Shuru
Apke Nagar Ki App…
ಕೊಣ್ಣೂರ PDO ಬಿರಾದಾರ ಅಮಾನತ್ತು ಯಶಸ್ವಿಯಾದ ಗ್ರಾಮಸ್ಥರ ಧರಣಿ ಸತ್ಯಾಗ್ರಹ
@april14news
ಕೊಣ್ಣೂರ PDO ಬಿರಾದಾರ ಅಮಾನತ್ತು ಯಶಸ್ವಿಯಾದ ಗ್ರಾಮಸ್ಥರ ಧರಣಿ ಸತ್ಯಾಗ್ರಹ
More news from ಕರ್ನಾಟಕ and nearby areas
- Post by @april14news1
- ಮಹಾನ್ ವ್ಯಕ್ತಿಗಳನ್ನು ಜಾತಿಯ ಬಣ್ಣ ಬಳಿದು ಸಂಕುಚಿತ ದೃಷ್ಟಿಯಿಂದ ನೋಡುವ ಭಾವನೆ ಹೋಗಬೇಕು. ಅಥಣಿ :ಈ ನಾಡಿನಲ್ಲಿ ಬಸವಣ್ಣನಂತ ವರು ಮಹಾನ್ ಸಮಾಜ ಪರಿವರ್ತಕರು ಈ ನಾಡಿನಲ್ಲಿ ಜನಿಸಿ ಮೇಲು, ಕೀಳು,ಹೋಗಲಾಡಿಸಲು ಯತ್ನಿಸಿದರು.ಇಂದು ಮಹಾನ್ ವ್ಯಕ್ತಿಗಳನ್ನು ಜಾತಿಯ ಬಣ್ಣ ಬಳಿದು ಸಂಕುಚಿತ ದೃಷ್ಟಿಯಿಂದ ನೋಡುವ ಭಾವನೆ ಹೋಗಬೇಕು. ಅಂಬೇಡ್ಕರ್ ಚಿಂತನೆಗಳನ್ನು ಇಂದು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಕಳವಳ ವ್ಯಕ್ತಪಡಿಸಿದರು. ಅವರು ಅಥಣಿ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಸಮಸ್ತ ತಾಲೂಕು ಆಡಳಿತದ ಸಂಯುಕ್ತ ಆಶ್ರಯದಲ್ಲಿ 135 ನೇ ಜಯಂತಿ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು.ಶಿಕ್ಷಣವು ಹಾಲಿನಂತೆ, ಅದನ್ನು ಕುಡಿದವನು ಘರ್ಜಿಸಲೇಬೇಕು" ಎಂಬ ಅವರ ಮಾತು ಇಂದಿನ ದಿನ ನಾವು ಎಷ್ಟು ಜನರಿಗೆ ಗುಣಮಟ್ಟದ ಶಿಕ್ಷಣ ನೀಡಿದ್ದೇವೆ.ಶಿಕ್ಷಣ ಮತ್ತು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಮೂಲಕ ಮಾತ್ರ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂಬುದನ್ನು ಅಂಬೇಡ್ಕರ್ ಅಂದೇ ಮನಗಂಡಿದ್ದರು. ಇಂದು ಪ್ರತಿಯೊಬ್ಬ ದಲಿತರು ಬಾಬಾಸಾಹೇಬರ ಆಶಯದಂತೆ ಶಿಕ್ಷಣ, ಸಂಘಟನೆ ಗುರಿ ಈಡೇರಿಸಲು ನೀವೆಲ್ಲ ನಿಮ್ಮ ಮಕ್ಕಳಿಗೆ ಶಿಕ್ಷಣ ನೀಡಿ.ಶೀಘ್ರ 1 ಕೋಟಿ ರೂ ಗಳ ವೆಚ್ಚದಲ್ಲಿ ಡಿಜಿಟಲ್ ಲೈಬ್ರರಿ ಆರಂಭ ಮಾಡುತ್ತೇವೆ.ಓದುವ ಮಕ್ಕಳು ಕಡಿಮೆ ವೆಚ್ಚದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಊಟ ಮಾಡಿ ಲೈಬ್ರರಿಯಲ್ಲಿ ಅಭ್ಯಾಸ ಮಾಡಲಿ. ಈಗಾಗಲೇ ನಮ್ಮ ಮಕ್ಕಳಿಗೆ ಪಶು ವೈದ್ಯಕೀಯ ಮಹಾವಿದ್ಯಾಲಯ ಆರಂಭವಾಗಿದೆ , ಕೃಷಿ ಕಾಲೇಜು ಶೀಘ್ರದಲ್ಲಿ ಆರಂಭವಾಗಲಿದೆ. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ನಾವು ಜಾರಿಗೆ ತರಬೇಕು ಎಂದು ಹೇಳಿದ ಅವರು ಬರುವ ಜೂನ್ ನಲ್ಲಿ ಕೊಟ್ಟಲಗಿ, ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಹಾಗೂ ಬಸವೇಶ್ವರಏತ ನೀರಾವರಿ ಯೋಜನೆ ಮುಖ್ಯಮಂತ್ರಿಗಳ ಮೂಲಕ ಉದ್ಘಾಟನೆ ಹಾಗೂ ಕೃಷಿ ಕಾಲೇಜು ಭೂಮಿ ಪೂಜೆ ನೇರವೆ ರಿಸಲಾಗುವುದು. ಐದು ಕಡೆಯಲ್ಲಿ 110 ಕೆ ವಿ ವಿದ್ಯುತ್ ಕೇಂದ್ರ ಆರಂಭಿಸಲಾಗುವುದು ಎಂದು ಹೇಳಿದರು. ಅಥಣಿ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರು, ಪಟ್ಟಣದಲ್ಲಿ 260 ಕಿಮಿ ಕೇಬಲ್ ಮೂಲಕ ವಿದ್ಯುತ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಬರುವ ದಿನಮಾನದಲ್ಲಿ ಅಂಬೇಡ್ಕರ್ ಅವರಿಗೆ ಗೌರವ ತರುವ ಕೆಲಸ ಮಾಡೋಣ ಎಂದು ಹೇಳಿದರು. ಈ ವೇಳೆ ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ,ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ, ಉಪನ್ಯಾಸಕರಾಗಿ ಆಗಮಿಸಿದ ಸುಭಾಸ ನಾಟಿಕಾರ, ಪಂಚಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಸಿದ್ದಾರ್ಥ ಸಿಂಗೆ ಮಾತನಾಡಿ ದರು. ಈ ವೇಳೆ ದತ್ತಾ ವಾಸ್ಟರ್, ತಹಸೀಲ್ದಾರ್ ಸಿದರಾಯ ಭೋಸಗಿ, ಪ್ರಶಾಂತ ಮುನ್ನೊಳಿ, ಶಿವಾನಂದ ಕಲ್ಲಾಪುರ, ಅಶೋಕ ಗುಡಿಮನಿ,ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು ಪರಶುರಾಮ ಪತ್ತಾರ, ಎಂ ಆರ್ ಮುಂಜೆ, ರಾವಸಾಬ ಐಹೊಳೆ, ಕಲ್ಲೇಶ ಮಡ್ಡಿ, ಬಸವರಾಜ ನಾಯಿಕ ಸೇರಿದಂತೆ ತಾಲೂಕಿನ ಸಮಸ್ತ ಜನತೆ ಉಪಸ್ಥಿತರಿದ್ದರು. ಈ ವೇಳೆಯಲ್ಲಿ ಎಸ್ ಎಸ್ ಎಲ್ ಸಿ, ಪಿ ಯು ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ಮಕ್ಕಳಿಗೆ ಸನ್ಮಾನ ಮಾಡಲಾಯಿತು.4
- ವಿಜಯಪುರದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರಾಜು ಕುರಿ ಬರ್ಬರ 6 ಸುತ್ತು ಗುಂಡು ಹಾರಿಸಿ, ಕಲ್ಲು ಎತ್ತಿಹಾಕಿ ಹತ್ಯೆ1
- ಗುಳೇದಗುಡ್ಡ: ಪಟ್ಟಣದ ಬಸವ ಕೇಂದ್ರದ ವತಿಯಿಂದ ಏ.20ರಂದು ಸ್ಥಳೀಯ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ವಿಶ್ರಾಂತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು. ಅವರು ಮಂಗಳವಾರ ಸ್ಥಳೀಯ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಪಟ್ಟಣದ ಸಮಸ್ತರು ಸೇರಿಕೊಂಡು ಸಂಭ್ರಮದಿಂದ ಆಚರಿಸಲಾಗುವುದು. ಏ.20 ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಶಿವಯೋಗ, ನಂತರ ಶರಣ ಧ್ವಜಾರೋಹಣ ಬಳಿಕ ಸಾಹಿತಿ ರವಿ ಕಂಗಳ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಅಕ್ಕಮಹಾದೇವಿ ಮಂದಿರದ ಶರಣಮ್ಮತಾಯಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಚಣ್ಣ ಕೆರೂರ, ಕಾಶಿನಾಥ ಶೆಟ್ಟರ, ದಾನಪ್ಪ ಬಂಡಿ, ಪುತ್ರಪ್ಪ ಬೀಳಗಿ, ಶ್ರೀಕಾಂತ ಗಡೇದ, ಬಸಲಿಂಗಯ್ಯ ಕಂಬಾಳಿಮಠ, ವಿಶ್ವನಾಥ ಅಂಗಡಿ, ರವಿ ಅಂಗಡಿ, ಸುರೇಶ ರಾಜನಾಳ, ಮುರುಗೇಶ ಶೇಖಾ, ಬಸವರಾಜ ಚವಡಿ, ಮಹಾದೇವಯ್ಯ ನೀಲಕಂಠಮಠ, ಚಂದ್ರಶೇಖರ ತೆಗ್ಗಿ, ಶರಣಪ್ಪ ಚಿಕ್ಕನರಗುಂದ, ಶಿವಾನಂದ ಸಿಂದಗಿ, ಸಂಗಮೇಶ ಹುಳಪಲ್ಲೇದ, ಸಂಗಣ್ಣ ಪಟ್ಟಶೆಟ್ಟಿ, ಹುಚ್ಚೇಶ ಸಿಂದಗಿ, ಬಸವರಾಜ ಬರಗುಂಡಿ, ರಾಚಪ್ಪ ಯಂಡಿಗೇರಿ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ದ್ರಾಕ್ಷಾಯಣಿ ತೆಗ್ಗಿ, ಶ್ರೀದೇವಿ ಶೇಖಾ, ವಿಶಾಲಾಕ್ಷಿ ಗಾಳಿ ಮತ್ತಿತರರು ಇದ್ದರು.1
- Post by Iranna Tarnal1
- ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು1
- ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.1
- Post by @april14news1