ನವದೆಹಲಿ.ಶಿವಮೊಗ್ಗ ಹಾಗೂ ಮಲೆನಾಡಿನ ಅಡಿಕೆ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ನೆರವು ನೀಡಿ"ಜನಪ್ರಿಯ ಸಂಸದರಾದ ಬಿ .ವೈ .ರಾಘವೇಂದ್ರ. ನವದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಜನಪ್ರಿಯ ಸಂಸದ ಬಿ.ವೈ.ರಾಘವೇಂದ್ರ. ಸಾಗರದಲ್ಲಿ ಅಡಿಕೆ ಮತ್ತು ಸಾಂಬಾರು ಮಂಡಳಿ ಅಭಿವೃದ್ಧಿ ನಿರ್ದೇಶನಾಲಯದ ಉಪಕೇಂದ್ರ ಸ್ಥಾಪನೆಗೆ ಮನವಿ. ಶಿವಮೊಗ್ಗದಲ್ಲಿ 'ಭಾರತೀಯ ಕೃಷಿ ಸಂಶೋಧನಾ ಮಂಡಳಿ - ಪ್ರಾದೇಶಿಕ ಮೆಕ್ಕೆಜೋಳ ಸಂಶೋಧನಾ ಕೇಂದ್ರ' ಶೀಘ್ರ ಆರಂಭಕ್ಕೆ ಒತ್ತಾಯ ನವದೆಹಲಿ, 31 ಜುಲೈ 2026 ನವದೆಹಲಿಯಲ್ಲಿ ನಿನ್ನೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಜಿಲ್ಲೆ ಹಾಗೂ ಸುತ್ತಮುತ್ತಲ ಜಿಲ್ಲೆಗಳ ಲಕ್ಷಾಂತರ ರೈತರ ಹಿತದೃಷ್ಟಿಯಿಂದ ಅತ್ಯಂತ ಪ್ರಮುಖವಾದ ಎರಡು ಕೃಷಿ ಯೋಜನಾ ಪ್ರಸ್ತಾವನೆಗಳ ಕುರಿತಂತೆ ಮನವಿ ಸಲ್ಲಿಸಿ, ಅವರೊಂದಿಗೆ ಸಮಾಲೋಚನೆ ನಡೆಸಿದರು. ಮಲೆನಾಡು ಭಾಗದ ಪ್ರಮುಖ ಕೃಷಿ ಬೆಳೆಗಳಾದ ಅಡಿಕೆ, ಸಾಂಬಾರು ಪದಾರ್ಥಗಳು ಮತ್ತು ಮೆಕ್ಕೆಜೋಳ ಬೆಳೆಗಾರರು ಎದುರಿಸುತ್ತಿರುವ ಹಲವಾರು ತಾಂತ್ರಿಕ ಮತ್ತು ಆಡಳಿತಾತ್ಮಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆದಷ್ಟು ಶೀಘ್ರದಲ್ಲಿ ನೆರವು ನೀಡಬೇಕು ಎಂದು ಸಂಸದರು ಕೇಂದ್ರ ಸಚಿವರನ್ನು ಕೋರಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 'ಅಡಿಕೆ ಮತ್ತು ಸಾಂಬಾರು ಅಭಿವೃದ್ಧಿ ನಿರ್ದೇಶನಾಲಯ'ದ ಉಪಕೇಂದ್ರವನ್ನು ಶೀಘ್ರವೇ ಸ್ಥಾಪಿಸಬೇಕೆಂದು ಸಂಸದರು ಸಚಿವರಿಗೆ ಮನವಿ ಮಾಡಿದರು. ಅಡಿಕೆ ಬೆಳೆಯುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ಶಿವಮೊಗ್ಗ ಸೇರಿದಂತೆ ಸಾಗರ, ಸೊರಬ, ಹೊಸನಗರ ಮುಂತಾದ ಮಲೆನಾಡಿನ ಭಾಗಗಳಲ್ಲಿ ಅಡಿಕೆ ಬೆಳೆಗೆ ಎದುರಾಗುತ್ತಿರುವ ಕೊಳೆರೋಗ, ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗ ಹಾಗೂ ವನ್ಯಜೀವಿಗಳ ಹಾವಳಿಯಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಸಾಗರದಲ್ಲಿ ಈ ಉಪಕೇಂದ್ರ ಸ್ಥಾಪನೆಯಾದರೆ ಶಿವಮೊಗ್ಗ ಮಾತ್ರವಲ್ಲದೆ ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾವೇರಿ ಜಿಲ್ಲೆಗಳ ರೈತರಿಗೆ ರೋಗ ನಿಯಂತ್ರಣ, ಉನ್ನತ ತಂತ್ರಜ್ಞಾನ, ತರಬೇತಿ ಮತ್ತು ಮೌಲ್ಯವರ್ಧನೆಗೆ ತಕ್ಷಣದ ವೈಜ್ಞಾನಿಕ ಮಾರ್ಗದರ್ಶನ ದೊರೆಯಲಿದೆ ಎಂದು ಸಂಸದರು ಸಚಿವರಿಗೆ ವಿವರಿಸಿದರು. ಹಾಗೆಯೇ, ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಪ್ರಾದೇಶಿಕ ಮೆಕ್ಕೆಜೋಳ ಸಂಶೋಧನಾ ಕೇಂದ್ರ ಸ್ಥಾಪನೆಗೆ ಈಗಾಗಲೇ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಜಾಗ ಮಂಜೂರಾಗಿದ್ದು, ಅಗತ್ಯ ಅನುದಾನ ಮತ್ತು ಸಂಪನ್ಮೂಲಗಳನ್ನು ಬಿಡುಗಡೆ ಮಾಡಿ ಯೋಜನೆಯನ್ನು ಶೀಘ್ರವಾಗಿ ಕಾರ್ಯಗತಗೊಳಿಸಬೇಕೆಂದು ಕೋರಿದರು. 'ಮೆಕ್ಕೆಜೋಳದ ಸ್ವರ್ಣ ಪಥ' ಎಂದೇ ಹೆಸರುವಾಸಿಯಾಗಿರುವ ಶಿವಮೊಗ್ಗ ವರ್ಷಕ್ಕೆ ಮೂರು ಆವೃತ್ತಿ ಬೆಳೆ ತೆಗೆಯಲು ಸೂಕ್ತ ವಾತಾವರಣ ಹೊಂದಿದ್ದು, ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ ಎಥನಾಲ್ ಬ್ಲೆಂಡಿಂಗ್ ಗುರಿಯನ್ನು ತಲುಪಲು ಹಾಗೂ ರೈತರಿಗೆ ಗುಣಮಟ್ಟದ ಹೈಬ್ರಿಡ್ ಬಿತ್ತನೆ ಬೀಜ ಒದಗಿಸಲು ಈ ಸಂಶೋಧನಾ ಕೇಂದ್ರ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಂಸದರು ಸಚಿವರಿಗೆ ತಿಳಿಸಿದ್ದಾರೆ. ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಎರಡೂ ಪ್ರಸ್ತಾವನೆಗಳ ಕುರಿತು ಶೀಘ್ರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ನವದೆಹಲಿ.ಶಿವಮೊಗ್ಗ ಹಾಗೂ ಮಲೆನಾಡಿನ ಅಡಿಕೆ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ನೆರವು ನೀಡಿ"ಜನಪ್ರಿಯ ಸಂಸದರಾದ ಬಿ .ವೈ .ರಾಘವೇಂದ್ರ. ನವದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಜನಪ್ರಿಯ ಸಂಸದ ಬಿ.ವೈ.ರಾಘವೇಂದ್ರ. ಸಾಗರದಲ್ಲಿ ಅಡಿಕೆ ಮತ್ತು ಸಾಂಬಾರು ಮಂಡಳಿ ಅಭಿವೃದ್ಧಿ ನಿರ್ದೇಶನಾಲಯದ ಉಪಕೇಂದ್ರ ಸ್ಥಾಪನೆಗೆ ಮನವಿ. ಶಿವಮೊಗ್ಗದಲ್ಲಿ 'ಭಾರತೀಯ ಕೃಷಿ ಸಂಶೋಧನಾ ಮಂಡಳಿ - ಪ್ರಾದೇಶಿಕ ಮೆಕ್ಕೆಜೋಳ ಸಂಶೋಧನಾ ಕೇಂದ್ರ' ಶೀಘ್ರ ಆರಂಭಕ್ಕೆ ಒತ್ತಾಯ ನವದೆಹಲಿ, 31 ಜುಲೈ 2026 ನವದೆಹಲಿಯಲ್ಲಿ ನಿನ್ನೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಜಿಲ್ಲೆ ಹಾಗೂ ಸುತ್ತಮುತ್ತಲ ಜಿಲ್ಲೆಗಳ ಲಕ್ಷಾಂತರ ರೈತರ ಹಿತದೃಷ್ಟಿಯಿಂದ ಅತ್ಯಂತ ಪ್ರಮುಖವಾದ ಎರಡು ಕೃಷಿ ಯೋಜನಾ ಪ್ರಸ್ತಾವನೆಗಳ ಕುರಿತಂತೆ ಮನವಿ ಸಲ್ಲಿಸಿ, ಅವರೊಂದಿಗೆ ಸಮಾಲೋಚನೆ ನಡೆಸಿದರು. ಮಲೆನಾಡು ಭಾಗದ ಪ್ರಮುಖ ಕೃಷಿ ಬೆಳೆಗಳಾದ ಅಡಿಕೆ, ಸಾಂಬಾರು ಪದಾರ್ಥಗಳು ಮತ್ತು ಮೆಕ್ಕೆಜೋಳ ಬೆಳೆಗಾರರು ಎದುರಿಸುತ್ತಿರುವ ಹಲವಾರು ತಾಂತ್ರಿಕ ಮತ್ತು ಆಡಳಿತಾತ್ಮಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆದಷ್ಟು ಶೀಘ್ರದಲ್ಲಿ ನೆರವು ನೀಡಬೇಕು ಎಂದು ಸಂಸದರು ಕೇಂದ್ರ ಸಚಿವರನ್ನು ಕೋರಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 'ಅಡಿಕೆ ಮತ್ತು ಸಾಂಬಾರು ಅಭಿವೃದ್ಧಿ ನಿರ್ದೇಶನಾಲಯ'ದ ಉಪಕೇಂದ್ರವನ್ನು ಶೀಘ್ರವೇ ಸ್ಥಾಪಿಸಬೇಕೆಂದು ಸಂಸದರು ಸಚಿವರಿಗೆ ಮನವಿ ಮಾಡಿದರು. ಅಡಿಕೆ ಬೆಳೆಯುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ಶಿವಮೊಗ್ಗ ಸೇರಿದಂತೆ ಸಾಗರ, ಸೊರಬ, ಹೊಸನಗರ ಮುಂತಾದ ಮಲೆನಾಡಿನ ಭಾಗಗಳಲ್ಲಿ ಅಡಿಕೆ ಬೆಳೆಗೆ ಎದುರಾಗುತ್ತಿರುವ ಕೊಳೆರೋಗ, ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗ ಹಾಗೂ ವನ್ಯಜೀವಿಗಳ ಹಾವಳಿಯಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಸಾಗರದಲ್ಲಿ ಈ ಉಪಕೇಂದ್ರ ಸ್ಥಾಪನೆಯಾದರೆ ಶಿವಮೊಗ್ಗ ಮಾತ್ರವಲ್ಲದೆ ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾವೇರಿ ಜಿಲ್ಲೆಗಳ ರೈತರಿಗೆ ರೋಗ ನಿಯಂತ್ರಣ, ಉನ್ನತ ತಂತ್ರಜ್ಞಾನ, ತರಬೇತಿ ಮತ್ತು ಮೌಲ್ಯವರ್ಧನೆಗೆ ತಕ್ಷಣದ ವೈಜ್ಞಾನಿಕ ಮಾರ್ಗದರ್ಶನ ದೊರೆಯಲಿದೆ ಎಂದು ಸಂಸದರು ಸಚಿವರಿಗೆ ವಿವರಿಸಿದರು. ಹಾಗೆಯೇ, ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಪ್ರಾದೇಶಿಕ ಮೆಕ್ಕೆಜೋಳ ಸಂಶೋಧನಾ ಕೇಂದ್ರ ಸ್ಥಾಪನೆಗೆ ಈಗಾಗಲೇ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಜಾಗ ಮಂಜೂರಾಗಿದ್ದು, ಅಗತ್ಯ ಅನುದಾನ ಮತ್ತು ಸಂಪನ್ಮೂಲಗಳನ್ನು ಬಿಡುಗಡೆ ಮಾಡಿ ಯೋಜನೆಯನ್ನು ಶೀಘ್ರವಾಗಿ ಕಾರ್ಯಗತಗೊಳಿಸಬೇಕೆಂದು ಕೋರಿದರು. 'ಮೆಕ್ಕೆಜೋಳದ ಸ್ವರ್ಣ ಪಥ' ಎಂದೇ ಹೆಸರುವಾಸಿಯಾಗಿರುವ ಶಿವಮೊಗ್ಗ ವರ್ಷಕ್ಕೆ ಮೂರು ಆವೃತ್ತಿ ಬೆಳೆ ತೆಗೆಯಲು ಸೂಕ್ತ ವಾತಾವರಣ ಹೊಂದಿದ್ದು, ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ ಎಥನಾಲ್ ಬ್ಲೆಂಡಿಂಗ್ ಗುರಿಯನ್ನು ತಲುಪಲು ಹಾಗೂ ರೈತರಿಗೆ ಗುಣಮಟ್ಟದ ಹೈಬ್ರಿಡ್ ಬಿತ್ತನೆ ಬೀಜ ಒದಗಿಸಲು ಈ ಸಂಶೋಧನಾ ಕೇಂದ್ರ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಂಸದರು ಸಚಿವರಿಗೆ ತಿಳಿಸಿದ್ದಾರೆ. ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಎರಡೂ ಪ್ರಸ್ತಾವನೆಗಳ ಕುರಿತು ಶೀಘ್ರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
- ಶಿವಮೊಗ್ಗ-ಕೆಂಪುಕಲ್ಲು ಕ್ವಾರಿಗೆ ದಿಢೀರ್ ದಾಳಿ:ಲಾರಿ ವಶಕ್ಕೆ ಪಡೆದ ತಹಶೀಲ್ದಾರ್ ಡಾ.ಪ್ರತಿಭಾ. ಸಾಗರ: ತಾಲೂಕಿನಲ್ಲಿ ಯಾವುದೇ ಎಗ್ಗಿಲ್ಲದೆ ರಾಜಾ ರೋಷವಾಗಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಮತ್ತು ಜಂಬಿಟ್ಟಿಗೆ ಸಾಗಾಟಕ್ಕೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಬ್ರೇಕ್ ಹಾಕಿದ್ದಾರೆ. ರಾಜಕೀಯ ಅಥವಾ ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ಅಕ್ರಮಗಳ ವಿರುದ್ಧ ಸಮರ ಸಾರಿರುವ ತಹಶೀಲ್ದಾರ್, ದಿಢೀರ್ ಕಾರ್ಯಾಚರಣೆ ನಡೆಸಿ ಅಕ್ರಮ ಜಂಬಿಟ್ಟಿಗೆ ತುಂಬಿದ್ದ ಲಾರಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಅಕ್ರಮ ಕೋರರಿಗೆ ನಡುಕ ಹುಟ್ಟಿಸಿದ್ದಾರೆ. ಬೊಮ್ಮತ್ತಿ ಬಳಿಯ ಮಳ್ಳ ಬಳಿ ಮಿಂಚಿನ ಕಾರ್ಯಾಚರಣೆ..! ತ್ಯಾಗರ್ತಿ ಭಾಗದ ಬೊಮ್ಮತ್ತಿ ಸಮೀಪದ ಬ್ರಾಹ್ಮಣ ಮಂಚಾಲೆ ಗ್ರಾಮದ ಮಳ್ಳ ಬಳಿ ಸರ್ವೇ ನಂಬರ್ 107ರಲ್ಲಿ ಬಹಳ ದಿನಗಳಿಂದ ಅನುಮತಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ ತೆಗೆದು ಸಾಗಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದ್ದವು. ಈ ದೂರಿನ ಆಧಾರದ ಮೇಲೆ ಕಂದಾಯ ಪರಿವೀಕ್ಷಕ ಗುರುರಾಜ್ ಹಾಗೂ ಗ್ರಾಮ ಆಡಳಿತಾಧಿ ಕಾರಿ ನಂದೀಶ್ ಅವರೊಂದಿಗೆ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಡಾ. ಪ್ರತಿಭಾ, ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ರೆಡ್ಹ್ಯಾಂಡ್ ಆಗಿ ಹಿಡಿದು ಜಪ್ತಿ ಮಾಡಿದ್ದಾರೆ.ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಎಫ್ಐಆರ್ (FIR) ಹಾಕಿಸಿದ್ದಾರೆ. ಯಾವುದೇ ಕಾರಣಕ್ಕೂ ಅಕ್ರಮ ಸಹಿಸಲ್ಲ" - ತಹಶೀಲ್ದಾರ್ ಆರ್ ಪ್ರತಿಭಾ ಎಚ್ಚರಿಕೆ.. ಈ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು ಸಾಗರ ತಾಲೂಕಿನಲ್ಲಿ ಅವ್ಯಾಹತ ವಾಗಿ ನಡೆಯುತ್ತಿರುವ ಅಕ್ರಮ ಜಂಬಿಟ್ಟಿಗೆ ಹಾಗೂ ಮರಳು ಸಾಗಾಟವನ್ನು ಖಂಡಿತ ವಾಗಿಯೂ ಸಹಿಸುವುದಿಲ್ಲ. ಇಂದಿನ ಈ ದಾಳಿ ಪ್ರತಿಯೊಬ್ಬ ಅಕ್ರಮಕೋರನಿಗೂ ಎಚ್ಚರಿಕೆಯ ಗಂಟೆಯಾಗ ಬೇಕು. ತಾಲೂಕಿನಲ್ಲಿ ಇನ್ಮುಂದೆ ಎಲ್ಲಿಯೇ ಅಕ್ರಮ ಗಣಿಗಾರಿಕೆ ಕಂಡುಬಂದರೂ ನಿರ್ದಾಕ್ಷಿಣ್ಯ ವಾಗಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಸಾಗರದ ಜನತೆಯಿಂದ ಹ್ಯಾಟ್ಸಾಫ್: ಹಿಂದಿನ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ಇರುತ್ತಿದ್ದ ಜಾಗದಲ್ಲಿ, ಅಧಿಕಾರ ಸ್ವೀಕರಿಸಿದಾಗಿ ನಿಂದಲೂ ಸಾಗರದ ನೆಲ, ಜಲ ಹಾಗೂ ಪರಿಸರ ರಕ್ಷಣೆಗೆ ಟೊಂಕ ಕಟ್ಟಿ ನಿಂತಿರುವ ಡಾ. ಪ್ರತಿಭಾ ಅವರ ದಿಟ್ಟತನಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ."ಇದ್ದರೆ ಇರಬೇಕು ಇಂತಹ ಅಧಿಕಾರಿ" ಎಂದು ಕೊಂಡಾಡಿರುವ ಸಾಗರದ ಜನತೆ, ಅಕ್ರಮ ಒತ್ತುವರಿ ಹಾಗೂ ಗಣಿಗಾರಿಕೆ ವಿರುದ್ಧ ಸಿಂಹಸ್ವಪ್ನ ವಾಗಿರುವ ತಹಶೀಲ್ದಾರ್ ಅವರನ್ನು 'ಲೇಡಿ ಸಿಂಗಂ' ಎಂದು ಬಣ್ಣಿಸಿ ಹ್ಯಾಟ್ಸಾಫ್ ಹೇಳಿದ್ದಾರೆ.1
- We are authorised distributor for Karnataka for Yodha agricultural equipments ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ ಸಂಪರ್ಕಿಸಿ: 7483066169 ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110 Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow We are authorised distributor for karnataka Shri shivabasava agro care Haveri Contact us: 7483066169 Location: Industrial area, near, TMAE college, Hubli road, Haveri 5811101
- ರೈತ ಆತ್ಮಹತ್ಯೆ, ಉಪತಹಶೀಲ್ದಾರ ಕಛೇರಿ ಎದುರು ಪರಿಹಾರಕ್ಕಾಗಿ ರೈತರ ಪ್ರತಿಭಟನೆ. ರೈತನ ಕುಟುಂಬಕ್ಕೆ ಪರಿಹಾರಕ್ಕಾಗಿ ರೈತರ ಪ್ರತಿಭಟನೆ ಶಿಗ್ಗಾವಿ : ತಾಲೂಕಿನ ಹೋತನಹಳ್ಳಿ ಗ್ರಾಮದ ರೈತ ಮಲ್ಲೇಶಪ್ಪ ತಳವಾರ ಆತ್ಮಹತ್ಯೆ ಮಾಡಿಕೊಂಡು ಮೃತರಾಗಿ 10 ತಿಂಗಳು ಕಳೆದರು ಸರ್ಕಾರದಿಂದ ಯಾವುದೇ ಪರಿಹಾರ ಬಿಡುಗಡೆಯಾಗಿಲ್ಲ. ತಕ್ಷಣ ಮೇಲಾಧಿಕಾರಿಗಳು ಪರಿಶೀಲಿಸಿ ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಂಕಾಪುರ ಉಪತಹಶೀಲ್ದಾರ್ ಕಚೇರಿಗೆ ಬೀಗ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಕುಟುಂಬಕ್ಕೆ ಆಸರೆಯಾದ ರೈತ ಸಾಲಕ್ಕೆ ಸಿಲುಕಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಮಕ್ಕಳು ಬದುಕು ಸಾಗಿಸುವುದು ಕಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ಕಾರಕ್ಕೆ ಈ ವರೆಗೆ ಯಾವುದೇ ವರದಿ ಕಳುಹಿಸಿಲ್ಲ. ಅಧಿಕಾರಿಗಳ ನಿರ್ಲಕ್ಷತೆಯಿಂದ ಬಡ ಕುಟುಂಬಕ್ಕೆ ಪರಿಹಾರ ಮಂಜುರಾತಿ ವಿಳಂಬವಾಗಿದೆ. ಹೀಗಾಗಿ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಉಪತಹಶೀಲ್ದಾರ್ ಕಚೇರಿ ಬೀಗ ಹಾಕಿದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ವೆಂಕಟೇಶ ಕುಲಕರ್ಣಿ ಹಾಗೂ ಸಿಬ್ಬಂದಿ ಹೂರಗೆ ಉಳಿಯಬೇಕಾಯಿತು. ಸುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ದಾಖಲಾತಿ ಪಡೆಯಲು ಬಂದು ಮರಳಿ ಹೋಗಬೇಕಾಯಿತು. ಕೆಲವರು ಕಾದು ಬೇಸರಗೊಂಡರು. ಎಸ್.ಐ.ಆರ್ ಮಾಡುವ ನೌಕರರು ಸಹ ಕಾಯ್ದು ಕುಳಿತು ಮರಳಿ ಹೋದರು. ಹೀಗಾಗಿ ಕೆಲಸ ಕಾರ್ಯಗಳಿಗೆ ಅಡೆತಡೆಯಾಯಿತು. ಆದರೂ ರೈತರು ಮೇಲಾಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದರು. ಕೃಷಿ ಅಧಿಕಾರಿ ಶಿವಕುಮಾರ ಶಿಡೇನೂರ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸ್ಪಂದಿಸಿ ತಕ್ಷಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇನೆ. ರೈತನ ಕುಟುಂಬಕ್ಕೆ ತ್ವರಿತವಾಗಿ ಪರಿಹಾರ ಸಿಗುವಂತೆ ಮಾಡಲಾಗುತ್ತದೆ ಎಂದಾಗಿ ಪ್ರತಿಭಟನೆ ಹಿಂದರು. ರೈತ ಮುಖಂಡರಾದ ಶಶಿಧರ ಹೊಣ್ಣನ್ನವರ , ಶಿವಾನಂದ ತೊಂಡೂರ, ಉಮೇಶ ಗುಳೇದ, ಚಂದ್ರಣ್ಣ ಬೆಳವತ್ತಿ, ಶಂಕ್ರಣ್ಣ ಗಂಗಣ್ಣವರ, ಬಾಪುಗೌಡ ಪಾಟೀಲ, ದೇವಣ್ಣ ಹಳವಳ್ಳಿ, ಶಂಭಣ್ಣ ಕುರಗೋಡಿ, ಬಸವರಾಜ ನಾರಾಯಣಪುರ, ಚಂದ್ರಣ್ಣ ತಳವಾರ, ಮೃತ ರೈತನ ಪತ್ನಿ ಕವಿತಾ ಅವರ ಕುಟುಂಬದ ಸದಸ್ಯರು, ವಿವಿಧ ಗ್ರಾಮಗಳ ರೈತರು ಇದ್ದರು.1
- ಈಗಾಗಲೇ ನೀರಿಗೆ ಹಾಹಾಕಾರ ಶುರುವಾಗಿ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಾವೇರಿ ವಿವಾದದಲ್ಲಿ ತಕ್ಷಣವೇ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ ನಾಡಿನ ಹಿತ ಕಾಯುವುದು ಸಿಎಂ ಡಿ. ಕೆ. ಶಿವಕುಮಾರ್ ಅವರ ಆದ್ಯ ಕರ್ತವ್ಯವಾಗಬೇಕು. ಶ್ರೀ ಬಿ. ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು #CongressFailsKarnataka #ರೈತವಿರೋಧಿಕಾಂಗ್ರೆಸ್1
- ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು. ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. ಬೈಟ್: ರಾಜಣ್ಣ2
- ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.1
- ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ. ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ..1
- ಕುಂದಾಪುರ ಶೂಟೌಟ್ ಪ್ರಕರಣ | ಉಡುಪಿ ಎಸ್ ಪಿ ಹೇಳಿದ್ದೇನು..? ಕುಂದಾಪುರ : ಶೂಟೌಟ್ ಪ್ರಕರಣ ಅರೋಪಿ ಡೆರಿಕ್ ಪತ್ತೆಗೆ ವಿಶೇಷ ತಂಡ ಎಸ್ ಪಿ ಹರಿರಾಮ್ ಶಂಕರ್1