Shuru
Apke Nagar Ki App…
ಇಳಕಲ್ ನಲ್ಲಿ ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ ಬಸ್ ನಿಲ್ದಾಣದ ಹತ್ತಿರ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ನಿಮಿತ್ತವಾಗಿ ಸತತ 10ನೇ ವರ್ಷದಿಂದ ಸೇವೆ ಮಾಡುತ್ತಿರುವ ನಗರದ ಸಮಾಜಸೇವಕ ರಿಯಾಜ್ ಮಕಾಂದರ ಸೇವೆಯ ಕುಡಿಯುವ ನೀರಿನ ಅರವಟ್ಟಿಗೆಗೆ ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.
ಶರಣಗೌಡ ಕಂದಕೂರ
ಇಳಕಲ್ ನಲ್ಲಿ ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ ಬಸ್ ನಿಲ್ದಾಣದ ಹತ್ತಿರ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ನಿಮಿತ್ತವಾಗಿ ಸತತ 10ನೇ ವರ್ಷದಿಂದ ಸೇವೆ ಮಾಡುತ್ತಿರುವ ನಗರದ ಸಮಾಜಸೇವಕ ರಿಯಾಜ್ ಮಕಾಂದರ ಸೇವೆಯ ಕುಡಿಯುವ ನೀರಿನ ಅರವಟ್ಟಿಗೆಗೆ ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.
More news from ಕರ್ನಾಟಕ and nearby areas
- ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.1
- ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು. ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.1
- कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।1
- Post by Iranna Tarnal1
- ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು1
- ಗದಗ ಏಪ್ರಿಲ್ 14: ಡಾ. ಅಂಬೇಡ್ಕರ್ ಹಾಗೂ ಡಾ. ಬಾಬುಜಿ ಅವರ ಜೀವನದ ತತ್ವ-ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಇವರ ಜೀವನವೇ ಸ್ಪಷ್ಟಪಡಿಸುತ್ತದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು. ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಗದಗ-ಬೆಟಗೇರಿ ಇವರ ಸಂಯುಕ್ತ ಆಶ್ರಯದಲ್ಲಿ ಗದಗ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಡಾ. ಅಂಬೇಡ್ಕರ್ ಅವರು ಬಡವರ ಹಾಗೂ ಹಿಂದುಳಿದ ವರ್ಗಗಳ ಉನ್ನತಿಗಾಗಿ ತಮ್ಮ ಸಂಪೂರ್ಣ ಜೀವನವನ್ನು ಅರ್ಪಿಸಿದ್ದು, ಸಮಾನತೆ ಆಧಾರಿತ ಸಮಾಜ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಭಾರತೀಯ ಸಂವಿಧಾನವನ್ನು ರೂಪಿಸಿ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ಕಲ್ಪಿಸಿದ ಮಹತ್ವದ ವ್ಯಕ್ತಿತ್ವ ಅವರು ಎಂದು ಪ್ರಶಂಸಿಸಿದರು. ಅರ್ಥಶಾಸ್ತ್ರ, ಇತಿಹಾಸ ಹಾಗೂ ಮನಶಾಸ್ತ್ರ ಸೇರಿದಂತೆ ಹಲವು ವಿಷಯಗಳಲ್ಲಿ ಅಪಾರ ಜ್ಞಾನ ಹೊಂದಿದ್ದ ಡಾ. ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಸಮಿತಿಯ ಮುಖ್ಯಸ್ಥರಾಗಿ ನೇಮಿಸಲಾಗಿತ್ತು. ಜಾತಿ ಪದ್ಧತಿಯನ್ನು ನಿರ್ಮೂಲಗೊಳಿಸಿ ಸಮಾನತೆ ಸ್ಥಾಪನೆಗೆ ಅವರು ಕೈಗೊಂಡ ಪ್ರಯತ್ನಗಳು ಶ್ಲಾಘನೀಯ ಎಂದು ಹೇಳಿದರು. ಅಂಬೇಡ್ಕರ್ ಅವರ ಸೇವೆಯನ್ನು ಮನಗಂಡು ಅಂದಿನ ಪ್ರಧಾನಮಂತ್ರಿ ವಿ.ಪಿ. ಸಿಂಗ್ ಅವರು ಅವರಿಗೆ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು. ಇಂದಿನ ಪ್ರಧಾನಿ ನರೇಂದ್ರ ಮೊದಿ ಅವರ ಸರ್ಕಾರವೂ ಅವರ ಸ್ಮರಣಾರ್ಥ ಪಂಚತೀರ್ಥ ಕ್ಷೇತ್ರಗಳನ್ನು ಘೋಷಿಸಿ ಅಭಿವೃದ್ಧಿಪಡಿಸಿರುವುದನ್ನು ಅವರು ಉಲ್ಲೇಖಿಸಿದರು. ಸಂವಿಧಾನದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಅಳವಡಿಸಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರಿಗೆ ವಿವಿಧ ಕ್ಷೇತ್ರಗಳಲ್ಲಿ ಅವಕಾಶ ಕಲ್ಪಿಸಿದ ಮಹಾನ್ ನಾಯಕ ಡಾ. ಅಂಬೇಡ್ಕರ್ ಎಂದು ಹೇಳಿದರು. ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಎಂಬ ಅವರ ಮೂರು ಸೂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಬಲ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕ ಎಸ್ ವಿ ಸಂಕನೂರ ಕರೆ ನೀಡಿದರು. ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರು, ರಾಷ್ಟ್ರ ಪ್ರಶಸ್ತಿ ವಿಜೇತರು ಹಾಗೂ ಜಿಲ್ಲಾ ಸಫಾಯಿ ಕರ್ಮಚಾರಿ ಸಮಿತಿ ಸದಸ್ಯರಾದ ಎಸ್.ಎನ್. ಬಳ್ಳಾರಿ ಅವರು ಉಪನ್ಯಾಸ ನೀಡುತ್ತಾ, ಡಾ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರು ಬಾಲ್ಯದಿಂದಲೇ ಅಸ್ಪೃಶ್ಯತೆ ವಿರುದ್ಧ ಹೋರಾಟ ನಡೆಸಿದ ಮಹಾನ್ ವ್ಯಕ್ತಿ ಎಂದು ಹೇಳಿದರು. ತಮ್ಮ ಬಾಲ್ಯದ ನೋವು ಮತ್ತು ಅನುಭವಗಳನ್ನು ಸಮಾಜದ ಇತರರು ಅನುಭವಿಸಬಾರದು ಎಂಬ ದೃಢ ಸಂಕಲ್ಪದಿಂದ ಅವರು ಸಮಾನತೆಗಾಗಿ ಜೀವನಪರ್ಯಂತ ಹಗಲಿರುಳು ಹೋರಾಡಿದರು ಎಂದು ವಿವರಿಸಿದರು. ಅಂಬೇಡ್ಕರ್ ಅವರ ತಂದೆಯ ಪ್ರೇರಣೆ ಅವರ ಜೀವನದಲ್ಲಿ ಮಹತ್ವದ ತಿರುವಾಗಿದ್ದು, ಬಾಲ್ಯದಲ್ಲೇ ದೃಢನಿಶ್ಚಯ ಬೆಳೆಸಲು ಕಾರಣವಾಯಿತು. ಕಷ್ಟಕರ ಪರಿಸ್ಥಿತಿಗಳ ನಡುವೆಯೂ ಶಿಕ್ಷಣದ ಮೂಲಕ ಅವರು ಎತ್ತರಕ್ಕೇರಿದ ರೀತಿಯನ್ನು ವಿವರಿಸಿ, ಅಸ್ಪೃಶ್ಯತೆ ವಿರುದ್ಧ ಅವರ ನಿರಂತರ ಹೋರಾಟವನ್ನು ಅವರು ಮನದಟ್ಟು ಮಾಡಿದರು. ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ನೀಡಿದ್ದು, ಬಡವರು ಮತ್ತು ಅಸ್ಪೃಶ್ಯರು ಸಹ ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಿದೆ. ಇಂತಹ ಅನೇಕ ಉದಾಹರಣೆಗಳನ್ನು ಇಂದಿನ ಸಮಾಜದಲ್ಲೇ ಕಾಣಬಹುದು ಎಂದು ಹೇಳಿದರು. ಎಚ್.ಸಿ.ಇ.ಎಸ್. ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಪ್ರೊ. ಡಿ.ಜಿ. ಜೋಗಣ್ಣನವರ ಅವರು ಡಾ. ಬಾಬು ಜಗಜೀವನ ರಾಮ್ ಅವರ ಕುರಿತು ಮಾತನಾಡಿ, ಅವರು ಮೃದು ಸ್ವಭಾವದವರಾಗಿದ್ದು, ಅಪ್ರತಿಮ ಹೋರಾಟಗಾರರಾಗಿದ್ದರು ಎಂದು ತಿಳಿಸಿದರು. ಅಂಬೇಡ್ಕರ್ ಹಾಗೂ ಬಾಬುಜಿ ಇಬ್ಬರೂ ಅಸ್ಪೃಶ್ಯತೆ ನಿವಾರಣೆಗೆ ನಮಗೆಲ್ಲ ಸ್ಪೂರ್ತಿದಾಯಕ ವ್ಯಕ್ತಿತ್ವಗಳಾಗಿದ್ದಾರೆ ಎಂದರು. ಡಾ. ಬಾಬುಜಿ ಅವರ ಬಾಲ್ಯ ಜೀವನ ಕಷ್ಟಕರವಾಗಿದ್ದು, ತಾಯಿಯನ್ನು ಕಳೆದುಕೊಂಡು ಸಂಕಷ್ಟಗಳಲ್ಲಿ ಬೆಳೆದ ಅವರು ಕಠಿಣ ಪರಿಶ್ರಮದಿಂದ ದೇಶದ ಉನ್ನತ ಸ್ಥಾನಗಳಿಗೆ ಏರಿದರು. ಅವರ ಜೀವನದ ವಿವಿಧ ಹಂತಗಳನ್ನು ವಿವರಿಸಿ, ಸಮಾಜದಲ್ಲಿ ಮಾನವೀಯತೆ ಬೆಳೆಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಇಂದಿನ ಸಮಾಜದಲ್ಲಿಯೂ ಅಸ್ಪೃಶ್ಯತೆ ಇನ್ನೂ ಅಸ್ತಿತ್ವದಲ್ಲಿದ್ದು, ಪ್ರತಿಯೊಬ್ಬರೂ ಮನುಷ್ಯರನ್ನು ಮನುಷ್ಯರಂತೆ ಕಾಣಬೇಕು ಎಂಬ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಜಾತಿ ವ್ಯವಸ್ಥೆ ಇರುವವರೆಗೆ ಮೀಸಲಾತಿ ಮುಂದುವರಿಯಬೇಕು ಎಂಬುದನ್ನು ಡಾ. ಬಾಬು ಜಗಜೀವನ ರಾಮ್ ಅವರು ಒತ್ತಿ ಹೇಳಿದ್ದರು ಎಂದು ಉಲ್ಲೇಖಿಸಿದರು. ಕಾನೂನು ವಿದ್ಯಾರ್ಥಿ ಮಣಿಕಂಠ ಹಾದಿಮನಿ ಅವರು ಸಹ ವಿಶೇಷ ಉಪನ್ಯಾಸ ನೀಡಿ, ಡಾ. ಬಿ ಅಂಬೇಡ್ಕರ್ ಅವರು ದಲಿತ ನಾಯಕಕನಲ್ಲ ಅವರೋಬ್ಬ ಅಪ್ರತಿಮ ವಿಶ್ವನಾಯಕ ಎಂದು ಬಣ್ಣಿಸಿದರು. ಡಾ. ಅಂಬೇಡ್ಕರ್ ಅವರ ಕುರಿತಾದ ಪ್ರಭಂದ ಸಂಕಲನವನ್ನು ವಿದಾನ ಪರಿಷತ್ ಶಾಸಕ ಎಸ್ ವಿ ಸಂಕನೂರ ಸೇರಿದಂತೆ ವೇದಿಕೆಯಲ್ಲಿರುವ ಅತಿಥಿಗಳು ಬಿಡುಗಡೆ ಮಾಡಿದರು. ನಂತರ ಉತ್ತಮ ಕಾರ್ಯನಿರ್ಹಣೆ ಮಾಡಿದ ಪೌರಕಾರ್ಮಿಕರಿಗೆ ಸನ್ಮಾನಿಸಿದರು. ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸಂವಿಧಾನ ಪ್ರಸ್ತಾವನೆ ಬೋಧಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಡಾ.ನಂದಾ ಹಣಬರಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಪ್ರೊ.ಬಾಹುಬಲಿ ಜೈನರ ನಿರ್ವಹಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ಪ್ರಮುಖರಾದ ಕೃಷ್ಣ ಗೌಡ ಪಾಟೀಲ, ಬಸವಾರಾಜ ಕಡೆಮನಿ, ಕೃಷ್ಣಾ ಪರಾಪೂರ, ಅಶೋಕ ಕುಡತಿನಿ, ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎನ್.ಶ್ರೀಧರ್ , ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ರೋಹನ್ ಜಗದೀಶ್, ಜಿಪಂ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ ಆರ್, ಸಹಾಯಕ ಆಯುಕ್ತ ಗಂಗಪ್ಪ ಎಂ, ತಹಶಿಲ್ದಾರರ ಶ್ರೀನಿವಾಸ್ ಮೂರ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಡಾ.ನಂದಾ ಹಣಬರಟ್ಟಿ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ ಎಸ್ ಪವಾರ ಸೇರಿದಂತೆ ಇತರರು ಹಾಜರಿದ್ದರು. *ಮೆರವಣಿಗೆ* : ಡಾ. ಅಂಬೇಡ್ಕರ್ ಹಾಗೂ ಡಾ. ಬಾಬುಜೀ ಅವರ ಭಾವಚಿತ್ರಗಳ ಮೆರವಣಿಗೆಯು ಗದಗ ನಗರಸಭೆ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗೌರವ ಮಾಲಾರ್ಪಣೆಯೊಂದಿಗೆ ಪ್ರಾರಂಭಗೊಂಡು ಮಹಾತ್ಮಾ ಗಾಂಧಿ ಸರ್ಕಲ್, ಮಹೇಂದ್ರಕರ್ ಸರ್ಕಲ್ , ಟಾಂಗಾ ಕೂಟ್ , ಬಸವೇಶ್ವರ ಸರ್ಕಲ್ , ಗುಜ್ಜರಬಸ್ತಿ , ಮುಳಗುಂದನಾಕಾ ಮಾರ್ಗವಾಗಿ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಬಂದು ತಲುಪಿತು.1
- Post by Onlinetv24x71
- ಬಸ್ ನಿಲ್ದಾಣದ ಹತ್ತಿರ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ನಿಮಿತ್ತವಾಗಿ ಸತತ 10ನೇ ವರ್ಷದಿಂದ ಸೇವೆ ಮಾಡುತ್ತಿರುವ ನಗರದ ಸಮಾಜಸೇವಕ ರಿಯಾಜ್ ಮಕಾಂದರ ಸೇವೆಯ ಕುಡಿಯುವ ನೀರಿನ ಅರವಟ್ಟಿಗೆಗೆ ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.1