ಪ್ರಜಾಪ್ರಭುತ್ವದ ಆಶಯಗಳನ್ನು ಪಾಲಿಸೋಣ : ಹಂಪಯ್ಯನಾಯಕ ಸಾಹುಕಾರ. ಮಾನ್ವಿ, : ಪ್ರಜಾಪ್ರಭುತ್ವದ ಆಶಯಗಳನ್ನು ಗೌರವಿಸುವ ಸಲುವಾಗಿ ಜಾಗತಿಕವಾಗಿ ಪ್ರತಿವರ್ಷ ಸೆ. 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಣೆ ಮಾಡಲಾಗುತ್ತದೆ. ಭಾರತವನ್ನು ಸಾರ್ವಭೌಮ, ಸಮಾಜವಾದಿ, ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಮಾಡಲು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಪಟ್ಟ ಪರಿಶ್ರಮದಿಂದಾಗಿ ಇಂದು ನಾವು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸುತ್ತಿರುವುದು ಸಂತೋಷದ ವಿಷಯ ಎಂದು ಶಾಸಕ ಜಿ.ಹಂಪಯ್ಯನಾಯಕ ಸಾಹುಕಾರ ಹೇಳಿದರು.ಮಾನ್ವಿ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ತಾಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಆಶಯಗಳ ರಕ್ಷಣೆ, ಆದರ್ಶಗಳನ್ನು ಪಾಲನೆ ಮಾಡುವುದು, ಸದ್ಯದ ವಾಸ್ತವಿಕತೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಗಣತಂತ್ರದ ದೇಶಗಳಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರು ಸಂವಿಧಾನದ ಪರಿಪಾಲನೆ ಮತ್ತು ಸಂವಿಧಾನ ಬದ್ದ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಸಂವಿಧಾನಕ್ಕೆ ಚ್ಯುತಿ ಬಂದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಪ್ರತಿಭಟಿಸೋಣ ಎಂದು ಜಿ.ಹಂಪಯ್ಯನಾಯಕ ಸಾಹುಕಾರ ಕರೆ ನೀಡಿದರು. ಈ ವೇಳೆ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್, ಸೈಯದ್ ಖಾಲಿದ್ ಖಾದ್ರಿ, ತಹಸೀಲ್ದಾರ ಭೀಮರಾಯ ರಾಮಸಮುದ್ರ, ತಾ.ಪಂ.ಇಓ ಖಾಲಿದ್ ಅಹ್ಮದ್, ಬಿಇಓ ಚಂದ್ರಶೇಖರ ದೊಡ್ಡಮನಿ, ಸಮಾಜ ಕಲ್ಯಾಣ ಅಧಿಕಾರಿ ಶಾಹಿದಾಭಾನು, ಬಿಸಿಎಂ ಅಧಿಕಾರಿ ಬಾಗಯ್ಯನಾಯಕ, ಪ್ರಾಚಾರ್ಯ ನಾಗಮಲ್ಲೇಶ, ವಸಂತ ಕೊಡ್ಲಿ, ಯಲ್ಲಪ್ಪ ಬಾದರದಿನ್ನಿ, ಸತ್ತಾರ್ ಬಂಗ್ಲೆವಾಲೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಪ್ರಜಾಪ್ರಭುತ್ವದ ಆಶಯಗಳನ್ನು ಪಾಲಿಸೋಣ : ಹಂಪಯ್ಯನಾಯಕ ಸಾಹುಕಾರ. ಮಾನ್ವಿ, : ಪ್ರಜಾಪ್ರಭುತ್ವದ ಆಶಯಗಳನ್ನು ಗೌರವಿಸುವ ಸಲುವಾಗಿ ಜಾಗತಿಕವಾಗಿ ಪ್ರತಿವರ್ಷ ಸೆ. 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಣೆ ಮಾಡಲಾಗುತ್ತದೆ. ಭಾರತವನ್ನು ಸಾರ್ವಭೌಮ, ಸಮಾಜವಾದಿ, ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಮಾಡಲು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಪಟ್ಟ ಪರಿಶ್ರಮದಿಂದಾಗಿ ಇಂದು ನಾವು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸುತ್ತಿರುವುದು ಸಂತೋಷದ ವಿಷಯ ಎಂದು ಶಾಸಕ ಜಿ.ಹಂಪಯ್ಯನಾಯಕ ಸಾಹುಕಾರ ಹೇಳಿದರು.ಮಾನ್ವಿ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ತಾಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಆಶಯಗಳ ರಕ್ಷಣೆ, ಆದರ್ಶಗಳನ್ನು ಪಾಲನೆ ಮಾಡುವುದು, ಸದ್ಯದ ವಾಸ್ತವಿಕತೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಗಣತಂತ್ರದ ದೇಶಗಳಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರು ಸಂವಿಧಾನದ ಪರಿಪಾಲನೆ ಮತ್ತು ಸಂವಿಧಾನ ಬದ್ದ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಸಂವಿಧಾನಕ್ಕೆ ಚ್ಯುತಿ ಬಂದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಪ್ರತಿಭಟಿಸೋಣ ಎಂದು ಜಿ.ಹಂಪಯ್ಯನಾಯಕ ಸಾಹುಕಾರ ಕರೆ ನೀಡಿದರು. ಈ ವೇಳೆ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್, ಸೈಯದ್ ಖಾಲಿದ್ ಖಾದ್ರಿ, ತಹಸೀಲ್ದಾರ ಭೀಮರಾಯ ರಾಮಸಮುದ್ರ, ತಾ.ಪಂ.ಇಓ ಖಾಲಿದ್ ಅಹ್ಮದ್, ಬಿಇಓ ಚಂದ್ರಶೇಖರ ದೊಡ್ಡಮನಿ, ಸಮಾಜ ಕಲ್ಯಾಣ ಅಧಿಕಾರಿ ಶಾಹಿದಾಭಾನು, ಬಿಸಿಎಂ ಅಧಿಕಾರಿ ಬಾಗಯ್ಯನಾಯಕ, ಪ್ರಾಚಾರ್ಯ ನಾಗಮಲ್ಲೇಶ, ವಸಂತ ಕೊಡ್ಲಿ, ಯಲ್ಲಪ್ಪ ಬಾದರದಿನ್ನಿ, ಸತ್ತಾರ್ ಬಂಗ್ಲೆವಾಲೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
- ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಸಿರವಾರ: ಗಣೇಶ ಮೂರ್ತಿ ತರುವ ವೇಳೆ ವಿದ್ಯುತ್ ಅವಘಡ ಸಂಭವಿಸಿ ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಮೃತಪಟ್ಟಿದ್ದ ಸಿರವಾರ ಪಟ್ಟಣದ ಯುವಕ ಪ್ರೇಮ್ ಸುಂದರ್ ಅವರ ಸ್ಮರಣಾರ್ಥದ ಪ್ರಯುಕ್ತ ಸಿರವಾರ ಪಟ್ಟಣದಲ್ಲಿ ಮಂಗಳವಾರ ಸಂಜೆ ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮಾಡುವ ಮೂಲಕ ಅಗಲಿದ ಚೇತನಕ್ಕೆ ನಮನ ಸಲ್ಲಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ವಾಲ್ಮೀಕಿ ವೃತ್ತದ ವರೆಗೆ ನಡೆಯಿತು. ಪ್ರೇಮ್ ಸುಂದರ ಅವರ ಸರಳತೆ, ನಡೆ, ನುಡಿ ಮತ್ತು ವ್ಯಕ್ತಿತ್ವವನ್ನು ಸ್ಮರಿಸಿದರು. ಪ್ರೇಮ್ ಸುಂದರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಈ ವೇಳೆ ಪಟ್ಟಣದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.1
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಗಣ್ಯರು ಚಾಲನೆ ನೀಡಿದರು. ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್ ಸ್ಕೂಲಿನ ಮುಖ್ಯಸ್ಥರಾದ ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.4
- ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು2
- ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಕರ್ನಾಟಕದ ಅತ್ಯಂತ ಸುಪ್ರಸಿದ್ದ ತಾಣಗಳು ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಡೋಲ್ಡನ್ಗಳೆಂಬ ಜಾವಡಿಗೆ ಆಧಾರವಾಗಿ ನಿಂತ ಬದಿಯ ಚಪ್ಪಡಿಗಳುಳ್ಳ ಆಯತಾಕಾರದ ರಚನೆಗಳನ್ನು ಡೋಲೈನ್ ಗಳೆಂದು ಕರೆಯುತ್ತಾರೆ. ಇಲ್ಲಿ ಕಾಣುವ ವಿವಿಧ ಬಗೆಗಳನ್ನು ಗಮನಿಸಿ, ಕೆಲವಕ್ಕೆ ಮೂರು ಅಥವಾ ನಾಲ್ಕು ಬದಿಗಳಿವೆ. ಹಾಗೂ ಸಣ್ಣ ಕಿಟಕಿ-ರಂಧ್ರವು ಅದರಲ್ಲಿ ಇರಬಹುದು ಅಥವಾ ಇಲ್ಲದಿರಬಹುದು. ಡೋಲೈನ್ಗಳ ಮಧ್ಯೆ ಇರುವ ಭಾಗಶಃ ಹೂತಿರುವ, ಡಬ್ಬಿ ಆಕಾರದ ರಚನೆಗಳನ್ನು ಸಿಸ್ಟ್ಗಳೆಂದು ಕರೆಯುತ್ತಾರೆ. ಸಿಸ್ಟ್ ತನ್ನೊಳಗೇ ಕುಸಿದು ಬೀಳದಂತೆ ತಡೆಗಟ್ಟುವ ರೀತಿಯಲ್ಲಿ, ರಾಜನಕೊಲ್ಲೂರಿನ ಎಲ್ಲ ಸಿಸ್ಟ್ಗಳಲ್ಲೂ ಅದರ ಬದಿಯ ಉದ್ದನೆಯ ಚಪ್ಪಡಿಗಳು, ಸ್ವಲ್ಪ ಚಿಕ್ಕ ಚಪ್ಪಡಿಗಳಿಗಿಂತ ಮುಂದಕ್ಕೆ ಚಾಚಿವೆ.1
- ಸೈದಾಪುರ ಎಪಿಎಂಸಿಯಲ್ಲಿ ಮೂಲಸೌಕರ್ಯಗಳು ಒದಗಿಸಿ-ಉಮೇಶ್ ಮುದ್ನಾಳ ಆಗ್ರಹ ಸೈದಾಪೂರ ದನಗಳ, ಕುರಿ, ಆಡಳು, ಕೋಳಿ ಸಂತೆ ಪ್ರಾರಂಭ ಮಾಡಿ, ಆ ಸ್ಥಳದಲ್ಲಿ ಕುಡಿಯುವ ನೀರು ಮತ್ತು ರೈತರಿಗೆ ಮೂಲಭೂತ ಸೌಕರ್ಯಗಳು ಒದಗಿಸಲು ಉಮೇಶ ಮುದ್ನಾಳ ಆಗ್ರಹ, ಜಿಲ್ಲಾಡಳಿತಕ್ಕೆ ಒಂದು ವಾರದ ಗಡುವು. ಸೈದಾಪೂರ : ಪಟ್ಟಣದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಪ್ರತಿ ಗುರುವಾರ ನಡೆಯುತ್ತಿರುವ ಸಂತೆಯಲ್ಲಿ ದನ, ಆಡು, ಕುರಿ, ಕೋಳಿ ಮಾರಾಟಕ್ಕೆ ಪ್ರಾರಂಭ ಮಾಡಿ, ಸಂತೆ ಸ್ಥಳದಲ್ಲಿ ಕುಡಿಯುವ ನೀರು & ಮೂಲಭೂತ ಸೌಕರ್ಯ ಒದಗಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ.ಕೆ.ಮುದ್ನಾಳ 1 ವಾರದ ಗಡುವು ನೀಡಿ ಜಿಲ್ಲಾಡಳಿತಕ್ಕೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಸಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕೆ. ಮುದ್ನಾಳ ಅವರು ಉಪ ಎಪಿಎಂಸಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿದರು. ಸ್ಥಳದಲ್ಲಿ ರೈತರೊಂದಿಗೆ ಚರ್ಚಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲೇ ಅತಿದೊಡ್ಡ ಜಾನುವಾರು ಸಂತೆಗಳಾದ ಶುಕ್ರವಾರ-ಶಹಾಪೂರ, ಮಂಗಳವಾರ-ಯಾದಗಿರಿ, ಸೋಮವಾರ-ಗುರುಮಠಕಲ್, ಗುರುವಾರ-ಸೈದಾಪೂರದಲ್ಲಿ ಪ್ರಾರಂಭ ಮಾಡಬೇಕೆಂದು ಒತ್ತಾಯಿಸಿದರು. ಸಂತೆ ಆವರಣದಲ್ಲಿ ದನ-ಕರುಗಳ, ಕುರಿ, ಆಡು, ಕೋಳಿ ಮಾರಾಟಕ್ಕೆ ಬಂದ ರೈತರಿಗೆ ಸೂಕ್ತ ಸ್ಥಳಾವಕಾಶವಿಲ್ಲದೇ ಜಾಲಿ ಕಂಟಿಗಳು ಬೆಳೆದು, ವಿಷ-ಜಂತುಗಳು ಸೇರಿಕೊಂಡಿವೆ. ಚರಂಡಿಯಲ್ಲಿ ತುಂಬಿ ನಿಂತು ಗಬ್ಬೆದ್ದು ನಾರುತ್ತಿದೆ. ಕುಡುಕರ ಹಾವಳಿ, ಅಕ್ರಮ ಚಟುವಟಿಕೆ ನಡೆಯುತ್ತಿದ್ದು, ಎಲ್ಲೆಡೆ ಅಸ್ವಚ್ಛತೆ ಆವರಿಸಿದ್ದು, ದುರ್ವಾಸನೆ ಬೀರುತ್ತಿದೆ. ಕೆಲವೆಡೆ ಭಿಕ್ಷುಕರು ಹಾಗೂ ಪುಂಡ-ಪೊಕರಿಗಳ ತಂಗುದಾಣವಾಗಿ ಮಾರ್ಪಟ್ಟಿರುವುದು ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಸಂತೆಗೆ ಆಗಮಿಸುವ ರೈತರು ಹಾಗೂ ವ್ಯಾಪಾರಿಗಳು ಹಲವು ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ಬಿರುಬಿಸಿಲಿನ ನಡುವೆಯೂ ಜನ-ಜಾನುವಾರುಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಂಡು ಜನ-ಜಾನುವಾರುಗಳಿಗೆ ರೋಗ-ರುಜಿನ ಹರಡದಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು. ಸಂತೆ ಪ್ರಾರಂಭವಾದ ನಂತರ ಸಂತೆ ಒಳಗಡೆ ನಡೆಯುತ್ತಿರುವ ಪ್ರತಿ ವಾರ ಪಶುವೈದ್ಯರನ್ನು ಕಡ್ಡಾಯವಾಗಿ ನಿಯೋಜಿಸಿ, ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಬೇಕು. ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜಾನುವಾರುಗಳನ್ನು ಕಟ್ಟಲು ಸಾಲುಸಾಲಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ನೆರಳಿಗಾಗಿ ಮರಗಳನ್ನು ನೆಡುವುದು ಅಥವಾ ಶೆಡ್ ನಿರ್ಮಿಸುವುದು ಅಗತ್ಯವಾಗಿದೆ. ಅಲ್ಲದೆ ಮಾರುಕಟ್ಟೆ ಆವರಣದಲ್ಲಿ ಉದ್ಯಾನ ನಿರ್ಮಿಸಿ ಪರಿಸರವನ್ನು ಸುಂದರ ಹಾಗೂ ಸ್ವಚ್ಛವಾಗಿಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಜಿಲ್ಲಾಧಿಕಾರಿಗಳು ಹಾಗೂ ಸಂಬAಧಪಟ್ಟ ಎಪಿಎಂಸಿ ಅಧಿಕಾರಿಗಳು ಕೂಡಲೇ ಸಂತೆ ಆವರಣಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ರೈತರು ಮತ್ತು ಜಾನುವಾರುಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸಬೇಕು ಎಂದು ಉಮೇಶ್ ಕೆ. ಮುದ್ನಾಳ ಆಗ್ರಹಿಸಿದರು. ಪ್ರತಿ ಗುರುವಾರ ಸಾವಿರಾರು ರೈತರು ಆಗಮಿಸುವ ಈ ಸಂತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಅತ್ಯಗತ್ಯವಾಗಿದೆ. ಸಂಬAಧಪಟ್ಟ ಅಧಿಕಾರಿಗಳು ಶೀಘ್ರವೇ ಅಗತ್ಯ ಕ್ರಮ ಕೈಗೊಂಡು ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಆವರಣದಲ್ಲಿ ಖಾಸಗಿ ಅಂಗಡಿ ಮಾಲೀಕರು ಎ.ಪಿ.ಎಂ.ಸಿ ಶೆಡ್ ನಲ್ಲಿ ಅಕ್ರಮವಾಗಿ ದಾಸ್ತಾನಿಗಾಗಿ ಬಳಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಒಂದು ನಿರ್ಲಕ್ಷ್ಯ ವಹಿಸಿದರೆ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಮುಂಬಾಗದಲ್ಲಿರುವ ಯಾದಗಿರಿ – ರಾಯಚೂರು ಕರಿಬೆಟ್ಟ ಸರ್ಕಲನ ಮುಖ್ಯ ರಸ್ತೆ ಬಂದ್ ಮಾಡಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.3
- ರೈತರ ಹೋರಾಟ ಬರಗಾಲ ಹೋರಾಟ ನಮ್ಮ ಯಾದಗಿರಿ ಜಿಲ್ಲಾ ಬರಗಾಲ ಘೋಷಣೆ ಮಾಡು ಅಂತ ಹೋರಾಟ ನಡೆದಿದೆ ಮುಖಂಡ ಅಮಿನ್ ರೆಡ್ಡಿ ಅಳಿಗೆ ರೈತರ ಹೋರಾಟ ಬರಗಾಲ ಹೋರಾಟ ನಮ್ಮ ಯಾದಗಿರಿ ಜಿಲ್ಲಾ ಬರಗಾಲ ಘೋಷಣೆ ಮಾಡು ಅಂತ ಹೋರಾಟ ನಡೆದಿದೆ ಮುಖಂಡ ಅಮಿನ್ ರೆಡ್ಡಿ ಅಳಿಗೆ1
- ಬಳ್ಳಾರಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಂಜೆ ತರಗತಿ! ಗಣೇಶೋತ್ಸವದಂದು ಊಟ–ಪ್ರಸಾದ ವಿತರಣೆ ಬಳ್ಳಾರಿ ಸಮೀಪದ ಸಂಗನಕಲ್ಲು ಗ್ರಾಮದ ಅಂಬೇಡ್ಕರ್ ನಗರದಲ್ಲಿ ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗಾಗಿ ಉಚಿತ ಸಂಜೆ ತರಗತಿ ಹಾಗೂ ಊಟ/ತಿಂಡಿ ವ್ಯವಸ್ಥೆ ಮಾಡಲಾಯಿತು. ಗಣೇಶ ಚತುರ್ಥಿ ಅಂಗವಾಗಿ ಟ್ಯೂಷನ್ ಕೇಂದ್ರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಮಕ್ಕಳಿಂದ ಸಾಮೂಹಿಕ ಪ್ರಾರ್ಥನೆ ಹಾಗೂ ಶಾಂತಿ ಮಂತ್ರ ಪಠಣ ನಡೆಸಲಾಯಿತು. ಬಳಿಕ ಮಕ್ಕಳಿಗೆ ಸಿಹಿ ಪ್ರಸಾದ ವಿತರಿಸಲಾಯಿತು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಸಾಮಾಜಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸೇವಾ ಕಾರ್ಯ ನಡೆಯುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಟಿ.ನಾಗರಾಜ್ ತಿಳಿಸಿದ್ದಾರೆ. 📍 ಸಂಗನಕಲ್ಲು, ಬಳ್ಳಾರಿ 📅 15-09-2026 ASN NEWS24 ಕನ್ನಡ — ಸುತ್ತಮುತ್ತ ನಡೆಯುವ ಸುದ್ದಿ, ಸಾರ್ವಜನಿಕ ಸಮಸ್ಯೆಗಳು ಮತ್ತು ಜನರ ಧ್ವನಿ. #Ballari #Bellary #Karnataka #KannadaNews #BreakingNews #Education #GovernmentSchool #GovernmentSchoolStudents #FreeEducation #FreeTuition #GaneshChaturthi #GaneshFestival #Ganeshotsav #SocialService #StudentSupport #Sanganakallu #BallariNews #KarnatakaNews #ASNNews24 #ASNNews24Kannada #ಕರ್ನಾಟಕ #ಬಳ್ಳಾರಿ #ಕನ್ನಡಸುದ್ದಿ #ಗಣೇಶೋತ್ಸವ1
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ4