logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರಬೆಟ್ಟ–ಹನೂರು ಮುಖ್ಯರಸ್ತೆಯ ಕೌದಳ್ಳಿ–ವಡೆಕಹಳ್ಳಿ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಒಂದು ಬೈಕ್, ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮತ್ತು ಒಂದು ಖಾಸಗಿ ಬಸ್ ಪರಸ್ಪರ ಡಿಕ್ಕಿ ಹೊಡೆದಿವೆ. ಮುಂಭಾಗದಿಂದ ಬಂದ ಖಾಸಗಿ ಬಸ್ ಅನ್ನು ತಪ್ಪಿಸುವ ಪ್ರಯತ್ನದಲ್ಲಿ ಬೈಕ್ ಸವಾರ ಹಠಾತ್ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ವಾಹನಗಳ ನಡುವೆ ಈ ಡಿಕ್ಕಿ ಸಂಭವಿಸಿತು. ಅಪಘಾತದಲ್ಲಿ ಮೈಸೂರು ಜಿಲ್ಲೆಯ ಮಹದೇವಪುರ ಗ್ರಾಮದ ಬೈಕ್ ಸವಾರ ಮನು ಅವರ ಕಾಲಿಗೆ ಗಾಯಗಳಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

3 hrs ago
user_ಹನೂರು ನ್ಯೂಸ್ ಅಡ್ಡ
ಹನೂರು ನ್ಯೂಸ್ ಅಡ್ಡ
Farmer ಹನೂರು, ಚಾಮರಾಜನಗರ, ಕರ್ನಾಟಕ•
3 hrs ago

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರಬೆಟ್ಟ–ಹನೂರು ಮುಖ್ಯರಸ್ತೆಯ ಕೌದಳ್ಳಿ–ವಡೆಕಹಳ್ಳಿ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಒಂದು ಬೈಕ್, ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮತ್ತು ಒಂದು ಖಾಸಗಿ ಬಸ್ ಪರಸ್ಪರ ಡಿಕ್ಕಿ ಹೊಡೆದಿವೆ. ಮುಂಭಾಗದಿಂದ ಬಂದ ಖಾಸಗಿ ಬಸ್ ಅನ್ನು ತಪ್ಪಿಸುವ ಪ್ರಯತ್ನದಲ್ಲಿ ಬೈಕ್ ಸವಾರ ಹಠಾತ್ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ವಾಹನಗಳ ನಡುವೆ ಈ ಡಿಕ್ಕಿ ಸಂಭವಿಸಿತು. ಅಪಘಾತದಲ್ಲಿ ಮೈಸೂರು ಜಿಲ್ಲೆಯ ಮಹದೇವಪುರ ಗ್ರಾಮದ ಬೈಕ್ ಸವಾರ ಮನು ಅವರ ಕಾಲಿಗೆ ಗಾಯಗಳಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

More news from ಕರ್ನಾಟಕ and nearby areas
  • ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರಬೆಟ್ಟ–ಹನೂರು ಮುಖ್ಯರಸ್ತೆಯ ಕೌದಳ್ಳಿ–ವಡೆಕಹಳ್ಳಿ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಒಂದು ಬೈಕ್, ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮತ್ತು ಒಂದು ಖಾಸಗಿ ಬಸ್ ಪರಸ್ಪರ ಡಿಕ್ಕಿ ಹೊಡೆದಿವೆ. ಮುಂಭಾಗದಿಂದ ಬಂದ ಖಾಸಗಿ ಬಸ್ ಅನ್ನು ತಪ್ಪಿಸುವ ಪ್ರಯತ್ನದಲ್ಲಿ ಬೈಕ್ ಸವಾರ ಹಠಾತ್ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ವಾಹನಗಳ ನಡುವೆ ಈ ಡಿಕ್ಕಿ ಸಂಭವಿಸಿತು. ಅಪಘಾತದಲ್ಲಿ ಮೈಸೂರು ಜಿಲ್ಲೆಯ ಮಹದೇವಪುರ ಗ್ರಾಮದ ಬೈಕ್ ಸವಾರ ಮನು ಅವರ ಕಾಲಿಗೆ ಗಾಯಗಳಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
    2
    ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರಬೆಟ್ಟ–ಹನೂರು ಮುಖ್ಯರಸ್ತೆಯ ಕೌದಳ್ಳಿ–ವಡೆಕಹಳ್ಳಿ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಒಂದು ಬೈಕ್, ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮತ್ತು ಒಂದು ಖಾಸಗಿ ಬಸ್ ಪರಸ್ಪರ ಡಿಕ್ಕಿ ಹೊಡೆದಿವೆ. ಮುಂಭಾಗದಿಂದ ಬಂದ ಖಾಸಗಿ ಬಸ್ ಅನ್ನು ತಪ್ಪಿಸುವ ಪ್ರಯತ್ನದಲ್ಲಿ ಬೈಕ್ ಸವಾರ ಹಠಾತ್ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ವಾಹನಗಳ ನಡುವೆ ಈ ಡಿಕ್ಕಿ ಸಂಭವಿಸಿತು. ಅಪಘಾತದಲ್ಲಿ ಮೈಸೂರು ಜಿಲ್ಲೆಯ ಮಹದೇವಪುರ ಗ್ರಾಮದ ಬೈಕ್ ಸವಾರ ಮನು ಅವರ ಕಾಲಿಗೆ ಗಾಯಗಳಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    3 hrs ago
  • ಯಳಂದೂರು ತಾಲೂಕಿನ ಎಚ್.ಸಿ. ಮಹದೇವಪ್ಪ ಅಭಿಮಾನಿ ಬಳಗದಿಂದ ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಈ ಗೋಷ್ಠಿಯಲ್ಲಿ ಎಚ್.ಸಿ. ಮಹದೇವಪ್ಪನವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಬಲವಾಗಿ ಆಗ್ರಹಿಸಲಾಯಿತು. ಮಹದೇವಪ್ಪ ಅಭಿಮಾನಿ ಬಳಗದ ಅಧ್ಯಕ್ಷರಾದ ವಡಗೆರೆ ಡಾ. ಮಹಾದೇವ ಅವರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಸಿ. ಮಹದೇವಪ್ಪನವರು ಕರ್ನಾಟಕ ರಾಜ್ಯದ ದಲಿತ ರಾಜಕೀಯ ನಾಯಕರ ಸಾಲಿನಲ್ಲಿ ಪ್ರಮುಖರಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಮುಖ್ಯಮಂತ್ರಿಗಳ ಮಂತ್ರಿಮಂಡಲದಲ್ಲಿ ಅಗ್ರಸ್ಥಾನ ಪಡೆದಿದ್ದರು ಎಂದು ತಿಳಿಸಿದರು. ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಗಳ ಬದಲಾವಣೆಯ ಸಂದರ್ಭದಲ್ಲಿ ಸಚಿವ ಸಂಪುಟ ಪುನರ್‌ ನಿರ್ಮಾಣವಾದ ನಂತರವೂ ಮಹಾದೇವಪ್ಪನವರನ್ನು ಕಡೆಗಣಿಸಿ, ಮೊದಲ ಸಂಪುಟದಲ್ಲಿ ಯಾವುದೇ ಪ್ರಮುಖ ಖಾತೆಯನ್ನು ನೀಡದೆ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು. ರಾಜ್ಯದ ಗಡಿನಾಡು ಚಾಮರಾಜನಗರ ಜಿಲ್ಲೆಯಿಂದ ಕರ್ನಾಟಕದ ತುತ್ತತುದಿ ಬೀದರ್‌ವರೆಗೂ ಎಚ್.ಸಿ. ಮಹದೇವಪ್ಪನವರ ಅಭಿಮಾನಿಗಳು ಮತ್ತು ರಾಜಕೀಯ ಪ್ರೇರಿತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದು, ಅವರೆಲ್ಲರೂ ದಲಿತ ನಾಯಕರನ್ನು ಬೆಂಬಲಿಸುವಲ್ಲಿ ಯಾವುದೇ ಹಿಂಜರಿಕೆ ತೋರುವವರಲ್ಲ ಎಂದು ಒತ್ತಿ ಹೇಳಿದರು. ಒಂದು ವೇಳೆ ಮುಂದಿನ ದಿನಗಳಲ್ಲಿ ಎಚ್.ಸಿ. ಮಹದೇವಪ್ಪನವರಿಗೆ ಸಚಿವ ಸ್ಥಾನಮಾನ ನೀಡದಿದ್ದಲ್ಲಿ, ಹಳೆ ಮೈಸೂರು ಭಾಗದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳ ಅಭಿಮಾನಿಗಳ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಲಾಗುವುದು. ಇದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಕಷ್ಟ ಪರಿಸ್ಥಿತಿಯನ್ನು ನಿರ್ಮಾಣ ಮಾಡಿ, ಪಕ್ಷದಲ್ಲಿ ದೊಡ್ಡ ಮಟ್ಟದ ಹಿನ್ನಡೆಯನ್ನು ಅನುಭವಿಸುವಂತೆ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು. ನಂತರ ಮಾತನಾಡಿದ ಮದ್ದೂರು ಚಕ್ರವರ್ತಿ ಹಾಗೂ ಇರಸವಾಡಿ ಜನಾರ್ದನ್, ಹಳೇ ಮೈಸೂರು ಭಾಗದಲ್ಲಿ ರಾಜಕೀಯ ಮುಂಚೂಣಿ ನಾಯಕರಾಗಿರುವ ಎಚ್.ಸಿ. ಮಹದೇವಪ್ಪನವರು ತಮ್ಮೆಲ್ಲರ ರಾಜಕೀಯ ಗುರುಗಳಾಗಿದ್ದಾರೆ ಎಂದರು. ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮಗೆ ಹಿಂದುಳಿದ ದಲಿತ ವರ್ಗದ ರಾಜಕೀಯ ನಾಯಕರ ಮೇಲೆ ಒಲವಿದ್ದರೆ ಹಾಗೂ ನೀವು ದ್ವೇಷ ರಾಜಕಾರಣ ಮಾಡುವವರಲ್ಲದಿದ್ದರೆ, ಪ್ರತಿ ಬಾರಿಯೂ ನಮ್ಮ ನಾಯಕರಾದ ಮಹದೇವಪ್ಪನವರನ್ನು ಒಳ ರಾಜಕೀಯದ ಮುಖಾಂತರ ವಿರೋಧಿಸುತ್ತಿರುವುದು ನಮಗೆ ತಿಳಿದ ವಿಚಾರವೇ ಆಗಿದೆ ಎಂದು ಆರೋಪಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಾಗೂ ರಾಜ್ಯದ ಉನ್ನತ ಸಚಿವ ಸ್ಥಾನವಾದ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಇವರನ್ನು ನೀವು ಹಲವು ಬಾರಿ ಮಾರ್ಮಿಕವಾಗಿ ನಿಂದಿಸಿ ಮಾತನಾಡಿರುವುದು ಹಾಗೂ ಹೊಟ್ಟೆಕಿಚ್ಚಿನ ಸಂದರ್ಭಗಳನ್ನು ರಾಜ್ಯದ ದಲಿತ ನಾಯಕರು ಮತ್ತು ರಾಜಕೀಯ ಮುಖಂಡರು ತೀಕ್ಷ್ಣವಾಗಿ ಗಮನಿಸಿದ್ದಾರೆ. ಅದರ ಪರಿಣಾಮವಾಗಿಯೇ ನಿಮ್ಮ ರಾಜ್ಯ ಸಚಿವ ಸಂಪುಟದಲ್ಲಿ ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಲು ನಿರಾಕರಿಸಿದ್ದೀರಿ ಮತ್ತು ಕಡೆಗಣಿಸಿದ್ದೀರಿ ಎಂಬುದು ನಮಗೆ ತಿಳಿದಿರುವ ವಿಚಾರವಾಗಿದೆ ಎಂದು ದೂರಿದರು. ರಾಜ್ಯದ ದಲಿತ ನಾಯಕರುಗಳು ನಿಮ್ಮ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದು, ಮುಂದಿನ ಸಚಿವ ಸಂಪುಟ ರಚನೆಯ ಸಂದರ್ಭದಲ್ಲಿ ಕಡ್ಡಾಯವಾಗಿ ಮಹದೇವಪ್ಪನವರಿಗೆ ಉನ್ನತವಾದ ಸಚಿವ ಸ್ಥಾನವನ್ನು ನೀಡಿ, ಅವರ ಗೌರವಕ್ಕೆ ಧಕ್ಕೆ ಬಾರದಂತೆ ಹಾಗೂ ದಲಿತ ಜನರ ನಂಬಿಕೆಗೆ ಹಿನ್ನಡೆಯಾಗದಂತೆ ಸ್ಥಾನಮಾನವನ್ನು ನೀಡಬೇಕೆಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಡಾ. ಎಚ್.ಸಿ. ಮಹದೇವಪ್ಪ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ವಡಗೆರೆ ಡಾ. ವಿ.ಎನ್. ಮಹಾದೇವಯ್ಯ, ಮದ್ದೂರು ಚಕ್ರವರ್ತಿ ನಾರಾಯಣಸ್ವಾಮಿ, ಇರಸವಾಡಿ ಜನಾರ್ಧನ್ ಜಾನಿ, ವೈಕೆ ಮೋಳೆ ಪರಶಿವಮೂರ್ತಿ, ಚಂದ್ರು ಗೌಡಳ್ಳಿ ಚಂದ್ರಶೇಖರ್, ಸುರೇಶ್, ಚಾಟಿಪುರ ಮರಿಸ್ವಾಮಿ, ಕುಮಾರ್, ಶಿವಪ್ರಕಾಶ್, ರಘು, ಶ್ರೀಕಂಠ, ಹರೀಶ್ ಹೊನ್ನೂರು, ಮಹದೇವಸ್ವಾಮಿ, ರವಿ, ಆನಂದು ಸೇರಿದಂತೆ ಚಾಮರಾಜನಗರ ಜಿಲ್ಲೆಯ ಎಚ್.ಸಿ. ಮಹದೇವಪ್ಪನವರ ಅಭಿಮಾನಿ ಬಳಗದ ಸಂಘದ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
    2
    ಯಳಂದೂರು ತಾಲೂಕಿನ ಎಚ್.ಸಿ. ಮಹದೇವಪ್ಪ ಅಭಿಮಾನಿ ಬಳಗದಿಂದ ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಈ ಗೋಷ್ಠಿಯಲ್ಲಿ ಎಚ್.ಸಿ. ಮಹದೇವಪ್ಪನವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಬಲವಾಗಿ ಆಗ್ರಹಿಸಲಾಯಿತು.

ಮಹದೇವಪ್ಪ ಅಭಿಮಾನಿ ಬಳಗದ ಅಧ್ಯಕ್ಷರಾದ ವಡಗೆರೆ ಡಾ. ಮಹಾದೇವ ಅವರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಸಿ. ಮಹದೇವಪ್ಪನವರು ಕರ್ನಾಟಕ ರಾಜ್ಯದ ದಲಿತ ರಾಜಕೀಯ ನಾಯಕರ ಸಾಲಿನಲ್ಲಿ ಪ್ರಮುಖರಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಮುಖ್ಯಮಂತ್ರಿಗಳ ಮಂತ್ರಿಮಂಡಲದಲ್ಲಿ ಅಗ್ರಸ್ಥಾನ ಪಡೆದಿದ್ದರು ಎಂದು ತಿಳಿಸಿದರು. ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಗಳ ಬದಲಾವಣೆಯ ಸಂದರ್ಭದಲ್ಲಿ ಸಚಿವ ಸಂಪುಟ ಪುನರ್‌ ನಿರ್ಮಾಣವಾದ ನಂತರವೂ ಮಹಾದೇವಪ್ಪನವರನ್ನು ಕಡೆಗಣಿಸಿ, ಮೊದಲ ಸಂಪುಟದಲ್ಲಿ ಯಾವುದೇ ಪ್ರಮುಖ ಖಾತೆಯನ್ನು ನೀಡದೆ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು. ರಾಜ್ಯದ ಗಡಿನಾಡು ಚಾಮರಾಜನಗರ ಜಿಲ್ಲೆಯಿಂದ ಕರ್ನಾಟಕದ ತುತ್ತತುದಿ ಬೀದರ್‌ವರೆಗೂ ಎಚ್.ಸಿ. ಮಹದೇವಪ್ಪನವರ ಅಭಿಮಾನಿಗಳು ಮತ್ತು ರಾಜಕೀಯ ಪ್ರೇರಿತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದು, ಅವರೆಲ್ಲರೂ ದಲಿತ ನಾಯಕರನ್ನು ಬೆಂಬಲಿಸುವಲ್ಲಿ ಯಾವುದೇ ಹಿಂಜರಿಕೆ ತೋರುವವರಲ್ಲ ಎಂದು ಒತ್ತಿ ಹೇಳಿದರು. ಒಂದು ವೇಳೆ ಮುಂದಿನ ದಿನಗಳಲ್ಲಿ ಎಚ್.ಸಿ. ಮಹದೇವಪ್ಪನವರಿಗೆ ಸಚಿವ ಸ್ಥಾನಮಾನ ನೀಡದಿದ್ದಲ್ಲಿ, ಹಳೆ ಮೈಸೂರು ಭಾಗದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳ ಅಭಿಮಾನಿಗಳ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಲಾಗುವುದು. ಇದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಕಷ್ಟ ಪರಿಸ್ಥಿತಿಯನ್ನು ನಿರ್ಮಾಣ ಮಾಡಿ, ಪಕ್ಷದಲ್ಲಿ ದೊಡ್ಡ ಮಟ್ಟದ ಹಿನ್ನಡೆಯನ್ನು ಅನುಭವಿಸುವಂತೆ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು.

ನಂತರ ಮಾತನಾಡಿದ ಮದ್ದೂರು ಚಕ್ರವರ್ತಿ ಹಾಗೂ ಇರಸವಾಡಿ ಜನಾರ್ದನ್, ಹಳೇ ಮೈಸೂರು ಭಾಗದಲ್ಲಿ ರಾಜಕೀಯ ಮುಂಚೂಣಿ ನಾಯಕರಾಗಿರುವ ಎಚ್.ಸಿ. ಮಹದೇವಪ್ಪನವರು ತಮ್ಮೆಲ್ಲರ ರಾಜಕೀಯ ಗುರುಗಳಾಗಿದ್ದಾರೆ ಎಂದರು. ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮಗೆ ಹಿಂದುಳಿದ ದಲಿತ ವರ್ಗದ ರಾಜಕೀಯ ನಾಯಕರ ಮೇಲೆ ಒಲವಿದ್ದರೆ ಹಾಗೂ ನೀವು ದ್ವೇಷ ರಾಜಕಾರಣ ಮಾಡುವವರಲ್ಲದಿದ್ದರೆ, ಪ್ರತಿ ಬಾರಿಯೂ ನಮ್ಮ ನಾಯಕರಾದ ಮಹದೇವಪ್ಪನವರನ್ನು ಒಳ ರಾಜಕೀಯದ ಮುಖಾಂತರ ವಿರೋಧಿಸುತ್ತಿರುವುದು ನಮಗೆ ತಿಳಿದ ವಿಚಾರವೇ ಆಗಿದೆ ಎಂದು ಆರೋಪಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಾಗೂ ರಾಜ್ಯದ ಉನ್ನತ ಸಚಿವ ಸ್ಥಾನವಾದ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಇವರನ್ನು ನೀವು ಹಲವು ಬಾರಿ ಮಾರ್ಮಿಕವಾಗಿ ನಿಂದಿಸಿ ಮಾತನಾಡಿರುವುದು ಹಾಗೂ ಹೊಟ್ಟೆಕಿಚ್ಚಿನ ಸಂದರ್ಭಗಳನ್ನು ರಾಜ್ಯದ ದಲಿತ ನಾಯಕರು ಮತ್ತು ರಾಜಕೀಯ ಮುಖಂಡರು ತೀಕ್ಷ್ಣವಾಗಿ ಗಮನಿಸಿದ್ದಾರೆ. ಅದರ ಪರಿಣಾಮವಾಗಿಯೇ ನಿಮ್ಮ ರಾಜ್ಯ ಸಚಿವ ಸಂಪುಟದಲ್ಲಿ ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಲು ನಿರಾಕರಿಸಿದ್ದೀರಿ ಮತ್ತು ಕಡೆಗಣಿಸಿದ್ದೀರಿ ಎಂಬುದು ನಮಗೆ ತಿಳಿದಿರುವ ವಿಚಾರವಾಗಿದೆ ಎಂದು ದೂರಿದರು. ರಾಜ್ಯದ ದಲಿತ ನಾಯಕರುಗಳು ನಿಮ್ಮ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದು, ಮುಂದಿನ ಸಚಿವ ಸಂಪುಟ ರಚನೆಯ ಸಂದರ್ಭದಲ್ಲಿ ಕಡ್ಡಾಯವಾಗಿ ಮಹದೇವಪ್ಪನವರಿಗೆ ಉನ್ನತವಾದ ಸಚಿವ ಸ್ಥಾನವನ್ನು ನೀಡಿ, ಅವರ ಗೌರವಕ್ಕೆ ಧಕ್ಕೆ ಬಾರದಂತೆ ಹಾಗೂ ದಲಿತ ಜನರ ನಂಬಿಕೆಗೆ ಹಿನ್ನಡೆಯಾಗದಂತೆ ಸ್ಥಾನಮಾನವನ್ನು ನೀಡಬೇಕೆಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಡಾ. ಎಚ್.ಸಿ. ಮಹದೇವಪ್ಪ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ವಡಗೆರೆ ಡಾ. ವಿ.ಎನ್. ಮಹಾದೇವಯ್ಯ, ಮದ್ದೂರು ಚಕ್ರವರ್ತಿ ನಾರಾಯಣಸ್ವಾಮಿ, ಇರಸವಾಡಿ ಜನಾರ್ಧನ್ ಜಾನಿ, ವೈಕೆ ಮೋಳೆ ಪರಶಿವಮೂರ್ತಿ, ಚಂದ್ರು ಗೌಡಳ್ಳಿ ಚಂದ್ರಶೇಖರ್, ಸುರೇಶ್, ಚಾಟಿಪುರ ಮರಿಸ್ವಾಮಿ, ಕುಮಾರ್, ಶಿವಪ್ರಕಾಶ್, ರಘು, ಶ್ರೀಕಂಠ, ಹರೀಶ್ ಹೊನ್ನೂರು, ಮಹದೇವಸ್ವಾಮಿ, ರವಿ, ಆನಂದು ಸೇರಿದಂತೆ ಚಾಮರಾಜನಗರ ಜಿಲ್ಲೆಯ ಎಚ್.ಸಿ. ಮಹದೇವಪ್ಪನವರ ಅಭಿಮಾನಿ ಬಳಗದ ಸಂಘದ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    8 hrs ago
  • ಹನೂರು ತಾಲೂಕಿನಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಧ್ವನಿ ಎತ್ತುವ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯ ಕಾರ್ಯಕ್ಕೆ ಸಮಾಜ ಸೇವಕ ನಿಶಾಂತ್ ತಮ್ಮ ಸಂಪೂರ್ಣ ಸಹಮತ ಹಾಗೂ ಬೆಂಬಲವಿದೆ ಎಂದು ತಿಳಿಸಿದರು. ಪಟ್ಟಣದಲ್ಲಿ ನಡೆದ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಕಚೇರಿ ಉದ್ಘಾಟನೆ ಹಾಗೂ ಮಹಿಳಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹನೂರು ಭಾಗವು ಕರ್ನಾಟಕದ ಕೊನೆಯ ಗಡಿಯಲ್ಲಿದ್ದು, ಹೊಸ ತಾಲೂಕಾದಾಗಿನಿಂದಲೂ ಜನಸಾಮಾನ್ಯರು ಕಂದಾಯ ಇಲಾಖೆಯಿಂದ ಹಿಡಿದು ಕುಡಿಯುವ ನೀರಿನವರೆಗೂ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಿಶಾಂತ್ ಅಭಿಪ್ರಾಯಪಟ್ಟರು. ಜನಸಾಮಾನ್ಯರಿಗೆ ಮತ್ತು ಬಡವರಿಗೆ ನ್ಯಾಯ ಸಿಗದಿರುವ ಕಡೆ, ನ್ಯಾಯ ಒದಗಿಸಲು ಇಂತಹ ರಕ್ಷಣಾ ವೇದಿಕೆಗಳು ತಾಲೂಕಿಗೆ ಅತ್ಯಂತ ಅವಶ್ಯಕ ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ, ತಾಲೂಕು ಕಚೇರಿಯ ತಹಶೀಲ್ದಾರ್ ಅವರ ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನಿಶಾಂತ್, ಕಳೆದ ಒಂದು ವರ್ಷದಿಂದ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿವೆ ಎಂದರು. ಹಳ್ಳಿಗಳಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ (ಟಿಸಿ) ಕೆಟ್ಟರೆ ಅಧಿಕಾರಿಗಳು ತಿಂಗಳಾದರೂ ಸ್ಪಂದಿಸುವುದಿಲ್ಲ ಎಂದು ಆರೋಪಿಸಿದ ಅವರು, ಬಡ ರೈತರಿಗೆ ತೊಂದರೆ ಕೊಟ್ಟು ಭ್ರಷ್ಟಾಚಾರ ನಡೆಸುತ್ತಿರುವ ಅಧಿಕಾರಿಗಳ ವಿರುದ್ಧ ಒಟ್ಟಾಗಿ ಹೋರಾಡಿ ಸೂಕ್ತ ಪಾಠ ಕಲಿಸಬೇಕು ಎಂದು ಕರೆ ನೀಡಿದರು. ಈ ಭಾಗದಲ್ಲಿ ಮಹಿಳೆಯರ ಆರ್ಥಿಕ ಸುಧಾರಣೆ ಹಾಗೂ ಸ್ವಾವಲಂಬನೆಗಾಗಿ ಹೊಸ ಯೋಜನೆಗಳ ಅಗತ್ಯವಿದೆ ಎಂದು ನಿಶಾಂತ್ ಹೇಳಿದರು. ಕೇವಲ ಹಳೆಯ ಟೈಲರಿಂಗ್ ತರಬೇತಿಗಳಿಗೆ ಸೀಮಿತವಾಗದೆ, ಮೈಕ್ರೋ ಫೈನಾನ್ಸ್ ನೆರವು ನೀಡಬೇಕಿದೆ ಎಂದು ತಿಳಿಸಿದರು. ಭಾರತ-ಬ್ರಿಟನ್ (UK) ನಡುವಿನ ವ್ಯಾಪಾರ ಒಪ್ಪಂದಗಳ ಹಿನ್ನೆಲೆಯಲ್ಲಿ ಗಾರ್ಮೆಂಟ್ಸ್ ಉದ್ಯಮವು ಮತ್ತೆ ಚೇತರಿಸಿಕೊಳ್ಳುತ್ತಿದ್ದು, ಹನೂರು ಭಾಗದ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ತಮಿಳುನಾಡಿನ ಪ್ರಮುಖ ಗಾರ್ಮೆಂಟ್ಸ್ ಉದ್ಯಮಗಳ ಜೊತೆ ಈಗಾಗಲೇ ಮಾತುಕತೆ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಈ ಭಾಗಕ್ಕೆ ಉದ್ಯಮಗಳನ್ನು ತರಲು ಪ್ರಯತ್ನಿಸಲಾಗುತ್ತಿದೆ ಎಂದರು. ನಂತರ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷ ಎಂ.ಬಿ. ಮಹೇಶ್ ಕುಮಾರ್ ಮಾತನಾಡಿ, ತಮ್ಮ ಸಂಘಟನೆಯು ಯಾವುದೇ ರಾಜಕೀಯ ಪಕ್ಷದ ಹಂಗಿಲ್ಲದೆ ಸಂಪೂರ್ಣ ಪಕ್ಷಾತೀತವಾಗಿ ಕೆಲಸ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು. ನಾಡು-ನುಡಿ, ಜಲ ಹಾಗೂ ಕಾವೇರಿ ಹಿತರಕ್ಷಣೆಯ ವಿಷಯದಲ್ಲಿ ರಾಜಿಯಾಗದೆ ಹೋರಾಡುತ್ತೇವೆ ಎಂದು ಅವರು ಹೇಳಿದರು. ಒಂದು ವೇಳೆ ಸಂಘಟನೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಸನ್ನಿವೇಶ ಬಂದರೆ ಅಂದೇ ಸಂಘಟನೆಯನ್ನು ಮುಚ್ಚಲಾಗುವುದು ಎಂದು ಮಹೇಶ್ ಕುಮಾರ್ ಘೋಷಿಸಿದರು. ರಾಜ್ಯಾಧ್ಯಕ್ಷ ಎಂ.ಬಿ. ಮಹೇಶ್ ಕುಮಾರ್ ಅವರ ಪ್ರಕಾರ, ಕೇವಲ ವೇದಿಕೆ ಕಾರ್ಯಕ್ರಮಗಳನ್ನು ಮಾಡುವುದರಿಂದ ಯಾರೂ ಹೆಸರು ಮಾಡಲು ಸಾಧ್ಯವಿಲ್ಲ. ಸರ್ಕಾರದ ಸೌಲತ್ತುಗಳನ್ನು ಪಡೆದುಕೊಳ್ಳಲು ಮತ್ತು ಹಕ್ಕುಗಳನ್ನು ಸ್ಥಾಪಿಸಲು 'ಹೋರಾಟ' ಒಂದೇ ಏಕೈಕ ದಾರಿ. ನಿರಂತರ ಹೋರಾಟಗಳ ಮೂಲಕ ಮಾತ್ರ ಸಂಘಟನೆಯನ್ನು ದೊಡ್ಡ ಮಟ್ಟಕ್ಕೆ ಬೆಳೆಸಲು ಸಾಧ್ಯ. ಕಾರ್ಯಕ್ರಮದಲ್ಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಹೇಮರಾಜೇಂದ್ರನ್ ಸಹ ಮಾತನಾಡಿದರು. ಜಿಲ್ಲಾಧ್ಯಕ್ಷ ಶಿವಸುಂದರ್, ಜಿಲ್ಲಾ ಉಪಾಧ್ಯಕ್ಷ ಆನಂದ್, ಚಾಮರಾಜನಗರ ಘಟಕದ ಅಧ್ಯಕ್ಷ ಕಿರಣ್ ರಾಜು, ಕೊಳ್ಳೇಗಾಲ ತಾಲೂಕು ಅಧ್ಯಕ್ಷ ರೇವಣ್ಣ, ಚಾಮರಾಜನಗರ ಮಹಿಳಾ ಘಟಕದ ಅಧ್ಯಕ್ಷೆ ಮಂಗಳಮ್ಮ, ಹನೂರು ಘಟಕದ ಅಧ್ಯಕ್ಷ ಅಭಿಷೇಕ್, ಹಾಗೂ ಮುಖಂಡರಾದ ಬಸವರಾಜು, ನಾಗರಾಜು, ಮಾದೇವ, ಸುರೇಶ್, ಮೇಘರಾಜ್, ತಮ್ಮಯ್ಯ ಸೇರಿದಂತೆ ನೂರಾರು ಮಹಿಳೆಯರು ಹಾಗೂ ಪುರುಷರು ಉಪಸ್ಥಿತರಿದ್ದರು.
    3
    ಹನೂರು ತಾಲೂಕಿನಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಧ್ವನಿ ಎತ್ತುವ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯ ಕಾರ್ಯಕ್ಕೆ ಸಮಾಜ ಸೇವಕ ನಿಶಾಂತ್ ತಮ್ಮ ಸಂಪೂರ್ಣ ಸಹಮತ ಹಾಗೂ ಬೆಂಬಲವಿದೆ ಎಂದು ತಿಳಿಸಿದರು. ಪಟ್ಟಣದಲ್ಲಿ ನಡೆದ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಕಚೇರಿ ಉದ್ಘಾಟನೆ ಹಾಗೂ ಮಹಿಳಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹನೂರು ಭಾಗವು ಕರ್ನಾಟಕದ ಕೊನೆಯ ಗಡಿಯಲ್ಲಿದ್ದು, ಹೊಸ ತಾಲೂಕಾದಾಗಿನಿಂದಲೂ ಜನಸಾಮಾನ್ಯರು ಕಂದಾಯ ಇಲಾಖೆಯಿಂದ ಹಿಡಿದು ಕುಡಿಯುವ ನೀರಿನವರೆಗೂ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಿಶಾಂತ್ ಅಭಿಪ್ರಾಯಪಟ್ಟರು. ಜನಸಾಮಾನ್ಯರಿಗೆ ಮತ್ತು ಬಡವರಿಗೆ ನ್ಯಾಯ ಸಿಗದಿರುವ ಕಡೆ, ನ್ಯಾಯ ಒದಗಿಸಲು ಇಂತಹ ರಕ್ಷಣಾ ವೇದಿಕೆಗಳು ತಾಲೂಕಿಗೆ ಅತ್ಯಂತ ಅವಶ್ಯಕ ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ, ತಾಲೂಕು ಕಚೇರಿಯ ತಹಶೀಲ್ದಾರ್ ಅವರ ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನಿಶಾಂತ್, ಕಳೆದ ಒಂದು ವರ್ಷದಿಂದ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿವೆ ಎಂದರು. ಹಳ್ಳಿಗಳಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ (ಟಿಸಿ) ಕೆಟ್ಟರೆ ಅಧಿಕಾರಿಗಳು ತಿಂಗಳಾದರೂ ಸ್ಪಂದಿಸುವುದಿಲ್ಲ ಎಂದು ಆರೋಪಿಸಿದ ಅವರು, ಬಡ ರೈತರಿಗೆ ತೊಂದರೆ ಕೊಟ್ಟು ಭ್ರಷ್ಟಾಚಾರ ನಡೆಸುತ್ತಿರುವ ಅಧಿಕಾರಿಗಳ ವಿರುದ್ಧ ಒಟ್ಟಾಗಿ ಹೋರಾಡಿ ಸೂಕ್ತ ಪಾಠ ಕಲಿಸಬೇಕು ಎಂದು ಕರೆ ನೀಡಿದರು.

ಈ ಭಾಗದಲ್ಲಿ ಮಹಿಳೆಯರ ಆರ್ಥಿಕ ಸುಧಾರಣೆ ಹಾಗೂ ಸ್ವಾವಲಂಬನೆಗಾಗಿ ಹೊಸ ಯೋಜನೆಗಳ ಅಗತ್ಯವಿದೆ ಎಂದು ನಿಶಾಂತ್ ಹೇಳಿದರು. ಕೇವಲ ಹಳೆಯ ಟೈಲರಿಂಗ್ ತರಬೇತಿಗಳಿಗೆ ಸೀಮಿತವಾಗದೆ, ಮೈಕ್ರೋ ಫೈನಾನ್ಸ್ ನೆರವು ನೀಡಬೇಕಿದೆ ಎಂದು ತಿಳಿಸಿದರು. ಭಾರತ-ಬ್ರಿಟನ್ (UK) ನಡುವಿನ ವ್ಯಾಪಾರ ಒಪ್ಪಂದಗಳ ಹಿನ್ನೆಲೆಯಲ್ಲಿ ಗಾರ್ಮೆಂಟ್ಸ್ ಉದ್ಯಮವು ಮತ್ತೆ ಚೇತರಿಸಿಕೊಳ್ಳುತ್ತಿದ್ದು, ಹನೂರು ಭಾಗದ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ತಮಿಳುನಾಡಿನ ಪ್ರಮುಖ ಗಾರ್ಮೆಂಟ್ಸ್ ಉದ್ಯಮಗಳ ಜೊತೆ ಈಗಾಗಲೇ ಮಾತುಕತೆ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಈ ಭಾಗಕ್ಕೆ ಉದ್ಯಮಗಳನ್ನು ತರಲು ಪ್ರಯತ್ನಿಸಲಾಗುತ್ತಿದೆ ಎಂದರು.

ನಂತರ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷ ಎಂ.ಬಿ. ಮಹೇಶ್ ಕುಮಾರ್ ಮಾತನಾಡಿ, ತಮ್ಮ ಸಂಘಟನೆಯು ಯಾವುದೇ ರಾಜಕೀಯ ಪಕ್ಷದ ಹಂಗಿಲ್ಲದೆ ಸಂಪೂರ್ಣ ಪಕ್ಷಾತೀತವಾಗಿ ಕೆಲಸ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು. ನಾಡು-ನುಡಿ, ಜಲ ಹಾಗೂ ಕಾವೇರಿ ಹಿತರಕ್ಷಣೆಯ ವಿಷಯದಲ್ಲಿ ರಾಜಿಯಾಗದೆ ಹೋರಾಡುತ್ತೇವೆ ಎಂದು ಅವರು ಹೇಳಿದರು. ಒಂದು ವೇಳೆ ಸಂಘಟನೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಸನ್ನಿವೇಶ ಬಂದರೆ ಅಂದೇ ಸಂಘಟನೆಯನ್ನು ಮುಚ್ಚಲಾಗುವುದು ಎಂದು ಮಹೇಶ್ ಕುಮಾರ್ ಘೋಷಿಸಿದರು. ರಾಜ್ಯಾಧ್ಯಕ್ಷ ಎಂ.ಬಿ. ಮಹೇಶ್ ಕುಮಾರ್ ಅವರ ಪ್ರಕಾರ, ಕೇವಲ ವೇದಿಕೆ ಕಾರ್ಯಕ್ರಮಗಳನ್ನು ಮಾಡುವುದರಿಂದ ಯಾರೂ ಹೆಸರು ಮಾಡಲು ಸಾಧ್ಯವಿಲ್ಲ. ಸರ್ಕಾರದ ಸೌಲತ್ತುಗಳನ್ನು ಪಡೆದುಕೊಳ್ಳಲು ಮತ್ತು ಹಕ್ಕುಗಳನ್ನು ಸ್ಥಾಪಿಸಲು 'ಹೋರಾಟ' ಒಂದೇ ಏಕೈಕ ದಾರಿ. ನಿರಂತರ ಹೋರಾಟಗಳ ಮೂಲಕ ಮಾತ್ರ ಸಂಘಟನೆಯನ್ನು ದೊಡ್ಡ ಮಟ್ಟಕ್ಕೆ ಬೆಳೆಸಲು ಸಾಧ್ಯ.

ಕಾರ್ಯಕ್ರಮದಲ್ಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಹೇಮರಾಜೇಂದ್ರನ್ ಸಹ ಮಾತನಾಡಿದರು. ಜಿಲ್ಲಾಧ್ಯಕ್ಷ ಶಿವಸುಂದರ್, ಜಿಲ್ಲಾ ಉಪಾಧ್ಯಕ್ಷ ಆನಂದ್, ಚಾಮರಾಜನಗರ ಘಟಕದ ಅಧ್ಯಕ್ಷ ಕಿರಣ್ ರಾಜು, ಕೊಳ್ಳೇಗಾಲ ತಾಲೂಕು ಅಧ್ಯಕ್ಷ ರೇವಣ್ಣ, ಚಾಮರಾಜನಗರ ಮಹಿಳಾ ಘಟಕದ ಅಧ್ಯಕ್ಷೆ ಮಂಗಳಮ್ಮ, ಹನೂರು ಘಟಕದ ಅಧ್ಯಕ್ಷ ಅಭಿಷೇಕ್, ಹಾಗೂ ಮುಖಂಡರಾದ ಬಸವರಾಜು, ನಾಗರಾಜು, ಮಾದೇವ, ಸುರೇಶ್, ಮೇಘರಾಜ್, ತಮ್ಮಯ್ಯ ಸೇರಿದಂತೆ ನೂರಾರು ಮಹಿಳೆಯರು ಹಾಗೂ ಪುರುಷರು ಉಪಸ್ಥಿತರಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    13 hrs ago
  • ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ 'ಮನೆಬಾಗಿಲಿಗೆ ಸರ್ಕಾರ' ಹೆಸರಿನಡಿ ಆಯೋಜಿಸಲಾಗುತ್ತಿರುವ ಜನತಾ ದರ್ಶನ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ಸರಣಿಯ 14ನೇ ಜನತಾ ದರ್ಶನ ಕಾರ್ಯಕ್ರಮವು ಗರುಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಪಿ. ರವಿಕುಮಾರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು. ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಜನರ ಕಷ್ಟವನ್ನು ನಿವಾರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ 52 ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಒಟ್ಟು 309 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಅವುಗಳ ತ್ವರಿತ ವಿಲೇವಾರಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಜನತಾ ದರ್ಶನದ ಜೊತೆಗೆ ಆರೋಗ್ಯ, ಶಿಕ್ಷಣ, ಮಹಿಳಾ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆಗೆ ಸಂಬಂಧಿಸಿದ ಹಲವು ವಿಶೇಷ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿತ್ತು. ಆಲ್ಫಾ ಆಸ್ಪತ್ರೆಯ ವತಿಯಿಂದ ಸುಮಾರು 150 ಜನರಿಗೆ ಆರೋಗ್ಯ ತಪಾಸಣೆ ನಡೆಸಿದರೆ, ನಾರಾಯಣ ಹೃದಯಾಲಯದಿಂದ 90 ಜನರಿಗೆ ಉಚಿತ ECG ಪರೀಕ್ಷೆ ಒದಗಿಸಲಾಯಿತು. UCO ಸೇವಾ ಘಟಕದ ಮೂಲಕ 60 ಜನರಿಗೆ ಆರೋಗ್ಯ ಸೇವೆಗಳು ಲಭ್ಯವಾದವು. ಅಗರ್ವಾಲ್ ಕಣ್ಣಿನ ಆಸ್ಪತ್ರೆಯು 250 ಜನರಿಗೆ ನೇತ್ರ ತಪಾಸಣೆ ನಡೆಸಿ, ಅವರಲ್ಲಿ 200 ಜನರಿಗೆ ಉಚಿತ ಕನ್ನಡಕಗಳನ್ನು ವಿತರಿಸಿತು ಹಾಗೂ ಗಂಭೀರ ಸಮಸ್ಯೆಗಳಿದ್ದ 50 ಜನರನ್ನು ಶಸ್ತ್ರಚಿಕಿತ್ಸೆಗೆ ಶಿಫಾರಸು ಮಾಡಿತು. ಕಾರ್ಯಕ್ರಮದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕೂ ಒತ್ತು ನೀಡಲಾಯಿತು; ರೇಷ್ಮೆ ಹುಳು ಸಾಕಾಣಿಕೆ ಮನೆ ನಿರ್ಮಾಣಕ್ಕಾಗಿ ಇಬ್ಬರು ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು. ದೊಡ್ಡಗರುಡನಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಐದು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
    3
    ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ 'ಮನೆಬಾಗಿಲಿಗೆ ಸರ್ಕಾರ' ಹೆಸರಿನಡಿ ಆಯೋಜಿಸಲಾಗುತ್ತಿರುವ ಜನತಾ ದರ್ಶನ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ಸರಣಿಯ 14ನೇ ಜನತಾ ದರ್ಶನ ಕಾರ್ಯಕ್ರಮವು ಗರುಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಪಿ. ರವಿಕುಮಾರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು. ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಜನರ ಕಷ್ಟವನ್ನು ನಿವಾರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ 52 ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಒಟ್ಟು 309 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಅವುಗಳ ತ್ವರಿತ ವಿಲೇವಾರಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

ಜನತಾ ದರ್ಶನದ ಜೊತೆಗೆ ಆರೋಗ್ಯ, ಶಿಕ್ಷಣ, ಮಹಿಳಾ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆಗೆ ಸಂಬಂಧಿಸಿದ ಹಲವು ವಿಶೇಷ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿತ್ತು. ಆಲ್ಫಾ ಆಸ್ಪತ್ರೆಯ ವತಿಯಿಂದ ಸುಮಾರು 150 ಜನರಿಗೆ ಆರೋಗ್ಯ ತಪಾಸಣೆ ನಡೆಸಿದರೆ, ನಾರಾಯಣ ಹೃದಯಾಲಯದಿಂದ 90 ಜನರಿಗೆ ಉಚಿತ ECG ಪರೀಕ್ಷೆ ಒದಗಿಸಲಾಯಿತು. UCO ಸೇವಾ ಘಟಕದ ಮೂಲಕ 60 ಜನರಿಗೆ ಆರೋಗ್ಯ ಸೇವೆಗಳು ಲಭ್ಯವಾದವು. ಅಗರ್ವಾಲ್ ಕಣ್ಣಿನ ಆಸ್ಪತ್ರೆಯು 250 ಜನರಿಗೆ ನೇತ್ರ ತಪಾಸಣೆ ನಡೆಸಿ, ಅವರಲ್ಲಿ 200 ಜನರಿಗೆ ಉಚಿತ ಕನ್ನಡಕಗಳನ್ನು ವಿತರಿಸಿತು ಹಾಗೂ ಗಂಭೀರ ಸಮಸ್ಯೆಗಳಿದ್ದ 50 ಜನರನ್ನು ಶಸ್ತ್ರಚಿಕಿತ್ಸೆಗೆ ಶಿಫಾರಸು ಮಾಡಿತು. ಕಾರ್ಯಕ್ರಮದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕೂ ಒತ್ತು ನೀಡಲಾಯಿತು; ರೇಷ್ಮೆ ಹುಳು ಸಾಕಾಣಿಕೆ ಮನೆ ನಿರ್ಮಾಣಕ್ಕಾಗಿ ಇಬ್ಬರು ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು. ದೊಡ್ಡಗರುಡನಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಐದು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    2 hrs ago
  • ಮೈಸೂರು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಡಿಯಲ್ಲಿ ಬರುವ ವಕ್ಫ್ ಆಸ್ತಿಗಳ ಆದಾಯದ ಮೂಲಗಳಿಂದ, ಹಿಂದುಳಿದವರ ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಗಾಗಿ ಶೇಕಡಾ 30ರಷ್ಟು ಸಂಪನ್ಮೂಲಗಳನ್ನು ಒದಗಿಸುವ ಕುರಿತಾದ ವಿಷಯವು ಭಾರತದಲ್ಲಿ ವೈರಲ್ ಆಗಿದೆ.
    1
    ಮೈಸೂರು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಡಿಯಲ್ಲಿ ಬರುವ ವಕ್ಫ್ ಆಸ್ತಿಗಳ ಆದಾಯದ ಮೂಲಗಳಿಂದ, ಹಿಂದುಳಿದವರ ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಗಾಗಿ ಶೇಕಡಾ 30ರಷ್ಟು ಸಂಪನ್ಮೂಲಗಳನ್ನು ಒದಗಿಸುವ ಕುರಿತಾದ ವಿಷಯವು ಭಾರತದಲ್ಲಿ ವೈರಲ್ ಆಗಿದೆ.
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    5 hrs ago
  • ಮುಖ್ಯಮಂತ್ರಿಗಳು ಸ್ಪಷ್ಟವಾಗಿ ನಿರ್ದೇಶನ ನೀಡಿದ ಹೊರತಾಗಿಯೂ, ವಿಧಾನಸೌಧದ ಸಿಬ್ಬಂದಿ ವರ್ಗದ ನಿರ್ಲಕ್ಷ್ಯವು ಯಾವ ಮಟ್ಟದಲ್ಲಿದೆ ಎಂಬುದನ್ನು ಇಲ್ಲಿ ಎತ್ತಿ ತೋರಿಸಲಾಗಿದೆ. ಮುಖ್ಯಮಂತ್ರಿಗಳ ಸೂಚನೆಗಳನ್ನು ಪಾಲಿಸದೆ, ಸಿಬ್ಬಂದಿ ನಿರ್ಲಕ್ಷ್ಯ ಮುಂದುವರಿಸುತ್ತಿರುವುದು ಸ್ಪಷ್ಟವಾಗಿದೆ.
    1
    ಮುಖ್ಯಮಂತ್ರಿಗಳು ಸ್ಪಷ್ಟವಾಗಿ ನಿರ್ದೇಶನ ನೀಡಿದ ಹೊರತಾಗಿಯೂ, ವಿಧಾನಸೌಧದ ಸಿಬ್ಬಂದಿ ವರ್ಗದ ನಿರ್ಲಕ್ಷ್ಯವು ಯಾವ ಮಟ್ಟದಲ್ಲಿದೆ ಎಂಬುದನ್ನು ಇಲ್ಲಿ ಎತ್ತಿ ತೋರಿಸಲಾಗಿದೆ. ಮುಖ್ಯಮಂತ್ರಿಗಳ ಸೂಚನೆಗಳನ್ನು ಪಾಲಿಸದೆ, ಸಿಬ್ಬಂದಿ ನಿರ್ಲಕ್ಷ್ಯ ಮುಂದುವರಿಸುತ್ತಿರುವುದು ಸ್ಪಷ್ಟವಾಗಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ಸೋಮವತಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಮಹದೇಶ್ವರಬೆಟ್ಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದು, ದೇವಾಲಯದ ಸುತ್ತಮುತ್ತ ಹಾಗೂ ಬೆಟ್ಟದ ಮಾರ್ಗಗಳಲ್ಲಿ ಭಕ್ತರ ದಟ್ಟಣೆ ಕಂಡುಬಂದಿತು. ಭಾನುವಾರ ಬೆಳಗ್ಗೆಯಿಂದಲೇ ದೇವಾಲಯದಲ್ಲಿ ಬೇಡಗಂಪಣ ಆರ್ಚಕರಿಂದ ವಿಶೇಷ ಪೂಜೆಗಳು, ನಾನಾ ಅಭಿಷೇಕ, ಅಲಂಕಾರ ಹಾಗೂ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ, ಮಡಿಕೇರಿ ಸೇರಿದಂತೆ ಹಲವು ಜಿಲ್ಲೆಗಳಿಂದ ಮುಂಜಾನೆಯಲ್ಲೇ ಆಗಮಿಸಿದ ಭಕ್ತರು, ಮಾದಪ್ಪನ ದರ್ಶನಕ್ಕಾಗಿ ಹಲವು ತಾಸು ಸರತಿ ಸಾಲಿನಲ್ಲಿ ನಿಂತು ಪೂಜೆಯಲ್ಲಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿದರು. ಅಲ್ಲದೆ, ದೇವಾಲಯದ ಹೊರಾಂಗಣದಲ್ಲಿ ಹುಲಿವಾಹನ ಸೇವೆ, ರುದ್ರಾಕ್ಷಿ ಮಂಟಪ ಬಸವನ ಉತ್ಸವ ಹಾಗೂ ಬೆಳ್ಳಿರಥೋತ್ಸವದಲ್ಲಿ ಭಾಗವಹಿಸಿ ತಮ್ಮ ಸೇವೆಯನ್ನು ಸಮರ್ಪಿಸಿದರು. ಪೂಜಾ ಸಮಯದಲ್ಲಿ ಭಕ್ತರು 'ಉಘೆ ಉಘೆ ಮಾದಪ್ಪ ಉಘೇ' ಎಂಬ ಘೋಷವಾಕ್ಯಗಳನ್ನು ಕೂಗಿ ಜಯಘೋಷಗಳನ್ನು ಮೊಳಗಿಸಿದರು. ದೇವಾಲಯದ ಗರ್ಭಗುಡಿ ಹಾಗೂ ಒಳಾಂಗಣವನ್ನು ಹೂವಿನ ಅಲಂಕಾರ, ದೀಪಾಲಂಕಾರ ಹಾಗೂ ಸಾಂಪ್ರದಾಯಿಕ ಅಲಂಕಾರಗಳಿಂದ ವಿಶೇಷವಾಗಿ ಶೃಂಗಾರಗೊಳಿಸಲಾಗಿತ್ತು. ಸೋಮವತಿ ಅಮಾವಾಸ್ಯೆಯ ವಿಶೇಷ ಮಹತ್ವದ ಹಿನ್ನೆಲೆಯಲ್ಲಿ ಭಕ್ತರು ಉಪವಾಸ, ದಾನಧರ್ಮ ಹಾಗೂ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಿದರು. ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ ಕಾರಣ, ಮಲೆಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರದಿಂದ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು ಮತ್ತು ಮಹದೇಶ್ವರಬೆಟ್ಟ ಪೊಲೀಸರು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ, ಟ್ರಾಫಿಕ್ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಂಡಿದ್ದರು.
    2
    ಸೋಮವತಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಮಹದೇಶ್ವರಬೆಟ್ಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದು, ದೇವಾಲಯದ ಸುತ್ತಮುತ್ತ ಹಾಗೂ ಬೆಟ್ಟದ ಮಾರ್ಗಗಳಲ್ಲಿ ಭಕ್ತರ ದಟ್ಟಣೆ ಕಂಡುಬಂದಿತು.

ಭಾನುವಾರ ಬೆಳಗ್ಗೆಯಿಂದಲೇ ದೇವಾಲಯದಲ್ಲಿ ಬೇಡಗಂಪಣ ಆರ್ಚಕರಿಂದ ವಿಶೇಷ ಪೂಜೆಗಳು, ನಾನಾ ಅಭಿಷೇಕ, ಅಲಂಕಾರ ಹಾಗೂ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ, ಮಡಿಕೇರಿ ಸೇರಿದಂತೆ ಹಲವು ಜಿಲ್ಲೆಗಳಿಂದ ಮುಂಜಾನೆಯಲ್ಲೇ ಆಗಮಿಸಿದ ಭಕ್ತರು, ಮಾದಪ್ಪನ ದರ್ಶನಕ್ಕಾಗಿ ಹಲವು ತಾಸು ಸರತಿ ಸಾಲಿನಲ್ಲಿ ನಿಂತು ಪೂಜೆಯಲ್ಲಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿದರು. ಅಲ್ಲದೆ, ದೇವಾಲಯದ ಹೊರಾಂಗಣದಲ್ಲಿ ಹುಲಿವಾಹನ ಸೇವೆ, ರುದ್ರಾಕ್ಷಿ ಮಂಟಪ ಬಸವನ ಉತ್ಸವ ಹಾಗೂ ಬೆಳ್ಳಿರಥೋತ್ಸವದಲ್ಲಿ ಭಾಗವಹಿಸಿ ತಮ್ಮ ಸೇವೆಯನ್ನು ಸಮರ್ಪಿಸಿದರು. ಪೂಜಾ ಸಮಯದಲ್ಲಿ ಭಕ್ತರು 'ಉಘೆ ಉಘೆ ಮಾದಪ್ಪ ಉಘೇ' ಎಂಬ ಘೋಷವಾಕ್ಯಗಳನ್ನು ಕೂಗಿ ಜಯಘೋಷಗಳನ್ನು ಮೊಳಗಿಸಿದರು.

ದೇವಾಲಯದ ಗರ್ಭಗುಡಿ ಹಾಗೂ ಒಳಾಂಗಣವನ್ನು ಹೂವಿನ ಅಲಂಕಾರ, ದೀಪಾಲಂಕಾರ ಹಾಗೂ ಸಾಂಪ್ರದಾಯಿಕ ಅಲಂಕಾರಗಳಿಂದ ವಿಶೇಷವಾಗಿ ಶೃಂಗಾರಗೊಳಿಸಲಾಗಿತ್ತು. ಸೋಮವತಿ ಅಮಾವಾಸ್ಯೆಯ ವಿಶೇಷ ಮಹತ್ವದ ಹಿನ್ನೆಲೆಯಲ್ಲಿ ಭಕ್ತರು ಉಪವಾಸ, ದಾನಧರ್ಮ ಹಾಗೂ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಿದರು. ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ ಕಾರಣ, ಮಲೆಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರದಿಂದ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು ಮತ್ತು ಮಹದೇಶ್ವರಬೆಟ್ಟ ಪೊಲೀಸರು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ, ಟ್ರಾಫಿಕ್ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಂಡಿದ್ದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    4 hrs ago
  • ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಪಾದರಾಯನಪುರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಜಮೀರ್ ಅಹ್ಮದ್ ಖಾನ್ ಅವರನ್ನು ಮುಸ್ಲಿಂ ಸಮುದಾಯದ ಪ್ರಬಲ ನಾಯಕ ಎಂದು ಬಿಂಬಿಸಿದ ಅವರ ಬೆಂಬಲಿಗರು, ಸರ್ಕಾರದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 'ಜಮೀರ್ ಅವರು ಬಡವರ ಪಾಲಿನ ಆಶಾಕಿರಣ, ಅವರಿಗೆ ಡಿಸಿಎಂ ಸೀಟು ನೀಡಲೇಬೇಕು' ಎಂದು ಘೋಷಣೆ ಕೂಗುತ್ತಾ ಸಾವಿರಾರು ಮಹಿಳೆಯರು ರಸ್ತೆಗಿಳಿದಿದ್ದರು. ಪಾದರಾಯನಪುರ, ಹೊಸಗುಡ್ಡದಹಳ್ಳಿ ಹಾಗೂ ಚಾಮರಾಜಪೇಟೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಗೆ ಬೆಂಬಲ ಸೂಚಿಸಿ ಸ್ಥಳೀಯ ಅಂಗಡಿ ಮುಗ್ಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿತ್ತು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಕೆಎಸ್‌ಆರ್‌ಪಿ ಮತ್ತು ಸಿಆರ್ ತುಕಡಿಗಳನ್ನು ನಿಯೋಜಿಸಲಾಯಿತು. ಬ್ಯಾಟರಾಯನಪುರ ಉಪ ವಿಭಾಗದ ಎಸಿಪಿ ಉದಯಭಾಸ್ಕರ್ ಅವರು ಪ್ರತಿಭಟನಾಕಾರರಿಗೆ 'ಸಾರ್ವಜನಿಕ ರಸ್ತೆಯಲ್ಲಿ ಗುಂಪು ಸೇರುವಂತಿಲ್ಲ, ಪ್ರತಿಭಟನೆಗೆ ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದರೆ ಕೇಸ್ ದಾಖಲಿಸಲಾಗುವುದು' ಎಂದು ಖಡಕ್ ಎಚ್ಚರಿಕೆ ನೀಡಿದರು. ಮುನ್ನೆಚ್ಚರಿಕಾ ಕ್ರಮವಾಗಿ ಹೊಸಹಳ್ಳಿ ಫ್ಲೈ ಓವರ್ ಮತ್ತು ಮುಖ್ಯರಸ್ತೆಯನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಪ್ರತಿಭಟನಾ ಸ್ಥಳಕ್ಕೆ ಮಾಜಿ ಕಾರ್ಪೋರೇಟರ್ ಇಮ್ರಾನ್ ಪಾಷಾ ಆಗಮಿಸುತ್ತಿದ್ದಂತೆ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಯಿತು. 'ನಾನು ಜೆಡಿಎಸ್‌ನಲ್ಲಿದ್ದರೂ ಜಮೀರ್ ಅವರಿಗೆ ಆಗಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತೇನೆ. ನಮ್ಮ ಪ್ರಾಣ ಹೋದರೂ ನಮ್ಮ ನಾಯಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ' ಎಂದು ಪಾಷಾ ಗುಡುಗಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಇಮ್ರಾನ್ ಪಾಷಾ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು 'ವಿಧಾನಸೌಧ ಚಲೋ'ಗೆ ಸಿದ್ಧರಾದರು. ಪೊಲೀಸರು ಅವರನ್ನು ತಡೆಯಲು ಯತ್ನಿಸಿದಾಗ ತಳ್ಳಾಟ-ನೂಕಾಟ ನಡೆಯಿತು. ಅಂತಿಮವಾಗಿ ಪೊಲೀಸರು ಇಮ್ರಾನ್ ಪಾಷಾ ಅವರನ್ನು ಬಲವಂತವಾಗಿ ಜೀಪ್‌ಗೆ ಹತ್ತಿಸಿ ವಶಕ್ಕೆ ಪಡೆದರು.
    1
    ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಪಾದರಾಯನಪುರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಜಮೀರ್ ಅಹ್ಮದ್ ಖಾನ್ ಅವರನ್ನು ಮುಸ್ಲಿಂ ಸಮುದಾಯದ ಪ್ರಬಲ ನಾಯಕ ಎಂದು ಬಿಂಬಿಸಿದ ಅವರ ಬೆಂಬಲಿಗರು, ಸರ್ಕಾರದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 'ಜಮೀರ್ ಅವರು ಬಡವರ ಪಾಲಿನ ಆಶಾಕಿರಣ, ಅವರಿಗೆ ಡಿಸಿಎಂ ಸೀಟು ನೀಡಲೇಬೇಕು' ಎಂದು ಘೋಷಣೆ ಕೂಗುತ್ತಾ ಸಾವಿರಾರು ಮಹಿಳೆಯರು ರಸ್ತೆಗಿಳಿದಿದ್ದರು.

ಪಾದರಾಯನಪುರ, ಹೊಸಗುಡ್ಡದಹಳ್ಳಿ ಹಾಗೂ ಚಾಮರಾಜಪೇಟೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಗೆ ಬೆಂಬಲ ಸೂಚಿಸಿ ಸ್ಥಳೀಯ ಅಂಗಡಿ ಮುಗ್ಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿತ್ತು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಕೆಎಸ್‌ಆರ್‌ಪಿ ಮತ್ತು ಸಿಆರ್ ತುಕಡಿಗಳನ್ನು ನಿಯೋಜಿಸಲಾಯಿತು. ಬ್ಯಾಟರಾಯನಪುರ ಉಪ ವಿಭಾಗದ ಎಸಿಪಿ ಉದಯಭಾಸ್ಕರ್ ಅವರು ಪ್ರತಿಭಟನಾಕಾರರಿಗೆ 'ಸಾರ್ವಜನಿಕ ರಸ್ತೆಯಲ್ಲಿ ಗುಂಪು ಸೇರುವಂತಿಲ್ಲ, ಪ್ರತಿಭಟನೆಗೆ ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದರೆ ಕೇಸ್ ದಾಖಲಿಸಲಾಗುವುದು' ಎಂದು ಖಡಕ್ ಎಚ್ಚರಿಕೆ ನೀಡಿದರು. ಮುನ್ನೆಚ್ಚರಿಕಾ ಕ್ರಮವಾಗಿ ಹೊಸಹಳ್ಳಿ ಫ್ಲೈ ಓವರ್ ಮತ್ತು ಮುಖ್ಯರಸ್ತೆಯನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.

ಪ್ರತಿಭಟನಾ ಸ್ಥಳಕ್ಕೆ ಮಾಜಿ ಕಾರ್ಪೋರೇಟರ್ ಇಮ್ರಾನ್ ಪಾಷಾ ಆಗಮಿಸುತ್ತಿದ್ದಂತೆ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಯಿತು. 'ನಾನು ಜೆಡಿಎಸ್‌ನಲ್ಲಿದ್ದರೂ ಜಮೀರ್ ಅವರಿಗೆ ಆಗಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತೇನೆ. ನಮ್ಮ ಪ್ರಾಣ ಹೋದರೂ ನಮ್ಮ ನಾಯಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ' ಎಂದು ಪಾಷಾ ಗುಡುಗಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಇಮ್ರಾನ್ ಪಾಷಾ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು 'ವಿಧಾನಸೌಧ ಚಲೋ'ಗೆ ಸಿದ್ಧರಾದರು. ಪೊಲೀಸರು ಅವರನ್ನು ತಡೆಯಲು ಯತ್ನಿಸಿದಾಗ ತಳ್ಳಾಟ-ನೂಕಾಟ ನಡೆಯಿತು. ಅಂತಿಮವಾಗಿ ಪೊಲೀಸರು ಇಮ್ರಾನ್ ಪಾಷಾ ಅವರನ್ನು ಬಲವಂತವಾಗಿ ಜೀಪ್‌ಗೆ ಹತ್ತಿಸಿ ವಶಕ್ಕೆ ಪಡೆದರು.
    user_Vinod
    Vinod
    Teacher ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.