ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಾಗೂ ಸ್ಥಾನಮಾನ ಸಿಗದೇ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿರುವ ಆಡಳಿತ ಪಕ್ಷದ ಶಾಸಕರ ನಡೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. "ಹಿಂದೆ ಸಿದ್ದರಾಮಯ್ಯ ಅವರ ಸಚಿವ ಸಂಪುಟ ರಚನೆಯಾದಾಗ ನನಗೂ ಮಂತ್ರಿಸ್ಥಾನ ಕೈತಪ್ಪಿತ್ತು. ಅದಾದ ಮೇಲೆ ನಾನು ಸಚಿವನಾಗಲಿಲ್ಲವೇ?" ಎಂದು ಪ್ರಶ್ನಿಸುವ ಮೂಲಕ, ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡಿರುವ ಶಾಸಕರಿಗೆ ತಾಳ್ಮೆಯಿಂದ ಇರಬೇಕು ಎಂದು ಹೇಳಿದ್ದಾರೆ. "ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು". "ನಾನು ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ರವಾನಿಸಿದ್ದೇನೆ. ನಮ್ಮಲ್ಲಿ ಸಾಕಷ್ಟು ಜನ ಆಕಾಂಕ್ಷಿಗಳು ಇದ್ದಾರೆ. ಬಹಳ ಶಾಸಕರು ಅರ್ಹರಿದ್ದಾರೆ. ಕೆಲವು ಸಂದರ್ಭದಲ್ಲಿ ಪಕ್ಷ ತೀರ್ಮಾನ ಮಾಡುತ್ತದೆ. 2004ರಲ್ಲಿ ನನ್ನನ್ನೂ ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರದಲ್ಲೂ ಆರಂಭದಲ್ಲಿ ನನ್ನನ್ನು ಮಂತ್ರಿ ಮಾಡಿರಲಿಲ್ಲ. ಆಗ ನಾವು ತಾಳ್ಮೆಯಿಂದ ಇದ್ದೆವು, ತಾಳ್ಮೆಯಿಂದ ಇದ್ದ ಕಾರಣಕ್ಕೆ ಇಂದು ನಾನು ಈ ಸ್ಥಾನದಲ್ಲಿ ಇದ್ದೇನೆ" ಎಂದು ತಿಳಿಸಿದರು.
ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಾಗೂ ಸ್ಥಾನಮಾನ ಸಿಗದೇ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿರುವ ಆಡಳಿತ ಪಕ್ಷದ ಶಾಸಕರ ನಡೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. "ಹಿಂದೆ ಸಿದ್ದರಾಮಯ್ಯ ಅವರ ಸಚಿವ ಸಂಪುಟ ರಚನೆಯಾದಾಗ ನನಗೂ ಮಂತ್ರಿಸ್ಥಾನ ಕೈತಪ್ಪಿತ್ತು. ಅದಾದ ಮೇಲೆ ನಾನು ಸಚಿವನಾಗಲಿಲ್ಲವೇ?" ಎಂದು ಪ್ರಶ್ನಿಸುವ ಮೂಲಕ, ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡಿರುವ ಶಾಸಕರಿಗೆ ತಾಳ್ಮೆಯಿಂದ ಇರಬೇಕು ಎಂದು ಹೇಳಿದ್ದಾರೆ. "ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು". "ನಾನು ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ರವಾನಿಸಿದ್ದೇನೆ. ನಮ್ಮಲ್ಲಿ ಸಾಕಷ್ಟು ಜನ ಆಕಾಂಕ್ಷಿಗಳು ಇದ್ದಾರೆ. ಬಹಳ ಶಾಸಕರು ಅರ್ಹರಿದ್ದಾರೆ. ಕೆಲವು ಸಂದರ್ಭದಲ್ಲಿ ಪಕ್ಷ ತೀರ್ಮಾನ ಮಾಡುತ್ತದೆ. 2004ರಲ್ಲಿ ನನ್ನನ್ನೂ ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರದಲ್ಲೂ ಆರಂಭದಲ್ಲಿ ನನ್ನನ್ನು ಮಂತ್ರಿ ಮಾಡಿರಲಿಲ್ಲ. ಆಗ ನಾವು ತಾಳ್ಮೆಯಿಂದ ಇದ್ದೆವು, ತಾಳ್ಮೆಯಿಂದ ಇದ್ದ ಕಾರಣಕ್ಕೆ ಇಂದು ನಾನು ಈ ಸ್ಥಾನದಲ್ಲಿ ಇದ್ದೇನೆ" ಎಂದು ತಿಳಿಸಿದರು.
- ಲೋಕಭವನದಲ್ಲಿ ಇಂದು ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ1
- tumkur hanumanthapura jathre kollapuradamma,,&karugalamma jathre tumkur jathre1
- ದೇವರ ಹೆಸರಿನಲ್ಲಿ ಪ್ರಮಾಣದ ಪತ್ರ ಸ್ವೀಕರಿಸಿದ ನೂತನ ಸಚಿವ ಟಿ ರಘುಮೂರ್ತಿ. ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ಟಿ .ರಘುಮೂರ್ತಿ ಅವರಿಗೆ ಮಂತ್ರಿ ಸ್ಥಾನ ಒಲಿದು ಬಂದಿದೆ.. ನೂತನ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ..1
- ನೂತನ ಸಂಪುಟದಲ್ಲಿ ಸಚಿವರಾಗಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಆಯ್ಕೆ ಹಿನ್ನೆಲೆ ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ ನೂತನ ಸಂಪುಟದಲ್ಲಿ ಸಚಿವರಾಗಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಆಯ್ಕೆ ಹಿನ್ನೆಲೆ ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಇನ್ನೂ ಸತತ ಮೂರು ಬಾರಿ ಆಯ್ಕಯಾಗಿರುವ ಶಾಸಕ ರಘುಮೂರ್ತಿ ಅವರಿಗೆ ಡಿ ಕೆ ಶಿವಕುಮಾರ್ ರ ನೂತನ ಸಂಪುಟದಲ್ಲಿ ಸಚಿವರಾಗಿ ಆಯ್ಕೆ ಹಿನ್ನೆಲೆ ನಗರದ ಓಬವ್ವ ವೃತ್ತದಲ್ಲಿ ಟಿ ರಘೂಮೂರ್ತಿ ಅಭಿಮಾನಿ ಬಳಗ ಹಾಗೂ ಕರುನಾಡ ವಿಜಯ ಸೇನೆ ಜಿಲ್ಲಾ ಘಟಕದ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ್ದು ಕಾಂಗ್ರೆಸ್ ಕಚೇರಿ ಬಳಿ ಸಂಘಟನೆ ಜಿಲ್ಲಾಧ್ಯಕ್ಷರಾದ ಕೆ ಟಿ ಶಿವಕುಮಾರ್ ಅವರ ನೇತೃತ್ವದಲ್ಲಿ 20 ಅಡಿ ಉದ್ದದ ಫ್ಲಕ್ಸ್ ನಿರ್ಮಿಸಿ ಸಂಭ್ರಮಾಚರಣೆ ನಡೆಸಿದರು. ಇನ್ನೂ ಎರಡನೇ ಹಂತದ ಸಂಪುಟ ವಿಸ್ತರಣೆಗೆ ಇಂದು ಅಧಿಕೃತವಾಗಿ ಮುದ್ರೆ ಬಿದ್ದಿದೆ. ಈ ಬಾರಿ ಮೂರು ಬಾರಿ ಹ್ಯಾಟ್ರಿಕ್ ಜಯಗಳಿಸಿ, ಅಭಿವೃದ್ದಿಯ ಹರಿಕಾರ ಎಂದು ಮಚ್ಚುಗೆ ಗಳಿಸಿರುವ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಇದರಿಂದ ಅವರ ಬೆಂಬಲಿಗರ ಸಂಭ್ರಮಕ್ಕೆ ಎಣೆಯೇ ಇಲ್ಲದಾಗಿದೆ. ಕರುನಾಡ ವಿಜಯಸೇನೆ ಮತ್ತು ಟಿ. ರಘುಮೂರ್ತಿ ತುವ ಸೇನೆ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿ ಬಳಿ ಡಿಕೆಶಿವಕುಮಾರ್ ಮತ್ತು ಶಾಸಕ ಟಿ. ರಘುಮೂರ್ತಿ ಅವರ ರಕ್ತದಿಂದ ಬರೆದಿರುವ ಭಾವಚಿತ್ರ ಹಿಡಿದು ಪಟಾಕಿ ಸಿಡಿಸಿ, ಸಂಭ್ರಮ ಆಚರಿಸಿದರು. ಕಾರ್ಯಕರ್ತರಿಗೆ ಸಿಹಿ ತಿನಿಸಿ ಸಂತೋಷ ಹಂಚಿಕೊಂಡರು.1
- ಎಸ್ ಐ ಆರ್ ಬಗ್ಗೆ ಜಾಗೃತಿ ಕಾರ್ಯಕ್ರಮ ಮುರುಳಿಧರ್ ಹಾಲಪ್ಪ ಜೊತೆಗೆ ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು. ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು ಎಸ್ಐಆರ್ ಫಾರಂ ಆನ್ಲೈನ್ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು. ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು. ವರದಿ ಸುರೇಶ್ ಬಾಬು ಎಂ ತುರುವೇಕೆರೆ.1
- ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದಲ್ಲಿ ತಾಲೂಕಿಗೆ ಹೇಮೆ ತಂದವರಾರು ಎಂಬ ಬಗ್ಗೆ ಚರ್ಚೆ ಕಾವೇರಿದೆ1
- ಏರ್ಪೋರ್ಟ್ ನಿಂದ ಹೊರಬಂದ ರಣದೀಪ್ ಸಿಂಗ್ ಸುರ್ಜೇವಾಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆಗಿರುವ ರಣದೀಪ್ ಸಿಂಗ್ ಸುರ್ಜೇವಾಲ. ಬೆಂಗಳೂರಿನತ್ತ ಹೊರಟ ಸುರ್ಜೇವಾಲ ಸಚಿವರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಿರುವ ಸುರ್ಜೇವಾಲ ದೇವನಹಳ್ಳಿಯಿಂದ ಬೆಂಗಳೂರಿನತ್ತ ಹೊರಟ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ.3
- ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಾಗೂ ಸ್ಥಾನಮಾನ ಸಿಗದೇ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿರುವ ಆಡಳಿತ ಪಕ್ಷದ ಶಾಸಕರ ನಡೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. "ಹಿಂದೆ ಸಿದ್ದರಾಮಯ್ಯ ಅವರ ಸಚಿವ ಸಂಪುಟ ರಚನೆಯಾದಾಗ ನನಗೂ ಮಂತ್ರಿಸ್ಥಾನ ಕೈತಪ್ಪಿತ್ತು. ಅದಾದ ಮೇಲೆ ನಾನು ಸಚಿವನಾಗಲಿಲ್ಲವೇ?" ಎಂದು ಪ್ರಶ್ನಿಸುವ ಮೂಲಕ, ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡಿರುವ ಶಾಸಕರಿಗೆ ತಾಳ್ಮೆಯಿಂದ ಇರಬೇಕು ಎಂದು ಹೇಳಿದ್ದಾರೆ. "ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು". "ನಾನು ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ರವಾನಿಸಿದ್ದೇನೆ. ನಮ್ಮಲ್ಲಿ ಸಾಕಷ್ಟು ಜನ ಆಕಾಂಕ್ಷಿಗಳು ಇದ್ದಾರೆ. ಬಹಳ ಶಾಸಕರು ಅರ್ಹರಿದ್ದಾರೆ. ಕೆಲವು ಸಂದರ್ಭದಲ್ಲಿ ಪಕ್ಷ ತೀರ್ಮಾನ ಮಾಡುತ್ತದೆ. 2004ರಲ್ಲಿ ನನ್ನನ್ನೂ ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರದಲ್ಲೂ ಆರಂಭದಲ್ಲಿ ನನ್ನನ್ನು ಮಂತ್ರಿ ಮಾಡಿರಲಿಲ್ಲ. ಆಗ ನಾವು ತಾಳ್ಮೆಯಿಂದ ಇದ್ದೆವು, ತಾಳ್ಮೆಯಿಂದ ಇದ್ದ ಕಾರಣಕ್ಕೆ ಇಂದು ನಾನು ಈ ಸ್ಥಾನದಲ್ಲಿ ಇದ್ದೇನೆ" ಎಂದು ತಿಳಿಸಿದರು.1