Shuru
Apke Nagar Ki App…
ಬೀದಿ ದೀಪ ಹಾಕುವುದಕ್ಕೆ ಜೈ ಶ್ರೀ ರಾಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸದಸ್ಯರುಗಳು ಮಾಡುತ್ತಿರುವುದು
ರಾಮಲಿಂಗೇಗೌಡ ಎನ್
ಬೀದಿ ದೀಪ ಹಾಕುವುದಕ್ಕೆ ಜೈ ಶ್ರೀ ರಾಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸದಸ್ಯರುಗಳು ಮಾಡುತ್ತಿರುವುದು
More news from ಕರ್ನಾಟಕ and nearby areas
- Post by ರಾಮಲಿಂಗೇಗೌಡ ಎನ್1
- ಕನ್ನಡ ಚಿತ್ರರಂಗ ಕೆಟ್ಟು ಕೆರ ಹಿಡಿದಿದೆ, ನಟಿ ರಾಗಿಣಿ ವರ್ತನೆಗೆ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಆಕ್ರೋಶ ಮಂಡ್ಯ-ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ನಟಿ ರಾಗಿಣಿ ವರ್ತನೆಗೆ ವಿರೋಧವ್ಯಕ್ತ ಪಡಿಸಿದ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಹೇಳಿದ್ದಿಷ್ಟು1
- ಆಗಸ್ಟ್ 15ರ ಐತಿಹಾಸಿಕ ರಕ್ತದಾನ ಶಿಬಿರ ಅಂಗವಾಗಿ ಮಳವಳ್ಳಿ ಪಟ್ಟಣದಲ್ಲಿ ಅಳವಡಿಸಿರುವ ಸ್ವಾಗತ ಕಮಾನುಗಳ ಉದ್ಘಾಟಿಸಿದ ಶ್ರೀಗಳು ಮಳವಳ್ಳಿ : ಬರುವ ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯೋ ತ್ಸದ ಅಂಗವಾಗಿ ಟೀಮ್ ಮಳವಳ್ಳಿ ಯುವಕ ಮಿತ್ರರ ಬಳಗದ ವತಿಯಿಂದ ಆಯೋಜಿ ಸಿರುವ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ಮಳವಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವ ಬೃಹತ್ ಸ್ವಾಗತ ಮಹಾದ್ವಾರ ಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶನಿವಾರ ಮಧ್ಯಾಹ್ನ 12. 30 ರ ಸಮಯದಲ್ಲಿ ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾ ಣದ ಮುಂಭಾಗ ಮೈಸೂರು ರಸ್ತೆಯಲ್ಲಿ ಅಳವಡಿಸಿರುವ ರಕ್ತದಾನಿಗಳ ಸ್ವಾಗತ ಮಹಾ ದ್ವಾರವನ್ನು ಕುಂದೂರು ರಸ ಸಿದ್ದೇಶ್ವರ ಮಠದ ಶ್ರೀ ನಂಜುಂ ಡಸ್ವಾಮಿ ಅವರು ಉದ್ಘಾಟಿಸಿ ದರೆ ಇದೇ ರಸ್ತೆಯ ಇನ್ನೊಂದು ದ್ವಾರದ ಕಮಾನನ್ನು ರಾಜ ಸ್ತಾನ್ ಸಮಾಜದ ಮೋಹನ್ ಲಾಲ್ ಉದ್ಘಾಟಿಸಿದರು. ಪೇಟೆ ವೃತ್ತದ ಬಳಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ಅಳವಡಿಸಿ ರುವ ಸ್ವಾಗತ ಕಮಾನನ್ನು ರಾಜಸ್ತಾನ್ ಸಮಾಜದ ಮುಖಂಡರಾದ ಮದನ್ ಲಾಲ್ ಉದ್ಘಾಟಿಸಿದರೆ ಇನ್ನೊಂದು ಬದಿಯ ಕಮಾನನ್ನು ಟಿಎಪಿಸಿ ಎಂಎಸ್ ಅಧ್ಯಕ್ಷರಾದ ದ್ಯಾಪೇ ಗೌಡ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನಂಜುಂಡ ಸ್ವಾಮಿ ಅವರು ರಕ್ತದಾನ ಮಹಾದಾನವಾಗಿದ್ದು ಇಂತಹದೊಂದು ರಕ್ತದಾನ ಶಿಬಿರವನ್ನು ಮಳವಳ್ಳಿಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಐತಿಹಾಸಿಕ ಎಂದು ಪ್ರಶಂಸಿಸಿ ದರು ಪಕ್ಷಾತೀತವಾಗಿ ಜಾತ್ಯಾತೀ ತವಾಗಿ ಆಯೋಜಿಸಿರುವು ಟೀಮ್ ಮಳವಳ್ಳಿಯ ಎಲ್ಲಾ ಸದ್ಬಕ್ತರ ಈ ಕಾರ್ಯ ಮಳವ ಳ್ಳಿಯ ಕೀರ್ತಿಪತಾಕೆ ನಾಡಿನೆ ಲ್ಲಡೆ ಹರಡುವಂತೆ ಮಾಡಿದೆ ಎಂದು ಶ್ಲಾಘಿಸಿದ ಶ್ರೀಗಳು ಈ ಶಿಬಿರ ಯಶಸ್ವಿಯಾಗಲಿ ಇಂತಕ ಮಹತ್ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ಟೀಮ್ ಮಳವಳ್ಳಿಯ ಎಲ್ಲಾ ಭಕ್ತರಿಗೂ ಭಗವಂತ ನೀಡಲಿ ಎಂದು ಶುಭ ಹಾರೈಸಿದರು. ಪುರಸಭೆಯ ಮಾಜಿ ಉಪಾಧ್ಯಕ್ಷ ನಂದ ಕುಮಾರ್, ನೀವೃತ್ತ ಸೈನಿಕ ಸುರೇಶ್, ಮುಖಂಡರಾದ ಎಟಿಎಂ ಸ್ವಾಮಿ, ಗುಂಡ, ಬದ್ರಿ ಸೇರಿ ಹಲವಾರು ಮುಖಂಡರ ಜೊತೆ ಟೀಮ್ ಮಳವಳ್ಳಿಯ ಹಲವಾರು ಕಾರ್ಯಕರ್ತರು ಈ ವೇಳೆ ಹಾಜರಿದ್ದರು.1
- ತಮಿಳುನಾಡಿ ಗೆ ನೀರು ಬಿಡದಂತೆ ಸರ್ಕಾರ ತೀರ್ಮಾನ ಗೊಳ್ಳುವಂತೆ ಕಾರ್ಯಕರ್ತರಿಂದ ರಸ್ತೆ ತಡೆ ಪ್ರತಿಭಟನೆ ಮಳವಳ್ಳಿ: ತಮಿಳುನಾಡಿಗೆ ಕಾವೇರಿ ನೀರು ನಿರ್ವಾಹಣ ಮಂಡಳಿ ಆದೇಶದಂತೆ ಕಾವೇರಿನೀರು ಬಿಡಲು ಹೊರಟಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮೂಲಸಂಘಟನೆಯ ಕಾರ್ಯಕರ್ತರು ಮಳವಳ್ಳಿ ತಾಲ್ಲೂಕಿನ ಕಾಗೇಪುರ ಗೇಟ್ ಬಳಿ ರಸ್ತೆತಡೆ ಹಾಗೂ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ದೇವಿಪುರಬಸವರಾಜು ನೇತೃತ್ವದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಮಲಿಂಗೇಗೌಡ ಮಾತನಾಡಿ, ಒಂದು ದಿನಕ್ಕೆ 3500 ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಾಹಣಾ ಮಂಡಳಿ ಆದೇಶ ಮಾಡಿದ್ದು, ರಾಜ್ಯ ಸರ್ಕಾರ ಆ ಆದೇಶವನ್ನು ತಿರಸ್ಕಾರ ಮಾಡಬೇಕು. ನಾಳೆ ವಿಧಾನಸಭೆ ಯಲ್ಲಿ ಸರ್ವಸದಸ್ಯರ ಸಭೆಯಲ್ಲಿ ರಾಜ್ಯ ಸರ್ಕಾರ ಕರೆದಿದ್ದು, ಎಲ್ಲಾ ಶಾಸಕರು ತಮಿಳುನಾಡಿಗೆ ನೀರು ಬಿಡದಂತೆ ತೀರ್ಮಾನ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ಇನ್ನೂ ಇದೇ ವೇಳೆ ತಾಲ್ಲೂಕು ಅಧ್ಯಕ್ಷ ದೇವಿಪುರ ಬಸವರಾಜು ಮಾತನಾಡಿ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗೆ ಕುಡಿಯಲು ನೀರಿಲ್ಲ , ತಮಿಳುನಾಡಿಗೆ ನೀರು ಬಿಡಬೇಕಂತೆ ಇದು ಸಾಧ್ಯವಿಲ್ಲ , ನೀರು ಬಿಟ್ಟರೆ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ತಾಲ್ಲೂಕು ಅಧ್ಯಕ್ಷ ದೇವಿಪುರ ಬಸವರಾಜು, ಜಿಲ್ಲಾ ಉಪಾಧ್ಯಕ್ಷ ರಾಮಲಿಂಗೇಗೌಡ, ಸೋ.ಶಿ ಪ್ರಕಾಶ, ಪ್ರಭುಲಿಂಗು, ಶಿವನಂಜು, ಭೂಮಿಗೌಡ, ಚೌಡೇಗೌಡ, ಮಲ್ಲೇಶ್, ಗಿರೀಶ್, ಹನುಮಂತ, ಕೃಷ್ಣ, ಲಿಂಗಪಟ್ಟಣ ಬಸವರಾಜು, ಮಹೇಶ್ ಸೇರಿದಂತೆ ಹಲವರು ಇದ್ದರು.1
- ಕುಣಿಗಲ್ ತಾಲೂಕು ಯಡಿಯೂರು ಹೋಬಳಿ ಗ್ರಾಮಗಳಿಗೆ ಸುಮಾರು 6.50 ಕೋಟಿ ರೂ ಅಧಿಕ ಅಭಿವೃದ್ಧಿ ಕಾಮಗಾರಿ ನಾಗಸಂದ್ರ ಹುಲಿವಾನ ಅಕ್ಕಿ ಮರಿಪಾಳ್ಯ ಹೆಡ್ಡಿಗೆರೆ ಜೆಡ್ಡಿಗೆರೆ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಘಟಕ ಮತ್ತು ರಸ್ತೆ ಚರಂಡಿ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿದರು1
- ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.1
- ಮಂಡ್ಯ ಬ್ರಿಡ್ಜ್ ಹದಗೆಟ್ಟಿದೆ ಸರಿ ಮಾಡಿಸಿಕೊಡಿ ಅಂತ ಸಾಮಾಜಿಕ ಜಾಲ ತಾಣದಲ್ಲಿ ಶಾಸಕರಿಗೆ ಆಗ್ರಹಿಸಿದ ಯುವಕ ವಿಡಿಯೋ ವೈರಲ್ ಮಂಡ್ಯ - ಬ್ರಿಡ್ಜ್ ಹದಗೆಟ್ಟಿದೆ ಸರಿ ಮಾಡಿಸಿಕೊಡಿ ಅಂತ ಸಾಮಾಜಿಕ ಜಾಲ ತಾಣದಲ್ಲಿ ಆಗ್ರಹಿಸಿದ ಯುವಕ ವಿಡಿಯೋ ವೈರಲ್, ಮಂಡ್ಯದ ಅರಕೇಶ್ವರ ಸ್ವಾಮಿ ದೇವಾಲಯದ ರಸ್ತೆಯಲ್ಲಿಬರುವ ಬ್ರಿಡ್ಜ್ ಹಳ್ಳ ಬಿದ್ದಿದೆ ಈ ರಸ್ತೆಯಲ್ಲಿ ಹಲವಾರು ವಾಹನ ಓಡಾಡುತ್ತಿದ್ದು ಶಾಲಾವಾಹನಗಳು ಹೆಚ್ಚಾಗಿ ಒಡಾಡುತ್ತಿದ್ದು ಅತಾಚುರ್ಯ ವಾಗುವ ಮೊದಲು ಸರಿಪಡಿಸಿ ಅಂತ ಯುವಕ ಮನವಿ ಮಾಡಿದ್ದಾನೆ.1
- ಕೊಳ್ಳೇಗಾಲ. ಪಟ್ಟಣದ ಪುಟ್ ಬಾತ್ ತೆರವುಗೊಳಿಸುವ ವೇಳೆ ವ್ಯಾಪಾರಿಗಳಿಂದ ಹೈಡ್ರಾಮಾ ನಡೆದಿದ್ದು, ಟಿ.ವಿ ವರದಿಗಾರನ ಮೇಲೆ ಪೆಟ್ರೋಲ್ ಸುರಿದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಇಂದು ಜರುಗಿದೆ. ಪಟ್ಟಣದ ಕುಮಾರ ಎಲೆಕ್ಟ್ರಿಕಲ್ ರಸ್ತೆ, ಚಿನ್ನಬೆಳ್ಳಿ ರಸ್ತೆ, ಎಸ್.ಟಿ ರಸ್ತೆ, ರಾಜ್ ಕುಮಾರ್ ರಸ್ತೆ, ಬಸ್ತೀಪುರ ರಸ್ತೆ ಸೇರಿದಂತೆ ಇನ್ನೀತರ ಕಡೆಗಳಲ್ಲಿ ಪುಟ್ಬಾತ್ ತೆರವುಗೊಳಿಸಿದರು. ಸುಪ್ರೀಂ ಕೋರ್ಟ್ ಆದೇಶದಂತೆ ಪುಟ್ಬಾತ್ ಅಂಗಡಿ ಮಳಿಗೆಗಳನ್ನು ನಗರಸಭೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ತೆರವು ಮಾಡಲು ಅಧಿಕಾರಿಗಳ ಬಂದ ವೇಳೆ ಅಂಗಡಿ ಮಾಲೀಕರು ತಮ್ಮ ಅಂಗಡಿಗಳ ಮುಂಭಾಗದಲ್ಲಿ ಒತ್ತುವರಿಯನ್ನು ತೆರವು ಮಾಡಿಕೊಂಡರು. ಡಾ.ರಾಜಕುಮಾರ್ ರಸ್ತೆಯಿಂದ ಹಳೇ ಕುರುಬರ ಬೀದಿಗೆ ತೆರಳುವ ರಸ್ತೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಪುಟ್ಬಾತ್ ಅಂಗಡಿಗಳನ್ನು ತೆರವು ಮಾಡಲು ಅಧಿಕಾರಿಗಳು ಬಂದಾಗ ಅಲ್ಲಿನ್ ನ್ಯೂ ಮದೀನ ಚಿಕನ್ ಸೆಂಟರ್ ಮಾಲೀಕ ಸೈಯದ್ ಆಸೀಫ್ ಎಂಬಾತ ನನ್ನ ಅಂಗಡಿ ತೆರವು ಮಾಡಿದ್ದದೇ ನಾನು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪೆಟ್ರೋಲ್ ಕೈಯಲ್ಲಿ ಹಿಡಿದು ಬೆದರಿಕೆ ಹೊಡುತ್ತಿದ್ದನು. ಈ ವೇಳೆ ನ್ಯೂಸ್ ಗಾಗಿ ಬಂದಿದ್ದ ವರದಿಗಾರ ಬಸಂತ್ ಕುಮಾರ್ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಬಂದ ಚಿಕನ್ ಅಂಗಡಿಯ ಸೈಯದ್ ಆಸೀಫ್ ಎನುವನ್ನು ಪಕ್ಕದಲ್ಲಿದ್ದ ಅಧಿಕಾರಿಗಳು ಹಾಗೂ ಪೊಲೀಸರು ಹಿಡಿದುಕೊಂಡಾಗ ಬಸಂತ್ ಕುಮಾರ್ ಮೇಲೆ ಹಾಗೂ ಆಹಾರ ನಿರೀಕ್ಷಕ ಚೇತನ್, ಪೌರಯುಕ್ತರು ನಟರಾಜು ಹಾಗೂ ಇನ್ನೀತರ ಮೇಲೆ ಪೆಟ್ರೋಲ್ ಸುರಿದಿತ್ತು. ನಂತರ ಪೊಲೀಸರು ಆಸೀಫ್ ನನ್ನು ವಶಕ್ಕೆ ಪಡೆದು, ಪೆಟ್ರೋಲ್ ಬಾಟಲ್ ನನ್ನು ಜಪ್ತಿ ಮಾಡಿದರು. ಮುಂದುವರಿದು, ಕಾರ್ಯಾಚರಣೆ ಮಾಡಲು ಜೆಸಿಬಿ ಮಿಷನ್ ರಭಸವಾಗಿ ಬಂದಾಗ ಚಿಕನ್ ಅಂಗಡಿ ಮುಂದೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಾಗ ಒಂದು ಕ್ಷಣ ಕಂಬ ಅಲುಗಾಡಿ ನೆರೆದಿದ್ದ ಜನರು ಭಯ ಬೀಳುವಂತಾಯಿತು. ಸದ್ಯಕ್ಕೆ ಯಾವುದೇ ಹಾನಿಯಾಗದೇ ವಿದ್ಯುತ್ ಕಂಬ ಸಡಿಲಗೊಂಡಿತ್ತು. ನಂತರ ಹಳೇ ಕುರುಬರ ಬೀದಿಗೆ ತೆರಳು ಮಾರ್ಗದ ಅಂಗಡಿಗಳ ಮುಂದಿನ ಒತ್ತುವರಿ ತೆರವು ಮಾಡಿ, ಕಾರ್ಯಾಚರಣೆಯನ್ನು ಮುಂದುವರೆಸಿದರು. ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಪತ್ರಕರ್ತರ ಜೊತೆ ಆಗಮಿಸಿದ್ದ ಬಸಂತ್ ಕುಮಾರ್ ರನ್ನು ದೂರು ನೀಡದಂತೆ ಮುಸ್ಲಿಂ ಮುಖಂಡರು ಮನವೋಲಿಸಿ ಆಸೀಫ್ ರನ್ನು ವಾಪಸ್ಸು ಕರೆದ್ಯೋದರು. ಈ ಕಾರ್ಯಾಚರಣೆಯಲ್ಲಿ ನಗರಸಭೆ ಪೌರಯುಕ್ತರು ನಟರಾಜು, ಎಇಇ ಪ್ರಸನ್ನ, ಲಕ್ಷ್ಮೀ, ಮ್ಯಾನೇಜರ್ ಲಿಂಗರಾಜು, ಆಹಾರ ನಿರೀಕ್ಷಕ ಚೇತನ್, ವಿಭೂತಿ ಸೇರಿದಂತೆ ಇತರರು ಇದ್ದರು.2