ಕೇಂದ್ರ ಸರ್ಕಾರ ಮಾನದಂಡಗಳ ಆಧರಿಸಿ ಬರಪೀಡತ ತಾಲ್ಲೂಕುಗಳ ಘೋಷಣೆ* *ರಾಜಕೀಯ ಹಾಗೂ ಪಕ್ಷಪಾತಕ್ಕೆ ಅವಕಾಶ ಇಲ್ಲ* *ಸಚಿವ ಟಿ.ರಘುಮೂರ್ತಿ ಸ್ಪಷ್ಟನೆ* *ಕೇಂದ್ರ ಸರ್ಕಾರ ಮಾನದಂಡಗಳ ಆಧರಿಸಿ ಬರಪೀಡತ ತಾಲ್ಲೂಕುಗಳ ಘೋಷಣೆ* *ರಾಜಕೀಯ ಹಾಗೂ ಪಕ್ಷಪಾತಕ್ಕೆ ಅವಕಾಶ ಇಲ್ಲ* *ಸಚಿವ ಟಿ.ರಘುಮೂರ್ತಿ ಸ್ಪಷ್ಟನೆ* (ಚಿತ್ರದುರ್ಗ) ಕೇಂದ್ರ ಸರ್ಕಾರದ ‘ಬರ ನಿರ್ವಹಣೆ ಕೈಪಿಡಿ 2020’ ರ ಮಾರ್ಗದರ್ಶಿ ಸೂತ್ರಗಳನ್ನು ಆಧರಿಸಿ ‘ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ’(KSNDMC) ವರದಿ ನೀಡಿದ್ದು, ಇದರ ಆಧಾರದಲ್ಲಿ ರಾಜ್ಯದ 101 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೊಷಿಸಲಾಗಿದೆ. ಇದರಲ್ಲಿ ರಾಜಕೀಯ ಅಥವಾ ಯಾವುದೇ ಪಕ್ಷಪಾತ ನಡೆದಿಲ್ಲ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸ್ಪಷ್ಟಪಡಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ರಾಜ್ಯದಲ್ಲಿ ತೀವ್ರ ಮಳೆ ಅಭಾವ ತಲೆದೊರಿದ್ದು ಸರ್ಕಾರ ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಇದರಲ್ಲಿ 89 ತೀವ್ರ ಹಾಗೂ 12 ಸಾಧಾರಣ ಬರ ಪರಸ್ಥಿತಿ ತಲೆದೊರಿದೆ. ಚಿತ್ರದುರ್ಗ ಜಿಲ್ಲೆಯ ಆರು ತಾಲ್ಲೂಕುಗಳ ಪೈಕಿ ಹಿರಿಯೂರು, ಚಳ್ಳಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳನ್ನು 'ತೀವ್ರ ಬರಪೀಡಿತ' ಎಂದು ಗುರುತಿಸಲಾಗಿದೆ. ಚಿತ್ರದುರ್ಗ,ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳು ಪಟ್ಟಿಯಿಂದ ಹೊರಗುಳಿದಿವೆ. ರಾಜ್ಯದ 25 ಜಿಲ್ಲೆಗಳ 175 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿಯಿದ್ದು, ಕೇಂದ್ರ ಸರ್ಕಾರದ ಮಾನದಂಡಗಳಡಿ 101 ತಾಲ್ಲೂಕುಗಳನ್ನು ಘೋಷಿಸಲಾಗಿದೆ. ಬಿಟ್ಟುಹೋದ ತಾಲ್ಲೂಕುಗಳಲ್ಲಿ ಸತತ ಮೂರು ವಾರಗಳ ಶುಷ್ಕ ವಾತಾವರಣದ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಮರು ಮೌಲ್ಯಮಾಪನ ನಡೆಸಿ, 2ನೇ ಹಂತದಲ್ಲಿ ಬರಪೀಡಿತ ಎಂದು ಘೋಷಿಸಲು ಸರ್ಕಾರ ಸಿದ್ಧವಿದೆ. ಈ ಹಂತದಲ್ಲಿ ಜಿಲ್ಲೆಯ ಉಳಿದ ತಾಲ್ಲೂಕುಗಳನ್ನು ಸಹ ಬರಪೀಡತ ಪಟ್ಟಿಯಲ್ಲಿ ಸೇರಿಸುವ ಭರವಸೆಯನ್ನು ಸಚಿವ ಟಿ.ರಘುಮೂರ್ತಿ ನೀಡಿದರು. *ಮೂರು ತಾಲ್ಲೂಕು ಕೈ ಬಿಡಲು ತಾಂತ್ರಿಕ ಕಾರಣ* ಕೇಂದ್ರ ಸರ್ಕಾರದ ‘ಬರ ನಿರ್ವಹಣೆ ಕೈಪಿಡಿ 2020’ ರ ಮಾರ್ಗದರ್ಶಿ ನಿಯಮ ಹಾಗೂ ಮಾನದಂಡಗಳಲ್ಲಿ ಮೊದಲ ಹಂತದಲ್ಲಿ ವಾಡಿಕೆ ಮಳೆಗಿಂತ ಶೇ.60 ಕ್ಕಿಂತ ಹೆಚ್ಚು ಕೊರತೆಯಾದರೆ, ಸಸತ ಮೂರುವಾರ ಶುಷ್ಕ ವಾತಾವರಣ ಇದ್ದರೆ ಬರ ಪೀಡಿದ ಪ್ರದೇಶ ಎಂದು ಘೋಷಿಸಲಾಗುತ್ತದೆ. ಚಿತ್ರದುರ್ಗ ಜಿಲ್ಲೆಯ ಜೂನ್ 1 ರಿಂದ ಆಗಸ್ಟ್ 12 ರವರೆಗೆ ಚಳ್ಳಕೆರೆ 199 ಮಿ.ಮೀ, ಚಿತ್ರದುರ್ಗ 242 ಮಿ.ಮೀ, ಹಿರಿಯೂರು 138 ಮಿ.ಮೀ, ಹೊಳಲ್ಕೆರೆ 225 ಮಿ.ಮೀ, ಹೊಸದುರ್ಗ 186 ಮಿ.ಮೀ, ಮೊಳಕಾಲ್ಮೂರು 214 ಮಿ.ಮೀ ಆಗಿದೆ. ಚಿತ್ರದುರ್ಗ ಜಿಲ್ಲೆಯ ಯಾವುದೇ ತಾಲ್ಲೂಕುಗಳಲ್ಲಿ ಶೇ.60 ರಷ್ಟು ಮಳೆ ಕೊರತೆಯಾಗಿಲ್ಲ, ಆದರೆ ಜೂನ್ 1 ರಿಂದ ಆಗಸ್ಟ್ 12 ರ ಅವಧಿಯಲ್ಲಿ ಹಿರಿಯೂರು, ಚಳ್ಳಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳಲ್ಲಿ ಸತತ ಮೂರು ವಾರಗಳ ಕಾಲ ಶುಷ್ಕ ವಾತಾವರಣ ದಾಖಲಾಗಿದೆ. ಇದರ ಆಧಾರದಲ್ಲಿ ಮೊದಲ ಹಂತದಲ್ಲಿ ಈ ತಾಲ್ಲೂಕುಗಳು ಬರ ಪಟ್ಟಿಗೆ ಸೇರ್ಪಡೆಯಾಗಿವೆ. ಆದರೆ ಚಿತ್ರದುರ್ಗ,ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶುಷ್ಕ ವಾತಾವರಣ ದಾಖಲಾಗಿಲ್ಲ. ಇದೇ ತಾಂತ್ರಿಕ ಕಾರಣದಿಂದಾಗಿ ಈ ತಾಲ್ಲೂಕುಗಳು ಬರಪಟ್ಟಿಯಲ್ಲಿ ಸೇರಿಲ್ಲ. ಜಿಲ್ಲೆಯ ರೈತಮುಖಂಡರು ಹಾಗೂ ಜನಪ್ರತಿನಿಧಿಗಳು ಈ ಅಂಶಗಳನ್ನು ಗಮನಿಸಬೇಕು. ಬರ ಘೋಷಣೆಯಲ್ಲಿ ಯಾವುದೇ ರಾಜಕೀಯ ಅಥವಾ ಪಕ್ಷಪಾತ ಮಾಡುವ ಪ್ರಮೇಯ ಸರ್ಕಾರಕ್ಕೆ ಇಲ್ಲ ಎಂದು ಸಚಿವ ಟಿ.ರಘುಮೂರ್ತಿ ತಿಳಿಸಿದರು. ಎರಡನೇ ಹಂತದಲ್ಲಿ ಬರ ಪೀಡಿತ ತಾಲ್ಲೂಕುಗಳಲ್ಲಿ ಬಿತ್ತನೆಯಾದ ಕೃಷಿ ಬೆಳೆಗಳ ಸ್ಥಿತಿ, ಉಪಗ್ರಹ ಆಧಾರಿತ ಸಸ್ಯವರ್ಗ ಸೂಚ್ಯಂಕ (Satellite-based Vegetation Indices), ಮಣ್ಣಿನ ತೇವಾಂಶ ಮತ್ತು ಅಂತರ್ಜಲ ಮಟ್ಟವನ್ನು ಪರಿಶೀಲಿಸಲಾಗುತ್ತದೆ. ಇದನ್ನು ಆಧರಿಸಿ ಬರದ ತೀವ್ರತೆ ಪ್ರಭಾವ ತಿಳಿದು ಬರುತ್ತೆದೆ. ಈ ದತ್ತಾಂಶಗಳನ್ನು ಕ್ರೂಢಿಕರಿಸಿ ಅಧಿಕಾರಿಗಳು ಬರಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಸ್ಥಳದ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸಿ ವರದಿ ನೀಡುವರು. ಕೆ.ಎಸ್.ಎನ್.ಡಿ.ಎಂ.ಸಿ ನಡೆಸಿದ ಸಮಗ್ರ ಬರ ಮೌಲ್ಯಮಾಪನ ಆಧಾರದಲ್ಲಿ ಒಟ್ಟು 102 ತಾಲ್ಲೂಕುಗಳಲ್ಲಿ ಮೂರನೇ ಹಂತದ ಸ್ಥಳೀಯ ತನಿಖೆ ಹಾಗೂ ಕ್ಷೇತ್ರ ಪರಿಶೀಲನೆ ಪ್ರಕ್ರಿಯೆ ನಡೆಸಲು ಆಗಸ್ಟ್ 13 ರಂದು ಮಂತ್ರಿ ಮಂಡಲದ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಚಿವ ಟಿ.ರಘುಮೂರ್ತಿ ಮಾಹಿತಿ ನೀಡಿದರು. ಆಗಸ್ಟ್ ದ್ವಿತೀಯಾರ್ಧ ಹಾಗೂ ಸೆಪ್ಟೆಂಬರ್ ತಿಂಗಳ ಮಳೆ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು, ಕೃಷಿ ಬೆಳೆಗಳ ಮೇಲಾಗುವ ಪರಿಣಾಮಗಳನ್ನು ಆಧರಿಸಿ 2026ರ ಖಾರೀಫ್ ಋತುವಿನ ಕೊನೆಯವರೆಗೆ ಮತ್ತೊಮ್ಮೆ ಬರ ಪರಿಸ್ಥಿತಿಯನ್ನು ಪರಾಮರ್ಶಿಸಲಾಗುವುದು. ಖಾರೀಫ್ ಋತುವಿನುದ್ದಕ್ಕೂ ನಿಯಮಾನುಸಾರ ಬರ ಪೀಡಿತ ಸ್ಥಳಗಳ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸಿ ಹೆಚ್ಚುವರಿ ತಾಲೂಕುಗಳು ಬರಪೀಡಿತ ಎಂದು ಹಂತ-ಹಂತವಾಗಿ ಘೋಷಣೆ ಅಧಿಸೂಚನೆ ಹೊರಡಿಸುವ ಅವಕಾಶವೂ ಇದೆ ಸಚಿವ ಟಿ.ರಘುಮೂರ್ತಿ ಹೇಳಿದರು. *ಬರ ಘೋಷಣೆಗೆ ಹೋಬಳಿ ಘಟಕ ಪರಿಗಣನೆಗೆ ಮನವಿ* ಬರ ಘೋಷಣೆಗೆ ಪ್ರಸ್ತುತ ತಾಲ್ಲೂಕನ್ನು ಘಟಕವಾಗಿ ಪರಿಗಣಿಸಲಾಗುತ್ತಿದೆ. ಇದರಿಂದ ಕೆಲವೊಂದು ನಿರ್ದಿಷ್ಟ ಭಾಗಗಳ ರೈತರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಹೋಬಳಿ ಘಟಕವನ್ನಾಗಿ ಬರ ಪರಿಸ್ಥಿತಿಯನ್ನು ಪರಿಗಣಿಸುವಂತೆ ಮುಂಬರುವ ಸಂಪುಟ ಸಭೆಯಲ್ಲಿ ಮನವಿ ಮಾಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಸಚಿವ ಟಿ. ರಘುಮೂರ್ತಿ ಉತ್ತರಿಸಿದರು. ಜಿಲ್ಲೆಯಲ್ಲಿ ವಾಡಿಕೆಯಂತೆ ಮಳೆಯ ಅಭಾವವಿರುವುದು ನಿಜ. ನಿರಂತರವಾಗಿ ಮಳೆಯಾಗದೆ ಅಸಮತೋಲಿತವಾಗಿ ಮಳೆಯಾಗುತ್ತಿರುವುದು ತೊಂದರೆಗೆ ಕಾರಣವಾಗಿದೆ. ಪ್ರಸ್ತುತ ಕೇಂದ್ರ ಸರ್ಕಾರದ ಬರದ ಮಾನದಂಡ ನಿರ್ಧರಿಸಲಾಗುತ್ತಿದೆ. ಆದರೆ ಹೋಬಳಿವಾರು ಪರಿಗಣಿಸಿದರೆ ನೈಜ ಸಂತ್ರಸ್ತರಿಗೆ ನೆರವು ನೀಡಲು ಸಾಧ್ಯ. ಮೊಳಕಾಲ್ಮೂರು ಹಾಗೂ ಚಳ್ಳಕೆರೆ ತಾಲ್ಲೂಕುಗಳು ಸದಾ ಬರಪೀಡಿತ ಪ್ರದೇಶಗಳಾಗಿದ್ದರೂ, ನಿಯಮಗಳ ಪ್ರಕಾರ ಕನಿಷ್ಠ ಮೂರುವರೆ ವಾರಗಳ ಕಾಲ ಶುಷ್ಕ ವಾತಾವರಣ ಮಾನದಂಡ ತಾಂತ್ರಿಕವಾಗಿ ತೃಪ್ತಿಯಾಗದ ಕಾರಣ ಬರ ಘೋಷಣೆಯಲ್ಲಿ ತೊಡಕಾಗಿದೆ. ಆದರೆ ಬೆಳೆ ಹಾನಿ ಹಾಗೂ ವಾಸ್ತವ ಸ್ಥಿತಿಯನ್ನು ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಸರ್ಕಾರ ಶ್ರಮಿಸಲಿದೆ ಎಂದು ಸಚಿವರು ಭರವಸೆ ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಇಓ ಡಾ.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.
ಕೇಂದ್ರ ಸರ್ಕಾರ ಮಾನದಂಡಗಳ ಆಧರಿಸಿ ಬರಪೀಡತ ತಾಲ್ಲೂಕುಗಳ ಘೋಷಣೆ* *ರಾಜಕೀಯ ಹಾಗೂ ಪಕ್ಷಪಾತಕ್ಕೆ ಅವಕಾಶ ಇಲ್ಲ* *ಸಚಿವ ಟಿ.ರಘುಮೂರ್ತಿ ಸ್ಪಷ್ಟನೆ* *ಕೇಂದ್ರ ಸರ್ಕಾರ ಮಾನದಂಡಗಳ ಆಧರಿಸಿ ಬರಪೀಡತ ತಾಲ್ಲೂಕುಗಳ ಘೋಷಣೆ* *ರಾಜಕೀಯ ಹಾಗೂ ಪಕ್ಷಪಾತಕ್ಕೆ ಅವಕಾಶ ಇಲ್ಲ* *ಸಚಿವ ಟಿ.ರಘುಮೂರ್ತಿ ಸ್ಪಷ್ಟನೆ* (ಚಿತ್ರದುರ್ಗ) ಕೇಂದ್ರ ಸರ್ಕಾರದ ‘ಬರ ನಿರ್ವಹಣೆ ಕೈಪಿಡಿ 2020’ ರ ಮಾರ್ಗದರ್ಶಿ ಸೂತ್ರಗಳನ್ನು ಆಧರಿಸಿ ‘ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ’(KSNDMC) ವರದಿ ನೀಡಿದ್ದು, ಇದರ ಆಧಾರದಲ್ಲಿ ರಾಜ್ಯದ 101 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೊಷಿಸಲಾಗಿದೆ. ಇದರಲ್ಲಿ ರಾಜಕೀಯ ಅಥವಾ ಯಾವುದೇ ಪಕ್ಷಪಾತ ನಡೆದಿಲ್ಲ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸ್ಪಷ್ಟಪಡಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ರಾಜ್ಯದಲ್ಲಿ ತೀವ್ರ ಮಳೆ ಅಭಾವ ತಲೆದೊರಿದ್ದು ಸರ್ಕಾರ ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಇದರಲ್ಲಿ 89 ತೀವ್ರ ಹಾಗೂ 12 ಸಾಧಾರಣ ಬರ ಪರಸ್ಥಿತಿ ತಲೆದೊರಿದೆ. ಚಿತ್ರದುರ್ಗ ಜಿಲ್ಲೆಯ ಆರು ತಾಲ್ಲೂಕುಗಳ ಪೈಕಿ ಹಿರಿಯೂರು, ಚಳ್ಳಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳನ್ನು 'ತೀವ್ರ ಬರಪೀಡಿತ' ಎಂದು ಗುರುತಿಸಲಾಗಿದೆ. ಚಿತ್ರದುರ್ಗ,ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳು ಪಟ್ಟಿಯಿಂದ ಹೊರಗುಳಿದಿವೆ. ರಾಜ್ಯದ 25 ಜಿಲ್ಲೆಗಳ 175 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿಯಿದ್ದು, ಕೇಂದ್ರ ಸರ್ಕಾರದ ಮಾನದಂಡಗಳಡಿ 101 ತಾಲ್ಲೂಕುಗಳನ್ನು ಘೋಷಿಸಲಾಗಿದೆ. ಬಿಟ್ಟುಹೋದ ತಾಲ್ಲೂಕುಗಳಲ್ಲಿ ಸತತ ಮೂರು ವಾರಗಳ ಶುಷ್ಕ ವಾತಾವರಣದ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಮರು ಮೌಲ್ಯಮಾಪನ ನಡೆಸಿ, 2ನೇ ಹಂತದಲ್ಲಿ ಬರಪೀಡಿತ ಎಂದು ಘೋಷಿಸಲು ಸರ್ಕಾರ ಸಿದ್ಧವಿದೆ. ಈ ಹಂತದಲ್ಲಿ ಜಿಲ್ಲೆಯ ಉಳಿದ ತಾಲ್ಲೂಕುಗಳನ್ನು ಸಹ ಬರಪೀಡತ ಪಟ್ಟಿಯಲ್ಲಿ ಸೇರಿಸುವ ಭರವಸೆಯನ್ನು ಸಚಿವ ಟಿ.ರಘುಮೂರ್ತಿ ನೀಡಿದರು. *ಮೂರು ತಾಲ್ಲೂಕು ಕೈ ಬಿಡಲು ತಾಂತ್ರಿಕ ಕಾರಣ* ಕೇಂದ್ರ ಸರ್ಕಾರದ ‘ಬರ ನಿರ್ವಹಣೆ ಕೈಪಿಡಿ 2020’ ರ ಮಾರ್ಗದರ್ಶಿ ನಿಯಮ ಹಾಗೂ ಮಾನದಂಡಗಳಲ್ಲಿ ಮೊದಲ ಹಂತದಲ್ಲಿ ವಾಡಿಕೆ ಮಳೆಗಿಂತ ಶೇ.60 ಕ್ಕಿಂತ ಹೆಚ್ಚು ಕೊರತೆಯಾದರೆ, ಸಸತ ಮೂರುವಾರ ಶುಷ್ಕ ವಾತಾವರಣ ಇದ್ದರೆ ಬರ ಪೀಡಿದ ಪ್ರದೇಶ ಎಂದು ಘೋಷಿಸಲಾಗುತ್ತದೆ. ಚಿತ್ರದುರ್ಗ ಜಿಲ್ಲೆಯ ಜೂನ್ 1 ರಿಂದ ಆಗಸ್ಟ್ 12 ರವರೆಗೆ ಚಳ್ಳಕೆರೆ 199 ಮಿ.ಮೀ, ಚಿತ್ರದುರ್ಗ 242 ಮಿ.ಮೀ, ಹಿರಿಯೂರು 138 ಮಿ.ಮೀ, ಹೊಳಲ್ಕೆರೆ 225 ಮಿ.ಮೀ, ಹೊಸದುರ್ಗ 186 ಮಿ.ಮೀ, ಮೊಳಕಾಲ್ಮೂರು 214 ಮಿ.ಮೀ ಆಗಿದೆ. ಚಿತ್ರದುರ್ಗ ಜಿಲ್ಲೆಯ ಯಾವುದೇ ತಾಲ್ಲೂಕುಗಳಲ್ಲಿ ಶೇ.60 ರಷ್ಟು ಮಳೆ ಕೊರತೆಯಾಗಿಲ್ಲ, ಆದರೆ ಜೂನ್ 1 ರಿಂದ ಆಗಸ್ಟ್ 12 ರ ಅವಧಿಯಲ್ಲಿ ಹಿರಿಯೂರು, ಚಳ್ಳಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳಲ್ಲಿ ಸತತ ಮೂರು ವಾರಗಳ ಕಾಲ ಶುಷ್ಕ ವಾತಾವರಣ ದಾಖಲಾಗಿದೆ. ಇದರ ಆಧಾರದಲ್ಲಿ ಮೊದಲ ಹಂತದಲ್ಲಿ ಈ ತಾಲ್ಲೂಕುಗಳು ಬರ ಪಟ್ಟಿಗೆ ಸೇರ್ಪಡೆಯಾಗಿವೆ. ಆದರೆ ಚಿತ್ರದುರ್ಗ,ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶುಷ್ಕ ವಾತಾವರಣ ದಾಖಲಾಗಿಲ್ಲ. ಇದೇ ತಾಂತ್ರಿಕ ಕಾರಣದಿಂದಾಗಿ ಈ ತಾಲ್ಲೂಕುಗಳು ಬರಪಟ್ಟಿಯಲ್ಲಿ ಸೇರಿಲ್ಲ. ಜಿಲ್ಲೆಯ ರೈತಮುಖಂಡರು ಹಾಗೂ ಜನಪ್ರತಿನಿಧಿಗಳು ಈ ಅಂಶಗಳನ್ನು ಗಮನಿಸಬೇಕು. ಬರ ಘೋಷಣೆಯಲ್ಲಿ ಯಾವುದೇ ರಾಜಕೀಯ ಅಥವಾ ಪಕ್ಷಪಾತ ಮಾಡುವ ಪ್ರಮೇಯ ಸರ್ಕಾರಕ್ಕೆ ಇಲ್ಲ ಎಂದು ಸಚಿವ ಟಿ.ರಘುಮೂರ್ತಿ ತಿಳಿಸಿದರು. ಎರಡನೇ ಹಂತದಲ್ಲಿ ಬರ ಪೀಡಿತ ತಾಲ್ಲೂಕುಗಳಲ್ಲಿ ಬಿತ್ತನೆಯಾದ ಕೃಷಿ ಬೆಳೆಗಳ ಸ್ಥಿತಿ, ಉಪಗ್ರಹ ಆಧಾರಿತ ಸಸ್ಯವರ್ಗ ಸೂಚ್ಯಂಕ (Satellite-based Vegetation Indices), ಮಣ್ಣಿನ ತೇವಾಂಶ ಮತ್ತು ಅಂತರ್ಜಲ ಮಟ್ಟವನ್ನು ಪರಿಶೀಲಿಸಲಾಗುತ್ತದೆ. ಇದನ್ನು ಆಧರಿಸಿ ಬರದ ತೀವ್ರತೆ ಪ್ರಭಾವ ತಿಳಿದು ಬರುತ್ತೆದೆ. ಈ ದತ್ತಾಂಶಗಳನ್ನು ಕ್ರೂಢಿಕರಿಸಿ ಅಧಿಕಾರಿಗಳು ಬರಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಸ್ಥಳದ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸಿ ವರದಿ ನೀಡುವರು. ಕೆ.ಎಸ್.ಎನ್.ಡಿ.ಎಂ.ಸಿ ನಡೆಸಿದ ಸಮಗ್ರ ಬರ ಮೌಲ್ಯಮಾಪನ ಆಧಾರದಲ್ಲಿ ಒಟ್ಟು 102 ತಾಲ್ಲೂಕುಗಳಲ್ಲಿ ಮೂರನೇ ಹಂತದ ಸ್ಥಳೀಯ ತನಿಖೆ ಹಾಗೂ ಕ್ಷೇತ್ರ ಪರಿಶೀಲನೆ ಪ್ರಕ್ರಿಯೆ ನಡೆಸಲು ಆಗಸ್ಟ್ 13 ರಂದು ಮಂತ್ರಿ ಮಂಡಲದ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಚಿವ ಟಿ.ರಘುಮೂರ್ತಿ ಮಾಹಿತಿ ನೀಡಿದರು. ಆಗಸ್ಟ್ ದ್ವಿತೀಯಾರ್ಧ ಹಾಗೂ ಸೆಪ್ಟೆಂಬರ್ ತಿಂಗಳ ಮಳೆ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು, ಕೃಷಿ ಬೆಳೆಗಳ ಮೇಲಾಗುವ ಪರಿಣಾಮಗಳನ್ನು ಆಧರಿಸಿ 2026ರ ಖಾರೀಫ್ ಋತುವಿನ ಕೊನೆಯವರೆಗೆ ಮತ್ತೊಮ್ಮೆ ಬರ ಪರಿಸ್ಥಿತಿಯನ್ನು ಪರಾಮರ್ಶಿಸಲಾಗುವುದು. ಖಾರೀಫ್ ಋತುವಿನುದ್ದಕ್ಕೂ ನಿಯಮಾನುಸಾರ ಬರ ಪೀಡಿತ ಸ್ಥಳಗಳ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸಿ ಹೆಚ್ಚುವರಿ ತಾಲೂಕುಗಳು ಬರಪೀಡಿತ ಎಂದು ಹಂತ-ಹಂತವಾಗಿ ಘೋಷಣೆ ಅಧಿಸೂಚನೆ ಹೊರಡಿಸುವ ಅವಕಾಶವೂ ಇದೆ ಸಚಿವ ಟಿ.ರಘುಮೂರ್ತಿ ಹೇಳಿದರು. *ಬರ ಘೋಷಣೆಗೆ ಹೋಬಳಿ ಘಟಕ ಪರಿಗಣನೆಗೆ ಮನವಿ* ಬರ ಘೋಷಣೆಗೆ ಪ್ರಸ್ತುತ ತಾಲ್ಲೂಕನ್ನು ಘಟಕವಾಗಿ ಪರಿಗಣಿಸಲಾಗುತ್ತಿದೆ. ಇದರಿಂದ ಕೆಲವೊಂದು ನಿರ್ದಿಷ್ಟ ಭಾಗಗಳ ರೈತರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಹೋಬಳಿ ಘಟಕವನ್ನಾಗಿ ಬರ ಪರಿಸ್ಥಿತಿಯನ್ನು ಪರಿಗಣಿಸುವಂತೆ ಮುಂಬರುವ ಸಂಪುಟ ಸಭೆಯಲ್ಲಿ ಮನವಿ ಮಾಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಸಚಿವ ಟಿ. ರಘುಮೂರ್ತಿ ಉತ್ತರಿಸಿದರು. ಜಿಲ್ಲೆಯಲ್ಲಿ ವಾಡಿಕೆಯಂತೆ ಮಳೆಯ ಅಭಾವವಿರುವುದು ನಿಜ. ನಿರಂತರವಾಗಿ ಮಳೆಯಾಗದೆ ಅಸಮತೋಲಿತವಾಗಿ ಮಳೆಯಾಗುತ್ತಿರುವುದು ತೊಂದರೆಗೆ ಕಾರಣವಾಗಿದೆ. ಪ್ರಸ್ತುತ ಕೇಂದ್ರ ಸರ್ಕಾರದ ಬರದ ಮಾನದಂಡ ನಿರ್ಧರಿಸಲಾಗುತ್ತಿದೆ. ಆದರೆ ಹೋಬಳಿವಾರು ಪರಿಗಣಿಸಿದರೆ ನೈಜ ಸಂತ್ರಸ್ತರಿಗೆ ನೆರವು ನೀಡಲು ಸಾಧ್ಯ. ಮೊಳಕಾಲ್ಮೂರು ಹಾಗೂ ಚಳ್ಳಕೆರೆ ತಾಲ್ಲೂಕುಗಳು ಸದಾ ಬರಪೀಡಿತ ಪ್ರದೇಶಗಳಾಗಿದ್ದರೂ, ನಿಯಮಗಳ ಪ್ರಕಾರ ಕನಿಷ್ಠ ಮೂರುವರೆ ವಾರಗಳ ಕಾಲ ಶುಷ್ಕ ವಾತಾವರಣ ಮಾನದಂಡ ತಾಂತ್ರಿಕವಾಗಿ ತೃಪ್ತಿಯಾಗದ ಕಾರಣ ಬರ ಘೋಷಣೆಯಲ್ಲಿ ತೊಡಕಾಗಿದೆ. ಆದರೆ ಬೆಳೆ ಹಾನಿ ಹಾಗೂ ವಾಸ್ತವ ಸ್ಥಿತಿಯನ್ನು ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಸರ್ಕಾರ ಶ್ರಮಿಸಲಿದೆ ಎಂದು ಸಚಿವರು ಭರವಸೆ ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಇಓ ಡಾ.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.
- ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ವಾಗ್ದಾಳಿ ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಹರಿಹಾಯ್ದಿದ್ದಾರೆ. ನಾಯಕನಹಟ್ಟಿ ಪಟ್ಟಣದಲ್ಲಿ ಅವರು ಮಾತನಾಡಿದ್ದು ನಾಯಕನಹಟ್ಟಿ ಸಂಡೂರು, ಮೊಳಕಾಲ್ಮೂರು ,ಕೂಡ್ಲಿಗಿ, ಬರಪಿಡಿತ ಪ್ರದೇಶವೆಂದು ಘೋಷಣೆ ಮಾಡಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಮೀಸಲಿಡಿ ಹಾಗೂ ಎಲ್ಲಾ ಕೆರೆಗಳಿಗೆ ನೀರು ತರುವಂತಹ ಕೆಲಸ ಕೆಲಸ ಮಾಡಿ ಹಾಗೂ ದನ ಕರೆಗಳಿಗೆ ಮೇವು ಕೊಡುವಂತ ಕೆಲಸ ಮಾಡಿ ಮಾಜಿ ಶಾಸಕ ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಬರಗಾಲ ಪ್ರದೇಶವೆಂದು ಘೋಷಣೆ ಮಾಡಬಹುದಾಗಿತ್ತಲ್ಲ ಯಾಕೆ ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡಲಿಲ್ಲ ಕಾಂಗ್ರೆಸ್ನವರು ಕ್ಷೇತ್ರವನ್ನು ಕಡೆಗಣಿಸಿದ್ದಾರೆ ಎಂದು ಆರೋಪ ಮಾಡಿದರು. ಮೊಳಕಾಲ್ಮೂರು ಶಾಸಕ ಗೋಪಾಲಕೃಷ್ಣರವರೆ ರಾಜ್ಯದಲ್ಲಿ ನಿಮ್ಮ ಸರ್ಕಾರ ಇದೆ ಯಲ್ಲ ಯಾಕೆ ಬರಗಾಲ ಪ್ರದೇಶವೆಂದು ಘೋಷಣೆ ಮಾಡಲಿಲ್ಲ. ಮೊಳಕಾಲ್ಮೂರು ಕ್ಷೇತ್ರವನ್ನು ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡದೆ ಹೋದರೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಅತ್ಯಂತ ಹಿಂದುಳಿದಂತ ಕ್ಷೇತ್ರವಾಗಿದೆ ರೈತರು ತೀರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸಾಲ ಮಾಡಿ ಬಿತ್ತನೆ ಮಾಡಿದ್ದಾರೆ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಇದರಿಂದ ರೈತರ ಆರ್ಥಿಕ ಪರಿಸ್ಥಿತಿ ಅದೇಗೆಟ್ಟಿದೆ ಬೆಳೆ ಕೈಗೆ ಸಿಗುವುದು ಅನುಮಾನವಾಗಿದ್ದು ಈ ಹಿನ್ನೆಲೆ ಶಾಸಕರು ಆದಷ್ಟು ಬೇಗ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡುವಂತೆ ಆಗ್ರಹ ಮಾಡಿದ್ದಾರೆ.1
- ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು. ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ನಗರದ ಕುವೆಂಪು ಆಂಗ್ಲ ಮಾಧ್ಯಮ ಪ್ರೌಢಶಾಲೆ ಆವರಣದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಹೈನುಗಾರಿಕೆಯಿಂದ ಜೀವನೋಪಾಯ’ ವಿಷಯದ ಚಿತ್ರಕಲಾ ಸ್ಪರ್ಧೆ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಮಾತನಾಡಿ ಶಿವಮೊಗ್ಗ ಹಾಲು ಒಕ್ಕೂಟದ ಚಿತ್ರದುರ್ಗ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಂದಿನಿ ಉತ್ಪನ್ನಗಳ ಪರಿಚಯ ಮಾಡಿಸುವುದು, ಹೈನುಗಾರಿಕೆಯಿಂದ ರೈತರಿಗೆ ಆಗುವ ಪ್ರಯೋಜನಗಳ ಕುರಿತು ಅರಿವು ಮೂಡಿಸುವುದು ಹಾಗೂ ವಿದ್ಯಾರ್ಥಿಗಳ ಅನಿಸಿಕೆಗಳನ್ನು ಚಿತ್ರಗಳ ಮೂಲಕ ಅಭಿವ್ಯಕ್ತಿಗೊಳಿಸಲು ವೇದಿಕೆ ಕಲ್ಪಿಸುವುದು ಸ್ಪರ್ಧೆಯ ಮುಖ್ಯ ಉದ್ದೇಶವಾಗಿದೆ.ಇಂದು ಗ್ರಾಮೀಣ ಭಾಗದ ಅನೇಕ ರೈತ ಕುಟುಂಬಗಳು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಹಲವರಿಗೆ ಇದು ಪ್ರಮುಖ ಜೀವನೋಪಾಯವಾಗಿದೆ. ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು. ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದರು. ಚಿತ್ರಕಲಾ ಸ್ಪರ್ಧೆಯಲ್ಲಿ ಗ್ರಾಮಾಂತರ ಪ್ರೌಢಶಾಲೆ, ಪರಶುರಾಂಪುರದ ಈಶ್ವರಮ್ಮ ಜೆ. ಪ್ರಥಮ, ಆದರ್ಶ ಶಾಲೆಯ ದ್ರಾಕ್ಷಾಯಿಣಿ ಎಲ್. ದ್ವಿತೀಯ ಹಾಗೂ ಸಾಗರ್ ಎಂ.ಡಿ. ತೃತೀಯ ಸ್ಥಾನ ಪಡೆದು ಬಹುಮಾನ ಗಳಿಸಿದರು. .1
- ಸಂಜೆ 4:30 ಯಿಂದ ರಾತ್ರಿ 9:30ರ ವರೆಗೆ ನೂರಾರು ಲಾರಿಗಳು ರಸ್ತೆಗೆ ಅಡ್ಡ ದಿಡ್ಡಿ ನಿಲ್ಲಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳ ವಾಹನಗಳಿಗೆ ತೊಂದರೆ ಮಾಡಿದ್ದಾರೆ. ಸಂಜೆ 4:30 ಯಿಂದ ರಾತ್ರಿ 9:30ರ ವರೆಗೆ ನೂರಾರು ಲಾರಿಗಳು ರಸ್ತೆಗೆ ಅಡ್ಡ ದಿಡ್ಡಿ ನಿಲ್ಲಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳ ವಾಹನಗಳಿಗೆ ತೊಂದರೆ ಮಾಡಿದ್ದಾರೆ. ಪೊಲೀಸರು ಎಷ್ಟು ಬಾರಿ ಈ ರೀತಿ ರಸ್ತೆ ಅಡ್ಡ ಮಾಡಬೇಡಿ ಎಂದು ಹೇಳಿದರೂ ಸಹ ಲಾರಿ ಚಾಲಕರು ಇದೇ ರೀತಿಯ ಕಾನೂನು ಬಾಹಿರ ಕೃತ್ಯಗಳನ್ನು ಮಾಡಿಕೊಂಡೇ ಬರುತ್ತಿದ್ದಾರೆ. ಅಚಾತುರ್ಯ ಎಂದರೆ ನಾನು ಈಗ ಇಲ್ಲಿಯೇ ಸಾಯುತ್ತೇನೆಂದು ದೇಹದ ಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚುವ ನಾಟಕದ ಕೃತ್ಯ ಅಚ್ಚರಿ ಎನಿಸಿತು. ಸ್ಥಳದಲ್ಲಿರುವ ಪೊಲೀಸರು ಮತ್ತು ಸಾರ್ವಜನಿಕರ ಮೇಲೆ ಡೀಸೆಲ್ ಎರಚಿದರು. ಸ್ಥಳಕ್ಕೆ ಬಾಲಚಂದ್ರ ನಾಯಕ್ (ಸರ್ಕಲ್ ಇನ್ಸ್ಪೆಕ್ಟರ್) ಮತ್ತು ತಂಡ ಆಗಮಿಸಿ ಲಾರಿ ಚಾಲಕರನ್ನು ಅಲ್ಲಿಂದ ಖಾಲಿ ಮಾಡಿಸಿದರು. ರೈತರು ರೈಲ್ವೆ ಅಂಡರ್ ಪಾಸ್ ನಿಂದ ತಮ್ಮ ಪ್ರತಿಭಟನಾ ಸ್ಥಳಕ್ಕೆ ತೆರಳಿದರು. ಜನರು ಕಾಲಿ ಆಗುತ್ತಿದ್ದಂತೆ ಲಾರಿ ಚಾಲಕರು ಊರಿನ ಒಳಗಡೆ ಬರಲು ಪ್ರಾರಂಭಿಸಿದರು. ಆದರೆ ಗ್ರಾಮಸ್ಥರು ಲಾರಿಗಳನ್ನು ತಡೆದು ಕೇಂದ್ರ ಸರ್ಕಾರದ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನೀವುಗಳು ಜನ ವಸತಿ ಇರುವ ಹಳ್ಳಿಗಳ ರಸ್ತೆಯಲ್ಲಿ ಅದಿರು ತುಂಬಿದ ಲಾರಿಗಳು ಸಂಚಾರ ಮಾಡುವಂತಿಲ್ಲ ಎಂದು ಶಾಂತಿಯುತವಾಗಿ ಪ್ರತಿಭಟನಾ ಸ್ಥಳದಲ್ಲಿ ಕುಳಿತರು.1
- ಬರದ ನಾಡಿನಲ್ಲಿ ಬಡ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ವೇದ ಸಂಸ್ಥೆಯ ಕಾರ್ಯ ಶ್ಲಾಘನೀಯ: ಸಚಿವ ಟಿ. ರಘುಮೂರ್ತಿ ಬಣ್ಣನೆ ಚಳ್ಳಕೆರೆ:ನಮ್ಮ ಈ ಬರದ ನಾಡಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ವೇದ ಶಿಕ್ಷಣ ಸಂಸ್ಥೆಯ ಕಾರ್ಯ ನಿಜಕ್ಕೂ ಶ್ಲಾಘನೀಯ. ಗ್ರಾಮೀಣ ಭಾಗದ ಬಡವರ ಮಕ್ಕಳಿಗೆ ಅತ್ಯಂತ ಕಡಿಮೆ ಶುಲ್ಕದಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವುದು ನಮ್ಮೆಲ್ಲರ ಭಾಗ್ಯವಾಗಿದೆ. ಶೈಕ್ಷಣಿಕವಾಗಿ ಈ ಭಾಗದ ಅಭಿವೃದ್ಧಿಗೆ ಸಂಸ್ಥೆಯ ಕೊಡುಗೆ ಅಪಾರ ಎಂದು ರಾಜ್ಯ ಸರ್ಕಾರದ ಸಚಿವ ಟಿ. ರಘುಮೂರ್ತಿ ಅವರು ಮುಕ್ತಕಂಠದಿಂದ ಪ್ರಶಂಸಿಸಿದರು. ಚಳ್ಳಕೆರೆ ತಾಲೂಕಿನ ಸಾಣಿಕೆರೆಯಲ್ಲಿರುವ ವೇದ ಶೈಕ್ಷಣಿಕ ಅಭಿವೃದ್ಧಿ ಅಕಾಡೆಮಿ ಹಾಗೂ ವೇದ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಶುಕ್ರವಾರ ವಿಜೃಂಭಣೆಯಿಂದ ಜರುಗಿದ ನೂತನ 'ಆದಿಯೋಗಿ' ಶಿಲಾಮೂರ್ತಿ ಪ್ರತಿಷ್ಠಾಪನೆ ಹಾಗೂ ಸಂಸ್ಥಾಪಕರ ದಿನಾಚರಣೆ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಗ್ರಾಮೀಣ ಮಟ್ಟದಲ್ಲಿ ಸಂಸ್ಥೆಯು ನೀಡುತ್ತಿರುವ ಶೈಕ್ಷಣಿಕ ಸೇವೆಯನ್ನು ಸಚಿವರು ಈ ಸಂದರ್ಭದಲ್ಲಿ ವಿಶೇಷವಾಗಿ ಶ್ಲಾಘಿಸಿದರು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ತುಮಕೂರು ಸಿದ್ದಗಂಗಾ ಮಠದ ಪರಮ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, "ಶಿಕ್ಷಣವು ಸಮಾಜದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಒದಗಿಸುವ ಏಕೈಕ ಮಾರ್ಗವಾಗಿದೆ. ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬವೇ ಸುಶಿಕ್ಷಿತವಾಗುತ್ತದೆ. ವಿದ್ಯಾರ್ಥಿಗಳು ಅಕ್ಷರ ಜ್ಞಾನದ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳಿಗೆ ಒತ್ತು ನೀಡಬೇಕು" ಎಂದು ಕಿವಿಮಾತು ಹೇಳಿದರು. ಸಿದ್ದರಬೆಟ್ಟದ ಶ್ರೀ ವೀರಭದ್ರ ಮಹಾಸ್ವಾಮಿಗಳು ಸಹ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಶಾಸಕ ವೀರೇಂದ್ರ ಪಪ್ಪಿ ಅವರು ಸಹ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಈ ಸಮಾರಂಭದ ಅಧ್ಯಕ್ಷತೆಯನ್ನು ವೇದ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಿ.ಟಿ. ರವೀಂದ್ರ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಕಿರಣ್, ಅಧೀಕ್ಷಕರಾದ ವಿರೂಪಾಕ್ಷಪ್ಪ ಸಿ., ಪ್ರಾಂಶುಪಾಲರಾದ ಸಂದೀಪ್, ಮುಖ್ಯೋಪಾಧ್ಯಾಯಿನಿಯಾದ ಪುಷ್ಪರಾಣಿ, ಹಾಗೂ ಪ್ರಮುಖರಾದ ರವಿಕುಮಾರ್, ಯೋಗೇಶ್, ಸತೀಶ್, ಸಾಗರ್ ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ನೂರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.1
- ಚಿತ್ರದುರ್ಗ:ಭದ್ರಾ ನೀರಿಗಾಗಿ ವಿರೋಧ ಪಕ್ಷಗಳಿಂದ ಬೃಹತ್ ಪ್ರತಿಭಟನೆ ಭದ್ರಾ ನೀರನ್ನು ಕಾಲುವೆಯಿಂದ ಹೊಸದುರ್ಗ ತಾಲೂಕಿನ ಕೆರೆಗೆ,ಹರಿಸುವುದರಿಂದ ಕೈ ಬಿಟ್ಟಿರುವುದು ಹಾಗೂ ಕಾಲುವೆ ಯೋಜನೆ ವಿಳಂಬ ನೀತಿ ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಬಿಜೆಪಿ ಪಕ್ಷಗಳು ಒಟ್ಟಾಗಿ ಹೊಸದುರ್ಗದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದವು. ಇದೇ ಸಮಯದಲ್ಲಿ ಮಾತಾಡಿದ ಎಂಎಲ್ ಸಿ ಕೆಎಸ್ ನವೀನ್,ಹೊಸದುರ್ಗದಿಂದಲೇ ಭದ್ರಾ ನೀರು ಚಿತ್ರದುರ್ಗ ಜಿಲ್ಲೆಗೆ ಹರಿಯಬೇಕಿದೆ. ಆದರೆ ಹೊಸದುರ್ಗ ತಾಲೂಕಿಗೆ ನೀರು ಕೊಟ್ಟಿಲ್ಲ. ಇದಕ್ಕಾಗಿ ಹೋರಾಟ ಮಾಡುವ ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ.ತಾಲೂಕಿಗೆ ನೀರು ಕೊಡದಿರುವುದು ನಮ್ಮ ರೈತರಿಗೆ ಮಾಡಿರುವ ಅನ್ಯಾಯವೆಂದರು. ಮತ್ತೊಬ್ಬ ಮುಖಂಡ ಲಿಂಗಮೂರ್ತಿ ಮಾತಾಡಿ,ಬರ ನಾಡಿಗೆ ನೀರು ಕೊಡುತ್ತಾರೆಂದು ಕಳೆದ ಮೂರು ವರ್ಷಗಳಿಮನದ ಕಾಯುತ್ತಿದ್ದೇವೆ. ಆದರೆ ಸರ್ಕಾರ ನಿರ್ಲಕ್ಷ ತಾಳಿದೆ. ಹಾಲಿ ಶಾಸಕರು ನಮ್ಮಗಳ ಬೆಂಬಲ ಕೋರಿದಾಗ ಬೆಂಬಲ ಕೊಟ್ಟು ಸಹಕರಿಸಿದ್ದೇವೆ.ಆದರೆ ನೀರು ಮಾತ್ರ ಬರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.1
- ಜಗಳೂರು ತಾಲ್ಲೂಕು ಬರಪಟ್ಟಿಗೆ ಸೇರಿಸಿ :ಬಿಜೆಪಿಯಿಂದ ಪ್ರತಿಭಟಿಸಿ ತಹಶಿಲ್ದಾರರಿಗೆ ಮನವಿ. ಜಗಳೂರು ತಾಲ್ಲೂಕು ಬರಪಟ್ಟಿಗೆ ಸೇರಿಸಿ : ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಸರಕಾರಕ್ಕೆ ಆಗ್ರಹ. ಜಗಳೂರು ತಾಲ್ಲೂಕು ಅತೀ ಹಿಂದುಳಿದ ಪ್ರದೇಶವೆಂದು ಡಾ.ನಂಜುಡಪ್ಪ ಅವರ ವರಧಿಯಲ್ಲಿ ಇದೇ ಇದನ್ನು ಅರಿತಾದರೂ ಸರಕಾರದ ಅಧಿಕಾರಿಗಳು ಸ್ಥಳೀಯ ಶಾಸಕರು ಮೊದಲನೇ ಪಟ್ಟಿಯಲ್ಲಿ ಜಗಳೂರು ಬರ ಪೀಡಿತ ತಾಲ್ಲೂಕು ಎಂದು ಘೋಷಣೆ ಯಾಗಬೇಕಾಗಿತ್ತು ಎಂದು ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಶಾಸಕರಿಗೆ ಆಗ್ರಹ ಮಾಡಿದರು. ಜಗಳೂರು ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಹೋರಾಟ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಮತ್ತು ಸ್ಥಳೀಯ ಶಾಸಕರ ವಿರುದ್ಧವಾಗಿ ಹೇಳಿಕೆಗಳನ್ನು ಕೂಗೂತ್ತಾ ಸಾಗಿದ ಪ್ರತಿಭಟನೆಕಾರಾರು ಮಹಾತ್ಮಗಾಂಧಿ ವೃತ್ತದಿಂದ ರಸ್ತೆಯ ಮೂಲಕ ಸರಕಾರ ವಿರುದ್ಧ ಮತ್ತು ಸಚಿವರ ವಿರುದ್ಧ ಘೋಷಣೆಕೂಗಿದ ಕಾರ್ಯಕರ್ತರು ಮಹಾತ್ಮಗಾಂಧಿ ಬಸ್ ನಿಲ್ದಾಣದ ಹತ್ತಿರ ಟೈರಿಗೆ ಬೆಂಕಿ ಹಚ್ವಿ ಆಕ್ರೋಶವನ್ನು ವ್ಯಕ್ತಪಡಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಸಾಗಿದ ಪ್ರತಿಭಟನಾ ಮೆರವಣಿಗೆ ನೇರವಾಗಿತಹಶೀಲ್ದಾರ್ ಕಛೇರಿಗೆ ತೆರಳಿ ಸರಕಾರದ ವಿರುದ್ಧ ಕೆಲಕಾಲ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿ ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಮಾತನಾಡಿ ದಾವಣಗೆರೆ ಜಿಲ್ಲೆಯಲ್ಲಿ ಅತೀ ಹಿಂದುಳಿದ ತಾಲ್ಲೂಕು ಎಂದರೆ ಪ್ರಥಮವಾಗಿ ಜಗಳೂರು ತಾಲ್ಲೂಕಿಗೆ ಮೊದಲ ಆಧ್ಯತೆಯನ್ನು ನೀಡಬೇಕಾಗಿತ್ತು ಆದರೆ ಇಲ್ಲಿ ಅಧಿಕಾರಿಗಳ ಬೇಜವಬ್ದಾರಿ ತನವೊ ಅಥಾವ ಶಾಸಕರಿಗೆ ಮಾಹಿತಿಯಿಲ್ಲದಿರುವುದೊ ಗೊತ್ತಿಲ್ಲ ನಮ್ಮ ತಾಲ್ಲೂಕು ಪ್ರಥಮ ಪಟ್ಟಿಯಲ್ಲಿ ಕೈ ಬಿಟ್ಟು ಹೋಗಿರುವುದು ದುರಂತವೇ ಸರಿ ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು. ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಮಾತನಾಡಿ ರಾಜ್ಯ ವಿರೋಧ ಪಕ್ಷದ ನಾಯಕರನ್ನು ಕರೆಯಿಸಿ ಬರ ಅಧ್ಯಾಯನ ಮಾಡಿಸಿ ಶಾಸಕರು ಮಾಡುವ ಕೆಲಸ ವಿರೋಧ ಪಕ್ಷದವರು ಮಾಡಿದ್ದೇವೆ ಅಧಿಕಾರಿಗಳು ವರಧಿ ಕೊಡುವ ಮುಂಚೆಯೇ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ರಾಜ್ಯ ಸರಕಾರಕ್ಕೆ ವರದಿ ನೀಡಿದ್ದರು ಎಂದರು. ರೈತ ಮುಖಂಡ ಸಿದ್ಧಯ್ಯನಕೋಟೆ ಭೀಮಣ್ಣ ಮಾತನಾಡಿ ರೈತರ ಬಗ್ಗೆ ಕಾಳಜಿ ಇರದ ತಹಶಿಲ್ದಾರರು ತಿಂಗಳಿಗೊಮ್ಮೆ ಸರಕಾರದ ಸಭೆಗೆ ಹಾಜರಾಗುತ್ತಿರಲ್ಲ ಅಂದು ಜಗಳೂರು ತಾಲ್ಲೂಕು ಮಳೆ ಮತ್ತುಬೆಳೆಯ ಬಗ್ಗೆ ವಿವರಣೆ ನೀಡುವುದಿಲ್ಲವೇ ಎಂದು ತಹಶಿಲ್ದಾರರ್ ರವರನ್ನು ಪ್ರಶ್ನೆಮಾಡಿದರು. ನಿಮ್ಮ ಕೆಳ ಹಂತದ ಅಧಿಕಾರಿಗಳು ಮತ್ತು ವಿ.ಎ.ಗಳು ಮತ್ತು ತೋಟಗಾರಿಕೆ,ಕೃಷಿ ಇಲಾಖೆ ಹಾಗೂ ಇನ್ನಿತರೆ ಮಳೆ ಮಾಪನ ಕೇಂದ್ರದವರು ಮಾಹಿತಿಯನ್ನು ನೀಡುವುದಿಲ್ಲವೇ ಎಂದು ಹೇರು ಧ್ವನಿಯಲ್ಲಿ ಪ್ರಶ್ನೆಮಾಡಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಂಡಲ ಅಧ್ಯಕ್ಷ ಎ.ಎಂ.ಮರುಳರಾಧ್ಯ ಮಾತನಾಡಿ ರಾಜ್ಯ ಸರಕಾರ ನಿನ್ನೆ ಬಿಡುಗಡೆ ಮಾಡಿದ ಬರಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ನೋಡಿ ನಮ್ಮ ತಾಲ್ಲೂಕು ಪ್ರಥಮ ಪಟ್ಟಿಯಲ್ಲು ಇಲ್ಲ ಎಂದು ಅಸಮಧಾನ ಗೊಂಡು ದೂರವಾಣಿ ಮೂಲಕ ಮಾನ್ಯಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದಾಗ ಜಗಳೂರು ತಾಲ್ಲೂಕು ಬರಪಟ್ಟಿಯಲ್ಲಿ ಇಲ್ಲ ಎಂದು ಪ್ರಶ್ನೆ ಮಾಡಿದೆ ? ಅದಕ್ಕೆ ಬಂದ ಉತ್ತರ ನಿಮ್ಮ ತಾಲ್ಲೂಕಿನಲ್ಲಿ ತೇವಾಂಶ ಹೆಚ್ಚಾಗಿ ಕಂಡು ಬಂದಿದೆ ಇದು ನಾವು ಮಾಡಿದ್ದಲ್ಲ ಸೆಟುಲೈಟ್ ಆಧಾರವಾಗಿಟ್ಟು ಕೊಂಡು ವರದಿಯನ್ನು ತಯಾರಿಸಲಾಗಿದೆ ಎಂಬ ಉತ್ತರವನ್ನು ನೀಡಿದರು. ಜಗಳೂರು ತಹಸೀಲ್ದಾರ್ ರವರಿಗೆ ವಿಚಾರಣೆ ಮಾಡಿದಾಗ ಅದೇ ಉತ್ತರ ಮುಂದುವರೆದಿದ್ದು ಇದಕ್ಕೆ ಬೇಸರಗೊಂಡ ನಾನು ನಮ್ಮ ತಾಲ್ಲೂಕಿನಲ್ಲಿ ಸೇವೆ ಮಾಡುವುದಕ್ಕೆ ಇಷ್ಟವಿಲ್ಲವೆಂದು ಬೇರೆಕಡೆ ಹೋಗಿ ಎಂದು ದೂರವಾಣಿಯಲ್ಲೇ ಉತ್ತರಿಸಿದೆ ಎಂದು. ಈ ಪ್ರತಿಭಟನೆಯಲ್ಲಿ ಬಿಜೆಪಿ ಯುವ ಮುಖಂಡ ಬಿಸ್ತುವಳ್ಳಿಬಾಬು, ಬಿದರಕೆರೆ ರವಿ, ಜೆ.ವಿ.ನಾಗರಾಜ್, ಮರೇನಹಳ್ಳಿ ಕಾರ್ತಿಕ್, ರಘ ಜಾಗ್ವಾರ್ , ಲ್ಯಾಬ್ ಶಿವು, ಸೇರಿದಂತೆ ವಿವಿಧ ಘಟಕದ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.2
- ಕೊರಚರಹಟ್ಟಿಯಲ್ಲಿ ಶ್ರೀ ನೂಲಿ ಚಂದಯ್ಯ ಅವರ ಜಯಂತಿ ಅದ್ದೂರಿ ಆಚರಣೆ ಕೂಡ್ಲಿಗಿ: ತಾಲೂಕಿನ ಕೊರಚರಹಟ್ಟಿ ಗ್ರಾಮದಲ್ಲಿ ನೂಲಿ ಚಂದಯ್ಯ ಜಯಂತಿಯನ್ನು ಶುಕ್ರವಾರ ಅದ್ದೂರಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜಯಂತಿ ಉತ್ಸವದ ಪ್ರಯುಕ್ತ ವಿವಿಧ ವಾದ್ಯ ಮೇಳಗಳೊಂದಿಗೆ ನಂದಿಕೋಲು ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಗ್ರಾಮದ ಪ್ರಮುಖ ಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಉತ್ಸವದ ಸಂಭ್ರಮ ಮತ್ತಷ್ಟು ಕಳೆಗಟ್ಟಿತ್ತು. ವಾದ್ಯ ಮೇಳಗಳ ನಾದಕ್ಕೆ ನಂದಿಕೋಲು ಕುಣಿತ ಪ್ರದರ್ಶನ ಜನರ ಗಮನ ಸೆಳೆಯಿತು. ಗ್ರಾಮಸ್ಥರು ಹಾಗೂ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನೂಲಿ ಚಂದಯ್ಯ ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು.1
- ಕರ್ನಾಟಕ ರಾಜ್ಯದಲ್ಲಿ 101 ತಾಲೂಕುಗಳನ್ನ ಬರಪೀಡಿತ ಎಂದು ಘೋಷಣೆ.1