"100 ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಯ ಅಭಿವೃದ್ಧಿ ಪಡಿಸುವುದೇ ನಮ್ಮ ಗುರಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ." ನಮ್ಮ ಕೆಲಸಗಳು ಗಟ್ಟಿಯಾಗಿರಬೇಕೆಂದು ನಾವು ಬಯಸುತ್ತೇವೆ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರಸದೆ ಜನಪರ ಕಾರ್ಯಗಳಿಗೆ ನಾವು ಮೊದಲ ಆದ್ಯತೆ ನೀಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ವಾಲ್ಮೀಕಿ ಮಹರ್ಷಿ ಹಾಗೂ ಬೇಡರ ಕಣ್ಣಪ್ಪ ಶೀಲಾ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ನೂತನ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 100 ಶಾಲೆಗಳ ನಿರ್ಮಾಣ ಶಿಕ್ಷಣ ಕ್ಷೇತ್ರದ ಕುರಿತು ತಮ್ಮ ದೃಷ್ಟಿಯನ್ನು ಹಂಚಿಕೊಂಡ ಸಚಿವರು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ನನ್ನ ಕ್ಷೇತ್ರದಲ್ಲಿ ಈಗಾಗಲೇ 100 ಸರ್ಕಾರಿ ಶಾಲೆಗಳನ್ನು ನಿರ್ಮಿಸಲಾಗಿದೆ ಮುಂದಿನ ಎರಡುವರೆ ವರ್ಷದಲ್ಲಿ ಇನ್ನೂ ನೂರು ಶಾಲೆಗಳನ್ನು ಕಟ್ಟಿ ಮಾದರಿಯಾಗುತ್ತೇನೆ ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸುವುದೇ ನಮ್ಮ ಗುರಿ ಎಂದರು ಎರಡುವರೆ ವರ್ಷಗಳಲ್ಲಿ ಮಲೆನಾಡು ಭಾಗದಲ್ಲಿ ಸುಮಾರು 400 ಕಾಲು ಸಂಕಲಗಳನ್ನು ನಿರ್ಮಿಸಲಾಗಿದೆ ಕಲ್ಮನೆ ಗ್ರಾಮದ ಪ್ರೌಢಶಾಲೆಗೆ ಎರಡು ನೂತನ ಕೊಠಡಿಗಳನ್ನು ಮಂಜೂರು ಮಾಡುವುದಾಗಿ ತಿಳಿಸಿದರು ಹಾಗೂ ಪಕ್ಷಭೇದ ಮರೆತು ಅಭಿವೃದ್ಧಿ ಮಾಡುವೆ ಸಂಸದ ಬಿ ವೈ ರಾಘವೇಂದ್ರ ಅವರ ಕೋರಿಕೆಯಂತೆ ಹೆಗ್ಗೇರಿಯ ಕೆರೆ ಏರಿಯಾ ಕಾಮಗಾರಿಗೆ ಆದ್ಯತೆ ಶಿಕಾರಿಪುರದ ಕೊಟ್ರಳ್ಳಿ ಬಳಿಯ ಟೋಲ್ ಗೇಟ್ ತೆಗೆಯುವಂತೆ ಸಂಸದರು ಮನವಿ ಮಾಡಿದಾಗ ಇದು ನಿಮ್ಮ ಸರ್ಕಾರ ಇದ್ದಾಗ ಆಗಿದ್ದು ಆದರೆ ಮುಂದಿನ ದಿನಗಳಲ್ಲಿ ಗಂಭೀರವಾಗಿ ಪರಿಶೀಲನೆ ಮಾಡಲಾಗುವುದು ಎಂದರು. ಈ ಕಾರ್ಯಕ್ರಮದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದು ಸಂಸದ ಬಿ .ವೈ ರಾಘವೇಂದ್ರ ಹಾಗೂ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷರಾದ ನಗರದ ಮಹದೇವಪ್ಪ ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ್ ಗೌಡ ಮುಖಂಡರಾದ ಬಿ.ಕೆ ಮಂಜಪ್ಪ ಕಲ್ಮನೆ ಗೋಣಿ ಮಾಲತೇಶ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
"100 ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಯ ಅಭಿವೃದ್ಧಿ ಪಡಿಸುವುದೇ ನಮ್ಮ ಗುರಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ." ನಮ್ಮ ಕೆಲಸಗಳು ಗಟ್ಟಿಯಾಗಿರಬೇಕೆಂದು ನಾವು ಬಯಸುತ್ತೇವೆ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರಸದೆ ಜನಪರ ಕಾರ್ಯಗಳಿಗೆ ನಾವು ಮೊದಲ ಆದ್ಯತೆ ನೀಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ವಾಲ್ಮೀಕಿ ಮಹರ್ಷಿ ಹಾಗೂ ಬೇಡರ ಕಣ್ಣಪ್ಪ ಶೀಲಾ ಮೂರ್ತಿಗಳ ಪ್ರತಿಷ್ಠಾಪನೆ
ಮತ್ತು ನೂತನ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 100 ಶಾಲೆಗಳ ನಿರ್ಮಾಣ ಶಿಕ್ಷಣ ಕ್ಷೇತ್ರದ ಕುರಿತು ತಮ್ಮ ದೃಷ್ಟಿಯನ್ನು ಹಂಚಿಕೊಂಡ ಸಚಿವರು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ನನ್ನ ಕ್ಷೇತ್ರದಲ್ಲಿ ಈಗಾಗಲೇ 100 ಸರ್ಕಾರಿ ಶಾಲೆಗಳನ್ನು ನಿರ್ಮಿಸಲಾಗಿದೆ ಮುಂದಿನ ಎರಡುವರೆ ವರ್ಷದಲ್ಲಿ ಇನ್ನೂ ನೂರು ಶಾಲೆಗಳನ್ನು ಕಟ್ಟಿ ಮಾದರಿಯಾಗುತ್ತೇನೆ ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸುವುದೇ ನಮ್ಮ ಗುರಿ ಎಂದರು ಎರಡುವರೆ ವರ್ಷಗಳಲ್ಲಿ ಮಲೆನಾಡು ಭಾಗದಲ್ಲಿ
ಸುಮಾರು 400 ಕಾಲು ಸಂಕಲಗಳನ್ನು ನಿರ್ಮಿಸಲಾಗಿದೆ ಕಲ್ಮನೆ ಗ್ರಾಮದ ಪ್ರೌಢಶಾಲೆಗೆ ಎರಡು ನೂತನ ಕೊಠಡಿಗಳನ್ನು ಮಂಜೂರು ಮಾಡುವುದಾಗಿ ತಿಳಿಸಿದರು ಹಾಗೂ ಪಕ್ಷಭೇದ ಮರೆತು ಅಭಿವೃದ್ಧಿ ಮಾಡುವೆ ಸಂಸದ ಬಿ ವೈ ರಾಘವೇಂದ್ರ ಅವರ ಕೋರಿಕೆಯಂತೆ ಹೆಗ್ಗೇರಿಯ ಕೆರೆ ಏರಿಯಾ ಕಾಮಗಾರಿಗೆ ಆದ್ಯತೆ ಶಿಕಾರಿಪುರದ ಕೊಟ್ರಳ್ಳಿ ಬಳಿಯ ಟೋಲ್ ಗೇಟ್ ತೆಗೆಯುವಂತೆ ಸಂಸದರು ಮನವಿ ಮಾಡಿದಾಗ ಇದು ನಿಮ್ಮ ಸರ್ಕಾರ ಇದ್ದಾಗ ಆಗಿದ್ದು ಆದರೆ ಮುಂದಿನ ದಿನಗಳಲ್ಲಿ ಗಂಭೀರವಾಗಿ
ಪರಿಶೀಲನೆ ಮಾಡಲಾಗುವುದು ಎಂದರು. ಈ ಕಾರ್ಯಕ್ರಮದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದು ಸಂಸದ ಬಿ .ವೈ ರಾಘವೇಂದ್ರ ಹಾಗೂ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷರಾದ ನಗರದ ಮಹದೇವಪ್ಪ ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ್ ಗೌಡ ಮುಖಂಡರಾದ ಬಿ.ಕೆ ಮಂಜಪ್ಪ ಕಲ್ಮನೆ ಗೋಣಿ ಮಾಲತೇಶ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
- Post by Mayur TV Hangal YouTube c1
- Post by Suresh Belagere1
- ನಾಡಪ್ರಭು ಕೆಂಪೇಗೌಡರ ಸಂಪೂರ್ಣ ಜೀವನ ಚರಿತ್ರೆ #news #onlinetv24x7 #ನಾಡಪ್ರಭುಕೆಂಪೇಗೌಡರು #ಬೆಂಗಳೂರು1
- ಜಾವಗಲ್ ಹೋಬಳಿಯ ವೃಂದಾವನ ಹಳ್ಳಿಯ ಗ್ರಾಮದೇವತೆ ಊರು ಹಬ್ಬದಲ್ಲಿ ಹಲವು ಗ್ರಾಮದ ದೇವತೆಗಳು ಕರೆಯಿಸಿ ಗ್ರಾಮದಲ್ಲಿ ಅದ್ದೂರಿಯಾಗಿ ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರೆ, ಪರವು, ಕೆಂಡೋತ್ಸವ ಮುಂತಾದ ಗ್ರಾಮದ ಆಚರಣೆಗಳು ಅಲ್ಲಿ ಬಂದಿರುವ ಭಕ್ತರನ್ನು ಗಮನಸೆಳೆದವು..2
- Post by ಗೋಪನಹಳ್ಳಿಶಿವಣ್ಣ1
- ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದ ಅಧೀನ ಸಂಸ್ಥೆಯಾಗಿರುವ ಭಾರತೀಯ ಮಜ್ದೂರ್ ಸಂಘ(ಬಿಎಂಎಸ್)ವು ಬಂಟ್ವಾಳದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಅವರು ಭಗವಾಧ್ವಜ((ಕೇಸರಿ)) ಹಿಡಿದಿರುವ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಉದ್ಘಾಟಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಕಾರ್ಯಕ್ರಮದ ಫೋಟೊ ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅಲ್ಲದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಎಂಎಸ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ತಿಮ್ಮಯ್ಯ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ರೈ ವೇದಿಕೆ ಹಂಚಿಕೊಳ್ಳುವ ಮೂಲಕ ಸರಕಾರಿ ಸೇವಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.1
- ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ರೈತ ಚಂದ್ರಶೇಖರಗೌಡ ಪಾಟೀಲ್ ಇವರು ತಮ್ಮ ಎರಡುವರೆ ಎಕರೆ ಜಮೀನಿನಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದರು, ಸಾವಯವ ಪದ್ಧತಿಯಲ್ಲಿ ಬಾಳೆ ತೋಟವನ್ನು ಬೆಳೆಸಿದ್ದರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹನಿ ನೀರಾವರಿ ಮಾಡಿ ಇನ್ನೇನು ಬೆಳೆ ಕೈಗೆ ಬರುವ ಸಮಯದಲ್ಲಿ ಬಾಳೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮ ಬಾಳೇ ಗಿಡಗಳು ಮತ್ತು ಬಾಳೆ ಗೊಣೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ , ಗುರುವಾರ ನಸುಕಿನ ಜಾವ ಬೆಂಕಿ ತಗುಲಿ ಸಂಪೂರ್ಣ ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ ನೀರು ಹಾಯಿಸಲೆಂದು ಬೆಳಿಗ್ಗೆ 9 ರ ಸುಮಾರಿಗೆ ರೈತ ಚಂದ್ರಶೇಖರಗೌಡ ಪಾಟೀಲ ಜಮೀನಿಗೆ ತೆರಳಿದಾಗ ವಿಷಯ ತಿಳಿದಿದ್ದು ರೈತ ನೆಲಕ್ಕೆ ಕುಸಿದಿದ್ದಾನೆ, ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ ಹಾಗೂ ಕಂದಾಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ತಾಲೂಕಿನಲ್ಲಿ ರೈತರಿಗೆ ಒಂದಿಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇರುತ್ತವೆ , ಬೆಳೆ ಇದ್ದಲ್ಲಿ ಬೆಲೆ ಇರುವುದಿಲ್ಲ ಬೆಲೆ ಇದ್ದಾಗ ಬೆಳೆ ಇರುವುದಿಲ್ಲ ಅತಿವೃಷ್ಟಿ ಅನಾವೃಷ್ಟಿಯಿಂದ ತಾಲೂಕಿನ ರೈತರಿಗೆ ಒಂದು ವರ್ಷವೂ ಸಹ ಉತ್ತಮ ಬೆಲೆ ಸಿಗದೇ ರೈತರು ಕಂಗಾಲಾಗುತ್ತಾ ಬಂದಿದ್ದಾರೆ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈತರು ಏನಾದರೂ ಹೊಸದನ್ನು ಮಾಡಲು ಮುಂದಾದರೆ ಈ ರೀತಿಯ ಅನಾಹುತಗಳು ಸಂಭವಿಸುತ್ತದೆ ಹೀಗಾಗಿ ರೈತರಿಗೆ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಹೊಂದಲು ಅವಕಾಶ ದೊರೆಯದಂತಾಗಿದೆ, ಕಾರಣ ಸರ್ಕಾರ ಇಂತಹ ಸಂಕಷ್ಟದಲ್ಲಿ ಸಿಲುಕಿರುವಂತಹ ರೈತರಿಗೆ ಪರಿಹಾರವನ್ನು ನೀಡಿ ಸ್ವಲ್ಪಮಟ್ಟಿಗಾದರೂ ಸಾಲದ ಹೊರೆಯನ್ನು ಕಡಿಮೆ ಮಾಡುವಲ್ಲಿ ಮುಂದಾಗಬೇಕಿದೆ,1
- ಚಳ್ಳಕೆರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಾಯಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಕರ ಇಲಾಖೆ ಚಳ್ಳಕೆರೆ ತಾಲ್ಲೂಕು ಕಿರಿಯಾ /ಹಿರಿಯ ಪ್ರಥಾಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ PRASHAST 2.0 ಕುರಿತು ಒಂದು ದಿನದ ಕಾರ್ಯಾಗಾರ ನಗರದ ಸ್ವಾಮಿ ವಿವೇಕಾನಂದ ಪ್ರೌಡಶಾಲೆಯಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಗಾರಕ್ಕೆ ಬಿಇಓ ಕೆ.ಎಸ್ ಸುರೇಶ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದರು..ತರಬೇತಿ ಕಾರ್ಯಕ್ರಮದಲ್ಲಿ ಬಿಆರ್ ಸಿ ಮಂಜುಬಾಬು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಿಟಿ.ಮಂಜುನಾಥ ಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇಸ್ವಾಮಿ, ಈಶ್ವರಪ್ಪ , ಎಚ್ ಓ ರಾಜಣ್ಣ,ಪ್ರಕಾಶ ,ಮಲ್ಲೇಶ, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಇದ್ದರು...1