logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಯಡೂರಿನಲ್ಲಿ ಮೆಟ್ರೋ ರೈಲ್ವೆ ನಿಲ್ದಾಣ ಮಾದರಿಯ ವಿಶಿಷ್ಟ ಗಣೇಶ ಪೆಂಡಲ್ ಹೊಸನಗರ: ನಾಡಿನಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿರುವ ನಡುವೆ, ತಾಲೂಕಿನ ಯಡೂರಿನಲ್ಲಿ ಮೆಟ್ರೋ ರೈಲ್ವೆ ನಿಲ್ದಾಣದ ಮಾದರಿಯಲ್ಲಿ ನಿರ್ಮಿಸಿರುವ ವಿಶಿಷ್ಟ ಗಣೇಶ ಪೆಂಡಲ್ ಸಾರ್ವಜನಿಕರ ಗಮನ ಸೆಳೆಯುತ್ತಿದೆ. "ಯಡೂರು ಮೆಟ್ರೋ" ಎಂಬ ಶೀರ್ಷಿಕೆಯಡಿ ರಾಜ್ಯದ ಪ್ರಮುಖ ಸಾರಿಗೆ ವ್ಯವಸ್ಥೆಯಾದ ಮೆಟ್ರೋ ರೈಲ್ವೆ ನಿಲ್ದಾಣದ ಮಾದರಿಯಲ್ಲಿ ಆಕರ್ಷಕ ಪೆಂಡಲ್ ನಿರ್ಮಿಸಿ ವಿಘ್ನನಿವಾರಕ ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ. ಮೆಟ್ರೋ ಪ್ರವೇಶ ದ್ವಾರ, ಸೂಚನಾ ಫಲಕಗಳು ಹಾಗೂ ನಿಲ್ದಾಣದ ವಿನ್ಯಾಸವನ್ನು ಹೋಲುವಂತೆ ಪೆಂಡಲ್ ಸಿದ್ಧಪಡಿಸಿರುವುದು ವಿಶೇಷವಾಗಿದೆ. ಪೆಂಡಲ್‌ಗೆ ಆಗಮಿಸುತ್ತಿರುವ ಭಕ್ತರು ವಿಶೇಷ ಪೂಜೆ ಸಲ್ಲಿಸುತ್ತಿದ್ದು, ಸೆಲ್ಫಿ ಹಾಗೂ ಫೋಟೋಗಳನ್ನು ಸೆರೆಹಿಡಿದು ಸಂಭ್ರಮಿಸುತ್ತಿದ್ದಾರೆ. ಕಳೆದ ವರ್ಷವೂ ಯಡೂರಿನಲ್ಲಿ ಮಾಣಿ ಜಲಾಶಯದ ಮಾದರಿಯ ಗಣೇಶ ಪೆಂಡಲ್ ನಿರ್ಮಿಸಿ ಗಮನ ಸೆಳೆದಿತ್ತು. ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ನಿತಿನ್ ಅವರು, ಈ ವಿಶೇಷ ಪೆಂಡಲ್ ನಿರ್ಮಾಣಕ್ಕೆ ಸಹಕರಿಸಿದ ಗ್ರಾಮಸ್ಥರು ಹಾಗೂ ಯುವಕ ಮಂಡಳಿಯ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. – ತನುಜ್ ಸೋರೆಕೊಪ್ಪ, ಹೊಸನಗರ

1 hr ago
user_ತನುಜ್ ಸೋರೆಕೊಪ್ಪ ತೇಜ
ತನುಜ್ ಸೋರೆಕೊಪ್ಪ ತೇಜ
Local News Reporter ಹೊಸನಗರ, ಶಿವಮೊಗ್ಗ, ಕರ್ನಾಟಕ•
1 hr ago
3cfd9bdc-0066-4f4c-b6d6-ab64e506f8d6

ಯಡೂರಿನಲ್ಲಿ ಮೆಟ್ರೋ ರೈಲ್ವೆ ನಿಲ್ದಾಣ ಮಾದರಿಯ ವಿಶಿಷ್ಟ ಗಣೇಶ ಪೆಂಡಲ್ ಹೊಸನಗರ: ನಾಡಿನಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿರುವ ನಡುವೆ, ತಾಲೂಕಿನ ಯಡೂರಿನಲ್ಲಿ ಮೆಟ್ರೋ ರೈಲ್ವೆ ನಿಲ್ದಾಣದ ಮಾದರಿಯಲ್ಲಿ ನಿರ್ಮಿಸಿರುವ ವಿಶಿಷ್ಟ ಗಣೇಶ ಪೆಂಡಲ್ ಸಾರ್ವಜನಿಕರ ಗಮನ ಸೆಳೆಯುತ್ತಿದೆ. "ಯಡೂರು ಮೆಟ್ರೋ" ಎಂಬ ಶೀರ್ಷಿಕೆಯಡಿ ರಾಜ್ಯದ ಪ್ರಮುಖ ಸಾರಿಗೆ ವ್ಯವಸ್ಥೆಯಾದ ಮೆಟ್ರೋ ರೈಲ್ವೆ ನಿಲ್ದಾಣದ ಮಾದರಿಯಲ್ಲಿ ಆಕರ್ಷಕ ಪೆಂಡಲ್ ನಿರ್ಮಿಸಿ ವಿಘ್ನನಿವಾರಕ ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ. ಮೆಟ್ರೋ ಪ್ರವೇಶ ದ್ವಾರ, ಸೂಚನಾ ಫಲಕಗಳು ಹಾಗೂ ನಿಲ್ದಾಣದ ವಿನ್ಯಾಸವನ್ನು ಹೋಲುವಂತೆ ಪೆಂಡಲ್ ಸಿದ್ಧಪಡಿಸಿರುವುದು ವಿಶೇಷವಾಗಿದೆ. ಪೆಂಡಲ್‌ಗೆ ಆಗಮಿಸುತ್ತಿರುವ ಭಕ್ತರು ವಿಶೇಷ ಪೂಜೆ ಸಲ್ಲಿಸುತ್ತಿದ್ದು, ಸೆಲ್ಫಿ ಹಾಗೂ ಫೋಟೋಗಳನ್ನು ಸೆರೆಹಿಡಿದು ಸಂಭ್ರಮಿಸುತ್ತಿದ್ದಾರೆ. ಕಳೆದ ವರ್ಷವೂ ಯಡೂರಿನಲ್ಲಿ ಮಾಣಿ ಜಲಾಶಯದ ಮಾದರಿಯ ಗಣೇಶ ಪೆಂಡಲ್ ನಿರ್ಮಿಸಿ ಗಮನ ಸೆಳೆದಿತ್ತು. ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ನಿತಿನ್ ಅವರು, ಈ ವಿಶೇಷ ಪೆಂಡಲ್ ನಿರ್ಮಾಣಕ್ಕೆ ಸಹಕರಿಸಿದ ಗ್ರಾಮಸ್ಥರು ಹಾಗೂ ಯುವಕ ಮಂಡಳಿಯ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. – ತನುಜ್ ಸೋರೆಕೊಪ್ಪ, ಹೊಸನಗರ

More news from ಕರ್ನಾಟಕ and nearby areas
  • ಶಿವಮೊಗ್ಗ,: ತನು ಜ್ಯೂಸ್ ಸೆಂಟರ್ ಬೇಟಿ ನೀಡಿದ ಅಧಿಕಾರಿಗಳ ತಂಡ ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ತನು ಜ್ಯೂಸ್ ಸೆಂಟರ್ ಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದಾಗ ಕೊಳೆತ ಹಣ್ಣುಗಳನ್ನು ಶೇಖರಿಸಿಟ್ಟಿದ್ದ ಬ್ರಿಡ್ಜ್ ತಪಾಸಣೆ ಮಾಡಿದಾಗ ಸೇಬು, ಮೂಸಂಬಿ, ಕಲ್ಲಂಗಡಿ, ಅವಕೊಡ,ದ್ರಾಕ್ಷಿ, ಬಾಳೆಹಣ್ಣು, ಮಾವಿನಹಣ್ಣು , ಬೆಣ್ಣೆ ಹಣ್ಣು,ಹೀಗೆ ಹಲವಾರು ಹಣ್ಣುಗಳಿಂದ ಜ್ಯೂಸ್ ತಯಾರಿಸಿ ಸಾರ್ವಜನಿಕರಿಗೆ ಕೊಡುತ್ತಿರುವುದು ಕಂಡುಬಂದಿದ್ದು ಹಾಗೂ ಕೆಲವರು ಆಸ್ಪತ್ರೆಯ ರೋಗಿಗಳಿಗೂ ಸಹ ಇದೇ ಕೊಳೆತ ಹಣ್ಣಿನಿಂದ ಜ್ಯೂಸ್ ತೆಗೆದುಕೊಂಡು ಹೋಗಿರುವುದು ಕೂಡ ಗಮನಕ್ಕೆ ಬಂದಿರುವುದು ಕಂಡು ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ ಕೂಡಲೇ ಇದನ್ನು ಸೀಜ್ ಮಾಡಲಾಗಿದೆ. ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
    1
    ಶಿವಮೊಗ್ಗ,: ತನು ಜ್ಯೂಸ್ ಸೆಂಟರ್ ಬೇಟಿ ನೀಡಿದ ಅಧಿಕಾರಿಗಳ ತಂಡ ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳಲಾಗಿದೆ.
ಶಿವಮೊಗ್ಗ ತನು ಜ್ಯೂಸ್ ಸೆಂಟರ್ ಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದಾಗ ಕೊಳೆತ ಹಣ್ಣುಗಳನ್ನು  ಶೇಖರಿಸಿಟ್ಟಿದ್ದ ಬ್ರಿಡ್ಜ್ ತಪಾಸಣೆ ಮಾಡಿದಾಗ ಸೇಬು, ಮೂಸಂಬಿ, ಕಲ್ಲಂಗಡಿ, ಅವಕೊಡ,ದ್ರಾಕ್ಷಿ, ಬಾಳೆಹಣ್ಣು, ಮಾವಿನಹಣ್ಣು , ಬೆಣ್ಣೆ ಹಣ್ಣು,ಹೀಗೆ ಹಲವಾರು ಹಣ್ಣುಗಳಿಂದ  ಜ್ಯೂಸ್ ತಯಾರಿಸಿ ಸಾರ್ವಜನಿಕರಿಗೆ ಕೊಡುತ್ತಿರುವುದು ಕಂಡುಬಂದಿದ್ದು ಹಾಗೂ ಕೆಲವರು ಆಸ್ಪತ್ರೆಯ ರೋಗಿಗಳಿಗೂ ಸಹ ಇದೇ ಕೊಳೆತ ಹಣ್ಣಿನಿಂದ ಜ್ಯೂಸ್ ತೆಗೆದುಕೊಂಡು ಹೋಗಿರುವುದು ಕೂಡ ಗಮನಕ್ಕೆ ಬಂದಿರುವುದು ಕಂಡು ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ ಕೂಡಲೇ ಇದನ್ನು  ಸೀಜ್ ಮಾಡಲಾಗಿದೆ. ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
    user_Press Narashimha swamy SN
    Press Narashimha swamy SN
    Newspaper publisher ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
    2 hrs ago
  • ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
    1
    ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    13 hrs ago
  • ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ. ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.
    1
    ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ 
ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ  ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ  
ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ.
ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು.
ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ  ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    22 hrs ago
  • ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು.  ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು.  ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    1
    ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ

ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು. 
ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು. 
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    19 hrs ago
  • ಹಾವೇರಿ: ವಂದೇ ಮಾತರಂನ ಕೇವಲ 2 ಚರಣಗಳನ್ನು ಮಾತ್ರ ಹಾಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ಹಾವೇರಿ ನಗರ ಮಂಡಲ ತೀವ್ರವಾಗಿ ಖಂಡಿಸಿದೆ. 1937ರಲ್ಲಿ ಕಾಂಗ್ರೆಸ್ ಮುಸ್ಲಿಂ ಲೀಗ್ ಒತ್ತಡಕ್ಕೆ ಮಣಿದು ವಂದೇ ಮಾತರಂಗೆ 2 ಚರಣಗಳಿಗೆ ಕತ್ತರಿ ಹಾಕಿತ್ತು. ಇದು ಸಂವಿಧಾನದ ತೀರ್ಮಾನವಲ್ಲ, ಕಾಂಗ್ರೆಸ್‌ನ ರಾಜಕೀಯ ನಿರ್ಧಾರ. 24 ಜನವರಿ 1950ರಲ್ಲಿ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಜನಗಣಮನ ಮತ್ತು ವಂದೇ ಮಾತರಂ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ಅಧಿಕೃತವಾಗಿ ಹೇಳಿದ್ದರು. ತುಷ್ಟೀಕರಣ ರಾಜಕಾರಣಕ್ಕಾಗಿ ಕಾಂಗ್ರೆಸ್ ಇಂದು ಮತ್ತೆ ವಂದೇ ಮಾತರಂಗೆ ಕತ್ತರಿ ಹಾಕಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇಂದು ವಂದೇ ಮಾತರಂಗೆ ಕತ್ತರಿ ಹಾಕುವವರು ನಾಳೆ ಕುವೆಂಪು ರಚಿತ ನಾಡಗೀತೆಗೆ ಕತ್ತರಿ ಹಾಕುತ್ತಾರಾ? ಎಂದು ಪ್ರಶ್ನಿಸಿದೆ. ನೇಣುಗಂಬ ಏರಿದರೂ ವಂದೇ ಮಾತರಂ ಹಾಡುತ್ತೇವೆ ಎಂದಿದ್ದ ಕಾಂಗ್ರೆಸ್, ಈಗ ನೇಣುಗಂಬಕ್ಕೆ ಏರಿಸಿದರೂ ಹಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿರುವುದು ಖಂಡನೀಯ ಎಂದು ಹಾವೇರಿ ವಿಧಾನಸಭಾ ಕೊಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರದ ಸಿದ್ದರಾಜು ಕಲಕೋಟಿ, ನಗರ ಮಂಡಲ ಅಧ್ಯಕ್ಷ *ಕಿರಣ್ ಚನಬಸಪ್ಪ ಕೊಳ್ಳಿ ಈರಣ್ಣ ಹೇರೂರು, ಅಲ್ಲಾಬಾಕ್ಸ್ ತಿಮ್ಮಾಪುರ, ನಿರಂಜನ್ ಹೇರೂರು ನಗರ ಮಂಡಲದ ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಲಕ್ಷ್ಮಣ ಬೆಟಗೇರಿ, ಮಾರುತಿ ಸವಣುರ ಗಿರೀಶ್ ಶೆಟ್ಟಿ, ಹೊನ್ನಪ್ಪ ಮಾಳಗಿ ಹಾಗೂ ಬಿಜೆಪಿ ಕಾರ್ಯಕರ್ತರು ಮುಖಂಡರು ಸೇರಿ ಭಾಗವಹಿಸಿದ್ದರು *
    1
    ಹಾವೇರಿ: ವಂದೇ ಮಾತರಂನ ಕೇವಲ 2 ಚರಣಗಳನ್ನು ಮಾತ್ರ ಹಾಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ಹಾವೇರಿ ನಗರ ಮಂಡಲ ತೀವ್ರವಾಗಿ ಖಂಡಿಸಿದೆ.

1937ರಲ್ಲಿ ಕಾಂಗ್ರೆಸ್ ಮುಸ್ಲಿಂ ಲೀಗ್ ಒತ್ತಡಕ್ಕೆ ಮಣಿದು ವಂದೇ ಮಾತರಂಗೆ 2 ಚರಣಗಳಿಗೆ ಕತ್ತರಿ ಹಾಕಿತ್ತು. ಇದು ಸಂವಿಧಾನದ ತೀರ್ಮಾನವಲ್ಲ, ಕಾಂಗ್ರೆಸ್‌ನ ರಾಜಕೀಯ ನಿರ್ಧಾರ. 24 ಜನವರಿ 1950ರಲ್ಲಿ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಜನಗಣಮನ ಮತ್ತು ವಂದೇ ಮಾತರಂ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ಅಧಿಕೃತವಾಗಿ ಹೇಳಿದ್ದರು.
ತುಷ್ಟೀಕರಣ ರಾಜಕಾರಣಕ್ಕಾಗಿ ಕಾಂಗ್ರೆಸ್ ಇಂದು ಮತ್ತೆ ವಂದೇ ಮಾತರಂಗೆ ಕತ್ತರಿ ಹಾಕಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇಂದು ವಂದೇ ಮಾತರಂಗೆ ಕತ್ತರಿ ಹಾಕುವವರು ನಾಳೆ ಕುವೆಂಪು ರಚಿತ ನಾಡಗೀತೆಗೆ ಕತ್ತರಿ ಹಾಕುತ್ತಾರಾ? ಎಂದು ಪ್ರಶ್ನಿಸಿದೆ.
ನೇಣುಗಂಬ ಏರಿದರೂ ವಂದೇ ಮಾತರಂ ಹಾಡುತ್ತೇವೆ ಎಂದಿದ್ದ ಕಾಂಗ್ರೆಸ್, ಈಗ ನೇಣುಗಂಬಕ್ಕೆ ಏರಿಸಿದರೂ ಹಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿರುವುದು ಖಂಡನೀಯ ಎಂದು ಹಾವೇರಿ ವಿಧಾನಸಭಾ ಕೊಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರದ ಸಿದ್ದರಾಜು ಕಲಕೋಟಿ, ನಗರ ಮಂಡಲ ಅಧ್ಯಕ್ಷ *ಕಿರಣ್ ಚನಬಸಪ್ಪ  ಕೊಳ್ಳಿ ಈರಣ್ಣ ಹೇರೂರು, ಅಲ್ಲಾಬಾಕ್ಸ್ ತಿಮ್ಮಾಪುರ, ನಿರಂಜನ್ ಹೇರೂರು  ನಗರ ಮಂಡಲದ ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಲಕ್ಷ್ಮಣ ಬೆಟಗೇರಿ, ಮಾರುತಿ ಸವಣುರ ಗಿರೀಶ್ ಶೆಟ್ಟಿ, ಹೊನ್ನಪ್ಪ ಮಾಳಗಿ ಹಾಗೂ ಬಿಜೆಪಿ ಕಾರ್ಯಕರ್ತರು ಮುಖಂಡರು ಸೇರಿ ಭಾಗವಹಿಸಿದ್ದರು *
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    2 hrs ago
  • ವಿವಿಧೆಡೆ ಅದ್ದೂರಿ ಗಣೇಶೋತ್ಸವ, ಭವ್ಯ ಶೋಭಾಯಾತ್ರೆ ಮೆರವಣಿಗೆ... ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ನಗರದ ಉಳ್ಳಾಲ ವಿದ್ಯಾವಿನಾಯಕ ಉತ್ಸವ ಸಮಿತಿ ವತಿಯಿಂದ 43 ನೇ ವರ್ಷದ ಗಣೇಶೋತ್ಸವ ಅಚರಣೆ ನಡೆದಿದೆ.ಹಾಗೂ ಬಗಂಬಿಲ ಸತ್ಯನಾರಾಯಣ ಮಂದಿರದಲ್ಲಿ 19 ವರ್ಷದ ಗಣೇಶೋತ್ಸವದ ಶೋಭಾಯಾತ್ರೆ ಮೆರವಣಿಗೆ ಅದ್ದೂರಿಯಾಗಿ ಜರುಗಿತು.ಇನ್ನೂ ಮೆರವಣಿಗೆಯಲ್ಲಿ ಕುಣಿತ ಭಜನಾ ತಂಡ, ಚೆಂಡೆ, ಸ್ತಬ್ಧ ಚಿತ್ರಗಳು ಭಾಗ ವಹಿಸಿದ್ದವು,
    1
    ವಿವಿಧೆಡೆ ಅದ್ದೂರಿ ಗಣೇಶೋತ್ಸವ, ಭವ್ಯ ಶೋಭಾಯಾತ್ರೆ ಮೆರವಣಿಗೆ...
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ನಗರದ ಉಳ್ಳಾಲ ವಿದ್ಯಾವಿನಾಯಕ  ಉತ್ಸವ  ಸಮಿತಿ ವತಿಯಿಂದ 43 ನೇ ವರ್ಷದ ಗಣೇಶೋತ್ಸವ ಅಚರಣೆ ನಡೆದಿದೆ.ಹಾಗೂ ಬಗಂಬಿಲ ಸತ್ಯನಾರಾಯಣ ಮಂದಿರದಲ್ಲಿ 19 ವರ್ಷದ ಗಣೇಶೋತ್ಸವದ ಶೋಭಾಯಾತ್ರೆ ಮೆರವಣಿಗೆ ಅದ್ದೂರಿಯಾಗಿ ಜರುಗಿತು.ಇನ್ನೂ ಮೆರವಣಿಗೆಯಲ್ಲಿ ಕುಣಿತ ಭಜನಾ ತಂಡ, ಚೆಂಡೆ, ಸ್ತಬ್ಧ ಚಿತ್ರಗಳು ಭಾಗ ವಹಿಸಿದ್ದವು,
    user_UMAPRASAD
    UMAPRASAD
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    14 hrs ago
  • ₹3,383 ಕೋಟಿ ಆಸ್ತಿ ಒಡೆಯ ಶಾಸಕ ಬೀದಿಯಲ್ಲಿ ಭಿಕ್ಷೆ ಬೇಡಿದ್ದೇಕೆ? ಕಾರಣ ವೈರಲ್! ಮುಂಬೈ ಬೀದಿಯಲ್ಲಿ ಭಿಕ್ಷುಕನಾದ ಕೋಟ್ಯಾಧೀಶ ಬಿಜೆಪಿ ಶಾಸಕ ಪರಾಗ್ ಶಾ!
    1
    ₹3,383 ಕೋಟಿ ಆಸ್ತಿ ಒಡೆಯ ಶಾಸಕ ಬೀದಿಯಲ್ಲಿ ಭಿಕ್ಷೆ ಬೇಡಿದ್ದೇಕೆ? ಕಾರಣ ವೈರಲ್!
ಮುಂಬೈ ಬೀದಿಯಲ್ಲಿ ಭಿಕ್ಷುಕನಾದ ಕೋಟ್ಯಾಧೀಶ ಬಿಜೆಪಿ ಶಾಸಕ ಪರಾಗ್ ಶಾ!
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    13 hrs ago
  • ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬಾಡಾ ಕ್ರಾಸ್‌ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್‌ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ. ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ
    4
    ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ

ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ
ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಬಾಡಾ ಕ್ರಾಸ್‌ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು.
ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್‌ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ.
ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ
    user_ದೇವರಾಜ್ ಕೆ ನೆಲ್ಲಿಹಂಕಲು
    ದೇವರಾಜ್ ಕೆ ನೆಲ್ಲಿಹಂಕಲು
    Local News Reporter ಚನ್ನಗಿರಿ, ದಾವಣಗೆರೆ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.