Shuru
Apke Nagar Ki App…
ದುರ್ಯೋಧನ ಐಹೊಳೆ ರ ರಾಯಬಾಗದ ಶಾಸಕರಾಗಿದ್ದು ಇವರು ಇಡೀ ಮತ್ತು ರಾಜ್ಯದ ಬಗ್ಗೆ ಹೇಗೆ ಮಾತನಾಡಿದರು ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರೇ ಇ.ಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, "ಅದು ಅವರ ಪಕ್ಷದ ಆಂತರಿಕ ವಿಚಾರ, ಅದರ ಬಗ್ಗೆ ನನಗೆ ಮಾಹಿತಿಯಿಲ್ಲ" ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಾಸಕರು, "ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದರೂ ಸರ್ಕಾರಕ್ಕೆ ಅದರ ಬಗ್ಗೆ ಯಾವುದೇ ಚಿಂತೆ ಇಲ್ಲ. ಇಡೀ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ" ಎಂದು ಆರೋಪಿಸಿದರು.
Indiagoodvibes.
ದುರ್ಯೋಧನ ಐಹೊಳೆ ರ ರಾಯಬಾಗದ ಶಾಸಕರಾಗಿದ್ದು ಇವರು ಇಡೀ ಮತ್ತು ರಾಜ್ಯದ ಬಗ್ಗೆ ಹೇಗೆ ಮಾತನಾಡಿದರು ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರೇ ಇ.ಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, "ಅದು ಅವರ ಪಕ್ಷದ ಆಂತರಿಕ ವಿಚಾರ, ಅದರ ಬಗ್ಗೆ ನನಗೆ ಮಾಹಿತಿಯಿಲ್ಲ" ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಾಸಕರು, "ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದರೂ ಸರ್ಕಾರಕ್ಕೆ ಅದರ ಬಗ್ಗೆ ಯಾವುದೇ ಚಿಂತೆ ಇಲ್ಲ. ಇಡೀ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ" ಎಂದು ಆರೋಪಿಸಿದರು.
More news from ಕರ್ನಾಟಕ and nearby areas
- ಯರಗಟ್ಟಿ-ಸವದತ್ತಿ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಬಿಜೆಪಿ ಆಗ್ರಹ ಯರಗಟ್ಟಿ-ಸವದತ್ತಿ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಬಿಜೆಪಿ ಆಗ್ರಹ ಯರಗಟ್ಟಿ: ಅವಳಿ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಬಿಜೆಪಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ಮಂಡಳ ಅಧ್ಯಕ್ಷ ವಿರೂಪಾಕ್ಷ ಮಾಮನಿ ಮಾತನಾಡಿ, ‘ತಾಲ್ಲೂಕಿನಲ್ಲಿ ಶೇ 25ಕ್ಕಿಂತ ಹೆಚ್ಚು ಪ್ರಮಾಣದ ಮಳೆ ಕೊರತೆಯಾಗಿದೆ. ಇದರಿಂದ ಬೆಳೆಗಳು ಸಂಪೂರ್ಣವಾಗಿ ಒಣಗಿದ್ದು, ಕಾಳು ಕಟ್ಟುವ ಹಂತದಲ್ಲಿದ್ದ ಹೆಸರು, ಉದ್ದು, ಗೋವಿನಜೋಳ ನೆಲ ಕಚ್ಚಿದೆ. ಅಲ್ಲದೆ ಶೇಂಗಾ, ಸೋಯಾ, ಹತ್ತಿ ಸೇರಿದಂತೆ ಇನ್ನಿತರ ಬೆಳೆಗಳು ಸಹ ಸಂಪೂರ್ಣವಾಗಿ ಹಾಳಾಗಿವೆ’ ಎಂದು ಹೇಳಿದರು. ‘ಬಿತ್ತನೆ, ಕಳೆ ಸೇರಿದಂತೆ ಬೆಳೆಗೆ ರೈತರು ಸಾವಿರಾರು ರೂಪಾಯಿ ಖರ್ಚು ಮಾಡಿದ್ದು, ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಅರಿಯಲು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ತಾಲ್ಲೂಕುಗಳನ್ನು ಬರ ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಮಂಡಳ ಉಪಾಧ್ಯಕ್ಷರಾದ ಮಹಾಂತೇಶ ಗೋಡಿ ಹಾಗೂ ಸಂಜುಕುಮಾರ ನವಲಗುಂದ ಮಾತನಾಡಿ, ‘ರೈತರ ಸಂಕಷ್ಟ ಪರಿಗಣಿಸಿ ವೈಜ್ಞಾನಿಕವಾಗಿ ಬೆಳೆ ಹಾನಿಯ ಸಮೀಕ್ಷೆ ನಡೆಸುವ ಮೂಲಕ ಖಚಿತಪಡಿಸಿಕೊಳ್ಳಬೇಕು. ಗೋ ಶಾಲೆ ತೆರೆಯಬೇಕು ಮತ್ತು ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ತೀವ್ರ ನಿಗಾ ವಹಿಸಬೇಕು’ ಎಂದು ಆಗ್ರಹಿಸಿದರು. ಪಟ್ಟಣದ ಮಹಾಂತ ದುರದುಂಡೇಶ್ವರ ಮಠದಿಂದ ಹೊರಟ ಪ್ರತಿಭಟನಾ ಮೆರವಣೆಗೆ ಬಾಗವಾ ಚೌಕ್, ಗಾಂಧಿ ವೃತದ ಮೂಲಕ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಟೈಯರಗೆ ಮತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಕೃಷಿ ಅಧಿಕಾರಿ ಶಿವಪ್ರಕಾಶ ಪಾಟೀಲ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಮದುರ್ಗ ಮಂಡಳ ಅಧ್ಯಕ್ಷ ಡಾ. ಕೆ. ವ್ಹಿ. ಪಾಟೀಲ, ಬಿಜೆಪಿ ಮಂಡಳ ಉಪಾಧ್ಯಕ್ಷರಾದ ಮಹಾಂತೇಶ ಗೋಡಿ, ಸಂಜುಕುಮಾರ ನವಲಗುಂದ, ತಾ. ಪಂ ಮಾಜಿ ಅಧ್ಯಕ್ಷ ಪರ್ವತಗೌಡ ಪಾಟೀಲ, ಈರಣ್ಣಾ ಚಂದರಗಿ, ವೆಂಕಟೇಶ ದೇವರಡ್ಡಿ, ಗೌಡಪ್ಪ ಸವದತ್ತಿ, ವೆಂಕಣ್ಣಾ ಹುರಕನ್ನವರ, ಚೇತನ ಜಕಾತಿ ಕೃಷ್ಣಮೂರ್ತಿ ತೋರಗಲ್ಲ, ಮಹಾಂತೇಶ ಚೆನ್ನಗೌಡರ, ಆನಂದ ಅತ್ತೂಗೋಳ, ಮಹಾದೇವ ಮುರಗೋಡ, ಈರಣ್ಣಾ ವೀರಶೆಟ್ಟಿ, ಆನಂದ ಬಾಗೋಡಿ, ಸದಾನಂದ ಪಾಟೀಲ, ಕುಮಾರ ಹಿರೇಮಠ, ಬಸವರಾಜ ಕಟ್ಟಿಮನಿ, ಶಿವಾನಂದ ಪಟ್ಟಣಶೆಟ್ಟಿ, ಚಂದ್ರಪ್ಪ ಹೊಸಮನಿ, ಪಂಚು ಪಂಚನ್ನವರ, ಶಂಕರ ದಂಡೈನ್ನವರ, ಚಂದ್ರಶೇಖರ ಸವದತ್ತಿ, ಮೈತ್ರಾ ಹೊಂಗಲ, ಲಕ್ಷ್ಮೀ ಪಾಟೀಲ, ಕಸ್ತೂರಿ ಹೊಸೂರ, ಸುಜಾತ ಬೆನಕಟ್ಟಿ, ವಾಜಿರ್ಬಿ ಚೈಪ್ತಿ, ಸಿಕ್ಕುಬಾಯಿ ಕುಂಬಾರ ಸೇರಿದಂತೆ ಅನೇಕರು ಇದ್ದರು.1
- ರಬಕವಿ-ಬನಹಟ್ಟಿ: ಇಂದಿರಾ ಕ್ಯಾಂಟೀನ್ ಉದ್ಘಾಟನಾ ವೇಳೆ ವಾಗ್ವಾದ ಸಚಿವರ ಸಮ್ಮುಖದಲ್ಲೇ ಪರಸ್ಪರ ವಾಗ್ದಾಳಿ ರಬಕವಿ-ಬನಹಟ್ಟಿ ತಾಲೂಕು ಬನಹಟ್ಟಿ ನಗರದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ, ಸಚಿವರ ಸಮ್ಮುಖದಲ್ಲೇ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಕಾರ್ಯಕ್ರಮದ ವೇಳೆ ನಡೆದ ಈ ವಾಗ್ವಾದದಿಂದ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಾಗ್ವಾದಕ್ಕೆ ಕಾರಣವೇನು? ಯಾವ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆಯಿತು ಸಚಿವರ ಸಮ್ಮುಖದಲ್ಲೇ ಈ ಬೆಳವಣಿಗೆಗೆ ಕಾರಣವೇನು1
- ಅಥಣಿಯಲ್ಲಿ ಎಸ್ಐಆರ್-2026 (SIR-2026) ವಿಶೇಷ ಮತದಾರರ ನೋಂದಣಿ ಜಾಗೃತಿ ಅಭಿಯಾನ ಯಶಸ್ವಿ ಅಥಣಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ರ ಅಂಗವಾಗಿ ಅಥಣಿಯ ಕೆ.ಇ. ಲೋಕಪೂರ ಪದವಿ ಮಹಾವಿದ್ಯಾಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮತದಾರರ ನೋಂದಣಿ ಕುರಿತು ವ್ಯಾಪಕ ಅರಿವು ಹಾಗೂ ಜಾಗೃತಿ ಮೂಡಿಸಲು SVEEP ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅತಿಥಿಗಳು ಮತ್ತು ಅಧಿಕಾರಿಗಳು, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಮತ್ತು ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವುದು ರಾಷ್ಟ್ರೀಯ ಕರ್ತವ್ಯವಾಗಿದೆ ಎಂದು ತಿಳಿಸಿದರು. ಅಲ್ಲದೆ, ಯುವ ಮತದಾರರು ಹೊಸ ಮತದಾರರ ನೊಂದಣಿ, ತಿದ್ದುಪಡಿ ಹಾಗೂ ಆಧಾರ್ ಜೋಡಣೆ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಂಡು ಇತರರಿಗೂ ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿಯ ಟಿ.ಪಿ.ಒ. ಆದ ಶ್ರೀ ಬಿ.ಬಿ. ಗಾವಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾರ್ಗದರ್ಶನ ನೀಡಿದರು. ಕೆ.ಇ. ಲೋಕಪೂರ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಆರ್.ಎನ್. ನಾಯಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರಾದ ಎಸ್.ಎನ್. ಹಿರೇಮಠ, ಜೆ.ಡಿ. ಪವಾರ, ಕಿರಣ ಕಳ್ಳಿಮಠ, ಮಹೇಶ ಮಾಂಗ, ವಿಶ್ವನಾಥ ಮೋರೆ, ಕಿರಣಗ ಗೆಜ್ಜಿ ಸೇರಿದಂತೆ ಇತರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉತ್ಸಾಹದಿಂದ ಪಾಲ್ಗೊಂಡು ಮತದಾರರ ಜಾಗೃತಿಯ ಪ್ರತಿಜ್ಞೆ ಸ್ವೀಕರಿಸಿದರು. ಎಸ್.ವಿ.ಇ.ಇ.ಪಿ. (SVEEP) ಚಟುವಟಿಕೆಗಳಡಿ ಹಮ್ಮಿಕೊಂಡಿದ್ದ ಈ ವಿಶೇಷ ಅಭಿಯಾನವು ಯಶಸ್ವಿಯಾಗಿ ಸಂಪನ್ನಗೊಂಡಿತು.4
- 🚨 ಹಳ್ಳೂರಿನ ಗ್ರಾಮೀಣ ರಸ್ತೆಯಲ್ಲೇ ಹೆಲ್ಮೆಟ್ ತಪಾಸಣೆ! ಗದ್ದೆಗೆ ಹೋಗುವವರಿಗೂ ದಂಡ #Hallur #Mudalagi #HelmetCheck #PoliceAction #TrafficRules #VillageRoad #KarnatakaNews #BelagaviNews #PSIYamanappa #HelmetFine #RoadSafety #VillageNews #KannadaNews #BreakingNews #ViralNews #PublicReaction #MudalagiNews #HallurVillage #TrafficPolice #NewsUpdate #BreakingNews ಹಳ್ಳೂರು ಹೆಲ್ಮೆಟ್ ತಪಾಸಣೆ, ಮೂಡಲಗಿ ಸುದ್ದಿ, ಗ್ರಾಮೀಣ ರಸ್ತೆ ಹೆಲ್ಮೆಟ್ ದಂಡ, PSI ಯಮನಪ್ಪ ಬಿಸನ್ಯಾಳ, ಬೆಳಗಾವಿ ಜಿಲ್ಲೆ ಸುದ್ದಿ, ಕನ್ನಡ ವೈರಲ್ ಸುದ್ದಿ, ಟ್ರಾಫಿಕ್ ನಿಯಮಗಳು, ಗ್ರಾಮಸ್ಥರ ಆಕ್ರೋಶ, ಹೆಲ್ಮೆಟ್ ಫೈನ್ ಕರ್ನಾಟಕ, Mudalagi Helmet Check.1
- ವಿಶಾಲ ಕೆರೆ, ಪ್ರಶಾಂತ ವಾತಾವರಣ. ಮನಸ್ಸಿಗೆ ಮುದ ನೀಡುವ ಸಂಗೀತ ವಾದ್ಯಗಳ ನಿನಾದ. ಕತ್ತಲೆ ರಂಗು ತುಂಬಿದ ಲೇಸರ್ ಶೋ. ಕಗ್ಗತ್ತಲ ಬಾನಲ್ಲಿ ಕಲ್ಯಾಣ ಕರ್ನಾಟಕ ವೈಶಿಷ್ಟ್ಯ ಸ್ಫುಟವಾಗಿ ಪರಿಚಯಿಸಿದ ಡ್ರೋನ್ ಶೋ. ನಭದಲ್ಲಿ ಚಿತ್ತಾರ ಮೂಡಿಸಿದ ಪಟಾಕಿಗಳು... ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯ ನಗರದ ಶರಣಬಸವೇಶ್ವರ ಅಪ್ಪ ಕೆರೆ ಆವರಣದಲ್ಲಿ ಬುಧವಾರ ರಾತ್ರಿ ಕಂಡ ದೃಶ್ಯಗಳಿವು. #ಕಲಬುರಗಿ #ಲೇಸರ್ಶೋ #ಕಲ್ಯಾಣಕರ್ನಾಟಕ #ಉತ್ಸವ #ಸಿಎಂ #ಡಿಕೆಶಿವಕುಮಾರ್ #Kalburagi #lasershow #Prajavani #PrajavaniVideo1
- ರನ್ನ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ಆರ್.ಬಿ. ತಿಮ್ಮಾಪುರ ಮುಧೋಳ : ನಗರದ ಕವಿಚಕ್ರವರ್ತಿ ರನ್ನ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಕ್ರೀಡಾಕೂಟ ಹಾಗೂ ಸಿ.ಎಂ. ಕಪ್ 2026 ಕಾರ್ಯಕ್ರಮವನ್ನು ಶಾಸಕ ಆರ್.ಬಿ. ತಿಮ್ಮಾಪುರ ಅವರು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ಬೆಳಗಲಿ ಪಪಂ ಅಧ್ಯಕ್ಷೆ ರೂಪಾ ಹೊಸಟ್ಟಿ, ಬಿಇಒ ಎಸ್.ಎಂ. ಮುಲ್ಲಾ, ವೆಂಕಣ್ಣ ಗಿಡ್ಡಪ್ಪನವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತುಕಾರಾಮ ಲಮಾಣಿ ಸೇರಿದಂತೆ ಇತರರು ಇದ್ದರು.1
- ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ. ಮಹಾಪ್ರಸಾದ ಸವಿದ ನೂರಾರು ಭಕ್ತರು ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ. ಮಹಾಪ್ರಸಾದ ಸವಿದ ನೂರಾರು ಭಕ್ತರು ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಮುಂಜಾನೆ 10 ಗಂಟೆಗೆ ಪಿಎಸ್ಐ ಕಿರಣ ಮೋಹಿತೆ ಇವರು ಗಣೇಶನಿಗೆ ಪೂಜೆ ಸಲ್ಲಿಸಿ ಸರ್ವರಿಗೂ ಶ್ರೇಯಸ್ಸು ಬಯಸಿ ಗಣೇಶ ಸರ್ವ ಸಿಬ್ಬಂದಿಗಳಿಗೆ ಹಬ್ಬದ ಶುಭಾಶಯ ತಿಳಿಸಿದರು. ಠಾಣೆಯಲ್ಲಿ ನಡೆದ ಗಣೇಶ ಮತ್ತು ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಸರ್ವ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಪ್ರತಿವರ್ಷದಂತೆ ಈ ವರ್ಷವೂ ಠಾಣೆಯ ಮುಂಬಾಗದಲ್ಲಿ ಸಾರ್ವಜನಿಕರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಇವತ್ತಿನ ಮಹಾಪ್ರಸಾದಕ್ಕೆ ನಗರದ ಸುತ್ತಮುತ್ತಲಿರುವ ಅಂಗಡಿ ಮುಗ್ಗಟ್ಟುಗಳಿಂದ ಮತ್ತು ವಿವಿಧ ಹಳ್ಳಿಗಳಿಂದ ಜನರು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಮಟ್ಟದ ಅಧಿಕಾರಿಗಳು,ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು, ರಿಕ್ಷಾ ಚಾಲಕರು ಇವತ್ತಿನ ಗಣೇಶನ ಮಹಾಪ್ರಸಾದವನ್ನು ಸವಿದು ದೇವರ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಶಹರ ಪೊಲೀಸ್ ಠಾಣೆಯ ಸರ್ವ ಸಿಬ್ಬಂದಿಗಳು ಉಪಸ್ಥಿತರಿದ್ದು ಮಹಾಪ್ರಸಾದದಲ್ಲಿ ಸಾರ್ವಜನಿಕರಿಗೆ ಕೊರತೆ ಆಗದಂತೆ ನೋಡಿಕೊಂಡು ಪ್ರಸಂಸೆಗೆ ಪಾತ್ರರಾದರು.1
- ಖಾನಾಪೂರ ತಾಲೂಕಿನ ಪಂಚಾಯತಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹೀರೆಮುನ್ನೋಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಗ್ರಾಮ ಪಂಚಾಯಿತಿಯಲ್ಲಿ ಇದ್ದ ಊರಿನ ಎಲ್ಲ ದಾಖಲೆಗಳು ಸುಟ್ಟು ಕರಕಲ ! .1