Shuru
Apke Nagar Ki App…
ಭಾಲ್ಕಿಯ ಪೆಟ್ರೋಲ್ ಬಂಕ್ಗಳಲ್ಲಿ ಡೀಸೆಲ್, ಎಲ್ಪಿಜಿ ಮತ್ತು ಪೆಟ್ರೋಲ್ ದೊರೆಯುತ್ತಿಲ್ಲ.
User8716
ಭಾಲ್ಕಿಯ ಪೆಟ್ರೋಲ್ ಬಂಕ್ಗಳಲ್ಲಿ ಡೀಸೆಲ್, ಎಲ್ಪಿಜಿ ಮತ್ತು ಪೆಟ್ರೋಲ್ ದೊರೆಯುತ್ತಿಲ್ಲ.
More news from ಕರ್ನಾಟಕ and nearby areas
- ಭಾಲ್ಕಿಯ ಪೆಟ್ರೋಲ್ ಬಂಕ್ಗಳಲ್ಲಿ ಡೀಸೆಲ್, ಎಲ್ಪಿಜಿ ಮತ್ತು ಪೆಟ್ರೋಲ್ ದೊರೆಯುತ್ತಿಲ್ಲ.1
- ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಅಂಬೇಡ್ಕರ್ ವೃತ್ತದ ಸಮೀಪದ ಬೀದಿಬದಿ ವ್ಯಾಪಾರಿಗಳು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಗೋಳು ಕೇಳುವವರು ಯಾರೂ ಇಲ್ಲದಂತಾಗಿದೆ. ಸರ್ಕಾರಿ ಅಧಿಕಾರಿಗಳು ವ್ಯಾಪಾರ ಮಾಡಲು ಅಡ್ಡಿಯಾಗುತ್ತಿರುವುದರಿಂದ ಈ ಬೀದಿಬದಿ ವ್ಯಾಪಾರಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.1
- ಮಠಾಧೀಶರ ತಂಡವು ಈಶ್ವರ ಖಂಡ್ರೆ ಅವರನ್ನು ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನಕ್ಕೆ ತರಲು ಮೈದಾನಕ್ಕೆ ಇಳಿದಿದೆ. ಈಶ್ವರ ಖಂಡ್ರೆ ಅವರನ್ನು ಡಿಸಿಎಂ ಮಾಡಲು ಮಠಾಧೀಶರು ಪ್ರಯತ್ನಿಸುತ್ತಿದ್ದಾರೆ.1
- ವಿಧಾನಸೌಧದಲ್ಲಿಂದು ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಗೆ ಡಿಕೆ ಶಿವಕುಮಾರ್ ಆಗಮಿಸಿದ್ದಾರೆ. ಈ ಸಭೆಯಲ್ಲಿ ಮಂತ್ರಿ ಮಂಡಲ ರಚನೆ ಕುರಿತು ಹೈಕಮಾಂಡ್ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಸಿಎಲ್ಪಿ ಸಭೆಯಲ್ಲಿ ಭಾಗವಹಿಸಲು ವಿಧಾನಸೌಧಕ್ಕೆ ಬಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಹೂಗುಚ್ಛಗಳನ್ನು ನೀಡಿ ಸ್ವಾಗತಿಸಿದ್ದಾರೆ.1
- ವಿಜಯಪುರ/ಹುಬ್ಬಳ್ಳಿ: ಜಿ.ಎಸ್.ಸಿ.ಎಸ್.ಟಿ.ಇ.ಓ (GSCSTEO) ಸರ್ಕಾರಿ ನೌಕರರ ಸಂಘದಿಂದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಬೃಹತ್ ಸಮಾವೇಶವು ಅತ್ಯಂತ ಯಶಸ್ವಿಯಾಗಿ ಮತ್ತು ಐತಿಹಾಸಿಕವಾಗಿ ನೆರವೇರಿತು. ಸತತ ಎರಡನೇ ವರ್ಷವೂ ಇಂತಹ ಬೃಹತ್ ಸಮಾಜಮುಖಿ ಕಾರ್ಯಕ್ರಮವನ್ನು ಅತ್ಯಂತ ಅದ್ದೂರಿಯಾಗಿ ಆಯೋಜಿಸಿ, 650ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೆರವು ನೀಡಿದ ಸಂಘಟನೆಯ ಕಾರ್ಯವೈಖರಿಯನ್ನು ಗಣ್ಯರು ಮುಕ್ತಕಂಠದಿಂದ ಶ್ಲಾಘಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಚಿತ್ರದುರ್ಗದ ಶ್ರೀ ಜಗದ್ಗುರು ಚಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಶರಣರು ಹಾಗೂ ನೀಲಜಿ ಆಶ್ರಮದ ಶ್ರೀ ಪೂಜ್ಯ ಮಹಾದೇವ ಮಹಾರಾಜರು ವಹಿಸಿ ಆಶೀರ್ವಚನ ನೀಡಿದರು. ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕರಾದ ಶ್ರೀ ಪ್ರಸಾದ್ ಅಬ್ಬಯ್ಯ ಮತ್ತು ಬೆಳಗಾವಿಯ ಯುವ ಮುಖಂಡರಾದ ಶ್ರೀ ರಾಹುಲ್ ಸತೀಶ್ ಜಾರಕಿಹೊಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಚಿದಾನಂದ ಎಮ್. ಕಾಂಬಳೆ ಮತ್ತು ಸಂಘಟಕ ಶ್ರೀ ವಿಲಾಸ್ ಶಿವಪೂಜಿ ಅವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಸಮಾರಂಭದಲ್ಲಿ ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಇಷ್ಟು ಅದ್ದೂರಿ ಮತ್ತು ಶಿಸ್ತುಬದ್ಧ ಕಾರ್ಯಕ್ರಮ ಆಯೋಜಿಸಿದ್ದು ಐತಿಹಾಸಿಕ ದಾಖಲೆಯಾಗಿದೆ ಎಂದು ಬಣ್ಣಿಸಿದರು. ನೌಕರರ ಹಿತರಕ್ಷಣೆ ಮಾತ್ರವಲ್ಲದೆ, ವಧು-ವರರ ಕಲ್ಯಾಣ ಹಾಗೂ ವಿದ್ಯಾರ್ಥಿಗಳ ಉನ್ನತಿಗಾಗಿ ಸಂಘಟನೆ ಮಾಡುತ್ತಿರುವ ಕೆಲಸಗಳು ಮಾದರಿಯಾಗಿವೆ ಎಂದು ಶ್ಲಾಘಿಸಿದರು. ವಿವಿಧ ಜಿಲ್ಲೆಗಳಿಂದ ಬಂದಿದ್ದ ವಿದ್ಯಾರ್ಥಿಗಳು ಹಾಗೂ ಪಾಲಕರ ತಾಳ್ಮೆಯನ್ನು ಮೆಚ್ಚಿದ ಅವರು, ಮುಂದಿನ ವರ್ಷವೂ ಸಂಘಟನೆಯೊಂದಿಗೆ ಸದಾ ಇರುವುದಾಗಿ ಭರವಸೆ ನೀಡಿದರು. ಇದಲ್ಲದೆ, ಸಂಘಕ್ಕೆ ವೈಯಕ್ತಿಕವಾಗಿ ಧನಸಹಾಯ ಘೋಷಿಸಿದರು. ಸಮುದಾಯಕ್ಕಾಗಿ ಸಂಘವು ಮಾಡುತ್ತಿರುವ ನಿರಂತರ ಸೇವೆ ಹಾಗೂ ಸತತ 2ನೇ ವರ್ಷವೂ 650 ವಿದ್ಯಾರ್ಥಿಗಳಿಗೆ ಇಂತಹ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡಿರುವುದನ್ನು ಗಮನಿಸಿ, ಸಂಘದ ಮುಂದಿನ ಸ್ವಂತ ಸೌಲಭ್ಯಗಳಿಗಾಗಿ ಸರ್ಕಾರದಿಂದ ಒಂದು ಸಿಎ (Civic Amenity) ಸೈಟ್ ಮಂಜೂರು ಮಾಡಿಕೊಡಲಾಗುವುದು ಎಂದು ಶಾಸಕ ಶ್ರೀ ಪ್ರಸಾದ್ ಅಬ್ಬಯ್ಯ ಘೋಷಿಸಿದರು. ಸಮಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಹೇಶ್ ಪೋತದಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶ್ರೀ ರಾಹುಲ್ ಭಾವಿದೊಡ್ಡಿ, ಹುಬ್ಬಳ್ಳಿ ನಿರ್ದೇಶಕರಾದ ಶ್ರೀ ಸುಭಾಷಚಂದ್ರ ನಾಟೀಕಾರ್, ಹಾರೂಗೇರಿ ಮುಖ್ಯಾಧಿಕಾರಿ ಶ್ರೀ ಬಸವರಾಜ ಮನಗೂಳಿ, ಹೆಸ್ಕಾಂ ಎಇಇ ಶ್ರೀ ರಾಜಶೇಖರ ಹಾದಿಮನಿ, ಕೆಬಿಜೆಎನ್ಎಲ್ ಎಇಇ ಶ್ರೀ ಪ್ರಕಾಶ್ ಕಾಂಬಳೆ ಉಪಸ್ಥಿತರಿದ್ದರು. ಇವರೊಂದಿಗೆ ವಿಜಯಪುರ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಪರಶುರಾಮ ಲಂಬು, ಜಿಲ್ಲಾಧ್ಯಕ್ಷರಾದ ಶ್ರೀ ರಾಜಶೇಖರ ಯಡಹಳ್ಳಿ, ಶ್ರೀ ದಿಲೀಪ ಪ್ರಭಾಕರ, ಶ್ರೀ ಉಮೇಶ ಸಿಂಗೆ, ಶ್ರೀ ರಮೇಶ ಗಂಜಾಳ ಹಾಗೂ ಸಂಘದ ನೂರಾರು ಪ್ರಮುಖ ಪದಾಧಿಕಾರಿಗಳು, ರಾಜ್ಯದ ವಿವಿಧ ಜಿಲ್ಲೆಗಳ ಸಾವಿರಾರು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.1
- ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ಶುಕ್ರವಾರ ಯಾದಗಿರಿ ನಗರಕ್ಕೆ ದಿಢೀರ್ ಭೇಟಿ ನೀಡಿ ಹಳೆ ಬಸ್ ನಿಲ್ದಾಣ ಮತ್ತು ಚರಂಡಿ ನೀರು ಸೇರುವ ಹಳ್ಳದ ಪ್ರದೇಶಗಳನ್ನು ಪರಿಶೀಲಿಸಿದರು. ಬಸ್ ನಿಲ್ದಾಣದಲ್ಲಿ ಕುಡಿಯುವ ನೀರು ಮತ್ತು ಸ್ವಚ್ಛತೆ ಕೊರತೆ ಕಂಡುಬಂದಾಗ, ಅವರು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಡಿಸಿ ಅವರನ್ನು ತರಾಟೆಗೆ ತೆಗೆದುಕೊಂಡು, “ನಿಮ್ಮ ಮನೆ ಇದ್ದರೆ ಹೀಗೆ ಇಡುತ್ತಿದ್ದಿರಾ?” ಎಂದು ಪ್ರಶ್ನಿಸಿದರು. ಇದೇ ಸಂದರ್ಭದಲ್ಲಿ, ಓರ್ವ ಮಹಿಳೆ ನೀರಿನ ಸಮಸ್ಯೆ ಬಗ್ಗೆ ತಮ್ಮ ಅಳಲು ತೋಡಿಕೊಂಡರು. ನಂತರ, ಹಳ್ಳದ ಪ್ರದೇಶವನ್ನು ವೀಕ್ಷಿಸಿದ ಉಪಲೋಕಾಯುಕ್ತರು, ಚರಂಡಿ ನೀರು ಹಳ್ಳಕ್ಕೆ ಸೇರದಂತೆ ತಡೆಯಲು ನಗರಸಭೆ ಪೌರಾಯುಕ್ತ ಉಮೇಶ್ ಚವ್ಹಾಣ ಅವರಿಗೆ ಸೂಚನೆ ನೀಡಿದರು ಮತ್ತು ಮೈಸೂರು ಮಾದರಿಯನ್ನು ಅಧ್ಯಯನ ಮಾಡುವಂತೆ ಬುದ್ದಿಮಾತು ಹೇಳಿದರು. ಇದಲ್ಲದೆ, ನಗರದ ಬೋರ್ವೆಲ್ ನೀರನ್ನು ಪರೀಕ್ಷಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು.1
- ದೇವದುರ್ಗ ತಾಲೂಕಿನ ಪಲಕನಮರಡಿ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಈ ಸಂಬಂಧ ಜಾಲಹಳ್ಳಿ ಪಿಎಸ್ಐ ವೈಶಾಲಿ ಮೇಡಂ ಅವರು ಸ್ಥಳೀಯವಾಗಿ ಇಲ್ಲದ ಕೆಲವು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ದೇವದುರ್ಗ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಲಾಗಿದೆ. ಗಲಾಟೆ ನಡೆದ ಸಮಯದಲ್ಲಿ ಗ್ರಾಮದಲ್ಲಿ ಹಾಜರಿಲ್ಲದ, ಬದಲಿಗೆ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆಯೂ ಪ್ರಕರಣ ದಾಖಲಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಒಬ್ಬರ ಮೇಲೆ ಒಬ್ಬರು ಪ್ರಕರಣ ದಾಖಲಿಸಲು ಮುಂದಾದಾಗ ಪಿಎಸ್ಐ ಈ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.1
- ವಿಲ್ಲಾಸ್ ಮೊರೆ ಅವರು ಹೈಕಮಾಂಡ್ಗೆ ಆಗ್ರಹಿಸಿದ್ದು, ಸಚಿವ ಈಶ್ವರ್ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.1