logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಹಿಳೆಯರ ಏಳಿಗೆಗೆ ಸಮಾನ ಅವಕಾಶಗಳೇ ಏಣಿ: ಕೊಳ್ಳೇಗಾಲದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಪ್ರತಿಪಾದನೆ ಕೊಳ್ಳೇಗಾಲ: "ಭಾರತದ ಸ್ವಾತಂತ್ರ್ಯಾನಂತರದ ದಿನಗಳಲ್ಲಿ ಮಹಿಳೆಯರಿಗೆ ಶಿಕ್ಷಣ, ರಾಜಕೀಯ ಮತ್ತು ಆರ್ಥಿಕವಾಗಿ ಸಮಾನ ಅವಕಾಶಗಳು ಸಿಕ್ಕಿದ್ದರಿಂದಲೇ ಇಂದು ಅವರು ಪುರುಷರಷ್ಟೇ ಸಮಾನವಾಗಿ ಸಾಧನೆ ಮಾಡಲು ಸಾಧ್ಯವಾಗಿದೆ," ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು. ನಗರದ ವೆಂಕಟೇಶ್ವರ ಮಹಲ್‌ನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದ ಅವರು, ಅಂಬೇಡ್ಕರ್ ಕೊಡುಗೆಯ ಸ್ಮರಣೆ: ಮಹಿಳೆಯರಿಗೆ ಮೀಸಲಾತಿ ಮತ್ತು ಹಕ್ಕುಗಳನ್ನು ದೊರಕಿಸಿಕೊಟ್ಟ ಡಾ. ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಟಿಯನ್ನು ಯಾರೂ ಮರೆಯಬಾರದು. 12ನೇ ಶತಮಾನದಲ್ಲಿ ಬಸವಣ್ಣನವರು ತಂದ ಕ್ರಾಂತಿಕಾರಿ ಬದಲಾವಣೆಯೇ ಇಂದಿನ ಮಹಿಳಾ ಸಬಲೀಕರಣಕ್ಕೆ ನಾಂದಿ ಎಂದು ಶಾಸಕರು ಸ್ಮರಿಸಿದರು. ಆರ್ಥಿಕ ಸುಧಾರಣೆಯಲ್ಲಿ ಗ್ಯಾರಂಟಿ ಪಾತ್ರ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ಮಾತನಾಡಿ, "ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ಶೇ. 84ರಷ್ಟು ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಇದು ನಮ್ಮ ರಾಜ್ಯದ ಹೆಮ್ಮೆ," ಎಂದರು. ಗೌರವ ಸಮರ್ಪಣೆ: ವಿವಿಧ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ ಸಾಧಕಿಯರನ್ನು ಮತ್ತು ಗ್ಯಾರಂಟಿ ಸಮಿತಿಯ ಮಹಿಳಾ ಸದಸ್ಯರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು: ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಬೈರಪ್ಪನವರ ರವಿ, ತಹಶೀಲ್ದಾರ್ ಕುಮಾರ್, ತಾ.ಪಂ. ಸಹಾಯಕ ನಿರ್ದೇಶಕ ಗೋಪಾಲಕೃಷ್ಣ, ಬಿಇಒ ಮಂಜುನಾಥ್, ಸಿಡಿಪಿಒ ಅಂಬಿಕಾ, ಡಾ. ಲೋಕೇಶ್ವರಿ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

2 hrs ago
user_ಉಸ್ಮಾನ್ ಖಾನ್
ಉಸ್ಮಾನ್ ಖಾನ್
Local News Reporter ಹನೂರು, ಚಾಮರಾಜನಗರ, ಕರ್ನಾಟಕ•
2 hrs ago
93054e57-942d-4584-a192-2f4caea5bf08

ಮಹಿಳೆಯರ ಏಳಿಗೆಗೆ ಸಮಾನ ಅವಕಾಶಗಳೇ ಏಣಿ: ಕೊಳ್ಳೇಗಾಲದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಪ್ರತಿಪಾದನೆ ಕೊಳ್ಳೇಗಾಲ: "ಭಾರತದ ಸ್ವಾತಂತ್ರ್ಯಾನಂತರದ ದಿನಗಳಲ್ಲಿ ಮಹಿಳೆಯರಿಗೆ ಶಿಕ್ಷಣ, ರಾಜಕೀಯ ಮತ್ತು ಆರ್ಥಿಕವಾಗಿ ಸಮಾನ ಅವಕಾಶಗಳು ಸಿಕ್ಕಿದ್ದರಿಂದಲೇ ಇಂದು ಅವರು ಪುರುಷರಷ್ಟೇ ಸಮಾನವಾಗಿ ಸಾಧನೆ ಮಾಡಲು ಸಾಧ್ಯವಾಗಿದೆ," ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು. ನಗರದ ವೆಂಕಟೇಶ್ವರ ಮಹಲ್‌ನಲ್ಲಿ ತಾಲೂಕು

77a05ca1-cc68-4944-ac13-7f600e9f3b74

ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದ ಅವರು, ಅಂಬೇಡ್ಕರ್ ಕೊಡುಗೆಯ ಸ್ಮರಣೆ: ಮಹಿಳೆಯರಿಗೆ ಮೀಸಲಾತಿ ಮತ್ತು ಹಕ್ಕುಗಳನ್ನು ದೊರಕಿಸಿಕೊಟ್ಟ ಡಾ. ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಟಿಯನ್ನು ಯಾರೂ ಮರೆಯಬಾರದು. 12ನೇ ಶತಮಾನದಲ್ಲಿ ಬಸವಣ್ಣನವರು ತಂದ ಕ್ರಾಂತಿಕಾರಿ ಬದಲಾವಣೆಯೇ

95e7204b-5e8f-4058-8cff-106687bb5fba

ಇಂದಿನ ಮಹಿಳಾ ಸಬಲೀಕರಣಕ್ಕೆ ನಾಂದಿ ಎಂದು ಶಾಸಕರು ಸ್ಮರಿಸಿದರು. ಆರ್ಥಿಕ ಸುಧಾರಣೆಯಲ್ಲಿ ಗ್ಯಾರಂಟಿ ಪಾತ್ರ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ಮಾತನಾಡಿ, "ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ಶೇ. 84ರಷ್ಟು ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಇದು ನಮ್ಮ ರಾಜ್ಯದ ಹೆಮ್ಮೆ," ಎಂದರು. ಗೌರವ ಸಮರ್ಪಣೆ:

238d5939-05be-4791-8881-b097a8cfb2ca

ವಿವಿಧ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ ಸಾಧಕಿಯರನ್ನು ಮತ್ತು ಗ್ಯಾರಂಟಿ ಸಮಿತಿಯ ಮಹಿಳಾ ಸದಸ್ಯರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು: ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಬೈರಪ್ಪನವರ ರವಿ, ತಹಶೀಲ್ದಾರ್ ಕುಮಾರ್, ತಾ.ಪಂ. ಸಹಾಯಕ ನಿರ್ದೇಶಕ ಗೋಪಾಲಕೃಷ್ಣ, ಬಿಇಒ ಮಂಜುನಾಥ್, ಸಿಡಿಪಿಒ ಅಂಬಿಕಾ, ಡಾ. ಲೋಕೇಶ್ವರಿ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

More news from ಕರ್ನಾಟಕ and nearby areas
  • ಕುದೇರು ಗ್ರಾ.ಪಂ. ಮುಂಭಾಗ ಪಿಡಿಒ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ ಚಾಮರಾಜನಗರ: ತಾಲೂಕಿನ ಕುದೇರು ಗ್ರಾಮ ಪಂಚಾಯತಿ ಕಚೇರಿ ಮುಂಭಾಗ ಪಿಡಿಒ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಗ್ರಾಮಸ್ಥರು ತಮ್ಮ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡಲಾಗುತ್ತಿಲ್ಲ ಎಂಬ ಆರೋಪ ಮಾಡಿ ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ಮೂಲಭೂತ ಸೌಲಭ್ಯಗಳ ಕೊರತೆ, ಆಡಳಿತಾತ್ಮಕ ನಿರ್ಲಕ್ಷ್ಯ ಸೇರಿದಂತೆ ಹಲವಾರು ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಗ್ರಾಮಸ್ಥ ಶಿವಕುಮಾರ್, ಗ್ರಾಮದಲ್ಲಿ ಹಲವು ಸಮಸ್ಯೆಗಳು ಇದ್ದರೂ ಪಿಡಿಒ ಅವರಿಂದ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದರು. ಗ್ರಾಮಸ್ಥರ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ಪಿಡಿಒ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
    1
    ಕುದೇರು ಗ್ರಾ.ಪಂ. ಮುಂಭಾಗ ಪಿಡಿಒ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ
ಚಾಮರಾಜನಗರ: ತಾಲೂಕಿನ ಕುದೇರು ಗ್ರಾಮ ಪಂಚಾಯತಿ ಕಚೇರಿ ಮುಂಭಾಗ ಪಿಡಿಒ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಗ್ರಾಮಸ್ಥರು ತಮ್ಮ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡಲಾಗುತ್ತಿಲ್ಲ ಎಂಬ ಆರೋಪ ಮಾಡಿ ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ಮೂಲಭೂತ ಸೌಲಭ್ಯಗಳ ಕೊರತೆ, ಆಡಳಿತಾತ್ಮಕ ನಿರ್ಲಕ್ಷ್ಯ ಸೇರಿದಂತೆ ಹಲವಾರು ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಗ್ರಾಮಸ್ಥ ಶಿವಕುಮಾರ್, ಗ್ರಾಮದಲ್ಲಿ ಹಲವು ಸಮಸ್ಯೆಗಳು ಇದ್ದರೂ ಪಿಡಿಒ ಅವರಿಂದ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದರು. ಗ್ರಾಮಸ್ಥರ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ಪಿಡಿಒ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    38 min ago
  • ಅಂದಿನಿಂದ ಇಂದಿ ನವರೆಗೂ ಪ್ರತಿ ವರ್ಷ ಕೂಡ ಯುಗಾದಿ ಹಬ್ಬದ ನಂತರ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ನಡೆದುಕೊಂಡು ಬರುತ್ತಿದೆ. ಬಸವೇಶ್ವರ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪ್ರದಾಯಿಕವಾಗಿ ಅರ್ಚಕರು ಬೆಳಗ್ಗೆಯಿಂದ ಉಪವಾಸ ಇದ್ದು, ಸ್ವಾಮಿಗೆ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ ನೆರವೇರಿಸಿದರು. ದಟ್ಟವಾದ ಅರಣ್ಯ ಪ್ರದೇಶದ ಮಧ್ಯೆ ಇರುವ ಅರಳಿಮರದ ಕೆಳಗೆ ಬಸವೇಶ್ವರ ಸ್ವಾಮಿಯ ಲಿಂಗಕ್ಕೆ ಪೂರ್ವಜರು ಪೂಜೆ ಮಾಡಿಕೊಂಡು ಬರುತ್ತಿದ್ದರು. ಅಲ್ಲಿಂದ ಪಚ್ಚೇದೊಡ್ಡಿ ಗ್ರಾಮದಲ್ಲಿ ಬಸವೇಶ್ವರ ಸ್ವಾಮಿಯ ಲಿಂಗಾವನ್ನ ಪ್ರತಿಷ್ಠಾಪನೆ ಮಾಡಿ. ಪ್ರತಿ ವರ್ಷ ಕೂಡ ವಿಶೇಷ ಪೂಜೆ ನೆರವೇರಿಸಿಕೊಂಡು ಬಂದಿರುತ್ತಾರೆ. ಕಾಂಚಳ್ಳಿ ಗ್ರಾಮದಿಂದ ಜಡೆಸ್ವಾಮಿ (ಶಿವನ ಪ್ರತಿರೂಪ ) ದೇವರನ್ನ ಪಚ್ಚೇದೊಡ್ಡಿಗೆ ತಂದು ವಿಶೇಷ ಪೂಜೆ ಪುನಸ್ಕಾರಗಳನ್ನ ಮಾಡುತ್ತಾರೆ. ತಳಿರು ತೋರಣಗಳಿಂದ ಸಿಂಗರಿಸಿ, ದೇವರಿಗೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗುತ್ತದೆ. ಎಸ್. ಎ. ಸೌಂಡ್ಸ್ ಸಿಸ್ಟಮ್ ವತಿಯಿಂದ ಪಚ್ಚೆದೊಡ್ಡಿ ಗ್ರಾಮದ ದೇವಾಲಯದ ಸುತ್ತಮುತ್ತ ವಿದ್ಯುತ್ ದೀಪ ಅಲಂಕಾರಗಳಿಂದ ಅಲಂಕಾರ ಮಾಡಲಾಗಿತ್ತು. ಭಕ್ತರಿಗೆ ಅನ್ನ ದಾನ ವಿಶೇಷ ಪೂಜೆ ನಡೆದ ನಂತರ ರಾತ್ರಿ 8 ಗಂಟೆಗೆ ನೆರೆದಿರುವ ಭಕ್ತರಿಗೆ ಪಾಯಸ, ಮುದ್ದೆ, ದ್ವಿದಳ ದಾನ್ಯದ ಸಾಂಬಾರು, ಪಲ್ಯ, ಹಪ್ಪಳ,ಅನ್ನಸಾಂಬಾರ್ ಅನ್ನು ನೆರೆದಿರುವ ಭಕ್ತರಿಗೆ ಅನ್ನದಾನದ ವ್ಯವಸ್ಥೆಯನ್ನ ಕಲ್ಪಿಸಿದರು. ನಟರಾಜ್ ಮೈಸೂರು ತಂಡದವರಿಂದ ರಾತ್ರಿ 10 ರಿಂದ ಬೆಳಿಗ್ಗೆ 4 ರವರೆಗೆ ಹರಿಕಥೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಬಸವೇಶ್ವರ ಸ್ವಾಮಿಯ ಅರ್ಚಕ ಬಸವರಾಜು, ಅರ್ಚಕರಾದ ಶಿವು, ಶ್ರೀನಿವಾಸ್, ಗೌಡರದ ಮನ್ನಾರ್ ಕೃಷ್ಣೆಗೌಡ, ಕೃಷ್ಣೆಗೌಡ,ನಾಗರಾಜು, ರಾಜು, ಗಣೇಶ್, ಮಾದೇವ, ಜಡೆಸ್ವಾಮಿ,ಕುಮಾರ್, ಗಾವಳಿ ರಾಜು ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು ಇದ್ದರು.
    4
    ಅಂದಿನಿಂದ ಇಂದಿ ನವರೆಗೂ ಪ್ರತಿ ವರ್ಷ ಕೂಡ ಯುಗಾದಿ ಹಬ್ಬದ ನಂತರ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ನಡೆದುಕೊಂಡು ಬರುತ್ತಿದೆ. ಬಸವೇಶ್ವರ ಧಾರ್ಮಿಕ ವಿಧಿ ವಿಧಾನಗಳೊಂದಿಗೆ  ಸಂಪ್ರದಾಯಿಕವಾಗಿ ಅರ್ಚಕರು ಬೆಳಗ್ಗೆಯಿಂದ ಉಪವಾಸ ಇದ್ದು, ಸ್ವಾಮಿಗೆ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ  ನೆರವೇರಿಸಿದರು. 
ದಟ್ಟವಾದ ಅರಣ್ಯ ಪ್ರದೇಶದ ಮಧ್ಯೆ ಇರುವ ಅರಳಿಮರದ ಕೆಳಗೆ ಬಸವೇಶ್ವರ ಸ್ವಾಮಿಯ ಲಿಂಗಕ್ಕೆ ಪೂರ್ವಜರು ಪೂಜೆ ಮಾಡಿಕೊಂಡು ಬರುತ್ತಿದ್ದರು. ಅಲ್ಲಿಂದ ಪಚ್ಚೇದೊಡ್ಡಿ ಗ್ರಾಮದಲ್ಲಿ ಬಸವೇಶ್ವರ ಸ್ವಾಮಿಯ ಲಿಂಗಾವನ್ನ ಪ್ರತಿಷ್ಠಾಪನೆ ಮಾಡಿ. ಪ್ರತಿ ವರ್ಷ ಕೂಡ ವಿಶೇಷ ಪೂಜೆ ನೆರವೇರಿಸಿಕೊಂಡು ಬಂದಿರುತ್ತಾರೆ.
ಕಾಂಚಳ್ಳಿ ಗ್ರಾಮದಿಂದ ಜಡೆಸ್ವಾಮಿ (ಶಿವನ ಪ್ರತಿರೂಪ ) ದೇವರನ್ನ ಪಚ್ಚೇದೊಡ್ಡಿಗೆ ತಂದು ವಿಶೇಷ ಪೂಜೆ ಪುನಸ್ಕಾರಗಳನ್ನ ಮಾಡುತ್ತಾರೆ. 
ತಳಿರು ತೋರಣಗಳಿಂದ ಸಿಂಗರಿಸಿ, ದೇವರಿಗೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗುತ್ತದೆ. ಎಸ್. ಎ. ಸೌಂಡ್ಸ್ ಸಿಸ್ಟಮ್ ವತಿಯಿಂದ ಪಚ್ಚೆದೊಡ್ಡಿ ಗ್ರಾಮದ ದೇವಾಲಯದ ಸುತ್ತಮುತ್ತ  ವಿದ್ಯುತ್ ದೀಪ ಅಲಂಕಾರಗಳಿಂದ ಅಲಂಕಾರ ಮಾಡಲಾಗಿತ್ತು.
ಭಕ್ತರಿಗೆ ಅನ್ನ ದಾನ ವಿಶೇಷ ಪೂಜೆ ನಡೆದ ನಂತರ ರಾತ್ರಿ  8 ಗಂಟೆಗೆ ನೆರೆದಿರುವ ಭಕ್ತರಿಗೆ ಪಾಯಸ, ಮುದ್ದೆ, ದ್ವಿದಳ ದಾನ್ಯದ ಸಾಂಬಾರು, ಪಲ್ಯ, ಹಪ್ಪಳ,ಅನ್ನಸಾಂಬಾರ್  ಅನ್ನು ನೆರೆದಿರುವ ಭಕ್ತರಿಗೆ ಅನ್ನದಾನದ ವ್ಯವಸ್ಥೆಯನ್ನ ಕಲ್ಪಿಸಿದರು. 
ನಟರಾಜ್ ಮೈಸೂರು ತಂಡದವರಿಂದ ರಾತ್ರಿ 10 ರಿಂದ ಬೆಳಿಗ್ಗೆ 4 ರವರೆಗೆ ಹರಿಕಥೆ ನಡೆಸಲಾಯಿತು.
ಇದೇ ಸಂದರ್ಭದಲ್ಲಿ ಬಸವೇಶ್ವರ ಸ್ವಾಮಿಯ ಅರ್ಚಕ ಬಸವರಾಜು, ಅರ್ಚಕರಾದ ಶಿವು, ಶ್ರೀನಿವಾಸ್, ಗೌಡರದ ಮನ್ನಾರ್ ಕೃಷ್ಣೆಗೌಡ, ಕೃಷ್ಣೆಗೌಡ,ನಾಗರಾಜು, ರಾಜು, ಗಣೇಶ್, ಮಾದೇವ, ಜಡೆಸ್ವಾಮಿ,ಕುಮಾರ್, ಗಾವಳಿ ರಾಜು  ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು ಇದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    8 hrs ago
  • ಮಳವಳ್ಳಿ ಸಾರಥಿ ಯೋಜನೆ ಅಡಿಯಲ್ಲಿ 17 ನಿರುದ್ಯೋಗಿ ಯುವಕರಿಗೆ ಕಾರು ವಿತರಣೆ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ 22 ಮಹಿಳೆಯರಿಗೆ ಹೊಲಿಗೆ ಯಂತ್ರ 112 ಮ0ದಿಗೆ ನೇರ ಸಾಲ ಸೌಲಭ್ಯ,58 ಮಂದಿಗೆ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ವಿತರಣೆ ಕಾರ್ಯಕ್ರಮ ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಸೋಮವಾರ ಜರಗಿತು ಕಾರ್ಯಕ್ರಮವನ್ನು ಶಾಸಕರಾದ ನರೇಂದ್ರಸ್ವಾಮಿ ಉದ್ಘಾಟಿಸಿ ಸವಲತ್ತುಗಳು ಗಳನ್ನು ಇತರಿಸಿ ಮಾತನಾಡಿದರು
    1
    ಮಳವಳ್ಳಿ ಸಾರಥಿ ಯೋಜನೆ ಅಡಿಯಲ್ಲಿ 17 ನಿರುದ್ಯೋಗಿ ಯುವಕರಿಗೆ ಕಾರು ವಿತರಣೆ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ 22 ಮಹಿಳೆಯರಿಗೆ ಹೊಲಿಗೆ ಯಂತ್ರ  112 ಮ0ದಿಗೆ ನೇರ ಸಾಲ ಸೌಲಭ್ಯ,58 ಮಂದಿಗೆ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ವಿತರಣೆ ಕಾರ್ಯಕ್ರಮ ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಸೋಮವಾರ ಜರಗಿತು ಕಾರ್ಯಕ್ರಮವನ್ನು ಶಾಸಕರಾದ ನರೇಂದ್ರಸ್ವಾಮಿ ಉದ್ಘಾಟಿಸಿ ಸವಲತ್ತುಗಳು ಗಳನ್ನು  ಇತರಿಸಿ ಮಾತನಾಡಿದರು
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    16 hrs ago
  • ತುಮಕೂರು: ಸಮಾಜಸೇವೆ ಮತ್ತು ದಾನಧರ್ಮದ ಪ್ರತೀಕವಾಗಿದ್ದ ತ್ರಿವಿಧ ದಾಸೋಹಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಭಕ್ತಿಭಾವದ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಮೈಸೂರು ಮೂಲದ ಪುನೀತ್ ಕಲಾವಿದ ತಂಡ ವಿಶೇಷವಾಗಿ 8000 ಚದರ ಅಡಿ ವಿಸ್ತೀರ್ಣದ ಬೃಹತ್ ರಂಗೋಲಿ ರಚಿಸಿ ಗಮನ ಸೆಳೆದಿತು. ಸಿದ್ದಗಂಗಾ ಮಠದ ಆವರಣದಲ್ಲಿ ಮೂಡಿಬಂದ ಈ ಅದ್ಭುತ ರಂಗೋಲಿಯಲ್ಲಿ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರವನ್ನು ಅತ್ಯಂತ ಕಲಾತ್ಮಕವಾಗಿ ರೂಪಿಸಲಾಗಿದ್ದು, ಭಕ್ತರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಬಣ್ಣಗಳ ಸಮನ್ವಯ, ವಿನ್ಯಾಸದ ನಿಖರತೆ ಹಾಗೂ ಆಧ್ಯಾತ್ಮಿಕ ಭಾವನೆಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ರಂಗೋಲಿ ಸಿದ್ಧಗೊಂಡಿತ್ತು. ಈ ಮಹತ್ವದ ಕಲಾಕೃತಿಯನ್ನು ಮೈಸೂರು ನಗರದ ಪುನೀತ್ ಕಲಾವಿದ ತಂಡದ ಕಲಾವಿದರು ಶ್ರಮಪಟ್ಟು ರೂಪಿಸಿದ್ದಾರೆ. ತಂಡದ ಪ್ರಮುಖ ಕಲಾವಿದರಾದ ಪುನೀತ್ ಕಲಾವಿದ, ಲಕ್ಷ್ಮಿ ಸಿ, ಆದಿತ್ಯ ಪಿ, ಹರ್ಷಿತ್ ಆರ್, ಹಾಗೂ ಕುಮಾರಸ್ವಾಮಿ ಕೆ.ಬಿ ಅವರು ಹಲವು ದಿನಗಳ ಪರಿಶ್ರಮದಿಂದ ರಂಗೋಲಿಯನ್ನು ಸಿದ್ಧಗೊಳಿಸಿದರು. ಅವರ ಕಲಾತ್ಮಕ ಪ್ರತಿಭೆಗೆ ಮಠದ ಭಕ್ತರು ಹಾಗೂ ಭೇಟಿ ನೀಡಿದವರು ಶ್ಲಾಘನೆ ವ್ಯಕ್ತಪಡಿಸಿದರು. ಶ್ರೀ ಶಿವಕುಮಾರ ಸ್ವಾಮೀಜಿಯವರು ಶಿಕ್ಷಣ, ಅನ್ನದಾನ ಮತ್ತು ಮಾನವೀಯ ಸೇವೆಗಳ ಮೂಲಕ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ಸ್ಮರಣಾರ್ಥವಾಗಿ ಕಲೆಯ ಮೂಲಕ ಗೌರವ ಸಲ್ಲಿಸುವುದು ವಿಶೇಷವಾಗಿದೆ ಎಂದು ಭಕ್ತರು ಅಭಿಪ್ರಾಯಪಟ್ಟರು. ರಂಗೋಲಿ ವೀಕ್ಷಿಸಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ, ಕಲಾವಿದರ ಕಾರ್ಯವನ್ನು ಪ್ರಶಂಸಿಸಿದರು. ಸಿದ್ದಗಂಗಾ ಮಠದ ಆವರಣವು ಆಧ್ಯಾತ್ಮಿಕ ವಾತಾವರಣದೊಂದಿಗೆ ಕಲಾ ಸಂಭ್ರಮದ ಕೇಂದ್ರವಾಗಿತ್ತು. ಶಿವಕುಮಾರ ಸ್ವಾಮೀಜಿಯವರ ಆದರ್ಶಗಳು ಯುವಜನತೆಗೆ ಸ್ಪೂರ್ತಿಯಾಗಲಿ ಎಂಬ ಸಂದೇಶದೊಂದಿಗೆ ಪುನೀತ್ ಕಲಾವಿದ ತಂಡ ಈ ಬೃಹತ್ ರಂಗೋಲಿ ಮೂಲಕ ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದೆ. ಈ ಕಲಾಕೃತಿ ಮಠದ ಕಾರ್ಯಕ್ರಮಗಳಲ್ಲಿ ಪ್ರಮುಖ ಆಕರ್ಷಣೆಯಾಗಿತ್ತು.
    1
    ತುಮಕೂರು: ಸಮಾಜಸೇವೆ ಮತ್ತು ದಾನಧರ್ಮದ ಪ್ರತೀಕವಾಗಿದ್ದ ತ್ರಿವಿಧ ದಾಸೋಹಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಭಕ್ತಿಭಾವದ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಮೈಸೂರು ಮೂಲದ ಪುನೀತ್ ಕಲಾವಿದ ತಂಡ ವಿಶೇಷವಾಗಿ 8000 ಚದರ ಅಡಿ ವಿಸ್ತೀರ್ಣದ ಬೃಹತ್ ರಂಗೋಲಿ ರಚಿಸಿ ಗಮನ ಸೆಳೆದಿತು.
ಸಿದ್ದಗಂಗಾ ಮಠದ ಆವರಣದಲ್ಲಿ ಮೂಡಿಬಂದ ಈ ಅದ್ಭುತ ರಂಗೋಲಿಯಲ್ಲಿ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರವನ್ನು ಅತ್ಯಂತ ಕಲಾತ್ಮಕವಾಗಿ ರೂಪಿಸಲಾಗಿದ್ದು, ಭಕ್ತರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಬಣ್ಣಗಳ ಸಮನ್ವಯ, ವಿನ್ಯಾಸದ ನಿಖರತೆ ಹಾಗೂ ಆಧ್ಯಾತ್ಮಿಕ ಭಾವನೆಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ರಂಗೋಲಿ ಸಿದ್ಧಗೊಂಡಿತ್ತು.
ಈ ಮಹತ್ವದ ಕಲಾಕೃತಿಯನ್ನು ಮೈಸೂರು ನಗರದ ಪುನೀತ್ ಕಲಾವಿದ ತಂಡದ ಕಲಾವಿದರು ಶ್ರಮಪಟ್ಟು ರೂಪಿಸಿದ್ದಾರೆ. ತಂಡದ ಪ್ರಮುಖ ಕಲಾವಿದರಾದ ಪುನೀತ್ ಕಲಾವಿದ, ಲಕ್ಷ್ಮಿ ಸಿ, ಆದಿತ್ಯ ಪಿ, ಹರ್ಷಿತ್ ಆರ್, ಹಾಗೂ ಕುಮಾರಸ್ವಾಮಿ ಕೆ.ಬಿ ಅವರು ಹಲವು ದಿನಗಳ ಪರಿಶ್ರಮದಿಂದ ರಂಗೋಲಿಯನ್ನು ಸಿದ್ಧಗೊಳಿಸಿದರು. ಅವರ ಕಲಾತ್ಮಕ ಪ್ರತಿಭೆಗೆ ಮಠದ ಭಕ್ತರು ಹಾಗೂ ಭೇಟಿ ನೀಡಿದವರು ಶ್ಲಾಘನೆ ವ್ಯಕ್ತಪಡಿಸಿದರು.
ಶ್ರೀ ಶಿವಕುಮಾರ ಸ್ವಾಮೀಜಿಯವರು ಶಿಕ್ಷಣ, ಅನ್ನದಾನ ಮತ್ತು ಮಾನವೀಯ ಸೇವೆಗಳ ಮೂಲಕ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ಸ್ಮರಣಾರ್ಥವಾಗಿ ಕಲೆಯ ಮೂಲಕ ಗೌರವ ಸಲ್ಲಿಸುವುದು ವಿಶೇಷವಾಗಿದೆ ಎಂದು ಭಕ್ತರು ಅಭಿಪ್ರಾಯಪಟ್ಟರು.
ರಂಗೋಲಿ ವೀಕ್ಷಿಸಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ, ಕಲಾವಿದರ ಕಾರ್ಯವನ್ನು ಪ್ರಶಂಸಿಸಿದರು. ಸಿದ್ದಗಂಗಾ ಮಠದ ಆವರಣವು ಆಧ್ಯಾತ್ಮಿಕ ವಾತಾವರಣದೊಂದಿಗೆ ಕಲಾ ಸಂಭ್ರಮದ ಕೇಂದ್ರವಾಗಿತ್ತು.
ಶಿವಕುಮಾರ ಸ್ವಾಮೀಜಿಯವರ ಆದರ್ಶಗಳು ಯುವಜನತೆಗೆ ಸ್ಪೂರ್ತಿಯಾಗಲಿ ಎಂಬ ಸಂದೇಶದೊಂದಿಗೆ ಪುನೀತ್ ಕಲಾವಿದ ತಂಡ ಈ ಬೃಹತ್ ರಂಗೋಲಿ ಮೂಲಕ ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದೆ. ಈ ಕಲಾಕೃತಿ ಮಠದ ಕಾರ್ಯಕ್ರಮಗಳಲ್ಲಿ ಪ್ರಮುಖ ಆಕರ್ಷಣೆಯಾಗಿತ್ತು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    15 hrs ago
  • ದಸರಾ ಆನೆ ಗಜೇಂದ್ರ ಆನೆಯನ್ನು ಚಾಮರಾಜನಗರ ‌ಬೂದಿಪಡಗ ಆನೆ ಶಿಬಿರದಿಂದ ನಾಗರಹೊಳೆಯ ಮತ್ತಿಗೋಡು ಆನೆ ಶಿಬಿರಕ್ಕೆ ಸ್ಥಳಾಂತರ ಮಾಡಲಾಗಿದೆ. ಐತಿಹಾಸಿಕ ಮೈಸೂರು ದಸರಾ ಉತ್ಸವದಲ್ಲಿ 15ಕ್ಕೂ ಹೆಚ್ಚು ಭಾರಿ‌ ಭಾಗಿಯಾಗಿದ್ದ ಗಜೇಂದ್ರ ಆಕರ್ಷಕ ಮೈಕಟ್ಟು, ಗಾಂಭೀರ್ಯದ ನಡಿಗೆ, ನೀಳ ದಂತದಿಂದಲೇ ಆಕರ್ಷಣೀಯವಾಗಿ ಚಾಮರಾಜನಗರ ಜಿಲ್ಲೆಯ ಕೆ.ಗುಡಿಯ ಕೇಂದ್ರಬಿಂದುವಾಗಿದ್ದ 2015, ಮಾರ್ಚ್‌ 18ರಂದು ಮದವೇರಿ ಶ್ರೀರಾಮ ಆನೆ,ಮಾವುತ ಗಣಪತಿಯನ್ನ ಕೊಂದಿದ್ದ ಘಟನೆಯ ಬಳಿಕ ಗಜೇಂದ್ರನಿಗೆ ದಸರಾ ಮಹೋತ್ಸವಕ್ಕೆ ಕೋಕ್ ನೀಡಲಾಗಿತ್ತು ಹಲವು ವರ್ಷಗಳ ಕಾಲ ಕೆ.ಗುಡಿ ಆನೆಶಿಬಿರದಲ್ಲಿದ್ದ ಏಕಾಂತವಾಸ ಅನುಭವಿಸಿದ್ದ. 2024ರ ನವೆಂಬರ್‌ನಲ್ಲಿ ಕೆ.ಗುಡಿಯಿಂದ ಬೂದಿಪಡಗದ ಆನೆ ಶಿಬಿರಕ್ಕೆ ಶಿಫ್ಟ್ ಆಗಿದ್ದ ಗಜೇಂದ್ರನ ಗತವೈಭವದ ದಿನಗಳನ್ನು ಕಂಡಿದ್ದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈಚೆಗಷ್ಟೆ ‘ಸೇವ್ ಗಜೇಂದ್ರ’ ಅಭಿಯಾನ ಆರಂಭಿಸಿದ್ದರು ಸಾಮಾನ್ಯವಾಗಿ ಆನೆಗಳು ಗುಂಪಾಗಿ ವಾಸಿಸುವ ಸೂಕ್ಷ್ಮ ಮನಸ್ಸಿನ ಜೀವಿಗಳಾಗಿದ್ದು ಬೂದಿಪಡಗದಲ್ಲಿರುವ ಗಜೇಂದ್ರ ಒಂಟಿತನದಿಂದ ಬಳಲಿದ್ದ ಕಾಡಿಗೆ ಮೇಯಲು ಬಿಟ್ಟರೆ ಇತರೆ ಕಾಡಾನೆಗಳೊಂದಿಗೆ ಕಾದಾಡುವ ಸಾಮರ್ಥ್ಯವನ್ನೂ ಕಳೆದುಕೊಂಡಿದ್ದ ಹೀಗಾಗಿ ಸುರಕ್ಷಿತವಾದ ಶಿಬಿರಕ್ಕೆ ಸ್ಥಳಾಂತರಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಪತ್ರ ಬರಡಯಲಾಗಿತ್ತು ಪ್ರಾಣಿಪ್ರಿಯರ, ಅಭಿಮಾನಿಗಳ ಒತ್ತಾಸೆಗೆ ಮಣಿದ ಸಚಿವ ಈಶ್ವರ ಖಂಡ್ರೆ ಎರಡು ದಿನಗಳ ಹಿಂದೆಯಷ್ಟೆ ಗಜೇಂದ್ರನನ್ನು ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದರು ಆದರೆಅರಣ್ಯ ಸಚಿವ ಸೂಚನೆ ಹಿನ್ನಲೆ ಗಜೇಂದ್ರ ಸ್ಥಳಾಂತರ ಮಾಡಲಾಗಿದ್ದು ಪ್ರಾಣಿಪ್ರಿಯರ ಸೇವ್ ಗಜೇಂದ್ರ ಅಭಿಯಾನ ಫಲಶೃತಿಯಾಗಿದೆ.
    1
    ದಸರಾ ಆನೆ ಗಜೇಂದ್ರ ಆನೆಯನ್ನು ಚಾಮರಾಜನಗರ  ‌ಬೂದಿಪಡಗ ಆನೆ ಶಿಬಿರದಿಂದ
ನಾಗರಹೊಳೆಯ ಮತ್ತಿಗೋಡು ಆನೆ ಶಿಬಿರಕ್ಕೆ ಸ್ಥಳಾಂತರ ಮಾಡಲಾಗಿದೆ.
ಐತಿಹಾಸಿಕ ಮೈಸೂರು ದಸರಾ ಉತ್ಸವದಲ್ಲಿ 15ಕ್ಕೂ ಹೆಚ್ಚು ಭಾರಿ‌ ಭಾಗಿಯಾಗಿದ್ದ ಗಜೇಂದ್ರ
ಆಕರ್ಷಕ ಮೈಕಟ್ಟು, ಗಾಂಭೀರ್ಯದ ನಡಿಗೆ, ನೀಳ ದಂತದಿಂದಲೇ ಆಕರ್ಷಣೀಯವಾಗಿ ಚಾಮರಾಜನಗರ ಜಿಲ್ಲೆಯ ಕೆ.ಗುಡಿಯ ಕೇಂದ್ರಬಿಂದುವಾಗಿದ್ದ
2015, ಮಾರ್ಚ್‌ 18ರಂದು ಮದವೇರಿ ಶ್ರೀರಾಮ ಆನೆ,ಮಾವುತ ಗಣಪತಿಯನ್ನ  ಕೊಂದಿದ್ದ ಘಟನೆಯ ಬಳಿಕ ಗಜೇಂದ್ರನಿಗೆ ದಸರಾ ಮಹೋತ್ಸವಕ್ಕೆ ಕೋಕ್ ನೀಡಲಾಗಿತ್ತು ಹಲವು ವರ್ಷಗಳ ಕಾಲ ಕೆ.ಗುಡಿ ಆನೆಶಿಬಿರದಲ್ಲಿದ್ದ ಏಕಾಂತವಾಸ ಅನುಭವಿಸಿದ್ದ. 
2024ರ ನವೆಂಬರ್‌ನಲ್ಲಿ ಕೆ.ಗುಡಿಯಿಂದ ಬೂದಿಪಡಗದ ಆನೆ ಶಿಬಿರಕ್ಕೆ ಶಿಫ್ಟ್ ಆಗಿದ್ದ ಗಜೇಂದ್ರನ ಗತವೈಭವದ ದಿನಗಳನ್ನು ಕಂಡಿದ್ದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈಚೆಗಷ್ಟೆ ‘ಸೇವ್ ಗಜೇಂದ್ರ’ ಅಭಿಯಾನ ಆರಂಭಿಸಿದ್ದರು ಸಾಮಾನ್ಯವಾಗಿ ಆನೆಗಳು ಗುಂಪಾಗಿ ವಾಸಿಸುವ ಸೂಕ್ಷ್ಮ ಮನಸ್ಸಿನ ಜೀವಿಗಳಾಗಿದ್ದು ಬೂದಿಪಡಗದಲ್ಲಿರುವ ಗಜೇಂದ್ರ ಒಂಟಿತನದಿಂದ ಬಳಲಿದ್ದ  ಕಾಡಿಗೆ ಮೇಯಲು ಬಿಟ್ಟರೆ ಇತರೆ ಕಾಡಾನೆಗಳೊಂದಿಗೆ ಕಾದಾಡುವ ಸಾಮರ್ಥ್ಯವನ್ನೂ ಕಳೆದುಕೊಂಡಿದ್ದ ಹೀಗಾಗಿ ಸುರಕ್ಷಿತವಾದ ಶಿಬಿರಕ್ಕೆ ಸ್ಥಳಾಂತರಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಪತ್ರ ಬರಡಯಲಾಗಿತ್ತು
ಪ್ರಾಣಿಪ್ರಿಯರ, ಅಭಿಮಾನಿಗಳ ಒತ್ತಾಸೆಗೆ ಮಣಿದ ಸಚಿವ ಈಶ್ವರ ಖಂಡ್ರೆ ಎರಡು ದಿನಗಳ ಹಿಂದೆಯಷ್ಟೆ ಗಜೇಂದ್ರನನ್ನು ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದರು ಆದರೆಅರಣ್ಯ ಸಚಿವ ಸೂಚನೆ ಹಿನ್ನಲೆ ಗಜೇಂದ್ರ  ಸ್ಥಳಾಂತರ ಮಾಡಲಾಗಿದ್ದು ಪ್ರಾಣಿಪ್ರಿಯರ ಸೇವ್ ಗಜೇಂದ್ರ ಅಭಿಯಾನ ಫಲಶೃತಿಯಾಗಿದೆ.
    user_Sandeep Kumar
    Sandeep Kumar
    Local News Reporter ಮೈಸೂರು, ಮೈಸೂರು, ಕರ್ನಾಟಕ•
    2 hrs ago
  • Post by Md Aleemulla Shariff
    1
    Post by Md Aleemulla Shariff
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    13 hrs ago
  • ಖಂಡಿತ, ನೀವು ನೀಡಿದ ಮಾಹಿತಿಯ ಆಧಾರದ ಮೇಲೆ ದಿನಪತ್ರಿಕೆಯ ವರದಿ ಇಲ್ಲಿದೆ: ​ಮಾಗಡಿ: ಕೆಂಪೇಗೌಡರ ಪ್ರತಿಮೆ ಸ್ಥಳಾಂತರಕ್ಕೆ ಎಚ್.ಎಂ. ಕೃಷ್ಣಮೂರ್ತಿ ತೀವ್ರ ವಿರೋಧ ​ಮಾಗಡಿ: ಪಟ್ಟಣದ ಅಸ್ಮಿತೆಯಾಗಿರುವ ಕೆಂಪೇಗೌಡರ ಪ್ರತಿಮೆಯನ್ನು ಅಭಿವೃದ್ಧಿಯ ನೆಪದಲ್ಲಿ ಸ್ಥಳಾಂತರಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ ಎಚ್ಚರಿಸಿದ್ದಾರೆ. ​ಮಂಗಳವಾರ ಪಟ್ಟಣದ ಕೆಂಪೇಗೌಡ ಪ್ರತಿಮೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ​ಅಭಿವೃದ್ಧಿಯ ಹೆಸರಲ್ಲಿ ವಿನಾಶ ಸರಿಯಲ್ಲ ​"ಹೈಕೋರ್ಟ್ ಸೂಚನೆಯ ಮೇರೆಗೆ ಪ್ರತಿಮೆ ತೆರವುಗೊಳಿಸುವ ಬಗ್ಗೆ ಏಪ್ರಿಲ್ 4ರಂದು ಪುರಸಭೆಯಲ್ಲಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನಾನು ಭಾಗವಹಿಸಿ ನನ್ನ ಖಡಕ್ ವಿರೋಧ ದಾಖಲಿಸುತ್ತೇನೆ. ಸರ್ಕಾರಿ ಆಸ್ಪತ್ರೆ ನಿರ್ಮಿಸುವ ನೆಪದಲ್ಲಿ ಉದ್ದೇಶಪೂರ್ವಕವಾಗಿ ಪ್ರತಿಮೆ ತೆರವುಗೊಳಿಸಲು ಮುಂದಾಗಿರುವುದು ಸರಿಯಲ್ಲ. ಈ ಪ್ರತಿಮೆಯಿಂದ ಅಥವಾ ಇಲ್ಲಿರುವ ನೂರಾರು ಮರಗಳಿಂದ ಅಭಿವೃದ್ಧಿಗೆ ಯಾವ ತೊಂದರೆಯಾಗಿದೆ?" ಎಂದು ಅವರು ಪ್ರಶ್ನಿಸಿದರು. ​ತೆರವುಗೊಳಿಸಿದ ಕಟ್ಟಡಗಳು ಎಲ್ಲಿವೆ? ​ಈಗಾಗಲೇ ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ, ಪಶು ಇಲಾಖೆ, ಗುರುಭವನ ಹಾಗೂ ತರಕಾರಿ ಮಾರುಕಟ್ಟೆಗಳನ್ನು ಅಭಿವೃದ್ಧಿಯ ಹೆಸರಲ್ಲಿ ತೆರವುಗೊಳಿಸಲಾಗಿದೆ. ಆದರೆ, ಇಷ್ಟು ದಿನಗಳಾದರೂ ಅವುಗಳನ್ನು ಮರುನಿರ್ಮಾಣ ಮಾಡಿಲ್ಲ. ಈಗ 40 ಕೋಟಿ ವೆಚ್ಚದಲ್ಲಿ ತಾಲೂಕು ಕಚೇರಿ ಒಡೆದು ಹೊಸ ಆಸ್ಪತ್ರೆ ಕಟ್ಟುವ ಅಗತ್ಯವೇನಿದೆ? ಎಂದು ಪ್ರಶ್ನಿಸಿದ ಅವರು, "ಈಗಿರುವ ಆಸ್ಪತ್ರೆಯಲ್ಲೇ ಸರಿಯಾದ ವೈದ್ಯರಿಲ್ಲ, ಶಸ್ತ್ರಚಿಕಿತ್ಸೆಗಳು ನಡೆಯುತ್ತಿಲ್ಲ. ಮೊದಲು ಅದನ್ನು ಸರಿಪಡಿಸಲಿ," ಎಂದರು. ​ದ್ವೇಷದ ರಾಜಕಾರಣದ ಆರೋಪ ​"ಎಚ್.ಎಂ. ಕೃಷ್ಣಮೂರ್ತಿ ಕೆಂಪೇಗೌಡರ ಹೆಸರಿನಲ್ಲಿ ಸಮಾಜಮುಖಿ ಕೆಲಸ ಮಾಡಬಾರದು ಎಂಬ ದ್ವೇಷದಿಂದ ಈ ಪಿತೂರಿ ನಡೆಯುತ್ತಿದೆ. ಪಟ್ಟಣದ ಗಬ್ಬು ನಾರುತ್ತಿರುವ ಶೌಚಾಲಯಗಳನ್ನು ಸರಿಪಡಿಸಲಿ, ಮಹಿಳೆಯರಿಗೆ ಅನುಕೂಲ ಮಾಡಿಕೊಡಲಿ. ಅದನ್ನು ಬಿಟ್ಟು ಇತಿಹಾಸವಿರುವ ಗೌರಮ್ಮನಕೆರೆ ಅಭಿವೃದ್ಧಿಯ ಹೆಸರಲ್ಲಿ ಮಣ್ಣು ಮಾರಿಕೊಳ್ಳುವ ಕೀಳು ಮಟ್ಟಕ್ಕೆ ಇಳಿಯಬಾರದು," ಎಂದು ಶಾಸಕರ ಹೆಸರು ಪ್ರಸ್ತಾಪಿಸದೆ ಲೇವಡಿ ಮಾಡಿದರು. ​ದಶಕಗಳ ಸೇವೆಗೆ ಕುತ್ತು ​ದಲಿತ ಮುಖಂಡ ಸಿ. ಜಯರಾಮು ಮಾತನಾಡಿ, "ಕೃಷ್ಣಮೂರ್ತಿಯವರು ಕಳೆದ 23 ವರ್ಷಗಳಿಂದ ಯಾವುದೇ ಸರ್ಕಾರಿ ಸಹಾಯವಿಲ್ಲದೆ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ, ಉಚಿತ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರಗಳಂತಹ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ಅಂತಹ ಪ್ರತಿಮೆಯನ್ನು ತೆರವುಗೊಳಿಸಲು ಮುಂದಾಗಿರುವುದು ದ್ವೇಷದ ರಾಜಕಾರಣದ ಪರಮಾವಧಿ," ಎಂದು ಟೀಕಿಸಿದರು. ​ಗೋಷ್ಠಿಯಲ್ಲಿ ಮರೂರು ಸಾಗರ್ ಗೌಡ, ಶಂಕ್ರಪ್ಪ, ಕನ್ನಡ ಸಂಘಟನೆಯ ರಂಗೇಶ್, ಮೋಹನ್, ಜೋಡುಗಟ್ಟೆ ರಮೇಶ್, ದೊಡ್ಡಿ ಗೋಪಿ, ಪರಿಸರ ರಕ್ಷಣಾ ಸಮಿತಿ ಅಧ್ಯಕ್ಷ ಶಿವಲಿಂಗಯ್ಯ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
    1
    ಖಂಡಿತ, ನೀವು ನೀಡಿದ ಮಾಹಿತಿಯ ಆಧಾರದ ಮೇಲೆ ದಿನಪತ್ರಿಕೆಯ ವರದಿ ಇಲ್ಲಿದೆ:
​ಮಾಗಡಿ: ಕೆಂಪೇಗೌಡರ ಪ್ರತಿಮೆ ಸ್ಥಳಾಂತರಕ್ಕೆ ಎಚ್.ಎಂ. ಕೃಷ್ಣಮೂರ್ತಿ ತೀವ್ರ ವಿರೋಧ
​ಮಾಗಡಿ: ಪಟ್ಟಣದ ಅಸ್ಮಿತೆಯಾಗಿರುವ ಕೆಂಪೇಗೌಡರ ಪ್ರತಿಮೆಯನ್ನು ಅಭಿವೃದ್ಧಿಯ ನೆಪದಲ್ಲಿ ಸ್ಥಳಾಂತರಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ ಎಚ್ಚರಿಸಿದ್ದಾರೆ.
​ಮಂಗಳವಾರ ಪಟ್ಟಣದ ಕೆಂಪೇಗೌಡ ಪ್ರತಿಮೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
​ಅಭಿವೃದ್ಧಿಯ ಹೆಸರಲ್ಲಿ ವಿನಾಶ ಸರಿಯಲ್ಲ
​"ಹೈಕೋರ್ಟ್ ಸೂಚನೆಯ ಮೇರೆಗೆ ಪ್ರತಿಮೆ ತೆರವುಗೊಳಿಸುವ ಬಗ್ಗೆ ಏಪ್ರಿಲ್ 4ರಂದು ಪುರಸಭೆಯಲ್ಲಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನಾನು ಭಾಗವಹಿಸಿ ನನ್ನ ಖಡಕ್ ವಿರೋಧ ದಾಖಲಿಸುತ್ತೇನೆ. ಸರ್ಕಾರಿ ಆಸ್ಪತ್ರೆ ನಿರ್ಮಿಸುವ ನೆಪದಲ್ಲಿ ಉದ್ದೇಶಪೂರ್ವಕವಾಗಿ ಪ್ರತಿಮೆ ತೆರವುಗೊಳಿಸಲು ಮುಂದಾಗಿರುವುದು ಸರಿಯಲ್ಲ. ಈ ಪ್ರತಿಮೆಯಿಂದ ಅಥವಾ ಇಲ್ಲಿರುವ ನೂರಾರು ಮರಗಳಿಂದ ಅಭಿವೃದ್ಧಿಗೆ ಯಾವ ತೊಂದರೆಯಾಗಿದೆ?" ಎಂದು ಅವರು ಪ್ರಶ್ನಿಸಿದರು.
​ತೆರವುಗೊಳಿಸಿದ ಕಟ್ಟಡಗಳು ಎಲ್ಲಿವೆ?
​ಈಗಾಗಲೇ ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ, ಪಶು ಇಲಾಖೆ, ಗುರುಭವನ ಹಾಗೂ ತರಕಾರಿ ಮಾರುಕಟ್ಟೆಗಳನ್ನು ಅಭಿವೃದ್ಧಿಯ ಹೆಸರಲ್ಲಿ ತೆರವುಗೊಳಿಸಲಾಗಿದೆ. ಆದರೆ, ಇಷ್ಟು ದಿನಗಳಾದರೂ ಅವುಗಳನ್ನು ಮರುನಿರ್ಮಾಣ ಮಾಡಿಲ್ಲ. ಈಗ 40 ಕೋಟಿ ವೆಚ್ಚದಲ್ಲಿ ತಾಲೂಕು ಕಚೇರಿ ಒಡೆದು ಹೊಸ ಆಸ್ಪತ್ರೆ ಕಟ್ಟುವ ಅಗತ್ಯವೇನಿದೆ? ಎಂದು ಪ್ರಶ್ನಿಸಿದ ಅವರು, "ಈಗಿರುವ ಆಸ್ಪತ್ರೆಯಲ್ಲೇ ಸರಿಯಾದ ವೈದ್ಯರಿಲ್ಲ, ಶಸ್ತ್ರಚಿಕಿತ್ಸೆಗಳು ನಡೆಯುತ್ತಿಲ್ಲ. ಮೊದಲು ಅದನ್ನು ಸರಿಪಡಿಸಲಿ," ಎಂದರು.
​ದ್ವೇಷದ ರಾಜಕಾರಣದ ಆರೋಪ
​"ಎಚ್.ಎಂ. ಕೃಷ್ಣಮೂರ್ತಿ ಕೆಂಪೇಗೌಡರ ಹೆಸರಿನಲ್ಲಿ ಸಮಾಜಮುಖಿ ಕೆಲಸ ಮಾಡಬಾರದು ಎಂಬ ದ್ವೇಷದಿಂದ ಈ ಪಿತೂರಿ ನಡೆಯುತ್ತಿದೆ. ಪಟ್ಟಣದ ಗಬ್ಬು ನಾರುತ್ತಿರುವ ಶೌಚಾಲಯಗಳನ್ನು ಸರಿಪಡಿಸಲಿ, ಮಹಿಳೆಯರಿಗೆ ಅನುಕೂಲ ಮಾಡಿಕೊಡಲಿ. ಅದನ್ನು ಬಿಟ್ಟು ಇತಿಹಾಸವಿರುವ ಗೌರಮ್ಮನಕೆರೆ ಅಭಿವೃದ್ಧಿಯ ಹೆಸರಲ್ಲಿ ಮಣ್ಣು ಮಾರಿಕೊಳ್ಳುವ ಕೀಳು ಮಟ್ಟಕ್ಕೆ ಇಳಿಯಬಾರದು," ಎಂದು ಶಾಸಕರ ಹೆಸರು ಪ್ರಸ್ತಾಪಿಸದೆ ಲೇವಡಿ ಮಾಡಿದರು.
​ದಶಕಗಳ ಸೇವೆಗೆ ಕುತ್ತು
​ದಲಿತ ಮುಖಂಡ ಸಿ. ಜಯರಾಮು ಮಾತನಾಡಿ, "ಕೃಷ್ಣಮೂರ್ತಿಯವರು ಕಳೆದ 23 ವರ್ಷಗಳಿಂದ ಯಾವುದೇ ಸರ್ಕಾರಿ ಸಹಾಯವಿಲ್ಲದೆ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ, ಉಚಿತ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರಗಳಂತಹ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ಅಂತಹ ಪ್ರತಿಮೆಯನ್ನು ತೆರವುಗೊಳಿಸಲು ಮುಂದಾಗಿರುವುದು ದ್ವೇಷದ ರಾಜಕಾರಣದ ಪರಮಾವಧಿ," ಎಂದು ಟೀಕಿಸಿದರು.
​ಗೋಷ್ಠಿಯಲ್ಲಿ ಮರೂರು ಸಾಗರ್ ಗೌಡ, ಶಂಕ್ರಪ್ಪ, ಕನ್ನಡ ಸಂಘಟನೆಯ ರಂಗೇಶ್, ಮೋಹನ್, ಜೋಡುಗಟ್ಟೆ ರಮೇಶ್, ದೊಡ್ಡಿ ಗೋಪಿ, ಪರಿಸರ ರಕ್ಷಣಾ ಸಮಿತಿ ಅಧ್ಯಕ್ಷ ಶಿವಲಿಂಗಯ್ಯ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    21 hrs ago
  • ಗುಂಡ್ಲುಪೇಟೆ: ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಮಂಗಳವಾರ ಸಂಜೆ ಸುಮಾರು 7:30ರ ವೇಳೆಗೆ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಗ್ರಾಮದ ಸಮೀಪದಲ್ಲೇ ಹುಲಿ ಸಂಚರಿಸಿರುವುದರಿಂದ ಜನರು ರಾತ್ರಿ ವೇಳೆ ಹೊರಗೆ ಬರಲು ಹೆದರಿಕೆ ವ್ಯಕ್ತಪಡಿಸುತ್ತಿದ್ದಾರೆ. ಘಟನೆ ಬಗ್ಗೆ ಮಾಹಿತಿ ನೀಡಿದ ನಂತರ ಕೇವಲ ಮೂವರು ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಬಂದಿದ್ದು, ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಲಿ ಚಲನವಲನವನ್ನು ನಿಯಂತ್ರಿಸಲು ಅಗತ್ಯ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ
    1
    ಗುಂಡ್ಲುಪೇಟೆ: ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಮಂಗಳವಾರ ಸಂಜೆ ಸುಮಾರು 7:30ರ ವೇಳೆಗೆ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. 
ಗ್ರಾಮದ ಸಮೀಪದಲ್ಲೇ ಹುಲಿ ಸಂಚರಿಸಿರುವುದರಿಂದ ಜನರು ರಾತ್ರಿ ವೇಳೆ ಹೊರಗೆ ಬರಲು ಹೆದರಿಕೆ ವ್ಯಕ್ತಪಡಿಸುತ್ತಿದ್ದಾರೆ.
ಘಟನೆ ಬಗ್ಗೆ ಮಾಹಿತಿ ನೀಡಿದ ನಂತರ ಕೇವಲ ಮೂವರು ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಬಂದಿದ್ದು, ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಲಿ ಚಲನವಲನವನ್ನು ನಿಯಂತ್ರಿಸಲು ಅಗತ್ಯ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.