ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿಯಿಂದ ಪ್ರತಿಭಟನೆ ಚಾಮರಾಜನಗರ: ಕಾವೇರಿ ನೀರು ಬಿಡುಗಡೆ ಮಾಡುವ ಆದೇಶವನ್ನು ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿಯ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರು ತಮಿಳುನಾಡು ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ನೀರು ಬಿಡುಗಡೆ ಆದೇಶದಿಂದ ರಾಜ್ಯದ ರೈತರಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿ ಸರ್ಕಾರವು ರೈತರ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿಯಿಂದ ಪ್ರತಿಭಟನೆ ಚಾಮರಾಜನಗರ: ಕಾವೇರಿ ನೀರು ಬಿಡುಗಡೆ ಮಾಡುವ ಆದೇಶವನ್ನು ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿಯ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರು ತಮಿಳುನಾಡು ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ನೀರು ಬಿಡುಗಡೆ ಆದೇಶದಿಂದ ರಾಜ್ಯದ ರೈತರಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿ ಸರ್ಕಾರವು ರೈತರ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
- ಸಿಡಬ್ಲ್ಯೂಆರ್ಸಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ ಸಿಡಬ್ಲ್ಯೂಆರ್ಸಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹಿಂಪಡೆಯುವಂತೆ ಮಲ್ಲುಯರಗಂಬಳ್ಳಿ, ಆಗ್ರಹ ಚಾಮರಾಜನಗರ : ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ತಮಿಳುನಾಡು ಸರ್ಕಾರ, ಕಾವೇರಿ ನೀರು ವಿಯಂತ್ರಣ ಸಮಿತಿ, ತಮಿಳುನಾಡು ಮುಖ್ಯಮಂತ್ರಿ ವಿಜಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ವೇದಿಕೆ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಮಾತನಾಡಿ, ಕಾವೇರಿ ನೀರು ನಿಯಂತ್ರಣ ಸಮಿತಿಯು ಕಾವೇರಿಯಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3.500 ಕ್ಯೂಸೆಕ್ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿರುವುದು ಖಂಡನೀಯ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಕುಡಿಯುವುದಕ್ಕೆ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನಲ್ಲಿ ಬೆಳೆ ಬೆಳೆಯುವುದಕ್ಕೆ ನೀರು ಹರಿಸುವುದು ಎಷ್ಟು ಸರಿ ? ರಾಜ್ಯ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಒಪ್ಪಿಕೊಳ್ಳಬಾದರು, ಒಂದು ಹನಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಒತ್ತಾಯಿಸಿದರು. ಕರ್ನಾಟಕ ಬಂದ್ ಸಂಪೂರ್ಣ ಬೆಂಬಲ್ಲ: ಜಿಲ್ಲಾ ಗೌರವಾಧ್ಯಕ್ಷ ಪಿ.ಲಿಂಗರಾಜು ಮಾತನಾಡಿ, ರಾಜ್ಯ ಸರ್ಕಾರ ಕಳೆದ ನಾಲೈದು ದಿನಗಳಿಂದ ಕದ್ದು ಮುಚ್ಚಿ, ರಾತ್ರೋರಾತ್ರಿಗೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಅತ್ಯಂತ ಖಂಡನೀಯವಾದದ್ದು, ರಾಜ್ಯದಲ್ಲಿ ಬರಗಾಲ ಆವರಿಸಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ರಾಜ್ಯದ ಜನತೆ ಸಂಕಷ್ಟದಲ್ಲಿ ಸಿಲುಕಿದ್ದಾರೆ ಇದು. ರಾಜ್ಯದ ಮುಖ್ಯಮಂತ್ರಿಗಳಿಗೆ ಗೊತ್ತಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು. ಇದನ್ನು ಖಂಡಿಸಿ ಕನ್ನಡ ಚಳವಳಿ ಕರೆ ನೀಡಿರುವ ಕರ್ನಾಟಕ ಬಂದ್ ಸಂಪೂರ್ಣ ಬೆಂಬಲವನ್ನು ನಮ್ಮ ಸಂಘಟನೆ ನೀಡಲಿದೆ. ಮುಖ್ಯಮಂತ್ರಿಗಳು ತಮಿಳುನಾಡಿಗೆ ನೀರು ಬಿಟ್ಟರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಶಬಾಜ್ ಷರೀಫ್, ಗೌರವ ಸಲಹೆಗಾರ ಸೈಯದ್ ಮುಜಾಮಿಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಮೋಹನ್ಕುಮಾರ್. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಾಲಿಕ್, ಶಿವಮೂರ್ತಿ, ಸೋಯಿಬ್, ಪ್ರಧಾನ ಕಾರ್ಯದರ್ಶಿ ಶಿವಮ್ಮ, ತಾಲೂಕು ಅಧ್ಯಕ್ಷ ಮಹದೇವಪ್ರಸಾದ್, ಪ್ರಧಾನಕಾರ್ಯದರ್ಶಿ ಸೋಮು, ಸಹ ಕಾರ್ಯದರ್ಶಿ ಅಜಯ್, ಮೊಹಮ್ಮದ್, ಸೈಯದ್ ರಿಯಾಜ್ ಅಹಮದ್, ನಾಸೀರ್ಉಲ್ಲಾ, ಅಬ್ದುಲ್ ಸುಭಾನ್, ಚಿಕ್ಕಅಂಕಶೆಟ್ಟಿ ಇತರರು ಭಾಗವಹಿಸಿದ್ದರು.4
- ಚಾಮರಾಜನಗರದಲ್ಲಿ ಇಂದು ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು4
- ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ, ಆ.1: ಕಾವೇರಿ ನೀರು ಬಿಡುಗಡೆ ಆದೇಶವನ್ನು ಖಂಡಿಸಿ ಯುವ ಕರ್ನಾಟಕ ವೇದಿಕೆಯ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಖಾಲಿ ಬಿಂದಿಗೆಗಳನ್ನು ರಸ್ತೆಯ ಮಧ್ಯೆ ಇಟ್ಟು ನೀರಿನ ಅಭಾವದ ಸಂಕಷ್ಟವನ್ನು ಪ್ರತಿಬಿಂಬಿಸುವ ಪ್ರಯತ್ನ ಮಾಡಿದರು. ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿದರು.1
- ಮೂರನೇ ಆಷಾಢ ಶುಕ್ರವಾರ ಅಂಗವಾಗಿ 2000 ಜನರಿಗೆ ಅನ್ನಸಂತರ್ಪಣೆ ಮಾಡಿದ್ದಾರೆ ಮೈಸೂರು, ಜು.31: ಮೈಸೂರಿನಲ್ಲಿ ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಗ್ಯಾರೇಜ್ ಹಾಗೂ ಟ್ಯಾಂಕರ್ ಮಾಲೀಕರ ಸಂಘದ ವತಿಯಿಂದ ಸುಮಾರು 2000 ಜನರಿಗೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು. ನಗರದ ಪ್ರಮುಖ ವೃತ್ತದ ಸಮೀಪ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಗ್ಯಾರೇಜ್ಗಳ ಮಾಲೀಕರು, ಟ್ಯಾಂಕರ್ ಮಾಲೀಕರು, ಚಾಲಕರು, ಕಾರ್ಮಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದರು. ಆಷಾಢ ಶುಕ್ರವಾರವನ್ನು ವಿಶೇಷವಾಗಿ ದೇವಿ ಆರಾಧನೆಗೆ ಸಮರ್ಪಿತ ದಿನವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ಪೂಜೆ, ಅಲಂಕಾರ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಬಳಿಕ ಅನ್ನಸಂತರ್ಪಣೆ ಆರಂಭಿಸಲಾಯಿತು. ಬಡವರು, ಕೂಲಿ ಕಾರ್ಮಿಕರು, ಪ್ರಯಾಣಿಕರು ಹಾಗೂ ಅಗತ್ಯವಿರುವ ಜನರಿಗೆ ಊಟ ವಿತರಿಸಲಾಯಿತು. ಕಾರ್ಯಕ್ರಮದ ಆಯೋಜಕರು ಮಾತನಾಡಿ, ಸಮಾಜಕ್ಕೆ ಸೇವೆ ಮಾಡುವ ಉದ್ದೇಶದಿಂದ ಪ್ರತಿವರ್ಷವೂ ಇಂತಹ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು. ಗ್ಯಾರೇಜ್ ಮತ್ತು ಟ್ಯಾಂಕರ್ ವೃತ್ತಿಯಲ್ಲಿ ತೊಡಗಿರುವ ಎಲ್ಲರೂ ಒಗ್ಗಟ್ಟಿನಿಂದ ಈ ಸೇವಾ ಕಾರ್ಯದಲ್ಲಿ ಭಾಗವಹಿಸಿರುವುದು ಸಂತಸದ ಸಂಗತಿ ಎಂದರು. ಅನ್ನಸಂತರ್ಪಣೆಯಲ್ಲಿ ಅನ್ನ, ಸಾಂಬಾರ್, ಪಲ್ಯ, ಪಾಯಸ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಲಾಗಿತ್ತು. ಸೇವೆ ಸಲ್ಲಿಸಿದ ಸ್ವಯಂಸೇವಕರು ಶಿಸ್ತಿನಿಂದ ಊಟ ವಿತರಣೆ ಮಾಡಿ ಭಕ್ತರ ಮೆಚ್ಚುಗೆ ಪಡೆದರು. ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಕಾರ್ಯಕ್ರಮವನ್ನು ಪ್ರಶಂಸಿಸಿ, ಧಾರ್ಮಿಕ ಆಚರಣೆಯ ಜೊತೆಗೆ ಮಾನವೀಯ ಸೇವೆಯೂ ಸಮಾಜದಲ್ಲಿ ಬೆಳೆಬೇಕು ಎಂದು ಅಭಿಪ್ರಾಯಪಟ್ಟರು. ಮೈಸೂರಿನಲ್ಲಿ ಇಂತಹ ಸೇವಾ ಚಟುವಟಿಕೆಗಳು ಸಾಮರಸ್ಯ ಮತ್ತು ಸಹಕಾರದ ಸಂಕೇತವಾಗಿವೆ ಎಂದು ಅವರು ಹೇಳಿದರು.2
- ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.1
- ಆಗಸ್ಟ್ 15ರ ಐತಿಹಾಸಿಕ ರಕ್ತದಾನ ಶಿಬಿರ ಅಂಗವಾಗಿ ಮಳವಳ್ಳಿ ಪಟ್ಟಣದಲ್ಲಿ ಅಳವಡಿಸಿರುವ ಸ್ವಾಗತ ಕಮಾನುಗಳ ಉದ್ಘಾಟಿಸಿದ ಶ್ರೀಗಳು ಮಳವಳ್ಳಿ : ಬರುವ ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯೋ ತ್ಸದ ಅಂಗವಾಗಿ ಟೀಮ್ ಮಳವಳ್ಳಿ ಯುವಕ ಮಿತ್ರರ ಬಳಗದ ವತಿಯಿಂದ ಆಯೋಜಿ ಸಿರುವ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ಮಳವಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವ ಬೃಹತ್ ಸ್ವಾಗತ ಮಹಾದ್ವಾರ ಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶನಿವಾರ ಮಧ್ಯಾಹ್ನ 12. 30 ರ ಸಮಯದಲ್ಲಿ ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾ ಣದ ಮುಂಭಾಗ ಮೈಸೂರು ರಸ್ತೆಯಲ್ಲಿ ಅಳವಡಿಸಿರುವ ರಕ್ತದಾನಿಗಳ ಸ್ವಾಗತ ಮಹಾ ದ್ವಾರವನ್ನು ಕುಂದೂರು ರಸ ಸಿದ್ದೇಶ್ವರ ಮಠದ ಶ್ರೀ ನಂಜುಂ ಡಸ್ವಾಮಿ ಅವರು ಉದ್ಘಾಟಿಸಿ ದರೆ ಇದೇ ರಸ್ತೆಯ ಇನ್ನೊಂದು ದ್ವಾರದ ಕಮಾನನ್ನು ರಾಜ ಸ್ತಾನ್ ಸಮಾಜದ ಮೋಹನ್ ಲಾಲ್ ಉದ್ಘಾಟಿಸಿದರು. ಪೇಟೆ ವೃತ್ತದ ಬಳಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ಅಳವಡಿಸಿ ರುವ ಸ್ವಾಗತ ಕಮಾನನ್ನು ರಾಜಸ್ತಾನ್ ಸಮಾಜದ ಮುಖಂಡರಾದ ಮದನ್ ಲಾಲ್ ಉದ್ಘಾಟಿಸಿದರೆ ಇನ್ನೊಂದು ಬದಿಯ ಕಮಾನನ್ನು ಟಿಎಪಿಸಿ ಎಂಎಸ್ ಅಧ್ಯಕ್ಷರಾದ ದ್ಯಾಪೇ ಗೌಡ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನಂಜುಂಡ ಸ್ವಾಮಿ ಅವರು ರಕ್ತದಾನ ಮಹಾದಾನವಾಗಿದ್ದು ಇಂತಹದೊಂದು ರಕ್ತದಾನ ಶಿಬಿರವನ್ನು ಮಳವಳ್ಳಿಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಐತಿಹಾಸಿಕ ಎಂದು ಪ್ರಶಂಸಿಸಿ ದರು ಪಕ್ಷಾತೀತವಾಗಿ ಜಾತ್ಯಾತೀ ತವಾಗಿ ಆಯೋಜಿಸಿರುವು ಟೀಮ್ ಮಳವಳ್ಳಿಯ ಎಲ್ಲಾ ಸದ್ಬಕ್ತರ ಈ ಕಾರ್ಯ ಮಳವ ಳ್ಳಿಯ ಕೀರ್ತಿಪತಾಕೆ ನಾಡಿನೆ ಲ್ಲಡೆ ಹರಡುವಂತೆ ಮಾಡಿದೆ ಎಂದು ಶ್ಲಾಘಿಸಿದ ಶ್ರೀಗಳು ಈ ಶಿಬಿರ ಯಶಸ್ವಿಯಾಗಲಿ ಇಂತಕ ಮಹತ್ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ಟೀಮ್ ಮಳವಳ್ಳಿಯ ಎಲ್ಲಾ ಭಕ್ತರಿಗೂ ಭಗವಂತ ನೀಡಲಿ ಎಂದು ಶುಭ ಹಾರೈಸಿದರು. ಪುರಸಭೆಯ ಮಾಜಿ ಉಪಾಧ್ಯಕ್ಷ ನಂದ ಕುಮಾರ್, ನೀವೃತ್ತ ಸೈನಿಕ ಸುರೇಶ್, ಮುಖಂಡರಾದ ಎಟಿಎಂ ಸ್ವಾಮಿ, ಗುಂಡ, ಬದ್ರಿ ಸೇರಿ ಹಲವಾರು ಮುಖಂಡರ ಜೊತೆ ಟೀಮ್ ಮಳವಳ್ಳಿಯ ಹಲವಾರು ಕಾರ್ಯಕರ್ತರು ಈ ವೇಳೆ ಹಾಜರಿದ್ದರು.1
- ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ಜೆ.ಶ್ರೀನಿವಾಸ್ ಹುಟ್ಟುಹಬ್ಬ : ಆಶ್ರಮಕ್ಕೆ ಅಕ್ಕಿ,ಆಹಾರ ಪದಾರ್ಥ ವಿತರಣೆ. ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ಜೆ.ಶ್ರೀನಿವಾಸ್ ಹುಟ್ಟುಹಬ್ಬ : ಆಶ್ರಮಕ್ಕೆ ಅಕ್ಕಿ,ಆಹಾರ ಪದಾರ್ಥ ವಿತರಣೆ. ಚಾಮರಾಜನಗರ: ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ಜೆ. ಶ್ರೀನಿವಾಸ್ ಅವರ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಘಟಕದ ವತಿಯಿಂದ ನಗರದ ನಂಜನಗೂಡು ರಸ್ತೆಯಲ್ಲಿರುವ ಶ್ರೀಅನುಲಕ್ಷ್ಮೀ ಸೇವಾ ಆಶ್ರಮದಲ್ಲಿ ಕೇಕ್ ಕತ್ತರಿಸಿ ಹಂಚುವ ಮೂಲಕ ಆಚರಿಸಲಾಯಿತು. ಆಶ್ರಮಕ್ಕೆ ಅಕ್ಕಿ, ಆಹಾರ ಪದಾರ್ಥಗಳನ್ನು ವಿಕರಿಸಲಾಯಿತು. ವೇದಿಕೆಯ ಜಿಲ್ಲಾ ಕಾರ್ಯಾಧ್ಯಕ್ಷ ಆರ್.ಪಿ.ನಂಜುಂಡಸ್ವಾಮಿ ಅವರ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಆಶ್ರಮದಲ್ಲಿ ಆಶ್ರಯ ಪಡೆಯುತ್ತಿರುವವರಿಗೆ ಹಂಚಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಆರ್.ಪಿ.ನಂಜುಂಡಸ್ವಾಮಿ ಮಾತನಾಡಿ, ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ಜೆ.ಶ್ರೀನಿವಾಸ್ ಅವರ ಹುಟ್ಟುಹಬ್ಬದ ಅಂಗವಾಗಿ ಶ್ರೀಆನುಲಕ್ಷ್ಮೀ ಸೇವಾ ಆಶ್ರಮದಲ್ಲಿ ಕೇಕ್ ಕತ್ತರಿಸಿ ಹಂಚುವ ಮೂಲಕ ಆಚರಿಸಿ, ಆಶ್ರಮಕ್ಕೆ ಅಕ್ಕಿ, ಆಹಾರ ಪದಾರ್ಥಗಳನ್ನು ವಿತರಿಸುವ ಮೂಲಕ ಆಚರಣೆ ಮಾಡಲಾಯಿತು ಎಂದರು. ವೇದಿಕೆಯ ಜಿಲ್ಲಾ ಘಟಕ, ತಾಲೂಕು ಘಟಕಗಳು ರಚನೆಯಾಗಿದ್ದು, ಪದಾಧಿಕಾರಿಗಳ ಹುಟ್ಟಹಬ್ಬಕ್ಕೆ ಈ ಆಶ್ರಮಕ್ಕೆ ಬೇಕಾದ ಸಹಕಾರ ಕೊಡುತ್ತೇವೆ. ನಮ್ಮ ಸಂಘಟನೆಯ ರಾಜ್ಯಾಧ್ಯಕ್ಷರಾದ ಜೆ.ಶ್ರೀನಿವಾಸ್ ಯೂತ್ ಐಕಾನ್ ಆಗಿದ್ದಾರೆ. ಸಂಘಟನೆಗಳು ಎರಡು ರೀತಿಯಲ್ಲಿ ಕಾರ್ಯಾಚರಣೆ ಮಾಡಬೇಕು ಎಂದು ಹೇಳಿಕೊಟ್ಟಿದ್ದಾರೆ. ನಾಡಿನಲ್ಲಿ ಜಲ ಸಂಸ್ಕೃತಿಗೆ ಕನ್ನಡಕ್ಕೆ ವ್ಯತ್ಯಾಸವಾದರೆ ಪ್ರತಿಭಟಿಸುವುದು ಒಂದು ಕಡೆಯಾದರೆ. ಇನ್ನೊಂದು ಕಡೆ ಈ ದೇಶದಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ.ಸ್ಥಳೀಯ ಸಂಸ್ಥೆಗಳು ವ್ಯತ್ಯಾಸ ಮಾಡಿದಾಗ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ನಾವು ಮಾಡಬೇಕಾಗಿದೆ' ಎಂದು ತಿಳಿಸಿಕೊಟ್ಟಿದ್ದಾರೆ. ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು ಕರುಣಿಸಲಿ ಎಂದು ಆಶಿಸಿದರು. ಫೌಂಡೇಶನ್ ಶ್ರೀಅನುಲಕ್ಷ್ಮೀ ಸೇವಾ ಆಶ್ರಮದ ಮಹದೇವು, ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ನಾಗರಾಜು ಜ್ಯೋತಿಗೌಡನಪುರ, ಜಿಲ್ಲಾ ಕಾರ್ಯದರ್ಶಿ ಸಿದ್ದರಾಜು ಹರದನಹಳ್ಳಿ, ಸಹ ಕಾರ್ಯದರ್ಶಿ ಮಹದೇವಸ್ವಾಮಿ, ಇರಸವಾಡಿ, ತಾಲೂಕು ಅಧ್ಯಕ್ಷ ರಘು, ಕಾರ್ಯಾಧ್ಯಕ್ಷ ಭರತ್, ಉಪಾಧ್ಯಕ್ಷ ನಂಜುಂಡಸ್ವಾಮಿ ಶಿವಪುರ, ಹಿರಿಯ ಮುಖಂಡ ಪಿ.ಜಯರಾಂ, ಚಂದ್ರಶೇಖರ್ ಇತರರು ಹಾಜರಿದ್ದರು.4
- ಕೊಳ್ಳೇಗಾಲ. ಪಟ್ಟಣದ ಪುಟ್ ಬಾತ್ ತೆರವುಗೊಳಿಸುವ ವೇಳೆ ವ್ಯಾಪಾರಿಗಳಿಂದ ಹೈಡ್ರಾಮಾ ನಡೆದಿದ್ದು, ಟಿ.ವಿ ವರದಿಗಾರನ ಮೇಲೆ ಪೆಟ್ರೋಲ್ ಸುರಿದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಇಂದು ಜರುಗಿದೆ. ಪಟ್ಟಣದ ಕುಮಾರ ಎಲೆಕ್ಟ್ರಿಕಲ್ ರಸ್ತೆ, ಚಿನ್ನಬೆಳ್ಳಿ ರಸ್ತೆ, ಎಸ್.ಟಿ ರಸ್ತೆ, ರಾಜ್ ಕುಮಾರ್ ರಸ್ತೆ, ಬಸ್ತೀಪುರ ರಸ್ತೆ ಸೇರಿದಂತೆ ಇನ್ನೀತರ ಕಡೆಗಳಲ್ಲಿ ಪುಟ್ಬಾತ್ ತೆರವುಗೊಳಿಸಿದರು. ಸುಪ್ರೀಂ ಕೋರ್ಟ್ ಆದೇಶದಂತೆ ಪುಟ್ಬಾತ್ ಅಂಗಡಿ ಮಳಿಗೆಗಳನ್ನು ನಗರಸಭೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ತೆರವು ಮಾಡಲು ಅಧಿಕಾರಿಗಳ ಬಂದ ವೇಳೆ ಅಂಗಡಿ ಮಾಲೀಕರು ತಮ್ಮ ಅಂಗಡಿಗಳ ಮುಂಭಾಗದಲ್ಲಿ ಒತ್ತುವರಿಯನ್ನು ತೆರವು ಮಾಡಿಕೊಂಡರು. ಡಾ.ರಾಜಕುಮಾರ್ ರಸ್ತೆಯಿಂದ ಹಳೇ ಕುರುಬರ ಬೀದಿಗೆ ತೆರಳುವ ರಸ್ತೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಪುಟ್ಬಾತ್ ಅಂಗಡಿಗಳನ್ನು ತೆರವು ಮಾಡಲು ಅಧಿಕಾರಿಗಳು ಬಂದಾಗ ಅಲ್ಲಿನ್ ನ್ಯೂ ಮದೀನ ಚಿಕನ್ ಸೆಂಟರ್ ಮಾಲೀಕ ಸೈಯದ್ ಆಸೀಫ್ ಎಂಬಾತ ನನ್ನ ಅಂಗಡಿ ತೆರವು ಮಾಡಿದ್ದದೇ ನಾನು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪೆಟ್ರೋಲ್ ಕೈಯಲ್ಲಿ ಹಿಡಿದು ಬೆದರಿಕೆ ಹೊಡುತ್ತಿದ್ದನು. ಈ ವೇಳೆ ನ್ಯೂಸ್ ಗಾಗಿ ಬಂದಿದ್ದ ವರದಿಗಾರ ಬಸಂತ್ ಕುಮಾರ್ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಬಂದ ಚಿಕನ್ ಅಂಗಡಿಯ ಸೈಯದ್ ಆಸೀಫ್ ಎನುವನ್ನು ಪಕ್ಕದಲ್ಲಿದ್ದ ಅಧಿಕಾರಿಗಳು ಹಾಗೂ ಪೊಲೀಸರು ಹಿಡಿದುಕೊಂಡಾಗ ಬಸಂತ್ ಕುಮಾರ್ ಮೇಲೆ ಹಾಗೂ ಆಹಾರ ನಿರೀಕ್ಷಕ ಚೇತನ್, ಪೌರಯುಕ್ತರು ನಟರಾಜು ಹಾಗೂ ಇನ್ನೀತರ ಮೇಲೆ ಪೆಟ್ರೋಲ್ ಸುರಿದಿತ್ತು. ನಂತರ ಪೊಲೀಸರು ಆಸೀಫ್ ನನ್ನು ವಶಕ್ಕೆ ಪಡೆದು, ಪೆಟ್ರೋಲ್ ಬಾಟಲ್ ನನ್ನು ಜಪ್ತಿ ಮಾಡಿದರು. ಮುಂದುವರಿದು, ಕಾರ್ಯಾಚರಣೆ ಮಾಡಲು ಜೆಸಿಬಿ ಮಿಷನ್ ರಭಸವಾಗಿ ಬಂದಾಗ ಚಿಕನ್ ಅಂಗಡಿ ಮುಂದೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಾಗ ಒಂದು ಕ್ಷಣ ಕಂಬ ಅಲುಗಾಡಿ ನೆರೆದಿದ್ದ ಜನರು ಭಯ ಬೀಳುವಂತಾಯಿತು. ಸದ್ಯಕ್ಕೆ ಯಾವುದೇ ಹಾನಿಯಾಗದೇ ವಿದ್ಯುತ್ ಕಂಬ ಸಡಿಲಗೊಂಡಿತ್ತು. ನಂತರ ಹಳೇ ಕುರುಬರ ಬೀದಿಗೆ ತೆರಳು ಮಾರ್ಗದ ಅಂಗಡಿಗಳ ಮುಂದಿನ ಒತ್ತುವರಿ ತೆರವು ಮಾಡಿ, ಕಾರ್ಯಾಚರಣೆಯನ್ನು ಮುಂದುವರೆಸಿದರು. ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಪತ್ರಕರ್ತರ ಜೊತೆ ಆಗಮಿಸಿದ್ದ ಬಸಂತ್ ಕುಮಾರ್ ರನ್ನು ದೂರು ನೀಡದಂತೆ ಮುಸ್ಲಿಂ ಮುಖಂಡರು ಮನವೋಲಿಸಿ ಆಸೀಫ್ ರನ್ನು ವಾಪಸ್ಸು ಕರೆದ್ಯೋದರು. ಈ ಕಾರ್ಯಾಚರಣೆಯಲ್ಲಿ ನಗರಸಭೆ ಪೌರಯುಕ್ತರು ನಟರಾಜು, ಎಇಇ ಪ್ರಸನ್ನ, ಲಕ್ಷ್ಮೀ, ಮ್ಯಾನೇಜರ್ ಲಿಂಗರಾಜು, ಆಹಾರ ನಿರೀಕ್ಷಕ ಚೇತನ್, ವಿಭೂತಿ ಸೇರಿದಂತೆ ಇತರರು ಇದ್ದರು.2