಡಳಿಯೇ ಕಾರಣ. ನಂಜೇಗೌಡರೇ ಬೇರೋಬ್ಬರ ಮನೆಯನ್ನು ಸರಿಪಡಿಸುವ ಮುನ್ನ ನಿಮ್ಮ ಮನೆಯನ್ನು ಸರಿಪಡಿಸಿ ಹೇಗಿದ್ದರೂ ನಿಮ್ಮದೇ ಸರ್ಕಾರವಿದೆ, ಸರಿಪಡಿಸುವಂತಹವರನ್ನು ನೇಮಕ ಮಾಡಿ ಎಂದು ಸವಾಲು ಹಾಕಿದ್ದಾರೆ.
- *ದೇವರ ನಿಶ್ಚಯದಂತೆ ನಾವುಗಳು ಕೆಲಸ ಮಾಡಿ ದೇವಾಲಯ ನಿರ್ಮಾಣ ಮಾಡಿದ್ದೇವೆ:ಸಮಾಜ ಸೇವಕ ಕರುಣಾಮಯಿ ಲಕ್ಷ್ಮಣಗೌಡ* ಹಲವಾರು ಸಮುದಾಯದ ಜನರು ವಾಸಿಸುವ ಕಮ್ಯೂನಿಟಿಗಳಲ್ಲಿ ದೇವಾಲಯ ನಿರ್ಮಾಣ ಕಷ್ಟ ಸಾಧ್ಯ ಆದರೂ ಪ್ರೆಸ್ಟೀಜ್ ಗ್ಲೆನ್ ವುಡ್ ಕಮ್ಯೂನಟಿಯ ಜನರ ಆಶಯ ಹಾಗೂ ಸಂಕಲ್ಪ ದಂತೆ ಶ್ರೀ ವರಸಿದ್ಧಿ ವಿನಾಯಕ ದೇವಾಲಯವ ನಿರ್ಮಾಣದ ಬಗ್ಗೆ ಎರಡು ವರ್ಷದ ಹಿಂದಿನಿಂದಲೂ ಮಾಡುತ್ತಿದ್ದರೂ ದೇವಾಲಯವ ನಿರ್ಮಾಣದ ಕೆಲಸ ಪ್ರಾರಂಭ ಮಾಡಿದ 45 ದಿನಗಳಲ್ಲಿ ಅದರಲ್ಲೂ ಕೇವಲ 30 ದಿನಗಳು ಕೆಲಸ ಮಾಡಿ ಪೂರ್ಣಗೊಳಿಸಿರುವುದು ಗಿನ್ನಿಸ್ ದಾಖಲೆ ಎಂದು ಕೆಲವು ಸ್ನೇಹಿತರು ಹೇಳುತ್ತಿದ್ದರು ಎಂದು ಸಮಾಜ ಸೇವಕರು ಮತ್ತು ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ಲಕ್ಷ್ಮಣಗೌಡರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಬಿದರಹಳ್ಳಿ ಹೋಬಳಿ ಭೂದಿಗೆರೆ ರಸ್ತೆಯ ಮಂಡೂರುಗ್ರಾಮದ ಪ್ರೆಸ್ಟೀಜ್ ಗ್ಲೆನ್ ವುಡ್ ನ ಶ್ರೀ ವರಸಿದ್ಧ ವಿನಾಯಕ ಸೇವಾ ಸಮಿತಿ ವತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಯಾವುದೇ ಕೆಲಸ ಮಾಡಬೇಕಾದರೂ ನಾವು ನಿಮಿತ್ತ ಮಾತ್ರ ಎಲ್ಲಾ ದೇವರ ಕೃಪೆಯಿಂದ ನಡೆಯುತ್ತದೆ.ದೇವಾಲಯದ ಕೆಲಸ ಹಾಗೂ ಪ್ರತಿಷ್ಠಾಪನೆ ವಿನಾಯಕನ ಕೃಪೆಯಿಂದ ಸಾಂಗವಾಗಿ ನೆರವೇರಿದೆ ಎಂದು ಹೇಳಿದರು. ದೇವತಾ ಕಾರ್ಯದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿರವರು ಭಾಗವಹಿಸಿ ಹಿತವಚನಗಳನ್ನು ತಿಳಿಸಿದರು. ಅವರೊಂದಿಗೆ ಮುಖಂಡರುಗಳಾದ ಕಾಟ್ಮನೂರು ಪಾಪಣ್ಣ,ಕ್ರಾಸ್ ಮಂಜು,,ಜ್ಯೋತಿ ಪುರ ವೇಣು ರವರುಗಳು ಆಗಮಿಸಿ ಶುಭಕೋರಿದ್ದು ಸಂತೋಷ ತಂದಿದೆ ಎಂದು ತಿಳಿಸಿದರು. ದೇವಾಲಯ ನಿರ್ಮಾಣಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದವರಿಗೆ ಧನ್ಯವಾದಗಳನ್ನು ತಿಳಿಸಿದ ಅವರು ಶ್ರೀ ವರಸಿದ್ಧಿ ವಿನಾಯಕ ಎಲ್ಲರ ಕಷ್ಟಗಳ ನಿವಾರಣೆ ಮಾಡಲಿ ಹಾಗೂ ಕಲವರ ಮನಸ್ಸುಗಳಲ್ಲಿರುವ ಕಲ್ಮಶಗಳನ್ನು ತೊಳೆದು ಹಾಕಲಿ ಎಂದು ಆಶಿಸಿದರು ಹಾಗೂ ದೇವಾಲಯದ ಶುಚಿತ್ವ ಕಾಪಾಡಿಕೊಂಡು ಮುನ್ನಡಿಸಿಕೊಂಡು ಹೋಗ ಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ದೇವಾಲಯದ ಅಧ್ಯಕ್ಷರಾದ ಪಿಳ್ಳಪ್ಪ,ಸ್ಥಳೀಯ ನಿವಾಸಿಗಳಾದ ಜನಾರ್ದನ್, ಪರಿಷಿತ್,ನಿಕುನ್,ಚೌಧರಿ,ರಣವೀರ್, ರಂಚಿತ್,ಕೃಷ್ಣಾ ಸೇರಿದಂತೆ ಅನೇಕ ಮಹಿಳೆಯರು, ಮುಖಂಡರುಗಳು ಮತ್ತು ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.3
- MBBS students felicitation function1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುರುಗಮಲ್ಲ ಉರುಸ್ ಮಹೋತ್ಸವ ಶಾಂತಿ,ಸೌಹಾರ್ದತೆಗೆ ಪ್ರಾರ್ಥಿಸಿದ:ದರ್ಗಾದಲ್ಲಿ ಜೆ.ಕೆ. ಕೃಷ್ಣಾರೆಡ್ಡಿ ವಿಶೇಷ ಪೂಜೆ1
- ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಡಿಕೆ ಶಿವಕುಮಾರ್. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ. ದೇವನಹಳ್ಳಿ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಡಿಕೆ ಶಿವಕುಮಾರ್. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ. 7 ಗಂಟೆಯ ವಿಮಾನದಲ್ಲಿ ಪ್ರಯಾಣ. AI2654 ವಿಮಾನದ ಮೂಲಕ ಪ್ರಯಾಣ. ಕಾಂಗ್ರೆಸ್ ಕಚೇರಿ ಉದ್ಘಾಟನೆ, ನೀರಿನ ಸಮಸ್ತ ಕುರಿತು ಕಾನೂನು ತಜ್ಞರ ಜೊತೆಯಲ್ಲಿ ಚರ್ಚೆಗೆ ದೆಹಲಿ ಪ್ರಯಾಣ. ಸಿಎಂ ಬೀಳ್ಕೊಡಲು ಏರ್ಪೋರ್ಟ್ ಗೆ ಆಗಮಿಸಿದ ಸಚಿವ ಈಶ್ವರ್ ಖಂಡ್ರೆ. ಬೀದರ್ ಶಾಸಕ ರಹೀಂಖಾನ್ ಸಿಎಂ ತೆರಳಿದ ನಂತರ ಬೆಂಗಳೂರಿನತ್ತ ಹೊರಡಲಿರುವ ಈಶ್ವರ್ ಖಂಡ್ರೆ ರಹಿಂಖಾನ್ ಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒಂದೇ ವಿಮಾನದಲ್ಲಿ ಪ್ರಯಾಣ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ1
- ಶಿಡ್ಲಘಟ್ಟ ತಾಲ್ಲೂಕಿನ ಚೀಮನಹಳ್ಳಿ ಸಮಾಜ ಸೇವಕ ಸಿಎಂ ಬೈರೇಗೌಡ ರು ಮುತ್ತೈದೆಯರಿಗೆ ಹರಿಶಿನ, ಕುಂಕುಮ, ಸೀರೆ ವಿತರಣೆ1
- ಶಿಡ್ಲಘಟ್ಟದ ಹಂಡಿಗನಾಳ ಬಳಿ ಭೀಕರ ಅಪಘಾತ ; ಓರ್ವ ವ್ಯಕ್ತಿ ಸಾವು1
- ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಬಳಿ ಭೀಕರ ಅಪಘಾತ : ಓರ್ವ ವ್ಯಕ್ತಿ ಸಾವು! ಹಂಡಿಗನಾಳ ಸೇತುವೆ ಬಳಿ ಅಪಘಾತ; ಓರ್ವ ಸಾವು...!ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಈದ್ ಮಿಲಾದ್ ಸಂಭ್ರಮ:ಪ್ರವಾದಿ ಪೈಗಂಬರರ ಜನ್ಮದಿನಾಚರಣೆ1