Shuru
Apke Nagar Ki App…
ತೀರ್ಥಹಳ್ಳಿ ಅರಣ್ಯಾಧಿಕಾರಿಗಳ ದರ್ಪಕ್ಕೆ ಕೆಂಡಾಮಂಡಲರಾದ ಶಾಸಕ ಆರಗ ಜ್ಞಾನೇಂದ್ರರವರ ವಿಡಿಯೋ ತೀರ್ಥಹಳ್ಳಿ: ತಾಲೂಕಿನ ಬೀಸು ಗ್ರಾಮದಲ್ಲಿ ಅರಣ್ಯಾಧಿಕಾರಿಗಳ ದರ್ಪವನ್ನು ನೋಡಿ ಶಾಸಕ ಆರಗ ಜ್ಞಾನೇಂದ್ರರವರು ಕೆಂಡಾಮಂಡಲರಾಗಿದ್ದಾರೆ. ಟ
ರಶ್ಮಿ ಶ್ರೀಕಾಂತ್ ನಾಯಕ್
ತೀರ್ಥಹಳ್ಳಿ ಅರಣ್ಯಾಧಿಕಾರಿಗಳ ದರ್ಪಕ್ಕೆ ಕೆಂಡಾಮಂಡಲರಾದ ಶಾಸಕ ಆರಗ ಜ್ಞಾನೇಂದ್ರರವರ ವಿಡಿಯೋ ತೀರ್ಥಹಳ್ಳಿ: ತಾಲೂಕಿನ ಬೀಸು ಗ್ರಾಮದಲ್ಲಿ ಅರಣ್ಯಾಧಿಕಾರಿಗಳ ದರ್ಪವನ್ನು ನೋಡಿ ಶಾಸಕ ಆರಗ ಜ್ಞಾನೇಂದ್ರರವರು ಕೆಂಡಾಮಂಡಲರಾಗಿದ್ದಾರೆ. ಟ
More news from ಕರ್ನಾಟಕ and nearby areas
- ಚಿತ್ರದುರ್ಗ : ದಾವಣಗೆರೆ ಜಿಲ್ಲೆಯ ರಜಾನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ (Valmiki Peeth) ಪ್ರಸನ್ನಾನಂದಪುರಿ ಸ್ವಾಮೀಜಿ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ..ಮಾಹಿತಿಯ ಪ್ರಕಾರ, ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಸ್ವಾಮೀಜಿಯವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಸ್ತುತ ಅವರು ಚಿತ್ರದುರ್ಗ ನಗರದ ಬಸವೇಶ್ವರ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಅಗತ್ಯ ಪರೀಕ್ಷೆಗಳನ್ನು ನಡೆಸಿ, ತೀವ್ರ ನಿಗಾದಲ್ಲಿ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಾಲ್ಮೀಕಿ ಗುರುಪೀಠದ ಮೂಲಗಳ ಪ್ರಕಾರ, ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಹೆಚ್ಚಿನ ಚಿಕಿತ್ಸೆ ಮತ್ತು ಮೇಲ್ವಿಚಾರಣೆ ಮುಂದುವರಿದಿದೆ. ಸ್ವಾಮೀಜಿಗಳ ಆರೋಗ್ಯ ವಿಚಾರ ತಿಳಿಯುತ್ತಿದ್ದಂತೆಯೇ ಭಕ್ತರು ಮತ್ತು ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಆಸ್ಪತ್ರೆ ಆವರಣದಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.1
- 19/02/2026 ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಮಾರಿ ಕಣಿವೆ ಡ್ಯಾಮ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ಸಾರ್ವಜನಿಕರು ಬೆಚ್ಚಿಬೀಳುವಂತಹ ಘಟನೆಯೊಂದು ಸಂಭವಿಸಿದೆ. ಮಚ್ಚು ಹಿಡಿದು ರಸ್ತೆಗಿಳಿದ ಪುಡಿ ರೌಡಿಯೊಬ್ಬ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾನೆ. ಇಂದು ಮಧ್ಯಾಹ್ನ ಸುಮಾರು 01:30 ಗಂಟೆಯ ವೇಳೆಗೆ ಮಾರಿ ಕಣಿವೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಕೈಯಲ್ಲಿ ಮಚ್ಚು ಹಿಡಿದು ಅಬ್ಬರಿಸುತ್ತಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸ್ ಕಾನ್ಸ್ಟೇಬಲ್ ಅವರಿಗೇ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೆ, ಅಲ್ಲಿದ್ದ ಬೈಕ್ಗೆ ಮಚ್ಚಿನಿಂದ ಸೀಟ್ ಕಡಿದು ಜಖಂ ಮಾಡಿದ್ದಾನೆ. ಇಂತಹ ಕಿಡಿಗೇಡಿಗಳ ಪುಂಡಾಟಿಕೆಯಿಂದಾಗಿ ಸಾಮಾನ್ಯ ಜನರು ರಸ್ತೆಗಿಳಿಯಲು ಭಯಪಡುವಂತಾಗಿದೆ, ಹಿರಿಯೂರು ಭಾಗದಲ್ಲಿ ಇತ್ತೀಚೆಗೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ತಕ್ಷಣ ಕ್ರಮಕೈಗೊಳ್ಳಬೇಕು . ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಮಾಡಿ , ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಬಂದೋಬಸ್ತ್ ಮಾಡಬೇಕು ಎಂಬುದು ಸಾರ್ವಜನಿಕರ ಮತ್ತು ಪವರ್ ಫೋಕಸ್ ನ್ಯೂಸ್ನ ಆಶಯವಾಗಿದೆ. ವರದಿ: ಸುದ್ದಿ ವಿಭಾಗ, ಪವರ್ ಫೋಕಸ್ ನ್ಯೂಸ್.1
- ಅಸ್ಸಾಂ ಗುವಾಹಟಿಯಲ್ಲಿ ಗುರುವಾರ ನಡೆದ ರಾಜಕೀಯ ವ್ಯವಹಾರಗಳ ಸಮಿತಿ ಸದಸ್ಯರು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಅಸ್ಸಾಂ ಪರಿಶೀಲನೆ ಸಮಿತಿ ಅಧ್ಯಕ್ಷೆ ಪ್ರಿಯಾಂಕಾ ಗಾಂಧಿ ವಾದ್ರಾ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಅಸ್ಸಾಂ ಪಿಸಿಸಿ ಅಧ್ಯಕ್ಷ ಗೌರವ್ ಗೋಗಯ್, ಛತ್ತೀಸ್ ಘಡ ಮಾಜಿ ಸಿಎಂ ಭೂಪೇಶ್ ಬಘೇಲ್ ಮತ್ತಿತರರು ಉಪಸ್ಥಿತರಿದ್ದರು.1
- I C U ನಲ್ಲಿರುವ ನಮ್ಮ ಸಿಕ್ಷಣ, ರಾಜಕಾರಣಿಗಳು ಸಿಕ್ಷಣ ಸಂಸ್ಥೆಗೆ ಸಲೈನ್ ಏರಿಸುತ್ತಿರುವುದು ವಿಷಾದದ ಸಂಗತಿ.1
- ತುಮಕೂರು ನಗರ ಪಾಲಿಕೆ ಮತ್ತು ಶಾಸಕರ ವಿರುದ್ಧ ಜನಕ್ರೋಶ1
- ನಾವು ಭೂಮಿ ಪೂಜೆ ಮಾಡಿ ಹೋಗುವ ಗಿರಾಕಿಗಳು ಅಲ್ಲ : ಮಾಜಿ ಶಾಸಕ ಬಸವರಾಜ್ ದಡೆಸಗೂರು ವಿರುದ್ಧ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ #ಕೊಪ್ಪಳ #koppal #karatagi #ಕಾರಟಗಿ #kanakagiri #ಕನಕಗಿರಿ #ಬಸವರಾಜ_ದಡೆಸಗೂರು #ಶಿವರಾಜ_ತಂಗಡಗಿ #ಗಂಗಾವತಿ #Gangavati #ಕುಕನೂರು #ಯಲಬುರ್ಗಾ #ಕುಷ್ಟಗಿ #mla1
- ತೀರ್ಥಹಳ್ಳಿ: ತೀರ್ಥಹಳ್ಳಿ ಕುರುವಳ್ಳಿ ಬೈಪಾಸ್ ರಸ್ತೆಯ ಪಕ್ಕದಲ್ಲಿರುವ ಗದ್ದೆಯಲ್ಲಿ ದಸರಾ ಸಮಯದಲ್ಲಿ ಕೆಸರು ಗದ್ದೆ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು. ಕ್ರೀಡಾಕೂಟ ಮುಗಿದ ನಂತರ ಅದೇ ಗದ್ದೆಯಲ್ಲಿ ಭತ್ತದ ಸಸಿಯನ್ನು ನಾಟಿ ಮಾಡಿ ಬಂದ ಭತ್ತವನ್ನು ಶ್ರೀ ರಾಮೇಶ್ವರ ದೇವಸ್ಥಾನ ಅನ್ನದಾನಕ್ಕೆ ನೀಡುತ್ತೇವೆ ಎಂದು ಸಂಕಲ್ಪ ಮಾಡಲಾಗಿತ್ತು. ಅದೇ ರೀತಿಯಲ್ಲಿ ಪೈರು ಬೆಳೆದು ಕಟಾವಿಗೆ ಬಂದಿದ್ದು ಇಂದು ಮೊದಲು ಕ್ರೀಡಾಕೂಟದಲ್ಲಿ ಪಾಲ್ಗೊಂಡ ಮಹಿಳೆಯರೆಲ್ಲರೂ ಸೇರಿ ಭೂಮಿ ತಾಯಿಗೆ ಪೂಜೆ ಮಾಡಿ ನಂತರ ಪೈರನ್ನು ಕಟಾವು ಮಾಡಲಾಯಿತು. ಈ ಸಂದರ್ಭದಲ್ಲಿ ಜಾಗದ ಮಾಲೀಕರಾದ ಶ್ರೀಕಾಂತ್ ನಾಯಕ್, ರಶ್ಮಿ ಶ್ರೀಕಾಂತ್ ನಾಯಕ್, ಪ.ಪಂ ಅಧ್ಯಕ್ಷ ರತ್ನಾಕರ್ ಶೆಟ್ಟಿ ( ದತ್ತಣ್ಣ), ನಯನಾ ಜಯಪ್ರಕಾಶ್ ಶೆಟ್ಟಿ, ಗೀತಾ ರಮೇಶ್, ಜ್ಯೋತಿ ದಿಲೀಪ್, ಶೋಭಿತಾ, ಸುಶೀಲಾ ಶೆಟ್ಟಿ, ಗೀತಾ ರಾಘವೇಂದ್ರ, ವಿಜಯಕ್ಕ, ವರಲಕ್ಷ್ಮಿ, ಪ.ಪಂ ಮುಖ್ಯಾಧಿಕಾರಿ ನಾಗರಾಜ್ ಸುಜಯಾ ಶೆಟ್ಟಿ ಮುಂತಾದವರಿದ್ದರು.3
- ಚಿತ್ರದುರ್ಗ ಕಾತ್ರಾಳ್ ಕೆರೆ ಬಳಿ ಟ್ಯಾಂಕರ್ ಲಾರಿಗೆ ಆಕಸ್ಮಿಕ ಬೆಂಕಿ.. ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ಘಟನೆ ನೀರು ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಟ್ಯಾಂಕರ್ ಲಾರಿಯ ಚಕ್ರಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ಮಿ ಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ . ಅದೃಷ್ಟವಶಾತ್ ಟ್ಯಾಂಕರ್ ನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..1
- ರಾಯಚೂರು - ಲಿಂಗಸುಗೂರು: ತಾಲೂಕಿನ ಗುಲಬರ್ಗಾ ರಸ್ತೆಯ ಪಕ್ಕದಲ್ಲಿರುವ ಹೋಟೆಲ್ವೊಂದಕ್ಕೆ ಅಪ್ರಾಪ್ತರು ಚಲಾಯಿಸುತ್ತಿದ್ದ ಕಾರು ನುಗ್ಗಿ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಪಘಾತಕ್ಕೀಡಾದ ಕಾರು ದೇವದುರ್ಗ ಎ.ಪಿ.ಎಂ.ಸಿ ಅಧ್ಯಕ್ಷ ಆದನಗೌಡ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಅವರ ಅಪ್ರಾಪ್ತ ವಯಸ್ಸಿನ ಮಕ್ಕಳು ಅತಿ ವೇಗವಾಗಿ ಕಾರನ್ನು ಚಲಾಯಿಸಿದ ಪರಿಣಾಮ, ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೋಟೆಲ್ ಒಳಕ್ಕೆ ನುಗ್ಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಪಟ್ಟಣ ಪ್ರದೇಶಗಳಲ್ಲಿ ಅಪ್ರಾಪ್ತ ವಯಸ್ಕರು ವಾಹನಗಳನ್ನು ಚಲಾಯಿಸುವುದು ಮಿತಿಮೀರಿದ್ದು, ಸಾರ್ವಜನಿಕರ ಪ್ರಾಣಕ್ಕೆ ಸಂಚಕಾರ ತರುತ್ತಿದೆ. ಮೋಟಾರು ವಾಹನ ಕಾಯ್ದೆಯ ಪ್ರಕಾರ, ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾತಕ್ಕೀಡಾದರೆ ಅದರ ಸಂಪೂರ್ಣ ಹೊಣೆಯನ್ನು ವಾಹನ ಮಾಲೀಕರು ಅಥವಾ ಪೋಷಕರು ಹೊರಬೇಕಾಗುತ್ತದೆ. ಅಪ್ರಾಪ್ತರಿಗೆ ವಾಹನ ನೀಡಿದ ಪೋಷಕರಿಗೆ ₹25,000 ವರೆಗೆ ದಂಡ ಮತ್ತು 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ವಾಹನದ ನೋಂದಣಿಯನ್ನು 12 ತಿಂಗಳ ಕಾಲ ರದ್ದುಗೊಳಿಸಬಹುದು. ಅಪ್ರಾಪ್ತ ವಯಸ್ಕನಿಗೆ 25 ವರ್ಷ ತುಂಬುವವರೆಗೆ ಡ್ರೈವಿಂಗ್ ಲೈಸೆನ್ಸ್ ಸಿಗದಂತೆ ನಿರ್ಬಂಧ ಹೇರಬಹುದು.1