ಬೆಳಗಾವಿ: ಸಂಕ್ರಾಂತಿ ನಿಮಿತ್ತ ಪ್ರತಿ ವರ್ಷದಂತೆ ಈ ಬಾರಿಯೂ ಜನವರಿ 14 ರಿಂದ 18ರ ವರಗೆ ಐದು ದಿನಗಳ ಕಾಲ ಬೆಳಗಾವಿ ತಾಲೂಕಿನ ಶ್ರೀ ಕ್ಷೇತ್ರ ಮುಕ್ತಿ ಮಠದಲ್ಲಿ ಜಾತ್ರಾ ಮಹೋತ್ಸವ ಜರುಗಲಿದೆ ಎಂದು ಶ್ರೀಕ್ಷೇತ್ರ ಮುಕ್ತಿಮಠದ ತಪೋರತ್ನ ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ತಿಳಿಸಿದರು. ಈ ಕುರಿತು ಪ್ರಕಟಣೆ ನೀಡಿದ ಅವರು,ಜನವರಿ 14ರಂದು ಬೆಳಗ್ಗೆ 10 ಗಂಟೆಗೆ ಮುಕ್ತಾಂಬಿಕಾ ಅಮ್ಮನ್ನವರ ಉತ್ಸವ ಮೂರ್ತಿ ಉಡಿತುಂಬುವ ಕಾರ್ಯ ನೆರವೇರಲಿದೆ. ಪ್ರತಿದಿನ ಸಂಜೆ ಭರತ ನಾಟ್ಯ, ಸಂಗೀತ, ಭಜನಾ ಕಾರ್ಯಕ್ರಮಗಳು ಜರುಗಲಿವೆ. ಅಲ್ಲದೇ ಜ. 18ರಂದು ಅಡ್ಡಪಲ್ಲಕ್ಕಿ ಉತ್ಸವ ಜರಗಲಿದೆ ಎಂದು ಹೇಳಿದ್ದಾರೆ. ಈ ಜಾತ್ರಾ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಪೂಜ್ಯರು, ಸಾಹಿತಿಗಳು ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಲಿದ್ದಾರೆ. ಅದರಂತೆ ಸಹಸ್ರಾರ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರ ಮುಕ್ತಿ ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ಪುನೀತರಾಗಬೇಕು ಎಂದು ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ: ಸಂಕ್ರಾಂತಿ ನಿಮಿತ್ತ ಪ್ರತಿ ವರ್ಷದಂತೆ ಈ ಬಾರಿಯೂ ಜನವರಿ 14 ರಿಂದ 18ರ ವರಗೆ ಐದು ದಿನಗಳ ಕಾಲ ಬೆಳಗಾವಿ ತಾಲೂಕಿನ ಶ್ರೀ ಕ್ಷೇತ್ರ ಮುಕ್ತಿ ಮಠದಲ್ಲಿ ಜಾತ್ರಾ ಮಹೋತ್ಸವ ಜರುಗಲಿದೆ ಎಂದು ಶ್ರೀಕ್ಷೇತ್ರ ಮುಕ್ತಿಮಠದ ತಪೋರತ್ನ ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ತಿಳಿಸಿದರು. ಈ ಕುರಿತು ಪ್ರಕಟಣೆ ನೀಡಿದ ಅವರು,ಜನವರಿ 14ರಂದು ಬೆಳಗ್ಗೆ 10 ಗಂಟೆಗೆ ಮುಕ್ತಾಂಬಿಕಾ ಅಮ್ಮನ್ನವರ ಉತ್ಸವ ಮೂರ್ತಿ ಉಡಿತುಂಬುವ ಕಾರ್ಯ ನೆರವೇರಲಿದೆ. ಪ್ರತಿದಿನ ಸಂಜೆ ಭರತ ನಾಟ್ಯ, ಸಂಗೀತ, ಭಜನಾ ಕಾರ್ಯಕ್ರಮಗಳು ಜರುಗಲಿವೆ. ಅಲ್ಲದೇ ಜ. 18ರಂದು ಅಡ್ಡಪಲ್ಲಕ್ಕಿ ಉತ್ಸವ ಜರಗಲಿದೆ ಎಂದು ಹೇಳಿದ್ದಾರೆ. ಈ ಜಾತ್ರಾ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಪೂಜ್ಯರು, ಸಾಹಿತಿಗಳು ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಲಿದ್ದಾರೆ. ಅದರಂತೆ ಸಹಸ್ರಾರ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರ ಮುಕ್ತಿ ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ಪುನೀತರಾಗಬೇಕು ಎಂದು ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದಲ್ಲಿರುವ ಇನಾಮದಾರ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಇದೇ ಜನವರಿ 07, 2026 ರಂದು ಬಾಯರ್ ಸ್ಪೋಟವಾಗಿ ಭೀಕರ ಅಪಘಾತ ಸಂಭವಿಸಿದ್ದು. ಈ ಘಟನೆಯಲ್ಲಿ 08 ಜನ ಅಮಾಯಕ ಕಾರ್ಮಿಕರು ಪ್ರಾಣ ಕಳೆದುಕೊಂಡಿರುತ್ತಾರೆ. ಈ ಘಟನೆ ಸಂಪೂರ್ಣ ಜಿಲ್ಲೆಯ ಜನರನ್ನು ದಃಖ ಹಾಗೂ ಆಘಾತಕ್ಕೆ ಒಳಪಡಿಸಿದೆ. ಮೃತರು ತಮ್ಮ ಕುಟುಂಬಗಳ ಏಕೈಕ ಆಧಾರಸ್ತಂಭರಾಗಿದ್ದು, ಅವರ ಅಕಾಲಿಕ ಮರಣದಿಂದ ಕುಟುಂಬಗಳು ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ಆಘಾತವು ಕಾರ್ಖಾನೆಯ ನಿರ್ಲಕ್ಷ್ಯ, ಸುರಕ್ಷತಾ ಕ್ರಮಗಳ ಕೊರತೆ ಹಾಗೂ ತಾಂತ್ರಿಕ ಲೋಪದಿಂದ ಸಂಭವಿಸಿರುವ ಸಾಧ್ಯತೆ ಇದ್ದು, ಈ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವುದು ಅತ್ಯಂತ ಅಗತ್ಯವಾಗಿದೆ. ಆದುದರಿಂದ, ಮಾನ್ಯರು ದಯವಿಟ್ಟು ಈ ಕೆಳಗಿನ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕೆಂದು ವಿನಂತಿಸುತ್ತೇವೆ: ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬ ಕಾರ್ಮಿಕರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ 10 ಲಕ್ಷ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ಪರಿಹಾರ ಘೋಷಿಸಿ ವಿತರಿಸಬೇಕು. ಇನಾಮದಾರ ಶುಗರ್ ಕಾರ್ಖಾನೆಯ ವಿರುದ್ಧ ಕಾನೂನಬದ್ದ ತನಿಖೆ ನಡೆಸಿ ತಪ್ಪಿಸ್ಥರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ನಡೆಯದಂತೆ ಕಾರ್ಖಾನೆಯ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಕಠಿಣ ನಿಯಮಗಳನ್ನು ಜಾರಿಗೊಳಿಸಬೇಕು. ಮೃತ ಕುಟುಂಬಗಳ ಒಬ್ಬ ಸದಸ್ಯರಿಗೆ ಉದ್ಯೋಗ ಅಥವಾ ದೀರ್ಘಕಾಲೀನ ನೆರವು ಒದಗಿಸುವ ಕುರಿತು ಸರ್ಕಾರದಿಂದ ಕ್ರಮ ಕೈಗೊಳ್ಳಬೇಕು. ಮಾನ್ಯರು ಈ ಗಂಭೀರ ವಿಷಯವನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ, ನ್ಯಾಯ ಒದಗಿಸಬೇಕೆಂದು ನಾವು ಹೃತ್ತೂರ್ವಕವಾಗಿ ವಿನಂತಿಸುತ್ತೇವೆ.3
- FLN ಕಲಿಕಾ ಹಬ್ಬವು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ತಮಗಮ ಶಾಲೆಯ ಗುಣಮಟ್ಟ ತಿಳಿದುಕೊಳ್ಳಲು ಉತ್ತಮ ವೇದಿಕೆಯಾಗಿದೆ.1
- ನೆನ್ನೆ ಮೈಸೂರಿನಲ್ಲಿ "ಬಾಯಲ್ಲಿ ಸೀಟಿ, ಕೈಯಲ್ಲಿ ಲಾಠಿ" ಹಿಡಿದು ಘರ್ಜಿಸಿದ "ಹುಲಿಯ ಹೃದಯದ ಕೆಆರ್ಎಸ್ ಸೈನಿಕರು..." #KRS #ಯುವಮಾವೇಶ 13-01-2026.1
- ಚಳಿಗಾಲದ ಹಿಮದಿಂದ ಆವೃತ್ಯವಾಗುತ್ತಿರುವ ಕೇದಾರನಾಥ ಧಾಮ.1
- ಜನವರಿ 19 ರಿಂದ 21 ರವರೆಗೆ ಬಾದಾಮಿಯಲ್ಲಿ ಚಾಲುಕ್ಯ ಉತ್ಸವ.AC ಶ್ವೇತಾ ಬೀಡಿಕರ1
- ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ… ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.1
- ಬಾಗಲಕೋಟೆ: ಜಿಲ್ಲೆಯ ಬಾದಾಮಿ ಬನಶಂಕರಿ ಜಾತ್ರೆಯಲ್ಲಿ ಹಲವು ನಾಟಕ ಕಂಪನಿಗಳು ಬಂದಿವೆ. ಎಲ್ಲ ನಾಟಕಗಳನ್ನು ವೀಕ್ಷಿಸಿ ಕಲಾವಿದರಿಗೆ ಪ್ರೋತ್ಸಾಹಿಸಿ ಎಂದು ನಯನಾ ಮನವಿ ಮಾಡಿದ್ದಾರೆ1
- ಬೆಳಗಾವಿ ಬ್ರೇಕಿಂಗ್ ಬೆಳಗಾವಿಯಲ್ಲಿ ಸಂಕ್ರಾಂತಿ ಹಬ್ಬದ ಮುನ್ನಾ ದಿನ ಭಾರೀ ಮಳೆ. ಬೆಳಗಾವಿ ಚನ್ನಮ್ಮ ವೃತ್ತ ಸೇರಿ ನಗರದಲ್ಲಿ ಅಕಾಲಿಕ ಮಳೆ. ಮಳೆಗೆ ಹೈರಾಣಾದ ಬೆಳಗಾವಿ ಜನ. ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ವರ್ಷಧಾರೆ. ಚನ್ನಮ್ಮ ವೃತ್ತ, ಬಸ್ ನಿಲ್ದಾಣ ಸೇರಿ ಹಲವು ಬಡಾವಣೆಯಲ್ಲಿ ಮಳೆ.1