Shuru
Apke Nagar Ki App…
ಬೇತಮಂಗಲದ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಆದಿಶಕ್ತಿ ದ್ರೌಪತಾಂಭ ದೇವಿಯ ಜಯಂತ್ಯೋತ್ಸವ: ವೈಭವದ ಕಳಶೋತ್ಸವ ಸಂಪನ್ನ ಬೇತಮಂಗಲ: ಸಮೀಪದ ಐತಿಹಾಸಿಕ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ವಹ್ನಿಕುಲ ಕ್ಷತ್ರಿಯ ತಿಗಳ ಬಾಂಧವರ ವತಿಯಿಂದ ಶ್ರೀ ಆದಿಶಕ್ತಿ ದ್ರೌಪತಾಂಭ ದೇವಿಯ ಜಯಂತ್ಯೋತ್ಸವವನ್ನು ಅತ್ಯಂತ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ಉತ್ಸವದ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಗಣಪತಿ ಪೂಜೆ, ಪುಣ್ಯಾಹವಾಚನ, ನವಗ್ರಹ ಹೋಮ ಹಾಗೂ ದ್ರೌಪತಾಂಭ ದೇವಿಗೆ ವಿಶೇಷ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು. ನೂರಾರು ಭಕ್ತರು ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾದರು. ಕಣ್ಮನ ಸೆಳೆದ ಕಳಶೋತ್ಸವ: ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಬೇತಮಂಗಲ ಕರಗ ಪೂಜಾರಿ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಸಾಂಪ್ರದಾಯಿಕ ಕಳಶೋತ್ಸವ ಜರುಗಿತು.
Prashanth Vibes
ಬೇತಮಂಗಲದ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಆದಿಶಕ್ತಿ ದ್ರೌಪತಾಂಭ ದೇವಿಯ ಜಯಂತ್ಯೋತ್ಸವ: ವೈಭವದ ಕಳಶೋತ್ಸವ ಸಂಪನ್ನ ಬೇತಮಂಗಲ: ಸಮೀಪದ ಐತಿಹಾಸಿಕ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ವಹ್ನಿಕುಲ ಕ್ಷತ್ರಿಯ ತಿಗಳ ಬಾಂಧವರ ವತಿಯಿಂದ ಶ್ರೀ ಆದಿಶಕ್ತಿ ದ್ರೌಪತಾಂಭ ದೇವಿಯ ಜಯಂತ್ಯೋತ್ಸವವನ್ನು ಅತ್ಯಂತ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ಉತ್ಸವದ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಗಣಪತಿ ಪೂಜೆ, ಪುಣ್ಯಾಹವಾಚನ, ನವಗ್ರಹ ಹೋಮ ಹಾಗೂ ದ್ರೌಪತಾಂಭ ದೇವಿಗೆ ವಿಶೇಷ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು. ನೂರಾರು ಭಕ್ತರು ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾದರು. ಕಣ್ಮನ ಸೆಳೆದ ಕಳಶೋತ್ಸವ: ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಬೇತಮಂಗಲ ಕರಗ ಪೂಜಾರಿ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಸಾಂಪ್ರದಾಯಿಕ ಕಳಶೋತ್ಸವ ಜರುಗಿತು.
More news from ಕರ್ನಾಟಕ and nearby areas
- ಶ್ರೀ ಆದಿಶಕ್ತಿ ದ್ರೌಪತಾಂಭ ದೇವಿ ಜಯಂತ್ಯೋತ್ಸವ ಪ್ರಯುಕ್ತ ಕರಗ ಪೂಜಾರಿ ಕೃಷ್ಣಮೂರ್ತಿ ರವರಿಂದ ಅದ್ಧೂರಿ ಕಳಶೋತ್ಸವ ಬೇತಮಂಗಲ: ಐತಿಹಾಸಿಕ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಶ್ರೀ ಆದಿಶಕ್ತಿ ದ್ರೌಪತಾಂಭ ದೇವಿಯ ಜಯಂತ್ಯೋತ್ಸವದ ಪ್ರಯುಕ್ತ ಬೇತಮಂಗಲದ ಕರಗ ಪೂಜಾರಿ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ವೈಭವದ ಕಳಶೋತ್ಸವ ಜರುಗಿತು. ಕಳಶ ಹೊತ್ತ ಪೂಜಾರಿಯವರು ಸಾಗಿದ ಮಾರ್ಗದುದ್ದಕ್ಕೂ ಭಕ್ತರು ರಂಗೋಲಿ ಹಾಕಿ, ಪುಷ್ಪವೃಷ್ಟಿ ಗರೆದು ಹಾಗೂ ಕರ್ಪೂರದಾರತಿ ಬೆಳಗಿ ಭಕ್ತಿ ಸಮರ್ಪಿಸಿದರು. ತಮಟೆ, ಮಂಗಳವಾದ್ಯಗಳ ನಿನಾದ ಮತ್ತು ಭಕ್ತರ ‘ಗೋವಿಂದಾ... ಗೋವಿಂದಾ’ ಎಂಬ ಜಯಘೋಷಗಳು ಮೆರವಣಿಗೆಗೆ ಕಳೆಗಟ್ಟಿದವು. ಈ ಧಾರ್ಮಿಕ ಸಂಭ್ರಮದಲ್ಲಿ ವಹ್ನಿಕುಲ ಸಮಾಜದ ಪ್ರಮುಖರು, ಗ್ರಾಮದ ಮುಖಂಡರು, ಮಹಿಳೆಯರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಭಕ್ತಾದಿಗಳಿಗೆ ತೀರ್ಥಪ್ರಸಾದ ಹಾಗೂ ಅನ್ನಸಂತರ್ಪಣೆ ನೆರವೇರಿತು.1
- ಬೇತಮಂಗಲದಲ್ಲಿ ವೈಭವದ ಶ್ರೀ ಆದಿಶಕ್ತಿ ದ್ರೌಪದಾಂಭ ದೇವಿಯ ಜಯಂತೋತ್ಸವ: ಏಳು ಕಳಸಗಳ ಮೆರವಣಿಗೆ ಬೇತಮಂಗಲ: ಗ್ರಾಮದ ಪಾಲಾರ್ ನದಿಯ ದಡದಲ್ಲಿ ನೆಲೆಸಿರುವ ಪುಣ್ಯಕ್ಷೇತ್ರ ಶ್ರೀ ಆದಿಶಕ್ತಿ ದ್ರೌಪದಾಂಭ ದೇವಾಲಯದಲ್ಲಿ ದೇವಿಯ ಜಯಂತೋತ್ಸವವನ್ನು ಮಂಗಳವಾರ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಗಿನ ಜಾವದಿಂದ ರಾತ್ರಿಯವರೆಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಹಾಗೂ ಸಾಂಸ್ಕೃತಿಕ ಸೇವೆಗಳು ಭಕ್ತಿಭಾವದಿಂದ ಜರುಗಿದವು. ದೇವಿಯ ಜಯಂತೋತ್ಸವದ ಅಂಗವಾಗಿ ದೇವಾಲಯದ ಆವರಣವನ್ನು ವಿವಿಧ ಬಣ್ಣಬಣ್ಣದ ಪುಷ್ಪಗಳಿಂದ ಅತ್ಯಾಕರ್ಷಕವಾಗಿ ಅಲಂಕರಿಸಲಾಗಿತ್ತು. ದೇವಿಯನ್ನು ಕರಗದ ರೂಪದಲ್ಲಿ ಶೃಂಗರಿಸಿ ವಿಶೇಷ ಪೂಜೆ ನೆರವೇರಿಸಿದ್ದು ಭಕ್ತರ ಮನಸೆಳೆಯಿತು. ಜೊತೆಗೆ ದೇವರ ಮೂರ್ತಿಗಳನ್ನು ಸುಂದರ ತೊಟ್ಟಿಲಿನಲ್ಲಿಟ್ಟು ನೆರವೇರಿಸಿದ ತೊಟ್ಟಿಲು ಸೇವೆ ಉತ್ಸವದ ಪ್ರಮುಖ ಆಕರ್ಷಣೆಯಾಗಿತ್ತು. ದಿನವಿಡೀ ದೇವಾಲಯಕ್ಕೆ ಆಗಮಿಸಿದ ನೂರಾರು ಭಕ್ತಾದಿಗಳಿಗೆ ವಿಶೇಷ ಪ್ರಸಾದ ವಿನಿಯೋಗ ಹಾಗೂ ಅನ್ನದಾನ ಸಂತರ್ಪಣೆ ಏರ್ಪಡಿಸಲಾಗಿತ್ತು. ಮಧ್ಯಾಹ್ನ ಶ್ರೀ ದ್ರೌಪದಾಂಭ ದೇವಿಯ ಮಹಿಮೆಯನ್ನು ಸಾರುವ ಭಕ್ತಿಪೂರ್ವಕ ಹರಿಕಥೆ ಕಾಲಕ್ಷೇಪ ಕಾರ್ಯಕ್ರಮ ಜರುಗಿತು. ಸಂಜೆ ವೇಳೆಗೆ ಕರಗ ಪೂಜಾರಿ ಕೃಷ್ಣಮೂರ್ತಿ ಅವರು ಏಳು ಕಳಶಗಳನ್ನು ಹೊತ್ತು, ದೇವಿಯ ಪಲ್ಲಕ್ಕಿಯೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿದರು. ವೈಭವದ ಮೆರವಣಿಗೆಯ ಮೂಲಕ ಜಯಂತೋತ್ಸವಕ್ಕೆ ವಿಶೇಷ ಮೆರುಗು ಸಿಕ್ಕಿತು. ಈ ಸನ್ನಿಧಾನದಲ್ಲಿ ನಡೆದ ಎಲ್ಲಾ ಪೂಜಾ ಕೈಂಕರ್ಯಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಮುದಾಯದ ಪ್ರಮುಖ ಮುಖಂಡರು, ಯುವಕರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.4
- ದೇಶಿಹಳ್ಳಿ ಆಶ್ರಯ ಬಡಾವಣೆಯಲ್ಲಿ ಬಡವರ ಮನೆ ತೆರವುಕ್ಕೆ ನೋಟಿಸ್: 40 ಅಡಿ ರಸ್ತೆ ಎಲ್ಲಿದೆ? ದಾಖಲೆ ತೋರಿಸಿ; ಇಲ್ಲದಿದ್ದರೆ ಹೋರಾಟದ ಎಚ್ಚರಿಕೆ ಬಂಗಾರಪೇಟೆ: ಸರ್ಕಾರದ ಆಶ್ರಯ ಯೋಜನೆಯಡಿ 1992ರಲ್ಲಿ ನಿವೇಶನ ಪಡೆದು, ಗ್ರಾಮ ಪಂಚಾಯಿತಿಯ ಅನುಮತಿ, ಇ-ಸ್ವತ್ತು, ತೆರಿಗೆ ಪಾವತಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಕಳೆದ 30 ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಇದೀಗ ಏಕಾಏಕಿ ಒತ್ತುವರಿ ಆರೋಪದ ನೋಟಿಸ್ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಹೊರವಲಯದ ದೇಶಿಹಳ್ಳಿ ಗ್ರಾಮದ ಆಶ್ರಯ ಬಡಾವಣೆಯಲ್ಲಿ 1992ರಲ್ಲಿ ಅಂದಿನ ಮಂಡಲ ಪಂಚಾಯಿತಿಯಿಂದ ಬಡವರಿಗೆ ಉಚಿತವಾಗಿ ನಿವೇಶನ ಹಂಚಿಕೆ ಮಾಡಲಾಗಿತ್ತು. ಬಳಿಕ ಫಲಾನುಭವಿಗಳು ಗ್ರಾಮ ಪಂಚಾಯಿತಿಯಿಂದ ಮನೆ ನಿರ್ಮಾಣಕ್ಕೆ ಅನುಮತಿ ಪಡೆದು ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಇ-ಸ್ವತ್ತು ಮಾಡಲಾಗಿದ್ದು, ಪ್ರತಿವರ್ಷ ತೆರಿಗೆ ಪಾವತಿಸುತ್ತಿದ್ದಾರೆ. ಕುಡಿಯುವ ನೀರು ಹಾಗೂ ವಿದ್ಯುತ್ ಸಂಪರ್ಕವನ್ನೂ ಸಂಬಂಧಪಟ್ಟ ಇಲಾಖೆಗಳು ಕಲ್ಪಿಸಿವೆ. ಇಷ್ಟೆಲ್ಲ ದಾಖಲೆಗಳಿದ್ದರೂ ಇದೀಗ ಸರ್ವೆ ನಂಬರ್ 15 ಹಾಗೂ 103ರ ವ್ಯಾಪ್ತಿಯ ಮನೆಗಳು ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿವೆ ಎಂದು ಆರೋಪಿಸಿ ತೆರವು ನೋಟಿಸ್ ನೀಡಿರುವುದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 40 ಅಡಿ ರಸ್ತೆ ಎಲ್ಲಿದೆ? ‘ಬಡವರ ಮನೆಗಳ ಮುಂದೆ 40 ಅಡಿ ರಸ್ತೆ ಅಗಲೀಕರಣ ಮಾಡುವುದಾಗಿ ಹೇಳಲಾಗುತ್ತಿದೆ. ಆದರೆ ನಕ್ಷೆಯಲ್ಲಿ 40 ಅಡಿ ರಸ್ತೆ ಎಲ್ಲಿದೆ? ಅದರ ದಾಖಲೆ, ಯೋಜನೆ ಅಥವಾ ಮೂಲ ನಕ್ಷೆಯನ್ನು ಅಧಿಕಾರಿಗಳು ತೋರಿಸಬೇಕು. ಹಲವು ವರ್ಷಗಳಿಂದ ಜನರು ವಾಸಿಸುತ್ತಿರುವ ಮನೆಗಳನ್ನು ಏಕಾಏಕಿ ಒತ್ತುವರಿ ಎಂದು ಗುರುತಿಸುವುದು ಯಾವ ನ್ಯಾಯ?’ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ವಿ.ಮಹೇಶ್ ಪ್ರಶ್ನಿಸಿದರು. ಸ್ಥಳಕ್ಕೆ ಕೆಸರನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಮುನಿರಾಜು ಭೇಟಿ ನೀಡಿ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು. ಆದರೆ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಾರದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಯಿತು. ಬಿ.ವಿ.ಮಹೇಶ್ ಮಾತನಾಡಿ, ‘30–35 ವರ್ಷಗಳಿಂದ ಬಡವರು ಇಲ್ಲಿ ವಾಸಿಸುತ್ತಿದ್ದಾರೆ. ಅಂದಿನ ಮಂಡಲ ಪಂಚಾಯಿತಿ ಹಾಗೂ ತಾಲೂಕು ಆಡಳಿತದ ದಾಖಲೆಗಳ ಆಧಾರದಲ್ಲೇ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಗ್ರಾಮ ಪಂಚಾಯಿತಿಯೇ ಮನೆ ನಿರ್ಮಾಣಕ್ಕೆ ಪರವಾನಗಿ ನೀಡಿ, ಇ-ಸ್ವತ್ತು ಮಾಡಿದೆ. ತೆರಿಗೆ ವಸೂಲಿ ಮಾಡಿದೆ. ನೀರು ಮತ್ತು ವಿದ್ಯುತ್ ಸಂಪರ್ಕವನ್ನೂ ನೀಡಲಾಗಿದೆ. ಈಗ ಅದೇ ಮನೆಗಳನ್ನು ಒತ್ತುವರಿ ಎಂದು ಹೇಳುವುದು ಬಡವರ ಬದುಕಿನೊಂದಿಗೆ ಚೆಲ್ಲಾಟವಾಡಿದಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ‘ತಾಲೂಕಿನ ವಿವಿಧೆಡೆ ಸರ್ಕಾರಿ ಗೋಮಾಳ ಒತ್ತುವರಿ ಪ್ರಕರಣಗಳಿವೆ. ಅವುಗಳ ವಿರುದ್ಧ ಕ್ರಮ ಕೈಗೊಳ್ಳದೆ, ದೇಶಿಹಳ್ಳಿಯ ಬಡವರ ಮನೆಗಳ ತೆರವಿಗೆ ಮುಂದಾಗಿರುವುದು ರಾಜಕೀಯ ಪ್ರೇರಿತ ಕ್ರಮದ ಅನುಮಾನ ಮೂಡಿಸಿದೆ. ಅಧಿಕಾರಿಗಳು ಯಾರ ಒತ್ತಡಕ್ಕೂ ಮಣಿಯದೆ ದಾಖಲೆ ಪರಿಶೀಲಿಸಿ ನ್ಯಾಯಯುತವಾಗಿ ನಡೆದುಕೊಳ್ಳಬೇಕು. ಇಲ್ಲವಾದರೆ ಗ್ರಾಮಸ್ಥರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು. ನೋಟಿಸ್ ನೀಡಿ ಅಧಿಕಾರಿಗಳೇ ಗೈರು! ದೇಶಿಹಳ್ಳಿ ಗ್ರಾಮದ ಸರ್ವೆ ನಂಬರ್ 15 ಮತ್ತು 13ರ ಸರ್ಕಾರಿ ಗೋಮಾಳ ಜಮೀನುಗಳ ಒತ್ತುವರಿ ತೆರವಿಗೆ ಸೆ.7ರಂದು ಕ್ರಮ ನಿಗದಿಪಡಿಸಲಾಗಿತ್ತು. ಆದರೆ ಸೋಮವಾರ ಏಕಾಏಕಿ ನೋಟಿಸ್ ನೀಡಿ ಮರುದಿನವೇ ಸರ್ವೆ ನಡೆಸಿ ತೆರವುಗೊಳಿಸಲು ಮುಂದಾಗಿರುವುದು ಗ್ರಾಮಸ್ಥರಲ್ಲಿ ಅನುಮಾನ ಮೂಡಿಸಿದೆ. ಲೋಕಾಯುಕ್ತದ ಆದೇಶದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದರೂ, ಸ್ಥಳೀಯರು ದಾಖಲೆಗಳ ಸಮಗ್ರ ಪರಿಶೀಲನೆಗೆ ಆಗ್ರಹಿಸಿದರು. ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಗ್ರಾಮಸ್ಥರು ಅಧಿಕಾರಿಗಳ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಗ್ರಾಮಸ್ಥೆ ಲಕ್ಷ್ಮಮ್ಮ ಮಾತನಾಡಿ, ‘ನಾವು ಬಡವರು. ಕೂಲಿ ಕೆಲಸ ಮಾಡಿ ಮನೆ ಕಟ್ಟಿಕೊಂಡಿದ್ದೇವೆ. ಸರ್ಕಾರ ಹಾಗೂ ಗ್ರಾಮ ಪಂಚಾಯಿತಿಯ ದಾಖಲೆಗಳ ಆಧಾರದಲ್ಲೇ ಮನೆ ನಿರ್ಮಿಸಿಕೊಂಡಿದ್ದೇವೆ. ವರ್ಷಗಳಿಂದ ತೆರಿಗೆ ಕಟ್ಟುತ್ತಿದ್ದೇವೆ. ಈಗ ಏಕಾಏಕಿ ಮನೆ ತೆರವು ಮಾಡುವಂತೆ ಹೇಳಿದರೆ ನಾವು ಎಲ್ಲಿಗೆ ಹೋಗಬೇಕು? ಈ ರಸ್ತೆಗೆ 40 ಅಡಿ ಅಗಲೀಕರಣದ ಅಗತ್ಯವೇ ಇಲ್ಲ’ ಎಂದು ಕಣ್ಣೀರಿಟ್ಟರು. ಹೇಮಾಬಾಯಿ ಮಾತನಾಡಿ, ‘ಹತ್ತು ವರ್ಷ ದುಡಿದು ಹಣ ಕೂಡಿಸಿ ಲಕ್ಷಾಂತರ ರೂಪಾಯಿ ನೀಡಿ ಸೈಟ್ ಖರೀದಿಸಿದ್ದೇವೆ. ಮನೆ ಕಟ್ಟಿಕೊಂಡು ಜೀವನ ನಡೆಸುತ್ತಿದ್ದೇವೆ. ಈಗ ಬಂದು ಇದು ಸರ್ಕಾರಿ ಜಾಗ, ತೆರವು ಮಾಡಿ ಎಂದು ಹೇಳುವುದು ಎಷ್ಟರ ಮಟ್ಟಿಗೆ ನ್ಯಾಯ?’ ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ, ಬಿಜೆಪಿ ಮುಖಂಡರಾದ ಹುಣಸನಹಳ್ಳಿ ಶ್ರೀನಿವಾಸ, ನೆರನಹಳ್ಳಿ ಹನುಮಪ್ಪ, ಚಿಕ್ಕವಲಗಮಾದಿ ಚೌಡಪ್ಪ, ಕೆಸರನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಕೆ.ಎಂ.ಮಂಜುನಾಥ್, ದಲಿತ ರೈತ ಸೇನೆ ರಾಜ್ಯ ಅಧ್ಯಕ್ಷ ಹುಣಸನಹಳ್ಳಿ ವೆಂಕಟೇಶ್, ಪುರಸಭೆ ಮಾಜಿ ಸದಸ್ಯ ಪ್ರಭಾಕರ ರಾವ್, ದೇಶಿಹಳ್ಳಿ ಶ್ರೀನಿವಾಸ್, ಸುರೇಂದ್ರ, ಚಂದ್ರಪ್ಪ, ಬೂದಿಕೋಟೆ ಶಿವು, ಚಂದ್ರಶೇಖರ್, ಕೊಪ್ಪ ಜಯರಾಮ್, ಹಿರೇಕರಪನಹಳ್ಳಿ ಮುನಿರಾಜು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಇದ್ದರು. ಬಡವರ ಬದುಕು ಉಳಿಸುವುದು ಆಡಳಿತದ ಕರ್ತವ್ಯ ದಶಕಗಳಿಂದ ತೆರಿಗೆ ಪಡೆದು, ದಾಖಲೆ ನೀಡಿ, ಮೂಲಸೌಕರ್ಯ ಕಲ್ಪಿಸಿದ ಬಳಿಕ ಅದೇ ಮನೆಗಳನ್ನು ಒತ್ತುವರಿ ಎಂದು ಗುರುತಿಸುವ ಮುನ್ನ ಸಂಬಂಧಪಟ್ಟ ಇಲಾಖೆಗಳು ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಬೇಕಾಗಿದೆ. ರಸ್ತೆ ಅಗಲೀಕರಣ ನಿಜವಾಗಿಯೂ ಅಗತ್ಯವಿದ್ದರೆ ಅದರ ಮೂಲ ನಕ್ಷೆ, ಯೋಜನೆ ಹಾಗೂ ಕಾನೂನುಬದ್ಧ ದಾಖಲೆಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಬೇಕು. ಇಲ್ಲವಾದರೆ ಬಡವರ ಮನೆಗಳ ಮೇಲೆ ಕೈ ಹಾಕುವ ಯಾವುದೇ ಕ್ರಮವನ್ನು ಸಹಿಸುವುದಿಲ್ಲ ಎಂಬುದು ಗ್ರಾಮಸ್ಥರ ಸ್ಪಷ್ಟ ಎಚ್ಚರಿಕೆಯಾಗಿದೆ.1
- ಮುಳಬಾಗಿಲು : ರಾಮಸಂದ್ರ ರಸ್ತೆಯಲ್ಲಿ ಕಸದ ಅವ್ಯವಸ್ಥೆ: ನಗರಸಭೆ ವಿರುದ್ಧ ಸಂಘಟನೆಗಳ ಆಕ್ರೋಶ.!?2
- Post by Chand Pasha1
- ಮಡಿವಾಳರ ಜಾತಿಯನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಒತ್ತಾಯಿಸಿ ಚಿಂತಾಮಣಿಯಲ್ಲಿ ಸುದ್ದಿಗೋಷ್ಠಿ1
- ಸೂಲಿಬೆಲೆ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ಶಾಸಕ ಶರತ್ ಬಚ್ಚೇಗೌಡ ಹೊಸಕೋಟೆ ತಾಲೂಕಿನಲ್ಲಿ ಗೋಮಾಳ ಜಾಗ ಗುರುತಿಸಿ ಹಸಿರು ಮೇವು ಬೆಳೆಸಲು ಕ್ರಮ ವಹಿಸಲಾಗುವುದು ಎಂದು ಶಾಸಕ ಶಾಸಕ ಶರತ್ ಬಚ್ಚೇಗೌಡ ಹೇಳಿದರು. ಸೂಲಿಬೆಲೆಯಲ್ಲಿ ನಡೆದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣಕೃಷಿ ಸಹಕಾರ ಸಂಘದ 51ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾ ಡಿದ ಅವರು, ಸೆಪ್ಟೆಂಬರ್ ತಿಂಗಳಲ್ಲಿಯೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆ ಯಲ್ಲಿ ರೈತರು ಹಾಗೂ ಜಾನುವಾರು ಸಾಕಣೆ ದಾರರು ಸಂಕಷ್ಟ ಎದುರಿಸುವಂತಾಗಿದೆ. ಮಳೆ ಕೊರತೆಯಿಂದ ಮುಂದಿನ ದಿನಗಳಲ್ಲಿ ಮೇವಿನ ಅಭಾವ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ, ರ್ಪಾರ್ಯಕ್ರಮ ಕೈಗೊಳ್ಳಬೇಕಿದೆ ಎಂದರು.1
- ಬೇತಮಂಗಲದ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಆದಿಶಕ್ತಿ ದ್ರೌಪತಾಂಭ ದೇವಿಯ ಜಯಂತ್ಯೋತ್ಸವ: ವೈಭವದ ಕಳಶೋತ್ಸವ ಸಂಪನ್ನ ಬೇತಮಂಗಲ: ಸಮೀಪದ ಐತಿಹಾಸಿಕ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ವಹ್ನಿಕುಲ ಕ್ಷತ್ರಿಯ ತಿಗಳ ಬಾಂಧವರ ವತಿಯಿಂದ ಶ್ರೀ ಆದಿಶಕ್ತಿ ದ್ರೌಪತಾಂಭ ದೇವಿಯ ಜಯಂತ್ಯೋತ್ಸವವನ್ನು ಅತ್ಯಂತ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ಉತ್ಸವದ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಗಣಪತಿ ಪೂಜೆ, ಪುಣ್ಯಾಹವಾಚನ, ನವಗ್ರಹ ಹೋಮ ಹಾಗೂ ದ್ರೌಪತಾಂಭ ದೇವಿಗೆ ವಿಶೇಷ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು. ನೂರಾರು ಭಕ್ತರು ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾದರು. ಕಣ್ಮನ ಸೆಳೆದ ಕಳಶೋತ್ಸವ: ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಬೇತಮಂಗಲ ಕರಗ ಪೂಜಾರಿ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಸಾಂಪ್ರದಾಯಿಕ ಕಳಶೋತ್ಸವ ಜರುಗಿತು.1