Shuru
Apke Nagar Ki App…
ನಮ್ಮ ಚನ್ನಗಿರಿ ತಾಲ್ಲೂಕು ತುಮಕೊಸ್ ಅಧ್ಯಕ್ಷರು ಸಗಾರಪೇಟೆಯಲ್ಲಿ ನೂತನ ವಾಗಿ ಸೂಪರ್ ಮಾರ್ಕೆಟ್ ಉದ್ಘಾಟನೆ ನೆರವೇರಿಸಿದರು.
ಸುರೇಶ್ ಕೆ ಆರ್
ನಮ್ಮ ಚನ್ನಗಿರಿ ತಾಲ್ಲೂಕು ತುಮಕೊಸ್ ಅಧ್ಯಕ್ಷರು ಸಗಾರಪೇಟೆಯಲ್ಲಿ ನೂತನ ವಾಗಿ ಸೂಪರ್ ಮಾರ್ಕೆಟ್ ಉದ್ಘಾಟನೆ ನೆರವೇರಿಸಿದರು.
More news from ಕರ್ನಾಟಕ and nearby areas
- ನಮ್ಮ ಚನ್ನಗಿರಿ ತಾಲ್ಲೂಕು ತುಮಕೊಸ್ ಅಧ್ಯಕ್ಷರು ಸಗಾರಪೇಟೆಯಲ್ಲಿ ನೂತನ ವಾಗಿ ಸೂಪರ್ ಮಾರ್ಕೆಟ್ ಉದ್ಘಾಟನೆ ನೆರವೇರಿಸಿದರು.1
- ಈದ್ ಮಿಲಾದ್ ಸಂಭ್ರಮದ ಆಚರಣೆ : ರಕ್ತದಾನ, ಅನ್ನದಾನ ಸೇರಿದಂತೆ ವಿವಿಧ ಸೇವಾ ಕಾರ್ಯಗಳು. ಯುವ ಮುಖಂಡ ಬಿ.ಎಸ್ ಗಣೇಶ್ ಬಾಗಿ ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ದೇಶಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪ ಸಾವಿರಾರು ಮಂದಿಗೆ ಮಜ್ಜಿಗೆ ವಿತರಿಸಲಾಯಿತು. ಯುವ ಮುಖಂಡ ಬಿ.ಎಸ್ ಗಣೇಶ್ ಸೇವಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಸೇವಾ ಕಾರ್ಯವನ್ನು ಅಭಿನಂದಿಸಿದರು. ಇದೆ ಸಂದರ್ಭದಲ್ಲಿ ಬಡಮಹಿಳೆಯರಿಗೆ ಸೀರೆ ಮತ್ತು ರವಿಕೆ ವಿತರಿಸಲಾಯಿತು. ಅನ್ನದಾನ, ತಂಪು ಪಾನೀಯ ವಿತರಣೆ ಸೇರಿದಂತೆ ಇನ್ನಿತರ ಸೇವಾ ಕಾರ್ಯಗಳು ಜರುಗಿದವು. ಮಧ್ಯಾಹ್ನ ಸುಮಾರು ೩.೩೦ ಸಮಯಕ್ಕೆ ಹೊಳೆಹೊನ್ನೂರು ವೃತ್ತದಿಂದ ಮರ್ಕಜೀ ಇದಾರ ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಅಯೂಬ್ ಖಾನ್ರವರ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಆರಂಭಗೊಂಡಿತು. ಮೆರವಣಿಗೆಯಲ್ಲಿ ಮಹಮ್ಮದ್ ಫೈಗಂಬರರ ಜನ್ಮಸ್ಥಳ ಮೆಕ್ಕಾ-ಮದೀನಾ ಮಾದರಿಗಳು, ಹಸಿರು ದ್ವಜಗಳು ಎಲ್ಲೆಡೆ ರಾರಾಜಿಸುತ್ತಿದ್ದವು. ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮಿಸಿದರು. ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಮಹಾತ್ಮಗಾಂಧಿ ವೃತ್ತ ಮೂಲಕ ಸಾದತ್ ದರ್ಗಾವರೆಗೂ ಮೆರವಣಿಗೆ ನಡೆಯಿತು. ನಗರದ ವಿವಿಧೆಡೆಗಳ ಮಸೀದಿಗಳ ಧರ್ಮಗುರುಗಳು, ಆಡಳಿತ ಮಂಡಳಿಯವರು, ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು. ಮೆರವಣಿಗೆ ಹಿನ್ನಲೆಯಲ್ಲಿ ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮುಸ್ಲಿಂ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಹಬ್ಬದ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಹೆಚ್ಚಿನ ಅಲಂಕಾರ ಕೈಗೊಳ್ಳಲಾಗಿತ್ತು. ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮಿಸಿದರು3
- ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮಧು ಬಂಗಾರಪ್ಪ ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನವನ್ನು ತೆಗೆದುಕೊಂಡು ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿಗೆ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ರಾಜ್ಯ ಸರ್ಕಾರ ಈ ವರದಿಯನ್ನು ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ಅಧಿಕೃತವಾಗಿ ಮಾಹಿತಿ ನೀಡಿದ್ದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈಗ ಮತ್ತೆ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ (ESA) ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದು ಖಂಡನೀಯ. ಈ ಕರಡು ಅಧಿಸೂಚನೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈಗಾಗಲೇ ಈ ವಿಷಯದ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದೆ. ಅರಣ್ಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿಯವರು ಸಹ ವಿಧಾನಸಭೆಯಲ್ಲಿಯೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಕಸ್ತೂರಿ ರಂಗನ್ ಸಮಿತಿ ವರದಿ ಹೇಳಿರುವಂತೆಯೇ ಕರ್ನಾಟಕದ ರಾಜ್ಯದ 1,576 ಗ್ರಾಮ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಈ ಕರಡು ಅಧಿಸೂಚನೆಯಲ್ಲಿ ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಪ್ರಸ್ತಾವಿತ ಪಟ್ಟಿಯಲ್ಲಿವೆ. ಜನವಸತಿ ಪ್ರದೇಶ, ಕೃಷಿ ಭೂಮಿ ಇರುವ ಪ್ರದೇಶವನ್ನೂ ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಗುರುತಿಸಿರುವುದರಿಂದ ಮಲೆನಾಡಿನ ರೈತರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಆದರೆ ಸರ್ಕಾರ ಈ ವರದಿಯ ಜಾರಿಗೆ ಅವಕಾಶ ನೀಡುವುದಿಲ್ಲ. ಈ ಕರಡು ಅಧಿಸೂಚನೆಯನ್ನು ವಿರೋಧಿಸಲಿದೆ. ಹೀಗಾಗಿ ಮಲೆನಾಡಿನ ಜನರು ಆತಂಕ ಪಡುವ ಅಗತ್ಯ ಇಲ್ಲ. ಮಲೆನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ನಮ್ಮ ಸರ್ಕಾರ ರೈತರ ಪರವಾಗಿದೆ. ಈ ವಿಚಾರವನ್ನು ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರಾದ ಶ್ರೀ ಆರ್.ವಿ. ದೇಶಪಾಂಡೆ, ಶಾಸಕ ಮಿತ್ರರಾದ ಶ್ರೀ ಭೀಮಣ್ಣ ಟಿ. ನಾಯಕ್, ಶ್ರೀ ಟಿ.ಡಿ. ರಾಜೇಗೌಡ, ಶ್ರೀ ಎಚ್. ಡಿ. ತಮ್ಮಯ್ಯ ಹಾಗೂ ಶ್ರೀ ಎ.ಎಸ್. ಪೊನ್ನಣ್ಣ ಅವರು ಸದನದ ಒಳಗೂ ಮತ್ತು ಹೊರಗೆ ಪ್ರಸ್ತಾಪಿಸಿ ಚರ್ಚಿಸಿದ್ದಾರೆ. ಸರ್ಕಾರ ಈ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿಕೆ ನೀಡಿದೆ. ವಿಪಕ್ಷ ನಾಯಕರು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನವನ್ನು ಖಂಡಿಸುವುದಕ್ಕೆ ಬದಲಾಗಿ ಗೊಂದಲ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ. ಅನಗತ್ಯವಾಗಿ ಮಲೆನಾಡು ಭಾಗದ ರೈತರಲ್ಲಿ ಆತಂಕ ಸೃಷ್ಟಿಸುತ್ತಾ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಅತ್ಯಂತ ಮಹತ್ವದ ಈ ವಿಷಯದ ಕುರಿತು ಚರ್ಚೆಗೆ ಮುಂದಾಗುವ ಬದಲು ಗದ್ದಲ ನಡೆಸಿ ಅಧಿವೇಶನದ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಇದರಿಂದ ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ವಿಚಾರವಾಗಿ ನಾನು ವೈಯಕ್ತಿಕವಾಗಿಯೂ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಹ ಈ ಕರಡು ಅಧಿಸೂಚನೆಯನ್ನು ವಿರೋಧಿಸುವ ತೀರ್ಮಾನ ಪ್ರಕಟಿಸಿದ್ದಾರೆ. ರೈತರ ಜೊತೆ ನಿಲ್ಲುವುದಾಗಿ ಅಭಯ ನೀಡಿದ್ದಾರೆ. ಹೀಗಾಗಿ ಮಲೆನಾಡಿನ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರು ಯಾವುದೇ ಆತಂಕ ಪಡಬಾರದು. ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಸದಾ ರೈತರು ಹಾಗೂ ಜನಸಾಮಾನ್ಯರ ಪರವಾಗಿ ನಿಂತವರು. ಅವರ ಆಶಯಗಳನ್ನು ಎತ್ತಿಹಿಡಿಯುವುದೇ ನನ್ನ ಗುರಿ. ಅವರ ಮಾರ್ಗದಲ್ಲಿಯೇ ನಾನು ನಡೆಯುತ್ತಿದ್ದೇನೆ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ.1
- ರಸ್ತೆಗೆ ಚಾಚಿದ ಕಳ್ಳೆ ಬೈಕ್ ಸವಾರರು ಸ್ವಲ್ಪ ಯಾಮಾರಿದರೆ ಕಳ್ಳೆಯೋಳಗೆ ಬೈಕ್.1
- ಚಿತ್ರದುರ್ಗದಲ್ಲಿ ‘ಸೀರತ್ ಅಭಿಯಾನ’! 🔥 ಪ್ರವಾದಿ ಮುಹಮ್ಮದ್ ﷺ ಸಂದೇಶ ಸಾರಲು ಸಜ್ಜು! #SeeratUnNabi #ಸೀರತ್_ಅಭಿಯಾನ #ಕ್ರಾಂತಿಯಜ್ಯೋತಿ #ಪ್ರವಾದಿಮುಹಮ್ಮದ್ﷺ #Muhammadﷺ #ProphetMuhammad #SeeratCampaign #JamaatEIslamiHind #ಚಿತ್ರದುರ್ಗ #Chitradurga #ChitradurgaNews #KarnatakaNews #KannadaNews #BreakingNews #ViralNews #LocalNews #CTownNews #CtownNews #NewsUpdate #ಸುದ್ದಿ #ಸುದ್ದಿವಾಹಿನಿ1
- ಚಳ್ಳಕೆರೆ ನಗರದಲ್ಲಿಂದು ಈದುಮಿಲಾದ್ ಅಂಗವಾಗಿ ಚಳ್ಳಕೆರೆ ನಗರದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು. ಚಳ್ಳಕೆರೆ ನಗರದಲ್ಲಿಂದು ಈದುಮಿಲಾದ್ ಅಂಗವಾಗಿ ಚಳ್ಳಕೆರೆ ನಗರದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು. ನಗರದ ಗಾಂಧಿನಗರದ ಮಸೀದಿ ಬಳಿ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಈದುಮಿಲಾದ್ ಹಬ್ಬವು ಪ್ರೀತಿ, ಸಹೋದರತೆ, ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಪವಿತ್ರ ದಿನವಾಗಿದೆ. ಸಮಾಜದಲ್ಲಿ ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಬೇಕು ಎಂದು ಕರೆ ನೀಡಿದರು. ಮೆರವಣಿಗೆಯಲ್ಲಿ ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು. ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೆರವಣಿಗೆಯ ಮೆರುಗು ಹೆಚ್ಚಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ಈ ವೇಳೆ ಪೊಲೀಸ್ ಇಲಾಖೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಂಡಿತ್ತು. ಈದುಮಿಲಾದ್ ಮೂಲಕ ಶಾಂತಿ, ಸಹೋದರತೆ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಮೂಲಕ ಚಳ್ಳಕೆರೆ ನಗರ ಗಮನ ಸೆಳೆಯಿತು.1
- ಉತ್ತಮ ಗುಣಮಟ್ಟದ ಆಹಾರ ಸೇವಿಸಿ ಕಿಡ್ನಿ(ಮೂತ್ರಪಿಂಡ)ಖಾಯಿಲೆಯಿಂದ ದೂರವಿರಿ : ಡಾ.ಪ್ರಮೋದ್ ಕುಮಾರ್ ಜಗಳೂರು.25 ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮೂತ್ರಪಿಂಡ ಖಾಯಿಲೆಗೆ ಸಂಬಂಧಿಸಿದ ವೈಧ್ಯ ರೋಗಿಗಳ ಡೈಯಾಲೀಸಿಸ್ ಕೇಂದ್ರಕ್ಕೆ ಇತ್ತಿಚೇಗೆ ಭೇಟಿ ನೀಡಿ ಕಿಡ್ನಿ ವೈಪಲ್ಯ ರೋಗಿಗಳನ್ನು ಉದ್ದೇಶಿಸಿ ಮಾತನಾಡಿದರು. ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲೀಸಿಸ್ ಕೇಂದ್ರ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡುತ್ತಿದ್ದು ಸಿಬ್ಬಂದಿಗಳು ಸಹ ರೋಗಿಗಳ ಮಧ್ಯೆ ಉತ್ತಮ ಬಾಂಧವ್ಯ ಹೊಂದಿದ್ದು ರೋಗಿಗಳು ಸಹ ಇವರ ಜೊತೆ ಸಹಕಾರ ನೀಡುವುದರಿಂದ ಯಾವುದೇ ತೊಂದೆರೆಯಿಲ್ಲ ಎಂದರು. ಜಿಲ್ಲೆಯಾದ್ಯಂತ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಲ್ಲಿ ಖಾಸಗಿ ಕಂಪನಿಯಿಂದ ನಡೆಯುತ್ತಿರುವ ಡಯಾಲೀಸ್ ಕೇಂದ್ರಗಳು ನಡೆಯುತ್ತಿವೆ ನಾವು ರೋಗಿಗಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕೆಂದರು. ಕಿಡ್ನಿ ವೈಫ್ಯಲ್ಯಕ್ಜೆ ಮುಖ್ಯ ಲಕ್ಷಣಗಳು :ಕಿಡ್ನಿ ಸ್ಟೋನ್ (ಮೂತ್ರಪಿಂಡದ ಕಲ್ಲು) ಇರುವಾಗ ಬೆನ್ನು, ಪಾರ್ಶ್ವ ಅಥವಾ ಹೊಟ್ಟೆಯ ಕೆಳಭಾಗದಲ್ಲಿ ತೀವ್ರವಾದ ಮತ್ತು ಅಲೆ ಅಲೆಯಾದ ನೋವು ಕಾಣಿಸಿಕೊಳ್ಳುವುದು ಮುಖ್ಯ ಲಕ್ಷಣವಾಗಿದೆ ಎಂದರು. ಮೂತ್ರಪಿಂಡದ ಕಲ್ಲುಗಳು ಮೂತ್ರಪಿಂಡದಲ್ಲಿ ಉಪ್ಪು ಮತ್ತು ಖನಿಜಗಳ ಗಟ್ಟಿಯಾದ ನಿಕ್ಷೇಪಗಳಾಗಿವೆ. ಈ ಕಲ್ಲುಗಳು ಸಾಮಾನ್ಯವಾಗಿ ಮೂತ್ರನಾಳವನ್ನು ಚಲಿಸಿದಾಗ ಅಥವಾ ಅಡ್ಡಿಪಡಿಸಿದಾಗ ಅಪಾರ ನೋವನ್ನು ಉಂಟುಮಾಡುತ್ತವೆ. ಮೂತ್ರಪಿಂಡದ ಕಲ್ಲುಗಳು ಗಾತ್ರದಲ್ಲಿ ಭಿನ್ನವಾಗಿರುತ್ತವೆ. ಕೆಲವು ಕಲ್ಲುಗಳು ಕೆಲವು ಮಿಮೀ ಗಾತ್ರದಲ್ಲಿರಬಹುದು, ಇನ್ನು ಕೆಲವು ಇಂಚುಗಳಷ್ಟು ಬೆಳೆಯಬಹುದು. ಕಿಡ್ನಿ ಕಲ್ಲುಗಳು ಸಾಕಷ್ಟು ಸಮಾನವಾಗಿ ಹರಡುತ್ತವೆ ಮತ್ತು ಪುರುಷರು ಮತ್ತು ಮಹಿಳೆಯರ ಮೇಲೆ ಪರಿಣಾಮ ಬೀರುತ್ತವೆ. ಕಿಡ್ನಿ ಕಲ್ಲುಗಳನ್ನು ನಾಲ್ಕು ಪ್ರಮುಖ ವಿಧಗಳಾಗಿ ವಿಂಗಡಿಸಬಹುದು- ಕ್ಯಾಲ್ಸಿಯಂ ಕಲ್ಲುಗಳು, ಯೂರಿಕ್ ಆಸಿಡ್ ಕಲ್ಲುಗಳು, ಸ್ಟ್ರುವೈಟ್ ಕಲ್ಲುಗಳು ಮತ್ತು ಸಿಸ್ಟೈನ್ ಕಲ್ಲುಗಳು ಲಕ್ಷಣಗಳು ಎದ್ದು ಕಾಣುತ್ತವೆಂದರು. ಬೆನ್ನು, ಹೊಟ್ಟೆ ಅಥವಾ ಬದಿಯಲ್ಲಿ ನೋವು ಮೂತ್ರಪಿಂಡದ ಕಲ್ಲಿನ ನೋವು - ಇದನ್ನು ಮೂತ್ರಪಿಂಡದ ಕೊಲಿಕ್ ಎಂದೂ ಕರೆಯುತ್ತಾರೆ - ಇದು ಊಹಿಸಬಹುದಾದ ಅತ್ಯಂತ ತೀವ್ರವಾದ ನೋವಿನ ವಿಧಗಳಲ್ಲಿ ಒಂದಾಗಿದೆ ಎಂದರು. ಮೂತ್ರಪಿಂಡದ ಕಲ್ಲಿನ ನೋವು ಹೆಚ್ಚಾಗಿ ಇದ್ದಕ್ಕಿದ್ದಂತೆ ಪ್ರಾರಂಭವಾಗುತ್ತದೆ. ಕಲ್ಲು ಚಲಿಸಿದಂತೆ ನೋವು ಸ್ಥಳ ಮತ್ತು ತೀವ್ರತೆಯನ್ನು ಬದಲಾಯಿಸುತ್ತದೆ. ನೋವು ಆಗಾಗ್ಗೆ ಅಲೆಗಳಲ್ಲಿ ಬಂದು ಹೋಗುತ್ತದೆ, ಮೂತ್ರನಾಳವು ಕಲ್ಲನ್ನು ಹೊರಗೆ ತಳ್ಳಲು ಪ್ರಯತ್ನಿಸುವಾಗ ಸಂಕುಚಿತಗೊಳ್ಳುವುದರಿಂದ ಇದು ಇನ್ನಷ್ಟು ಹದಗೆಡುತ್ತದೆ. ಪ್ರತಿಯೊಂದು ಅಲೆಯು ಕೆಲವು ನಿಮಿಷಗಳ ಕಾಲ ಇರುತ್ತದೆ, ಕಣ್ಮರೆಯಾಗಬಹುದು ಮತ್ತು ನಂತರ ಮತ್ತೆ ಬರಬಹುದು ಎಂದರು.2
- ಗುಟ್ಕಾ ನಿಷೇಧ ತಡೆಯಲು ಚನ್ನಗಿರಿ ಯಿಂದ ದಾವಣಗೆರೆ ಗೆ ದಿನಾಂಕ 26/8/2026 ರಿಂದ 28/8/2026 ರಾ ವರೆಗೆ ಬೃಹತ್ ಪಾದ ಯಾತ್ರೆ ಮಾಡುತ್ತಿರುವ ಮಾಡಳ್ ಮಲ್ಲಿಕಾರ್ಜುನ ರವರು ಮತ್ತು ರೈತರು1