ಬೆಂಗಳೂರು.ರಾಜ್ಯಾದ್ಯಂತ ಕಾವೇರಿ ಕಿಚ್ಚು ಕಾಡ್ಗಿಚ್ಚಿನಂತೆ ಹೊತ್ತಿಕೊಂಡಿದೆ ಕನ್ನಡ ಪರ ಸಂಘಟನೆಗಳು ರೊಚ್ಚಿಗೆದ್ದು ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರು. ರಾಜ್ಯಾದ್ಯಂತ ಕಾವೇರಿ ಕಿಚ್ಚು ಕಾಡ್ಗಿಚ್ಚಿನಂತೆ ಹೊತ್ತಿಕೊಂಡಿದೆ. ಕರ್ನಾಟಕದಲ್ಲಿ ಮಳೆ ಇಲ್ಲದೇ ರೈತರು ಕಂಗಲಾಗಿ ಹೋಗಿದ್ದಾರೆ. ಹೀಗಿರುವಾಗಲೇ ಗಾಯದ ಬರೆ ಎಳೆದಂತೆ ತಮಿಳುನಾಡಿಗೆ ನೀರು ಬಿಡುವಂತೆ ರಾಜ್ಯಕ್ಕೆ ಸೂಚನೆ ನೀಡಿದ್ದು, CWMA ಆದೇಶದಿಂದ ರೈತರು ಮತ್ತು ಕನ್ನಡ ಪರ ಸಂಘಟನೆಗಳು ರೊಚ್ಚಿಗೆದ್ದು ಆಕ್ರೋಶ ಹೊರಹಾಕಿವೆ.ಕಾವೇರಿ ಹೋರಾಟದ ತೀವ್ರಗೊಳಿಸಲು ಕನ್ನಡ ಪರ ಹೋರಾಟಗಾರರು ಕರ್ನಾಟಕ ಬಂದ್ಗೆ ಕರೆ ಕೊಡುವ ಸಾಧ್ಯತೆ ಹೆಚ್ಚಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ, ಕರ್ನಾಟಕ ಬಂದ್ ಮಾಡಲಾಗುತ್ತದೆ. ನಾಳೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆಯಾಗಲಿದೆ. ಸಭೆಯಲ್ಲಿ ಚರ್ಚೆ ನಡೆಸಿ ಕರ್ನಾಟಕ ಬಂದ್ ದಿನಾಂಕ ತಿಳಿಸುತ್ತೇವೆ. ಎಲ್ಲರೂ ಒಗ್ಗಟ್ಟಾಗಿ ಸೇರಿ ಕಾವೇರಿಗಾಗಿ ಹೋರಾಡುತ್ತೇವೆ ಎಂದು ಹೇಳಿದರು. ರಾಜಕೀಯ ನಾಯಕರು ವಿಫಲರಾಗಿದ್ದಾರೆ. ನಮ್ಮ ರಾಜಕೀಯ ನಾಯಕರು ನೀರಿನ ಬಗ್ಗೆ ವಿವರಿಸುವಲ್ಲಿ ವಿಫಲರಾಗಿದ್ದಾರೆ. ಯಾವಾಗಲೂ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎಂಬುವಂತೆ ಆಗಿದೆ. ಇದರ ವಿರುದ್ಧ ನಾವು ಧ್ವನಿ ಎತ್ತಬೇಕಿದೆ. ಇಂದು ಕೂಡಾ ರಾಮನಗರದಲ್ಲಿ ನಾವು ಪಂಜಿನ ಮೆರವಣಿಗೆ ಮಾಡುತ್ತಿದ್ದೇವೆ. ಕನ್ನಡ ಚಿತ್ರರಂಗದವರಲ್ಲೂ ಹೊಟ್ಟೆಯಲ್ಲಿ ಕಿಚ್ಚು ಇದೆ. ಅವರು ಕೂಡ ನಮ್ಮ ಕಾವೇರಿಗೆ ಬೆಂಬಲಿಸುತ್ತಾರೆ ಎಂದು ಹೇಳಿದರು. ಕರವೇ ಅಧ್ಯಕ್ಷ ನಾರಾಯಣ ಗೌಡ ಅವರು ಕೂಡ CWMA ಆದೇಶದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ಬಗ್ಗೆ ಮಾತನಾಡಿರುವ ಅವರು, ನಮ್ಮ ರಾಜ್ಯಕ್ಕೆ ಪದೇ ಪದೇ ಅನ್ಯಾಯ ಆಗ್ತಿದೆ. ಕೇಂದ್ರ ಸರ್ಕಾರ ಕೂಡಲೇ ಮಧ್ಯಸ್ತಿಕೆ ವಹಿಸಬೇಕು. ಎರಡು ರಾಜ್ಯಗಳ ಸಿಎಂ ಕೂರಿಸಿ ಮಾತಾಡಿ ಸಮಸ್ಯೆ ಬಗೆಹರಿಸಲಿ. ಸದ್ಯ ಕಾವೇರಿ ನೀರು ಕುಡಿಯಲು ಇರೋದು, ನಾಲ್ಕುವರೆ ಟಿಎಂಸಿ ಬೇಸಾಯಕ್ಕೆ ನೀರು ಬಿಡ್ತೀರಿ ಎಂದರೆ ಹೇಗೆ? ತಮಿಳುನಾಡಿನ ಲಾಬಿಗೆ ಪದೇ ಪದೇ ಮಣಿಯುತ್ತಿದೆ. ಯಾವತ್ತು ಪ್ರಾಧಿಕಾರಿಗಳು ನಮ್ಮ ರಾಜ್ಯದ ಪರವಾಗಿ ಆದೇಶ ನೀಡಿದ್ದಾರೆ ಹೇಳಿ? ಎಂದು ಪ್ರಶ್ನಿಸಿದರು. ಬನ್ನಿ ಎಲ್ಲರೂ ದೆಹಲಿ ಚಲೋ ಮಾಡೋಣ ಬನ್ನಿ ಸಿಎಂ ಡಿ ಕೆ ಶಿವಕುಮಾರ್ CWMA ಆದೇಶ ಧಿಕ್ಕರಿಸಿ, ನಮಗೆ ಕುಡಿಯಲು ನೀರಿಲ್ಲ, ತಮಿಳುನಾಡಿಗೆ ಹೇಗೆ ನೀರು ಬಿಡ್ತೀರಿ, ಈ ಹಿಂದೆ ದೇವೇಗೌಡ, ಎಸ್.ಎಂ ಕೃಷ್ಣ . ನೀರು ಬಿಡಲ್ಲ ಅಂತೇಳಿ ನೀರು ಬಿಟ್ಟಿದ್ದಾರೆ. ಅದೇ ರೀತಿ ಡಿಕೆ ಶಿವಕುಮಾರ್ ನೀರು ಬಿಡಬಾರದು. ಬನ್ನಿ ಎಲ್ಲರೂ ದೆಹಲಿ ಚಲೋ ಮಾಡೋಣ ಬನ್ನಿ, ರಾಜ್ಯದ ಜನರೆಲ್ಲ ದೆಹಲಿಗೆ ಹೋಗಿ ಹೋರಾಟ ಮಾಡೋಣ. ಇಲ್ಲಿ ಹೋರಾಟ ಮಾಡಿದರೆ ಕೇಂದ್ರ ಗಮನಿಸುತ್ತದೆಯೇ? ಕನ್ನಡಪರ ಸಂಘಟನೆಗಳು ಬಂದ್ ಮಾಡಲು ನಿರ್ಧರಿಸುತ್ತಿವೆ. ಅದಕ್ಕೆ ನಾನು ವಿರೋಧಿಸುವುದಿಲ್ಲ ಎಂದರು. ಜಂತರ್ ಮಂತರ್ನಲ್ಲಿ ಪ್ರತಿಭಟನೆ ಮಾಡೋಣ ಆದರೆ ನಾವು ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಇಲ್ಲಿ ಕರ್ನಾಟಕ ಬಂದ್ ಮಾಡಿ ನಾವು ನಷ್ಟ ಮಾಡಿಕೊಳ್ಳೋದು ಬೇಡ. ದೆಹಲಿ ಚಲೋ ಮಾಡಿ ಕೇಂದ್ರಕ್ಕೆ ಒತ್ತಾಯ ಮಾಡೋಣ, ದೆಹಲಿ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಮಾಡೋಣ, ಎಲ್ಲ ಕನ್ನಡಪರ, ರೈತ, ಸಂಘಟನೆಗಳು, ಜನರು ದೆಹಲಿಯಲ್ಲಿ ಹೋರಾಟ ಮಾಡೋಣ, ಆಗ ಮಾತ್ರ ಇಂಥ ತೀರ್ಪು ಮಾಡುವ ಮುನ್ನ ಯೋಚಿಸಬೇಕು ಎಂದು ಹೇಳಿದರು.
ಬೆಂಗಳೂರು.ರಾಜ್ಯಾದ್ಯಂತ ಕಾವೇರಿ ಕಿಚ್ಚು ಕಾಡ್ಗಿಚ್ಚಿನಂತೆ ಹೊತ್ತಿಕೊಂಡಿದೆ ಕನ್ನಡ ಪರ ಸಂಘಟನೆಗಳು ರೊಚ್ಚಿಗೆದ್ದು ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರು. ರಾಜ್ಯಾದ್ಯಂತ ಕಾವೇರಿ ಕಿಚ್ಚು ಕಾಡ್ಗಿಚ್ಚಿನಂತೆ ಹೊತ್ತಿಕೊಂಡಿದೆ. ಕರ್ನಾಟಕದಲ್ಲಿ ಮಳೆ ಇಲ್ಲದೇ ರೈತರು ಕಂಗಲಾಗಿ ಹೋಗಿದ್ದಾರೆ. ಹೀಗಿರುವಾಗಲೇ ಗಾಯದ ಬರೆ ಎಳೆದಂತೆ ತಮಿಳುನಾಡಿಗೆ ನೀರು ಬಿಡುವಂತೆ ರಾಜ್ಯಕ್ಕೆ ಸೂಚನೆ ನೀಡಿದ್ದು, CWMA ಆದೇಶದಿಂದ ರೈತರು ಮತ್ತು ಕನ್ನಡ ಪರ ಸಂಘಟನೆಗಳು ರೊಚ್ಚಿಗೆದ್ದು ಆಕ್ರೋಶ ಹೊರಹಾಕಿವೆ.ಕಾವೇರಿ ಹೋರಾಟದ ತೀವ್ರಗೊಳಿಸಲು ಕನ್ನಡ ಪರ ಹೋರಾಟಗಾರರು ಕರ್ನಾಟಕ ಬಂದ್ಗೆ ಕರೆ ಕೊಡುವ ಸಾಧ್ಯತೆ ಹೆಚ್ಚಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ, ಕರ್ನಾಟಕ ಬಂದ್ ಮಾಡಲಾಗುತ್ತದೆ. ನಾಳೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆಯಾಗಲಿದೆ. ಸಭೆಯಲ್ಲಿ ಚರ್ಚೆ ನಡೆಸಿ ಕರ್ನಾಟಕ ಬಂದ್ ದಿನಾಂಕ ತಿಳಿಸುತ್ತೇವೆ. ಎಲ್ಲರೂ ಒಗ್ಗಟ್ಟಾಗಿ ಸೇರಿ ಕಾವೇರಿಗಾಗಿ ಹೋರಾಡುತ್ತೇವೆ ಎಂದು ಹೇಳಿದರು. ರಾಜಕೀಯ ನಾಯಕರು ವಿಫಲರಾಗಿದ್ದಾರೆ. ನಮ್ಮ ರಾಜಕೀಯ ನಾಯಕರು ನೀರಿನ ಬಗ್ಗೆ ವಿವರಿಸುವಲ್ಲಿ ವಿಫಲರಾಗಿದ್ದಾರೆ. ಯಾವಾಗಲೂ ಒಂದು
ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎಂಬುವಂತೆ ಆಗಿದೆ. ಇದರ ವಿರುದ್ಧ ನಾವು ಧ್ವನಿ ಎತ್ತಬೇಕಿದೆ. ಇಂದು ಕೂಡಾ ರಾಮನಗರದಲ್ಲಿ ನಾವು ಪಂಜಿನ ಮೆರವಣಿಗೆ ಮಾಡುತ್ತಿದ್ದೇವೆ. ಕನ್ನಡ ಚಿತ್ರರಂಗದವರಲ್ಲೂ ಹೊಟ್ಟೆಯಲ್ಲಿ ಕಿಚ್ಚು ಇದೆ. ಅವರು ಕೂಡ ನಮ್ಮ ಕಾವೇರಿಗೆ ಬೆಂಬಲಿಸುತ್ತಾರೆ ಎಂದು ಹೇಳಿದರು. ಕರವೇ ಅಧ್ಯಕ್ಷ ನಾರಾಯಣ ಗೌಡ ಅವರು ಕೂಡ CWMA ಆದೇಶದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ಬಗ್ಗೆ ಮಾತನಾಡಿರುವ ಅವರು, ನಮ್ಮ ರಾಜ್ಯಕ್ಕೆ ಪದೇ ಪದೇ ಅನ್ಯಾಯ ಆಗ್ತಿದೆ. ಕೇಂದ್ರ ಸರ್ಕಾರ ಕೂಡಲೇ ಮಧ್ಯಸ್ತಿಕೆ ವಹಿಸಬೇಕು. ಎರಡು ರಾಜ್ಯಗಳ ಸಿಎಂ ಕೂರಿಸಿ ಮಾತಾಡಿ ಸಮಸ್ಯೆ ಬಗೆಹರಿಸಲಿ. ಸದ್ಯ ಕಾವೇರಿ ನೀರು ಕುಡಿಯಲು ಇರೋದು, ನಾಲ್ಕುವರೆ ಟಿಎಂಸಿ ಬೇಸಾಯಕ್ಕೆ ನೀರು ಬಿಡ್ತೀರಿ ಎಂದರೆ ಹೇಗೆ? ತಮಿಳುನಾಡಿನ ಲಾಬಿಗೆ ಪದೇ ಪದೇ ಮಣಿಯುತ್ತಿದೆ. ಯಾವತ್ತು ಪ್ರಾಧಿಕಾರಿಗಳು ನಮ್ಮ ರಾಜ್ಯದ ಪರವಾಗಿ ಆದೇಶ ನೀಡಿದ್ದಾರೆ ಹೇಳಿ? ಎಂದು ಪ್ರಶ್ನಿಸಿದರು. ಬನ್ನಿ ಎಲ್ಲರೂ ದೆಹಲಿ ಚಲೋ ಮಾಡೋಣ ಬನ್ನಿ ಸಿಎಂ ಡಿ ಕೆ
ಶಿವಕುಮಾರ್ CWMA ಆದೇಶ ಧಿಕ್ಕರಿಸಿ, ನಮಗೆ ಕುಡಿಯಲು ನೀರಿಲ್ಲ, ತಮಿಳುನಾಡಿಗೆ ಹೇಗೆ ನೀರು ಬಿಡ್ತೀರಿ, ಈ ಹಿಂದೆ ದೇವೇಗೌಡ, ಎಸ್.ಎಂ ಕೃಷ್ಣ . ನೀರು ಬಿಡಲ್ಲ ಅಂತೇಳಿ ನೀರು ಬಿಟ್ಟಿದ್ದಾರೆ. ಅದೇ ರೀತಿ ಡಿಕೆ ಶಿವಕುಮಾರ್ ನೀರು ಬಿಡಬಾರದು. ಬನ್ನಿ ಎಲ್ಲರೂ ದೆಹಲಿ ಚಲೋ ಮಾಡೋಣ ಬನ್ನಿ, ರಾಜ್ಯದ ಜನರೆಲ್ಲ ದೆಹಲಿಗೆ ಹೋಗಿ ಹೋರಾಟ ಮಾಡೋಣ. ಇಲ್ಲಿ ಹೋರಾಟ ಮಾಡಿದರೆ ಕೇಂದ್ರ ಗಮನಿಸುತ್ತದೆಯೇ? ಕನ್ನಡಪರ ಸಂಘಟನೆಗಳು ಬಂದ್ ಮಾಡಲು ನಿರ್ಧರಿಸುತ್ತಿವೆ. ಅದಕ್ಕೆ ನಾನು ವಿರೋಧಿಸುವುದಿಲ್ಲ ಎಂದರು. ಜಂತರ್ ಮಂತರ್ನಲ್ಲಿ ಪ್ರತಿಭಟನೆ ಮಾಡೋಣ ಆದರೆ ನಾವು ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಇಲ್ಲಿ ಕರ್ನಾಟಕ ಬಂದ್ ಮಾಡಿ ನಾವು ನಷ್ಟ ಮಾಡಿಕೊಳ್ಳೋದು ಬೇಡ. ದೆಹಲಿ ಚಲೋ ಮಾಡಿ ಕೇಂದ್ರಕ್ಕೆ ಒತ್ತಾಯ ಮಾಡೋಣ, ದೆಹಲಿ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಮಾಡೋಣ, ಎಲ್ಲ ಕನ್ನಡಪರ, ರೈತ, ಸಂಘಟನೆಗಳು, ಜನರು ದೆಹಲಿಯಲ್ಲಿ ಹೋರಾಟ ಮಾಡೋಣ, ಆಗ ಮಾತ್ರ ಇಂಥ ತೀರ್ಪು ಮಾಡುವ ಮುನ್ನ ಯೋಚಿಸಬೇಕು ಎಂದು ಹೇಳಿದರು.
- ಹೊಲದಲ್ಲಿ ನಡೆದ ‘ನಾಟಿ ಸಂಭ್ರಮ' ಕಾರ್ಯಕ್ರಮದಲ್ಲಿ ನಾಟಿ ಮಾಡುವ ಮಹಿಳೆಯರಿಗೆ ಸೊರಬ: ದೇಶಕ್ಕೆ ಅನ್ನ ನೀಡುವ ರೈತ ಮಳೆಯನ್ನೇ ನಂಬಿ ಕೃಷಿ ಚಟುವಟಿಕೆ ಮಾಡಬೇಕಾಗಿದೆ. ಆದರೆ ಈ ವರ್ಷ ಮಳೆಯ ಕೊರತೆಯಿಂದ ರೈತ ಆತಂಕ ಪಡುವಂತಾಗಿದೆ. ರೈತರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಹಾಗೂ ನಾಟಿ ಮಾಡುವ ಮಹಿಳೆಯರಿಗೆ ಹಲವು ಸಲಕರಣೆ ನೀಡಲಾಗಿದೆ ಎಂದು ದಂತ ವೈದ್ಯ ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ| ಜ್ಞಾನೇಶ್ ಎಚ್.ಈ. ಹೇಳಿದರು. ತಾಲೂಕಿನ ಕೊಡಕಣಿಯ ವೀರಭದ್ರಪ್ಪ ಗೌಡರ ಹೊಲದಲ್ಲಿ ನಡೆದ ‘ನಾಟಿ ಸಂಭ್ರಮ' ಕಾರ್ಯಕ್ರಮದಲ್ಲಿ ನಾಟಿ ಮಾಡುವ ಮಹಿಳೆಯರಿಗೆ ರೋಟರಿ ವತಿಯಿಂದ ಹಲವು ವಸ್ತುಗಳನ್ನು ನೀಡಿ ಅವರೊಂದಿಗೆ ನಾಟಿ ಮಾಡುವ ಮೂಲಕ ಅವರು ಮಾತನಾಡಿದರು. ರೈತ ಇಂದು ಸಂಕಷ್ಟ ಅನುಭವಿಸು ವಂತಾಗಿದೆ. ರೈತರ ಕಣ್ಣೀರನ್ನು ಒರೆಸುವ ನಿಟ್ಟಿನಲ್ಲಿ ಸರ್ಕಾರಗಳು ಮುಂದಾಗಬೇಕು ಎಂದರು. ರೋಟರಿ ಕ್ಲಬ್ ಅಧ್ಯಕ್ಷ ಮಾಲತೇಶ್ ಕೊಡಕಣಿ ಮಾತನಾಡಿ, ರೋಟರಿ ಸಂಸ್ಥೆ ಹಲವು ಸಮಾಜಮುಖಿ ಚಿಂತನೆ ಹೊಂದಿ ಕಾರ್ಯಕ್ರಮ ಮಾಡುತ್ತಾ ಬಂದಿದೆ. ಇನ್ನು ಮುಂದೆ ಯೂ ಇದೇ ರೀತಿ ರೈತಸ್ನೇಹಿಯಾಗಿ ಕಾರ್ಯಕ್ರಮ ಮಾಡುತ್ತದೆ ಎಂದರು. ರೋಟರಿ ಕ್ಲಬ್ ನೂತನ ಅಧ್ಯಕ್ಷ ಮಾಲತೇಶ್ ಕೊಡಕಣಿ, ಕಾರ್ಯದರ್ಶಿ ಪ್ರಕಾಶ್ ಬಿಳವಗೋಡು, ಡಾ। ನಾಗರಾಜ್, ನಿಕಟಪೂರ್ವ ಕಾರ್ಯದರ್ಶಿ ಕೃಷ್ಣಪ್ಪ ಓಟೂರು, ರೋಟರಿ ಮಾಜಿ ಅಧ್ಯಕ್ಷರಾದ ಸಂತೋಷ್, ವೀರಭದ್ರಪ್ಪ ಗೌಡ, ಪರಶುರಾಮ್, ಹಾಲಮ್ಮ, ಶೃತಿ, ಪದ್ಮಾ, ಜಯಮ್ಮ, ಅನ್ನಪೂರ್ಣ, ಶಿಲ್ಪಾ ಕುಮಾರ್ ಮೊದಲಾದವರಿದ್ದರು1
- We are authorised distributor for Karnataka for Yodha agricultural equipments ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ ಸಂಪರ್ಕಿಸಿ: 7483066169 ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110 Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow We are authorised distributor for karnataka Shri shivabasava agro care Haveri Contact us: 7483066169 Location: Industrial area, near, TMAE college, Hubli road, Haveri 5811101
- ಪ್ರಧಾನಿ ಶ್ರೀ Narendra Modi ಅವರು ವಿವೇಕ ಸ್ಮಾರಕದಲ್ಲಿ ಯೋಗ ಮತ್ತು ಧ್ಯಾನ ಸಭಾಂಗಣ ಹಾಗೂ ಪ್ರದರ್ಶನ ಸಭಾಂಗಣವನ್ನು ಉದ್ಘಾಟಿಸಿ, ಶ್ರೀ ರಾಮಕೃಷ್ಣ ಪರಮಹಂಸರ ಚಿತ್ರಪಟದ ಮುಂದೆ ಶ್ರದ್ಧಾ-ಭಕ್ತಿಯಿಂದ ಧ್ಯಾನ ಮಗ್ನರಾಗಿ ಅವರನ್ನು ಸ್ಮರಿಸಿದರು.1
- ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ನಿದ್ರಾದೇವಿ ಆವರಿಸಿದಾಗ ಇವೆಲ್ಲವನ್ನೂ ಮರೆತು ಎಂಥದೆ ಸ್ಥಳದಲ್ಲಿಯೂ ಸಹ ತನ್ನನ್ನು ತಾನು ಮರೆತು ನಿದ್ರೆಗೆ ಜಾರುವ ಕೆಲವು ವ್ಯಕ್ತಿಗಳು ಇದ್ದಾರೆ .. ಹೌದು ಆತ್ಮೀಯ ವೀಕ್ಷಕರೇ ಚಳ್ಳಕೆರೆ ನಗರದ ನೆಹರು ಸರ್ಕಲ್ ಬಳಿಯ ರಸ್ತೆಯ ಪಕ್ಕದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಒಬ್ಬ ವ್ಯಕ್ತಿ ಮೊಬೈಲ್ ಹಾಗೂ ಬ್ಯಾಗನ್ನು ಮರೆತು ನಿದ್ರೆ ಮಾಡುವುದು ಕಂಡು ಬಂತು ಅಲ್ಲಿ ತಕ್ಷಣ ಆ ವ್ಯಕ್ತಿಯನ್ನು ಎಚ್ಚರಿಸಿ ಮಾತನಾಡಿಸಿ ಮೊಬೈಲ್ ಹಾಗೂ ಬ್ಯಾಗ್ ಗಳ ಜೋಪಾನತೆಗೆ ಎಚ್ಚರಿಕೆಯನ್ನು ನೀಡಿಲಾಯ್ತು ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ಹೀಗೆ ನಿದ್ದೆ ಮಾಡುವ ವೇಳೆ ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ನಿದ್ದೆ ಮಾಡುವ ವೇಳೆ ತುಂಬಾ ಜಾಗೃತೆ ವಹಿಸಬೇಕು ಮೊಬೈಲ್ ಬ್ಯಾಗ್ ಗಳು ಇತರೆ ವಸ್ತುಗಳನ್ನ ಕಾಣುವ ರೀತಿಯಲ್ಲಿ ಇಟ್ಟುಕೊಂಡು ನಿದ್ರೆ ಮಾಡಿದರೆ ಆ ವಸ್ತುಗಳು ಕಳೆದು ಹೋದರೆ ಯಾರು ಹೊಣೆ ಆಗ್ತಾರೆ ಅಲ್ವೇ ಸ್ನೇಹಿತರೇ..1
- ಯುವ ಕರ್ನಾಟಕ ವೇದಿಕೆ ಮತ್ತು ರೈತ ಸಂಘದ ವತಿಯಿಂದ ಕೆರೆಯಾಗಳಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆ ನೋಡ್ ಬುಕ್ ವಿತರಣೆ ಕೆರೆಯಾಗಳ ಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಪಠ್ಯಪುಸ್ತಕಗಳನ್ನ ವಿತರಣೆ ಮಾಡಲಾಯಿತು. ಹೊಳಲ್ಕೆರೆ ತಾಲೂಕು ಕೆರೆಯಾಗಳ ಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಯುವ ಕರ್ನಾಟಕ ವೇದಿಕೆ ಮತ್ತು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಡಾಕ್ಟರ್ ವಾಸುದೇವ ಮೇಟಿ ಬಣ್ಣದ ವತಿಯಿಂದ ಶಾಲೆಯ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷರಾದ ರವಿ ಕುಮಾರ್ ನಾಯಕ್ ಮಾತನಾಡಿ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಒಂದು ವರ್ಷಕ್ಕೆ ಬೇಕಾಗುವ ಪುಸ್ತಕ ನೋಟ್ ಪುಸ್ತಕಗಳು ಪೆನ್ಸಿಲ್ ಗಳನ್ನು ಕೊಡುವುದಾಗಿ ಹೇಳಿದರು.1
- ಮಳೆಯಲ್ಲೂ ಕರ್ತವ್ಯಕ್ಕೆ ಆದ್ಯತೆ; ಕೆಲಸದ ಪ್ರಗತಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ ನಿರಂತರ ಸುರಿಯುತ್ತಿರುವ ಮಳೆಯ ನಡುವೆಯೂ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಗೋಕಾಕ ತಾಲೂಕಿನ ಕೌಜಲಗಿ ಸಮೀಪದ ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಗೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಹಾಗೂ ಸ್ಥಳದ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಕಾಮಗಾರಿಯ ಕುರಿತು ಮಾಹಿತಿ ಪಡೆದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.1
- ವೇಗವಾಗಿ ಬಂದು ಕಾರ್ ಡಿಕ್ಕಿ : ಮಗು ಸೇರಿ ಆರು ಕುರಿಗಳು ಸ್ಥಳದಲ್ಲೇ ಸಾವು. ಕಾರ್ ಡಿಕ್ಕಿ : ಮಗು ಸೇರಿ ಆರು ಕುರಿಗಳು ಸ್ಥಳದಲ್ಲೇ ಸಾವು ಹಾವೇರಿ : ವೇಗವಾಗಿ ಬಂದ ಕಾರೊಂದು ಮುಂದೆ ಚಲಿಸುತ್ತಿದ್ದ ಆಟೋ ಮತ್ತು ಕುರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 6 ಕುರಿಗಳು ಹಾಗೂ ಆಟೋದಲ್ಲಿ ಕುಳಿತಿದ್ದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಕರುಣಾಜನಕ ಘಟನೆ ಹಾವೇರಿ ಆರ್ ಟಿ ಓ ಕಛೇರಿ ಹತ್ತಿರ ಜರುಗಿದೆ. ವೇಗವಾಗಿ ಬಂದ ಕಾರು ಮುಂದೆ ಚಲಿಸುತ್ತಿದ್ದ ಕುರಿಗಳು ಹಾಗೂ ಆಟೋಗೆ ವೇಗವಾಗಿ ಡಿಕ್ಕಿ ಆದ ಪರಿಣಾಮವಾಗಿ ಸ್ಥಳದಲ್ಲಿಯೇ ಆರು ಕುರಿಗಳು ಹಾಗೂ ಒಂದು ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ತೀವ್ರ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು, ಕೆಲ ಕಾಲ ಉದ್ವಿಗ್ನ ವಾತಾವರಣವಿದ್ದರೂ ಪೋಲೀಸರು ಸ್ಥಳಕ್ಕಾಗಮಿಸಿ ಸಾರ್ವಜನಿಕರ ಅಕ್ರೊಷದ ವಾತಾವರಣವನ್ನ ಸಮಾಧಾನ ಪಡಿಸಿದರು ಎನ್ನಲಾಗಿದೆ.1