ವಿಶೇಷ ಪೂಜೆ ಸಲ್ಲಿಸಿ ವೀರಭದ್ರೇಶ್ವರ ಜಯಂತಿ ಅದ್ದೂರಿಯಾಗಿ ಆಚರಣೆ ಕಲಘಟಗಿ:ಪಟ್ಟಣದ ಹನ್ನೆರಡು ಮಠದಲ್ಲಿರುವ ವೀರಭದ್ರ ದೇವರ ಭವ್ಯ ಮೂರ್ತಿಗೆ ಮಂಗಳವಾರ ಸಾರ್ವತ್ರಿಕ ಸಮಾಜ ಬಾಂಧವರೆಲ್ಲರೂ ಒಗ್ಗೂಡಿಕೊಂಡು ವಿಶೇಷ ಪೂಜೆ ಸಲ್ಲಿಸಿ ವೀರಭದ್ರೇಶ್ವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಭಾದ್ರಪದ ಮಾಸದ ಮೊದಲನೇ ಮಂಗಳವಾರ ದಂದು ಶ್ರೀ ವೀರಭದ್ರೇಶ್ವರ ದೇವರಿಗೆ ಹನ್ನೆರಡು ಮಠದ ಶ್ರೀ ಷ.ಬ್ರ ರೇವಣಸಿದ್ಧ ಶಿವಾಚಾರ್ಯರ ದಿವ್ಯ ಸಾನಿಧ್ಯದಲ್ಲಿ ತಾಲೂಕಿನ ಅರ್ಚಕ ಮತ್ತು ಪುರೋಹಿತ ವರ್ಗದವರ ವೇದ ಮಂತ್ರೋಪದೇಶದಿಂದ ಮಹಾ ರುದ್ರಾಭಿಷೇಕ, ಬಿಲ್ವಾರ್ಚನೆ, ವೀರ ಪುರವಂತರಿಂದ ನೃತ್ಯ ಹಾಗೂ ಒಡುಪ ಹೇಳುವುದು, ಸಾಂಬಾಳ ವಾದ್ಯ ಮತ್ತು ಮಹಾ ಮಂಗಳಾರತಿ ಕಾರ್ಯಕ್ರಮಗಳು ಜರುಗಿದವು. ಮದ್ಯಾಹ್ನ 12-30 ಕ್ಕೆ ಮಹಾ ಪ್ರಸಾದ ನರವೇರಿತು. ಜಂಗಮ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ಎಸ್ ವಿ ತಡಸಮಠ ಮಾತನಾಡಿ, ಪ್ರಪ್ರಥಮ ಭಾರಿಗೆ ನಮ್ಮ ಕಲಘಟಗಿಯಲ್ಲಿ ನಾವು ಶ್ರೀ ವೀರಭದ್ರೇಶ್ವರ ಜಯಂತಿಯನ್ನು ಆಚರಿಸಿದ್ದೇವೆ. ಈ ದೇವರು ಅನೇಕ ಸಮಾಜದ ಕುಲದೇವರಾಗಿರುವುದರಿಂದ ಮುಂಭರುವ ದಿನಗಳಲ್ಲಿ ಇನ್ನು ಹೆಚ್ಚಿನ ಭಕ್ತರ ಸಂಖ್ಯೆಯೊಂದಿಗೆ ಅದ್ದೂರಿಯಾಗಿ ಆಚರಿಸುವ ಉದ್ದೇಶ ಇರುವುದರಿಂದ ಎಲ್ಲಾ ಸಮಾಜದ ಗುರುಹಿರಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿದೆ ಎಂದರು. ಜಾನಪದ ವಿದ್ವಾಂಸ ಎಮ್ ಆರ್ ತೋಟಗಂಟಿ ಮಾತನಾಡಿ ಸಾರ್ವತ್ರಿಕ ಕುಲದೇವರು ಮತ್ತು ವೀರಶೈವ ಗೋತ್ರ ಪುರುಷನಾದ ಶ್ರೀ ವೀರಭದ್ರ ಸ್ವಾಮಿಯನ್ನ ಶಕ್ತಿ, ರಕ್ಷಣೆ ಹಾಗೂ ದುಷ್ಟ ಶಕ್ತಿಗಳ ನಾಶಕನಾಗಿ ಪೂಜಿಸಲಾಗುತ್ತದೆ. ವೀರಶೈವ ಹಾಗೂ ಲಿಂಗಾಯತ ಸಂಪ್ರದಾಯಗಳಲ್ಲಿ ವೀರಭದ್ರ ದೇವರಿಗೆ ವಿಶೇಷ ಸ್ಥಾನವನ್ನು ನೀಡಲಾಗಿದ್ದು, ಅನೇಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ವೀರಗಾಸೆ, ಪುರವಂತಿಕೆ ಹಾಗೂ ವಾದ್ಯ ಮೇಳಗಳಿಂದ ಗೋತ್ರ ಪುರಷನಿಗೆ ವಿಶೇಷ ಗೌರವವನ್ನು ಸಲ್ಲಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಜಂಗಮ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಅಜ್ಜಯ್ಯ ಹಿರೇಮಠ, ಉಪಾಧ್ಯಕ್ಷ ಬಸಯ್ಯ ಹಿರೇಮಠ, ಶಿವಯ್ಯ ತೇಗೂಮಠ, ವೀರಶೈವ ಲಿಂಗಾಯತ ಮಹಾ ಸಬಾದ ತಾಲೂಕು ಅಧ್ಯಕ್ಷ ಐ.ಸಿ ಗೋಕುಲ್, ಗಂಗಾಧರ್ ಚಿಕ್ಕಮಠ, ವಿಜಯಕುಮಾರ ಹನ್ನೆರೆಡುಮಠ, ಮಂಜಯ್ಯ ಅಣ್ಣಿಗೇರಿ, ಶಂಕರಗೌಡ ಭಾವಿಕಟ್ಟಿ, ಶಶಿಧರಗೌಡ ಪಾಟೀಲ್, ನಿಂಗಯ್ಯ ಹಿರೇಮಠ, ಶಿವಪುತ್ರಯ್ಯ ತೇಗೂರಮಠ, ಚಂದ್ರಯ್ಯ ಹೆಬ್ಬಳ್ಳಿಮಠ, ಹೆಚ್ ಎನ್ ಸುಣಗದ, ಮಲ್ಲಯ್ಯ ಗೋಡಿಮನಿ, ಚಂದ್ರಯ್ಯ ಹೆಬ್ಬಳ್ಳಿಮಠ, ಮಂಜಯ್ಯ ಅಣ್ಣಿಗೇರಿ, ಸಿದ್ದಯ್ಯ ಕಟ್ನೂರಮಠ, ಚನ್ನಬಸಯ್ಯ ಹಿರೇಮಠ, ವಿರೇಶ ಹಾರೋಗೇರಿ, ಗುರುಪಾದಯ್ಯ ಹಿರೇಮಠ, ಚರಣಗೌಡ ಪಾಟೀಲ್, ಗುರುಸಿದ್ದಯ್ಯ ಬುಕಿಟಗಾರ, ಗಂಗಯ್ಯ ಹಿರೇಮಠ, ವೀರಣ್ಣ ಕುಬಸದ, ಸಿದ್ದಯ್ಯ ಪಾಟೀಲ್, ಮಾಂತೇಶ ವಿರಕ್ತಿಮಠ, ಚನ್ನಯ್ಯ ಹಿರೇಮಠ, ಸೇರಿದಂತೆ ತಾಲೂಕಿನ ವಿವಿಧ ಸಮಾಜ ಬಾಂಧವರು ಬಾಗವಹಿಸಿದ್ದರು.
ವಿಶೇಷ ಪೂಜೆ ಸಲ್ಲಿಸಿ ವೀರಭದ್ರೇಶ್ವರ ಜಯಂತಿ ಅದ್ದೂರಿಯಾಗಿ ಆಚರಣೆ ಕಲಘಟಗಿ:ಪಟ್ಟಣದ ಹನ್ನೆರಡು ಮಠದಲ್ಲಿರುವ ವೀರಭದ್ರ ದೇವರ ಭವ್ಯ ಮೂರ್ತಿಗೆ ಮಂಗಳವಾರ ಸಾರ್ವತ್ರಿಕ ಸಮಾಜ ಬಾಂಧವರೆಲ್ಲರೂ ಒಗ್ಗೂಡಿಕೊಂಡು ವಿಶೇಷ ಪೂಜೆ ಸಲ್ಲಿಸಿ ವೀರಭದ್ರೇಶ್ವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಭಾದ್ರಪದ ಮಾಸದ ಮೊದಲನೇ ಮಂಗಳವಾರ ದಂದು ಶ್ರೀ ವೀರಭದ್ರೇಶ್ವರ ದೇವರಿಗೆ ಹನ್ನೆರಡು ಮಠದ ಶ್ರೀ ಷ.ಬ್ರ ರೇವಣಸಿದ್ಧ ಶಿವಾಚಾರ್ಯರ ದಿವ್ಯ ಸಾನಿಧ್ಯದಲ್ಲಿ ತಾಲೂಕಿನ ಅರ್ಚಕ ಮತ್ತು ಪುರೋಹಿತ ವರ್ಗದವರ ವೇದ ಮಂತ್ರೋಪದೇಶದಿಂದ ಮಹಾ ರುದ್ರಾಭಿಷೇಕ, ಬಿಲ್ವಾರ್ಚನೆ, ವೀರ ಪುರವಂತರಿಂದ ನೃತ್ಯ ಹಾಗೂ ಒಡುಪ ಹೇಳುವುದು, ಸಾಂಬಾಳ ವಾದ್ಯ ಮತ್ತು ಮಹಾ ಮಂಗಳಾರತಿ ಕಾರ್ಯಕ್ರಮಗಳು ಜರುಗಿದವು. ಮದ್ಯಾಹ್ನ 12-30 ಕ್ಕೆ ಮಹಾ ಪ್ರಸಾದ ನರವೇರಿತು. ಜಂಗಮ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ಎಸ್ ವಿ
ತಡಸಮಠ ಮಾತನಾಡಿ, ಪ್ರಪ್ರಥಮ ಭಾರಿಗೆ ನಮ್ಮ ಕಲಘಟಗಿಯಲ್ಲಿ ನಾವು ಶ್ರೀ ವೀರಭದ್ರೇಶ್ವರ ಜಯಂತಿಯನ್ನು ಆಚರಿಸಿದ್ದೇವೆ. ಈ ದೇವರು ಅನೇಕ ಸಮಾಜದ ಕುಲದೇವರಾಗಿರುವುದರಿಂದ ಮುಂಭರುವ ದಿನಗಳಲ್ಲಿ ಇನ್ನು ಹೆಚ್ಚಿನ ಭಕ್ತರ ಸಂಖ್ಯೆಯೊಂದಿಗೆ ಅದ್ದೂರಿಯಾಗಿ ಆಚರಿಸುವ ಉದ್ದೇಶ ಇರುವುದರಿಂದ ಎಲ್ಲಾ ಸಮಾಜದ ಗುರುಹಿರಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿದೆ ಎಂದರು. ಜಾನಪದ ವಿದ್ವಾಂಸ ಎಮ್ ಆರ್ ತೋಟಗಂಟಿ ಮಾತನಾಡಿ ಸಾರ್ವತ್ರಿಕ ಕುಲದೇವರು ಮತ್ತು ವೀರಶೈವ ಗೋತ್ರ ಪುರುಷನಾದ ಶ್ರೀ ವೀರಭದ್ರ ಸ್ವಾಮಿಯನ್ನ ಶಕ್ತಿ, ರಕ್ಷಣೆ ಹಾಗೂ ದುಷ್ಟ ಶಕ್ತಿಗಳ ನಾಶಕನಾಗಿ ಪೂಜಿಸಲಾಗುತ್ತದೆ. ವೀರಶೈವ ಹಾಗೂ ಲಿಂಗಾಯತ ಸಂಪ್ರದಾಯಗಳಲ್ಲಿ ವೀರಭದ್ರ ದೇವರಿಗೆ ವಿಶೇಷ ಸ್ಥಾನವನ್ನು ನೀಡಲಾಗಿದ್ದು, ಅನೇಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ವೀರಗಾಸೆ, ಪುರವಂತಿಕೆ ಹಾಗೂ ವಾದ್ಯ ಮೇಳಗಳಿಂದ ಗೋತ್ರ ಪುರಷನಿಗೆ ವಿಶೇಷ ಗೌರವವನ್ನು
ಸಲ್ಲಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಜಂಗಮ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಅಜ್ಜಯ್ಯ ಹಿರೇಮಠ, ಉಪಾಧ್ಯಕ್ಷ ಬಸಯ್ಯ ಹಿರೇಮಠ, ಶಿವಯ್ಯ ತೇಗೂಮಠ, ವೀರಶೈವ ಲಿಂಗಾಯತ ಮಹಾ ಸಬಾದ ತಾಲೂಕು ಅಧ್ಯಕ್ಷ ಐ.ಸಿ ಗೋಕುಲ್, ಗಂಗಾಧರ್ ಚಿಕ್ಕಮಠ, ವಿಜಯಕುಮಾರ ಹನ್ನೆರೆಡುಮಠ, ಮಂಜಯ್ಯ ಅಣ್ಣಿಗೇರಿ, ಶಂಕರಗೌಡ ಭಾವಿಕಟ್ಟಿ, ಶಶಿಧರಗೌಡ ಪಾಟೀಲ್, ನಿಂಗಯ್ಯ ಹಿರೇಮಠ, ಶಿವಪುತ್ರಯ್ಯ ತೇಗೂರಮಠ, ಚಂದ್ರಯ್ಯ ಹೆಬ್ಬಳ್ಳಿಮಠ, ಹೆಚ್ ಎನ್ ಸುಣಗದ, ಮಲ್ಲಯ್ಯ ಗೋಡಿಮನಿ, ಚಂದ್ರಯ್ಯ ಹೆಬ್ಬಳ್ಳಿಮಠ, ಮಂಜಯ್ಯ ಅಣ್ಣಿಗೇರಿ, ಸಿದ್ದಯ್ಯ ಕಟ್ನೂರಮಠ, ಚನ್ನಬಸಯ್ಯ ಹಿರೇಮಠ, ವಿರೇಶ ಹಾರೋಗೇರಿ, ಗುರುಪಾದಯ್ಯ ಹಿರೇಮಠ, ಚರಣಗೌಡ ಪಾಟೀಲ್, ಗುರುಸಿದ್ದಯ್ಯ ಬುಕಿಟಗಾರ, ಗಂಗಯ್ಯ ಹಿರೇಮಠ, ವೀರಣ್ಣ ಕುಬಸದ, ಸಿದ್ದಯ್ಯ ಪಾಟೀಲ್, ಮಾಂತೇಶ ವಿರಕ್ತಿಮಠ, ಚನ್ನಯ್ಯ ಹಿರೇಮಠ, ಸೇರಿದಂತೆ ತಾಲೂಕಿನ ವಿವಿಧ ಸಮಾಜ ಬಾಂಧವರು ಬಾಗವಹಿಸಿದ್ದರು.
- ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಡಿ ಶೀಘ್ರವೇ 9000 ಎಕರೆ ಜಮೀನಿಗೆ ನೀರು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಕೊಪ್ಪಳ : ತಾಲೂಕಿನ ಬಹುನಿರೀಕ್ಷಿತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಒಟ್ಟು 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು. ನಗರದ ಎಸ್.ಎಫ್. ಶಾಲೆಯ ಎದುರುಗಡೆಯಿರುವ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಳವಂಡಿ ಬೇಟಗೇರಿ ಏತ ನೀರಾವರಿ ಯೋಜನೆಯು ಕೊಪ್ಪಳ ತಾಲ್ಲೂಕಿನ ಹನಕುಂಟಿ ಗ್ರಾಮದಿಂದ 2 ಕಿ.ಮೀ. ಹತ್ತಿರದಲ್ಲಿರುತ್ತದೆ. ಸದರಿ ಯೋಜನೆಗೆ ಮೂಲತಃ ಕೃಷ್ಣ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ತುಂಗಭದ್ರ ನದಿಯಿಂದ 0.50 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಒಟ್ಟು 9000 ಏಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿರುತ್ತದೆ. ಈ ಯೋಜನೆಗೆ ಈ ಹಿಂದೆ 87.10 ಕೋಟಿಗಳಿಗೆ ಡಿ.ಪಿ.ಆರ್ ಅನ್ನು ಸರ್ಕಾರಕ್ಕೆ ಸಲ್ಲಸಿ ದಿನಾಂಕ: 30.12.2014 ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದರು. ಜಾಕ್ವೆಲ್, ಇನ್ಟೇಕ್ ಕಾಲುವೆ. ರೈಸಿಂಗ್ ಮೇನ್, ಡೆಲಿವರಿ ಚೇಂಬರ್ ಹಾಗೂ ಟ್ರಾನ್ಸ್ಮಿಷನ್ ಲೈನ್, 33 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆದಾರರಾದ ಜಿ.ಶಂಕರ್ ರವರಿಗೆ ಟೆಂಡರ್ ಆಧಾರದ ಮೇಲೆ 61.30 ಕೋಟಿಗಳಿಗೆ 21.02.2016 ರಂದು ವಹಿಸಲಾಗಿತ್ತು. ಈ ಯೋಜನೆಯಡಿ ಜಾಕ್ವೆಲ್, ಇನ್ಟೀಕ್ ಕಾಲುವೆ ಉದ್ದ 1.02 ಕಿ.ಮೀ. 16.50ಕಿ.ಮೀ ಉದ್ದ ಎಂಎಸ್ ರೈಸಿಂಗ್ ಮೇನ್, 1760 ಹೆಚ್.ಪಿ ಸಾಮರ್ಥ್ಯದ 2+1 ಪಂಪ್ ಮತ್ತು ಮೋಟಾರಗಳು, 2 ಡೆಲವರಿ ಚೇಂಬರ್ಗಳು. ಜಾಕ್ವೆಲ್ ಪಕ್ಕದಲ್ಲಿ 33/6.6 ಕೆವಿ ಸಬ್ ಸ್ಟೇಷನ್, 6.10 ಕಿ.ಮೀ ಉದ್ದ ಟ್ರಾನ್ಸ್ಮಿಷನ್ ಲೈನ್ ಹಾಗೂ ಟರ್ಮಿನಲ್ ಬೇ ಸಿರ್ಮಿಸಲಾಗಿರುತ್ತದೆ. ದಿನಾಂಕ 10.09.2026 ರಂದು ಸಬ್ ಸ್ಟೇಷನ್ ಚಾರ್ಜ್ ಮಾಡಲಾಗಿರುತ್ತದೆ ಎಂದು ಹೇಳಿದರು. ಪ್ರತಿ ಪಂಪ್ನಿಂದ 28.28 ಕ್ಯೂಸೆಕ್ಸ್ ರಂತೆ ಒಟ್ಟು 56.56 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಹಾಗೂ ಜಲಾಶಯದ ನೀರಿನ ಮಟ್ಟ 1605.00 ಅಡಿ (ಜಲಾಶಯದ ಸಾಮರ್ಥ್ಯ 28.70 ಟಿ.ಎಂ.ಸಿ ವರೆಗು) ತಲುಪುವವರೆಗೆ ಲಭ್ಯವಿರುವ ನೀರನ್ನು ಪಡೆಯಬಹುದು. ಈ ಯೋಜನೆಯ ಹೆಚ್ಚುವರಿ 3000 ಎಕರೆ ಕ್ಷೇತ್ರದ ನೀರಾವರಿ ಕಲ್ಪಿಸುವ ಕಾಮಗಾರಿಯನ್ನು ಎ ವಿಆರ್ ಕನ್ಸಟ್ರಕ್ಷನ್ಸ್ ಇವರಿಗೆ ರೂ:4.59 ಕೋಟಿಗಳಿಗೆ ದಿನಾಂಕ: 30/03/2021 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಿದ್ದು, ಈ ಕಾಮಗಾರಿಯಲ್ಲಿ ರೈಸಿಂಗ್ ಮೇನ್ ಪೂರ್ಣಗೊಂಡಿದೆ ಮತ್ತು ಪಂಪುಗಳನ್ನು ಅಳವಡಿಸುವುದು ಹಾಗೂ ಸಬ್ಸ್ಟೇಷನ್ ಕಾಮಗಾರಿಗಳು ಬಾಕಿ ಉಳಿದಿರುತ್ತದೆ ಎಂದರು. ಪ್ರಸ್ತುತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಪರಿಷ್ಕೃತ ಡಿ.ಪಿ.ಆರ್ ಅನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ 105ನೇ ಸಭೆಯಲ್ಲಿ ಮಂಡಿಸಿದ್ದು. ರೂ.211.00 ಕೋಟಿಗಳಿಗೆ ಅನುಮೋದನೆ ನೀಡಿರುತ್ತಾರೆ. ಯೋಜನೆಯಡಿ 6000 ಎಕರೆ ಜಮೀನುಗಳಗೆ ಈಗಾಗಲೇ ಒಟ್ಟಾರೆ 39.78 ಕಿ.ಮೀ ಉದ್ದದ ಮುಖ್ಯ ಕಾಲುವೆ ಹಾಗೂ ಉಪ ಕಾಲುವೆಗಳ ನಿರ್ಮಾಣ ಪೂರ್ಣಗೊಂಡಿರುತ್ತದೆ ಎಂದು ತಿಳಿಸಿದರು. 3000 ಏಕರೆ ಜಮೀನುಗಳಗೆ ಮಧ್ಯ ಪ್ರದೇಶ ಮಾದರಿಯ ಮುಖ್ಯ ಪೈಪ್ಲೈನ್ ಹಾಗೂ ವಿತರಣಾ ಕಾಲುವೆ ಪೈಪ್ಲೈನ್ ಕಾಮಗಾರಿಯನ್ನು ರೂ. 11.50 ಕೋಟಿಗಳಿಗೆ ಟೆಂಡರ್ ಕರೆಯಲಾಗಿದ್ದು, ಚಿದು ಇನ್ಫ್ರಾಟೆಕ್ ಪ್ರೈ.ಲಿ (CHIDU INFRATECH PRIVATE LIMITED) ಇವರಿಗೆ ರೂ:11.80 ಕೋಟಿಗಳಿಗೆ ದಿನಾಂಕ: 22/08/2025 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಲಾಗಿರುತ್ತದೆ. ಈ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ ಎಂದರು. ಡೆಲಿವರಿ ಚೇಂಬರ್ ನಿಂದ ಬ್ಲಾಕ್-1 ಗೆ ಹೆ.ಡಿ.ಪಿ.ಇ ಪೈಪ್ (Dia-355 to 125) ನ ಒಟ್ಟು ಉದ್ದ 8.7 ಕಿ.ಮೀ, ಪೈಪ್ ನೆಟ್ವರ್ಕ್ ನಿಂದ 1243 ಎಕರೆ ಬ್ಲಾಕ್-2 ಗೆ ಎಂಎಸ್ ಪೈಪ್ (Dia-380, 360, 330) ಹಾಗೂ ಹೆ.ಡಿ.ಪಿ.ಇ ಪೈಪ್ (Dia-355 to 125)ನ ಒಟ್ಟು ಉದ್ದ 16.82 ಕಿ.ಮೀ ಪೈಪ್ ನೆಟ್ವರ್ಕ್ ನಿಂದ 1757 ಎಕರೆ ಒಟ್ಟಾರೆ 3000 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಸಲು ಯೋಜಿಸಲಾಗಿರುತ್ತದೆ. ಪ್ರತಿ 20 ಹೆಕ್ಟೇರ್ ಜಮೀನುಗಳಗೆ ಪೈಪ್ ಗಳಂದ ಚೆಕ್ ಓಟ್ ಲೆಟ್ ನಿಂದಾ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು. *ಒಟ್ಟು 9 ಹಳ್ಳಿಗಳಿಗೆ ಅನುಕೂಲ:* ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಿಂದ ಕೊಪ್ಪಳ ತಾಲೂಕಿನ ಮೈನಾಳ್ಳಿ, ಹಂದ್ರಾಳ, ಅಳವಂಡಿ, ಕವಲೂರು, ಹಿರೇಸಿಂದೋಗಿ, ಬಿಕ್ಕನಹಳ್ಳಿ, ಬೆಟ್ಟಗೇರಿ ಹಾಗೂ ಕುಕನೂರು ತಾಲೂಕಿನ ತಳಕಲ್ಲು, ಕೋಮಲಾಪುರ ಸೇರಿದಂತೆ ಒಟ್ಟು 9 ಗ್ರಾಮಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಅಲ್ಲದೆ, 9000 ಎಕರೆ ಹೊಲಗಾಲುವೆಗಳ ನಿರ್ಮಾಣಕ್ಕಾಗಿ 47 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಶಾಸಕರು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.1
- ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್ ಎದುರು ಪ್ರತಿಭಟನೆ1
- ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಯಿತು.4
- *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!* ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ. ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. *ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ: ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ. ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ. ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ. ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.2
- ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು1
- ಕಿತ್ತೂರು ಉತ್ಸವಕ್ಕೆ ರಾಷ್ಟ್ರಮಟ್ಟದ ಮೆರುಗು ನೀಡುವ ಸಂಕಲ್ಪ! ಸಚಿವ ಸತೀಶ ಜಾರಕಿಹೊಳಿ. ಮೈಸೂರು ದಸರಾ ಉತ್ಸವದ ಮಾದರಿಯಲ್ಲಿ ಕಿತ್ತೂರು ಉತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ, ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮದ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಈ ಬಾರಿಯ ಉತ್ಸವದ ರೂಪುರೇಷೆಗಳು, ಕಾರ್ಯಕ್ರಮಗಳ ಆಯೋಜನೆ ಹಾಗೂ ಅಗತ್ಯ ಸಿದ್ಧತೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಉತ್ಸವದ ಉದ್ಘಾಟನೆಗೆ ಸಾಹಿತಿಗಳು, ಬುದ್ಧಿಜೀವಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಆಹ್ವಾನಿಸುವ ಕುರಿತು ಚಿಂತನೆ ನಡೆಸಲಾಯಿತು. ಬೆಳಗಿನ ಗೋಷ್ಠಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಕಾರ್ಯಕ್ರಮ ರೂಪಿಸುವುದು, ಮಕ್ಕಳಿಗೆ ಹೆಚ್ಚಿನ ಸಮಯ ಮೀಸಲಿಟ್ಟು ಅವರ ಜ್ಞಾನ, ಪ್ರತಿಭೆ ಹಾಗೂ ಸೃಜನಶೀಲತೆಗೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವುದು ಹಾಗೂ ಕಿತ್ತೂರು ಮತ್ತು ಕಾಕತಿ ಪ್ರದೇಶಗಳಿಗೆ ಸೀಮಿತವಾಗಿ ಕೃಷಿ ಸಂಬಂಧಿತ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಚರ್ಚಿಸಲಾಯಿತು. ಈ ಬಾರಿ ಕಿತ್ತೂರು ಉತ್ಸವಕ್ಕೆ ಸರ್ಕಾರದಿಂದ ₹5 ಕೋಟಿ ಹಾಗೂ ಲೋಕೋಪಯೋಗಿ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹5 ಕೋಟಿ ಸೇರಿದಂತೆ ಒಟ್ಟು ₹10 ಕೋಟಿ ಅನುದಾನ ಒದಗಿಸುವ ಕುರಿತು ಮಾಹಿತಿ ನೀಡಲಾಯಿತು. ಉತ್ಸವದ ಅಂಗವಾಗಿ ಜಾನುವಾರು ಜಾತ್ರೆ ಮತ್ತು ತೋಟಗಾರಿಕೆ ಇಲಾಖೆಯ ವತಿಯಿಂದ ಕೃಷಿ ಮೇಳ ಆಯೋಜಿಸುವುದು ಹಾಗೂ ಅನುಮತಿ ದೊರೆತಲ್ಲಿ ಏರ್ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಯಿತು. ಸಭೆಯಲ್ಲಿ ಕಿತ್ತೂರು ಶಾಸಕ ಶ್ರೀ ಬಾಬಾಸಾಹೇಬ ಪಾಟೀಲ, ಬೆಳಗಾವಿ ಉತ್ತರ ಶಾಸಕ ಶ್ರೀ ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಶ್ರೀ ಮುಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಶ್ರೀ ಪ್ರಕಾಶ್ ನಿಕಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಹುಲ್ ಶಿಂಧೆ, ಎನ್ಡಬ್ಲ್ಯುಕೆಆರ್ಟಿಸಿ ಉಪಾಧ್ಯಕ್ಷ ಶ್ರೀ ಸುನೀಲ ಹನ್ನಮಣ್ಣವರ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.1
- ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ತಹಶೀಲ್ದಾರ್ ಗೆ ರೈತರ ಮನವಿ ಮುಧೋಳ : ಅಸಮರ್ಪಕ ಹಾಗೂ ಗುಣಮಟ್ಟವಿಲ್ಲದ ವಿದ್ಯುತ್ ಪೂರೈಕೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೃಷಿ ಪಂಪ್ಸೆಟ್ಗಳು, ಮೋಟಾರ್ಗಳು ಹಾಗೂ ವಿದ್ಯುತ್ ಬೋರ್ಡ್ಗಳು ಪದೇಪದೇ ಸುಟ್ಟುಹೋಗುತ್ತಿವೆ. ಕೂಡಲೇ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಆಗ್ರಹಿಸಿ ರೈತರು ತಹಶೀಲ್ದಾರ್ ಅವರ ಮುಖಾಂತರ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇಂಧನ ಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಭಾಷ್ ಸಿರಬೂರ, ಬಸವಂತಪ್ಪ ಕಾಂಬಳೆ, ಮುತ್ತಪ್ಪ ಕೋಮಾರ , ದುಡ್ಡಪ್ಪ ಯರಗಟ್ಟಿ, ಮನುನಾಥ ಚಿಕ್ಕೂರ, ಮಂಜುನಾಥ ಅರಕೇರಿ ಹಾಗೂ ಮಂಜುನಾಥ ಲಕ್ಕಂ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.1
- ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.1
- ಬೆಳಗಾವಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4ಜನ ಸಜೀವ ದಹನ ಬೆಳಗಾವಿಯ ಡೋಹರ್ ಗಲ್ಲಿಯಲ್ಲಿ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4 ಜನ ಸಜೀವ ದಹನ ಸರಕಾರದಿಂದ ಪರಿಹಾರ್ ಕೊಡಿಸಿಲೂ ಯೊಚನೆ ಮಾಡುತ್ತಿದ್ದೇವೆ ಸಚಿವ ಸತೀಶ ಜಾರಕಿಹೊಳಿ . . .. .... . . .. .. .. .. .. .. .. .. . . . . . . .. .. .. .. .. . . . . .... .. . . #reel #india #hindu #kannada #ಮುಸ್ಲಿಂ #BelagaviNews #instagramreel #SatishJarkiholi #ನಿಪ್ಪಾಣಿ #gokak #mudalgi #chikkodi #hukkeri #nippani #khaagwaad #ಸವದತ್ತಿ #kudachi #athani #yaragtti #ರಾಮದುರ್ಗ #khanapur #kittur #bailhongal Indian National Congress ಕರ್ನಾಟಕ ಕಾಂಗ್ರೆಸ್ ಕರ್ನಾಟಕ ಕಾಂಗ್ರೆಸ್ Satish Jarkiholi Narendra Modi ಬಿಜೆಪಿ ಕರ್ನಾಟಕ Rastriya Swatantra Party - RSP #muslim SP Belagavi District Chunappa Pujeri Rashtriya Swayamsevak Sangh (RSS) ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ1