ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಳ್ನಾವರ (ಧಾರವಾಡ) :ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಮಹಿಳೆ ಯಾವ ರಂಗದಲ್ಲಿಯೂ ಹಿಂದೆ ಇಲ್ಲ. ಮಹಿಳಾ ಸಾಧಕೀಯರನ್ನು ಎಲ್ಲ ರಂಗದಲ್ಲಿಯೂ ನೋಡುತಿದ್ದೇವೆ ಎಂದು ಸಹ ಶಿಕ್ಷಕಿ ರಾಜಶ್ರೀ ಕೋರಿ ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿ ಅವರು ಮಾತನಾಡಿ ಮಹಿಳೆ ತನಗಿರುವ ಹಕ್ಕು ಮತ್ತು ಕಾನೂನಿನ ಅರಿವನ್ನು ಪಡೆದಾಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ ಎಂದು ಹೇಳಿದರು. ವಿಶೇಷ ಆಹ್ವಾನಿತರಾದ ಪುರಸಭೆ ಹಸಿ ಮತ್ತು ಒಣ ತ್ಯಾಜ್ಯ ವಿಲೇವಾರಿ ವಾಹನದ ಚಾಲಕರಾದ ಶ್ರೀಮತಿ ವಿದ್ಯಾ ತಳವಾರ್ ಮತ್ತು ಸುನಿತಾ ಮಾದರ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶ್ರೀಮತಿ ಸುನಿತಾ ಮಾದರ್ ಮಾತನಾಡಿ ವಿದ್ಯಾರ್ಥಿನಿಯರು ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಶಿಕ್ಷಣದ ಮೂಲಕ ಸ್ವತಂತ್ರವಾಗಿ ಮುಂದುವರಿಯಬೇಕು. ಸ್ತ್ರೀ ಎಂದರೆ ಒಂದು ಶಕ್ತಿ ಎಂದು ತೋರಿಸುವ ಛಲ ನಿಮ್ಮದಾಗಬೇಕು ಎಂದು ಹೇಳಿದರು. ಪ್ರಾಂಶುಪಾಲರಾದ ಡಾ. ಉಮಾ ಪೂಜಾರ ಮಾತನಾಡಿದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಸುರೇಶ್ ದೊಡಮನಿ ಅತಿಥಿಗಳನ್ನು ಸ್ವಾಗತಿಸಿದರು. ಡಾ.ಸುರೇಶ್ ಮಾದರ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ದೇವೇಂದ್ರ ತಳವಾರ ಪ್ರಾಸ್ತಾವಿಕ ನುಡಿಗಳನ್ನು ಹೇಳಿದರು. ಮಹಿಳಾ ವೇದಿಕೆಯಿಂದ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಿ ಕಾರ್ಯಕ್ರಮವನ್ನು ಭರಮ ಪ್ಪ ಪೂಜಾರ ನಡೆಸಿದರು. ಆರಂಭದಲ್ಲಿ ಪರಶುರಾಮ ಮಿಸಾಳೆ ಪ್ರಾರ್ಥಿಸಿದರು. ಶ್ರೀ ಅನಿಲ ಖಾತೆದಾರ ನಿರೂಪಿಸಿದರು. ರಾಘವೇಂದ್ರ ತಳವಾರ್ ವಂದಿಸಿದರು. ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಳ್ನಾವರ (ಧಾರವಾಡ) :ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಮಹಿಳೆ ಯಾವ ರಂಗದಲ್ಲಿಯೂ ಹಿಂದೆ ಇಲ್ಲ. ಮಹಿಳಾ ಸಾಧಕೀಯರನ್ನು ಎಲ್ಲ ರಂಗದಲ್ಲಿಯೂ ನೋಡುತಿದ್ದೇವೆ ಎಂದು ಸಹ ಶಿಕ್ಷಕಿ ರಾಜಶ್ರೀ ಕೋರಿ ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿ ಅವರು ಮಾತನಾಡಿ ಮಹಿಳೆ ತನಗಿರುವ ಹಕ್ಕು ಮತ್ತು ಕಾನೂನಿನ ಅರಿವನ್ನು ಪಡೆದಾಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ ಎಂದು ಹೇಳಿದರು. ವಿಶೇಷ ಆಹ್ವಾನಿತರಾದ ಪುರಸಭೆ ಹಸಿ ಮತ್ತು ಒಣ ತ್ಯಾಜ್ಯ ವಿಲೇವಾರಿ ವಾಹನದ ಚಾಲಕರಾದ ಶ್ರೀಮತಿ ವಿದ್ಯಾ ತಳವಾರ್ ಮತ್ತು ಸುನಿತಾ ಮಾದರ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶ್ರೀಮತಿ ಸುನಿತಾ ಮಾದರ್ ಮಾತನಾಡಿ ವಿದ್ಯಾರ್ಥಿನಿಯರು ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಶಿಕ್ಷಣದ ಮೂಲಕ ಸ್ವತಂತ್ರವಾಗಿ ಮುಂದುವರಿಯಬೇಕು. ಸ್ತ್ರೀ ಎಂದರೆ ಒಂದು ಶಕ್ತಿ ಎಂದು ತೋರಿಸುವ ಛಲ ನಿಮ್ಮದಾಗಬೇಕು ಎಂದು ಹೇಳಿದರು. ಪ್ರಾಂಶುಪಾಲರಾದ ಡಾ. ಉಮಾ ಪೂಜಾರ ಮಾತನಾಡಿದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಸುರೇಶ್ ದೊಡಮನಿ ಅತಿಥಿಗಳನ್ನು ಸ್ವಾಗತಿಸಿದರು. ಡಾ.ಸುರೇಶ್ ಮಾದರ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ದೇವೇಂದ್ರ ತಳವಾರ ಪ್ರಾಸ್ತಾವಿಕ ನುಡಿಗಳನ್ನು ಹೇಳಿದರು. ಮಹಿಳಾ ವೇದಿಕೆಯಿಂದ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಿ ಕಾರ್ಯಕ್ರಮವನ್ನು ಭರಮ ಪ್ಪ ಪೂಜಾರ ನಡೆಸಿದರು. ಆರಂಭದಲ್ಲಿ ಪರಶುರಾಮ ಮಿಸಾಳೆ ಪ್ರಾರ್ಥಿಸಿದರು. ಶ್ರೀ ಅನಿಲ ಖಾತೆದಾರ ನಿರೂಪಿಸಿದರು. ರಾಘವೇಂದ್ರ ತಳವಾರ್ ವಂದಿಸಿದರು. ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.
- ಕಸದ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡು ಧಾರವಾಡ ನಗರದಲ್ಲಿ ವಿಷಕಾರಿ ಹೊಗೆ ಆವರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನರು ಕಸದ ಡಂಪಿಂಗ್ ಯಾರ್ಡ್ ಎದುರು ಜಮಾಯಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸದ ಗಾಡಿಗಳನ್ನು ಕಸ ತಂದು ಸುರಿಯುವುದನ್ನು ತಡೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಬೆಳಗ್ಗೆ ಧಾರವಾಡ ಹೊಸ ಯಲ್ಲಾಪೂರದ ಬಳಿಯ ಕಸದ ಡಂಪಿಂಗ್ ಯಾರ್ಡ್ ಎದುರು ಜಮಾಯಿಸಿದ ಜನರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸದ ಡಂಪಿಂಗ್ ಯಾರ್ಡ್ ನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದರು.1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆ ಗೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹೊಸ ನೀರಲಗಿ ಗ್ರಾಮದ ವಕೀಲರಾದ ಸಿದ್ದನಗೌಡ ವೀರಭದ್ರ ಗೌಡ ಪಾಟೀಲ ಚುನಾವಣಾ ಕಣಕ್ಕೆ2
- ಬೆಳಗಾವಿಯ ವಡಗಾಂವದ ರಯತ್ ಗಲ್ಲಿಯ ಮಹಿಳೆಯರು ನೀರಿನ ಸಮಸ್ಯೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ 'ಘಾಗರ್ ಮೋರ್ಚಾ'ದ (ಕೊಡಗಳ ಮೆರವಣಿಗೆ)1
- ಬೇಸಿಗೆ ಬಿಸಿ: ಮಾಗಡಿಯ 56 ಗ್ರಾಮಗಳಿಗೆ ತಪ್ಪಲಿದೆ ನೀರಡಿಕೆ; ಕುಡಿಯುವ ನೀರಿಗಾಗಿ ಸರ್ಕಾರದ ಮಾಸ್ಟರ್ ಪ್ಲಾನ್! #JB_News_Kannada1
- ಉತ್ತರ ಕರ್ನಾಟಕದ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಮುಳುಗಡೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ತಕ್ಷಣ ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಶಾಸಕ ಪಿ.ಎಚ್. ಪೂಜಾರ್ ಆಗ್ರಹಿಸಿದ್ದಾರೆ. ಸಂತ್ರಸ್ತರ ಪರಿಸ್ಥಿತಿ ದಿನೇದಿನೇ ಚಿಂತಾಜನಕವಾಗುತ್ತಿದೆ. ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ಸಂತ್ರಸ್ತರು ದೊಡ್ಡ ಮಟ್ಟದ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಬಹುದು ಎಂದು ಎಚ್ಚರಿಸಿದರು. ಉದ್ಯೋಗ ಸೃಷ್ಟಿಗೆ ಅಗತ್ಯವಾದ ಪೂರಕ ವಾತಾವರಣವನ್ನು ರಾಜ್ಯ ಸರ್ಕಾರ ನಿರ್ಮಿಸಿ, ಸಂತ್ರಸ್ತರ ಜೀವನೋಪಾಯಕ್ಕೆ ಶಾಶ್ವತ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದರು.1
- Post by @april14news1
- ಜನವಿರೋಧಿ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಕರ್ನಾಟಕ ರಾಜ್ಯ ವಿದ್ಯುತ್ ಬಳಕೆದಾರರ ಸಂಘ ಹಾಗೂ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿದೆ. ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರ ಜೀವನ ಜೊತೆ ಆಟವಾಡುತ್ತಿವೆ. ಕೂಡಲೇ ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಲಾದ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಹಾಗೂ ವಿದ್ಯುತ್ ಗ್ರಾಹಕರು, ರೈತರು ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.1