Shuru
Apke Nagar Ki App…
ಕುಶಾಲನಗರದ ಮುಖ್ಯ ರಸ್ತೆಗಳಲ್ಲಿ ಬೀದಿ ದನಗಳ ಹಾವಳಿ, ಅಪಾಯದ ಮುನ್ಸೂಚನೆ ಕುಶಾಲನಗರ ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಬೀದಿ ದನಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಸಾರ್ವಜನಿಕರ ಜೀವ ಹಾಗೂ ಆಸ್ತಿಗೆ ಅಪಾಯ ಉಂಟುಮಾಡುತ್ತಿದೆ ವಾಹನ ಸವಾರರು ಆತಂಕದ ನಡುವೆ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳಲ್ಲಿ ಎರಡು ಗೋಮಾತೆಗಳು ಮೃತಪಟ್ಟಿರುವುದು ಅತ್ಯಂತ ವಿಷಾದನೀಯ ಇದು ಕೇವಲ ಜಾನುವಾರುಗಳ ಸಾವಲ್ಲ ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯದ ಪ್ರತೀಕವೂ ಆಗಿದೆ ಇಂದು ಗೋಮಾತೆಗಳು ಬಲಿಯಾಗಿದ್ದರೆ ನಾಳೆ ಅಮಾಯಕ ನಾಗರಿಕರ ಜೀವಕ್ಕೂ ಅಪಾಯ ಎದುರಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ.
Kodagu Updates
ಕುಶಾಲನಗರದ ಮುಖ್ಯ ರಸ್ತೆಗಳಲ್ಲಿ ಬೀದಿ ದನಗಳ ಹಾವಳಿ, ಅಪಾಯದ ಮುನ್ಸೂಚನೆ ಕುಶಾಲನಗರ ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಬೀದಿ ದನಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಸಾರ್ವಜನಿಕರ ಜೀವ ಹಾಗೂ ಆಸ್ತಿಗೆ ಅಪಾಯ ಉಂಟುಮಾಡುತ್ತಿದೆ ವಾಹನ ಸವಾರರು ಆತಂಕದ ನಡುವೆ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳಲ್ಲಿ ಎರಡು ಗೋಮಾತೆಗಳು ಮೃತಪಟ್ಟಿರುವುದು ಅತ್ಯಂತ ವಿಷಾದನೀಯ ಇದು ಕೇವಲ ಜಾನುವಾರುಗಳ ಸಾವಲ್ಲ ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯದ ಪ್ರತೀಕವೂ ಆಗಿದೆ ಇಂದು ಗೋಮಾತೆಗಳು ಬಲಿಯಾಗಿದ್ದರೆ ನಾಳೆ ಅಮಾಯಕ ನಾಗರಿಕರ ಜೀವಕ್ಕೂ ಅಪಾಯ ಎದುರಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ.
More news from ಕರ್ನಾಟಕ and nearby areas
- ಕುಶಾಲನಗರದ ಮುಖ್ಯ ರಸ್ತೆಗಳಲ್ಲಿ ಬೀದಿ ದನಗಳ ಹಾವಳಿ, ಅಪಾಯದ ಮುನ್ಸೂಚನೆ ಕುಶಾಲನಗರ ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಬೀದಿ ದನಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಸಾರ್ವಜನಿಕರ ಜೀವ ಹಾಗೂ ಆಸ್ತಿಗೆ ಅಪಾಯ ಉಂಟುಮಾಡುತ್ತಿದೆ ವಾಹನ ಸವಾರರು ಆತಂಕದ ನಡುವೆ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳಲ್ಲಿ ಎರಡು ಗೋಮಾತೆಗಳು ಮೃತಪಟ್ಟಿರುವುದು ಅತ್ಯಂತ ವಿಷಾದನೀಯ ಇದು ಕೇವಲ ಜಾನುವಾರುಗಳ ಸಾವಲ್ಲ ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯದ ಪ್ರತೀಕವೂ ಆಗಿದೆ ಇಂದು ಗೋಮಾತೆಗಳು ಬಲಿಯಾಗಿದ್ದರೆ ನಾಳೆ ಅಮಾಯಕ ನಾಗರಿಕರ ಜೀವಕ್ಕೂ ಅಪಾಯ ಎದುರಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ.1
- ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಕುಮಾರ್ ಸೂಚನೆ ಕೆ.ಆರ್.ಪೇಟೆ,ಸೆ.02: ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಗಂಭೀರ ಸಮಸ್ಯೆ ಇರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕುಡಿಯುವ ನೀರಿಗೆ ಅನುಧಾನದ ಕೊರತೆ ಇಲ್ಲ. ಸರ್ಕಾರವು ಕುಡಿಯುವ ನೀರಿಗೆ ಪ್ರತ್ಯೇಕ ಅಗತ್ಯ ಅನುಧಾನ ನೀಡಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ತಿಳಿಸಿದರು. ಅವರು ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಆಡಳಿತಾಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿದರೆ ಕುಡಿಯುವ ನೀರಿನ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದು. ಕುಡಿಯುವ ನೀರಿಗೆ ಅನುಧಾನ ಕೊರತೆಯಿಲ್ಲ. ಸರ್ಕಾರವು ಕಡಿಯುವ ನೀರಿಗಾಗಿಯೇ ಪ್ರತ್ಯೇಕ ಅನುಧಾನ ಬಿಡುಗಡೆ ಮಾಡಿದೆ. ವಿದ್ಯುತ್ ಇಲಾಖೆ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಗಳು ಗ್ರಾಮ ಪಂಚಾಯಿತಿ ಆಡಳಿತಕ್ಕೆ ಪೂರ್ಣ ಸಹಕಾರ ನೀಡಬೇಕು. ನಿರ್ಲಕ್ಷ್ಯ ಮಾಡಿದರೆ ಜಿಲ್ಲಾಡಳಿತವು ಇದಕ್ಕೆ ಗಂಭೀರವಾಗಿ ಪರಿಗಣಿಸಲಿದೆ. ಇದಕ್ಕೆ ಆಸ್ಪದ ಕೊಡದೇ ಕುಡಿಯುವ ನೀರಿಗೆ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಗ್ರಾಮ ಪಂಚಾಯಿತಿಗಳು ಬೇಸಿಗೆ ಮುಗಿಯುವ ತನಕ ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಸಮಸ್ಯೆ ಇರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕೊಳವೆಬಾವಿ, ಪಂಪ್ಸೆಟ್ ಹಾಗೂ ಪೈಪ್ಲೈನ್ಗಳ ದುರಸ್ತಿಯನ್ನು ಮಾಡಿಸಲು ವಿಳಂಭ ಮಾಡಬಾರದು. ಅಗತ್ಯವಿರುವ ಕಡೆ ಪರ್ಯಾಯ ನೀರಿನ ಮೂಲಗಳನ್ನು ಗುರುತಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ಅಪೂರ್ಣ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ದೊರೆಯುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿದರು. ತಾಲ್ಲೂಕಿನ ಬರ ಪರಿಸ್ಥಿತಿ, ಕೆರೆ-ಕಟ್ಟೆಗಳಲ್ಲಿನ ನೀರಿನ ಸಂಗ್ರಹ, ಅಂತರ್ಜಲ ಮಟ್ಟ, ಬೆಳೆಗಳ ಸ್ಥಿತಿಗತಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕುರಿತು ಪರಿಶೀಲಿಸಿ, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಾಲ್ಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಶಾಸಕ ಹೆಚ್.ಟಿ.ಮಂಜು ಮಾತನಾಡಿ ವಸತಿ-ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ಪ್ರತಿ ಗ್ರಾಮ ಪಂಚಾಯಿತಿ ವತಿಯಿಂದ ತಲಾ 5ಎಕರೆ ಗುರುತಿಸಿ ನಿವೇಶನ ಹಂಚಿಕೆ ಅವಕಾಶ ನೀಡುವಂತೆ ಕಳೆದ 3ವರ್ಷಗಳಿಂದ ತಿಳಿಸುತ್ತಿದ್ದರೂ ಸಹ ಇದು ಸಾಕಾರಗೊಳ್ಳುತ್ತಿಲ್ಲ. ಇದಕ್ಕೆ ಗ್ರಾಮಪಂಚಾಯಿತಿ ಆಡಳಿತ, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸರ್ವೆ ಅಧಿಕಾರಿಗಳು ಹಾಗೂ ತಹಸೀಲ್ದಾರ್ ಅವರು ಸರಿಯಾಗಿ ಸ್ಪಂಧಿಸದೇ ಇರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ಶಾಸಕರು ಕೂಡಲೇ ನೂತನ ತಹಸೀಲ್ದಾರ್ ಅವರು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಒಂದೆರಡು ತಿಂಗಳಲ್ಲಿ ಬಡವರಿಗೆ ನಿವೇಶನ ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರಿಗಳ ವಿರುದ್ದ ಬೇಸರ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗಳು ನಿವೇಶನ ಹಂಚಿಕೆಯ ಉದ್ದೇಶಕ್ಕಾಗಿ ಗ್ರಾಮವಾರು ಲಭ್ಯವಿರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನ ಹಂಚಿಕೆಗೆ ಸಹಕಾರ ನೀಡಬೇಕು. ಈ ವಿಷಯದ ಬಗ್ಗೆ ಹಿಂದಿನ ತಹಸೀಲ್ದಾರ್ ಅವರು ಸೂಕ್ತ ಗಮನ ಹರಿಸಲಿಲ್ಲ. ನೂತನ ತಹಸೀಲ್ದಾರ್ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಿಕೊಡುವ ಮೂಲಕ ಶಾಸಕರ ನೇತೃತ್ವದಲ್ಲಿ ನಿವೇಶನ ಹಂಚಿಕೆಗೆ ತಾಲ್ಲೂಕು ಆಡಳಿತ ತುರ್ತು ಕ್ರಮ ವಹಿಸಬೇಕು. ಮುಂದಿನ ಸಭೆಯೊಳಗೆ ಈ ಬಗ್ಗೆ ಪ್ರಗತಿ ವರದಿ ನೀಡುವಂತೆ ನೂತನ ತಹಸೀಲ್ದಾರ್ ವಿ.ಶ್ರೇಯಸ್ ಅವರಿಗೆ ಸಲಹೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಯಶಸ್ಸಿಗೆ ಕೃಷಿ, ಪಶುಸಂಗೋಪನೆ, ನರೇಗಾ ಕಾಮಗಾರಿಗಳು, ಜಲ ಸಂರಕ್ಷಣೆ, ವಿದ್ಯುತ್ ಹಾಗೂ ಸಾರ್ವಜನಿಕರ ಇತರೆ ಸಮಸ್ಯೆಗಳ ಕುರಿತು ಪರಿಶೀಲಿಸಲಾಯಿತು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಹಂತದಲ್ಲಿಯೇ ತ್ವರಿತವಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಸದರಿ ಸಭೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕು ತಹಶೀಲ್ದಾರ್ ವಿ.ಶ್ರೇಯಸ್, ಜಿಲ್ಲಾ ಜಲಜೀವನ್ ಮಿಷನ್ ಯೋಜನೆಯ ಇಇ ಮನೋಜ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷ್ಮ ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು. ಚಿತ್ರಶೀರ್ಷಿಕೆ:02.ಕೆ.ಆರ್.ಪಿ-01: ಕೆ.ಆರ್.ಪೇಟೆ: ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಶಾಸಕ ಹೆಚ್.ಟಿ.ಮಂಜು ಭಾಗವಹಿಸಿ ಮಾತನಾಡಿದರು. ==================================2
- All About,Irregularities & One Man 5 Post by highly influential person in #DistrictWaqfAdvisoryCommittee #Mysuru *ಭಾರತ ನಲ್ಲಿ ವೈರಲ್*1
- ನಂಜನಗೂಡು ತಾಲ್ಲೂಕಿನಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ್ ಬರ ಪರಿಶೀಲನೆ ನಂಜನಗೂಡು ತಾಲ್ಲೂಕಿನಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ್ ಬರ ಪರಿಶೀಲನೆ ನಂಜನಗೂಡು: ತಾಲ್ಲೂಕಿನ ಚಿಕ್ಕ ಕವಲಂದೆ, ದೊಡ್ಡ ಕವಲಂದೆ ಹಾಗೂ ಗಟ್ಟವಾಡಿ ಗ್ರಾಮಗಳಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಬರ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಜೋಳ, ಸೂರ್ಯಕಾಂತಿ ಸೇರಿದಂತೆ ವಿವಿಧ ಬೆಳೆಗಳನ್ನು ರೈತರ ಜಮೀನುಗಳಿಗೆ ತೆರಳಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಉಪಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು. ಗಟ್ಟವಾಡಿ ಗ್ರಾಮದ ರೈತ ಮಹದೇವಪ್ಪ ಮತ್ತು ಶಿವಬಸಪ್ಪ ಅವರ ಜಮೀನಿಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ಡಾ.ಜಿ. ಪರಮೇಶ್ವರ್ ಅವರು, ನಂಜನಗೂಡು ತಾಲೂಕಿನಲ್ಲಿ ಬರ ವೀಕ್ಷಣೆಗೆ ಬಂದಿದ್ದೇನೆ. ಮಳೆಯ ಕೊರತೆಯಿಂದ ಜೋಳ ಹಾಗೂ ಸೂರ್ಯಕಾಂತಿ ಸೇರಿದಂತೆ ಹಲವು ಬೆಳೆಗಳು ಒಣಗಿ ನಾಶವಾಗಿವೆ ಎಂದು ಹೇಳಿದರು. ರೈತರು ಸಾಲ ಮಾಡಿಕೊಂಡು ಸಾವಿರಾರು ರೂಪಾಯಿ ವೆಚ್ಚ ಮಾಡಿ ಬೆಳೆ ಬೆಳೆದಿದ್ದಾರೆ. ಆದರೆ ಮಳೆ ಇಲ್ಲದೆ ಬೆಳೆಗಳು ನಾಶವಾಗಿರುವುದರಿಂದ ರೈತರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಈ ಗಂಭೀರ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ದೊಡ್ಡ ಕವಲಂದೆ ಭಾಗಕ್ಕೆ ನೀರಾವರಿ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಕೆಲಸ ಮಾಡಲಿದ್ದಾರೆ ಎಂದರು. ರೈತರ ಅಸಮಾಧಾನ ಇದೇ ವೇಳೆ ಪತ್ರಕರ್ತರು ಸ್ಮಶಾನ ಭೂಮಿ ಸಮಸ್ಯೆ ಕುರಿತು ಕಂದಾಯ ಸಚಿವರ ಗಮನ ಸೆಳೆಯಲು ಪ್ರಯತ್ನಿಸಿದರೂ, ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಮುಂದುವರಿದರು. ಬರ ಪರಿಶೀಲನಾ ಪ್ರವಾಸವು ಕೇವಲ ಕೆಲವೇ ನಿಮಿಷಗಳಿಗೆ ಸೀಮಿತವಾಗಿದ್ದು, ರೈತರಿಗೆ ತಮ್ಮ ಸಮಸ್ಯೆಗಳನ್ನು ಸಂಪೂರ್ಣವಾಗಿ ವಿವರಿಸಲು ಅವಕಾಶ ದೊರೆಯಲಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ರೈತರನ್ನು ಉಪಮುಖ್ಯಮಂತ್ರಿಗಳ ಬಳಿ ತೆರಳಿ ಸಮಸ್ಯೆ ಹೇಳಲು ಅವಕಾಶ ನೀಡಲಿಲ್ಲ ಎಂಬ ಆರೋಪವೂ ರೈತರಿಂದ ಕೇಳಿಬಂದಿದೆ. “ಬರ ಪ್ರವಾಸವು ಕೇವಲ ನಾಮಕಾವಸ್ಥೆಗೆ ಮಾತ್ರ ಸೀಮಿತವಾಗಿದೆಯೇ?” ಎಂಬ ಪ್ರಶ್ನೆಯನ್ನು ರೈತರು ವ್ಯಕ್ತಪಡಿಸಿದ್ದು, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ತಹಶೀಲ್ದಾರ್ ಡಾ. ಸ್ಮಿತಾ ರಾಮು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್. ರವಿ, ಸಹಾಯಕ ಕೃಷಿ ನಿರ್ದೇಶಕ ರವಿ, ಕವಲಂದೆ ಉಪ ತಹಶೀಲ್ದಾರ್ ಕಿರಣ್ ಕುಮಾರ್, ರಾಜಸ್ವ ನಿರೀಕ್ಷಕ ಹೆನ್ರಿ ಡಿಸೋಜಾ, ಡಾ.ಜಿ. ಪರಮೇಶ್ವರ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸಿ. ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.4
- ಪಿರಿಯಾಪಟ್ಟಣವನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಒತ್ತಾಯ ಮಾಡಿದ್ದಾರೆ ಮೈಸೂರು: ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳು ಹಾಗೂ ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಮೈಸೂರು ಜಿಲ್ಲೆಯ 9 ತಾಲೂಕುಗಳ ಪೈಕಿ 8 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಪಿರಿಯಾಪಟ್ಟಣ ತಾಲೂಕನ್ನು ಕೈಬಿಟ್ಟಿರುವುದು ರೈತರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಸಂಚಾಲಕ ಡಾ. ಅರುಣ್ ಕುಮಾರ್ ಆರೋಪಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕು ಈಗಾಗಲೇ ಸಮರ್ಪಕ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುವ ಪ್ರದೇಶವಾಗಿದೆ. ಮಳೆ ಕೊರತೆಯಿಂದಾಗಿ ರೈತರು ಬೆಳೆ ಬೆಳೆಯಲು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಹೊರಗಿಟ್ಟಿರುವುದು ರೈತರ ಬಾಯಿಗೆ ಮಣ್ಣು ಎರಚಿದಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ಈ ನಿರ್ಧಾರವು ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚಿದಂತಾಗಿದೆ. ಬರದ ಪರಿಣಾಮದಿಂದ ಸಂಕಷ್ಟದಲ್ಲಿರುವ ಪಿರಿಯಾಪಟ್ಟಣದ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಕೆ. ವೆಂಕಟೇಶ್ ಅವರು ಈ ವಿಚಾರವನ್ನು ಪುನರ್ ಪರಿಶೀಲಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಪಿರಿಯಾಪಟ್ಟಣ ತಾಲೂಕನ್ನೂ ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು ಡಾ. ಅರುಣ್ ಕುಮಾರ್ ಆಗ್ರಹಿಸಿದರು.1
- ಹುಟ್ಟು ಹಬ್ಬದ ಪ್ರಯುಕ್ತ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಹಣ್ಣು ಹಂಪಲು ವಿತರಿಸಿದ ಪುತ್ತೂರು ಶಾಸಕ ಹುಟ್ಟು ಹಬ್ಬದ ಪ್ರಯುಕ್ತ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಹಣ್ಣು ಹಂಪಲು ವಿತರಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ..1
- ಪುತ್ತೂರು ಶಾಸಕರು ತನ್ನ ರೌಡಿಗಳನ್ನು ಬಿಟ್ಟು ನನ್ನ ಕೊಲೆ ಮಾಡಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಿದ್ದಾರೆ ಅನ್ನೋದು ನನಗೆ ಗೊತ್ತಿದೆ ಮಂಗಳೂರು:ಪುತ್ತೂರು ಶಾಸಕರು ತನ್ನ ರೌಡಿಗಳನ್ನು ಬಿಟ್ಟು ನನ್ನ ಕೊಲೆ ಮಾಡಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಿದ್ದಾರೆ ಅನ್ನೋದು ನನಗೆ ಗೊತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಮತ್ತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುತ್ತೂರು ಶಾಸಕರು ಜಲೀಲ್ ಕರೋಪಾಡಿ ಕೊಲೆ ಆರೋಪಿ, ಬೆಳ್ಳಾರೆಯ ಮಸೂದ್ ಕೊಲೆ ಆರೋಪಿಗಳನ್ನು ಇಟ್ಟುಕೊಂಡು ತಿರುಗಾಡುತ್ತಿದ್ದಾರೆ. ಇಂಥವರನ್ನು ಇಟ್ಟುಕೊಂಡು ಕಾಂಗ್ರೇಸ್ ಪಕ್ಷ ಸಂಘಟಿಸಲು ಸಾಧ್ಯವಿದೆಯೇ. ಇದನ್ನು ನಾನು ಪ್ರಶ್ನಿಸಿದಕ್ಕೆ ನನ್ನ ವಿರುದ್ಧ ಶಾಸಕರು ತಮ್ಮ ಗೂಂಡಾಗಳನ್ನು ಬಿಟ್ಟು ಬೆದರಿಸುವ ಪ್ರಯತ್ನ ಮಾಡಿದರು. ಆದರೆ ಇಂತಹ ಬೆದರಿಕೆಗಳಿಗೆ ಬಗ್ಗುವ ವ್ಯಕ್ತಿ ನಾನಲ್ಲ ಎಂದ ಅವರು ನನ್ನನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಶ್ಯಕ್ಷ ಕೃಷ್ಣಪ್ರಸಾದ್ ಆಳ್ವ ಕಾಂಗ್ರೆಸ್ ಕಾರ್ಯಕರ್ತನೇ ಅಲ್ಲ ಎಂದಿದ್ದಾರೆ. ನಾನು ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಅಶೋಕ್ ರೈ ಪರ ಮತಯಾಚನೆ ಮಾಡಿದವನು. ನಾನು ಕೃಷ್ಣಪ್ರಸಾದ್ ಆಳ್ವರ ಕಾಂಗ್ರೇಸ್ ಅಲ್ಲ, ನಾನು ರಾಹುಲ್ ಗಾಂಧಿಯ ನ್ಯಾಷನಲ್ ಕಾಂಗ್ರೆಸ್ ನ ಕಾರ್ಯಕರ್ತ. ಕೃಷ್ಣಪ್ರಸಾದ್ ಆಳ್ವರ ಅಕ್ಕನ ಮಗ ಬಿಜೆಪಿಯ ಬೆಳ್ತಙಗಡಿ ಶಾಸಕ ಹರೀಶ್ ಪೂಂಜಾ. ನಾನು ಕಳೆದ ಚುನಾವಣೆಯಲ್ಲಿ ಅಶೋಕ್ ರೈ ಪ್ರಚಾರಕ್ಕೆ ಹತ್ತು ದಿನ ನನ್ನ ಕಾರನ್ನು ನೀಡಿದ್ಧೇನೆ. ಪಶು ವೈದ್ಯಕೀಯ ಕಛೇರಿಯಲ್ಲಿ ಚಾಲಕನಾಗಿದ್ದ ಶಶಿ ಎಂಬಾತ ನನ್ನ ಕಾರನ್ನು ಚುನಾವಣೆಗಾಗಿ ಬಳಸಿದ್ದ. ಆ ವಿಚಾರವನ್ನು ಆತ ಕಾಂಗ್ರೆಸ್ ನ ಕೆಲವರಲ್ಲಿ ಹೇಳಿದ ಕಾರಣ ಆತನಿಗೆ ಶಾಸಕರ ಗೂಂಡಾಗಳು ಶಾಸಕರ ಕಛೇರಿಯಲ್ಲೇ ಹಲ್ಲೆ ನಡೆಸಿದ್ದಾರೆ. ಆತನಿಗೆ ಚಾಲಕನಾಗಿ ಕೆಲಸವನ್ನು ನೀಡಿದ್ದ ಶಾಸಕರೇ ಅವನನ್ನು ಕೆಲಸದಿಂದ ತೆಗೆದಿದ್ದಾರೆ. ನಾನು ಕಾಂಗ್ರೇಸ್ ನ ಎಲ್ಲಾ ಪ್ರತಿಭಟನೆಗಳಲ್ಲಿ ಭಾಗಿಯಾದವ. ಆದರೆ ಇಂದು ಶಾಸಕರಾಗಲೀ, ಅವರ ಬೆಂಬಲಿಗರ ಕಾರುಗಳಲ್ಲಿ ಕಾಂಗ್ರೆಸ್ ಪಕ್ಷದ ಒಂದು ಶಾಲು ಇದೆಯೋ ಎಂದು ಅವರು ಪ್ರಶ್ನಿಸಿದ್ದಾರೆ.1
- All About,Anchor requesting the common people to question the Responsible person for their Responsibilities *ಭಾರತ ನಲ್ಲಿ ವೈರಲ್*1