logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮನೆಯಿಂದ ಹೊರಗೆ ಹೋಗಿ ವಾಪಸ್ ಬಾರದೇ ನಾಪತ್ತೆಯಾದ ಮಹಿಳೆ: ಏನಾಯ್ತು? ಮೂಡಬಿದ್ರೆ ತಾಲೂಕು ಮಾರ್ಪಾಡಿ ಗ್ರಾಮದ  ವಿಜಯ     (62) ಎಂಬವರು ಸುಮಾರು 12 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು,  ಮಾರ್ಚ್ 28 ರಂದು ರಾತ್ರಿ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೆ ಕಾಣೆಯಾಗಿದ್ದು, ಮೂಡುಬಿದ್ರೆ ಪೋಲಿಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ: ಗೋದಿ ಮೈಬಣ್ಣ ಹೊಂದಿರುತ್ತಾರೆ. ತುಳು ಭಾಷೆ ಮಾತನಾಡುತ್ತಾರೆ.  ಕಾಣೆಯಾದ ದಿನ ನೀಲಿ ಬಣ್ಣದ ನೈಟಿ ಧರಿಸಿದ್ದರು. ಕಾಣೆಯಾದವರ ಬಗ್ಗೆ  ಮಾಹಿತಿ ಪತ್ತೆಯಾದಲ್ಲಿ ಮೂಡಬಿದ್ರೆ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

23 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
23 hrs ago

ಮನೆಯಿಂದ ಹೊರಗೆ ಹೋಗಿ ವಾಪಸ್ ಬಾರದೇ ನಾಪತ್ತೆಯಾದ ಮಹಿಳೆ: ಏನಾಯ್ತು? ಮೂಡಬಿದ್ರೆ ತಾಲೂಕು ಮಾರ್ಪಾಡಿ ಗ್ರಾಮದ  ವಿಜಯ     (62) ಎಂಬವರು ಸುಮಾರು 12 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು,  ಮಾರ್ಚ್ 28 ರಂದು ರಾತ್ರಿ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೆ ಕಾಣೆಯಾಗಿದ್ದು, ಮೂಡುಬಿದ್ರೆ ಪೋಲಿಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ: ಗೋದಿ ಮೈಬಣ್ಣ ಹೊಂದಿರುತ್ತಾರೆ. ತುಳು ಭಾಷೆ ಮಾತನಾಡುತ್ತಾರೆ.  ಕಾಣೆಯಾದ ದಿನ ನೀಲಿ ಬಣ್ಣದ ನೈಟಿ ಧರಿಸಿದ್ದರು. ಕಾಣೆಯಾದವರ ಬಗ್ಗೆ  ಮಾಹಿತಿ ಪತ್ತೆಯಾದಲ್ಲಿ ಮೂಡಬಿದ್ರೆ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More news from ಕರ್ನಾಟಕ and nearby areas
  • ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ವಿಧಾನಸಭೆ ಸ್ಪೀಕರ್           ಯು.ಟಿ ಖಾದರ್ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕುಡಿಯುವ ನೀರಿನ  ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗ್ರಾಮ ಪಂಚಾಯತ್‍ಗಳು, ನಗರ ಸ್ಥಳೀಯ ಸಂಸ್ಥೆಗಳು,  ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಒತ್ತು ನೀಡಬೇಕು.  ಯಾವುದೇ ಅಡೆತಡೆ ಇಲ್ಲದೆ ನೀರು ಪೂರೈಸಲು ಗಮನ ಹರಿಸಬೇಕು. ಸ್ಥಳೀಯವಾದ ಸಮಸ್ಯೆಗಳನ್ನು ತಮ್ಮ ಹಂತದಲ್ಲಿ ಪರಿಹರಿಸಿ ಗ್ರಾಮ ಪಂಚಾಯತ್‍ಗಳು ಮತ್ತು ಸ್ಥಳೀಯ ಸಂಸ್ಥೆಗಳ ಅನುದಾನ ಬಳಸಿಕೊಂಡು  ಕಾಮಗಾರಿ ನಡೆಸಬೇಕು. ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅವರು ತಿಳಿಸಿದರು. ಜಲಜೀವನ್ ಯೋಜನೆಯಲ್ಲಿ  ಎಲ್ಲ ಮನೆಗಳಿಗೆ ಸಂಪರ್ಕ ಒದಗಿಸಬೇಕು. ಈ ಯೋಜನೆಯಡಿ ನಿರ್ಮಿಸಲಾಗಿರುವ  ಟ್ಯಾಂಕ್‍ಗಳಿಗೆ ಸಂಬಂಧಪಟ್ಟ ನೀರಿನ ಮೂಲಗಳಿಂದ ನೀರು ತಲುಪಿಸಿ ಜನವಸತಿ ಪ್ರದೇಶಗಳಿಗೆ ನಿರಂತರ ನೀರು ಪೂರೈಕೆಯಾಗಲು  ಗಮನಹರಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು ಎಂದು ಅವರು ತಿಳಿಸಿದರು. ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ವಿಳಂಬ ಮಾಡಬಾರದು. ಪೈಪ್ ಅಳವಡಿಕೆಗೆ ರಸ್ತೆ ಅಗೆದಿರುವ ಕಡೆಗಳಲ್ಲಿ ವಿಳಂಬವಿಲ್ಲದೆ ರಸ್ತೆಯನ್ನು  ಪುನಃಸ್ಥಾಪನೆ  ಮಾಡಬೇಕು. ಕುಡಿಯುವ ನೀರಿಗೆ ಸಂಬಂಧಿಸಿದ ಇಲಾಖೆಗಳು ನಿಗಮಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸ್ಪೀಕರ್ ತಿಳಿಸಿದರು.
    1
    ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ವಿಧಾನಸಭೆ ಸ್ಪೀಕರ್           ಯು.ಟಿ ಖಾದರ್ ಸೂಚಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕುಡಿಯುವ ನೀರಿನ  ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಗ್ರಾಮ ಪಂಚಾಯತ್‍ಗಳು, ನಗರ ಸ್ಥಳೀಯ ಸಂಸ್ಥೆಗಳು,  ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಒತ್ತು ನೀಡಬೇಕು.  ಯಾವುದೇ ಅಡೆತಡೆ ಇಲ್ಲದೆ ನೀರು ಪೂರೈಸಲು ಗಮನ ಹರಿಸಬೇಕು. ಸ್ಥಳೀಯವಾದ ಸಮಸ್ಯೆಗಳನ್ನು ತಮ್ಮ ಹಂತದಲ್ಲಿ ಪರಿಹರಿಸಿ ಗ್ರಾಮ ಪಂಚಾಯತ್‍ಗಳು ಮತ್ತು ಸ್ಥಳೀಯ ಸಂಸ್ಥೆಗಳ ಅನುದಾನ ಬಳಸಿಕೊಂಡು  ಕಾಮಗಾರಿ ನಡೆಸಬೇಕು. ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅವರು ತಿಳಿಸಿದರು.
ಜಲಜೀವನ್ ಯೋಜನೆಯಲ್ಲಿ  ಎಲ್ಲ ಮನೆಗಳಿಗೆ ಸಂಪರ್ಕ ಒದಗಿಸಬೇಕು. ಈ ಯೋಜನೆಯಡಿ ನಿರ್ಮಿಸಲಾಗಿರುವ  ಟ್ಯಾಂಕ್‍ಗಳಿಗೆ ಸಂಬಂಧಪಟ್ಟ ನೀರಿನ ಮೂಲಗಳಿಂದ ನೀರು ತಲುಪಿಸಿ ಜನವಸತಿ ಪ್ರದೇಶಗಳಿಗೆ ನಿರಂತರ ನೀರು ಪೂರೈಕೆಯಾಗಲು  ಗಮನಹರಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು ಎಂದು ಅವರು ತಿಳಿಸಿದರು.
ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ವಿಳಂಬ ಮಾಡಬಾರದು. ಪೈಪ್ ಅಳವಡಿಕೆಗೆ ರಸ್ತೆ ಅಗೆದಿರುವ ಕಡೆಗಳಲ್ಲಿ ವಿಳಂಬವಿಲ್ಲದೆ ರಸ್ತೆಯನ್ನು  ಪುನಃಸ್ಥಾಪನೆ  ಮಾಡಬೇಕು. ಕುಡಿಯುವ ನೀರಿಗೆ ಸಂಬಂಧಿಸಿದ ಇಲಾಖೆಗಳು ನಿಗಮಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸ್ಪೀಕರ್ ತಿಳಿಸಿದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    51 min ago
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    1
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Ankola, Uttara Kannada•
    7 hrs ago
  • Contact AIJAZ PASHA BANNUR DARGAH 8970712631 6363583017
    1
    Contact AIJAZ PASHA BANNUR DARGAH 8970712631
6363583017
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    10 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಹುಬ್ಬಳ್ಳಿಯಿಂದ ದಾವಣಗೆರೆ ಉಪಚುನಾವಣೆ ಪ್ರಚಾರ ನಿಮಿತ್ತ ತೆರಳುತ್ತಿರುವ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ ರವರನ್ನು ಶಿಗ್ಗಾಂವ ಮಾರ್ಗದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಶಾಸಕರ ಸಹೋದರರಾದ ಎಂ ಎಂ ಪಠಾಣ ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ಸನ್ಮಾನ ಮಾಡಲಾಯಿತು.
    1
    ಹುಬ್ಬಳ್ಳಿಯಿಂದ ದಾವಣಗೆರೆ ಉಪಚುನಾವಣೆ ಪ್ರಚಾರ ನಿಮಿತ್ತ ತೆರಳುತ್ತಿರುವ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ ರವರನ್ನು ಶಿಗ್ಗಾಂವ ಮಾರ್ಗದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಶಾಸಕರ ಸಹೋದರರಾದ ಎಂ ಎಂ ಪಠಾಣ ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ  ಸನ್ಮಾನ ಮಾಡಲಾಯಿತು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    5 hrs ago
  • ​ ಮಾಗಡಿ : ಮಾಗಡಿ ಕೆರೆಗಳನ್ನು ತುಂಬಿಸಿ ನಂತರ ಡಾಬಸ್‍ಪೇಟೆ ಕೈಗಾರಿಕೆ ಪ್ರದೇಶಕ್ಕೆ ನೀರು ನೀಡಲಿ ಇಲ್ಲದಿದ್ರೆ ಏ. 17 ರಂದು ಬೃಹತ್ ತಡೆ ನಡೆಸುವುದಾಗಿ ತಾಲೂಕು ರೈತಸಂಘದ ಅಧ್ಯಕ್ಷ ಹೋಸಪಾಳ್ಯ ಲೋಕೇಶ್ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿ ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರು ತುಂಬಿಸಲು ಸರಕಾರ ಇಂತಿಷ್ಟು ನೀರು ಅಲೋಕೇಟ್ ಮಾಡಿದೆ ಈ ನೀರನ್ನು ಮಾಗಡಿಗೆ ನೀಡಲು ತುಮಕೂರಿನ ಚುನಾಯಿತ ಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಈ ನಡುವೆ ಸತ್ತೆಗಾಲದಿಂದ ಕಣ್ವ ಮಾಗಡಿ ಪಟ್ಟಣದ ಮೂಲಕ ದಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ಬೃಹತ್ ಗಾತ್ರದ ಪೈಪು ಮೂಲಕ ನೀಡಲು ಸರಕಾರ ಮುಂದಾಗಿದ್ದು ನೂರಾರು ಮರಗಳಿಗೆ ಹಾಗೂ ರಸ್ತೆಗಳನ್ನು ಹಾನಿ ಮಾಡಿ ಕಾಮಗಾರಿಯೂ ನಡೆಯುತ್ತಿದೆ ಮೊದಲು ಮಾಗಡಿ ತಾಲೂಕಿನ ಕೆರೆಗಳಿಗೆ ನೀರು ಕೊಟ್ಟು ನಂತರ ಡಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ನೀಡಲಿ ಎಂದು ಒತ್ತಾಯಿಸಿದರು. ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರು, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಜಿಲ್ಲೆಯವರೆ ಆಗಿರುವುದರಿಂದ ಕಾವೇರಿ ನದಿ ನೀರನ್ನು ಈ ಭಾಗದ ಕೆರೆ,ಕಟ್ಟೆಗಳಿಗೆ ತುಂಬಿಸಬೇಕು. ಡಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ಎಷ್ಟು ನೀರನ್ನು ತೆಗೆದುಕೊಂಡು ಹೋಗಲಾಗುತ್ತಿದೆ ಯಾವ ಮಾನದಂಡದಲ್ಲಿ ನೀರನ್ನು ಕೊಡೋಯ್ಯಲಾಗುತ್ತಿದೆ ಎಂಬುದರ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ರೈತಸಂಘದೊಂದಿಗೆ ಸಭೆ ನಡೆಸಿ ಸಂಬಂಧ ಪಟ್ಟ ಮಾಹಿತಿ ತಿಳಿಸಬೇಕು ಇಲ್ಲದಿದ್ರೆ ಏ. 17 ರಂದು ಪಟ್ಟಣದ ಹೋಸಪೇಟೆ ವೃತ್ತದಲ್ಲಿ ರಸ್ತೆ ತಡೆನಡೆಸಿ ನಂತರ ಎಲ್ಲಾ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜೆಸಿಬಿ ಮೂಲಕ ಪೈಪುಗಳನ್ನು ಕಿತ್ತುಹಾಕುವ ಕೆಲಸಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಸತ್ತೆಗಾಲದಿಂದ ಡಾಬಸ್ ಪೇಟೆ ಕೈಗಾರಿಕೆ ಪ್ರದೇಶ ಸುಮಾರು 100 ಕಿಲೋಮೀಟರ್ ಗೂ ಹೆಚ್ಚಿದ್ದು ಅಲ್ಲಿಂದ ಇಲ್ಲಿಗೆ ನೀರು ಕೊಡುವ ಅಗತ್ಯವಾದರೂ ಏನಿದೆ ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿ ಹರಿಯುವ ಹೇಮಾವತಿ ನೀರನ್ನು ಕೈಗಾರಿಕೆ ಪ್ರದೇಶಕ್ಕೆ ನೀಡಬಹುದಿತ್ತು ಅದನ್ನು ಬಿಟ್ಟು ಕಾವೇರಿ ನೀರನ್ನು ಕೋಡುತ್ತಿರುವುದಾದರು ಏನು ಈ ಬಗ್ಗೆ ಸಾಕಷ್ಟು ಅನುಮಾನ ಮೂಢಿದೆ. ಮಾಗಡಿ ತಾಲೂಕಿನ ಜನರಿಗೆ ಕುಡಿಯುವ ನೀರಿಲ್ಲದೆ ಆಹಾಕಾರ ಉಂಟಾಗಿದೆ. ಅದರಲ್ಲೂ ಮಂಚನಬೆಲೆ ಜಲಾಶಯದಿಂದ ಮಾಗಡಿ ಪಟ್ಟಣಕ್ಕೆ ಸರಬರಾಜು ಮಾಡುವ ನೀರು ಸಮರ್ಪಕವಾಗಿ ನೀಡುತ್ತಿಲ್ಲ ಈಗಿರುವಾಗ ಮಾಗಡಿ ತಾಲೂಕಿನ ಜನರಿಗೆ ಕಾವೇರಿಯ ನೀರು ಅತ್ಯವಶ್ಯಕವಾಗಿದೆ ಎಂದರು. ತಾಲೂಕಿನಲ್ಲಿ ಸಮರ್ಪಕ ವಿದ್ಯುತ್ ನೀಡದೆ ಇರುವುದರಿಂದ ರೈತರ ಮೋಟಾರ್ ಸುಟ್ಟುಹೋಗುತ್ತಿದೆ, ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಸಂಪೂರ್ಣ ಕಳಫೆಯಿಂದ ಕೂಡಿದೆ, ತಾಲೂಕಿನಲ್ಲಿನ ಎಲ್ಲಾ ಶುದ್ದಕುಡಿಯುವ ನೀರಿನ ಘಟಕಗಳು ಸುಟ್ಟುಹೋಗಿವೆ, ತಾಲೂಕು ಕಚೇರಿಗಳಲ್ಲಿ ರೈತರ ಕೆಲಸವಾಗುತ್ತಿಲ್ಲ, ಬಹುತೇಕ ಗ್ರಾಮಗಳಲ್ಲಿ ಬಸ್ ಸೌಲಭ್ಯಗಳಿಲ್ಲ ರೈತರ ಸಮಸ್ಯೆಗಳು ದಿನೆ,ದಿನೇ ಹೆಚ್ಚಾಗುತ್ತಿದೆ ಈ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ತಹಶೀಲ್ದಾರ್ ಶರತ್ ಕುಮಾರು ವಿಫಲರಾಗಿದ್ದಾರೆ ಈ ಸಂಬಂಧ ತಾಲೂಕು ಕಚೇರಿಗೆ ಮುತ್ತಿಗೆ ಹಾಕುವ ಕೆಲಸ ಮಾಡಲಾಗುವುದು ಎಂದರು. ತಾಲೂಕಿನ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿನ ಹೂಳೆತ್ತಿದ್ದರೆ ಮಾಗಡಿ- ಕುಣಿಗಲ್ ಭಾಗದಲ್ಲಿ ಅಂತರ್ ಜಲವೃದ್ದಿಯಾಗುತ್ತದೆ ಇದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಮಾಗಡಿ- ತಿಪ್ಪಗೊಂಡನಹಳ್ಳಿ ವರೆಗೆ ಪಾದಯಾತ್ರೆ ನಡೆಸಿ 3 ಭಾರಿ ರಸ್ತೆ ತಡೆನಡೆಸಿದ ಕಾರಣ ತಿಪ್ಪಗೊಂಡನಹಳ್ಳಿ ಜಲಾಶಯದ ಹೂಳೆತ್ತಲು ಸರಕಾರ 100 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿತು ಆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಪೂರ್ಣಗೊಳಿಸುವಂತೆ ಹಾಗೂ ಬೆಂಗಳೂರು ಸುತ್ತಮುತ್ತಲಿನಿಂದ ಜಲಾಶಯಕ್ಕೆ ಸೇರುವ ಕಲುಷಿತ ನೀರು ತಡೆಗಟ್ಟುವಂತೆ ಆಗ್ರಹಿಸಿ ಏ. 28 ರಂದು ಮಾಗಡಿಯಿಂದ ತಿಪ್ಪಗೊಂಡನಹಳ್ಳಿ ಜಲಾಶಯದ ವರೆಗೂ ಬೃಹತ್ ಬೈಕ್ ರ್ಯಾಲಿ ಮೂಲಕ ಉಗ್ರಹೋರಾಟವನ್ನು ತಾಲೂಕು ರೈತಸಂಘ ಹಮ್ಮಿಕೊಳ್ಳಲಿದೆ ಈ ಹೋರಾಟಕ್ಕೆ ಪೊಲೀಸ್ ಇಲಾಖೆ ಸಹಕಾರ ನೀಡುವಂತೆ ಮನವಿ ಮಾಡಿದರು. ಕಾಂಗ್ರೆಸ್, ಜೆಡಿಎಸ್‍ನ ಮುಖಂಡರು ಪ್ರತಿನಿತ್ಯ ಪತ್ರಿಕಾಘೋಷ್ಠಿ ಏರ್ಪಡಿಸಿ ರಾಜಕೀಯ ಕೆಸೆರೆಚಾಟ ಮಾಡುವುದನ್ನು ಬಿಟ್ಟು ರೈತರ ಸಮಸ್ಯೆಗಳಿಗೆ ಧ್ವನಿಗೂಡಿಸಿ ಎಂದು ಮನವಿ ಮಾಡಿದರು. ರೈತಮುಖಂಡರಾದ ಶಿವಲಿಂಗಯ್ಯ, ರವಿಕುಮಾರು, ರಾಮಣ್ಣ, ಚಿಕ್ಕಣ್ಣ, ವೆಂಕಟೇಶ್, ಶಿವರುದ್ರಯ್ಯ, ಕಾಂತರಾಜು, ನಾಗರಾಜು, ಆಂಜನಪ್ಪ, ನಾರಾಯಣಪ್ಪ, ಕರಿಯಪ್ಪ, ಮುನಿರಾಜು, ಶಂಕರಯ್ಯ, ಹನುಮಂತಯ್ಯ, ಗಂಗಾಧರಯ್ಯ ಇತರರು ಇದ್ದರು.
    1
    ​ ಮಾಗಡಿ :   ಮಾಗಡಿ ಕೆರೆಗಳನ್ನು ತುಂಬಿಸಿ ನಂತರ ಡಾಬಸ್‍ಪೇಟೆ ಕೈಗಾರಿಕೆ ಪ್ರದೇಶಕ್ಕೆ ನೀರು ನೀಡಲಿ ಇಲ್ಲದಿದ್ರೆ ಏ. 17  ರಂದು ಬೃಹತ್ ತಡೆ ನಡೆಸುವುದಾಗಿ ತಾಲೂಕು ರೈತಸಂಘದ ಅಧ್ಯಕ್ಷ ಹೋಸಪಾಳ್ಯ ಲೋಕೇಶ್ ಎಚ್ಚರಿಕೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿ ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರು ತುಂಬಿಸಲು  ಸರಕಾರ ಇಂತಿಷ್ಟು ನೀರು ಅಲೋಕೇಟ್ ಮಾಡಿದೆ ಈ ನೀರನ್ನು  ಮಾಗಡಿಗೆ ನೀಡಲು ತುಮಕೂರಿನ ಚುನಾಯಿತ ಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಈ ನಡುವೆ ಸತ್ತೆಗಾಲದಿಂದ ಕಣ್ವ  ಮಾಗಡಿ ಪಟ್ಟಣದ ಮೂಲಕ ದಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ಬೃಹತ್ ಗಾತ್ರದ ಪೈಪು ಮೂಲಕ ನೀಡಲು ಸರಕಾರ ಮುಂದಾಗಿದ್ದು  ನೂರಾರು ಮರಗಳಿಗೆ ಹಾಗೂ ರಸ್ತೆಗಳನ್ನು  ಹಾನಿ ಮಾಡಿ ಕಾಮಗಾರಿಯೂ ನಡೆಯುತ್ತಿದೆ ಮೊದಲು ಮಾಗಡಿ ತಾಲೂಕಿನ ಕೆರೆಗಳಿಗೆ ನೀರು ಕೊಟ್ಟು ನಂತರ ಡಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ನೀಡಲಿ ಎಂದು ಒತ್ತಾಯಿಸಿದರು.
ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರು, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್,  ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಜಿಲ್ಲೆಯವರೆ ಆಗಿರುವುದರಿಂದ ಕಾವೇರಿ ನದಿ ನೀರನ್ನು ಈ ಭಾಗದ ಕೆರೆ,ಕಟ್ಟೆಗಳಿಗೆ ತುಂಬಿಸಬೇಕು.  ಡಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ಎಷ್ಟು ನೀರನ್ನು ತೆಗೆದುಕೊಂಡು ಹೋಗಲಾಗುತ್ತಿದೆ ಯಾವ ಮಾನದಂಡದಲ್ಲಿ ನೀರನ್ನು ಕೊಡೋಯ್ಯಲಾಗುತ್ತಿದೆ  ಎಂಬುದರ  ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ರೈತಸಂಘದೊಂದಿಗೆ ಸಭೆ ನಡೆಸಿ ಸಂಬಂಧ ಪಟ್ಟ ಮಾಹಿತಿ ತಿಳಿಸಬೇಕು ಇಲ್ಲದಿದ್ರೆ ಏ. 17 ರಂದು ಪಟ್ಟಣದ ಹೋಸಪೇಟೆ ವೃತ್ತದಲ್ಲಿ  ರಸ್ತೆ ತಡೆನಡೆಸಿ ನಂತರ ಎಲ್ಲಾ  ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜೆಸಿಬಿ ಮೂಲಕ  ಪೈಪುಗಳನ್ನು ಕಿತ್ತುಹಾಕುವ ಕೆಲಸಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸತ್ತೆಗಾಲದಿಂದ ಡಾಬಸ್ ಪೇಟೆ ಕೈಗಾರಿಕೆ ಪ್ರದೇಶ ಸುಮಾರು 100 ಕಿಲೋಮೀಟರ್ ಗೂ ಹೆಚ್ಚಿದ್ದು ಅಲ್ಲಿಂದ ಇಲ್ಲಿಗೆ ನೀರು ಕೊಡುವ ಅಗತ್ಯವಾದರೂ ಏನಿದೆ ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿ ಹರಿಯುವ ಹೇಮಾವತಿ ನೀರನ್ನು ಕೈಗಾರಿಕೆ ಪ್ರದೇಶಕ್ಕೆ ನೀಡಬಹುದಿತ್ತು ಅದನ್ನು ಬಿಟ್ಟು ಕಾವೇರಿ ನೀರನ್ನು ಕೋಡುತ್ತಿರುವುದಾದರು ಏನು ಈ ಬಗ್ಗೆ ಸಾಕಷ್ಟು ಅನುಮಾನ ಮೂಢಿದೆ. ಮಾಗಡಿ ತಾಲೂಕಿನ ಜನರಿಗೆ ಕುಡಿಯುವ ನೀರಿಲ್ಲದೆ ಆಹಾಕಾರ ಉಂಟಾಗಿದೆ. ಅದರಲ್ಲೂ ಮಂಚನಬೆಲೆ ಜಲಾಶಯದಿಂದ ಮಾಗಡಿ ಪಟ್ಟಣಕ್ಕೆ  ಸರಬರಾಜು ಮಾಡುವ ನೀರು ಸಮರ್ಪಕವಾಗಿ ನೀಡುತ್ತಿಲ್ಲ ಈಗಿರುವಾಗ ಮಾಗಡಿ ತಾಲೂಕಿನ ಜನರಿಗೆ  ಕಾವೇರಿಯ ನೀರು ಅತ್ಯವಶ್ಯಕವಾಗಿದೆ ಎಂದರು.
ತಾಲೂಕಿನಲ್ಲಿ ಸಮರ್ಪಕ  ವಿದ್ಯುತ್ ನೀಡದೆ ಇರುವುದರಿಂದ   ರೈತರ ಮೋಟಾರ್ ಸುಟ್ಟುಹೋಗುತ್ತಿದೆ, ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಸಂಪೂರ್ಣ ಕಳಫೆಯಿಂದ ಕೂಡಿದೆ, ತಾಲೂಕಿನಲ್ಲಿನ ಎಲ್ಲಾ ಶುದ್ದಕುಡಿಯುವ ನೀರಿನ ಘಟಕಗಳು ಸುಟ್ಟುಹೋಗಿವೆ,  ತಾಲೂಕು ಕಚೇರಿಗಳಲ್ಲಿ ರೈತರ ಕೆಲಸವಾಗುತ್ತಿಲ್ಲ, ಬಹುತೇಕ ಗ್ರಾಮಗಳಲ್ಲಿ ಬಸ್ ಸೌಲಭ್ಯಗಳಿಲ್ಲ ರೈತರ ಸಮಸ್ಯೆಗಳು ದಿನೆ,ದಿನೇ ಹೆಚ್ಚಾಗುತ್ತಿದೆ ಈ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ತಹಶೀಲ್ದಾರ್ ಶರತ್ ಕುಮಾರು ವಿಫಲರಾಗಿದ್ದಾರೆ ಈ ಸಂಬಂಧ ತಾಲೂಕು ಕಚೇರಿಗೆ ಮುತ್ತಿಗೆ ಹಾಕುವ ಕೆಲಸ ಮಾಡಲಾಗುವುದು ಎಂದರು.
ತಾಲೂಕಿನ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿನ ಹೂಳೆತ್ತಿದ್ದರೆ ಮಾಗಡಿ- ಕುಣಿಗಲ್  ಭಾಗದಲ್ಲಿ ಅಂತರ್ ಜಲವೃದ್ದಿಯಾಗುತ್ತದೆ ಇದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಮಾಗಡಿ- ತಿಪ್ಪಗೊಂಡನಹಳ್ಳಿ ವರೆಗೆ ಪಾದಯಾತ್ರೆ ನಡೆಸಿ 3 ಭಾರಿ ರಸ್ತೆ ತಡೆನಡೆಸಿದ ಕಾರಣ  ತಿಪ್ಪಗೊಂಡನಹಳ್ಳಿ ಜಲಾಶಯದ ಹೂಳೆತ್ತಲು ಸರಕಾರ 100 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿತು ಆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಪೂರ್ಣಗೊಳಿಸುವಂತೆ ಹಾಗೂ ಬೆಂಗಳೂರು ಸುತ್ತಮುತ್ತಲಿನಿಂದ ಜಲಾಶಯಕ್ಕೆ ಸೇರುವ ಕಲುಷಿತ ನೀರು ತಡೆಗಟ್ಟುವಂತೆ  ಆಗ್ರಹಿಸಿ ಏ. 28 ರಂದು   ಮಾಗಡಿಯಿಂದ ತಿಪ್ಪಗೊಂಡನಹಳ್ಳಿ ಜಲಾಶಯದ ವರೆಗೂ ಬೃಹತ್ ಬೈಕ್ ರ್ಯಾಲಿ ಮೂಲಕ  ಉಗ್ರಹೋರಾಟವನ್ನು ತಾಲೂಕು ರೈತಸಂಘ ಹಮ್ಮಿಕೊಳ್ಳಲಿದೆ ಈ ಹೋರಾಟಕ್ಕೆ ಪೊಲೀಸ್ ಇಲಾಖೆ ಸಹಕಾರ ನೀಡುವಂತೆ ಮನವಿ ಮಾಡಿದರು.
ಕಾಂಗ್ರೆಸ್, ಜೆಡಿಎಸ್‍ನ ಮುಖಂಡರು ಪ್ರತಿನಿತ್ಯ ಪತ್ರಿಕಾಘೋಷ್ಠಿ ಏರ್ಪಡಿಸಿ ರಾಜಕೀಯ ಕೆಸೆರೆಚಾಟ ಮಾಡುವುದನ್ನು ಬಿಟ್ಟು ರೈತರ ಸಮಸ್ಯೆಗಳಿಗೆ ಧ್ವನಿಗೂಡಿಸಿ ಎಂದು ಮನವಿ ಮಾಡಿದರು.
ರೈತಮುಖಂಡರಾದ ಶಿವಲಿಂಗಯ್ಯ, ರವಿಕುಮಾರು, ರಾಮಣ್ಣ, ಚಿಕ್ಕಣ್ಣ, ವೆಂಕಟೇಶ್, ಶಿವರುದ್ರಯ್ಯ, ಕಾಂತರಾಜು, ನಾಗರಾಜು, ಆಂಜನಪ್ಪ, ನಾರಾಯಣಪ್ಪ, ಕರಿಯಪ್ಪ, ಮುನಿರಾಜು, ಶಂಕರಯ್ಯ, ಹನುಮಂತಯ್ಯ,  ಗಂಗಾಧರಯ್ಯ ಇತರರು ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    2 hrs ago
  • ಮೊಗ್ರು ಗ್ರಾಮ ಬರುಂಗುಡೇಲು ಸಮೀಪ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಪರಿಣಾಮ ಪಕ್ಕದಲ್ಲಿರುವ ಅರಣ್ಯ ಪ್ರದೇಶಕ್ಕೂ ಬೆಂಕಿ ಹಬ್ಬಿದ್ದು ಇದರಿಂದಾಗಿ ಇನ್ನಷ್ಟು ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸುವ ಸಾಧ್ಯತೆ ಇರುವುದರಿಂದ ಆತಂಕ ಸೃಷ್ಟಿಯಾಗಿದೆ. ಬೆಂಕಿಯಿಂದಾಗಿ ಅಪಾರ ನಷ್ಟ ಉಂಟಾಗಿದೆ. ಘಟನೆ ಗಮನಿಸಿದ ತಕ್ಷಣ ಅರಣ್ಯ ಇಲಾಖೆ ಹಾಗೂ ನೆರೆಯವರಿಗೆ ಸಹ ಮಾಹಿತಿ ನೀಡಿ, ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಕರಿಸುವಂತೆ ಮನವಿ ಮಾಡಲಾಗಿದೆ. ಸ್ಥಳೀಯರು ಹಾಗೂ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ತಕ್ಷಣ ಕ್ರಮ ಕೈಗೊಂಡು ಬೆಂಕಿ ನಂದಿಸಿ ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ
    1
    ಮೊಗ್ರು ಗ್ರಾಮ ಬರುಂಗುಡೇಲು ಸಮೀಪ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಪರಿಣಾಮ ಪಕ್ಕದಲ್ಲಿರುವ ಅರಣ್ಯ ಪ್ರದೇಶಕ್ಕೂ ಬೆಂಕಿ ಹಬ್ಬಿದ್ದು ಇದರಿಂದಾಗಿ ಇನ್ನಷ್ಟು ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸುವ ಸಾಧ್ಯತೆ ಇರುವುದರಿಂದ ಆತಂಕ ಸೃಷ್ಟಿಯಾಗಿದೆ. ಬೆಂಕಿಯಿಂದಾಗಿ ಅಪಾರ ನಷ್ಟ ಉಂಟಾಗಿದೆ. ಘಟನೆ ಗಮನಿಸಿದ ತಕ್ಷಣ ಅರಣ್ಯ ಇಲಾಖೆ ಹಾಗೂ ನೆರೆಯವರಿಗೆ ಸಹ ಮಾಹಿತಿ ನೀಡಿ, ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಕರಿಸುವಂತೆ ಮನವಿ ಮಾಡಲಾಗಿದೆ. ಸ್ಥಳೀಯರು ಹಾಗೂ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ತಕ್ಷಣ ಕ್ರಮ ಕೈಗೊಂಡು ಬೆಂಕಿ ನಂದಿಸಿ ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.