ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿದ್ಯ ನೀಡಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ ಗುಳೇದಗುಡ್ಡ: ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಿದಾಗ ಮಾತ್ರ ಯಾವುದೇ ಸಮಾಜ ಅಭಿವೃದ್ಧಿಯಾಗಲು ಸಾಧ್ಯ. ನಾವು ಏನೇ ಕೆಲಸ ಮಾಡುತ್ತಿರಲಿ ಮಕ್ಕಳಿಗೆ ಶಿಕ್ಷಣ ನೀಡಬೇಕು. ಸರ್ಕಾರ ಅಲ್ಪಸಂಖ್ಯಾತರಿಗೆ ಸಾಕಷ್ಟು ಸೌಲಭ್ಯ ನೀಡುತ್ತಿದ್ದು ಅದನ್ನು ಸದುಪಯೋಗ ಪಡಿಸಿಕೊಂಡು ಮುಸ್ಲಿಂ ಸಮಾಜಬಾಂಧವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು. ಅವರು ಮಂಗಳವಾರ ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆವತಿಯಿಂದ ಅಲ್ಪಸಂಖ್ಯಾತ ಸಮುದಾಯದವರಿಗೆ ನಿರ್ಮಿಸುತ್ತಿರುವ ಸಾಂಸ್ಕೃತಿಕ ಭವನದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ವಿಶೇಷ ಸಾಧನೆ ಮಾಡಿದ ಸಮಾಜದ ಮಕ್ಕಳನ್ನು ಗುರುತಿಸಿ ಸನ್ಮಾನಿಸುವುದರಿಂದ ಉಳಿದ ಮಕ್ಕಳಿಗೆ ಅದು ಸ್ಪೂರ್ತಿ ತುಂಬುತ್ತದೆ. ತಾವೂ ಏನನ್ನಾದರೂ ಸಾಧಿಸುವ ಛಲ ಮೂಡುತ್ತದೆ ಎಂದರು. ಬಾದಾಮಿ ಮತಕ್ಷೇತ್ರದ ಬಾದಾಮಿ ಹಾಗೂ ಕೆರೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಈದ್ಗಾ, ಖಬರಸ್ಥಾನಗಳನ್ನು ಅತ್ಯಂತ ವಿಶಿಷ್ಟವಾಗಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಮುಂದಿನ ಹಂತದಲ್ಲಿ ಗುಳೇದಗುಡ್ಡದ ಈದ್ಗಾ, ಖಬರಸ್ಥಾನಗಳನ್ನು ಅಭಿವೃದ್ಧಿ ಪಡಿಸಲು ಅನುದಾನ ತರುತ್ತೇನೆ. ಅದೇ ರೀತಿ ಹಿಂದೂ ಸ್ಮಶಾನದ ಅಭಿವೃದ್ಧಿಗೂ ಯೋಜನೆ ಹಮ್ಮಿಕೊಳ್ಳಲಾಗಿದೆ. ಗುಳೇದಗುಡ್ಡದ ಸರ್ವಾಂಗೀಣ ಅಭಿವೃದ್ಧಿಗಾಗಿ ಈಗಾಗಲೇ 55 ಕೋಟಿ ರೂ. ಅನುದಾನ ತಂದಿದ್ದೇನೆ ಎಂದರು. ಸಾನಿಧ್ಯ ವಹಿಸಿದ್ದ ಹಜರತ್ ಅಲ್ಲಮಾ ಮೌಲಾನಾ ಮುಪ್ತಿ ಮಹಮ್ಮದ ಅಬೂಬಕರ ಅಶ್ರಫಿ ಖಾದ್ರಿ ಸಾಹೇಬ ಕಿಬಲ್ಲಾ ಆಶೀರ್ವಚನ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಅಂಜುಮನ್ ಎ ಇಸ್ಲಾಂ ಕಮೀಟಿ ಅಧ್ಯಕ್ಷ ಅಬ್ದುಲ್ರಜಾಕ ಕುದರಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರೀತಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ, ತಾಲೂಕು ಗ್ಯಾರಂಟಿ ಅಧ್ಯಕ್ಷ ವೈ.ಆರ್. ಹೆಬ್ಬಳ್ಳಿ, ಕಮೀಟಿ ಉಪಾಧ್ಯಕ್ಷ ಸಲೀಮ ಇಲಕಲ್ಲ, ಕಾರ್ಯದರ್ಶಿ ಮಹೆಬೂಬ ಮುದ್ದೇಬಿಹಾಳ, ಖಜಾಂಚಿ ಮೆಹಬೂಬ ಸವರಾಜ, ಸದಸ್ಯರಾದ ರಮಜಾನಶಾ ಮಕಾನದಾರ, ಖಲೀಲ ಕೊತ್ತಲ, ಗೌಸಮೋಹಿದ್ದೀನ ಬಾಗವಾನ, ಉಮರಸಾಬ ಡಲಾಯತ, ಮಹಿಬೂಬಸಾಬ ಹಣಗಿ, ಅನ್ವರಹುಸೇನ ಮುದಗಲ್ಲ, ದಾದಪೀರ ಕಲಾದಗಿ, ದಾವಲಸಾಬ ಬಾಗವಾನ, ಅಹ್ಮದಹುಸೇನ ಅಮೀನಗಡ, ಅಬ್ದುಲ್ಕರೀಮ ಬಾಗವಾನ, ಅಬ್ದುಲ್ಗಫಾರ ಯಾಳಗಿ, ಜಿಂದೇಶಾ ಬ್ಯಾಂಕ್ನ ಅಧ್ಯಕ್ಷ ಅನ್ವರಖಾನ ಪಠಾಣ, ಮದರಶಾ ಮಕಾನದಾರ, ಜಮೀರ ಮೌಲ್ವಿ, ಮಹಿಬೂಬ ಕಂಟ್ರಾಕ್ಟçರ, ಮಹಿಬೂಬ ತಟಗಾರ, ಅಬ್ದುಲಸಾಬ ರಾಯಚೂರ, ಅಸಿಪ್ ಬಲಗುಂದಿ ಸೇರಿದಂತೆ ಸಮಾಜಬಾಂಧವರು ಇದ್ದರು.
ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿದ್ಯ ನೀಡಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ ಗುಳೇದಗುಡ್ಡ: ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಿದಾಗ ಮಾತ್ರ ಯಾವುದೇ ಸಮಾಜ ಅಭಿವೃದ್ಧಿಯಾಗಲು ಸಾಧ್ಯ. ನಾವು ಏನೇ ಕೆಲಸ ಮಾಡುತ್ತಿರಲಿ ಮಕ್ಕಳಿಗೆ ಶಿಕ್ಷಣ ನೀಡಬೇಕು. ಸರ್ಕಾರ ಅಲ್ಪಸಂಖ್ಯಾತರಿಗೆ ಸಾಕಷ್ಟು ಸೌಲಭ್ಯ ನೀಡುತ್ತಿದ್ದು ಅದನ್ನು ಸದುಪಯೋಗ ಪಡಿಸಿಕೊಂಡು ಮುಸ್ಲಿಂ ಸಮಾಜಬಾಂಧವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು. ಅವರು ಮಂಗಳವಾರ ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆವತಿಯಿಂದ ಅಲ್ಪಸಂಖ್ಯಾತ ಸಮುದಾಯದವರಿಗೆ ನಿರ್ಮಿಸುತ್ತಿರುವ ಸಾಂಸ್ಕೃತಿಕ ಭವನದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ವಿಶೇಷ ಸಾಧನೆ ಮಾಡಿದ ಸಮಾಜದ ಮಕ್ಕಳನ್ನು ಗುರುತಿಸಿ ಸನ್ಮಾನಿಸುವುದರಿಂದ ಉಳಿದ ಮಕ್ಕಳಿಗೆ ಅದು ಸ್ಪೂರ್ತಿ ತುಂಬುತ್ತದೆ. ತಾವೂ ಏನನ್ನಾದರೂ ಸಾಧಿಸುವ ಛಲ ಮೂಡುತ್ತದೆ ಎಂದರು. ಬಾದಾಮಿ ಮತಕ್ಷೇತ್ರದ ಬಾದಾಮಿ ಹಾಗೂ ಕೆರೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಈದ್ಗಾ, ಖಬರಸ್ಥಾನಗಳನ್ನು ಅತ್ಯಂತ ವಿಶಿಷ್ಟವಾಗಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಮುಂದಿನ ಹಂತದಲ್ಲಿ ಗುಳೇದಗುಡ್ಡದ ಈದ್ಗಾ, ಖಬರಸ್ಥಾನಗಳನ್ನು ಅಭಿವೃದ್ಧಿ ಪಡಿಸಲು ಅನುದಾನ ತರುತ್ತೇನೆ. ಅದೇ ರೀತಿ ಹಿಂದೂ ಸ್ಮಶಾನದ ಅಭಿವೃದ್ಧಿಗೂ ಯೋಜನೆ ಹಮ್ಮಿಕೊಳ್ಳಲಾಗಿದೆ. ಗುಳೇದಗುಡ್ಡದ ಸರ್ವಾಂಗೀಣ ಅಭಿವೃದ್ಧಿಗಾಗಿ ಈಗಾಗಲೇ 55 ಕೋಟಿ ರೂ. ಅನುದಾನ ತಂದಿದ್ದೇನೆ ಎಂದರು. ಸಾನಿಧ್ಯ ವಹಿಸಿದ್ದ ಹಜರತ್ ಅಲ್ಲಮಾ ಮೌಲಾನಾ ಮುಪ್ತಿ ಮಹಮ್ಮದ ಅಬೂಬಕರ ಅಶ್ರಫಿ ಖಾದ್ರಿ ಸಾಹೇಬ ಕಿಬಲ್ಲಾ ಆಶೀರ್ವಚನ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಅಂಜುಮನ್ ಎ ಇಸ್ಲಾಂ ಕಮೀಟಿ ಅಧ್ಯಕ್ಷ ಅಬ್ದುಲ್ರಜಾಕ ಕುದರಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರೀತಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ, ತಾಲೂಕು ಗ್ಯಾರಂಟಿ ಅಧ್ಯಕ್ಷ ವೈ.ಆರ್. ಹೆಬ್ಬಳ್ಳಿ, ಕಮೀಟಿ ಉಪಾಧ್ಯಕ್ಷ ಸಲೀಮ ಇಲಕಲ್ಲ, ಕಾರ್ಯದರ್ಶಿ ಮಹೆಬೂಬ ಮುದ್ದೇಬಿಹಾಳ, ಖಜಾಂಚಿ ಮೆಹಬೂಬ ಸವರಾಜ, ಸದಸ್ಯರಾದ ರಮಜಾನಶಾ ಮಕಾನದಾರ, ಖಲೀಲ ಕೊತ್ತಲ, ಗೌಸಮೋಹಿದ್ದೀನ ಬಾಗವಾನ, ಉಮರಸಾಬ ಡಲಾಯತ, ಮಹಿಬೂಬಸಾಬ ಹಣಗಿ, ಅನ್ವರಹುಸೇನ ಮುದಗಲ್ಲ, ದಾದಪೀರ ಕಲಾದಗಿ, ದಾವಲಸಾಬ ಬಾಗವಾನ, ಅಹ್ಮದಹುಸೇನ ಅಮೀನಗಡ, ಅಬ್ದುಲ್ಕರೀಮ ಬಾಗವಾನ, ಅಬ್ದುಲ್ಗಫಾರ ಯಾಳಗಿ, ಜಿಂದೇಶಾ ಬ್ಯಾಂಕ್ನ ಅಧ್ಯಕ್ಷ ಅನ್ವರಖಾನ ಪಠಾಣ, ಮದರಶಾ ಮಕಾನದಾರ, ಜಮೀರ ಮೌಲ್ವಿ, ಮಹಿಬೂಬ ಕಂಟ್ರಾಕ್ಟçರ, ಮಹಿಬೂಬ ತಟಗಾರ, ಅಬ್ದುಲಸಾಬ ರಾಯಚೂರ, ಅಸಿಪ್ ಬಲಗುಂದಿ ಸೇರಿದಂತೆ ಸಮಾಜಬಾಂಧವರು ಇದ್ದರು.
- ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್ ಎದುರು ಪ್ರತಿಭಟನೆ1
- ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು4
- ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ1
- *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!* ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ. ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. *ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ: ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ. ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ. ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ. ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.2
- ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಯಿತು.4
- ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ವಿಗ್ರಹಕ್ಕೆ ಆರತಿ ಮಾಡಿದರು. ಲಿಂಗಸುಗೂರು : ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಪರಮ ಪೂಜ್ಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ಚತುರ್ಥಿ ದಿನದ ಹಂಗವಾಗಿ ವಿಘ್ನವಿನಾಶಕ ಶ್ರೀ ವಿನಾಯಕನ ವಿಗ್ರಹಕ್ಕೆ ಸಾಂಪ್ರದಾಯಕ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದರು.1
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಗಣ್ಯರು ಚಾಲನೆ ನೀಡಿದರು. ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್ ಸ್ಕೂಲಿನ ಮುಖ್ಯಸ್ಥರಾದ ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.4
- ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.1