logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

‘ಪಠ್ಯದ ಜೊತೆಗೆ ಸಾಮಾಜಿಕ ಮೌಲ್ಯಗಳನ್ನೂ ಬೋಧಿಸಿ’ ಕನ್ನಡ ಉಪನ್ಯಾಸಕರ ಕಾರ್ಯಾಗಾರದಲ್ಲಿ ಡಿಡಿಪಿಐ ಗಂಗಾಧರ್ ಸಲಹೆ ತುಮಕೂರು: ಕನ್ನಡ ಭಾಷೆಯ ಸಮಗ್ರ ಅಧ್ಯಯನಕ್ಕೆ ವಿದ್ಯಾರ್ಥಿಗಳನ್ನು ಉಪನ್ಯಾಸಕರು ಪ್ರೇರೇಪಿಸಬೇಕು. ಪಠ್ಯದ ಜೊತೆಗೆ ಸಾಮಾಜಿಕ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ಬೋಧಿಸುವ ಮೂಲಕ ಅವರು ಜವಾಬ್ದಾರಿಯುತ ಪ್ರಜೆಗಳನ್ನು ರೂಪಿಸುವ ಅವಕಾಶ ಕನ್ನಡ ಉಪನ್ಯಾಸಕರಿಗೆ ಇರುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಾಧರ್ ಹೇಳಿದರು. ಮಂಗಳವಾರ ನಗರದ ಎಂಪ್ರೆಸ್ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ವೇದಿಕೆ ಆಶ್ರಯದಲ್ಲಿ ನಡೆದ ಕನ್ನಡ ಭಾಷಾ ವಿಷಯದ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಉಪನಿರ್ದೇಶಕರು, ಉಪನ್ಯಾಸಕರು ತಮ್ಮ ಬೋಧನಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು, ವಿದ್ಯಾರ್ಥಿಗಳ ಜ್ಞಾನ ಮಟ್ಟ ತಿಳಿದು ಬೋಧನೆ ಮಾಡಬೇಕು ಎಂದು ಸಲಹೆ ಮಾಡಿದರು. ವಿದ್ಯಾರ್ಥಿಗಳಿಗೆ ಪಠ್ಯ ವಿಷಯದ ಬೋಧನೆಗೆ ಸೀಮಿತವಾಗದೆ ಸಾಮಾಜಿಕ ಮೌಲ್ಯಗಳನ್ನು ಸಾರುವ ವಿಚಾರಗಳನ್ನು, ಸಮಾಜ ಸಾಧಕರ ಬದುಕಿನ ಆದರ್ಶಗಳನ್ನು ತಿಳಿಸಿ ಹೇಳಲು ಕನ್ನಡ ಉಪನ್ಯಾಸಕರಿಗೆ ಅವಕಾಶವಿದೆ. ಇಂತಹ ಅವಕಾಶ ಸಾರ್ಥಕಪಡಿಸಿಕೊಂಡು ಬೋಧಿಸಿದರೆ ವಿದ್ಯಾರ್ಥಿಗಳು ಜ್ಞಾನವಂತರು, ಸಾಮಾಜಿಕ ಜವಾಬ್ದಾರಿವಂತರನ್ನಾಗಿ ರೂಪುಗೊಳ್ಳುತ್ತಾರೆ. ಅಂತಹ ಕಳಕಳಿ ಉಪನ್ಯಾಸಕರಿಗೆ ಇರಬೇಕು ಎಂದರು. ಉಪನ್ಯಾಸಕರು ತಾವು ಮಾದರಿ ವ್ಯಕ್ತತ್ವ ರೂಪಿಸಿಕೊಂಡರೆ ವಿದ್ಯಾರ್ಥಿಗಳಿಗೆ ತಾವು ಬೋಧಿಸುವ ಪಾಠ, ತಿಳಿಸುವ ಆದರ್ಶ ವಿಚಾರಗಳು ಅವರಲ್ಲಿ ಹೆಚ್ಚು ಪರಿಣಾಮ ಬೀರುತ್ತದೆ. ಮುಂದಿನ ತಲೆಮಾರಿಗೆ ನೀವು ಆದರ್ಶ ವ್ಯಕ್ತಿಯಾಗಿ ಉಳಿಯಲು ಸಾಧ್ಯವಾಗುತ್ತದೆ ಎಂದು ಡಿಡಿಪಿಐ ಹೇಳಿದರು. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪ್ರಭಾಕರ ರೆಡ್ಡಿ ಮಾತನಾಡಿ, ಇಲಾಖೆಯಲ್ಲಿ ಬದಲಾಗುತ್ತಿರುವ ಶಿಕ್ಷಣ ನೀತಿ, ನಿಯಮಗಳು, ಪರೀಕ್ಷಾ ಪದ್ದತಿಗಳ ಬಗ್ಗೆ ಉಪನ್ಯಾಸಕರು ತಿಳುವಳಿಕೆ ಹೊಂದಬೇಕು. ಇಂತಹ ಕಾರ್ಯಾಗಾರಗಳಲ್ಲಿ ವಿಷಯ ಪರಿಣತರೊಂದಿಗೆ ಸಂವಾದ ನಡೆಸುವ ಮೂಲಕ ಅಂತಹ ಮಾಹಿತಿ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಕನ್ನಡ ಉಪನ್ಯಾಸಕರ ವೇದಿಕೆಯ ಅಧ್ಯಕ್ಷ ಹೆಚ್.ಗೋವಿಂದಯ್ಯ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಶೈಕ್ಷಣಿಕ ಗುಣಮಟ್ಟ ಕಾಪಾಡಲು ಇಲಾಖೆಯಲ್ಲಿ ಆಗಿಂದಾಗ್ಯೆ ಬದಲಾವಣೆ ಆಗುತ್ತಿರುವ ಬೋಧನೆ, ಪರೀಕ್ಷಾ ಮಾದರಿ ಪದ್ದತಿಗಳ ಬಗ್ಗೆ ಉಪನ್ಯಾಸಕರು ಕಡ್ಡಾಯವಾಗಿ ತಿಳಿಯಬೇಕು. ಪರೀಕ್ಷೆ ಪದ್ದತಿ ಬಗ್ಗೆ ವಿದ್ಯಾರ್ಥಿಗಳಿಗೆ ಸಮರ್ಪಕ ಮಾಹಿತಿ ನೀಡಬೇಕು. ಪ್ರಶ್ನೆ ಪತ್ರಿಕೆ ಮಾದರಿ, ಅಂಕ ನೀಡುವ ಕ್ರಮದ ಬಗ್ಗೆ ಇಲಾಖೆಯ ಸುಧಾರಣಾ ನಿಯಮಗಳ ಬಗ್ಗೆಯೂ ತಿಳಿಯಲು ಇಂತಹ ಕಾರ್ಯಾಗಾರಗಳು ಉಪನ್ಯಾಸಕರಿಗೆ ಉಪಯೋಗವಾಗಲಿವೆ ಎಂದು ಹೇಳಿದರು. ಎಂಪ್ರೆಸ್ ಬಾಲಕಿಯರ ಸ.ಪ.ಪೂ. ಕಾಲೇಜು ಪ್ರಾಂಶುಪಾಲರಾದ ಹೆಚ್.ಮಲ್ಲಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಚಂದ್ರಶೇಖರ ಆರಾಧ್ಯ, ಪ್ರಾಂಶುಪಾಲರಾದ ಚಂದ್ರಯ್ಯ, ನೇ.ರಂ.ನಾಗರಾಜು, ಎಸ್.ರವಿಕುಮಾರ್, ಉಪನ್ಯಾಸಕ ರಾಮಚಂದ್ರಯ್ಯ ಹಾಗೂ ಜಿಲ್ಲೆಯ ವಿವಿಧ ಕಾಲೇಜುಗಳ ಕನ್ನಡ ಉಪನ್ಯಾಸಕರು ಭಾಗವಹಿಸಿದ್ದರು. ನಂತರ ವಿಷಯ ಪರಿಣಿತ ಸಂಪನ್ಮೂಲ ವ್ಯಕ್ತಿಗಳು ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

on 5 December 2023
user_ಕೃಷ್ಣಮೂರ್ತಿ
ಕೃಷ್ಣಮೂರ್ತಿ
Samaj Sevak Tumakuru, Tumakuru•
on 5 December 2023

‘ಪಠ್ಯದ ಜೊತೆಗೆ ಸಾಮಾಜಿಕ ಮೌಲ್ಯಗಳನ್ನೂ ಬೋಧಿಸಿ’ ಕನ್ನಡ ಉಪನ್ಯಾಸಕರ ಕಾರ್ಯಾಗಾರದಲ್ಲಿ ಡಿಡಿಪಿಐ ಗಂಗಾಧರ್ ಸಲಹೆ ತುಮಕೂರು: ಕನ್ನಡ ಭಾಷೆಯ ಸಮಗ್ರ ಅಧ್ಯಯನಕ್ಕೆ ವಿದ್ಯಾರ್ಥಿಗಳನ್ನು ಉಪನ್ಯಾಸಕರು ಪ್ರೇರೇಪಿಸಬೇಕು. ಪಠ್ಯದ ಜೊತೆಗೆ ಸಾಮಾಜಿಕ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ಬೋಧಿಸುವ ಮೂಲಕ ಅವರು ಜವಾಬ್ದಾರಿಯುತ ಪ್ರಜೆಗಳನ್ನು ರೂಪಿಸುವ ಅವಕಾಶ ಕನ್ನಡ ಉಪನ್ಯಾಸಕರಿಗೆ ಇರುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಾಧರ್ ಹೇಳಿದರು. ಮಂಗಳವಾರ ನಗರದ ಎಂಪ್ರೆಸ್ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ವೇದಿಕೆ ಆಶ್ರಯದಲ್ಲಿ ನಡೆದ ಕನ್ನಡ ಭಾಷಾ

ವಿಷಯದ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಉಪನಿರ್ದೇಶಕರು, ಉಪನ್ಯಾಸಕರು ತಮ್ಮ ಬೋಧನಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು, ವಿದ್ಯಾರ್ಥಿಗಳ ಜ್ಞಾನ ಮಟ್ಟ ತಿಳಿದು ಬೋಧನೆ ಮಾಡಬೇಕು ಎಂದು ಸಲಹೆ ಮಾಡಿದರು. ವಿದ್ಯಾರ್ಥಿಗಳಿಗೆ ಪಠ್ಯ ವಿಷಯದ ಬೋಧನೆಗೆ ಸೀಮಿತವಾಗದೆ ಸಾಮಾಜಿಕ ಮೌಲ್ಯಗಳನ್ನು ಸಾರುವ ವಿಚಾರಗಳನ್ನು, ಸಮಾಜ ಸಾಧಕರ ಬದುಕಿನ ಆದರ್ಶಗಳನ್ನು ತಿಳಿಸಿ ಹೇಳಲು ಕನ್ನಡ ಉಪನ್ಯಾಸಕರಿಗೆ ಅವಕಾಶವಿದೆ. ಇಂತಹ ಅವಕಾಶ ಸಾರ್ಥಕಪಡಿಸಿಕೊಂಡು ಬೋಧಿಸಿದರೆ ವಿದ್ಯಾರ್ಥಿಗಳು ಜ್ಞಾನವಂತರು, ಸಾಮಾಜಿಕ ಜವಾಬ್ದಾರಿವಂತರನ್ನಾಗಿ ರೂಪುಗೊಳ್ಳುತ್ತಾರೆ. ಅಂತಹ ಕಳಕಳಿ ಉಪನ್ಯಾಸಕರಿಗೆ ಇರಬೇಕು ಎಂದರು. ಉಪನ್ಯಾಸಕರು ತಾವು ಮಾದರಿ ವ್ಯಕ್ತತ್ವ ರೂಪಿಸಿಕೊಂಡರೆ ವಿದ್ಯಾರ್ಥಿಗಳಿಗೆ ತಾವು ಬೋಧಿಸುವ ಪಾಠ, ತಿಳಿಸುವ ಆದರ್ಶ ವಿಚಾರಗಳು ಅವರಲ್ಲಿ

ಹೆಚ್ಚು ಪರಿಣಾಮ ಬೀರುತ್ತದೆ. ಮುಂದಿನ ತಲೆಮಾರಿಗೆ ನೀವು ಆದರ್ಶ ವ್ಯಕ್ತಿಯಾಗಿ ಉಳಿಯಲು ಸಾಧ್ಯವಾಗುತ್ತದೆ ಎಂದು ಡಿಡಿಪಿಐ ಹೇಳಿದರು. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪ್ರಭಾಕರ ರೆಡ್ಡಿ ಮಾತನಾಡಿ, ಇಲಾಖೆಯಲ್ಲಿ ಬದಲಾಗುತ್ತಿರುವ ಶಿಕ್ಷಣ ನೀತಿ, ನಿಯಮಗಳು, ಪರೀಕ್ಷಾ ಪದ್ದತಿಗಳ ಬಗ್ಗೆ ಉಪನ್ಯಾಸಕರು ತಿಳುವಳಿಕೆ ಹೊಂದಬೇಕು. ಇಂತಹ ಕಾರ್ಯಾಗಾರಗಳಲ್ಲಿ ವಿಷಯ ಪರಿಣತರೊಂದಿಗೆ ಸಂವಾದ ನಡೆಸುವ ಮೂಲಕ ಅಂತಹ ಮಾಹಿತಿ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಕನ್ನಡ ಉಪನ್ಯಾಸಕರ ವೇದಿಕೆಯ ಅಧ್ಯಕ್ಷ ಹೆಚ್.ಗೋವಿಂದಯ್ಯ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಶೈಕ್ಷಣಿಕ ಗುಣಮಟ್ಟ ಕಾಪಾಡಲು ಇಲಾಖೆಯಲ್ಲಿ ಆಗಿಂದಾಗ್ಯೆ ಬದಲಾವಣೆ ಆಗುತ್ತಿರುವ ಬೋಧನೆ, ಪರೀಕ್ಷಾ ಮಾದರಿ ಪದ್ದತಿಗಳ ಬಗ್ಗೆ

ಉಪನ್ಯಾಸಕರು ಕಡ್ಡಾಯವಾಗಿ ತಿಳಿಯಬೇಕು. ಪರೀಕ್ಷೆ ಪದ್ದತಿ ಬಗ್ಗೆ ವಿದ್ಯಾರ್ಥಿಗಳಿಗೆ ಸಮರ್ಪಕ ಮಾಹಿತಿ ನೀಡಬೇಕು. ಪ್ರಶ್ನೆ ಪತ್ರಿಕೆ ಮಾದರಿ, ಅಂಕ ನೀಡುವ ಕ್ರಮದ ಬಗ್ಗೆ ಇಲಾಖೆಯ ಸುಧಾರಣಾ ನಿಯಮಗಳ ಬಗ್ಗೆಯೂ ತಿಳಿಯಲು ಇಂತಹ ಕಾರ್ಯಾಗಾರಗಳು ಉಪನ್ಯಾಸಕರಿಗೆ ಉಪಯೋಗವಾಗಲಿವೆ ಎಂದು ಹೇಳಿದರು. ಎಂಪ್ರೆಸ್ ಬಾಲಕಿಯರ ಸ.ಪ.ಪೂ. ಕಾಲೇಜು ಪ್ರಾಂಶುಪಾಲರಾದ ಹೆಚ್.ಮಲ್ಲಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಚಂದ್ರಶೇಖರ ಆರಾಧ್ಯ, ಪ್ರಾಂಶುಪಾಲರಾದ ಚಂದ್ರಯ್ಯ, ನೇ.ರಂ.ನಾಗರಾಜು, ಎಸ್.ರವಿಕುಮಾರ್, ಉಪನ್ಯಾಸಕ ರಾಮಚಂದ್ರಯ್ಯ ಹಾಗೂ ಜಿಲ್ಲೆಯ ವಿವಿಧ ಕಾಲೇಜುಗಳ ಕನ್ನಡ ಉಪನ್ಯಾಸಕರು ಭಾಗವಹಿಸಿದ್ದರು. ನಂತರ ವಿಷಯ ಪರಿಣಿತ ಸಂಪನ್ಮೂಲ ವ್ಯಕ್ತಿಗಳು ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

More news from Bengaluru Urban and nearby areas
  • ನಮಸ್ತೆ ಕರ್ನಾಟಕ ನಮಸ್ತೆ ವೀಕ್ಷಕರೇ ಹೆಚ್ ಟಿ ಎಂ ಆಯುರ್ವೇದ ಹಕೀಮ್ ನೌಷದ್ ಖಾನ್ (ಪಾರಂಪರಿಕ )
    1
    ನಮಸ್ತೆ ಕರ್ನಾಟಕ ನಮಸ್ತೆ ವೀಕ್ಷಕರೇ 
ಹೆಚ್ ಟಿ ಎಂ ಆಯುರ್ವೇದ ಹಕೀಮ್ 
ನೌಷದ್ ಖಾನ್ (ಪಾರಂಪರಿಕ )
    user_Naushad khan Vahab khan
    Naushad khan Vahab khan
    Ayurvedic clinic Bengaluru Urban•
    13 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    1 hr ago
  • Post by Mahadev c c
    1
    Post by Mahadev c c
    user_Mahadev c c
    Mahadev c c
    Mysuru•
    13 hrs ago
  • Post by Shiva Prasad
    1
    Post by Shiva Prasad
    user_Shiva Prasad
    Shiva Prasad
    Psychologist Vijayanagar•
    19 hrs ago
  • ಬೂದುಗುಂಪ ಗಂಗಾವತಿ ರೂಟ್ ಸೆಂಟ್ರಲ್ಲಿ ಆಗಿರುವಂತ ಅಪಘಾತ ಮೂವರು ಸ್ಥಳದಲ್ಲಿ 3 ಸಾವು ಹೊಸಳ್ಳಿ ಗ್ರಾಮದ ಯುವಕರು ಅವರ ಹೆಸರು ಇಮ್ರಾನ್ ಮತ್ತು ಅಜೀಜ್ ಮತ್ತು ರಾಜಹಂಸೇನ್ 15 ರಿಂದ 16 ವಯಸ್ಸಿನ ಮಕ್ಕಳು
    1
    ಬೂದುಗುಂಪ ಗಂಗಾವತಿ ರೂಟ್ ಸೆಂಟ್ರಲ್ಲಿ ಆಗಿರುವಂತ ಅಪಘಾತ ಮೂವರು ಸ್ಥಳದಲ್ಲಿ 3 ಸಾವು ಹೊಸಳ್ಳಿ ಗ್ರಾಮದ ಯುವಕರು ಅವರ ಹೆಸರು
ಇಮ್ರಾನ್ ಮತ್ತು ಅಜೀಜ್ ಮತ್ತು ರಾಜಹಂಸೇನ್ 15 ರಿಂದ 16 ವಯಸ್ಸಿನ ಮಕ್ಕಳು
    user_YSRmedia vijayanagaraupsates
    YSRmedia vijayanagaraupsates
    Local News Reporter Vijayanagar•
    14 hrs ago
  • Post by SRI RABINDRANATH TAGORE HIGH SCHOOL BIJAPUR
    1
    Post by SRI RABINDRANATH TAGORE HIGH SCHOOL BIJAPUR
    user_SRI RABINDRANATH TAGORE HIGH SCHOOL BIJAPUR
    SRI RABINDRANATH TAGORE HIGH SCHOOL BIJAPUR
    School Vijayapura•
    14 hrs ago
  • ಬಿ ಎಸ್ ಲಾವೇಂದ್ರರವರ ಹೋಮಿಯೋಪತಿ ಕಾಲೇಜ್ ಹಾಗೂ ಆಸ್ಪತ್ರೆಯಲ್ಲಿ 27 ವರ್ಷ ಸೇವೆ
    1
    ಬಿ ಎಸ್ ಲಾವೇಂದ್ರರವರ ಹೋಮಿಯೋಪತಿ ಕಾಲೇಜ್  ಹಾಗೂ ಆಸ್ಪತ್ರೆಯಲ್ಲಿ 27 ವರ್ಷ ಸೇವೆ
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    Journalist Bidar•
    15 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.