Shuru
Apke Nagar Ki App…
Explorer ಹೆಸರಿನ ಹುಲಿ ಪಾಪಿಕೊಂಡ ಅರಣ್ಯದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾನೆ.. ಮೂರೂವರೆ ವರ್ಷದ ಗಂಡು ಹುಲಿ ಈತನ ಹೆಸರು explorer, rediyo ಕಾಲರ್ ಅಳವಡಿಸಿದ ಈ ಹುಲಿರಾಯ ಮಹಾರಾಷ್ಟ್ರದ ಹುಲಿ ಮೀಸಲು ಅರಣ್ಯದಿಂದ ಆಂಧ್ರಪ್ರದೇಶದ ಪಾಪಿಕೊಂಡದ ವರೆಗೂ ಬಂದಿದ್ದಾನೆ...
ಅರವಿಂದ್ ರಾಜೀವ್
Explorer ಹೆಸರಿನ ಹುಲಿ ಪಾಪಿಕೊಂಡ ಅರಣ್ಯದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾನೆ.. ಮೂರೂವರೆ ವರ್ಷದ ಗಂಡು ಹುಲಿ ಈತನ ಹೆಸರು explorer, rediyo ಕಾಲರ್ ಅಳವಡಿಸಿದ ಈ ಹುಲಿರಾಯ ಮಹಾರಾಷ್ಟ್ರದ ಹುಲಿ ಮೀಸಲು ಅರಣ್ಯದಿಂದ ಆಂಧ್ರಪ್ರದೇಶದ ಪಾಪಿಕೊಂಡದ ವರೆಗೂ ಬಂದಿದ್ದಾನೆ...
More news from ಕರ್ನಾಟಕ and nearby areas
- ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಮಂಗಳವಾರ ದೆಹಲಿ ನೋಂದಣಿ ಸಂಖ್ಯೆಯ ಬೈಕ್ನ್ನು ರಸ್ತೆಯ ಮಧ್ಯೆ ನಿಲ್ಲಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ವೈರಲ್ ಆಗಿದೆ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೈಕ್ನ್ನು ಸಂಚಾರದ ಮಧ್ಯೆ ನಿಲ್ಲಿಸಿ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೈಕ್ ತೆರವುಗೊಳಿಸುವಂತೆ ಕೇಳಿದಾಗ, ಆತ ಸ್ಥಳೀಯರೊಂದಿಗೆ ಉದ್ಧಟವಾಗಿ ವರ್ತಿಸಿ ವಾಗ್ವಾದಕ್ಕಿಳಿದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.1
- ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಭಾರತ ಕರ್ನಾಟಕ ಜನತೆಗೆ ಆರ್ಥಿಕ ಶುಭಾಶಯಗಳು ಎಲ್ಲಾ ಜನತೆ ಸೇರಿಸಿ ಒಗ್ಗಟ್ಟಾಗಿ ಜಯಂತಿ ಮಾಡೋಣ ಆ ಜಾತಿ ಈ ಜಾತಿ ಜಾತಿ ಇಲ್ಲ ಒಂದೇ ಜಾತಿ ಮಾನವ ಜಾತಿ ಎಲ್ಲರಿಗೂ ಜೈ ಭೀಮ್ ಜೈ ಭೀಮ್ 💐💐❤️❤️💐💐👍1
- ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಈಗಾಗಲೇ ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ ಬರಲಿದೆ. ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ ಗೊಂದಲಕ್ಕೆ ಇತಿಶ್ರೀ ಹಾಡುವಂತೆ ಪಕ್ಷದ ಹೈಕಮಾಂಡ್ನಲ್ಲಿ ಕೇಳುತ್ತೇವೆ ಎಂದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು. ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ ಪಕ್ಷ ವಿರೋಧಿ ಕೆಲಸಮಾಡಿದರೆ ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ ಪಕ್ಷ ವಿರೋಧಿ ಕೆಲಸ ಮಾಡಿದ್ರೆ ತಲೆದಂಡವಾಗಲಿದೆ ಎಂದರು. ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್ ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು. ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು, ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.1
- ಹೊಸಕೋಟೆ ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ ನಿನ್ನೆ ರಾತ್ರಿ ನಡೆದಿರುವ ಘಟನೆ, ಇಂದು ಮುಂಜಾನೆ ಬೆಳಕಿಗೆ. ಅದೇ ಗ್ರಾಮದ ಶಿವಶಂಕರ್ (40) ಮೃತ ದುರ್ದೈವಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಭೇಟಿ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮ3
- Post by Venu Gopal1
- ಕೋಲಾರದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ: ಮಹಿಳಾ ಸಬಲೀಕರಣದ ಬಗ್ಗೆ ಬಿಜೆಪಿ ಕಾರ್ಯಕರ್ತೆ ದೀಪಿಕಾ ಮಾತು ಕೋಲಾರ: "ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ಇಡೀ ದೇಶದ ಅಸ್ಮಿತೆ ಮತ್ತು ಮಹಿಳೆಯರ ಹಕ್ಕುಗಳ ನಿಜವಾದ ಪ್ರತಿಪಾದಕರು," ಎಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ದೀಪಿಕಾ ಅಭಿಪ್ರಾಯಪಟ್ಟರು. ಇಂದು ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಂಬೇಡ್ಕರ್ ವಿಚಾರಧಾರೆಗಳ ಸ್ಮರಣೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, "ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದ ಅಂಬೇಡ್ಕರ್ ಅವರು ಮಹಿಳಾ ಸ್ವಾತಂತ್ರ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರಲು ಅವರು ಹಾಕಿಕೊಟ್ಟ ಭದ್ರ ಬುನಾದಿಯೇ ಕಾರಣ," ಎಂದರು. ಮೋದಿ ಸರ್ಕಾರ ಮತ್ತು ಮಹಿಳಾ ಮೀಸಲಾತಿ ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಆದ್ಯತೆಗಳ ಬಗ್ಗೆ ಮಾತನಾಡುತ್ತಾ, "ಪ್ರಧಾನಿ ಮೋದಿ ಅವರು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಬಲಗೊಳಿಸಲು ಅನೇಕ ಯೋಜನೆಗಳನ್ನು ತಂದಿದ್ದಾರೆ. ಮುಖ್ಯವಾಗಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ನೀಡಿರುವ ಪ್ರಾತಿನಿಧ್ಯ ಮತ್ತು ಗೌರವವು ಶ್ಲಾಘನೀಯ. ಸ್ಥಳೀಯ ಮಟ್ಟದಲ್ಲಿ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪಾಲು ದೊರೆಯುತ್ತಿರುವುದು ಅವರ ಶ್ರೇಯೋಭಿವೃದ್ಧಿಗೆ ಪೂರಕವಾಗಿದೆ," ಎಂದು ತಿಳಿಸಿದರು. ಅಲ್ಲದೆ, ಮೋದಿ ಸರ್ಕಾರವು ಮಹಿಳಾ ಮೀಸಲಾತಿ ಮತ್ತು ಆರ್ಥಿಕ ಸೌಲಭ್ಯಗಳ ಮೂಲಕ ಸ್ತ್ರೀಶಕ್ತಿಯನ್ನು ರಾಷ್ಟ್ರ ನಿರ್ಮಾಣದ ಮುಖ್ಯವಾಹಿನಿಗೆ ತರುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಒತ್ತಿ ಹೇಳಿದರು. ಕಾರ್ಯಕ್ರಮದ ಮುಖ್ಯಾಂಶಗಳು: ಕೋಲಾರ ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ. ಸಂವಿಧಾನ ಶಿಲ್ಪಿಯ ಆಶಯಗಳನ್ನು ಮೈಗೂಡಿಸಿಕೊಳ್ಳಲು ಕರೆ. ಮಹಿಳಾ ಸಬಲೀಕರಣಕ್ಕೆ ಮೋದಿ ಸರ್ಕಾರದ ಕೊಡುಗೆಗಳ ಬಗ್ಗೆ ಚರ್ಚೆ. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.1
- ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಬೋಟ್ ಪೆರೇಡ್ ಜನರ ಕಣ್ಣನ್ನು ತಂಪು ಗೊಳಿಸಿದೆ1
- ಮಾಧ್ಯಮದವರ ಮೇಲೆ ಗೂಂಡಾ ವರ್ತನೆ ತೋರಿದ ರಾಮಮೂರ್ತಿನಗರ ಪೊಲೀಸ್ ಠಾಣಾ ಎಎಸ್ಐ ಶಿವಕುಮಾರ್1