ಇತ್ತೀಚಿಗೆ ಪ್ರಕಟವಾದ (1 ಫೆಬ್ರವರಿ 2025) ಅಂತರಾಷ್ಟ್ರೀಯ ಸಮೀಕ್ಷೆಯ ವರದಿಯೊಂದು ಮುಂದಿನ ಕೆಲವೇ ವರ್ಷಗಳಲ್ಲಿ ಜಗತ್ತಿನ ಸುಮಾರು 45% ಹುಡುಗಿಯರು ಅವಿವಾಹಿತರಾಗಿಯೇ ಉಳಿಯುವ ಸಾಧ್ಯತೆಯಿದೆ ಎಂದು ಗಂಭೀರ ಎಚ್ಚರಿಕೆ ನೀಡಿದೆ. ಈ ವೇಗವನ್ನು ಗಮನಿಸಿದರೆ ನಾವು ಸಾಗುತ್ತಿರುವುದು ಶಿಕ್ಷಿತ ಸಮಾಜದ ಕಡೆಗೋ ಅಥವಾ ಸ್ವತಃ ನಷ್ಟ ಮಾಡಿಕೊಳ್ಳುತ್ತಿರುವ ಸಮಾಜದ ಕಡೆಗೋ ಎಂಬ ದೊಡ್ಡ ಪ್ರಶ್ನೆ ಎದುರಾಗಿದೆ. ಇಂದಿನ ಯುವತಿಯರು ಉನ್ನತ ಶಿಕ್ಷಣ ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿರುವುದು ಹಾಗೂ ಯಾರ ಮೇಲೂ ಅವಲಂಬಿತರಾಗದೆ ಸ್ವತಂತ್ರ ನಿರ್ಧಾರ ಕೈಗೊಳ್ಳಲು ಬಯಸುತ್ತಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಇದರೊಂದಿಗೆ ವಿವಾಹ, ಮಾತೃತ್ವ ಮತ್ತು ಕುಟುಂಬದ ಜವಾಬ್ದಾರಿಗಳು ತಮ್ಮ ವೈಯಕ್ತಿಕ ಪ್ರಗತಿಗೆ ಅಡ್ಡಿಯಾಗಬಹುದು ಎಂಬ ಆಲೋಚನೆ ಮತ್ತು ಭಯ ಯುವ ಪೀಳಿಗೆಯಲ್ಲಿ ಹೆಚ್ಚಾಗುತ್ತಿದೆ. ಪೋಷಕರು ಸಹ ತಮ್ಮ ಮಕ್ಕಳ ಮದುವೆಯನ್ನು 30ರ ವಯಸ್ಸಿನವರೆಗೆ ಮುಂದೂಡುವುದರಲ್ಲಿ ಗರ್ವಪಡುತ್ತಿದ್ದು, ತಡವಾಗಿ ಸಂಬಂಧ ಹುಡುಕಲು ಹೊರಟಾಗ ವಯಸ್ಸು ಮೀರಿ ಪ್ರಸ್ತಾಪಗಳು ತಿರಸ್ಕೃತಗೊಳ್ಳುತ್ತಿವೆ. ತಡವಾಗಿ ಮದುವೆಯಾಗುವುದರಿಂದ ಸಮಾಜದ ಮೇಲೆ ಭೀಕರ ಪರಿಣಾಮಗಳು ಉಂಟಾಗುತ್ತಿವೆ. ಒಂದು ಶತಮಾನದ ಹಿಂದೆ 20ನೇ ವಯಸ್ಸಿಗೆ ಮದುವೆಯಾಗುತ್ತಿದ್ದಾಗ 5 ತಲೆಮಾರುಗಳನ್ನು ಕಾಣಬಹುದಿತ್ತು, ಆದರೆ ಇಂದು ಮದುವೆಯ ವಯಸ್ಸು 30 ದಾಟುತ್ತಿರುವುದರಿಂದ ಕೇವಲ 3 ತಲೆಮಾರುಗಳು ಮಾತ್ರ ಉಳಿದು, ಮೂರನೇ ತಲೆಮಾರು ಬಹುತೇಕ ಕಾಣೆಯಾಗುವ ಆತಂಕವಿದೆ. ಹುಡುಗಿಯರು 30-35 ವರ್ಷ ಹಾಗೂ ಹುಡುಗರು 35 ವರ್ಷ ದಾಟಿದರೂ ಅವಿವಾಹಿತರಾಗಿಯೇ ಉಳಿಯುತ್ತಿದ್ದು, ತಡವಾಗಿ ಮದುವೆಯಾದರೂ ಹೊಂದಾಣಿಕೆಯಾಗದೆ ವಿಚ್ಛೇದನಗಳು ಹೆಚ್ಚುತ್ತಿವೆ. ಇದರಿಂದ ಜಂಟಿ ಕುಟುಂಬಗಳು ಮಾಯವಾಗಿ ಏಕಾಂಗಿ ಪೋಷಕರು ಮತ್ತು ಒಂಟಿತನ ಅನುಭವಿಸುವ ವೃದ್ಧರ ಸಂಖ್ಯೆ ಹೆಚ್ಚಾಗುತ್ತಿದೆ. ದಂಪತಿಗಳು ಮಕ್ಕಳನ್ನು ಸಾಕುವುದು ಒಂದು ಹೊರೆ ಎಂದು ಭಾವಿಸಿ 'ಒಂದೇ ಮಗು ಸಾಕು' ಎನ್ನುತ್ತಿರುವುದರಿಂದ ಭವಿಷ್ಯದಲ್ಲಿ ಹಳ್ಳಿಗಳು ಮತ್ತು ಓಣಿಗಳು ನಿಶ್ಯಬ್ದವಾಗಿ ನಶಿಸಿಹೋಗಲಿವೆ. ಸಾಮಾಜಿಕ ಸಮತೋಲನದ ಚಿಂತನೆಯ ಪ್ರಕಾರ, ಮದುವೆಗೆ ಹುಡುಗಿಯರಿಗೆ 20 ರಿಂದ 23 ವರ್ಷ ಹಾಗೂ ಹುಡುಗರಿಗೆ 25 ವರ್ಷದೊಳಗಿನ ವಯಸ್ಸು ಸೂಕ್ತವಾಗಿದೆ. ಜೀವನದ ಕೊನೆಯ ದಿನಗಳಲ್ಲಿ ಜೊತೆಯಾಗಿ ನಿಲ್ಲಲು ಸ್ವಂತ ಕುಟುಂಬ ಮತ್ತು ಸಂಗಾತಿ ಇಲ್ಲದಿದ್ದರೆ ಗಳಿಸಿದ ಯಶಸ್ಸು ಮತ್ತು ಹಣಕ್ಕೆ ಯಾವುದೇ ಬೆಲೆ ಇರುವುದಿಲ್ಲ. ವಿವಾಹ ಎಂಬುದು ಇಡೀ ಸಮಾಜದ ಅಡಿಪಾಯವಾಗಿದ್ದು, ಈಗಲೇ ಸಮಾಜ ಮತ್ತು ಪೋಷಕರು ಜಾಗೃತರಾಗದಿದ್ದರೆ ಇತಿಹಾಸವು ನಮ್ಮನ್ನು ತನ್ನನ್ನು ತಾನೇ ನಾಶಪಡಿಸಿಕೊಂಡ ಸಮಾಜ ಎಂದು ಕರೆಯಬಹುದು. ಆದ್ದರಿಂದ ಪ್ರತಿಯೊಬ್ಬ ಪೋಷಕರು ಜಾಗೃತರಾಗಿ ತಮ್ಮ ಮಕ್ಕಳ ಮದುವೆಯನ್ನು ಸಮಯಕ್ಕೆ ಸರಿಯಾಗಿ ಮಾಡಿ ಕುಟುಂಬ ವ್ಯವಸ್ಥೆಯನ್ನು ಉಳಿಸಬೇಕು ಎಂದು ಕರೆ ನೀಡಲಾಗಿದೆ.
ಇತ್ತೀಚಿಗೆ ಪ್ರಕಟವಾದ (1 ಫೆಬ್ರವರಿ 2025) ಅಂತರಾಷ್ಟ್ರೀಯ ಸಮೀಕ್ಷೆಯ ವರದಿಯೊಂದು ಮುಂದಿನ ಕೆಲವೇ ವರ್ಷಗಳಲ್ಲಿ ಜಗತ್ತಿನ ಸುಮಾರು 45% ಹುಡುಗಿಯರು ಅವಿವಾಹಿತರಾಗಿಯೇ ಉಳಿಯುವ ಸಾಧ್ಯತೆಯಿದೆ ಎಂದು ಗಂಭೀರ ಎಚ್ಚರಿಕೆ ನೀಡಿದೆ. ಈ ವೇಗವನ್ನು ಗಮನಿಸಿದರೆ ನಾವು ಸಾಗುತ್ತಿರುವುದು ಶಿಕ್ಷಿತ ಸಮಾಜದ ಕಡೆಗೋ ಅಥವಾ ಸ್ವತಃ ನಷ್ಟ ಮಾಡಿಕೊಳ್ಳುತ್ತಿರುವ ಸಮಾಜದ ಕಡೆಗೋ ಎಂಬ ದೊಡ್ಡ ಪ್ರಶ್ನೆ ಎದುರಾಗಿದೆ. ಇಂದಿನ ಯುವತಿಯರು ಉನ್ನತ ಶಿಕ್ಷಣ ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿರುವುದು ಹಾಗೂ ಯಾರ ಮೇಲೂ ಅವಲಂಬಿತರಾಗದೆ ಸ್ವತಂತ್ರ ನಿರ್ಧಾರ ಕೈಗೊಳ್ಳಲು ಬಯಸುತ್ತಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಇದರೊಂದಿಗೆ ವಿವಾಹ, ಮಾತೃತ್ವ ಮತ್ತು ಕುಟುಂಬದ ಜವಾಬ್ದಾರಿಗಳು ತಮ್ಮ ವೈಯಕ್ತಿಕ ಪ್ರಗತಿಗೆ ಅಡ್ಡಿಯಾಗಬಹುದು ಎಂಬ ಆಲೋಚನೆ ಮತ್ತು ಭಯ ಯುವ ಪೀಳಿಗೆಯಲ್ಲಿ ಹೆಚ್ಚಾಗುತ್ತಿದೆ. ಪೋಷಕರು ಸಹ ತಮ್ಮ ಮಕ್ಕಳ ಮದುವೆಯನ್ನು 30ರ ವಯಸ್ಸಿನವರೆಗೆ ಮುಂದೂಡುವುದರಲ್ಲಿ ಗರ್ವಪಡುತ್ತಿದ್ದು, ತಡವಾಗಿ ಸಂಬಂಧ ಹುಡುಕಲು ಹೊರಟಾಗ ವಯಸ್ಸು ಮೀರಿ ಪ್ರಸ್ತಾಪಗಳು ತಿರಸ್ಕೃತಗೊಳ್ಳುತ್ತಿವೆ. ತಡವಾಗಿ ಮದುವೆಯಾಗುವುದರಿಂದ ಸಮಾಜದ ಮೇಲೆ ಭೀಕರ ಪರಿಣಾಮಗಳು ಉಂಟಾಗುತ್ತಿವೆ. ಒಂದು ಶತಮಾನದ ಹಿಂದೆ 20ನೇ ವಯಸ್ಸಿಗೆ ಮದುವೆಯಾಗುತ್ತಿದ್ದಾಗ 5 ತಲೆಮಾರುಗಳನ್ನು ಕಾಣಬಹುದಿತ್ತು, ಆದರೆ ಇಂದು ಮದುವೆಯ ವಯಸ್ಸು 30 ದಾಟುತ್ತಿರುವುದರಿಂದ ಕೇವಲ 3 ತಲೆಮಾರುಗಳು ಮಾತ್ರ ಉಳಿದು, ಮೂರನೇ ತಲೆಮಾರು ಬಹುತೇಕ ಕಾಣೆಯಾಗುವ ಆತಂಕವಿದೆ. ಹುಡುಗಿಯರು 30-35 ವರ್ಷ ಹಾಗೂ ಹುಡುಗರು 35 ವರ್ಷ ದಾಟಿದರೂ ಅವಿವಾಹಿತರಾಗಿಯೇ ಉಳಿಯುತ್ತಿದ್ದು, ತಡವಾಗಿ ಮದುವೆಯಾದರೂ ಹೊಂದಾಣಿಕೆಯಾಗದೆ ವಿಚ್ಛೇದನಗಳು ಹೆಚ್ಚುತ್ತಿವೆ. ಇದರಿಂದ ಜಂಟಿ ಕುಟುಂಬಗಳು ಮಾಯವಾಗಿ ಏಕಾಂಗಿ ಪೋಷಕರು ಮತ್ತು ಒಂಟಿತನ ಅನುಭವಿಸುವ ವೃದ್ಧರ ಸಂಖ್ಯೆ ಹೆಚ್ಚಾಗುತ್ತಿದೆ. ದಂಪತಿಗಳು ಮಕ್ಕಳನ್ನು ಸಾಕುವುದು ಒಂದು ಹೊರೆ ಎಂದು ಭಾವಿಸಿ 'ಒಂದೇ ಮಗು ಸಾಕು' ಎನ್ನುತ್ತಿರುವುದರಿಂದ ಭವಿಷ್ಯದಲ್ಲಿ ಹಳ್ಳಿಗಳು ಮತ್ತು ಓಣಿಗಳು ನಿಶ್ಯಬ್ದವಾಗಿ ನಶಿಸಿಹೋಗಲಿವೆ. ಸಾಮಾಜಿಕ ಸಮತೋಲನದ ಚಿಂತನೆಯ ಪ್ರಕಾರ, ಮದುವೆಗೆ ಹುಡುಗಿಯರಿಗೆ 20 ರಿಂದ 23 ವರ್ಷ ಹಾಗೂ ಹುಡುಗರಿಗೆ 25 ವರ್ಷದೊಳಗಿನ ವಯಸ್ಸು ಸೂಕ್ತವಾಗಿದೆ. ಜೀವನದ ಕೊನೆಯ ದಿನಗಳಲ್ಲಿ ಜೊತೆಯಾಗಿ ನಿಲ್ಲಲು ಸ್ವಂತ ಕುಟುಂಬ ಮತ್ತು ಸಂಗಾತಿ ಇಲ್ಲದಿದ್ದರೆ ಗಳಿಸಿದ ಯಶಸ್ಸು ಮತ್ತು ಹಣಕ್ಕೆ ಯಾವುದೇ ಬೆಲೆ ಇರುವುದಿಲ್ಲ. ವಿವಾಹ ಎಂಬುದು ಇಡೀ ಸಮಾಜದ ಅಡಿಪಾಯವಾಗಿದ್ದು, ಈಗಲೇ ಸಮಾಜ ಮತ್ತು ಪೋಷಕರು ಜಾಗೃತರಾಗದಿದ್ದರೆ ಇತಿಹಾಸವು ನಮ್ಮನ್ನು ತನ್ನನ್ನು ತಾನೇ ನಾಶಪಡಿಸಿಕೊಂಡ ಸಮಾಜ ಎಂದು ಕರೆಯಬಹುದು. ಆದ್ದರಿಂದ ಪ್ರತಿಯೊಬ್ಬ ಪೋಷಕರು ಜಾಗೃತರಾಗಿ ತಮ್ಮ ಮಕ್ಕಳ ಮದುವೆಯನ್ನು ಸಮಯಕ್ಕೆ ಸರಿಯಾಗಿ ಮಾಡಿ ಕುಟುಂಬ ವ್ಯವಸ್ಥೆಯನ್ನು ಉಳಿಸಬೇಕು ಎಂದು ಕರೆ ನೀಡಲಾಗಿದೆ.
- ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯವರ ಹೆಸರು ಅಜರಾಮರವಾಗಿದೆ. ಆದರೆ ಕುಕನೂರು ಪಟ್ಟಣದಲ್ಲಿರುವ ಅವರದೇ ಹೆಸರಿನ ಗಾಂಧಿನಗರಕ್ಕೆ ಇಂದಿಗೂ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಅಲ್ಲಿನ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣದ 12ನೇ ವಾರ್ಡ್ನ ಗಾಂಧಿನಗರದಲ್ಲಿ ಚರಂಡಿಗಳು ತುಂಬಿ ಹರಿಯುತ್ತಿದ್ದು, ಕಸಕಡ್ಡಿಗಳೆಲ್ಲ ಮನೆಗಳ ಬಾಗಿಲಿಗೆ ಬಂದು ನಿಲ್ಲುತ್ತಿವೆ. ಇದರಿಂದಾಗಿ ನಿವಾಸಿಗಳು ಮೂಗು ಮುಚ್ಚಿಕೊಂಡು ವಾಸಿಸುವಂತಾಗಿದ್ದು, ವಿವಿಧ ರೋಗರುಜಿನಗಳಿಗೆ ತುತ್ತಾಗುವ ಭೀತಿ ಎದುರಾಗಿದೆ. ಚರಂಡಿ ಮಾರ್ಗಗಳಲ್ಲಿ ಅನಧಿಕೃತವಾಗಿ ಅಕ್ರಮ ಕಟ್ಟಡಗಳು ನಿರ್ಮಾಣಗೊಂಡಿರುವುದೇ ಈ ಸಮಸ್ಯೆಗೆ ಮುಖ್ಯ ಕಾರಣವಾಗಿದೆ. ಈ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿ ಚರಂಡಿ ನೀರು ಸುಗಮವಾಗಿ ಹರಿದು ಹೋಗಲು ದಾರಿ ಕಲ್ಪಿಸಿಕೊಡುವಂತೆ 12ನೇ ವಾರ್ಡಿನ ನಿವಾಸಿಗಳು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದಾರೆ. ಆದರೂ ಅಧಿಕಾರಿಗಳು ಗಾಂಧಿನಗರಕ್ಕೆ ಸ್ವಾತಂತ್ರ್ಯ ಸಿಗದ ಹಾಗೆ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರದ ವತಿಯಿಂದ ಸ್ವಚ್ಛತೆ ಮತ್ತು ಸಾರ್ವಜನಿಕರ ಆರೋಗ್ಯಕ್ಕಾಗಿ ಸಾಕಷ್ಟು ಹಣ ಬಿಡುಗಡೆಯಾಗುತ್ತಿದ್ದರೂ, ತಾಲೂಕು ಕೇಂದ್ರವಾದ ಪಟ್ಟಣದಲ್ಲಿಯೇ ಇಂತಹ ದುಸ್ಥಿತಿ ಇದೆ ಎಂದರೆ ಇನ್ನು ಹಳ್ಳಿಗಳ ಪಾಡೇನು ಎಂದು ನಿವಾಸಿಗಳು ಪ್ರಶ್ನಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಸ್ವಚ್ಛತೆಯ ಕೊರತೆಯ ಜೊತೆಗೆ ಗಾಂಧಿನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದ್ದು, ಸರಿಯಾದ ಸಮಯಕ್ಕೆ ನೀರು ಬಾರದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕೇವಲ ಮತ ಬ್ಯಾಂಕ್ಗಾಗಿ ಚುನಾವಣೆ ಸಮಯದಲ್ಲಿ ಮನೆ ಬಾಗಿಲಿಗೆ ಬರುವ ಜನಪ್ರತಿನಿಧಿಗಳು, ತಮ್ಮ ಮತಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸ್ವಲ್ಪಮಟ್ಟಿಗಾದರೂ ತಿಳಿದುಕೊಂಡಿರಬೇಕು ಎಂದು ವಾರ್ಡಿನ ನಿವಾಸಿಯೊಬ್ಬರು ಆಕ್ರೋಶ ಹೊರಹಾಕಿದ್ದಾರೆ. ಈ ವರದಿಯನ್ನಾದರೂ ವೀಕ್ಷಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇನ್ನು ಮುಂದಾದರೂ ಗಾಂಧಿನಗರಕ್ಕೆ ಸ್ವಚ್ಛತೆಯ ಸ್ವಾತಂತ್ರ್ಯವನ್ನು ಕಲ್ಪಿಸಿಕೊಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. (ವರದಿ: ಚನ್ನಯ್ಯ ಹಿರೇಮಠ, ಕುಕನೂರು)4
- ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಂಡುಮುಣುಗು ಗ್ರಾಮದಲ್ಲಿ ನಿವೃತ್ತ ಶಿಕ್ಷಕ ದಿ. ಎಚ್. ಗವಿಯಪ್ಪ ಅವರ ಸ್ಮರಣಾರ್ಥವಾಗಿ ಹಮ್ಮಿಕೊಳ್ಳಲಾದ 'ಗುಂಡುಮುಣುಗು ಪ್ರೀಮಿಯರ್ ಲೀಗ್' ಕ್ರಿಕೆಟ್ ಪಂದ್ಯಾವಳಿಗೆ ಊರಿನ ಮುಖಂಡರ ನೇತೃತ್ವದಲ್ಲಿ ಅಧಿಕೃತ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ಆರೋಗ್ಯ ವೃದ್ಧಿಯಾಗಲಿದ್ದು, ಇಂತಹ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ತಿಳಿಸಿದರು. ಸೋಲು-ಗೆಲುವನ್ನು ಲೆಕ್ಕಿಸದೆ ಕ್ರೀಡಾಪಟುಗಳು ಆಟದಲ್ಲಿ ಸಕ್ರಿಯವಾಗಿ ಭಾಗಿಯಾಗಬೇಕು ಎಂದು ಅವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸರ್ವ ಸದಸ್ಯರು, ವಿವಿಧ ಮುಖಂಡರು, ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.1
- ರಾಜ್ಯದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ಅದರ ನೀರು ಇದೇ ಮೊದಲ ಬಾರಿಗೆ ಕೂಡ್ಲಿಗಿ ತಾಲೂಕಿಗೆ ತಲುಪಿದೆ. ರಾಜವಾಳ ಜಾಕ್ವೆಲ್ ಮೂಲಕ ಈ ನೀರನ್ನು ತಾಲೂಕಿಗೆ ಯಶಸ್ವಿಯಾಗಿ ಹರಿಸಲಾಗಿದ್ದು, ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ತಾಲೂಕಿನ ಪ್ರಮುಖ ಕೆರೆಗಳನ್ನು ತುಂಬಿಸುವ ಕಾರ್ಯ ಆರಂಭವಾಗಲಿದ್ದು, ಇದು ರೈತರಿಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ದೊಡ್ಡ ಆಶಾಕಿರಣವಾಗಿದೆ.1
- ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ರಾಜವಾಳ ಬಳಿ ಕೂಡ್ಲಿಗಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಜಾಕ್ವೆಲ್ ಬಳಿ ಶನಿವಾರ ಪೈಪ್ಲೈನ್ ಸೋರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ಪೈಪ್ಲೈನ್ ಒಡೆದು ಸೋರಿಕೆ ಉಂಟಾಗಿರುವುದರಿಂದ ಭಾರಿ ಪ್ರಮಾಣದ ನೀರು ಕೃಷಿ ಜಮೀನುಗಳಿಗೆ ಹರಿದು ಹೋಗಿದ್ದು, ಭತ್ತ ಸೇರಿದಂತೆ ಇನ್ನಿತರ ಬೆಳೆಗಳಿಗೆ ಹಾನಿಯಾಗಿದೆ. ಇದರೊಂದಿಗೆ ಪಕ್ಕದ ವಿದ್ಯುತ್ ಘಟಕಕ್ಕೂ ನೀರು ನುಗ್ಗಿದೆ. ಕೂಡ್ಲಿಗಿ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಮೋಟಾರ್ಗಳನ್ನು ಮೊನ್ನೆಯಷ್ಟೇ ಆರಂಭಿಸಲಾಗಿತ್ತು ಎಂದು ಸಿಂಗಟಾಲೂರು ಯೋಜನೆ ಉಪ ವಿಭಾಗದ ಎಇಇ ರಾಘವೇಂದ್ರ ತಿಳಿಸಿದ್ದಾರೆ. ಪೈಪ್ಲೈನ್ ಸೋರಿಕೆಯಿಂದ ನೀರು ಪೋಲಾಗಿದ್ದು, ಈಗಾಗಲೇ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.1
- ಕುಷ್ಟಗಿಯ ಹಳೆ ಪ್ರವಾಸಿ ಮಂದಿರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಖ್ಯಾತ ಗಾಯಕಿ ಎಸ್. ಜಾನಕಿ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಹಾಗೂ ಭಾವಪೂರ್ಣ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶೇಖರಗೌಡ ಮಾಲಿ ಪಾಟೀಲ ಅವರು, ಸುಮಾರು 17 ಭಾಷೆಗಳಲ್ಲಿ ತಮ್ಮ ಮಧುರ ಕಂಠದಿಂದ ಹಾಡಿ ಪದ್ಮಶ್ರೀ ಪ್ರಶಸ್ತಿ, ರಾಷ್ಟ್ರೀಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದ ಗಾನ ಕೋಗಿಲೆ ಎಸ್. ಜಾನಕಿ ಅಮ್ಮನವರು ನಮ್ಮನ್ನು ಬಿಟ್ಟು ಅಗಲಿದ್ದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಕಂಬನಿ ಮಿಡಿದರು. ಶ್ರದ್ಧಾಂಜಲಿ ಸಭೆಯಲ್ಲಿ ಎಸ್. ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ, ಒಂದು ನಿಮಿಷದ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ರಾಜ್ಯ ಹಾಗೂ ದೇಶದ ಜನರ ಮನಗಳಲ್ಲಿ ನೆಲೆಸಿದ್ದ ಜಾನಕಮ್ಮನ ನೆನಪುಗಳು ಮಾತ್ರ ಈಗ ನಮಗೆ ಉಳಿದಿದ್ದು, ಅವರ ತತ್ವಗಳನ್ನು ಸಮಾಜದ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಗಣ್ಯರು ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹನಮಂತಪ್ಪ ಈಟಿಯವರ್, ಮಾಜಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಟರಾಜ ಸೋನಾರ್, ಸಾಹಿತಿ ಕುಮಾರಸ್ವಾಮಿ ಹಿರೇಮಠ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶರಣಪ್ಪ ವಣಗೇರಿ ಉಪಸ್ಥಿತರಿದ್ದು ಮಾತನಾಡಿದರು. ಇದೇ ಸಂದರ್ಭದಲ್ಲಿ ಶರಣಪ್ಪ ಲೈನದ್, ಇಮಾಮಸಾಬ ಗರಡಿಮನಿ, ಬುಡ್ನೆಸಾಬ ಕಲಾದಗಿ, ಪರಶಿವಮೂರ್ತಿ ದೋಟಿಹಾಳ, ಪವಾಡೆಪ್ಪ ಚೌಡ್ಕಿ ಹಾಗೂ ದೇವರಾಜ ವಿಶ್ವಕರ್ಮ ಸೇರಿದಂತೆ ಹಲವರು ಪಾಲ್ಗೊಂಡು ಶ್ರದ್ಧಾಂಜಲಿ ಅರ್ಪಿಸಿದರು.3
- ಮಹಾರಾಷ್ಟ್ರದ ಥಾಣೆಯಲ್ಲಿ ಹಳೆಯ ಮನೆಯೊಂದರ ಭಾಗ ಕುಸಿದು ಬಿದ್ದ ಪರಿಣಾಮ 12 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದು, ಆತನ ಕುಟುಂಬದ ಇಬ್ಬರು ಸದಸ್ಯರು ಗಾಯಗೊಂಡಿದ್ದಾರೆ. ಥಾಣೆಯ ಬ್ರಹ್ಮಾಂಡ್ನ ಆಜಾದ್ ನಗರದಲ್ಲಿರುವ ಮದ್ರಾಸ್ ಚಾಲ್ನಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 3:35 ಕ್ಕೆ ಈ ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಅಪಘಾತಕ್ಕೀಡಾದ ಈ ನೆಲ ಮಹಡಿ ಮತ್ತು ಮೊದಲ ಮಹಡಿಯ ಕಟ್ಟಡವು ಸುಮಾರು 25 ರಿಂದ 30 ವರ್ಷಗಳಷ್ಟು ಹಳೆಯದಾಗಿದೆ.1