76 ಕಲ್ಯಾಣ ಕರ್ನಾಟಕದ ನೂತನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ ಸಂತಸದ ಕ್ಷಣ. ಗ್ರಾಮೀಣಾಭಿವೃದ್ಧಿಯೇ ರಾಜ್ಯದ ಸಮಗ್ರ ಅಭಿವೃದ್ಧಿಯ ಅಡಿಪಾಯ. ಪ್ರಾಮಾಣಿಕತೆ, ನಿಷ್ಠೆ ಹಾಗೂ ಜನಸೇವೆಯ ಮನೋಭಾವದಿಂದ ಕಾರ್ಯನಿರ್ವಹಿಸಿದರೆ ರಾಜ್ಯದ 5927 ಗ್ರಾಮ ಪಂಚಾಯತಿಗಳ ಪ್ರತಿಯೊಂದು ಗ್ರಾಮವೂ ಆದರ್ಶ ಗ್ರಾಮವಾಗಬಹುದು ಎಂಬ ವಿಶ್ವಾಸ ನನಗಿದೆ. ಹೊಸದಾಗಿ ನೇಮಕಗೊಂಡಿರುವ ಎಲ್ಲ ಅಧಿಕಾರಿಗಳು ಮಹಾತ್ಮ ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸಲು ಜನರ ಸೇವೆಗೆ ತಮ್ಮನ್ನು ಸಮರ್ಪಿಸಬೇಕು ಎಂದು ಕರೆ ನೀಡಿದ್ದೇನೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಉಳಿಕೆ ವೃಂದದ 150 ಪಿಡಿಓಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು. ಅಲ್ಲದೆ, ರಾಜ್ಯದಲ್ಲಿ ಖಾಲಿ ಇರುವ ಸುಮಾರು 1400 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನೂ ಶೀಘ್ರವೇ ಆರಂಭಿಸಲಾಗುವುದು. ಈ ಸಂದರ್ಭದಲ್ಲಿ ನೂತನ ಅಧಿಕಾರಿಗಳಿಗೆ ಪ್ರಾಮಾಣಿಕತೆ, ದಕ್ಷತೆ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸುವಂತೆ ಪ್ರಮಾಣ ವಚನ ಬೋಧಿಸಲಾಯಿತು. 76 ಕಲ್ಯಾಣ ಕರ್ನಾಟಕದ ನೂತನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ ಸಂತಸದ ಕ್ಷಣ. ಗ್ರಾಮೀಣಾಭಿವೃದ್ಧಿಯೇ ರಾಜ್ಯದ ಸಮಗ್ರ ಅಭಿವೃದ್ಧಿಯ ಅಡಿಪಾಯ. ಪ್ರಾಮಾಣಿಕತೆ, ನಿಷ್ಠೆ ಹಾಗೂ ಜನಸೇವೆಯ ಮನೋಭಾವದಿಂದ ಕಾರ್ಯನಿರ್ವಹಿಸಿದರೆ ರಾಜ್ಯದ 5927 ಗ್ರಾಮ ಪಂಚಾಯತಿಗಳ ಪ್ರತಿಯೊಂದು ಗ್ರಾಮವೂ ಆದರ್ಶ ಗ್ರಾಮವಾಗಬಹುದು ಎಂಬ ವಿಶ್ವಾಸ ನನಗಿದೆ. ಹೊಸದಾಗಿ ನೇಮಕಗೊಂಡಿರುವ ಎಲ್ಲ ಅಧಿಕಾರಿಗಳು ಮಹಾತ್ಮ ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸಲು ಜನರ ಸೇವೆಗೆ ತಮ್ಮನ್ನು ಸಮರ್ಪಿಸಬೇಕು ಎಂದು ಕರೆ ನೀಡಿದ್ದೇನೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಉಳಿಕೆ ವೃಂದದ 150 ಪಿಡಿಓಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು. ಅಲ್ಲದೆ, ರಾಜ್ಯದಲ್ಲಿ ಖಾಲಿ ಇರುವ ಸುಮಾರು 1400 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನೂ ಶೀಘ್ರವೇ ಆರಂಭಿಸಲಾಗುವುದು. ಈ ಸಂದರ್ಭದಲ್ಲಿ ನೂತನ ಅಧಿಕಾರಿಗಳಿಗೆ ಪ್ರಾಮಾಣಿಕತೆ, ದಕ್ಷತೆ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸುವಂತೆ ಪ್ರಮಾಣ ವಚನ ಬೋಧಿಸಲಾಯಿತು.
76 ಕಲ್ಯಾಣ ಕರ್ನಾಟಕದ ನೂತನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ ಸಂತಸದ ಕ್ಷಣ. ಗ್ರಾಮೀಣಾಭಿವೃದ್ಧಿಯೇ ರಾಜ್ಯದ ಸಮಗ್ರ ಅಭಿವೃದ್ಧಿಯ ಅಡಿಪಾಯ. ಪ್ರಾಮಾಣಿಕತೆ, ನಿಷ್ಠೆ ಹಾಗೂ ಜನಸೇವೆಯ ಮನೋಭಾವದಿಂದ ಕಾರ್ಯನಿರ್ವಹಿಸಿದರೆ ರಾಜ್ಯದ 5927 ಗ್ರಾಮ ಪಂಚಾಯತಿಗಳ ಪ್ರತಿಯೊಂದು ಗ್ರಾಮವೂ ಆದರ್ಶ ಗ್ರಾಮವಾಗಬಹುದು ಎಂಬ ವಿಶ್ವಾಸ ನನಗಿದೆ. ಹೊಸದಾಗಿ ನೇಮಕಗೊಂಡಿರುವ ಎಲ್ಲ ಅಧಿಕಾರಿಗಳು ಮಹಾತ್ಮ ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸಲು ಜನರ
ಸೇವೆಗೆ ತಮ್ಮನ್ನು ಸಮರ್ಪಿಸಬೇಕು ಎಂದು ಕರೆ ನೀಡಿದ್ದೇನೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಉಳಿಕೆ ವೃಂದದ 150 ಪಿಡಿಓಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು. ಅಲ್ಲದೆ, ರಾಜ್ಯದಲ್ಲಿ ಖಾಲಿ ಇರುವ ಸುಮಾರು 1400 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನೂ ಶೀಘ್ರವೇ ಆರಂಭಿಸಲಾಗುವುದು. ಈ ಸಂದರ್ಭದಲ್ಲಿ ನೂತನ ಅಧಿಕಾರಿಗಳಿಗೆ ಪ್ರಾಮಾಣಿಕತೆ, ದಕ್ಷತೆ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸುವಂತೆ ಪ್ರಮಾಣ ವಚನ ಬೋಧಿಸಲಾಯಿತು. 76
ಕಲ್ಯಾಣ ಕರ್ನಾಟಕದ ನೂತನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ ಸಂತಸದ ಕ್ಷಣ. ಗ್ರಾಮೀಣಾಭಿವೃದ್ಧಿಯೇ ರಾಜ್ಯದ ಸಮಗ್ರ ಅಭಿವೃದ್ಧಿಯ ಅಡಿಪಾಯ. ಪ್ರಾಮಾಣಿಕತೆ, ನಿಷ್ಠೆ ಹಾಗೂ ಜನಸೇವೆಯ ಮನೋಭಾವದಿಂದ ಕಾರ್ಯನಿರ್ವಹಿಸಿದರೆ ರಾಜ್ಯದ 5927 ಗ್ರಾಮ ಪಂಚಾಯತಿಗಳ ಪ್ರತಿಯೊಂದು ಗ್ರಾಮವೂ ಆದರ್ಶ ಗ್ರಾಮವಾಗಬಹುದು ಎಂಬ ವಿಶ್ವಾಸ ನನಗಿದೆ. ಹೊಸದಾಗಿ ನೇಮಕಗೊಂಡಿರುವ ಎಲ್ಲ ಅಧಿಕಾರಿಗಳು ಮಹಾತ್ಮ ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸಲು ಜನರ ಸೇವೆಗೆ
ತಮ್ಮನ್ನು ಸಮರ್ಪಿಸಬೇಕು ಎಂದು ಕರೆ ನೀಡಿದ್ದೇನೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಉಳಿಕೆ ವೃಂದದ 150 ಪಿಡಿಓಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು. ಅಲ್ಲದೆ, ರಾಜ್ಯದಲ್ಲಿ ಖಾಲಿ ಇರುವ ಸುಮಾರು 1400 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನೂ ಶೀಘ್ರವೇ ಆರಂಭಿಸಲಾಗುವುದು. ಈ ಸಂದರ್ಭದಲ್ಲಿ ನೂತನ ಅಧಿಕಾರಿಗಳಿಗೆ ಪ್ರಾಮಾಣಿಕತೆ, ದಕ್ಷತೆ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸುವಂತೆ ಪ್ರಮಾಣ ವಚನ ಬೋಧಿಸಲಾಯಿತು.
- ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ- ಡಿಜಿಪಿ ಅಲೋಕ್ ಕಲಬುರಗಿ ಸೆಂಟ್ರಲ್ ಜೈಲಿಗೆ ಡಿಜಿಪಿ ಅಲೋಕಕುಮಾರ ಭೇಟಿನೀಡಿ ಬಳಿಕ ಡಿಜಿಪಿ ಅಲೋಕಕುಮಾರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು.ಜೈಲಿನಿಂದ ಮೂವರು ಕೈದಿಗಳ ಪರಾರಿ ಘಟನೆ ಗಂಭೀರವಾಗಿ ಪರಿಗಣಿಸಲಾಗಿದೆ, ಈಗಾಗಲೇ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ, ಮಸ್ತಾನ್ ಬಂಧನಕ್ಕೆ ಹುಡುಕಾಟ ನಡೆಸ್ತಿದಾರೆ,ಘಟನೆಗೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಅಮಾನತು ಮಾಡಲಾಗಿದೆ,ಜೈಲಿನ ಭದ್ರತೆ ಹೆಚ್ಚಿಸಲು ಅಧಿಕಾರಿಗಳ ಜೊತೆ ಚರ್ಚಿಸಿಲಾಗಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ,ಜೈಲಿನ ತಂತಿ ಬೇಲಿ ಸುಸ್ಥಿತಿಯಲ್ಲಿಡಲು ಸೂಚಿಸಲಾಗಿದೆ,ಜೈಲು ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿದೆ. ಶೀಘ್ರದಲ್ಲೇ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲಾಗುವುದು, ಇನ್ನು ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದು ಹೇಳಿದರು1
- ಹೂ ಮಳೆ ಸುರಿದು ಪೊಲೀಸ್ ಅಧಿಕಾರಿಗೆ ಅದ್ದೂರಿಯಾಗಿ ಬೀಳ್ಕೋಡುಗೆ ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು. ಅಫಜಲಪುರ ತಾಲೂಕಿನ ರೇವೂರ ಪೊಲೀಸ್ ಠಾಣೆ ಪಿ.ಎಸ್.ಐ.ಕಮಲು ಅವರಿಗೆ ಠಾಣಾ ಸಿಬ್ಬಂದಿಗಳು ಹೂ ಮಳೆ ಸುರಿದು ಅಭಿನಂದನೆ ಸಲ್ಲಿಸಿ ಅದ್ದೂರಿಯಾಗಿ ಬೀಲಕ್ಕೋಡುಗೆ ಮಾಡಿದರು.1
- ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ1
- ಕೋಲಿ ಸಮಾಜದ ಯುವ ಅಟೋ ಚಾಲಕ ದತ್ತು ಖುರ್ಚಿ ಮೇಲೆ ಗಂಭೀರ ಮಾರಣಾಂತಿಕ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ1
- ಗುರುಮಠಕಲ್ ಪಟ್ಟಣದ ಎಸ್ ಎಂ ಆರ್ ಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಸುರೇಶ ಎಂ ನಾಯಕ್ ಉದ್ಘಾಟಿಸಿದರು. ಮಾದಕ ವ್ಯಸನಕ್ಕೆ 'ಬೇಡ ಬೋ'; ಉತ್ತಮ ಸ್ನೇಹವೇ ಉಜ್ವಲ ಭವಿಷ್ಯದ ದಾರಿ ಬೇಡ ಬೋ' ಸಂದೇಶದೊಂದಿಗೆ ವ್ಯಸನದ ವಿರುದ್ಧ ಪೊಲೀಸರ ಜಾಗೃತಿ ಸಮರ ಗುರುಮಠಕಲ್: ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಹಾಗೂ ವಿದ್ಯಾರ್ಥಿಗಳು ಎಂದಿಗೂ ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಯಾದಗಿರಿ ಡಿವೈಎಸ್ಪಿ ಸುರೇಶ ಎಂ. ಕರೆ ನೀಡಿದರು. ಪಟ್ಟಣದ ಎಸ್ಎಂಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ 'ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ' ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಹಾಗೂ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಉತ್ತಮ ಸ್ನೇಹ ಬಳಗವೇ ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಪೋಷಕರು ಮತ್ತು ಕುಟುಂಬದವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಸ್ನೇಹಿತರಲ್ಲಿ ಯಾರಾದರೂ ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ಅವರಿಗೆ 'ಬೇಡ ಬೋ' ಎಂದು ಮನವರಿಕೆ ಮಾಡಿಕೊಡಿ. ಅವರ ದುಶ್ಚಟಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬೇಡಿ. ಅಕ್ರಮ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ನಾಗಭೂಷಣ ಶೆಟ್ಟಿ ಮಾತನಾಡಿ, ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ಆರಂಭವಾಗುವ ಮಾದಕ ವಸ್ತುಗಳ ಸೇವನೆಯು ಬಳಿಕ ಗಂಭೀರ ವ್ಯಸನವಾಗಿ ಪರಿಣಮಿಸುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ನೆನಪಿನ ಶಕ್ತಿ ಕುಂದುತ್ತದೆ, ಓದಿನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ, ಆತಂಕ, ಖಿನ್ನತೆ, ಕೋಪ ಹಾಗೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕುಸಿಯುತ್ತದೆ ಎಂದು ಎಚ್ಚರಿಸಿದರು. ಮಾದಕ ವ್ಯಸನವು ವ್ಯಕ್ತಿಯ ಬದುಕಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ ಮತ್ತು ಸಾಮಾಜಿಕ ಗೌರವಕ್ಕೂ ಧಕ್ಕೆ ತರುತ್ತದೆ. ಶಿಕ್ಷಣ ಮಧ್ಯದಲ್ಲೇ ನಿಲ್ಲುವುದು, ಉದ್ಯೋಗಾವಕಾಶ ಕಳೆದುಕೊಳ್ಳುವುದು ಹಾಗೂ ಅಪರಾಧ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವೂ ಹೆಚ್ಚುತ್ತದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬಹುದು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ವೈದ್ಯಾಧಿಕಾರಿ ಡಾ. ನೀಲಾಂಬಿಕ, ರಾಜ್ಯಮಟ್ಟದ ತರಬೇತುದಾರ ಹಣಮಂತರಾವ್ ಗೊಂಗಲೆ, ಸಿಪಿಐ ದೌಲತ್ ಎನ್. ಕುರಿ, ಶಿಕ್ಷಣ ಸಂಯೋಜಕ ರವೀಂದ್ರ ಉಪಸ್ಥಿತರಿದ್ದರು. ಉಪನ್ಯಾಸಕಿ ಜ್ಯೋತಿಲತಾ ತಡಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಬಾಕ್ಸ್: ೦೧ ಬೇಡ ಬೋ' ಅಭಿಯಾನಕ್ಕೆ ಪೊಲೀಸರ ಒತ್ತು ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ 'ಬೇಡ ಬೋ – ವ್ಯಸನ ಬೇಡ' ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು. ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಇ-ಸಿಗರೇಟ್ ಸೇರಿದಂತೆ ಎಲ್ಲ ರೀತಿಯ ಮಾದಕ ವ್ಯಸನಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು. ವ್ಯಸನ ಬೇಡ. ಆರೋಗ್ಯಕರ ಜೀವನವೇ ನಮ್ಮ ಗುರಿ ಎಂಬ ಸಂದೇಶ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಕೋಟ್: ೦೧ ಸ್ನೇಹಿತರ ಒತ್ತಡಕ್ಕೆ ಮಣಿದು ವ್ಯಸನದ ದಾರಿ ಹಿಡಿಯಬೇಡಿ "ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು ಸೇರಿದಂತೆ ಯಾವುದೇ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು.ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. – – ಸುರೇಶ ಎಂ., ಡಿವೈಎಸ್ಪಿ, ಯಾದಗಿರಿ4
- ಹಳ್ಳದ ನೀರಲ್ಲಿ ಮೀನು-ಜಲಚರ ಮಾರಣಹೋಮ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ ಉಮೇಶ ಕೆ. ಮುದ್ನಾಳ್ ಆರೋಪ" 'ಬಾಡಿಯಾಳ ಹಳ್ಳಕ್ಕೆ ಕಡೇಚೂರ ಕೈಗಾರಿಕ ಪ್ರದೇಶದಿಂದ ವಿಷಪೂರಿತ ದ್ರವ ಸಂಗ್ರಹಣೆ' " ಕಲ್ಯಾಣ ವಾರ್ತೆ -ಸೈದಾಪೂರ ಯಾದಗಿರಿ ತಾಲೂಕಿನ ಕಡೇಚೂರ ಕೈಗಾರಿಕ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರ್ಗಳಿಂದ ವಿಷಕಾರಿತ ದ್ರವ ಪದಾರ್ಥಗಳು ಚರಂಡಿ ಮುಖಾಂತರ ಹರಿದು ಬಂದು ಬಾಡಿಯಾಳ ಗ್ರಾಮದ ಹಳ್ಳದದಿಂದ ಗೂಡೂರ ಹಳ್ಳದ ಮುಖಾಂತರ ಭೀಮಾನದಿಗೆ ಸೇರುವ ಈ ಹಳ್ಳದಲ್ಲಿ ವಾರದಿಂದೇ ಮೀನುಗಳ ಸತ್ತು ಗಬ್ಬೆದ್ದು ನಾರುತ್ತಿದ್ದು ಈ ದುರವಾಸನೆ ದಿಂದ ಗ್ರಾಮಸ್ಥರು ಸಾಂಕ್ರಾಮಿಕ ರೋಗದ ಬೀತಿಯಲ್ಲಿ ಜನ ಜಾನುವಾರು ಬದುಕುವ ಪರಸ್ಥಿತಿ ನಿರ್ಮಾಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶನಿವಾರ ಬೆಳಿಗ್ಗೆ ಬಾಡಿಯಾಳ ಗ್ರಾಮಸ್ಥರು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರಿಗೆ ದೂರವಾಣಿ ಮುಖಾಂತರ ಕರೆ ಮಾಡಿ ತಿಳಿಸಿದಾಗ ತಕ್ಷಣ ಸ್ಪಂದಿಸಿ ಬಾಡಿಯಾಳ ಗ್ರಾಮಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಕಾಲ್ನೆಡಿಗೆ ಮುಖಾಂತರ ಹಳ್ಳದ ಕಡೆ ಸಂಚಾರ ಮಾಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ವಾರದಿಂದೆ ಈ ಹಳ್ಳದಲ್ಲಿ ಮೀನು ಮತ್ತು ಜಲಚರಗಳು ಸತ್ತು ಕೊಳೆತು ದುರಗಂಧದ ವಾಸನೆ ಹೆಚ್ಚಾದರು ಸಂಬAಧಪಟ್ಟ ಅಧಿಕಾರಿಗಳು ಇಲ್ಲಿ ವರೆಗೆ ಸ್ಥಳಕ್ಕೆ ಬೇಟಿ ನೀಡುವುದಾಗÀಲಿ ಸಮಸ್ಯೆ ಬಗ್ಗೆ ಗ್ರಾಮಸ್ಥರ ಬಗ್ಗೆ ಚರ್ಚಿಸುದಾಗಲಿ ಜನ ಜಾನುವಾರಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದಾಗಲಿ ಮಾಡದಿರುವುದು ದುರದುಷ್ಟಕರ ಸಂಗತಿ ಎಂದು ದೂರರಿದ್ದರು. ಈ ಭಾಗದ ಹಳ್ಳಕ್ಕೆ ಅಂಟಿಕೊಂಡಿರುವ ಗ್ರಾಮಗಳ ಜನ ಜಾನುವಾರುಗಳಿಗೆ ಆರೋಗ್ಯದ ಮೇಲೆ ಏನಾದೂರ ಏರುಪೇರು ಆದರೆ ಅದಕ್ಕೆ ಜಿಲ್ಲಾಡಳಿತ ಸರ್ಕಾರ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಆರೋಪಿಸಿದ್ದಾರೆ. ಈ ಹಳ್ಳದ ನೀರು ಜನ ಜಾನುವಾರುಗಳಿಗೆ ದಿನ ನಿತ್ಯ ಕುಡಿಯಲು ಮತ್ತು ಜಮೀನಲ್ಲಿ ಬೆಳೆಗಳಿಗೆ ನೀರು ಉಣಿಸಲು ಈ ಹಳ್ಳದ ನೀರನ್ನೆ ಬಳಕೆ ಮಾಡುತ್ತಿದ್ದರು. ಆದರೆ ಕಡೇಚೂರ ಫ್ಯಾಕ್ಟರಿ ಪ್ರಾರಂಭವಾದಂದಿನಿಂದ ಮಳೆ ಬಂದರೆ ಸಾಕು ಚರಂಡಿ ಮುಖಾಂತರ ದ್ರವ ಪದಾರ್ಥಗಳು ಹರಿದು ಬಂದು ಈ ಹಳ್ಳಕ್ಕೆ ಸೇರಿ ವಿಷಪೂರಿತ ನೀರಾಗಿ ಮಾರ್ಪಟ್ಟು ಜನ ಜಾನುವಾರು ಕುಡಿಯಲು ಆಗದೆ ಈ ಹಳ್ಳ ಇದ್ದರು ಇಲ್ಲದಂತಾಗಿದೆ ಆದ ಕಾರಣ ಸ್ಥಳದಲ್ಲೇ ಮಿನಿ ಬ್ರಿಜ್ ಕಂ ಬ್ಯಾರೇಜಿನ ಮೇಲೆ ದೀಢೀರ್ ರೈತರ ಸಮ್ಮುಖದಲ್ಲೇ ಪ್ರತಿಭಟನೆ ನಡೆಸಿ ಜಿಲ್ಲಾಡತಕ್ಕೆ ವಾರದ ಗಡವು ನೀಡಿ ಯಾದಗಿರಿ ರಾಯಚೂರು ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದರು. *ಬಾಡಿಯಾಳ ಗ್ರಾಮದ ಹಳ್ಳಕ್ಕೆ 2013ರಲ್ಲಿ ಅಡಲಾಗಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಿದ ನಂತರ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಅದನ್ನು ನಿರ್ವಹಣೆ ಮಾಡದೇ ದಿವ್ಯ ನಿರ್ಲಕ್ಷವಹಿಸಿ ಸ್ಥಳಕ್ಕೆ ಬೇಟಿ ನೀಡಿದೇ ರೈತರಿಗೆ ಜಾಗೃತಿ ಮೂಡಿಸಿದೇ ಕಳ್ಳಾಟ ಆಡುತ್ತಿರುವ ಅಧಿಕಾರಿ ಸಿಬ್ಬಂದಿಗಳಿಗೆ ಮೇಲೆ ಜಿಲ್ಲಾಧಿಕಾರಿಗಳು ಕಾನೂನಿನ ಕಠಿಣ ಕ್ರಮ ಜರುಗಿಸಿ ಈ ಭಾಗದ ರೈತರಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು*- ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಇದೇ ಸಂಧರ್ಬದಲ್ಲಿ ವಿಶ್ವನಾಥ್ ಗಂಟೆ ಬಾಡಿಯಲ್ . ಮಲ್ಲೇಶಿ, ಗೋವಿಂದ ಡಾಕ್ಟರ್ ಶಾಂತವೀರ ಮಕ್ಥಲ್. ವೆಂಕಟೇಶ್ ಕಾವಲಿ ತಿಮ್ಮಾಜಿ .ಬಸವರಾಜ್ ಚನ್ನು ಕಳೂರ್. ಕೊತ್ತಪಲ್ಲಿ ಶಿವು ಬಾಯ್ಲ್. ದೇವೋಗಂಟಿ .ದೇವಪುತ್ರ ತಿಮ್ಮೊಜಿ. ಶರಣಪ್ಪ ಜಿನ್ಕೆರಿ ಹಣಮಂತರಾಯ ತಿಮ್ಮಾಜಿ ಶಿವಶಂಕರ ತಿಮೋಜಿ ಕಾವಲಿ ಎಲ್ಲಪ್ಪ . ರಾಮಣ್ಣ ಗೂಡೂರ್. ಶಿವಪುತ್ರ ತಿಮೋಜಿ .ಕಾಶೀನಾಥ್. ದೇವು ಚಂದಾಪುರ್ ರಾಮಣ್ಣ .ಸೂಗಪ್ಪ ಬೈನ್ ಯಂಕಪ್ಪ ತಿಮ್ಮ ಜಿ. ಯಂಕಪ್ಪ ಚಂದಾಪುರ್ ಸಿದ್ದಪ್ಪ ಶಿವಪುರ ಬನ್ನಪಾನೂರ್. ಅಶೋಕ್ ಗಣಪುರ್. ಮಂಜುನಾಥ್ ಕಾವಲಿ. ಬಸವರಾಜ್ ಕವಲಿ. ಭೀಮು ಗುಡೇಬಲ್ಲೂರ್ ಅಯ್ಯಪ್ಪ ಇರ್ಜನ್ ಬಸವರಾಜ ಇರ್ಜನ್ ಬನ್ನಪ್ಪ ನೀಡುಗುಂದಿ ಖಾಜಾ ಹುಸೇನ್ ಪೊಂಗಲ್. ಚಂದ್ರಮಣ್ಣ. ದೇವಪ್ಪ. ಬಸಪ್ಪ ಜಾನಕಿ ಗಟ್ಟಿಗರ್ ಮಲ್ಲಪ್ಪ ಜಾನಕ. ಮಲ್ಲೇಶ್ ಗಡಾದ್.ರಾಮಣ್ಣ ಅಂಗಡಿ. ಗೋಪಾಲ ಹೊಸ್ಮನಿ. ದೇವಪುತ್ರ ಗುಡೇಬಲ್ಲೂರು . ಹಣಮಂತ ಹಿರಿಜನ್ ಸೇರಿದಂತೆ ಅನೇಕ ರೈತರು ಇದ್ದರು.1
- ತಡರಾತ್ರಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಮಾಜಿ ಸಂಸದ ಉಮೇಶ್ ಜಾಧವ ಧೀಡಿರ್ ಭೇಟಿ ಪ್ರಿಯಾಂಕಖರ್ಗೆ ವಿರುದ್ಧ ವಾಗ್ದಾಳಿ ತಡರಾತ್ರಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಮಾಜಿ ಸಂಸದ ಉಮೇಶ್ ಜಾಧವ ಧೀಡಿರ್ ಭೇಟಿ ಪ್ರಿಯಾಂಕಖರ್ಗೆ ವಿರುದ್ಧ ವಾಗ್ದಾಳಿ1