ಮುದ್ದೇಬಿಹಾಳ, ಶ್ರೀಶೈಲಿಗೆ ವಿಶೇಷ ಬಸ್ ವ್ಯವಸ್ಥೆ ಮುದ್ದೇಬಿಹಾಳ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತರಳುವ ಭಕ್ತರ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗೀಯ ನಿಯಂತ್ರಣ ಅಧಿಕಾರಿ ನಾರಾಯಣಪ್ಪ ತಿಳಿಸಿದ್ದಾರೆ ಪತ್ರಿಕ ಪ್ರಕಟಣೆ ನೀಡಿರುವ ಅವರು ವಿಜಯಪುರ ಇಂಡಿ ಸಿಂದಗಿ ಮುದ್ದೇಬಿಹಾಳ ತಾಳಿಕೋಟಿ ಬಸವನ ಬಾಗೇವಾಡಿಯಿಂದ ವಿಶೇಷ ಬಸ್ಸುಗಳು ಸಂಚರಿಸಲಿವೆ ವಿಜಯಪುರದಿಂದ 970 ರೂ ಇಂಡಿಯಿಂದ 950 ಸಿಂದಗಿಯಿಂದ 875 ಮುದ್ದೇಬಿಹಾಳದಿಂದ 830 ತಾಳಿಕೋಟೆಯಿಂದ 825 ಬಾಗೇವಾಡಿಯಿಂದ 890 ಟಿಕೆಟ್ ದರ ನಿಗದಿ ಪಡಿಸಲಾಗಿದೆ ಮುದ್ದೇಬಿಹಾಳ ಘಟಕದ ಫೋನ್ ನಂಬರ್ 7760992267 ತಾಳಿಕೋಟಿ 7760992268 ಬಾಗೇವಾಡಿ 7760992269 ಸಂಪರ್ಕಿಸಬಹುದಾಗಿದೆ ಮುದ್ದೇಬಿಹಾಳ ಸಾರಿಗೆ ಘಟಕದಿಂದ ಶ್ರೀಶೈಲಕ್ಕೆ 40 ಬಸ್ಸುಗಳನ್ನು ಬಿಡಲಾಗುತ್ತದೆ ಎಂದು ಘಟಕದ ವ್ಯವಸ್ಥಾಪಕ ಅಶೋಕ್ ಕುಮಾರ್ ಬೋವಿ ಮಾಹಿತಿ ನೀಡಿದ್ದು ಭಕ್ತಾದಿಗಳು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ
ಮುದ್ದೇಬಿಹಾಳ, ಶ್ರೀಶೈಲಿಗೆ ವಿಶೇಷ ಬಸ್ ವ್ಯವಸ್ಥೆ ಮುದ್ದೇಬಿಹಾಳ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತರಳುವ ಭಕ್ತರ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗೀಯ ನಿಯಂತ್ರಣ ಅಧಿಕಾರಿ ನಾರಾಯಣಪ್ಪ ತಿಳಿಸಿದ್ದಾರೆ ಪತ್ರಿಕ ಪ್ರಕಟಣೆ ನೀಡಿರುವ ಅವರು ವಿಜಯಪುರ ಇಂಡಿ ಸಿಂದಗಿ ಮುದ್ದೇಬಿಹಾಳ ತಾಳಿಕೋಟಿ ಬಸವನ ಬಾಗೇವಾಡಿಯಿಂದ ವಿಶೇಷ ಬಸ್ಸುಗಳು ಸಂಚರಿಸಲಿವೆ ವಿಜಯಪುರದಿಂದ 970 ರೂ ಇಂಡಿಯಿಂದ 950 ಸಿಂದಗಿಯಿಂದ 875 ಮುದ್ದೇಬಿಹಾಳದಿಂದ 830 ತಾಳಿಕೋಟೆಯಿಂದ 825 ಬಾಗೇವಾಡಿಯಿಂದ 890 ಟಿಕೆಟ್ ದರ ನಿಗದಿ ಪಡಿಸಲಾಗಿದೆ ಮುದ್ದೇಬಿಹಾಳ ಘಟಕದ ಫೋನ್ ನಂಬರ್ 7760992267 ತಾಳಿಕೋಟಿ 7760992268 ಬಾಗೇವಾಡಿ 7760992269 ಸಂಪರ್ಕಿಸಬಹುದಾಗಿದೆ ಮುದ್ದೇಬಿಹಾಳ ಸಾರಿಗೆ ಘಟಕದಿಂದ ಶ್ರೀಶೈಲಕ್ಕೆ 40 ಬಸ್ಸುಗಳನ್ನು ಬಿಡಲಾಗುತ್ತದೆ ಎಂದು ಘಟಕದ ವ್ಯವಸ್ಥಾಪಕ ಅಶೋಕ್ ಕುಮಾರ್ ಬೋವಿ ಮಾಹಿತಿ ನೀಡಿದ್ದು ಭಕ್ತಾದಿಗಳು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ
- ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಮಾರ್ಚ ೧೫ ರವಿವಾರದಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಿನ್ನಲೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು. ಈ ಕಾರ್ಯಕ್ರಮದಲ್ಲಿ ಶಾಸಕ ಸಿ.ಟಿ.ರವಿ ಪಾಲ್ಗೊಳ್ಳಲಿದ್ದು. ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಲಿದ್ದು. ಸಾಯಂಕಾಲ ಎಸ್.ಆರ್.ಕಂಠಿ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಇದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಹಿಂದೂ ಸಮಾಜದ ಮುಖಂಡರು ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮನವಿ ಮಾಡಿದ್ದಾರೆ. ವರದಿ ಭೀಮಣ್ಣ ಗಾಣಿಗೇರ ಇಳಕಲ್ಲ1
- ಸಂತಪೂರ ಪೊಲೀಸರ ದಾಳಿ: ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ 38 ಕೆ.ಜಿ ಗಾಂಜಾ ವಶ. #JB_News_Kannada1
- ಹೋಳಿ ಹಬ್ಬದ ವೇಳೆ ನಡೆದ ಸ್ನೇಹಿತರ ನಡುವಿನ ಜಗಳ ಕೊಲೆ ಪ್ರಕರಣದಲ್ಲಿ ಅಂತ್ಯವಾದ ಘಟನೆ ತೇರದಾಳದಲ್ಲಿ ನಡೆದಿದ್ದು, ಈ ಸಂಬಂಧದ ಸಿಸಿಟಿವಿ ದೃಶ್ಯಾವಳಿಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ತೇರದಾಳ ಪಟ್ಟಣದ ನಿವಾಸಿ ರಾಹುಲ್ ಎಂಬ ಯುವಕನನ್ನು ಸ್ನೇಹಿತನೇ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆಯು ನಡೆದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಜಗಳ ಹಾಗೂ ಗಲಾಟೆಯ ಕೆಲವು ದೃಶ್ಯಗಳು ಸೆರೆಯಾಗಿದ್ದು, ಅವು ಇದೀಗ ಹರಿದಾಡುತ್ತಿವೆ. ಹೋಳಿ ಹಬ್ಬದ ವೇಳೆ ಆರಂಭವಾದ ಸಣ್ಣ ಮಟ್ಟದ ವಾಗ್ವಾದವು ತೀವ್ರ ಸ್ವರೂಪ ಪಡೆದು ಕೊಲೆಗೆ ಕಾರಣವಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.1
- Post by Rahuldev singh1
- ವಿಜಯಪುರ: ಕಾಂಗ್ರೆಸ ವಿರುದ್ಧ ಕಿಡಿಕಾರಿದ ಬಿಜೆಪಿವಕ್ತಾರ ಎನ. ಚಂದ್ರಶೇಖರ ನಗರದ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಪಕ್ಷದ ರಾಜ್ಯ ವಕ್ತಾರ ಎಚ್.ಎನ್. ಚಂದ್ರಶೇಖರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸ್ವಯಂಘೋಷಿತ ಆರ್ಥಿಕ ತಜ್ಞ ಸಿದ್ದರಾಮಯ್ಯ ಅವರು ರಾಜ್ಯವನ್ನು ಸಾಲದ ಸುಳಿಯಲ್ಲಿ ತಳ್ಳಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಶಾಸಕರೇ ಆಕ್ರೋಶಗೊಂಡಿದ್ದಾರೆ ಎಂದರು. ಪಂಚ ಗ್ಯಾರಂಟಿ ಯೋಜನೆಯಲ್ಲಿ ಯುವನಿಧಿ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದಾರೆ ಮತ್ತು ರಾಜ್ಯದಲ್ಲಿ ನಿರುದ್ಯೋಗ ಹೆಚ್ಚಾಗಿದೆ ಎಂದು ಅವರು ಕಿಡಿ ಕಾರಿದರು.1
- Post by Nava karnataka News channel1
- Post by Welding Nizam Welding Nizam5
- ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ)ದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಘನಶ್ಯಾಮ ಭಾಂಡಗೆ ಗಂಭೀರ ಆರೋಪ ಮಾಡಿದ್ದಾರೆ. ಇ-ಖಾತಾ ಆನ್ಲೈನ್ ಸಮಸ್ಯೆಯಿಂದ ಸಾವಿರಾರು ಮುಳುಗಡೆ ಸಂತ್ರಸ್ತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂತ್ರಸ್ತರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಸಂತ್ರಸ್ತರ ಸಮಸ್ಯೆಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿದರು.1